Tag: Gram Panchayat

  • ಇ-ಸ್ವತ್ತು ಉತಾರ ಮಾಡಲು 4 ಲಕ್ಷ ಲಂಚ ಪಡೆಯುತ್ತಿದ್ದಾಗ ಪಿಡಿಓ, ಮೂವರು ಗ್ರಾಪಂ ಸದಸ್ಯ ಅರೆಸ್ಟ್‌

    ಇ-ಸ್ವತ್ತು ಉತಾರ ಮಾಡಲು 4 ಲಕ್ಷ ಲಂಚ ಪಡೆಯುತ್ತಿದ್ದಾಗ ಪಿಡಿಓ, ಮೂವರು ಗ್ರಾಪಂ ಸದಸ್ಯ ಅರೆಸ್ಟ್‌

    ಹಾವೇರಿ: ಇ-ಸ್ವತ್ತು (E Swathu) ಉತಾರ ಪೂರೈಸಲು ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಹಲಗೇರಿ ಲೋಕಾಯುಕ್ತ ಪೊಲೀಸರು ಗ್ರಾಮ ಪಂಚಾಯತಿ ಪಿಡಿಓ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಹಾಗೂ 3 ಜನ ಗ್ರಾಪಂ ಸದಸ್ಯರ ಬಂಧಿಸಿರುವ ಘಟನೆ ಹಾವೇರಿಯಲ್ಲಿ (Haveri) ನಡೆದಿದೆ.

    ಪಿಡಿಓ ಕೆ.ಮಂಜುನಾಥ, ಉಪಾಧ್ಯಕ್ಷ ಮಲ್ಲಪ್ಪ ಬೂದಿಹಾಳ, ಸೋಮಶೇಖರ್, ಪ್ರಸನ್ನ ಮತ್ತು ಸೈಯದ್ ರೆಹಮಾನ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಇದನ್ನೂ ಓದಿ: 26 ರಫೇಲ್ ಯುದ್ಧ ವಿಮಾನಗಳ ಖರೀದಿಗೆ ಸಹಿ; ಭಾರತ-ಫ್ರಾನ್ಸ್ ಮಧ್ಯೆ 63,000 ಕೋಟಿ ಮೆಗಾ ಡೀಲ್‌

    ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ಹಲಗೇರಿ ಗ್ರಾಮದ ಗ್ರಾಮ ಪಂಚಾಯಿತಿಯಲ್ಲಿ (Gram Panchayat) ನಡೆದಿದೆ. ಸುಮಾರು 60 ಫ್ಲಾಟ್‌ಗಳ ಎನ್.ಎ ಇ-ಸ್ವತ್ತು ಉತಾರ ಪೂರೈಸಲು 4.50 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇಂದು 4 ಲಕ್ಷ ರೂಪಾಯಿ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇದನ್ನೂ ಓದಿ: ಪ್ಯಾಂಟ್ ಬಿಚ್ಚಿಸಿದ್ರು, ಮತ್ತೊಂದು ಬಿಚ್ಚಿಸಿದ್ರು ಅನ್ನೋದು ನನ್ಗೆ ಗೊತ್ತಿಲ್ಲ: ಆರ್‌.ಬಿ ತಿಮ್ಮಾಪೂರ

    ಲೋಕಾಯುಕ್ತ ಡಿಎಸ್ಪಿ ಮಧುಸೂದನ್ ನೇತ್ರತ್ವದಲ್ಲಿ ನವೀನ್ ಅಂದನೂರು ಲೇಔಟ್ ಮಾಲೀಕನಿಂದ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಬಂಧಿಸಲಾಗಿದೆ. ಬಂಧಿತರನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಪೊಲೀಸರು ಇವರ ಗುಲಾಮರು ಅಂದುಕೊಂಡಿದ್ದಾರಾ? – ಸಿಎಂ ನಡೆಗೆ ಛಲವಾದಿ ನಾರಾಯಣಸ್ವಾಮಿ ಕಿಡಿ

  • ತೆರಿಗೆ ಸಂಗ್ರಹ – ಗ್ರಾಮ ಪಂಚಾಯಿತಿಗಳಿಗೇ ಅಧಿಕಾರ ಕೊಡಲು ಸರ್ಕಾರ ನಿರ್ಧಾರ

    ತೆರಿಗೆ ಸಂಗ್ರಹ – ಗ್ರಾಮ ಪಂಚಾಯಿತಿಗಳಿಗೇ ಅಧಿಕಾರ ಕೊಡಲು ಸರ್ಕಾರ ನಿರ್ಧಾರ

    ಬೆಂಗಳೂರು: ಗ್ರಾಮ ಪಂಚಾಯಿತಿಗಳಿಗೇ (Gram Panchayat) ತೆರಿಗೆ ಸಂಗ್ರಹದ ಅಧಿಕಾರ ನೀಡುವ ʻಕರ್ನಾಟಕ ರಾಜ್ಯ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ವಿಧೇಯಕ 2025ʼ ಅನ್ನು ಗುರುವಾರ ವಿಧಾನ ಪರಿಷತ್‌ನಲ್ಲಿ ಅಂಗೀಕರಿಸಲಾಯಿತು.

    ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು ವಿಧೇಯಕ ಮಂಡಿಸಿದರು. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಅನಧಿಕೃತ ಬಡಾವಣೆ ನಿವಾಸಿಗಳಿಗೆ ಈ ವಿಧೇಯಕ ತರುತ್ತಿದ್ದೇವೆ. ಅನಧೀಕೃತ ಬಡಾವಣೆಯ ನಿವಾಸಿಗಳು ಸರ್ಕಾರದಿಂದ ಎಲ್ಲಾ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ಆದರೆ ಸರ್ಕಾರಕ್ಕೆ ತೆರಿಗೆ ಬರ್ತಿಲ್ಲ. ಹೀಗಾಗಿ ಗ್ರಾಮ ಪಂಚಾಯತಿಗಳಿಗೆ ತೆರಿಗೆ ಸಂಗ್ರಹ ಮಾಡುವ ಅಧಿಕಾರ ಕೊಡುತ್ತಿದ್ದೇವೆ. ಮೊದಲ ಬಾರಿಗೆ ದುಪ್ಪಟ್ಟು ದಂಡ ವಿಧಿಸುತ್ತೇವೆ, ಬಳಿಕ ಸಾಮಾನ್ಯ ದಂಡ ಕಟ್ಟುವ ನಿಯಮ ತರುತ್ತಿದ್ದೇವೆ. ಈಗಾಗಲೇ ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಈ ನಿಮಯವನ್ನ ಅಳವಡಿಸಲಾಗಿದೆ ಎಂದು ಹೇಳಿದರು. ಬಳಿಕ ಸರ್ವಾನುಮತದಿಂದ ವಿಧೇಯಕವನ್ನು ಅಂಗೀಕರಿಸಲಾಯಿತು.

    ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಸಚಿವ ಕೃಷ್ಣಭೈರೇಗೌಡ ಅವರು, ಕರ್ನಾಟಕ ವೃತ್ತಿಗಳ, ಕಸುಬುಗಳ, ಅಜೀವಿಕೆಗಳ ಮತ್ತು ಉದ್ಯೋಗಗಳ ಮೇಲಣ ತೆರಿಗೆ(ತಿದ್ದುಪಡಿ) ವಿಧೇಯಕ 2025 ಮಂಡನೆ ಮಾಡಿದರು. ಯಾವುದೇ ಚರ್ಚೆ ಇಲ್ಲದೇ ವಿಧೇಯಕ ಅಂಗೀಕರಿಸಲಾಯಿತು.

    ಜೊತೆಗೆ ಕೃಷ್ಣಭೈರೇಗೌಡ ಅವರೇ ಮಂಡಿಸಿದ ಕರ್ನಾಟಕ ಸ್ಟಾಂಪು (ತಿದ್ದುಪಡಿ) ವಿಧೇಯಕ 2025, ಕರ್ನಾಟಕ ನೋಂದಣಿ ( ತಿದ್ದುಪಡಿ) ವಿಧೇಯಕ 2025, ಕರ್ನಾಟಕ ಭೂ ಕಂದಾಯ( ತಿದ್ದುಪಡಿ) ವಿಧೇಯಕ 2025, ಕರ್ನಾಟಕ ಗ್ರಾಮ ಹುದ್ದೆಗಳ ರದ್ದಿಯಾತಿ( ತಿದ್ದುಪಡಿ) ವಿಧೇಯಕ 2025, ಕರ್ನಾಟಕ ಭೂ ಕಬಳಿಕೆ ನಿಷೇಧ ( ತಿದ್ದುಪಡಿ) 2025 ಗಳನ್ನು ಅಂಗೀಕರಿಸಲಾಯಿತು.

    ಬಳಿಕ ವಿಧಾನ ಪರಿಷತ್‌ನಲ್ಲಿ ರಾಜ್ಯ ಸರ್ಕಾರ ಮೂರು ನಿರ್ಣಯಗಳನ್ನು ಮಂಡನೆ ಮಾಡಿತು. ಅವುಗಳನ್ನು ನೋಡುವುದಾದ್ರೆ…

    ನಿರ್ಣಯ-1
    ಕೇಂದ್ರ ಸರ್ಕಾರ ತರಲು ಹೊರಟಿರುವ ವಕ್ಫ್ ತಿದ್ದುಪಡಿ ವಿಧೇಯಕ ತಕ್ಷಣ ವಾಪಸ್ ಪಡೆಯಬೇಕು.

    ನಿರ್ಣಯ-2
    ಕರ್ನಾಟಕ ಸರ್ಕಾರ ಜಾರಿ ಮಾಡಿರೋ ಎಸ್‌ಸಿಎಸ್‌ಪಿ-ಟಿಎಸ್‌ಪಿ ಕಾಯ್ದೆಯನ್ನು ಕೇಂದ್ರ ಸರ್ಕಾರವೂ ಜಾರಿ ಮಾಡಬೇಕು.

    ನಿರ್ಣಯ-3
    ಯುಜಿಸಿ ಕರಡು ರೆಗ್ಯುಲೇಷನ್ಸ್ 2025 ಹಿಂಪಡೆಯಬೇಕು ಎಂದು ರಾಜ್ಯ ಸರ್ಕಾರ ನಿರ್ಣಯ ಮಂಡನೆ ಮಾಡಿದೆ. ಶುಕ್ರವಾರ ಬಜೆಟ್‌ ಅಧಿವೇಶನ ಚರ್ಚೆ ಬಳಿಕ ಅಂಗೀಕಾರ ಮಾಡುವ ಸಾಧ್ಯತೆಯಿದೆ.

    ಸರ್ಕಾರದ ನಿರ್ಣಯ ಮಂಡನೆ ವೇಳೆ ಮಧ್ಯಪ್ರವೇಶಿಸಿದ ಬಿಜೆಪಿ ಸದಸ್ಯ ಪಿ.ಎಚ್.ಪೂಜಾರ್ಂ ಮುಸ್ಲಿಮರಿಗೆ ಬಜೆಟ್‌ನಲ್ಲಿ ಶಾದಿ ಭಾಗ್ಯ ಸರ್ಕಾರ ಕೊಟ್ಟಿದೆ. ಮದುವೆ ಮಾಡೋದು ಸರ್ಕಾರದ ಕೆಲಸನಾ? ಮದುವೆ ಮಾಡಿಸೋಕೆ ಹಣ ಕೊಟ್ಟ ಹಾಗೆ ಮುಂದಿನ ದಿನಗಳಲ್ಲಿ ಮುಸ್ಲಿಮರ ಹೆಂಡತಿಯರನ್ನ ಸಾಕೋಕೆ ದುಡ್ಡು ಕೊಡ್ತೀರಾ? ಮಕ್ಕಳ ನಾಮಕರಣ, ಸೀಮಂತ ಕಾರ್ಯಕ್ರಮಕ್ಕೂ ಸರ್ಕಾರ ದುಡ್ಡು ಕೊಡುತ್ತಾ ಹೇಗೆ? ಸರ್ಕಾರಕ್ಕೆ ಮದುವೆ ಮಾಡೋ ಚಿಂತೆ ಯಾಕೆ? ಎಂದು ಸರಣಿ ಪ್ರಶ್ನೆಗಳನ್ನು ಮುಂದಿಟ್ಟರು.

  • ಪಂಚಾಯತ್ ದುಡ್ಡಲ್ಲಿ ಗ್ರಾ.ಪಂ ಸದಸ್ಯರ ಮಹಾ ಕುಂಭಮೇಳ ಟ್ರಿಪ್ ಆರೋಪ – ಪ್ರವಾಸದ ಮಧ್ಯೆ ಉಪಾಧ್ಯಕ್ಷೆ ಪುತ್ರನ ಸಾವು

    ಪಂಚಾಯತ್ ದುಡ್ಡಲ್ಲಿ ಗ್ರಾ.ಪಂ ಸದಸ್ಯರ ಮಹಾ ಕುಂಭಮೇಳ ಟ್ರಿಪ್ ಆರೋಪ – ಪ್ರವಾಸದ ಮಧ್ಯೆ ಉಪಾಧ್ಯಕ್ಷೆ ಪುತ್ರನ ಸಾವು

    ಗದಗ: ಪ್ರಯಾಗ್‌ರಾಜ್ ಮಹಾ ಕುಂಭಮೇಳಕ್ಕೆ (Maha Kumbh Mela) ತೆರಳಿದ್ದ ಜಿಲ್ಲೆಯ ಗ್ರಾಮ ಪಂಚಾಯತ್‌ ಸದಸ್ಯರ ಕುಟುಂಬಗಳ ಪೈಕಿ ಉಪಾಧ್ಯಕ್ಷೆ ಪುತ್ರ ಅನಾರೋಗ್ಯದಿಂದ ಸಾವನ್ನಪ್ಪಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇದರ ಜೊತೆ ಗ್ರಾ.ಪಂ ದುಡ್ಡಲ್ಲಿ ಸದಸ್ಯರು ಕುಂಭಮೇಳಕ್ಕೆ ಹೋಗಿದ್ದಾರೆ ಎಂಬ ಗಂಭೀರ ಆರೋಪ ಈಗ ಕೇಳಿ ಬಂದಿದೆ.

    ರೋಣ ತಾಲೂಕಿನ (Rona taluk) ಮಲ್ಲಾಪೂರ ಗ್ರಾಮ ಪಂಚಾಯತ್ (Mallapur Gram Panchayat) ಉಪಾಧ್ಯಕ್ಷೆ ಕರಿಯಮ್ಮ ಚಲವಾದಿ ಅವರ ಪುತ್ರ 39 ವರ್ಷದ ಹನಮಂತ ಚಲವಾದಿ ಪ್ರವಾಸ ಮುಗಿಸಿ ಬರುವ ವೇಳೆ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ಇವರು ಬಿಳಿ ಕಾಮಾಲೆ ಹಾಗೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರಿಂದ ಮೃತಪಟ್ಟಿದ್ದಾರೆ ಎನ್ನಲಾಗ್ತಿದೆ. ಮೃತದೇಹವನ್ನು ಆಂಬುಲೆನ್ಸ್‌ ಮೂಲಕ ಸೋಮವಾರ ಮಲ್ಲಾಪೂರ ಗ್ರಾಮಕ್ಕೆ ತಂದು ಅಂತ್ಯಕ್ರಿಯೆ ನೆರವೇರಿಸಲಾಗಿದೆ.

    ಗ್ರಾ.ಪಂ ಉಪಾಧ್ಯಕ್ಷೆಯ ಮಗ ಸಾವಿನ ಬೆನ್ನಲ್ಲೇ ಗ್ರಾ.ಪಂ ಸದಸ್ಯರ ಕುಟುಂಬಗಳು ಒಟ್ಟಾಗಿ ಪಂಚಾಯತ್‌ ದುಡ್ಡಲ್ಲೇ ಪ್ರಯಾಗರಾಜ್ ಮಹಾ ಕುಂಭಮೇಳಕ್ಕೆ ತೆರಳಿದ್ದರು ಎಂಬ ಬಿಸಿಬಿಸಿ ಚರ್ಚೆ ಈಗ ಆರಂಭವಾಗಿದೆ. ಕಿಡ್ನಿ ವೈಫಲ್ಯ ಹಾಗೂ ಬಿಳಿ ಕಾಮಾಲೆಯಿಂದ ಬಳಲುತ್ತಿದ್ದ ಹನುಮಂತ ಚಲವಾದಿ ಅವರನ್ನು ಯಾಕೆ ಮಹಾಕುಂಭಮೇಳಕ್ಕೆ ಕರೆದೊಯ್ಯಲಾಯಿತು ಎಂದು ಜನರು ಈಗ ಪ್ರಶ್ನಿಸುತ್ತಿದ್ದಾರೆ.

    ಮಲ್ಲಾಪೂರ ಗ್ರಾಮ ಪಂಚಾಯತ್‌ ವ್ಯಾಪ್ತಿಗೆ ಸೇರುವ ಸಂದಿಗವಾಡ ಗ್ರಾಮದಲ್ಲಿ ಒಟ್ಟು 13 ಜನ ಸದಸ್ಯರಿದ್ದು, ಆ ಪೈಕಿ ಅಧ್ಯಕ್ಷ ಹನಮಂತಗೌಡ ಹುಲ್ಲೂರ, ಉಪಾಧ್ಯಕ್ಷೆ ಪುತ್ರ ಹನುಮಂತ ಚಲವಾದಿ ಹಾಗೂ 11 ಸದಸ್ಯರು ಸೇರಿ ಒಟ್ಟು 24 ಜನರು ಫೆ‌. 16ರಂದು ಖಾಸಗಿ ವಾಹನ ಬಾಡಿಗೆ ಪಡೆದು ಪ್ರಯಾಗ್ ರಾಜ್ ಮಹಾಕುಂಭಮೇಳಕ್ಕೆ ಪ್ರಯಾಣ ಬೆಳೆಸಿದ್ದರು. ಇದನ್ನೂ ಓದಿ: ಮಹಾ ಶಿವರಾತ್ರಿಯಂದು ಉಪವಾಸ ಮಾಡುವುದ್ಯಾಕೆ?

    ಹಣ ದುರ್ಬಳಕೆ ಆರೋಪ: ಗ್ರಾ.ಪಂ ಅಧ್ಯಕ್ಷ ಸೇರಿ 11 ಸದಸ್ಯರು ಗ್ರಾಪಂ ದುಡ್ಡನ್ನು ದುರ್ಬಳಕೆ ಮಾಡಿಕೊಂಡು ಪ್ರಯಾಗ್ ರಾಜ್ ಮಹಾಕುಂಭಮೇಳಕ್ಕೆ ತೆರಳಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಆದರೆ ಗ್ರಾ.ಪಂ ಅಧ್ಯಕ್ಷ ಹನಮಂತಗೌಡ ಹುಲ್ಲೂರ ಅವರು ಗ್ರಾ.ಪಂ ದುಡ್ಡನ್ನು ಬಳಸಿಕೊಂಡಿಲ್ಲ. ಎಲ್ಲ ಸದಸ್ಯರೂ ಕೂಡಿಕೊಂಡು ಬೇರೆಯವರ ಬಳಿ 3 ಲಕ್ಷ ರೂಪಾಯಿ ಸಾಲ ಪಡೆದು ಮಹಾಕುಂಭಮೇಳಕ್ಕೆ ತೆರಳಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.

    ಎಲ್ಲ ಸದಸ್ಯರು ಕೂಡಿಕೊಂಡು ಓರ್ವನ ಬಳಿ ಹಣ ತೆಗೆದುಕೊಂಡು, ಮುಂದೆ ವರ್ಷಾಂತ್ಯದಲ್ಲಿ ಸರಿಮಾಡಿ ಕೊಡುವುದಾಗಿ ಒಟ್ಟಾಗಿ ಮಾತುಕತೆ ಮಾಡಿಕೊಂಡು ಮಹಾಕುಂಭಮೇಳಕ್ಕೆ ತೆರಳಿದ್ದರು ಎಂಬ ಮಾತುಗಳನ್ನು ಜನ ಈಗ ಆಡಿಕೊಳ್ಳುತ್ತಿದ್ದಾರೆ.

    ಪಿಡಿಒ ದೇವರಡ್ಡಿ ಹಂಚಿನಾಳ ಪ್ರತಿಕ್ರಿಯಿಸಿ, ಪ್ರಯಾಗರಾಜ್ ಮಹಾಕುಂಭಮೇಳಕ್ಕೆ ಸದಸ್ಯರು ತೆರಳಿದ್ದ ಬಗ್ಗೆ ತಮಗೆ ಮಾಹಿತಿ ಇಲ್ಲ. ಮುಂದೆ ಪಂಚಾಯತ್ ಹಣ ಬಳಕೆ ಮಾಡಿಕೊಳ್ಳುವ ಬಗ್ಗೆ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.

     

  • ತಿಂಗಳಿಂದ ಕುಡಿಯಲು ಕಲುಷಿತ ನೀರು – ಬನ್ನೇರುಘಟ್ಟ ಗ್ರಾಪಂ ಅಧಿಕಾರಿಗಳ ವಿರುದ್ಧ ಜನಾಕ್ರೋಶ

    ತಿಂಗಳಿಂದ ಕುಡಿಯಲು ಕಲುಷಿತ ನೀರು – ಬನ್ನೇರುಘಟ್ಟ ಗ್ರಾಪಂ ಅಧಿಕಾರಿಗಳ ವಿರುದ್ಧ ಜನಾಕ್ರೋಶ

    ಬನ್ನೇರುಘಟ್ಟ: ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಸಾರ್ವಜನಿಕರಿಗೆ ತಲುಪಿಸುವ ಪ್ರಮುಖ ಜವಾಬ್ದಾರಿ ಸ್ಥಳೀಯ ಸಂಸ್ಥೆಗಳದ್ದು. ಆದ್ರೆ ಇಲ್ಲಿ ಗ್ರಾಮ ಪಂಚಾಯತಿ ಅಧಿಕಾರಿಗಳು ಕಲುಷಿತ ನೀರನ್ನು (Contaminated Water) ಮನೆಗಳಿಗೆ ಸರಬರಾಜು ಮಾಡುತ್ತಿದ್ದು, ಸ್ಥಳೀಯ ನಿವಾಸಿಗಳಿಂದ ಆಕ್ರೋಶ ವ್ಯಕ್ತವಾಗಿದೆ.

    ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಂಪನಾಯಕನಹಳ್ಳಿಯಲ್ಲಿ. ಇಲ್ಲಿನ ನಿವಾಸಿಗಳಿಗೆ ವಾರಕ್ಕೊಮ್ಮೆ ಗ್ರಾಮ ಪಂಚಾಯತಿ ನೀರು ಸರಬರಾಜು ಮಾಡುತ್ತಿದೆ. ಆದ್ರೆ ಕಳೆದ 1 ತಿಂಗಳಿನಿಂದ ಸ್ಯಾನಿಟರಿ ಮತ್ತು ಚರಂಡಿ ಮಿಶ್ರೀತ ನೀರು ಸರಬರಾಜು ಮಾಡುತ್ತಿದ್ದಾರೆ. ಕಲುಷಿತ ನೀರು ಸೇವನೆಯಿಂದ ವಾಂತಿಭೇದಿ, ಕೆಮ್ಮು ಜ್ವರ ನೆಗಡಿ ಜೊತೆ ಅಲರ್ಜಿ ಕೂಡ ಕಾಡುತ್ತಿದೆ ಎಂದು ಗ್ರಾಪಂ ವಿರುದ್ಧ ಕಿರಿ ಕಾಡಿದ್ದಾರೆ. ಇದನ್ನೂ ಓದಿ: ಶೀಘ್ರದಲ್ಲೇ ನೀರಿನ ದರ ಏರಿಕೆ ಶಾಕ್ – ಜಲಮಂಡಳಿಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

    ಸಾರ್ವಜನಿಕ ನಲ್ಲಿಗಳಲ್ಲಿ ಕಲುಷಿತ ನೀರು ಸರಬರಾಜು ಆಗುತ್ತಿರುವ ಬಗ್ಗೆ ಹಲವು ಬಾರಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಗಮನಕ್ಕೆ ತಂದರು ಪ್ರಯೋಜನವಾಗಿಲ್ಲ. ಕಲುಷಿತ ನೀರು ಸೇವಿಸಿ ಮನೆ ಮಂದಿ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಸಂಪ್‌ಗಳನ್ನು ಸ್ವಚ್ಛಗೊಳಿಸಿ ಹಣ ನೀರು ಟ್ಯಾಂಕರ್ ನೀರು ಹೊಡೆಸಿಕೊಳ್ಳುತ್ತಿದ್ದು, ಅದು ಕೂಡ ಕಲುಷಿತ ನೀರು ಸೇರಿ ಗಬ್ಬೆದ್ದು ನಾರುತ್ತಿದೆ. ಚುನಾವಣೆ ಬಂದಾಗ ಮತ ಕೇಳಲು ಬರುವ ರಾಜಕಾರಣಿಗಳು ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಇಷ್ಟೆಲ್ಲಾ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗುತ್ತಿದ್ದರೂ ಪಂಚಾಯತಿ ಅಧಿಕಾರಿಗಳು ಮಾತ್ರ ಇತ್ತ ಗಮನಹರಿಸುತ್ತಿಲ್ಲ ಎಂದು ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕೇರಳಕ್ಕೆ ಅನುದಾನ ಬೇಕಿದ್ರೆ ʻ ಹಿಂದುಳಿದ ರಾಜ್ಯʼ ಎಂದು ಘೋಷಿಸಲಿ: ಜಾರ್ಜ್‌ ಕುರಿಯನ್‌

  • ಗ್ರಾಪಂ ಮಾಜಿ ಅಧ್ಯಕ್ಷನ ಮಗನ ಕೊಲೆ – ಚರಂಡಿಯಲ್ಲಿ ಶವ ಮುಚ್ಚಿಹಾಕಿ ಕೊಲೆಗಾರ ಎಸ್ಕೇಪ್

    ಗ್ರಾಪಂ ಮಾಜಿ ಅಧ್ಯಕ್ಷನ ಮಗನ ಕೊಲೆ – ಚರಂಡಿಯಲ್ಲಿ ಶವ ಮುಚ್ಚಿಹಾಕಿ ಕೊಲೆಗಾರ ಎಸ್ಕೇಪ್

    – ಕೊಲೆಯಾದ ವ್ಯಕ್ತಿಯ ಮುಖ ತಿಂದು ಹಾಕಿರುವ ಪ್ರಾಣಿಗಳು

    ಚಿಕ್ಕಬಳ್ಳಾಪುರ: ಗ್ರಾಮ ಪಂಚಾಯತಿ (Gram Panchayat) ಮಾಜಿ ಅಧ್ಯಕ್ಷನ ಮಗನನ್ನ ಕೊಲೆ ಮಾಡಿ ಚರಂಡಿಯಲ್ಲಿ ಮುಚ್ಚಿ ಹಾಕಿ ಕೊಲೆಗಾರ ಎಸ್ಕೇಪ್ ಆಗಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಮರಸನಹಳ್ಳಿ ಕೆರೆ ಬಳಿ ಇರುವ ಬಡಾವಣೆಯಲ್ಲಿ ನಡೆದಿದೆ.

    ಹಾರೋಬಂಡೆ ಗ್ರಾಮದ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ನಾಗರೆಡ್ಡಿ ಮಗ 30 ವರ್ಷದ ಮಾರುತೇಶ್ ಕೊಲೆಯಾಗಿರುವ ದುರ್ದೈವಿ. ಅಂದಹಾಗೆ ಪಾಳುಬಿದ್ದ ಬಡಾವಣೆಯೊಂದರ ಚರಂಡಿಯಲ್ಲಿ ಮೃತದೇಹ ಪತ್ತೆಯಾಗಿದೆ. ಕೊಲೆಯಾದ ಮಾರುತೇಶ್ ಪ್ಲಂಬರ್ ಹಾಗೂ ಎಲೆಕ್ಟ್ರಿಕ್ ಕೆಲಸ ಮಾಡುತ್ತಿದ್ದ. ಕುಡಿದ ಅಮಲಿನಲ್ಲಿ ಜೊತೆಗಾರನಿಂದಲೇ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.

    ಘಟನಾ ಸ್ಥಳದಲ್ಲಿ ಬೈಕ್ ಹಾಗೂ ಮದ್ಯದ ಬಾಟಲಿಗಳು ಪತ್ತೆಯಾಗಿವೆ. ಮೂರು ದಿನಗಳಿಂದ ನಾಪತ್ತೆಯಾಗಿದ್ದ ಮಾರುತೇಶ್ ಇಂದು ಶವವಾಗಿ ಪತ್ತೆಯಾಗಿದ್ದಾನೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸಿ ಭೇಟಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಸೋನಿಯಾ ಗಾಂಧಿ ಹೇಳಿಕೆಯಿಂದ ರಾಷ್ಟ್ರಪತಿ ಹುದ್ದೆಯ ಘನತೆಗೆ ಘಾಸಿ – ರಾಷ್ಟ್ರಪತಿ ಭವನ ಪ್ರತಿಕ್ರಿಯೆ

    ಇನ್ನೂ ಶಂಕಿತ ಆರೋಪಿಯೊರ್ವ ಗ್ರಾಮದಲ್ಲಿ ಕೊಲೆ ಮಾಡಿರುವ ಬಗ್ಗೆ ಅಸ್ಪಷ್ಟವಾಗಿ ಮಾತನಾಡಿದ್ದ ಎನ್ನಲಾಗಿದ್ದು ಇದರ ಸುಳಿ ಮೇರೆಗೆ ಪರಿಶೀಲನೆ ಮಾಡಿದಾಗ ಮೃತದೇಹ ಇರೋದು ಪತ್ತೆಯಾಗಿದೆ. ಹೀಗಾಗಿ ಪೊಲೀಸರು ಶಂಕಿತ ಆರೋಪಿಯ ಬೆನ್ನುಬಿದ್ದಿದ್ದಾರೆ, ಆತನ ಬಂಧನದ ಬಳಿಕ ಕೊಲೆಗೆ ಆಸಲಿ ಕಾರಣ ತಿಳಿದುಬರಲಿದೆ. ಇದನ್ನೂ ಓದಿ: ದೆಹಲಿ ಚುನಾವಣೆ ಹೊತ್ತಲ್ಲೇ ಎಎಪಿಗೆ ಶಾಕ್‌ – ಟಿಕೆಟ್‌ ಸಿಗದಿದ್ದಕ್ಕೆ ಸಿಟ್ಟಿಗೆದ್ದು ಐವರು ಶಾಸಕರು ರಾಜೀನಾಮೆ

  • ಶಿವಮೊಗ್ಗ | ಅಭಿವೃದ್ಧಿ ಕಾರ್ಯ ಸಹಿಸದೆ ಗ್ರಾ.ಪಂ ಸದಸ್ಯನ ಮೇಲೆ ಹಲ್ಲೆ

    ಶಿವಮೊಗ್ಗ | ಅಭಿವೃದ್ಧಿ ಕಾರ್ಯ ಸಹಿಸದೆ ಗ್ರಾ.ಪಂ ಸದಸ್ಯನ ಮೇಲೆ ಹಲ್ಲೆ

    ಶಿವಮೊಗ್ಗ: ಗ್ರಾಮ ಪಂಚಾಯ್ತಿ (Gram Panchayat) ಸದಸ್ಯನ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ ಘಟನೆ ಹೊಸನಗರ (Hosanagar) ತಾಲೂಕಿನ ನಿಟ್ಟೂರಿನಲ್ಲಿ ನಡೆದಿದೆ.

    ಗ್ರಾಮ ಪಂಚಾಯ್ತಿ ಸದಸ್ಯ ನಾಗೋಡಿ ವಿಶ್ವನಾಥ್ ಎಂಬವರ ಮೇಲೆ ಹಲ್ಲೆ ನಡೆದಿದೆ. ಹಳೆಯ ದ್ವೇಷ ಹಾಗೂ ಅಭಿವೃದ್ಧಿ ಕಾರ್ಯ ಸಹಿಸದೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

    ದೇವರಾಜ್ ಎಂಬಾತ ವಿಶ್ವನಾಥ್ ಅವರ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆಗೊಳಗಾದ ವಿಶ್ವನಾಥ್ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

    ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ನಾಗೋಡಿ ವಿಶ್ವನಾಥ್‌ ಕಾಂಗ್ರೆಸ್‌ ಬೆಂಬಲಿತನಾಗಿದ್ದು, ಹಲ್ಲೆ ನಡೆಸಿದ ದೇವರಾಜ್  ಬಿಜೆಪಿ ಬೆಂಬಲಿತನಾಗಿದ್ದಾನೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದೆ.

  • ಗ್ರಾಮ ಪಂಚಾಯತಿ ಆಸ್ತಿಗಳ ಮ್ಯಾನ್ಯುಯಲ್ ಸಮೀಕ್ಷೆ ನಡೆಯುತ್ತಿದೆ – ಪ್ರಿಯಾಂಕ್ ಖರ್ಗೆ

    ಗ್ರಾಮ ಪಂಚಾಯತಿ ಆಸ್ತಿಗಳ ಮ್ಯಾನ್ಯುಯಲ್ ಸಮೀಕ್ಷೆ ನಡೆಯುತ್ತಿದೆ – ಪ್ರಿಯಾಂಕ್ ಖರ್ಗೆ

    ಬೆಳಗಾವಿ: ರಾಜ್ಯದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿ ಮತ್ತು ಕಟ್ಟಡಗಳ ಮ್ಯಾನ್ಯುಯಲ್ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತಿಳಿಸಿದ್ದಾರೆ.

    ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಎನ್.ರವಿಕುಮಾರ್ ಅವರು, ಗ್ರಾಮ ಪಂಚಾಯತಿಗಳಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿಗಳ ಮ್ಯಾನ್ಯುಯಲ್ ಸರಿಯಾಗಿ ಆಗಿಲ್ಲ. ಸಂಪೂರ್ಣವಾಗಿ ಆಸ್ತಿ ನಮೂದು ಆಗಬೇಕು. ಗ್ರಾಮ ಪಂಚಾಯತಿಗಳಲ್ಲಿ ಸರಿಯಾಗಿ ಆಸ್ತಿ ಪತ್ತೆ ಹಚ್ಚಿ, ತೆರಿಗೆ ಸಂಗ್ರಹ ಮಾಡಬೇಕು. ಇದರಿಂದ ಸರ್ಕಾರದ ಗ್ಯಾರಂಟಿಗೆ ಗ್ರಾಮೀಣಾಭಿವೃದ್ಧಿ ಇಲಾಖೆಯೇ ಹಣ ಕೊಡಬಹುದು. ಅಧಿಕಾರಿಗಳು ಸರಿಯಾಗಿ ಆಸ್ತಿ ಸರ್ವೇ ಮಾಡುತ್ತಿಲ್ಲ.ಬೆಂಗಳೂರಿನಲ್ಲಿ ಸರಿಯಾಗಿ ಸರ್ವೆ ಮಾಡಿಲ್ಲ. ಅಧಿಕಾರಿಗಳು ಎರಡು ಬುಕ್ ಇಟ್ಟುಕೊಂಡು ತೆರಿಗೆ ಸರ್ಕಾರಕ್ಕೆ ನಷ್ಟ ಮಾಡ್ತಿವೆ. ಇದರ ಬಗ್ಗೆ ಕ್ರಮ ತೆಗೆದುಕೊಳ್ಳಿ ಎಂದು ಪ್ರಶ್ನಿಸಿದರು.ಇದನ್ನೂ ಓದಿ: ಬಲಿಷ್ಠ ಸಮುದಾಯ 2ಎ ಮೀಸಲಾತಿ ಕೇಳುತ್ತಿರುವುದು ಸಂವಿಧಾನಕ್ಕೆ ಬಗೆಯುತ್ತಿರುವ ಅಪಚಾರ: ಲೇಖಕ ಕುಂ.ವೀರಭದ್ರಪ್ಪ ಕಿಡಿ

    ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿ ಮತ್ತು ಕಟ್ಟಡಗಳ ಮ್ಯಾನ್ಯುಯಲ್ ಸಮೀಕ್ಷೆ ನಡೆಸಿ ತೆರಿಗೆ ವ್ಯಾಪ್ತಿಗೆ ಒಳಪಡಿಸಿ, ಪಂಚತಂತ್ರ 2.0 ತಂತ್ರಾಂಶದಲ್ಲಿ ಅಳವಡಿಸುವ ಬಗ್ಗೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಇಲ್ಲಿಯವರೆಗೆ ಮ್ಯಾನ್ಯುಯಲ್ ಸಮೀಕ್ಷೆ ಮೂಲಕ 1,41,42,124 ಆಸ್ತಿಗಳನ್ನು ಸಮೀಕ್ಷೆ ಮಾಡಿ ಈ ಎಲ್ಲಾ ಆಸ್ತಿಗಳ ವಿವರಗಳನ್ನು ನಮೂನೆ-9ಎ ರಿಜಿಸ್ಟರ್‌ನಲ್ಲಿ ನಮೂದಿಸಲಾಗಿದೆ ಎಂದರು.

    ಗ್ರಾಮ ಪಂಚಾಯತ್‌ಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಸಂಗ್ರಹ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ನಮ್ಮ ಸರ್ಕಾರ ಬಂದ ಮೇಲೆ 8,61,524 ನಾವು ಅಸ್ತಿಗಳನ್ನ ಮ್ಯಾಪಿಂಗ್ ಮಾಡಿದ್ದೇವೆ. ಇವುಗಳ ಪೈಕಿ 4 ಲಕ್ಷ ಅಸ್ತಿಗಳು ಪಂಚತಂತ್ರದಲ್ಲಿ ನಮೂದು ಆಗಿಲ್ಲ. ಆದಷ್ಟು ಬೇಗ ಎಲ್ಲಾ ಆಸ್ತಿ ನಮೂದು ಮಾಡ್ತೀವಿ. ಇ-ಆಸ್ತಿ ನೋಂದಣಿಗೆ ಮಾಡಲು ಸರ್ವರ್ ಸಮಸ್ಯೆ ಕಾಣುತ್ತಿದೆ. ಎನ್‌ಐಸಿ ಅವರು ಸರ್ವರ್ ನಿರ್ವಹಣೆ ಮಾಡಿದ್ದಾರೆ. ಹೀಗಾಗಿ ಎನ್‌ಐಸಿಗೆ ನಾವೇ ಸರ್ವರ್ ನಿರ್ವಹಣೆ ಮಾಡೋದಾಗಿ ಹೇಳಿದ್ದೇವೆ. ಅವರು ಸಮಯ ಕೇಳಿದ್ದಾರೆ. ಇನ್ನೊಂದು ವರ್ಷದಲ್ಲಿ ಇ-ಸ್ವತ್ತು ಸಂಪೂರ್ಣವಾಗಿ ಜಾರಿ ಮಾಡೋ ಬಗ್ಗೆ ನೀಲಿನಕ್ಷೆ ಸಿದ್ಧಪಡಿಸಿದ್ದೇವೆ ಎಂದರು.ಇದನ್ನೂ ಓದಿ: ದರ್ಶನ್‌ಗೆ ಬೇಲ್: ದೇವರ ಪ್ರಸಾದ ಹಿಡಿದ ಫೋಟೋ ಹಂಚಿಕೊಂಡ ವಿಜಯಲಕ್ಷ್ಮಿ

  • ಕೇರಳ ಮಾದರಿಯಲ್ಲಿ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರ ಗೌರವಧನ ಹೆಚ್ಚಳ ಸಾಧ್ಯವಿಲ್ಲ: ಪ್ರಿಯಾಂಕ್ ಖರ್ಗೆ

    ಕೇರಳ ಮಾದರಿಯಲ್ಲಿ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರ ಗೌರವಧನ ಹೆಚ್ಚಳ ಸಾಧ್ಯವಿಲ್ಲ: ಪ್ರಿಯಾಂಕ್ ಖರ್ಗೆ

    ಬೆಳಗಾವಿ‌‌: ಕೇರಳ (Kerala) ಮಾದರಿಯಲ್ಲಿ ಗ್ರಾಮ ಪಂಚಾಯತಿ (Gram Panchayat) ಅಧ್ಯಕ್ಷರು, ಉಪಾಧ್ಯಕ್ಷರ ಗೌರವಧನ ಹೆಚ್ಚಳ ಮಾಡಲು ಸಾಧ್ಯವಿಲ್ಲ. ಆದರೆ ಗೌರವ ಧನ ಹೆಚ್ಚಳದ ಬಗ್ಗೆ ಸಿಎಂ ಸಿದ್ದರಾಮಯ್ಯ ಬಳಿಕ ಚರ್ಚೆ ಮಾಡೋದಾಗಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತಿಳಿಸಿದ್ದಾರೆ.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯರಾದ ಡಿ.ಎಸ್.ಅರುಣ್ ಹಾಗೂ ಡಾ.ಧನಂಜಯ ಸರ್ಜಿಯವರು, ಗ್ರಾಮ ಪಂಚಾಯತಿ ಸದಸ್ಯರು, ಅಧ್ಯಕ್ಷ, ಉಪಾಧ್ಯಕ್ಷ, ಸಿಬ್ಬಂದಿ, ವಾಟರ್ ಮನ್ ಗಳ ಗೌರವ ಧನ ಹೆಚ್ಚಳ ಮಾಡಬೇಕು. ಗ್ರಾಮ ಪಂಚಾಯತಿ ನೌಕರರ ಸಂಘದ ಬೇಡಿಕೆ ಈಡೇರಿಕೆ ಮಾಡಬೇಕು ಅಂತ ಒತ್ತಾಯಿಸಿದರು.

    ಇದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಉತ್ತರ ನೀಡಿ, ಅನೇಕ ಬೇಡಿಕೆಗಳಿಗಾಗಿ ಗ್ರಾಮ ಪಂಚಾಯತಿ ನೌಕರರ ಸಂಘದವರು ಪ್ರತಿಭಟನೆ ಮಾಡಿದ್ದರು. ಎಲ್ಲಾ ಅಸೋಸಿಯೇಷನ್‌ಗಳ ಜೊತೆ ನಾನು ಸಭೆ ಮಾಡಿದ್ದೇವೆ. ಸಮಸ್ಯೆಗಳ ಪರಿಹಾರಕ್ಕೆ ಇಲಾಖೆ ಕಮೀಷನರ್ ನೇತೃತ್ವದಲ್ಲಿ ಸಮಿತಿ ಮಾಡಲಾಗಿದೆ. ಆರ್ಥಿಕ ವಿಚಾರದ ಬೇಡಿಕೆ ಬಗ್ಗೆ ಅರ್ಥಿಕ ಇಲಾಖೆಗೆ ಕಡತ ಕಳಿಸಲಾಗಿದೆ ಎಂದರು.

    ಗೌರವ ಧನ ಹೆಚ್ಚಳ ಬಗ್ಗೆ ಪ್ರಸ್ತಾಪ ಅಗಿದೆ. ಕೇರಳ ಮಾದರಿಯಲ್ಲಿ ವೇತನ ಜಾಸ್ತಿ ಮಾಡಿ ಎನ್ನುತಿದ್ದಾರೆ‌. ಕೇರಳದಲ್ಲಿ 900 ಪಂಚಾಯತಿಗಳು ಮಾತ್ರ ಇವೆ. ಕರ್ನಾಟಕದಲ್ಲಿ 6 ಸಾವಿರ ಪಂಚಾಯತಿಗಳು ಇವೆ. ಹೀಗಾಗಿ ಕೇರಳ ಮಾದರಿ ವೇತನ ಹೆಚ್ಚಳ ಸಾಧ್ಯವಿಲ್ಲ. ಆದರೂ ಪಂಚಾಯತಿ ಸದಸ್ಯರು, ಅಧ್ಯಕ್ಷರು, ಉಪಾಧ್ಯಕ್ಷರ ವೇತನ ಹೆಚ್ಚಳಕ್ಕೆ ಸಿಎಂಗೆ ಮನವಿ ಸಲ್ಲಿಕೆ ಮಾಡ್ತೀವಿ. ಇದನ್ನ ಹೊರೆತುಪಡಿಸಿ ಬೇರೆ ಬೇರೆ ಬಸ್ ಪಾಸ್, ಪಿಂಚಣಿ, ವಿಮೆ ಸೇರಿ ಹಲವು ಬೇಡಿಕೆ ಇಟ್ಟಿದ್ದಾರೆ. ನಾವು ಬೇಡಿಕೆಗಳ ಪರಿಹಾರಕ್ಕೆ 3 ತಿಂಗಳು ಸಮಯ ಕೇಳಿದ್ದೇವೆ‌. ಈಗ ಒಂದು ತಿಂಗಳು ಅಗಿದೆ. 2 ತಿಂಗಳ ಒಳಗೆ ಯಾವುದು ಸಾಧ್ಯವೋ ಆ ಬೇಡಿಕೆಗಳ ಬಗ್ಗೆ ತೀರ್ಮಾನ ಮಾಡ್ತೀವಿ ಎಂದಿದ್ದಾರೆ.

  • ಗ್ರಾಪಂ ವ್ಯಾಪ್ತಿಯಲ್ಲಿ ಪರಿಶೀಲನೆ ಮಾಡಿ ಅನರ್ಹ ರೇಷನ್ ಕಾರ್ಡ್ ರದ್ದು: ಮುನಿಯಪ್ಪ

    ಗ್ರಾಪಂ ವ್ಯಾಪ್ತಿಯಲ್ಲಿ ಪರಿಶೀಲನೆ ಮಾಡಿ ಅನರ್ಹ ರೇಷನ್ ಕಾರ್ಡ್ ರದ್ದು: ಮುನಿಯಪ್ಪ

    ಬೆಂಗಳೂರು: ಗ್ರಾಮ ಪಂಚಾಯಿತಿ (Gram Panchayat) ವ್ಯಾಪ್ತಿಯಲ್ಲಿ ಪರಿಶೀಲನೆ ಮಾಡಿ ಅನರ್ಹ ರೇಷನ್ ಕಾರ್ಡ್‌ಗಳನ್ನ ರದ್ದು ಮಾಡುವುದಾಗಿ ಸಚಿವ ಕೆ.ಹೆಚ್‌ ಮುನಿಯಪ್ಪ (KH Muniyappa) ಭರವಸೆ ನೀಡಿದ್ದಾರೆ.

    ವಿಧಾನ ಪರಿಷತ್ ಕಲಾಪದಲ್ಲಿಂದು ರೇಷನ್ ಕಾರ್ಡ್ (Ration Card) ರದ್ದು ವಿಷಯ ಪ್ರಸ್ತಾಪ ಆಯ್ತು. ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌ನ ತಿಪ್ಪೇಸ್ವಾಮಿ ಪ್ರಶ್ನೆ ಕೇಳಿದ್ರು. ರೇಷನ್ ಕಾರ್ಡ್ ಹಂಚಿಕೆಯಲ್ಲಿ ಗೊಂದಲ ಆಗಿದೆ. ಅನೇಕ ಜನರ ರೇಷನ್ ಕಾರ್ಡ್ ರದ್ದು ಆಗಿದೆ. ಈ ಗೊಂದಲ ಸರಿ ಮಾಡಿ, ಮಾಹಿತಿ ಪ್ರಕಾರ 25 ಲಕ್ಷ ರೇಷನ್ ಕಾರ್ಡ್ ರದ್ದು ಆಗಿದೆ ಅಂತ ಆರೋಪ ಮಾಡಿದ್ರು.

    ಇದಕ್ಕೆ ಉತ್ತರ ನೀಡಿದ ಸಚಿವ ಮುನಿಯಪ್ಪ, ಆಹಾರ ಭದ್ರತಾ ಕಾಯ್ಡೆ ಯುಪಿಎ ಸರ್ಕಾರ ಜಾರಿ ಮಾಡಿತು. ಕರ್ನಾಟಕದಲ್ಲಿ 2014 ಎಲ್ಲಿ ಜಾರಿ ಆಯ್ತು? BPL, APL ಕಾರ್ಡ್‌ಗಳು ಸೇರಿ ಒಟ್ಟು 1,53,64,648 ಕಾರ್ಡ್ ಗೆ ರೇಷನ್ ಕೊಡ್ತಿದ್ದೇವೆ. ಒಟ್ಟು 5,29,01,752 ಫಲಾನುಭವಿಗಳಿಗೆ ರೇಷನ್ ಕೊಡಲಾಗ್ತಿದೆ. BPL ಕಾರ್ಡ್ ಗಳನ್ನ ರದ್ದು ಮಾಡಿಲ್ಲ. ಆದಾಯ 1.20 ಲಕ್ಷ ಇರೋರಿಗೆ, ತೆರಿಗೆ ಕಟ್ಟೋರಿಗೆ ಮಾತ್ರ ಕಾರ್ಡ್ ರದ್ದು ಆಗಿದೆ. ಉಳಿದ ಯಾರಿಗೂ ಕಾರ್ಡ್ ರದ್ದು ಮಾಡೊಲ್ಲ ಅಂತ ಭರವಸೆ ಕೊಟ್ರು.

    ಮುಂದುವರಿದು… APL ಕಾರ್ಡ್ ಗೆ ರೇಷನ್ ಕೊಡೋದು ಈಗ ನಿಲ್ಲಿಸಿದ್ದೇವೆ‌. 25 ಲಕ್ಷ ಕಾರ್ಡ್ ನಲ್ಲಿ 1 ಲಕ್ಷ ಕಾರ್ಡ್ ಜನರು ಮಾತ್ರ ರೇಷನ್ ತೆಗೆದುಕೊಳ್ಳುತ್ತಿದ್ದರು. ಹೀಗಾಗಿ ಸದ್ಯಕ್ಕೆ APL ಕಾರ್ಡ್ ಗೆ ರೇಷನ್ ಕೊಡ್ತಿಲ್ಲ ಎಂದು ಸ್ಪಷ್ಟನೆ ನೀಡಿದರು.

    APL ಕಾರ್ಡ್ ಅರ್ಹತೆ ಇರೋರು BPL ಕಾರ್ಡ್ ಪಡೆದಿದ್ದಾರೆ. ಈ ರೀತಿ 20% ಕಾರ್ಡ್ ಗಳು ರಾಜ್ಯದಲ್ಲಿವೆ. ಇದನ್ನ ಪರಿಷ್ಕರಣೆ ಮಾಡೋಕೆ ಮುಂದಾಗಿದ್ದೇವೆ. ಆದರೆ ಗೊಂದಲ ಆಯ್ತು, ಹೀಗಾಗಿ ಸದ್ಯಕ್ಕೆ ಪರಿಷ್ಕರಣೆ ನಿಲ್ಲಿಸಿದ್ದೇನೆ. ಗ್ರಾಮ ಪಂಚಾಯತಿ ಮಟ್ಟದಲ್ಲಿ ಇದನ್ನ ಸರಿಯಾಗಿ ಪರಿಶೀಲನೆ ಮಾಡಿ ಪರಿಷ್ಕರಣೆ ಮಾಡ್ತೀವಿ. BPL ಕಾರ್ಡ್ ಒಬ್ಬರಿಗೂ ಸಮಸ್ಯೆ ಇಲ್ಲದಂತೆ ಕ್ರಮ ತೆಗೆದುಕೊಳ್ಳುತ್ತೇನೆ ಎಂದರು.

    ಕರ್ನಾಟಕದಲ್ಲಿ ರೇಷನ್ ಕಾರ್ಡ್ ಜಾಸ್ತಿ ಆಗಿರೋದಕ್ಕೆ ಎಲ್ಲಾ ಸರ್ಕಾರಗಳು ಕಾರಣ. ಅದರಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಂತ ಇಲ್ಲ. ಈಗ ಕಾರ್ಡ್ ಪರಿಷ್ಕರಣೆ ಮಾಡಿದ್ರೆ ಗೊಂದಲ ಆಗಿದೆ. ಇದಕ್ಕೂ ರಾಜಕೀಯ ಪಕ್ಷಗಳು ಕಾರಣ ಆಗುತ್ತದೆ. ಹೀಗಾಗಿ ಕೂಲಂಕಷವಾಗಿ ಪರಿಶೀಲಿಸಿ ಪರಿಷ್ಕರಣೆ ಮಾಡ್ತೀವಿ. ಗ್ರಾಮ ಪಂಚಾಯತಿ ಮಟ್ಟದಲ್ಲಿ ಸರಿಯಾಗಿ ಮಾಹಿತಿ ಪರಿಶೀಲನೆ ಮಾಡಿ BPL ಕಾರ್ಡ್ ಪರಿಷ್ಕರಣೆ ಮಾಡ್ತೀವಿ. ಬಳಿಕ APL ಕಾರ್ಡ್ ಪರಿಷ್ಕರಣೆ ಮಾಡೋ ಕೆಲಸ ಮಾಡ್ತೀವಿ ಅಂತ ತಿಳಿಸಿದರು.

  • ಹಾಸನ| 1.49 ಕೋಟಿ ಹಣ ದುರುಪಯೋಗ ಆರೋಪ – ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಅಮಾನತು

    ಹಾಸನ| 1.49 ಕೋಟಿ ಹಣ ದುರುಪಯೋಗ ಆರೋಪ – ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಅಮಾನತು

    ಹಾಸನ: ವಿವಿಧ ಯೋಜನೆಯಲ್ಲಿ 1.49 ಕೋಟಿ ಹಣ ದುರುಪಯೋಗಪಡಿಸಿಕೊಂಡ ಆರೋಪದಡಿ ಹಾಸನ (Hassan) ಜಿಲ್ಲೆ ಅರಕಲಗೂಡು (Arakalgud) ತಾಲೂಕಿನ ಕೊಣನೂರು (Konanur) ಗ್ರಾಮ ಪಂಚಾಯ್ತಿ ಕಾರ್ಯದರ್ಶಿಯನ್ನು ಅಮಾನತುಗೊಳಿಸಲಾಗಿದೆ.

    ಬಿಎನ್ ಭುವನ್ ಅಮಾನತಾದ ಕಾರ್ಯದರ್ಶಿ. ಕೊಣನೂರು ಗ್ರಾ.ಪಂ. ಜೊತೆಗೆ ಗಂಗೂರು ಗ್ರಾ.ಪಂ. ಪ್ರಭಾರ ಕಾರ್ಯದರ್ಶಿಯಾಗಿದ್ದ (Gram Panchayat Secretary) ಬಿ.ಎನ್.ಭುವನ್ ಹದಿನೈದನೇ ಹಣಕಾಸು, ಗ್ರಾಮ ಪಂಚಾಯಿತಿ ಸ್ವಂತ ಸಂಪನ್ಮೂಲ, ಸಿಬ್ಬಂದಿ ವೇತನ ಖಾತೆ, ಗ್ರಾಮ ವಿಕಾಸ ಯೋಜನೆಯಲ್ಲಿ ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಮುಡಾ ಕೇಸಲ್ಲಿ ಸಚಿವರಿಬ್ಬರ ಪಾತ್ರ ಇದ್ಯಾ? – ಮುಂದಿನ ವಾರವೇ ಸಿಎಂಗೆ ಇಡಿ ಸಮನ್ಸಾ?

    ನಿಯಮಬಾಹಿರವಾಗಿ 1.49 ಕೋಟಿ ಹಣ ದುರುಪಯೋಗ ಮೇಲ್ನೋಟಕ್ಕೆ ಸಾಬೀತಾದ ಹಿನ್ನಲೆ ಇಲಾಖಾ ವಿಚಾರಣೆ ಕಾಯ್ದಿರಿಸಿ ಜಿಲ್ಲಾ ಪಂಚಾಯತ್ ಸಿಇಒ ಬಿಆರ್ ಪೂರ್ಣಿಮಾ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಸರ್ಕಾರದ ಹಣ ದುರುಪಯೋಗ ಮಾಡಿದ ಪ್ರಕರಣಗಳಲ್ಲಿ ನಿಯಮಾನುಸಾರ ಶಿಸ್ತುಕ್ರಮ ಜರುಗಿಸಲು ಕ್ರಮವಹಿಸುವಂತೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ 900 ಕೋಟಿ ಮೌಲ್ಯದ ಕೊಕೇನ್‌ ವಶ – ಇಬ್ಬರು ಅರೆಸ್ಟ್‌