Tag: GOVU POOJA

  • ದೀಪಾವಳಿ: ನಂಜನಗೂಡಿನಲ್ಲಿ ಗೋಪೂಜೆ ಮಾಡಿದ ಸಚಿವ ಸೋಮಶೇಖರ್‌

    ದೀಪಾವಳಿ: ನಂಜನಗೂಡಿನಲ್ಲಿ ಗೋಪೂಜೆ ಮಾಡಿದ ಸಚಿವ ಸೋಮಶೇಖರ್‌

    ನಂಜನಗೂಡು: ಬಲಿಪಾಡ್ಯಮಿ ದಿನವಾದ ಶುಕ್ರವಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ನಂಜುಂಡೇಶ್ವರ ದೇವಸ್ಥಾನದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿದರು.

    ದೀಪಾವಳಿ ಹಬ್ಬದ ಪ್ರಯುಕ್ತ ನಂಜನಗೂಡಿಗೆ ಆಗಮಿಸಿದ ಸಚಿವರು ನಂಜುಂಡೇಶ್ವರನ ಸನ್ನಿಧಾನದಲ್ಲಿ ಗೋವುಗಳಿಗೆ ಹಾರ ಹಾಕಿ ಪೂಜೆ ಸಲ್ಲಿಸಿದರು. ನಂತರ ನಂಜುಂಡೇಶ್ವರನಿಗೆ ಪೂಜೆ ಸಲ್ಲಿಸಿದರು. ಇದನ್ನೂ ಓದಿ: ಸ್ವರ್ಗದಲ್ಲಿ ಅಪ್ಪ, ಅಮ್ಮನೊಂದಿಗೆ ಪುನೀತ್ – ಫೋಟೋ ವೈರಲ್

    ಬಳಿಕ ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ಬಳಿ ಹಮ್ಮಿಕೊಂಡಿದ್ದ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಉತ್ತರಾಖಂಡದ ಕೇದಾರನಾಥದಲ್ಲಿ ಆದಿ ಶಂಕರಾಚಾರ್ಯರ ನವೀಕೃತ ಪ್ರತಿಮೆ ಉದ್ಘಾಟನೆ ಮಾಡಿದ ನೇರ ಪ್ರಸಾರದ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

    ಕೇದಾರನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ ಶಂಕರಾಚಾರ್ಯರ ಪ್ರತಿಮೆಯನ್ನು ಕೆತ್ತಿದ್ದು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಎಂಬುದನ್ನು ತಿಳಿದು ಸಚಿವರು ಸಂತಸ ವ್ಯಕ್ತಪಡಿಸಿದರು. 12 ಅಡಿ ಎತ್ತರ, 35 ಟನ್ ತೂಕದ ಕುಳಿತ ಭಂಗಿಯಲ್ಲಿರುವ ಶಂಕರಾಚಾರ್ಯರ ಪ್ರತಿಮೆಗೆ ಹೆಗ್ಗಡದೇವನಕೋಟೆಯಿಂದ 120 ಟನ್ ಕೃಷ್ಣ ಶಿಲೆ ಬಳಸಿದ ವಿಚಾರ ತಿಳಿದು ಖುಷಿಪಟ್ಟರು. ಇದನ್ನೂ ಓದಿ: ವಿಜಯಪುರದಲ್ಲಿ ಮತ್ತೆ ಸರಣಿ ಭೂಕಂಪದ ಅನುಭವ

    14 ಲಕ್ಷ ರೈತರಿಗೆ 10203.52 ಕೋಟಿ ರೂ. ಸಾಲ
    ದೇವಸ್ಥಾನದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಅಲ್ಪಾವಧಿ, ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲ ನೀಡಲಾಗುತ್ತಿದೆ. 30 ಲಕ್ಷ ರೈತರಿಗೆ 20810 ಕೋಟಿ ರೂ. ಸಾಲ ವಿತರಣೆ ಗುರಿ ನೀಡಲಾಗಿದ್ದು, ಇದರಲ್ಲಿ 14 ಲಕ್ಷ ರೈತರಿಗೆ 10203.52 ಕೋಟಿ ರೂ. ಸಾಲ ನೀಡಲಾಗಿದೆ ಎಂದು ಹೇಳಿದರು.

    ಮೈಸೂರು ಜಿಲ್ಲೆಯಲ್ಲಿ ಮಳೆ ಹಾನಿಯಿಂದ ಉಂಟಾಗಿರುವ ನಷ್ಟ ಹಾಗೂ ಕೈಗೊಳ್ಳಬೇಕಾದ ಪರಿಹಾರ ಕಾರ್ಯಗಳ ಬಗ್ಗೆ ಮುಖ್ಯಮಂತ್ರಿ ಜೊತೆ ಮಾತನಾಡಿದ್ದೇನೆ. ಚಾಮುಂಡಿ ಬೆಟ್ಟದಲ್ಲಿ ಮತ್ತೆ ಭೂಕುಸಿತವಾಗಿರುವ ಬಗ್ಗೆ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಅವರ ಗಮನಕ್ಕೆ ತರಲಾಗಿದೆ ಎಂದರು.

    ಈ ಸಂದರ್ಭದಲ್ಲಿ ಶಾಸಕ ಹರ್ಷವರ್ಧನ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ, ಕಾಫಿ ಬೋರ್ಡ್ ಅಧ್ಯಕ್ಷ ಕೃಷ್ಣಪ್ಪಗೌಡ, ಜಿಲ್ಲಾಧ್ಯಕ್ಷೆ ಮಂಗಳ ಸೋಮಶೇಖರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

  • ಬಲಿಪಾಡ್ಯಮಿ ಹಬ್ಬದಂದು ದೇವಾಲಯಗಳಲ್ಲಿ ಗೋಪೂಜೆ

    ಬಲಿಪಾಡ್ಯಮಿ ಹಬ್ಬದಂದು ದೇವಾಲಯಗಳಲ್ಲಿ ಗೋಪೂಜೆ

    ಹೊಸಕೋಟೆ: ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ಬಲಿಪಾಡ್ಯಮಿ ದಿನದಂದು ರಾಜ್ಯದ ಅಧಿಸೂಚಿತ ದೇವಾಲಯಗಳಲ್ಲಿ ಗೋವುಗಳನ್ನು ಪೂಜಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌ ತಿಳಿಸಿದ್ದಾರೆ.

    GOVU POOJA

    ಗೋವುಗಳಿಗೆ ಸ್ನಾನ ಮಾಡಿಸಿ, ದೇವಾಲಯಕ್ಕೆ ಕರೆತಂದು ಅರಿಶಿಣ, ಕುಂಕುಮ, ಹೂವುಗಳಿಂದ ಅಲಂಕರಿಸಲಾಗುವುದು. ಅಕ್ಕಿ, ಬೆಲ್ಲ, ಬಾಳೆಹಣ್ಣು, ಸಿಹಿ ತಿನಿಸು ಮುಂತಾದ ಗೋಗ್ರಾಸವನ್ನು ಹಸುವಿಗೆ ನೀಡಿ ಧೂಪ, ದೀಪಗಳಿಂದ ಪೂಜಿಸಿ ನಮಸ್ಕರಿಸುವ ವ್ಯವಸ್ಥೆ ಮಾಡಲಾಗುವುದು. ಅಂದು ಸಂಜೆ 5:30 ರಿಂದ 6:30 ರವರೆಗೆ ಗೋಧೋಳಿ ಲಗ್ನದಲ್ಲಿ ಗೋಪೂಜೆ ಕಾರ್ಯಕ್ರಮ ನಡೆಸಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ದೀಪಾವಳಿ ಹಬ್ಬಕ್ಕೆ ಮಾಡಿ ಸ್ಪೆಷಲ್ ಬರ್ಫಿ

    FIRECRACKERS

    ಗೋಪೂಜೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರದಂತೆ ಕ್ರಮವಹಿಸುವುದರ ಜೊತೆಯಲ್ಲಿ ಗೋವುಗಳನ್ನು ದೇವಸ್ಥಾನಕ್ಕೆ ಕರೆತರುವುದು ಹಾಗೂ ಕಳುಹಿಸುವ ಪೂಜೆಯ ಸಮಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ವಿಶೇಷ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾವುದು. ಇದನ್ನೂ ಓದಿ: ಶೇರ್‌ ಮಾಡೋದನ್ನು ನಿಲ್ಲಿಸಿ – ವೈರಲ್ ಆಗಿರುವ ಅಪ್ಪು ಫೋಟೋ ಸೀಕ್ರೆಟ್ ರಿವಿಲ್

    ಗೋವುಗಳು ಅಲಭ್ಯವಾದಲ್ಲಿ ಸ್ಥಳೀಯ ಗೋಶಾಲೆ ಮಠದಲ್ಲಿರುವ ಇಲಾಖೆಯ ಗೋವುಗಳು ಅಥವಾ ಹತ್ತಿರದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಸಂಪರ್ಕಿಸುವುದು. ಪೂಜಾ ಸಂದರ್ಭದಲ್ಲಿ ಅಧಿಕಾರಿ/ ಸಿಬ್ಬಂದಿ ಹಾಜರಿರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಬಿಜೆಪಿಯವರಿಗೆ ಹಸುಗಳ ಮೇಲೆ ಪ್ರೀತಿ ಇದ್ದರೆ ಗೋಮಾಂಸ ರಫ್ತು ನಿಲ್ಲಿಸಲಿ: ಎಚ್.ಸಿ.ಮಹದೇವಪ್ಪ

    ಬಿಜೆಪಿಯವರಿಗೆ ಹಸುಗಳ ಮೇಲೆ ಪ್ರೀತಿ ಇದ್ದರೆ ಗೋಮಾಂಸ ರಫ್ತು ನಿಲ್ಲಿಸಲಿ: ಎಚ್.ಸಿ.ಮಹದೇವಪ್ಪ

    ಮೈಸೂರು: ಬಿಜೆಪಿಯವರಿಗೆ ನಿಜವಾಗಿಯೂ ಹಸುಗಳ ಬಗ್ಗೆ ಪ್ರೀತಿ ಇದ್ದರೆ ಮೊದಲು ಇವರು ಮಾಡುತ್ತಿರುವ ಗೋಮಾಂಸ ರಫ್ತನ್ನು ನಿಲ್ಲಿಸಲಿ ಎಂದು ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಸವಾಲು ಹಾಕಿದ್ದಾರೆ.

    GOVU POOJA

    ಬಲಿಪಾಡ್ಯಮಿ ದಿನದಂದು ಕಡ್ಡಾಯವಾಗಿ ಗೋಪೂಜೆ ಮಾಡಬೇಕೆಂಬ ರಾಜ್ಯ ಸರ್ಕಾರದ ಆದೇಶ ನಾಟಕೀಯವಾದದ್ದು ಎಂದು ಎಚ್.ಸಿ.ಮಹದೇವಪ್ಪ ಆರೋಪಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ದೀಪಾವಳಿ ಹಬ್ಬದಂದು ದೇವಾಲಯಗಳಲ್ಲಿ ಗೋಪೂಜೆ ಮಾಡಬೇಕೆಂದು ಆದೇಶ ಹೊರಡಿಸಿರುವ ರಾಜ್ಯ ಬಿಜೆಪಿ ಸರ್ಕಾರವು ದೀಪಾವಳಿಯ ಪೂಜೆ ವೇಳೆ ಸಹಜವಾಗಿ ನಡೆಯುವ ಗೋಪೂಜೆ ಆಚರಣೆಗಳಿಗೂ ತನ್ನ ರಾಜಕೀಯ ಬಣ್ಣ ಬಳಿದಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಬಲಿಪಾಡ್ಯಮಿ ದಿನ ದೇವಾಲಯಗಳಲ್ಲಿ ಗೋಪೂಜೆ ಕಡ್ಡಾಯ: ಧಾರ್ಮಿಕ ದತ್ತಿ ಇಲಾಖೆ

    ಗ್ರಾಮೀಣ ಭಾರತದಲ್ಲಿ ಕೃಷಿಯ ಮೂಲಕ ಬದುಕು ಕಂಡುಕೊಂಡಿರುವ ಎಲ್ಲಾ ರೈತರೂ ದೀಪಾವಳಿ ಮತ್ತು ಸಂಕ್ರಾಂತಿ ಹಬ್ಬದ ವೇಳೆ ಹಸುಗಳ ಮೈತೊಳೆದು, ಅಲಂಕಾರ ಮಾಡಿ ನಂತರ ಕಿಚ್ಚು ಹಾಕಿಸುವಂತಹ ಆಚರಣೆಯು ಅನಾದಿ ಕಾಲದಿಂದಲೂ ಇದೆ. ಈ ಆಚರಣೆಯನ್ನು ನಮ್ಮ ರೈತರು ಬಿಜೆಪಿಗರಿಂದ ಕಲಿಯಬೇಕೇನು ಎಂದು ಪ್ರಶ್ನಿಸಿದ್ದಾರೆ.

    ಬೆಲೆ ಏರಿಕೆಯ ನಡುವೆ ದೀಪಾವಳಿಯೂ ಬೇಡ ಎಂಬ ಪರಿಸ್ಥಿತಿಗೆ ಜನಸಮಾನ್ಯರನ್ನು ನೂಕಿರುವ ಬಿಜೆಪಿಗರು ಗೋವಿನ ಹೆಸರಲ್ಲಿ ರಾಜಕೀಯ ಮಾಡುತ್ತಿರುವುದು ಅತ್ಯಂತ ಹಾಸ್ಯಸ್ಪದ ಬೆಳವಣಿಗೆ ಎಂದು ಲೇವಡಿ ಮಾಡಿದ್ದಾರೆ.

    BEEF

    ಹೈನುಗಾರಿಕೆಯನ್ನೇ ಉಪ ಕಸುಬಾಗಿಸಿಕೊಂಡಿರುವ ನಮ್ಮೆಲ್ಲಾ ರೈತರ ಕುಟುಂಬಗಳಿಗೆ ತಲಾ 2 ಹಸುಗಳನ್ನು ನೀಡುವ ಮೂಲಕ ಹಸುವಿನ ಮತ್ತು ರೈತರ ಬದುಕಿಗೆ ನೆರವಾಗಲಿ. ಗಗನಕ್ಕೆ ಏರಿರುವ ರಸಗೊಬ್ಬರದ ಬೆಲೆ ಇಳಿಸಲಿ. ಕೃಷಿ ಉಪಕರಣಗಳ ಬೆಲೆಯನ್ನು ತಗ್ಗಿಸಿ ಕೃಷಿ ಉತ್ಪಾದನೆಯನ್ನು ಉತ್ತೇಜಿಸಲಿ. ಸುಮ್ಮನೇ ಗೋವಿನ ಹೆಸರಲ್ಲಿ ನಾಟಕವೇಕೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಬೆಳಗಾವಿ ಸುವರ್ಣಸೌಧ ಮುಂದೆ ಮಾತಾಡ್ ಮಾತಾಡ್ ‘ಕನ್ನಡ’ ಗೀತೆಗಳ ಕಲರವ

    ದೀಪಾವಳಿ ಹಬ್ಬಕ್ಕೆ ಕೇಂದ್ರ ಸರ್ಕಾರವು ಜನಸಮಾನ್ಯರಿಗೆ ಬೆಲೆ ಏರಿಕೆಯ ಕೊಡುಗೆಯನ್ನು ನೀಡಿದ್ದು ದೇಶಪ್ರೇಮದ ಹೆಸರನ್ನು ಹೇಳಿಕೊಂಡು ದೇಶ ನಿವಾಸಿಗಳಿಗೆ ಮೋಸ ಮಾಡುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಜನಸಾಮಾನ್ಯರು ದಂಗೆ ಏಳುವುದು ಅನಿವಾರ್ಯವಾಗಿ ಕಾಣುತ್ತಿದೆ. ಜನಸಾಮಾನ್ಯರ ನೇರ ಆಕ್ರೋಶವೇ ಇದಕ್ಕೆ ಅಂತಿಮ ಎಂದು ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

  • ಬಲಿಪಾಡ್ಯಮಿ ದಿನ ದೇವಾಲಯಗಳಲ್ಲಿ ಗೋಪೂಜೆ ಕಡ್ಡಾಯ: ಧಾರ್ಮಿಕ ದತ್ತಿ ಇಲಾಖೆ

    ಬಲಿಪಾಡ್ಯಮಿ ದಿನ ದೇವಾಲಯಗಳಲ್ಲಿ ಗೋಪೂಜೆ ಕಡ್ಡಾಯ: ಧಾರ್ಮಿಕ ದತ್ತಿ ಇಲಾಖೆ

    ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ ಎಲ್ಲ ದೇವಾಲಯಗಳಲ್ಲಿ ಬಲಿಪಾಡ್ಯಮಿ ದಿನದಂದು ಗೋಪೂಜೆ ಮಾಡುವುದು ಕಡ್ಡಾಯ ಎಂದು ಧಾರ್ಮಿಕ ದತ್ತಿ ಇಲಾಖೆ ದೇವಾಲಯಗಳಿಗೆ ಸುತ್ತೋಲೆ ಹೊರಡಿಸಿದೆ.

    GOVU

    ಬಲಿಪಾಡ್ಯಮಿ ದಿನ ಸಂಜೆ 5.30ರಿಂದ 6.30ರ ಸಮಯದಲ್ಲಿ ರಾಜ್ಯದ ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಬೇಕು ಎಂದು ಆದೇಶದಲ್ಲಿ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಕೆನಡಾ ರಕ್ಷಣಾ ಸಚಿವರಾಗಿ ಭಾರತ ಮೂಲದ ಅನಿತಾ ಆನಂದ್ ಆಯ್ಕೆ

    ಆ ದಿನ ಗೋವುಗಳನ್ನು ದೇವಾಲಯಕ್ಕೆ ಕರೆತಂದು ಸ್ನಾನ ಮಾಡಿಸಿ, ಅರಿಶಿಣ, ಕುಂಕುಮ, ಹೂಗಳಿಂದ ಅಲಂಕರಿಸಿ ಪೂಜೆ ಸಲ್ಲಿಸಬೇಕು. ನಂತರ ಅಕ್ಕಿ, ಬೆಲ್ಲ, ಬಾಳೆಹಣ್ಣು ಮತ್ತು ಸಿಹಿ ತಿನಿಸುಗಳ ಗೋಗ್ರಾಸಗಳನ್ನು ಹಸುಗಳಿಗೆ ನೀಡಿ ಆರಾಧಿಸಬೇಕು ಎಂದು ತಿಳಿಸಿದೆ. ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದೆ.

    GOVU POOJA

    ಅನಾದಿಕಾಲದಿಂದಲೂ ನಮ್ಮ ಪೂರ್ವಿಕರು ಗೋವಿನ ಪೂಜೆ ಮಾಡುತ್ತಿದ್ದರು. ಇದು ನಮ್ಮ ಭಾರತೀಯ ಸಂಸ್ಕೃತಿಯಾಗಿದೆ. ಕರ್ನಾಟಕದಲ್ಲೂ ಹಿಂದಿನಿಂದಲೂ ಗೋಪೂಜೆ ಮಾಡುವ ಪದ್ಧತಿ ಇತ್ತು. ಆದರೆ ಆಧುನಿಕ ಕಾಲದಲ್ಲಿ ನಮ್ಮ ಜನತೆ ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾ ಕೋಚ್ ಹುದ್ದೆಗೆ ದ್ರಾವಿಡ್ ಅಧಿಕೃತ ಅರ್ಜಿ ಸಲ್ಲಿಕೆ

    ಬಲಿಪಾಡ್ಯಮಿ ದಿನ ಗೋಪೂಜೆ ಮಾಡುವುದು ಶ್ರೇಷ್ಠ. ಈ ಪದ್ಧತಿಯನ್ನು ನಾಡಿನ ಜನತೆ ಮರೆಯಬಾರದು ಎಂದು ಧಾರ್ಮಿಕ ದತ್ತಿ ಇಲಾಖೆ ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.