Tag: govt employees

  • ಸರ್ಕಾರಿ ನೌಕರರು, ಕುಟುಂಬ ಸದಸ್ಯರಿಗೆ ಆರೋಗ್ಯ ಸಂಜೀವಿನಿ ಯೋಜನೆ ಜಾರಿ

    ಸರ್ಕಾರಿ ನೌಕರರು, ಕುಟುಂಬ ಸದಸ್ಯರಿಗೆ ಆರೋಗ್ಯ ಸಂಜೀವಿನಿ ಯೋಜನೆ ಜಾರಿ

    ಬೆಂಗಳೂರು: ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಸರ್ಕಾರಿ ನೌಕರರು ಹಾಗೂ ಕುಟುಂಬ ಸದಸ್ಯರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸಲಾಗಿದೆ.

    ಅಕ್ಟೋಬರ್ 1 ರಿಂದ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಬರಲಿದೆ. ಬಹಳ ವರ್ಷಗಳಿಂದ ಈ ಯೋಜನೆ ಮರುಜಾರಿಗೆ ಒತ್ತಾಯ ಕೇಳಿಬಂದಿತ್ತು.

    ಈ ಯೋಜನೆಯಡಿ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಸಿಗಲಿದೆ. ನೋಂದಾಯಿತ ಖಾಸಗಿ ಆಸ್ಪತ್ರೆಯಲ್ಲಿಯೂ ನಗದು ರಹಿತ ಉಚಿತ ಚಿಕಿತ್ಸೆ ಸಿಗಲಿದೆ.

  • ಸರ್ಕಾರಿ ನೌಕರರ ಆಸ್ತಿ ವಿವರ ಸಲ್ಲಿಕೆ ಕಡ್ಡಾಯ – ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

    ಸರ್ಕಾರಿ ನೌಕರರ ಆಸ್ತಿ ವಿವರ ಸಲ್ಲಿಕೆ ಕಡ್ಡಾಯ – ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

    ಬೆಂಗಳೂರು: ಪ್ರತಿ ವರ್ಷ ಸರ್ಕಾರಿ ನೌಕರರು ಆಸ್ತಿ ವಿವರ ಸಲ್ಲಿಸುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

    ಸರ್ಕಾರಿ ನೌಕರರ ವಿರುದ್ಧ ಭ್ರಷ್ಟಾಚಾರ ಆರೋಪಗಳು ಹೆಚ್ಚಾಗುತ್ತಿವೆ. ಎಲ್ಲಾ ನೌಕರರೂ ಚರಾಸ್ತಿ-ಸ್ಥಿರಾಸ್ತಿಗಳನ್ನು ವೆಬ್‌ಸೈಟ್‌ನಲ್ಲಿ ಘೋಷಿಸಬೇಕು ಎಂದು ಲೋಕಾಯುಕ್ತ ಹೇಳಿತ್ತು. ಆದರೆ, ಇದಕ್ಕೆ ಸರ್ಕಾರಿ ನೌಕರರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಹೊತ್ತಲ್ಲಿ ಸರ್ಕಾರ ಜಾಣನಡೆ ಅನುಸರಿಸಿದೆ.

    ಪ್ರತಿಯೊಬ್ಬ ಸರ್ಕಾರಿ ನೌಕರರು ಸರ್ಕಾರಿ ಸೇವೆಗೆ ಸೇರುವಾಗ ಹಾಗೂ ಪ್ರತಿ ವರ್ಷ ನೌಕರರ ಹಾಗೂ ಕುಟುಂಬದ ಆಸ್ತಿ ವಿವರ ಸಲ್ಲಿಸೋದು ಈಗಾಗಲೇ ಕಡ್ಡಾಯವಾಗಿದೆ. ಅದರಂತೆ ಲೋಕಾಯಕ್ತದವರು ಯಾವ ಅಧಿಕಾರಿಗಳ ಬಗ್ಗೆ ಆಸ್ತಿ ವಿವರ ಕೇಳುತ್ತಾರೋ ವಿಳಂಬವಿಲ್ಲದೇ ಲೋಕಾಯುಕ್ತಕ್ಕೆ ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಈ ಸೂಚನೆಗಳನ್ನು ಪಾಲಿಸದಿದ್ದರೆ ಇಲಾಖಾ ಮುಖ್ಯಸ್ಥರು ಹಾಗೂ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುತ್ತೆ ಅಂತಾ ಸರ್ಕಾರ ಎಚ್ಚರಿಕೆ ನೀಡಿದೆ.

  • ಹಿಮಾಚಲ ಪ್ರದೇಶದಲ್ಲಿ ಆರ್ಥಿಕ ಬಿಕ್ಕಟ್ಟು – ಎರಡು ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಗೆ ಜಮೆಯಾಗದ ಸಂಬಳ

    ಹಿಮಾಚಲ ಪ್ರದೇಶದಲ್ಲಿ ಆರ್ಥಿಕ ಬಿಕ್ಕಟ್ಟು – ಎರಡು ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಗೆ ಜಮೆಯಾಗದ ಸಂಬಳ

    ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ (Himachal Pradesh) ಆರ್ಥಿಕ ಸಂಕಷ್ಟ ಶುರುವಾಗಿದೆ. ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರಿ ನೌಕರರಿಗೆ ತಿಂಗಳ ವೇತನ ಜಮೆಯಾಗಿಲ್ಲ. ಆಗಸ್ಟ್ ತಿಂಗಳ ವೇತನವನ್ನು ಇನ್ನೂ ಸರ್ಕಾರ ಬಿಡುಗಡೆ ಮಾಡಿಲ್ಲ ಎಂದು ತಿಳಿದು ಬಂದಿದೆ. ವೇತನ ವಿಳಂಬದಿಂದ ಎರಡು ಲಕ್ಷಕ್ಕೂ ಹೆಚ್ಚು ರಾಜ್ಯ ಸರ್ಕಾರಿ ನೌಕರರ ಮೇಲೆ ಪರಿಣಾಮ ಬೀರಿದೆ ಎಂದು ಮೂಲಗಳು ತಿಳಿಸಿವೆ.

    ವೇತನ ವಿಳಂಬವಾಗಿದ್ದರೂ, ವೇತನವನ್ನು ಯಾವಾಗ ವಿತರಿಸಲಾಗುವುದು ಎಂಬ ಬಗ್ಗೆ ಸರ್ಕಾರದಿಂದ ಯಾವುದೇ ಅಧಿಕೃತ ಮಾಹಿತಿ ತಿಳಿದು ಬಂದಿಲ್ಲ ಎಂದು ಮೂಲಗಳು ತಿಳಿಸಿವೆ. ರಾಜ್ಯದ ಪ್ರಸ್ತುತ ಆರ್ಥಿಕ ಸ್ಥಿತಿಗೆ ಹಿಂದಿನ ಬಿಜೆಪಿ ಸರ್ಕಾರವೇ ಕಾರಣ ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು (Sukhvinder Singh Sukhu) ಆರೋಪಿಸಿದ್ದಾರೆ. ರಾಜ್ಯ ವಿಧಾನಸಭೆಯಲ್ಲಿ ಭಾಷಣ ಮಾಡಿದ ಸುಖು ಅವರು ಆರ್ಥಿಕ ಅವ್ಯವಸ್ಥೆಗೆ ಬಿಜೆಪಿ ಪ್ರಾರಂಭಿಸಿದ ಉಚಿತ ಕೊಡುಗೆಗಳ ಸಂಸ್ಕೃತಿ ಕಾರಣ ಎಂದು ದೂಷಿಸಿದರು. ಇದನ್ನೂ ಓದಿ: ದರ್ಶನ್‌ ಗ್ಯಾಂಗ್‌ನ ಮತ್ತಿಬ್ಬರು ಆರೋಪಿಗಳ ಜಾಮೀನು ಅರ್ಜಿ ವಜಾ

    ಆರ್ಥಿಕ ಪರಿಸ್ಥಿತಿ ಹಾಳಾದ ಬೆನ್ನಲ್ಲೇ‌ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಎಂ ಸುಖವಿಂದರ್ ಸಿಂಗ್ ಸುಖು, ತಮ್ಮ ಸರ್ಕಾರವು ರಾಜ್ಯದ ಆರ್ಥಿಕ ಆರೋಗ್ಯವನ್ನು ಸುಧಾರಿಸಲು ವಿವಿಧ ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಉಲ್ಲೇಖಿಸಿದ್ದಾರೆ. ನನ್ನ ಎಲ್ಲಾ ಕೆಲಸಗಳು 2027 ರ ವೇಳೆಗೆ ಹಿಮಾಚಲ ಪ್ರದೇಶವನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸಲು ಮತ್ತು 2032 ರ ವೇಳೆಗೆ ದೇಶದ ಅತ್ಯಂತ ಶ್ರೀಮಂತ ರಾಜ್ಯವಾಗಿಸಲು ಕೇಂದ್ರೀಕೃತವಾಗಿವೆ ಎಂದು ಹೇಳಿದರು.

    ರಾಜ್ಯದಲ್ಲಿ ಯಾವುದೇ ಆರ್ಥಿಕ ಅವ್ಯವಸ್ಥೆ ಇಲ್ಲ. ನೌಕರರು ಮತ್ತು ಪಿಂಚಣಿದಾರರು ತಮ್ಮ ಬಾಕಿಯನ್ನು ಪಡೆಯುತ್ತಿದ್ದಾರೆ. 75 ವರ್ಷಕ್ಕಿಂತ ಮೇಲ್ಪಟ್ಟ 28,000 ಪಿಂಚಣಿದಾರರ ಬಾಕಿ ಹಣವನ್ನು ಬಿಡುಗಡೆ ಮಾಡಲಾಗಿದೆ ಮತ್ತು ಸರ್ಕಾರವು ವಿವಿಧ ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಇದೇ ವೇಳೆ ತಿಳಿಸಿದರು. ಇದನ್ನೂ ಓದಿ: ಜೈಲಿನಲ್ಲಿ ಕೊನೆಗೂ ದರ್ಶನ್ ಗೆ ಸಿಕ್ತು ಸರ್ಜಿಕಲ್ ಚೇರ್ ಭಾಗ್ಯ

    ಮದ್ಯ ಮಾರಾಟದ ಹರಾಜಿನಲ್ಲಿನ ಅಕ್ರಮಗಳ ಆರೋಪಗಳು ಸುಳ್ಳು. ಬಿಜೆಪಿ ನಾಯಕರು ಸತ್ಯವನ್ನು ಪರಿಶೀಲಿಸುವಂತೆ ಆಗ್ರಹಿಸಿದರು. ವಿದ್ಯುತ್ ಮತ್ತು ನೀರಿನ ಬಿಲ್ ಪಾವತಿಸಲು ಶಕ್ತರಾಗಿರುವ ಜನರು ಸಬ್ಸಿಡಿ ತೆಗೆದುಕೊಳ್ಳಬಾರದು. ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕೆಲಸ‌ ಮಾಡುತ್ತಿದೆ. ಹೆಚ್ಚುವರಿಯಾಗಿ, ರೈತರು, ಕಾರ್ಮಿಕರು, ತೋಟಗಾರರು, ಮಹಿಳೆಯರು ಮತ್ತು ಸಣ್ಣ ಅಂಗಡಿಕಾರರು ಸೇರಿದಂತೆ ಎಲ್ಲಾ ವರ್ಗಗಳ ಕಲ್ಯಾಣಕ್ಕಾಗಿ ಸರ್ಕಾರ ಕೆಲಸ ಮಾಡುತ್ತಿದೆ ಎಂದರು.

  • ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌ – 7ನೇ ವೇತನ ಆಯೋಗದ ಶಿಫಾರಸು ಜಾರಿ: ಸಿಎಂ ಘೋಷಣೆ

    ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌ – 7ನೇ ವೇತನ ಆಯೋಗದ ಶಿಫಾರಸು ಜಾರಿ: ಸಿಎಂ ಘೋಷಣೆ

    ಬೆಂಗಳೂರು: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ನೀಡಿದೆ. 7ನೇ ವೇತನ ಆಯೋಗದ (7th Pay Commission) ವೇತನ ಪರಿಷ್ಕರಣೆಯನ್ನು ಆಗಸ್ಟ್‌ 1 ರಿಂದಲೇ ಅನ್ವಯವಾಗುವಂತೆ ಜಾರಿ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಘೋಷಿಸಿದ್ದಾರೆ.

    ವಿಧಾನಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಪಿಂಚಣಿ ಪರಿಷ್ಕರಣೆಗೆ ಏಳನೇ ವೇತನ ಆಯೋಗ ರಚನೆ ಮಾಡಲಾಗಿತ್ತು. ಏಳನೇ ವೇತನ ಆಯೋಗ ವರದಿ ನೀಡಿ, ಶಿಫಾರಸು ಮಾಡಿದೆ. ಆ.1 ರಿಂದ ಅನ್ವಯ ಆಗುವಂತೆ ವೇತನ ಪರಿಷ್ಕರಣೆ ಜಾರಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ – ಎಂ.ಬಿ ಪಾಟೀಲ್ ಘೋಷಣೆ

    30% ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದೆ. 27.5% ವೇತನ ಹೆಚ್ಚಳ ಮಾಡಲಾಗುವುದು. ಮೂಲವೇತನ 17 ಸಾವಿರದಿಂದ 27 ಸಾವಿರ ವರೆಗೆ ಹೆಚ್ಚಳವಾಗಲಿದೆ. ಗರಿಷ್ಠ 1,50,600 ದಿಂದ 2,43,000 ವರೆಗೂ ವೇತನ ಹೆಚ್ಚಳವಾಗಲಿದೆ. ಪಿಂಚಣಿ ಕನಿಷ್ಠ 8 ಸಾವಿರದಿಂದ 13 ಸಾವಿರಕ್ಕೆ ಹೆಚ್ಚಾಗಲಿದೆ. ಗರಿಷ್ಠ ಪಿಂಚಣಿ 75,300 ರೂ. ನಿಂದ 1,20,600 ವರೆಗೂ ಹೆಚ್ಚಳವಾಗಲಿದೆ ಎಂದು ಹೇಳಿದ್ದಾರೆ.

    ಸರ್ಕಾರಿ ನೌಕರರ ವೇತನ ಹೆಚ್ಚಳದಿಂದ ವಾರ್ಷಿಕವಾಗಿ 20,208 ಕೋಟಿ ಹೆಚ್ಚುವರಿ ವೆಚ್ಚ ಆಗಲಿದೆ ಎಂದು ಸಿಎಂ ತಿಳಿಸಿದ್ದಾರೆ. ಇದನ್ನೂ ಓದಿ: ಸದನದಲ್ಲಿ ವಾಲ್ಮೀಕಿ ನಿಗಮ ಹಗರಣ ಗದ್ದಲ – ಸಿಎಂ, ಸಚಿವರ ವಿರುದ್ಧ ಬಿಜೆಪಿ ನಾಯಕರ ಕಿಡಿ

  • ಮಗನ ಪ್ರೋತ್ಸಾಹದಿಂದ ಪರೀಕ್ಷೆಗೆ ಸಿದ್ಧವಾದ ತಾಯಿ – ಇಬ್ಬರು ಈಗ ಸರ್ಕಾರಿ ನೌಕರರು

    ಮಗನ ಪ್ರೋತ್ಸಾಹದಿಂದ ಪರೀಕ್ಷೆಗೆ ಸಿದ್ಧವಾದ ತಾಯಿ – ಇಬ್ಬರು ಈಗ ಸರ್ಕಾರಿ ನೌಕರರು

    ತಿರುವನಂತಪುರಂ: ಅಮ್ಮ, ಮಗ ಒಟ್ಟಿಗೆ ಸರ್ಕಾರಿ ಕೆಲಸಕ್ಕೆ ಸೇರಿದ ವಿಶೇಷ ಸುದ್ದಿಯೊಂದು ಕೇರಳದಲ್ಲಿ ಭಾರೀ ಸದ್ದು ಮಾಡುತ್ತಿದೆ.

    ತಾಯಿ ಬಿಂದು(42) ಅವರು ಕೊನೆಯ ದರ್ಜೆಯ ಸೇವಕರ(ಎಲ್‍ಜಿಎಸ್) ಪರೀಕ್ಷೆಯಲ್ಲಿ 92ರ ರ‍್ಯಾಂಕ್‍ನೊಂದಿಗೆ ತೇರ್ಗಡೆಯಾಗಿದ್ದರೆ, ಅವರ 24 ವರ್ಷದ ಮಗ ಲೋವರ್ ಡಿವಿಜನಲ್ ಕ್ಲರ್ಕ್(ಎಲ್‍ಡಿಸಿ) ಪರೀಕ್ಷೆಯಲ್ಲಿ 38ನೇ ರ‍್ಯಾಂಕ್‍ನೊಂದಿಗೆ ತೇರ್ಗಡೆಯಾಗಿದ್ದಾನೆ. ಇದನ್ನೂ ಓದಿ: ಶ್ರೀಲಂಕಾದೊಂದಿಗೆ ತನ್ನ ವಿನಿಮಯಕ್ಕೆ ತೊಂದರೆ ಮಾಡುವುದನ್ನು ನಿಲ್ಲಿಸಿ – ಭಾರತಕ್ಕೆ ಚೀನಾ ಮನವಿ 

    ಬಿಂದು ಅವರು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ನನ್ನ ಮಗ 10ನೇ ತರಗತಿಯಲ್ಲಿದ್ದಾಗ ನನಗೆ ಓದಲು ಪ್ರೋತ್ಸಾಹಿಸಿದ. ಆಗ ನಾನು ಪುಸ್ತಕಗಳನ್ನು ಓದಲು ಪ್ರಾರಂಭಿಸಿದ್ದೇನೆ. ಆದರೆ ಇದು ಕೇರಳ ಪಬ್ಲಿಕ್ ಸರ್ವಿಸ್ ಕಮಿಷನ್(PSC) ಪರೀಕ್ಷೆಗಳಿಗೆ ತಯಾರಿ ನಡೆಸುವಂತೆ ಪ್ರೇರೇಪಿಸಿತು. ಈಗ ನಾವಿಬ್ಬರು ಒಟ್ಟಿಗೆ ಸರ್ಕಾರಿ ಕೆಲಸಕ್ಕೆ ಆಯ್ಕೆಯಾಗಿರುವುದು ಸಂತೋಷವಾಗುತ್ತಿದೆ ಎಂದು ತಿಳಿಸಿದರು.

    ಇದಕ್ಕೂ ಮುನ್ನ ನಾನು ಎಲ್‍ಜಿಎಸ್‍ಗೆ ಎರಡು ಬಾರಿ ಮತ್ತು ಎಲ್‍ಡಿಸಿಗೆ ಒಂದು ಬಾರಿ ಪರೀಕ್ಷೆಯನ್ನು ಕೊಟ್ಟಿದ್ದೆ. ಅವು ಯಶಸ್ಸು ಕಾಣಲಿಲ್ಲ. ಆದರೆ ಈಗ ನಾಲ್ಕನೇ ಸಾಹಸವು ಯಶಸ್ವಿಯಾಗಿದೆ. ನನ್ನ ಮುಖ್ಯ ಗುರಿ ಐಸಿಡಿಎಸ್(ಇಂಟಿಗ್ರೇಟೆಡ್ ಚೈಲ್ಡ್ ಡೆವಲಪ್‍ಮೆಂಟ್ ಸರ್ವಿಸ್ಸ್‌(ಐಸಿಡಿಎಸ್) ಮೇಲ್ವಿಚಾರಕರ ಪರೀಕ್ಷೆ, ಆದರೆ ಎಲ್‍ಜಿಎಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು, ಬೋನಸ್ ಎಂದು ತಿಳಿಸಿದರು. ಇದನ್ನೂ ಓದಿ: ಅಕ್ರಮ ಗೋಹತ್ಯೆ ಮನೆ ಮೇಲೆ ದಾಳಿ – ವಿದ್ಯುತ್ ಸಂಪರ್ಕ ಕಟ್, ಶರಣಾಗಲು ಸೂಚನೆ 

    TET EXAM 2

    ಕಳೆದ 10 ವರ್ಷಗಳಿಂದ ಅಂಗನವಾಡಿ ಶಿಕ್ಷಕಿಯಾಗಿರುವ ಬಿಂದು, ಕೋಚಿಂಗ್ ಸೆಂಟರ್‍ನಲ್ಲಿರುವ ಅವರ ಶಿಕ್ಷಕರು, ಸ್ನೇಹಿತರು ಮತ್ತು ಅವರ ಮಗ ಪಿಎಸ್‍ಸಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ಪದೇ ಪದೇ ನೀಡುತ್ತಿದ್ದ ಪ್ರೋತ್ಸಾಹ ಮತ್ತು ಬೆಂಬಲದಿಂದ ಈ ಯಶಸ್ಸು ಗಳಿಸಿದ್ದೇವೆ ಎಂದರು.

    ಬಿಂದು ಅವರ ಮಗ ಈ ಕುರಿತು ಮಾತನಾಡಿದ್ದು, ಇಬ್ಬರೂ ಒಟ್ಟಿಗೆ ಅಧ್ಯಯನ ಮಾಡದಿದ್ದರೂ, ಕೆಲವು ವಿಷಯಗಳ ಬಗ್ಗೆ ಚರ್ಚಿಸುತ್ತೇವೆ. ನಾನು ಒಬ್ಬಂಟಿಯಾಗಿ ಓದಲು ಇಷ್ಟಪಡುತ್ತೇನೆ. ಮೇಲಾಗಿ, ನನ್ನ ಅಮ್ಮ ಯಾವಾಗಲೂ ಓದುವುದಿಲ್ಲ. ಸಮಯ ಸಿಕ್ಕಾಗ ಮತ್ತು ಅಂಗನವಾಡಿ ಕೆಲಸ ಮುಗಿದ ನಂತರ ಓದುತ್ತಿದ್ದರು. ನಾನು ಮೊದಲು ಪೊಲೀಸ್ ಪರೀಕ್ಷೆ ಬರೆದಿದ್ದೆ. ಆದರೆ ಅದು ಅಷ್ಟು ಯಶಸ್ವಿಯಾಗಿಲ್ಲ. ಈ ಬಾರಿ, ನಾನು ಎಲ್‍ಡಿಸಿ ಪರೀಕ್ಷೆಗಾಗಿ ಹೆಚ್ಚು ಓದಿದ್ದೆ ಎಂದು ವಿವರಿಸಿದರು.

    Live Tv
    [brid partner=56869869 player=32851 video=960834 autoplay=true]

  • ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಹಬ್ಬಕ್ಕೆ ಗುಡ್‍ನ್ಯೂಸ್: ತುಟ್ಟಿ ಭತ್ಯೆ ಹೆಚ್ಚಳ

    ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಹಬ್ಬಕ್ಕೆ ಗುಡ್‍ನ್ಯೂಸ್: ತುಟ್ಟಿ ಭತ್ಯೆ ಹೆಚ್ಚಳ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ದೀಪಾವಳಿಗೂ ಮುನ್ನವೇ ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ (ಡಿಎ) ಹೆಚ್ಚಿಸಿ ಹಬ್ಬಕ್ಕೆ ಬಂಪರ್ ಗಿಫ್ಟ್ ನೀಡಿದೆ.

    ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್, ಕೇಂದ್ರ ಸರ್ಕಾರಿ ನೌಕರರಿಗೆ ಶೇ.5ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿದೆ. ಕ್ಯಾಬಿನೆಟ್ ಸಭೆಯಲ್ಲಿ ಈ ನಿರ್ಧಾರವನ್ನ ಕೈಗೊಳ್ಳಲಾಗಿದ್ದು, ಜುಲೈ 1, 2019 ರಿಂದಲೇ ಇದು ಪೂರ್ವನ್ವಯವಾಗಲಿದೆ ಎಂದು ತಿಳಿಸಿದ್ದಾರೆ.

    ಇಷ್ಟು ದಿನಗಳ ಕಾಲ ಇದ್ದ ಶೇ.12ರಷ್ಟು ತುಟ್ಟಿ ಭತ್ಯೆ (ಡಿಎ)ಯನ್ನು ನೀಡಲಾಗುತಿತ್ತು. ಈಗ ಶೇ.17ಕ್ಕೆ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಈ ತುಟ್ಟಿ ಭತ್ಯೆ ಹೆಚ್ಚಳ ಪಿಂಚಣಿದಾರರಿಗೂ ಅನ್ವಯವಾಗಲಿದೆ. ಒಟ್ಟು 50 ಲಕ್ಷ ಸರ್ಕಾರಿ ನೌಕರರು ಮತ್ತು 65 ಲಕ್ಷ ಜನ ಪಿಂಚಣಿದಾರರು ಇದರ ಸೌಲಭ್ಯ ಪಡೆಯಲಿದ್ದಾರೆ ಎಂದು ಕೇಂದ್ರ ಸಚಿವರು ಮಾಹಿತಿ ನೀಡಿದರು.

    ಇದು ಸರ್ಕಾರಿ ನೌಕರರಿಗೆ ದೀಪಾವಳಿ ಉಡುಗೊರೆಯಾಗಿದೆ. ತುಟ್ಟಿ ಭತ್ಯೆ ಹೆಚ್ಚಳದಿಂದ ಕೇಂದ್ರ ಸರ್ಕಾರಕ್ಕೆ ವಾರ್ಷಿಕ 16 ಸಾವಿರ ಕೋಟಿ ರೂ. ಹೊರೆಯಾಗಲಿದೆ ಎಂದರು.

    ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಸೌಲಭ್ಯ ಪಡೆಯಲು ರೈತರು ಆಧಾರ್ ಲಿಂಕ್ ಮಾಡಲು ಹೆಚ್ಚಿನ ಕಾಲಾವಕಾಶ ನೀಡಲು ನಿರ್ಧರಿಸಲಾಗಿದೆ. ನವೆಂಬರ್ 30ರ ವರೆಗೂ ಅವಧಿಯನ್ನು ವಿಸ್ತರಿಸಲಾಗಿದೆ. ಈ ಕುರಿತು ಕೇಂದ್ರ ಸಚಿವ ಸಂಪುಟ ತೀರ್ಮಾನ ತೆಗೆದುಕೊಂಡಿದೆ. ಜೊತೆಗೆ ಆಶಾ ಕಾರ್ಯಕರ್ತೆಯರ ಸಂಭಾವನೆಯನ್ನು ಒಂದು ಸಾವಿರ ರೂ.ದಿಂದ ಎರಡು ಸಾವಿರ ರೂಪಾಯಿಗೆ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

  • ಸರ್ಕಾರಿ ನೌಕರರೇ ನಿಮ್ಮ ಬಳಿ ಬಿಪಿಎಲ್ ಕಾರ್ಡ್ ಇದ್ದರೆ ಬೀಳುತ್ತೆ ಭಾರಿ ದಂಡ!

    ಸರ್ಕಾರಿ ನೌಕರರೇ ನಿಮ್ಮ ಬಳಿ ಬಿಪಿಎಲ್ ಕಾರ್ಡ್ ಇದ್ದರೆ ಬೀಳುತ್ತೆ ಭಾರಿ ದಂಡ!

    ಕಲಬುರಗಿ: ಆಹಾರ ಇಲಾಖೆಯು ಅಕ್ರಮವಾಗಿ ಬಿಪಿಎಲ್ ಪಡಿತರ ಚೀಟಿ ಪಡೆದಿದ್ದ ಸರ್ಕಾರಿ ನೌಕರರ ಮೇಲೆ ರಾಜ್ಯಾದ್ಯಂತ ದಾಳಿ ನಡೆಸಿ ಕೋಟ್ಯಾಂತರ ರೂಪಾಯಿ ದಂಡ ವಸೂಲಿ ಮಾಡಿದೆ.

    ಸರ್ಕಾರಿ ನೌಕರರು ವಾಮಮಾರ್ಗ ಬಳಸಿ ಬಿಪಿಎಲ್ ಪಡಿತರ ಪಡೆದುಕೊಂಡರೇ ಎಚ್ಚರದಿಂದಿರಿ. ಅಕ್ರಮವಾಗಿ ಬಿಪಿಎಲ್ ಪಡಿತರ ಚೀಟಿ ಪಡೆದ ಸರ್ಕಾರಿ ನೌಕರರಿಗೆ ಎಚ್ಚರಿಕೆ ಗಂಟೆಯೊಂದನ್ನ ಹೊಡೆದಿತ್ತು. ಇದೀಗ ಇಂತಹ ಪ್ರಕರಣಗಳನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಅಕ್ರಮವಾಗಿ ಬಿಪಿಎಲ್ ಕಾರ್ಡ್ ಪಡೆದವರ ಮೇಲೆ ಬ್ರಹ್ಮಾಸ್ತ್ರ ಬೀಸಿದೆ.

    ಬಡತನ ರೇಖೆಗಿಂತ ಕೆಳಗಿರುವ ಜನರಿಗಾಗಿ ಸರ್ಕಾರ ಬಿಪಿಎಲ್ ಕಾರ್ಡ್ ಯೋಜನೆಯನ್ನ ಜಾರಿಗೆ ತಂದಿತ್ತು. ಆದರೆ ಈ ಯೋಜನೆ ಅಂದುಕೊಂಡಂತೆ ಜಾರಿಯಾಗಲೇ ಇಲ್ಲ. ನಿಜವಾದ ಫಲಾನುಭವಿಗಳಿಗೆ ಯೋಜನೆಯ ಲಾಭ ಸಿಗದೇ, ಸರ್ಕಾರಿ ನೌಕರರು ಇದನ್ನು ದುರುಪಯೋಗ ಪಡಿಸಿಕೊಂಡಿದ್ದರು. ಸರ್ಕಾರಿ ನೌಕರರು ನಕಲಿ ದಾಖಲೆಗಳನ್ನು ಆಹಾರ ಇಲಾಖೆಗೆ ಸಲ್ಲಿಸಿ, ಅಕ್ರಮವಾಗಿ ಬಿಪಿಎಲ್ ಕಾರ್ಡ್ ಗಳನ್ನ ಪಡೆದಿದ್ದರು. ರಾಜ್ಯಾದ್ಯಂತ ಸುಮಾರು 5,160 ಸರ್ಕಾರಿ ನೌಕರರು, ವಾಮಮಾರ್ಗವಾಗಿ ಬಿಪಿಎಲ್ ಕಾರ್ಡ್ ಗಳನ್ನ ಪಡೆದಿದ್ದರು.

    ಸರ್ಕಾರಿ ನೌಕರರ ಮೇಲೆ ವ್ಯಾಪಕವಾಗಿ ದೂರು ಬಂದ ಹಿನ್ನಲೆಯಲ್ಲಿ ನಿಸ್ಪಕ್ಷವಾಗಿ ಕಾರ್ಯಾಚರಣೆಗಿಳಿದ ಆಹಾರ ಇಲಾಖೆ, ರಾಜ್ಯಾದ್ಯಂತ 5,160 ಸರ್ಕಾರಿ ನೌಕರರು ಅಕ್ರಮವಾಗಿ ಬಿಪಿಎಲ್  ಕಾರ್ಡ್ ಗಳನ್ನ  ಹೊಂದಿರುವುದನ್ನು ಪತ್ತೆಮಾಡಿದೆ. ಇಂತಹ ನೌಕರರ ವಿರುದ್ಧ ಕ್ರಮ ಕೈಗೊಂಡು ಸುಮಾರು 1.73 ಕೋಟಿ ರೂಪಾಯಿಗೂ ಅಧಿಕ ದಂಡವನ್ನ ವಸೂಲಿ ಮಾಡಿ, ಅಕ್ರಮ ಬಿಪಿಎಲ್ ಕಾರ್ಡ್ ಗಳನ್ನ  ವಶಪಡಿಸಿಕೊಂಡಿದೆ.

    ಆಹಾರ ಇಲಾಖೆಯ ನಿಯಮದ ಪ್ರಕಾರ ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಗಳನ್ನ ಹೊಂದಿರಬಾರದು. ಆದರೆ ಕಲಬುರಗಿ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಜಿಲ್ಲೆಗಳಲ್ಲಿ ಸರ್ಕಾರಿ ನೌಕರರು ಆಹಾರ ಇಲಾಖೆಗೆ ತಪ್ಪು ಮಾಹಿತಿ ನೀಡಿ, ಬಿಪಿಎಲ್ ಕಾರ್ಡ್ ಗಳನ್ನ ಪಡೆದಿದ್ದರು. ಇದು ಆಹಾರ ಇಲಾಖೆಯ ಗಮನಕ್ಕೆ ಬಂದ ತಕ್ಷಣ ಆಹಾರ ಇಲಾಖೆ ತುರ್ತಾಗಿ ಪ್ರಕಟಣೆ ನೀಡಿ, ಸರ್ಕಾರಿ ನೌಕರರು ತಾವು ಪಡೆದಿರುವ ಬಿಪಿಎಲ್ ಕಾರ್ಡ್ ಗಳನ್ನ ವಾಪಾಸ್ ಮಾಡಿ, ಇಲ್ಲವಾದಲ್ಲಿ ಪರಿಣಾಮ ಎದುರಿಸಿ ಅಂತಾ ಎಚ್ಚರಿಕೆಯನ್ನ ನೀಡಿತ್ತು.

    ಆಹಾರ ಇಲಾಖೆಯ ಎಚ್ಚರಿಕೆ ಮಧ್ಯೆಯೂ ನೌಕರರು, ಕಾರ್ಡ್ ಗಳನ್ನ ಮರಳಿಸದೆ ಹಾಗೆ ಇಟ್ಟುಕೊಂಡಿದ್ದರು. ಇದೀಗ ಆಹಾರ ಇಲಾಖೆ ಅಂತವರನ್ನೆಲ್ಲಾ ಪತ್ತೆ ಹಚ್ಚಿ ದಾಖಲೆಯ ಪ್ರಮಾಣದಲ್ಲಿ ದಂಡ ವಸೂಲಿ ಮಾಡಿದೆ.

    ದಾಳಿ ಕುರಿತು ಜಿಲ್ಲಾ ಆಹಾರ ಆಯೋಗದ ಸದಸ್ಯರಾದ ವಿ ವಿ ಪಾಟೀಲ್ ಮಾತನಾಡಿ, ಬಡವರಿಗಾಗಿ ಜಾರಿಗೆ ಬಂದ ಬಿಪಿಎಲ್ ಕಾರ್ಡ್ ನ್ನು ಸರ್ಕಾರಿ ನೌಕರರು ತಪ್ಪು ಮಾಹಿತಿ ಸಲ್ಲಿಸಿ ದುರುಪಯೋಗಡಿಸಿಕೊಂಡು, ಇದೀಗ ದಂಡ ತೆತ್ತಿದ್ದಾರೆ. ಆದರೆ ಇಂಥವರ ಮೇಲೆ ಕಠಿಣ ಕ್ರಮ ತೆಗೆದುಕೊಂಡಲ್ಲಿ ಮಾತ್ರ, ಇಂಥಹ ಪ್ರಕರಣಗಳು ಮರುಕಳಿಸುವುದಿಲ್ಲ ಎಂದು ತಿಳಿಸಿದ್ದಾರೆ.

  • ವಾರದಲ್ಲಿ ಐದೇ ದಿನ ಕೆಲ್ಸ, ಸಂಬಳ ಹೆಚ್ಚಳ – ರಾಜ್ಯದ ಸರ್ಕಾರಿ ನೌಕರರಿಗೆ ಬಂಪರ್ ಗಿಫ್ಟ್

    ವಾರದಲ್ಲಿ ಐದೇ ದಿನ ಕೆಲ್ಸ, ಸಂಬಳ ಹೆಚ್ಚಳ – ರಾಜ್ಯದ ಸರ್ಕಾರಿ ನೌಕರರಿಗೆ ಬಂಪರ್ ಗಿಫ್ಟ್

    ಬೆಂಗಳೂರು: ವಿಧಾನಸಭೆ ಎಲೆಕ್ಷನ್ ಹೊತ್ತಲ್ಲೇ ಸಿಎಂ ಸಿದ್ದರಾಮಯ್ಯ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಉಡುಗೊರೆ ನೀಡುವುದು ಖಚಿತವಾಗಿದೆ.

    ಎಂ.ಆರ್.ಶ್ರೀನಿವಾಸಮೂರ್ತಿ ನೇತೃತ್ವದ ಆರನೇ ವೇತನ ಆಯೋಗ ನೀಡಿರೋ ವರದಿಯನ್ನು ಯಥಾವತ್ತು ಜಾರಿಗೊಳಿಸಲು ಮುಖ್ಯಮಂತ್ರಿಗಳು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಜನವರಿ ಅಂತ್ಯಕ್ಕೆ ಆಯೋಗದ ಅವಧಿ ಕೊನೆಗೊಳ್ಳಲಿದೆ. ಅವಧಿ ಮುಗಿಯೋದಕ್ಕೂ ಮುನ್ನ ವರದಿ ಮಂಡನೆಯಾಗಲಿದೆ.

    6 ನೇ ವೇತನ ಆಯೋಗದ ವರದಿಯನ್ನು ಜಾರಿಗೆ ತಂದು ಚುನಾವಣೆ ಎದುರಿಸಲು ನಿರ್ಧಾರ ಮಾಡಲಾಗಿದ್ದು, ಸರ್ಕಾರದ ಅವಧಿ ಮುಗಿಯೋ ಮುನ್ನ ಸಿದ್ದರಾಮಯ್ಯ ಕೊನೆಯ ಬ್ರಹ್ಮಸ್ತ್ರ ಬಿಡಲಿದ್ದಾರೆ.

     

    ಈ ಮೂಲಕ 6 ಲಕ್ಷ ಸರ್ಕಾರಿ ನೌಕರರ ಕುಟುಂಬದ ಮತಗಳನ್ನು ಬುಟ್ಟಿಗೆ ಹಾಕಿಕೊಳ್ಳುವ ಸಲುವಾಗಿ ಫೆಬ್ರವರಿ 16ರಂದು ಮಂಡಿಸುವ ಬಜೆಟ್‍ ನಲ್ಲಿ ವೇತನ ಆಯೋಗದ ವರದಿ ಬಗ್ಗೆ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗಿದೆ.

    ಪಬ್ಲಿಕ್ ಟಿವಿಗೆ 6 ನೇ ವೇತನ ಆಯೋಗದ ಸಂಭವನೀಯ ವರದಿ ಸಿಕ್ಕಿದೆ. ಹಾಗಾದ್ರೆ ರಾಜ್ಯ ಸರ್ಕಾರಿ ನೌಕರರಿಗೆ ಸಿಗೋ ಭರ್ಜರಿ ಉಡುಗೊರೆ ಏನು ಅಂತ ನೋಡೋದಾದ್ರೆ:

    – ವಾರದಲ್ಲಿ 5 ದಿನ ಮಾತ್ರ ಕೆಲಸ, ಶನಿವಾರ, ಭಾನುವಾರ ರಜೆ.
    – ಕೆಲ ಜಯಂತಿಗಳಿಗೆ ರಜೆ ರದ್ದು ಮಾಡಲು ಶಿಫಾರಸ್ಸು.
    – ಕೆಲಸದ ಸಮಯದಲ್ಲಿ ಬದಲಾವಣೆ.
    – ನೌಕರರ ವೇತನದಲ್ಲಿ ಭಾರಿ ಹೆಚ್ಚಳ.
    – ಕೇಂದ್ರ ಸರ್ಕಾರಿ ನೌಕರರ ಹತ್ತಿರದ ಸಂಬಳಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಬಳ.
    – ಕನಿಷ್ಠ ವೇತನ ಮೊತ್ತ 16,350 ರೂ.ಗೆ, ಗರಿಷ್ಠ ವೇತನ 1,32,925 ರೂ.ಗೆ ಏರಿಕೆ.
    – ಗ್ರೂಪ್ ಡಿ – 16,350 ರೂ., ಗ್ರೂಪ್ ಸಿ – 19,850, ಎಫ್‍ಡಿಐ – 28,125 ರೂ.
    – ಗ್ರೂಪ್ ಬಿ – 39,425 ರೂ., ಗ್ರೂಪ್ ಎ – 48,625 ರೂ., ಐಎಎಸ್ ಯೇತರ ಅಧಿಕಾರಿಗಳು-95,325 ರೂ.

  • ಎಲೆಕ್ಷನ್ ಹೊತ್ತಲ್ಲೇ ರಾಜ್ಯದ ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್ ನೀಡಲು ಮುಂದಾದ ಸಿಎಂ

    ಎಲೆಕ್ಷನ್ ಹೊತ್ತಲ್ಲೇ ರಾಜ್ಯದ ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್ ನೀಡಲು ಮುಂದಾದ ಸಿಎಂ

    ಬೆಂಗಳೂರು: ಚುನಾವಣಾ ಸಮಯದಲ್ಲೇ ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್ ನೀಡಲು ಮುಂದಾಗಿದೆ. ಈ ಗಿಫ್ಟ್ ಮೂಲಕ ರಾಜ್ಯದಲ್ಲಿರೋ ಸರ್ಕಾರಿ ನೌಕರರ ಜೊತೆ ಅವರ ಕುಟುಂಬದವರ ಮತವನ್ನು ಸೆಳೆಯಲು ಮಾಸ್ಟರ್ ಪ್ಲಾನ್ ಮಾಡಿದೆ.

    ಇನ್ನೇನು ಕೆಲವೇ ದಿನಗಳಲ್ಲಿ ನಿವೃತ್ತರಾಗಲಿರೋ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಲು ಮುಂದಾಗಿದೆ. ಚುನಾವಣಾ ಸಮಯದಲ್ಲಿ ರಾಜ್ಯದಲ್ಲಿರೋ 5 ಲಕ್ಷಕ್ಕೂ ಹೆಚ್ಚು ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಓಟ್ ಬ್ಯಾಂಕ್ ಸೆಳೆಯೋ ಸಲುವಾಗಿ ನಿವೃತ್ತಿ ವಯಸ್ಸನ್ನು ರಾಜ್ಯ ಸರ್ಕಾರ 2 ವರ್ಷ ಹೆಚ್ಚಿಸಲು ಮುಂದಾಗಿದೆ. ಈಗಿರುವ 60 ರ ಬದಲಾಗಿ ಇನ್ನೆರಡು ವರ್ಷ ಹೆಚ್ಚಿಸಲು ತೀರ್ಮಾನ ಮಾಡಲಾಗಿದೆ. ಅಂದ್ರೆ ಇನ್ನು ಮುಂದೆ ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 62 ಆಗಲಿದೆ.

    ಈ ಬಗ್ಗೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿರೋ ಸಿಎಂ, ಮುಂಬರುವ ಬಜೆಟ್‍ನಲ್ಲಿ ಈ ಬಗ್ಗೆ ಘೋಷಣೆ ಮಾಡುತ್ತೇವೆ ಅಂತ ಅಧ್ಯಕ್ಷರಿಗೆ ಭರವಸೆ ನೀಡಿದ್ದಾರಂತೆ. ಅಷ್ಟೇ ಅಲ್ಲದೆ ರಾಜ್ಯ ಸರ್ಕಾರಿ ನೌಕರರ ಸಂಘದ ಇತರೆ ಬೇಡಿಕೆಗಳಿಗಳಿಗೂ ಅಸ್ತು ಅಂದಿರೋ ಸಿದ್ದರಾಮಯ್ಯ, ಜನವರಿ 18 ರಂದು ಕೈಗೊಂಡಿದ್ದ ಮುಷ್ಕರವನ್ನು ಕೈಬಿಡಬೇಕು ಅಂತ ಮನವಿ ಮಾಡಿದ್ದಾರೆ ಎನ್ನಲಾಗಿದೆ.