Tag: Gram Panchayat

  • ಗ್ರಾ.ಪಂಗೂ ಕಾಲಿಟ್ಟ ರೆಸಾರ್ಟ್ ಪಾಲಿಟಿಕ್ಸ್ – ಬೆಂಗಳೂರಿನ ರೆಸಾರ್ಟ್‍ನಲ್ಲಿ 40 ದಿನ ಇದ್ರು ಸದಸ್ಯರು

    ಗ್ರಾ.ಪಂಗೂ ಕಾಲಿಟ್ಟ ರೆಸಾರ್ಟ್ ಪಾಲಿಟಿಕ್ಸ್ – ಬೆಂಗಳೂರಿನ ರೆಸಾರ್ಟ್‍ನಲ್ಲಿ 40 ದಿನ ಇದ್ರು ಸದಸ್ಯರು

    ಹಾವೇರಿ: ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿದ್ದ ರೆಸಾರ್ಟ್ ರಾಜಕೀಯ ಇದೀಗ ಗ್ರಾಮ ಪಂಚಾಯಿತಿಗೂ (Gram Panchayat) ಕಾಲಿಟ್ಟಿದ್ದು, ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮ ಪಂಚಾಯತಿ ಸದಸ್ಯರು 40 ದಿನಗಳ ಕಾಲ ಬೆಂಗಳೂರಿನ (Bengaluru) ರೆಸಾರ್ಟ್‍ನಲ್ಲಿ ಇದ್ದರು ಎಂಬ ವಿಷಯ ಇದೀಗ ಬೆಳಕಿಗೆ ಬಂದಿದೆ.

    ಹಾವೇರಿ (Haveri) ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮ ಪಂಚಾಯಿತಿಯು ಒಟ್ಟು 13 ಸದಸ್ಯರನ್ನು ಒಳಗೊಂಡಿದೆ. ಆ ಪಂಚಾಯಿತಿಗೆ ಮಾಲತೇಶ್ ದುರಗಪ್ಪ ನಾಯರ್ ಹಾಲಿ ಅಧ್ಯಕ್ಷರಾಗಿದ್ದಾರೆ. ಆದರೆ ಅಧಿಕಾರ ಸ್ವೀಕರಿಸುವ ವೇಳೆಯಲ್ಲಿ ಮಾಲತೇಶ್ ಅಧ್ಯಕ್ಷರ ಆಡಳಿತಾವಧಿ ವಿಚಾರದಲ್ಲಿ ನಡೆದ ಒಪ್ಪಂದದಂತೆ 15 ತಿಂಗಳು ಅಧಿಕಾರ ನಡೆಸುವುದಾಗಿ ತಿಳಿಸಿದ್ದರು. ನಂತರ ಆ ಸ್ಥಾನವನ್ನು ಬಿಟ್ಟುಕೊಡುವುದಾಗಿಯೂ ತಿಳಿಸಿದ್ದರು. ಆದರೆ ಮಾಲತೇಶ್ 15 ತಿಂಗಳ ನಂತರ ಅಧ್ಯಕ್ಷ ಸ್ಥಾನವನ್ನು ಬಿಟ್ಟುಕೊಡದೆ ಸತಾಯಿಸುತ್ತಿದ್ದ. ಹೀಗಾಗಿ ಗ್ರಾ.ಪಂ ಅಧ್ಯಕ್ಷ ಮಾಲತೇಶ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಸದಸ್ಯರು ನಿರ್ಧರಿಸಿದ್ದಾರೆ.

    ಒಟ್ಟು 13 ಜನ ಗ್ರಾ.ಪಂ ಸದಸ್ಯರಲ್ಲಿ 9 ಸದಸ್ಯರು ಸಂತೋಷ್ ಭಟ್ ಗುರೂಜಿ ಬಣದವರು, ಇನ್ನುಳಿದ ನಾಲ್ವರು ಬಿಜೆಪಿ ಸದಸ್ಯರಾಗಿದ್ದರು. ಗ್ರಾ.ಪಂ ಅಧ್ಯಕ್ಷ ಮಾಲತೇಶ್ ಮಾತಿಗೆ ತಪ್ಪಿದ ಕಾರಣ ಅವಿಶ್ವಾಸ ನಿರ್ಣಯಕ್ಕೆ ನಿರ್ಧಾರ ಮಾಡಲಾಗಿತ್ತು. ಆದರೆ ಮಾಲತೇಶ್ ಗ್ರಾ.ಪಂ ಸದಸ್ಯರನ್ನು ಹೈಜಾಕ್ ಮಾಡಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ಸಂತೋಷ್ ಭಟ್ ಗುರೂಜಿ ಅವರು ಗ್ರಾ.ಪಂ ಸದಸ್ಯರನ್ನು ಬೆಂಗಳೂರಿನ ರೆಸಾರ್ಟ್‍ಗೆ ಕಳಿಸಿಕೊಟ್ಟಿದ್ದರು. ಸುಮಾರು 40 ದಿನಗಳ ಕಾಲ ಅದೇ ರೆಸಾರ್ಟ್‍ನಲ್ಲೇ ಗ್ರಾಪಂ ಸದಸ್ಯರು ತಂಗಿದ್ದರು. ಇದನ್ನೂ ಓದಿ: ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರು ಪೊಲೀಸರ ವಶಕ್ಕೆ

    ಇಂದು ಬೆಂಗಳೂರಿನಿಂದ ವಿಮಾನದಲ್ಲಿ ಬಂದು ಅವಿಶ್ವಾಸ ನಿರ್ಣಯ ಮಂಡನೆ ಪ್ರಕ್ರಿಯೆಯಲ್ಲಿ ಗ್ರಾ.ಪಂ ಸದಸ್ಯರು ಭಾಗಿಯಾದ್ದಾರೆ. ತಾಲೂಕು ಉಪ ವಿಭಾಗಾಧಿಕಾರಿ ಶಿವಾನಂದ ಉಳ್ಳಾಗಡ್ಡಿ ಅವಿಶ್ವಾಸ ನಿರ್ಣಯ ಮಂಡನೆ ಪ್ರಕ್ರಿಯೆ ನಡೆಸಿದ್ದಾರೆ. ಒಟ್ಟಾರೆಯಾಗಿ ಆಪರೇಶನ್ ಕಮಲದ ಮಾದರಿಯಲ್ಲೇ ಆಪರೇಶನ್ ಗ್ರಾಮ ಪಂಚಾಯಿತಿ ಆಗಿದೆ. ಇದನ್ನೂ ಓದಿ: ಮರ್ಯಾದೆ ಉಳಿಸಿಕೊಳ್ಳೋಕೆ ಸಿದ್ದರಾಮಯ್ಯ ಯಾವ ಕ್ಷೇತ್ರ ಕೊಟ್ರೂ ಓಕೆ ಅಂತಾರೆ – ಈಶ್ವರಪ್ಪ

    Live Tv
    [brid partner=56869869 player=32851 video=960834 autoplay=true]

  • ಜನಪ್ರತಿನಿಧಿಗಳೇ ಬದುಕಿದ್ದೀರಾ? ಅಧಿಕಾರಿಗಳೇ ಇತ್ತ ಗಮನಿಸಿ – ಫ್ಲೆಕ್ಸ್‌ಗೆ ಚಪ್ಪಲಿ ಹಾರ ಹಾಕಿ ಆಕ್ರೋಶ

    ಜನಪ್ರತಿನಿಧಿಗಳೇ ಬದುಕಿದ್ದೀರಾ? ಅಧಿಕಾರಿಗಳೇ ಇತ್ತ ಗಮನಿಸಿ – ಫ್ಲೆಕ್ಸ್‌ಗೆ ಚಪ್ಪಲಿ ಹಾರ ಹಾಕಿ ಆಕ್ರೋಶ

    ಚಿಕ್ಕಬಳ್ಳಾಪುರ: ಗ್ರಾಮದಲ್ಲಿ (Village) ಮೂಲಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಬೆಂಗಳೂರು (Bengaluru) ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದ ಯುವಕರು ವಿನೂತನವಾಗಿ ಪ್ರತಿಭಟಿಸಿದ್ದಾರೆ.

    ಹಾಡೋನಹಳ್ಳಿ ಗ್ರಾಮ ಪಂಚಾಯತ್ ಹಾಗೂ ಗ್ರಾಮದ ಅಭಿವೃದ್ಧಿ ಕಡೆಗಣಿಸಿದ ಜನಪ್ರತಿನಿಧಿಗಳ ವಿರುದ್ಧ ವಿನೂತನ ರೀತಿಯಲ್ಲಿ ಪ್ರತಿಭಟಿಸಿದ್ದು, ಗ್ರಾಮದ ಮುಖ್ಯರಸ್ತೆ ಬದಿಯಲ್ಲಿ ‘ಜನಪ್ರತಿನಿಧಿಗಳೇ ಬದುಕಿದ್ದೀರಾ?, ಅಧಿಕಾರಿಗಳೇ ಇತ್ತ ಗಮನಿಸಿ’ ಎಂಬ ಬರಹದ ಬೃಹತ್ ಫ್ಲೆಕ್ಸ್ (Flex)  ಕಟ್ಟಿ, ಅದಕ್ಕೆ ಚಪ್ಪಲಿ ಹಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬೈಕ್ ರೈಡ್‍ಗೆ ಹೋಗಿದ್ದ ಟೆಕ್ಕಿ ಮೇಲೆ 10 ಮಂದಿಯಿಂದ ಗ್ಯಾಂಗ್ ರೇಪ್

    ಗ್ರಾಮದಲ್ಲಿ ಕುಡಿಯುವ ನೀರು (Water), ರಸ್ತೆ (Road), ಚರಂಡಿ ಸೇರಿದಂತೆ ಯಾವುದೇ ಮೂಲಸೌಕರ್ಯ ವ್ಯವಸ್ಥೆ ಇಲ್ಲ. ಈ ಹಿಂದೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಗ್ರಾಮ ಪಂಚಾಯತ್ ಅಧಿಕಾರಿಗಳು ಶಾಮೀಲಾಗಿ ಭೌತಿಕವಾಗಿ ಕಾಮಗಾರಿ ನಡೆಸದೇ ದಾಖಲೆಗಳಲ್ಲಿ ತೋರಿಸಿ ಹಣ ಲಪಟಾಯಿಸಿದ್ದಾರೆ. ಇದರಿಂದ ಸರ್ಕಾರಕ್ಕೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಯಿತಲ್ಲದೇ ಗ್ರಾಮವೂ ಕೂಡ ಅಭಿವೃದ್ಧಿಯಿಂದ ವಂಚಿತವಾಗಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಮದ್ಯದ ಅಮಲಿನಲ್ಲಿ ವಿಷ ಸೇವಿಸಿದ ಪತಿ- ಮನನೊಂದು ಕಂದನನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತ್ನಿ

    ಗ್ರಾಮದಲ್ಲಿ ಮೂಲಸೌಕರ್ಯ ಕಲ್ಪಿಸುವಂತೆ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿದ್ದೇವು. ಪಂಚಾಯತ್ ಎದುರು ಪ್ರತಿಭಟನೆ ನಡೆಸಿದ್ದೇವು ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ಚರಂಡಿ, ರಸ್ತೆ ಅಭಿವೃದ್ಧಿ ಮಾಡಿರುವುದಾಗಿ ಪಂಚಾಯತ್ ವೆಬ್‍ಸೈಟ್ ದಾಖಲೆ ಹೇಳುತ್ತಿದೆ. ಆದರೆ, ಅಂತಹ ಯಾವುದೇ ಕಾಮಗಾರಿ ನಡೆದಿರುವ ಕುರುಹುಗಳೇ ಇಲ್ಲ. ಕಾಮಗಾರಿಯ ನಕಲಿ ದಾಖಲೆ ಸೃಷ್ಟಿಸಿ ಅಕ್ರಮ ಎಸಗಿದ್ದಾರೆ. ಗ್ರಾಮದ ರಸ್ತೆಗಳು ಮಳೆ ಬಂದರೆ ಓಡಾಡಲು ಆಗದಂತಹ ಪರಿಸ್ಥಿತಿಯಲ್ಲಿವೆ. ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೇ ಹಲವು ಸಮಸ್ಯೆ ಎದುರಾಗಿದೆ. ಇದರಿಂದ ಡೆಂಗ್ಯೂ, ಚಿಕನ್ ಗುನ್ಯಾ ಕಾಯಿಲೆಗಳು ಹೆಚ್ಚಾಗುತ್ತಿವೆ. ಕುಡಿಯುವ ನೀರಿನ ಸಮಸ್ಯೆಯಂತೂ ಹೇಳತೀರದಾಗಿದೆ ಎಂದು ಗ್ರಾಮದ ಯುವಕ ಹರ್ಷ ಅಳಲು ತೋಡಿಕೊಂಡಿದ್ದಾರೆ. ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಕೂಡಲೇ ಎಚ್ಚೆತ್ತುಕೊಂಡು ಸಮಸ್ಯೆ ಬಗೆಹರಿಸದಿದ್ದರೆ ರಸ್ತೆ ತಡೆದು ಪ್ರತಿಭಟನೆ ಮಾಡುವುದಾಗಿ ಯುವಕರು ಎಚ್ಚರಿಕೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ದಸರಾ ಹಬ್ಬಕ್ಕೆ ಬೋನಸ್ ಕೊಡಲಿಲ್ಲವೆಂದು ಗ್ರಾಮ ಪಂಚಾಯತ್ ಕಚೇರಿಗೆ ಚಪ್ಪಲಿ ಹಾರ ಹಾಕಿದ ನೌಕರ

    ದಸರಾ ಹಬ್ಬಕ್ಕೆ ಬೋನಸ್ ಕೊಡಲಿಲ್ಲವೆಂದು ಗ್ರಾಮ ಪಂಚಾಯತ್ ಕಚೇರಿಗೆ ಚಪ್ಪಲಿ ಹಾರ ಹಾಕಿದ ನೌಕರ

    ಚಿಕ್ಕಬಳ್ಳಾಪುರ: ದಸರಾ (Dasara) ಹಬ್ಬಕ್ಕೆ, ಬಟ್ಟೆ ಕೊಟ್ಟಿಲ್ಲ, ಬೋನಸ್ (Bonus)  ನೀಡಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ಆವತಿ ಗ್ರಾಮ ಪಂಚಾಯತ್ (Gram Panchayat) ನೌಕರ (Employee) ಪಂಚಾಯತ್ ಕಟ್ಟಡಕ್ಕೆ ಚಪ್ಪಲಿ ಹಾರ ಹಾಕಿರುವ ಘಟನೆ ನಡೆದಿದೆ.

    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ಆವತಿ ಗ್ರಾಮ ಪಂಚಾಯತ್ ಕಟ್ಟಡಕ್ಕೆ ಚಪ್ಪಲಿ ಹಾರ ಹಾಕುವ ಮೂಲಕ ಆಕ್ರೋಶವನ್ನು ಹೊರಹಾಕಿರುವ ಸ್ವಚ್ಛತಾ ಕೆಲಸಗಾರ ಕೃಷ್ಣಪ್ಪ ವಿರುದ್ಧ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರು ಕಾನೂನು ಕ್ರಮ ಜರುಗಿಸುವ ಎಚ್ಚರಿಕೆ ನೀಡಿದ್ದಾರೆ. ಪಂಚಾಯತ್‍ಗೆ ಭೇಟಿ ನೀಡಿದ ದೇವನಹಳ್ಳಿ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಸುನಿಲ್ ಕುಮಾರ್ ಸ್ವಚ್ಛತಾಗಾರರ ಸಭೆ ಕರೆದು ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಮಗಳು ಅನ್ಯ ಜಾತಿ ಯುವಕನ ಜೊತೆ ಪರಾರಿ – ತಂದೆ, ತಾಯಿ, ತಮ್ಮ ಆತ್ಮಹತ್ಯೆ

    ಈ ವೇಳೆ ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಪಿಡಿಒ ಶಿವರಾಜ್ ಆವತಿ ಗ್ರಾಮ ಪಂಚಾಯತ್‍ಗೆ ಬಂದಾಗಿನಿಂದ ಪಂಚಾಯತ್‍ನಲ್ಲಿ ಅಭಿವೃದ್ಧಿ ಕೆಲಸಗಳು ಆಗಿಲ್ಲ. ಚುನಾಯಿತ ಸದಸ್ಯರ ಗಮನಕ್ಕೆ ಬಾರದೆ ಸಭೆಗಳನ್ನು ಕರೆದು ಚುನಾಯಿತ ಸದಸ್ಯರಿಗೆ ಗೊಂದಲ ಸೃಷ್ಟಿಸುವಂತಹ ಕೆಲಸಗಳು ನಡೆಯುತ್ತಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ಗದ್ದೆಯಲ್ಲಿ ಅನುಮಾನಾಸ್ಪದವಾಗಿ ಯುವತಿ ಶವ ಪತ್ತೆ- ಇದು ರೇಪ್ & ಮರ್ಡರ್ ಅಂತ ಕುಟುಂಬ ಆರೋಪ

    Live Tv
    [brid partner=56869869 player=32851 video=960834 autoplay=true]

  • ರಸ್ತೆಗಾಗಿ ದಶಕಗಳಿಂದ ಹೋರಾಟ – ಆಸ್ಪತ್ರೆಗೆ ದಾಖಲಿಸಲು ವದ್ಧೆಯನ್ನು ಜೋಳಿಗೆಯಲ್ಲೇ ಹೊತ್ತೊಯ್ದರು

    ರಸ್ತೆಗಾಗಿ ದಶಕಗಳಿಂದ ಹೋರಾಟ – ಆಸ್ಪತ್ರೆಗೆ ದಾಖಲಿಸಲು ವದ್ಧೆಯನ್ನು ಜೋಳಿಗೆಯಲ್ಲೇ ಹೊತ್ತೊಯ್ದರು

    ಚಿಕ್ಕಮಗಳೂರು: ವೃದ್ಧೆಯನ್ನು (Old Woman) ಆಸ್ಪತ್ರೆಗೆ (Hospital) ಕೊಂಡೊಯ್ಯಲು ದಾರಿ (Road) ಇಲ್ಲದೆ ಜೋಳಿಗೆಯಲ್ಲಿ (Sack) ಕಟ್ಟಿಕೊಂಡು ಆಸ್ಪತ್ರೆಗೆ ಕೊಂಡೊಯ್ದಿರುವ ಘಟನೆ ಜಿಲ್ಲೆಯ ಕಳಸ (Kalasa) ತಾಲೂಕಿನ ಗಂಟೆಮಕ್ಕಿ ಗ್ರಾಮದಲ್ಲಿ ನಡೆದಿದೆ.

    ಗಂಟೆಮಕ್ಕಿ ಗ್ರಾಮದ ವೃದ್ಧೆ ವೆಂಕಮ್ಮನವರಿಗೆ (85) ಕಳೆದೊಂದು ವಾರದಿಂದಲೂ ಆರೋಗ್ಯ ಹದಗೆಟ್ಟಿತ್ತು. ಆಸ್ಪತ್ರೆಗೆ ಕರೆದೊಯ್ಯಲು ದಾರಿ ಇಲ್ಲದೆ ಕುಟುಂಬಸ್ಥರು ಮನೆಯಲ್ಲೇ ಚಿಕಿತ್ಸೆ ನೀಡುತ್ತಿದ್ದರು. ಆರೋಗ್ಯ ತೀವ್ರ ಹದಗೆಟ್ಟಾಗ ಸ್ಥಳೀಯರು ಹಾಗೂ ಸಂಬಂಧಿಕರು ಜೋಳಿಗೆ ಕಟ್ಟಿಕೊಂಡು ಅವರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ವೃದ್ಧೆ ವೆಂಕಮ್ಮ ಕಳೆದ 65-70 ವರ್ಷಗಳಿಂದಲೂ ಗಂಟೆಮಕ್ಕಿ ಗ್ರಾಮದಲ್ಲೇ ವಾಸವಿದ್ದಾರೆ. ಇಲ್ಲಿ ಸುಮಾರು 8-10 ಮನೆಗಳಿದ್ದು, ಯಾರಿಗೂ ಓಡಾಡಲು ಜಾಗವಿಲ್ಲ. ಜಮೀನಿಗೆ ಹೋಗಲು ದಾರಿ ಇಲ್ಲ. ಹೊಲ-ಗದ್ದೆಗಳಿಗೆ ಗೊಬ್ಬರ, ಮನೆಗೆ ರೇಷನ್ ಎಲ್ಲವನ್ನು ತಲೆ ಮೇಲೆ ಹೊತ್ತುಕೊಂಡು ಹೋಗಬೇಕು. ಸ್ಥಳೀಯರು ಹತ್ತಾರು ವರ್ಷಗಳಿಂದ ರಸ್ತೆ ನಿರ್ಮಿಸಿ ಕೊಡುವಂತೆ ಅಧಿಕಾರಿಗಳಿಗೆ ನೂರಾರು ಮನವಿ ನೀಡಿದ್ದಾರೆ. ಆದರೆ ಈವರೆಗೂ ಯಾರೊಬ್ಬರೂ ಕೂಡ ಇವರ ನೋವಿಗೆ ಸ್ಪಂದಿಸಿಲ್ಲ. ಇದನ್ನೂ ಓದಿ: ಶ್ವಾನಕ್ಕೆ ಶ್ವಾನದಿಂದಲೇ ರಕ್ತದಾನ

    ಗ್ರಾಮ ಪಂಚಾಯತ್ (Gram Panchayat) ಅಧಿಕಾರಿಗಳು, ತಹಶೀಲ್ದಾರ್, ಎಸಿ ಹಾಗೂ ಡಿಸಿಗೂ ಮನವಿ ಸಲ್ಲಿಸಿದ್ದಾರೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ. 2021ರಲ್ಲಿ ಖುದ್ದು ವೆಂಕಮ್ಮನವರೇ ಕಂದಾಯ ಸಚಿವ ಆರ್.ಅಶೋಕ್‍ಗೆ ಮನವಿ ಮಾಡಿದ್ದರು. ಚುನಾವಣೆ ಸಂದರ್ಭದಲ್ಲಿ ಎಲ್ಲಾ ರಾಜಕೀಯ ಪಕ್ಷದ ಮುಖಂಡರು ಭೇಟಿ ನೀಡಿ ರಸ್ತೆ ನಿರ್ಮಿಸಿ ಕೊಡುವ ಭರವಸೆ ನೀಡುತ್ತಾರೆ. ಆದರೆ, ಈವರೆಗೂ ಯಾರು ರಸ್ತೆ ನಿರ್ಮಿಸಿ ಕೊಡುವ ಗೋಜಿಗೆ ಹೋಗಿಲ್ಲ. ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ರಸ್ತೆ ನಿರ್ಮಿಸಿ ಕೊಡುವಂತೆ ಮನವಿ ಮಾಡಿಕೊಂಡರೆ ಅಧಿಕಾರಿಗಳು ಅಕ್ಕಪಕ್ಕದ ಜಮೀನು, ಮಾಲೀಕರ ಬಳಿ ಜಾಗ ಬಿಡಿಸಿಕೊಟ್ಟರೆ ರಸ್ತೆ ನಿರ್ಮಿಸಿ ಕೊಡುತ್ತೇವೆ ಎಂದು ಹೇಳುತ್ತಾರಂತೆ. ಆದರೆ, ಅಕ್ಕಪಕ್ಕದ ಜಮೀನುಗಳ ಮಾಲೀಕರು ರಸ್ತೆ ನಿರ್ಮಿಸಲು ಜಾಗ ಬಿಟ್ಟುಕೊಡಲು ಮುಂದಾಗುತ್ತಿಲ್ಲ. ಹಾಗಾಗಿ, ಗಂಟೆಮಕ್ಕಿ ಗ್ರಾಮದ ಎಂಟತ್ತು ಕುಟುಂಬಗಳು ಕಳೆದ 65-70 ವರ್ಷಗಳಿಂದಲೂ ಇದೇ ರೀತಿಯಾಗಿ ಬದುಕುತ್ತಿದ್ದಾರೆ. ಇದನ್ನೂ ಓದಿ: ಮಗಳ ನಿಶ್ಚಿತಾರ್ಥದ ಊಟಕ್ಕೆ ಮನೆಯಲ್ಲಿ ಸಾಕಿದ್ದ ಹಸುವೇ ಬಲಿ

    Live Tv
    [brid partner=56869869 player=32851 video=960834 autoplay=true]

  • ಗ್ರಾಮ ಪಂಚಾಯ್ತಿ ಕಚೇರಿಯಲ್ಲೇ ಪಿಡಿಒಗೆ ಕಿಸ್ ಕೊಟ್ಟ ಸದಸ್ಯ!

    ಗ್ರಾಮ ಪಂಚಾಯ್ತಿ ಕಚೇರಿಯಲ್ಲೇ ಪಿಡಿಒಗೆ ಕಿಸ್ ಕೊಟ್ಟ ಸದಸ್ಯ!

    ತುಮಕೂರು: ಇಲ್ಲಿನ ಚಿಕ್ಕನಾಯಕನಹಳ್ಳಿ ತಾಲೂಕಿನ ಜೆಸಿ ಪುರ ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಸದಸ್ಯನೊಬ್ಬ ಪಿಡಿಒಗೆ ಮುತ್ತು ಕೊಟ್ಟಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಸಚಿವ ಮಾಧುಸ್ವಾಮಿ ಅವರ ತವರು ಕ್ಷೇತ್ರದಲ್ಲಿ ಘಟನೆ ನಡೆದಿದೆ. ಗ್ರಾಮ ಪಂಚಾಯಿತಿ ಸದಸ್ಯ ಪ್ರಸನ್ನ, ಪಿಡಿಒ ಕೋಕಿಲಾ ಅವರಿಗೆ ಕಚೇರಿಯಲ್ಲೇ ಪಿಡಿಒ ಕೈ ಹಿಡಿದು ಚುಂಬಿಸಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: 48 ವರ್ಷಗಳ ಹಿಂದೆ ಹೀಗಿತ್ತು ನನ್ನ ರೆಸ್ಯೂಮ್ – ಉದ್ಯೋಗಾಕಾಂಕ್ಷಿಗಳಿಗೆ ಆತ್ಮವಿಶ್ವಾಸ ತುಂಬಿದ ಬಿಲ್‌ಗೇಟ್ಸ್

    ಮತ್ತೊಂದು ದೃಶ್ಯದಲ್ಲಿ ಪಿಡಿಒ ಅವರ ಕೈ ಹಿಡಿದುಕೊಂಡು ಬಲವಂತವಾಗಿ ಎಳೆದಾಡಿ ಮುತ್ತುಕೊಟ್ಟಿದ್ದಾನೆ. ಕೆಲ ದಿನಗಳ ಹಿಂದೆ ಘಟನೆ ನಡೆದಿದ್ದು ತಳವಾಗಿ ಬೆಳಕಿಗೆ ಬಂದಿದೆ. ಸದ್ಯ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಿಂದಲೂ ಆಕ್ಷೇಪ ವ್ಯಕ್ತವಾಗುತ್ತಿದೆ.

    Live Tv

  • ಗ್ರಾಮ ಪಂಚಾಯತ್ ಗದ್ದುಗೆಗಾಗಿ ಗುದ್ದಾಟ – ಸಿನಿಮೀಯ ರೀತಿಯಲ್ಲಿ ಗ್ರಾ.ಪಂ ಮಾಜಿ ಅಧ್ಯಕ್ಷನ ಕಿಡ್ನಾಪ್

    ಗ್ರಾಮ ಪಂಚಾಯತ್ ಗದ್ದುಗೆಗಾಗಿ ಗುದ್ದಾಟ – ಸಿನಿಮೀಯ ರೀತಿಯಲ್ಲಿ ಗ್ರಾ.ಪಂ ಮಾಜಿ ಅಧ್ಯಕ್ಷನ ಕಿಡ್ನಾಪ್

    ರಾಯಚೂರು: ಸಿನಿಮೀಯ ರೀತಿಯಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರೊಬ್ಬರನ್ನು ಕಿಡ್ನಾಪ್ ಮಾಡಿರುವ ಪ್ರಸಂಗ ಜಿಲ್ಲೆಯಲ್ಲಿ ನಡೆದಿದೆ.

    ಜಿಲ್ಲೆಯ ಲಿಂಗಸುಗೂರು ತಾಲೂಕಿನ ರೋಡಲಬಂಡಾ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಅಮರೇಶ್ ಮೇಟಿ ಅಪಹರಣಕ್ಕೊಳಗಾದ ವ್ಯಕ್ತಿ. ಬಾಗಲಕೋಟೆ ಜಿಲ್ಲೆಯ ಬೀಳಗಿಯಿಂದ ಜೂನ್ 21 ರಂದು ಅಪಹರಣ ಮಾಡಲಾಗಿದೆ. ಕಿಡ್ನಾಪ್ ದೃಶ್ಯಾವಳಿಗಳು ಅಮರೇಶ್ ಮೇಟಿ ತಂಗಿದ್ದ ಲಾಡ್ಜ್‌ನ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. 15 ತಿಂಗಳ ಕಾಲ ಅಧ್ಯಕ್ಷನಾಗಿ ಇತ್ತೀಚೆಗಷ್ಟೇ ಒತ್ತಾಯಪೂರ್ವಕವಾಗಿ ರಾಜೀನಾಮೆ ನೀಡಿದ್ದ ಅಮರೇಶ್ ಮೇಟಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಹೀಗಾಗಿ ಮುಂದಿನ ಅವಧಿಗೆ ಒಪ್ಪಂದದಂತೆ ಅಧ್ಯಕ್ಷ ಸ್ಥಾನ ಬಿಟ್ಟುಕೊಡುವಲ್ಲಿ ರಾಜಕೀಯ ಮಾಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷದಕಡೆಯವರಿಂದ ಅಪಹರಣವಾಗಿದೆ ಎಂದು ಮೇಟಿ ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ದೇಶದಲ್ಲೇ ಫಸ್ಟ್‌ ಟಾಟಾ ನೆಕ್ಸನ್‌ ಇವಿ ಕಾರಿಗೆ ಬೆಂಕಿ – ಕೇಂದ್ರದ ಮೂರು ಸಂಸ್ಥೆಗಳಿಂದ ತನಿಖೆ

    ರಾಯಚೂರು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಸನಗೌಡ ಕಂಬಳಿ ಹಾಗೂ ಗ್ರಾ.ಪಂ ಸದಸ್ಯ ಲಕ್ಕಪ್ಪ ಮೇಲೆ ಆರೋಪ ಹೊರಿಸಿ ಇತರ 10 ಜನರ ಮೇಲೆ ಬೀಳಗಿ ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ಪ್ರಕರಣ ದಾಖಲಿಸಲಾಗಿದೆ. ಮರಳು ಮಾಫಿಯಾ ಜನ ಹಾಗೂ ಬೀಳಗಿ ಕಾಂಗ್ರೆಸ್‍ನವರಿಂದ ಅಪಹರಣ ಮಾಡಿಸಲಾಗಿದೆ ಎಂಬ ಆರೋಪವಿದೆ. ಇತ್ತ ಲಿಂಗಸುಗೂರಿನಲ್ಲಿ ಅಮರೇಶ್ ತಾಯಿ ಮೇಲೆಯೂ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದ್ದು, ಅಮರೇಶ್ ತಾಯಿ ಲಿಂಗಸುಗೂರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ನದಿಯಲ್ಲಿ ಪತ್ನಿಗೆ ಕಿಸ್ ಕೊಟ್ಟ ಪತಿಗೆ ಥಳಿಸಿದ್ದ 12 ಮಂದಿ ವಿರುದ್ಧ FIR

    Live Tv

  • ಸರ್ಕಾರದ ಹಣ ದುರ್ಬಳಕೆ ಆರೋಪ- ಗ್ರಾಪಂ ಅಧ್ಯಕ್ಷೆ ಪತಿ ಖಾತೆಗೆ ಲಕ್ಷಾಂತರ ರೂ. ಹಣ ಸಂದಾಯ

    ಸರ್ಕಾರದ ಹಣ ದುರ್ಬಳಕೆ ಆರೋಪ- ಗ್ರಾಪಂ ಅಧ್ಯಕ್ಷೆ ಪತಿ ಖಾತೆಗೆ ಲಕ್ಷಾಂತರ ರೂ. ಹಣ ಸಂದಾಯ

    ಚಿಕ್ಕಬಳ್ಳಾಪುರ: ಸರ್ಕಾರ ವಿವಿಧ ಯೋಜನೆಗಳ ಲಕ್ಷಾಂತರ ರೂ. ಹಣ ಗ್ರಾಪಂ ಅಧ್ಯಕ್ಷೆಯ ಪತಿ ಖಾತೆಗೆ ಸಂದಾಯವಾಗುತ್ತಿದೆ ಎಂದು ಆರೋಪಿಸಿ ಗ್ರಾಪಂಗೆ ಬೀಗ ಹಾಕಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ಗೊರ್ತಪಲ್ಲಿ ಗ್ರಾಮ ಪಂಚಾಯತಿ ಕಚೇರಿ ಎದುರು ನಡೆದಿದೆ.

    ಗ್ರಾಮಗಳ ಅಭಿವೃದ್ಧಿ ಕಾರ್ಯಗಳಿಗೆ ಎಂದು ಸರ್ಕಾರ ಗ್ರಾಪಂಗಳಿಗೆ ಕೋಟಿ ಕೋಟಿ ಹಣ ಕೊಟ್ಟರೆ, ಗ್ರಾಪಂ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಸೇರಿ ಕಾಮಗಾರಿಗಳನ್ನೇ ಮಾಡದೆ ಲಕ್ಷಾಂತರ ರೂ. ಹಣವನ್ನು ಲಪಟಾಯಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದು, ಇದಕ್ಕೆ ಪೂರಕ ಎನ್ನುವಂತೆ ಗ್ರಾಪಂ ಅಧ್ಯಕ್ಷೆಯ ಪತಿಯ ಖಾತೆಗೆ ಲಕ್ಷಾಂತರ ರೂ. ಹಣ ಸಂದಾಯವಾಗಿರೋ ದಾಖಲೆ ಸಿಕ್ಕಿದ್ದು ಅನುಮಾನ ಮೂಡಿಸಿದೆ.

    BRIBE

    ಬರದನಾಡು ಗಡಿ ನಾಡು ಅಂತ್ಯಂತ ಹಿಂದುಳಿದ ತಾಲೂಕು ಎನ್ನುವ ಹಣೆಪಟ್ಟಿ ಕಟ್ಟಿಕೊಂಡಿರುವ ಬಾಗೇಪಲ್ಲಿ ತಾಲೂಕಿನ ಈ ಗೊರ್ತಪಲ್ಲಿ ಗ್ರಾಮ ಪಂಚಾಯತಿಯಲ್ಲಿ 15ನೇ ಹಣಕಾಸು ಯೋಜನೆಯಲ್ಲಿ 65 ಲಕ್ಷ ರೂ. ಹಣವನ್ನು ಲೂಟಿ ಮಾಡಲಾಗಿದೆ ಎಂದು ಆರೋಪ ಕೇಳಿ ಬರುತ್ತಿದೆ. ಇದನ್ನೂ ಓದಿ: ಅಸ್ಸಾಂನಲ್ಲಿರುವ ಶಿವಸೇನೆ ರೆಬಲ್ ಶಾಸಕರನ್ನು ಆತಿಥ್ಯಕ್ಕೆ ಕರೆದ ಮಮತಾ ಬ್ಯಾನರ್ಜಿ

    ಗ್ರಾಪಂ ಪಿಡಿಓ ವೆಂಕಟರಮಣಪ್ಪ ಹಾಗೂ ಗ್ರಾಪಂ ಅಧ್ಯಕ್ಷೆ ನಿರ್ಮಲಬಾಯಿ ಪತಿ ಶ್ರೀನಿವಾಸ್ ನಾಯಕ್ ಸೇರಿ ಲಕ್ಷಾಂತರ ರೂ. ಹಣ ದೋಚಿದ್ದಾರೆ. ಹೀಗಾಗಿ ಕೆಲ ಗ್ರಾಪಂ ಸದಸ್ಯರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿ ತನಿಖೆಗೆ ಆಗ್ರಹಿಸಿದರು.

    ಗ್ರಾಮಸ್ಥರ ಆರೋಪಕ್ಕೆ ಪೂರಕವಾಗಿ ಗ್ರಾಪಂ ಅಧ್ಯಕ್ಷೆಯ ಪತಿ ಶ್ರೀನಿವಾಸ್ ನಾಯಕ್ ಏಜೆನ್ಸಿ ಎಂಬ ಖಾತೆಗೆ 20 ಲಕ್ಷಕ್ಕೂ ಅಧಿಕ ಹಣ, ಅಂಬಿಕಾ ಎಲೆಕ್ಟ್ರಿಕಲ್ಸ್ ಅಂಡ್ ಹಾರ್ಡ್‌ವೇರ್ ಎಜೆನ್ಸಿಯ ಖಾತೆಗೂ ಲಕ್ಷಾಂತರ ರೂ. ಹಣ ಸಂದಾಯವಾಗಿದೆ. ವಿಶೇಷ ಎಂದರೆ ಒಂದೇ ದಿನ 20ಕ್ಕೂ ಹೆಚ್ಚು ಬಾರಿ ಈ ಖಾತೆಗಳಿಗೆ ಲಕ್ಷಾಂತರ ರೂ. ಹಣ ಸಂದಾಯವಾಗಿದೆ. ಇದನ್ನೂ ಓದಿ: ಉತ್ತರ ಕರ್ನಾಟಕ ರಾಜ್ಯ ನಿರ್ಮಾಣ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ಬೊಮ್ಮಾಯಿ

    65 ಲಕ್ಷದಲ್ಲಿ ಬಹುತೇಕ ಹಣ ಶ್ರೀನಿವಾಸ್ ನಾಯಕ್ ಏಜೆನ್ಸಿ ಹಾಗೂ ಅಂಬಿಕಾ ಎಲೆಕ್ಟ್ರಿಕಲ್ಸ್ ಅಂಡ್ ಹಾಡ್ರ್ವೇರ್ ಖಾತೆಗಳಿಗೆ ಸಂದಾಯವಾಗಿದೆ. ಇನ್ನೂ ಗ್ರಾಮಸ್ಥರ ಪ್ರತಿಭಟನೆ ಮಾಹಿತಿ ತಿಳಿದು ಪಂಚಾಯತಿಗೆ ಭೇಟಿ ನೀಡಿದ ಜಿಲ್ಲಾ ಪಂಚಾಯತಿ ಯೋಜನಾ ಅಧಿಕಾರಿ ಧನುರೇಖಾ ತನಿಖೆ ಕೈಗೊಂಡಿದ್ದಾರೆ. ತನಿಖೆಯಲ್ಲಿ ಭ್ರಷ್ಟ ಅಧಿಕಾರಿಗಳ ಮುಖವಾಡ ಕಳಚಿ ಬೀಳುತ್ತಾ ಕಾದು ನೋಡಬೇಕಿದೆ.

    Live Tv

  • ನಾನು ಇಬ್ಬರನ್ನೂ ಬಿಡಲ್ಲ, I Love You – 2 ಅಂತ ಗೆಳತಿಯರನ್ನ ಒಟ್ಟಿಗೇ ಮದ್ವೆಯಾದ ಭೂಪ

    ನಾನು ಇಬ್ಬರನ್ನೂ ಬಿಡಲ್ಲ, I Love You – 2 ಅಂತ ಗೆಳತಿಯರನ್ನ ಒಟ್ಟಿಗೇ ಮದ್ವೆಯಾದ ಭೂಪ

    ರಾಂಚಿ: ನಾನು ಇಬ್ಬರನ್ನೂ ಪ್ರೀತಿಸುತ್ತೇನೆ ಎಂದು ಏಕಕಾಲದಲ್ಲಿ ಇಬ್ಬರು ಗೆಳತಿಯರನ್ನು ವಿವಾಹವಾಗಿರುವ ಘಟನೆ ಜಾರ್ಖಂಡ್‌ನ ಲೋಹರ್ದಗಾ ಎಂಬ ಹಳ್ಳಿಯಲ್ಲಿ ನಡೆದಿದೆ.

    ಕುಸುಮ್ ಲಾಕ್ರಾ ಮತ್ತು ಸ್ವಾತಿ ಕುಮಾರಿ ಇಬ್ಬರೂ ಮಹಿಳೆಯರು ವರ ಸಂದೀಪ್ ಓರಾನ್ ನನ್ನು ಪ್ರೀತಿಸುತ್ತಿದ್ದರು. ಇಂದು ಪರಸ್ಪರ ಒಪ್ಪಿ ಮದುವೆಯಾಗಿದ್ದಾರೆ. ಒಟ್ಟಿಗೆ ಮದುವೆಯಾಗಲು ಕಾನೂನು ಸಮಸ್ಯೆ ಇರಬಹುದು. ಆದರೆ ನಾನು ಇಬ್ಬರನ್ನೂ ಪ್ರೀತಿಸುತ್ತೇನೆ. ಇಬ್ಬರನ್ನೂ ಬಿಡಲು ಸಾಧ್ಯವಿಲ್ಲ ಎಂದು ನವ ವಿವಾಹಿತ ಸಂದೀಪ್ ಹೇಳಿದ್ದಾರೆ. ಇದನ್ನೂ ಓದಿ: ಹೊಸತನದ ಪ್ರಯೋಗದೊಂದಿಗೆ ಹರಿಕಥೆ ಅಲ್ಲ ಗಿರಿಕಥೆ ಎಂಟ್ರಿಗೆ ತಯಾರಿ..!

    ಏನಿದು ಟು-ಇನ್-ಒನ್ ಲವ್‌ಸ್ಟೋರಿ?
    ಸಂದೀಪ್ ಹಾಗೂ ಕುಸುಮ್ ಲಾಕ್ರಾ ಕಳೆದ ಮೂರು ವರ್ಷಗಳಿಂದಲೂ ಪರಸ್ಪರ ಪ್ರೀತಿಸುತ್ತಾ ಲಿವ್‌ಇನ್ ರಿಲೇಶನ್‌ಶಿಪ್‌ನಲ್ಲಿದ್ದರು. ಅವರಿಬ್ಬರಿಗೂ ಒಂದು ಗಂಡು ಮಗು ಸಹ ಇದೆ. ಈ ನಡುವೆ ಸಂದೀಪ್ ಪಶ್ಚಿಮ ಬಂಗಾಳದ ಇಟ್ಟಿಗೆ ಗೂಡು ಕೆಲಸಕ್ಕೆ ಹೋದಾಗ ಅಲ್ಲಿಯೇ ಕೆಲಸಕ್ಕೆ ಬಂದಿದ್ದ ಸ್ವಾತಿ ಕುಮಾರಿಯನ್ನು ಭೇಟಿಯಾದರು. ಮನೆಗೆ ಹಿಂದಿರುಗಿದ ನಂತರವೂ ಇಬ್ಬರೂ ಭೇಟಿಯಾಗುವುದನ್ನು ಮುಂದುವರಿಸಿದರು. ಇದನ್ನೂ ಓದಿ: 28 ಸಾವಿರ ಕೋಟಿ ರೂ. ವೆಚ್ಚದ ಯೋಜನೆಗೆ ಮೋದಿ ಶಂಕು – ವಿಕಾಸವಾದದ ಮಂತ್ರ ಪಠಿಸಿದ ನಮೋ

    ಕೊನೆಗೆ ಇವರಿಬ್ಬರ ಸಂಬಂಧ ತಿಳಿದ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ವಿರೋಧಿಸಿದರು. ಪ್ರತಿದಿನ ಒಂದಿಲ್ಲೊಂದು ಜಗಳವಾಗುತ್ತಲೇ ಇತ್ತು. ಈ ಸಂಬಂಧ ನ್ಯಾಯ ತೀರ್ಮಾನಿಸಲು ಗ್ರಾಮಸ್ಥರು ಗ್ರಾಮಪಂಚಾಯ್ತಿಗೆ ಸೇರಿಸಿದ್ದರು. ಈ ವೇಳೆ ಸಂದೀಪ್ ತಾನು ಇಬ್ಬರನ್ನೂ ಮದುವೆಯಾಗುವುದಾಗಿ ಹೇಳಿದ್ದಾನೆ. ಮೂವರು ಪರಸ್ಪರ ಒಪ್ಪಿಕೊಂಡು ಮದುವೆಯಾಗಿದ್ದಾರೆ.

    Live Tv

  • ಗ್ರಾಮ ಪಂಚಾಯತ್ ಅಧ್ಯಕ್ಷೆ ಸ್ಥಾನ ಸಿಗದಿದ್ದಕ್ಕೆ ವಿಷ ಕುಡಿದ ಮಹಿಳಾ ಸದಸ್ಯೆ

    ಗ್ರಾಮ ಪಂಚಾಯತ್ ಅಧ್ಯಕ್ಷೆ ಸ್ಥಾನ ಸಿಗದಿದ್ದಕ್ಕೆ ವಿಷ ಕುಡಿದ ಮಹಿಳಾ ಸದಸ್ಯೆ

    ಶಿವಮೊಗ್ಗ: ಗ್ರಾಮ ಪಂಚಾಯತ್ ಅಧ್ಯಕ್ಷೆ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಗ್ರಾಮ ಪಂಚಾಯತ್ ಮಹಿಳಾ ಸದಸ್ಯೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ದೊಣಬಘಟ್ಟದಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಸದಸ್ಯೆಯನ್ನು ಕೌಸರ್ ಭಾನು(50) ಎಂದು ಗುರುತಿಸಲಾಗಿದೆ.

    ದೊಣಬಘಟ್ಟ ಗ್ರಾಮ ಪಂಚಾಯತ್ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಪೊಲೀಸ್ ಬಂದೋಬಸ್ತ್ ನಲ್ಲಿ ನಡೆದಿದ್ದು ಡ್ರಾಮಾ, ಹೈಡ್ರಾಮಾಕ್ಕೆ ಎಡೆಮಾಡಿಕೊಟ್ಟಿದೆ. ಅಧ್ಯಕ್ಷರಾಗಿ ಖಲೀಲ್, ಉಪಾಧ್ಯಕ್ಷರಾಗಿ ಮಾಲಮ್ಮ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೌಸರ್ ಭಾನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನೂ ಓದಿ: ನೋ ಪಾರ್ಕಿಂಗ್‌ನಲ್ಲಿ ವಾಹನ ನಿಲ್ಲಿಸಿದ ಫೋಟೋಗೆ 500 ರೂ. ಬಹುಮಾನ: ನಿತಿನ್ ಗಡ್ಕರಿ

    ಆತ್ಮಹತ್ಯೆಗೆ ಯತ್ನಿಸಿದ್ದೇಕೆ?
    2021 ಫೆಬ್ರವರಿಯಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆದಿತ್ತು. ಕೌಸರ್ ಭಾನು ಸಹ ದೊಣಬಘಟ್ಟದ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದರು. ಈ ವೇಳೆ ಖಲೀಲ್ ತಾನು 14 ತಿಂಗಳು ಅಧ್ಯಕ್ಷನಾಗುತ್ತೇನೆ, ನೀವು 14 ತಿಂಗಳ ಬಳಿಕ ಅಧ್ಯಕ್ಷರಾಗಿ ಎಂದು ಕೌಸರ್ ಭಾನು ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದಾಗಿ ತಿಳಿದು ಬಂದಿದೆ. ಇದನ್ನೂ ಓದಿ: ಆ್ಯಸಿಡ್ ಸಂತ್ರಸ್ತೆಯ ಸರ್ಜರಿಗೆ ನೆರವಾದ ಪೊಲೀಸರು

    ಖಲೀಲ್ ಮಾತಿಗೆ ತಕ್ಕಂತೆ 14 ತಿಂಗಳು ಅವಧಿ ಮುಗಿಸಿ ರಾಜೀನಾಮೆ ನೀಡಿದ್ದಾರೆ. ಒಡಂಬಡಿಕೆಯ ಪ್ರಕಾರ ಕೌಸರ್ ಭಾನು ಅಧ್ಯಕ್ಷರಾಗಬೇಕಿತ್ತು ಎಂಬುದು ಅವರ ಬೆಂಬಲಿಗರ ವಾದ. ಆದರೆ ಇಂದು ಗ್ರಾಪಂ ಅಧ್ಯಕ್ಷರಾಗಿ ಖಲೀಮ್ ಆಯ್ಕೆಯಾಗಿದ್ದಾರೆ.

    ಖಲೀಲ್ ಮತ್ತು ಎಲ್ಲಮ್ಮ ನನ್ನ ಬಳಿ ಹಣ ಪಡೆದು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಬೇಕಿದ್ದ ನನಗೆ ಅಧ್ಯಕ್ಷ ಸ್ಥಾನ ತಪ್ಪಿಸಿದ್ದಾರೆ ಎಂದು ಕೌಸರ್ ಭಾನು ಆರೋಪಿಸಿದ್ದಾರೆ. ವಿಷ ಸೇವಿಸಿದ್ದ ಕೌಸರ್ ಭಾನು ಅವರನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

    Live Tv

  • ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್

    ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್

    ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಕುರಿತಂತೆ ಉಡುಪಿ ಪೊಲೀಸರು ನಡೆಸುತ್ತಿರುವ ತನಿಖೆ ಇಂದು(ಬುಧವಾರ) 5ನೇ ದಿನಕ್ಕೆ ಕಾಲಿಟ್ಟಿದ್ದು, ಹೊಸದೊಂದು ಟ್ವಿಸ್ಟ್ ಸಿಕ್ಕಿದೆ.

    ಬೆಳಗಾವಿ ತಾಲೂಕಿನ ಬಡಸ ಗ್ರಾಮದ ಮೃತ ಗುತ್ತಿಗೆದಾರ ಸಂತೋಷ್ ಪಾಟೀಲ್ ಮನೆಯನ್ನು ಹಿಂಡಲಗಾ ಗ್ರಾಮ ಪಂಚಾಯತಿ ಅಧ್ಯಕ್ಷ ನಾಗೇಶ್ ಮನ್ನೋಳ್ಕರ್ ಹಾಗೂ ಎನ್.ಎಸ್.ಪಾಟೀಲ್ ಸೇರಿ ಅವರ ಮನೆಯನ್ನು ಜಿಪಿಎ ಮಾಡಿಸಿಕೊಂಡಿದ್ದಾರೆ. ಈ ಮಹತ್ವದ ದಾಖಲೆಗಳು ಉಡುಪಿ ಪೊಲೀಸರಿಗೆ ತನಿಖೆಯಲ್ಲಿ ಸಿಕ್ಕಿವೆ ಎನ್ನಲಾಗಿದೆ. ಇದನ್ನೂ ಓದಿ:  ಕಲಬುರಗಿಯಲ್ಲಿ ನಾಳೆಯಿಂದ 2 ದಿನ ಬಿಜೆಪಿ ಕೋರ್ ಕಮಿಟಿ ಸಭೆ – ಸಿಎಂ ಸೇರಿ ಹಲವರು ಭಾಗಿ

    ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಕುರಿತಂತೆ ಉಡುಪಿ ಪೊಲೀಸರು ನಡೆಸುತ್ತಿರುವ ತನಿಖೆ ಇಂದು 5ನೇ ದಿನಕ್ಕೆ ಕಾಲಿಟ್ಟಿದೆ. ಕಳೆದ ಐದು ದಿನಗಳಿಂದ ಬೆಳಗಾವಿಯಲ್ಲಿ ಬೀಡುಬಿಟ್ಟಿರುವ ಉಡುಪಿ ಪೊಲೀಸರು ಸಂತೋಷ್ ಪತ್ನಿ ಜಯಶ್ರೀ, ಆತನ ಕುಟುಂಬಸ್ಥರು, ಪ್ರಸ್ತುತ ಪಿಡಿಒ ವಸಂತಕುಮಾರಿ, ಹಿಂದಿನ ಪಿಡಿಒ ಗಂಗಾಧರ್ ನಾಯಿಕ್ ಅವರನ್ನು ತೀವ್ರ ವಿಚಾರಣೆ ನಡೆಸಿದ್ದರು.

    ಮಂಗಳವಾರ(ನಿನ್ನೆ) ಗ್ರಾಮ ಪಂಚಾಯತಿ ಅಧ್ಯಕ್ಷರನ್ನು ಸೇರಿದಂತೆ 12 ಜನ ತುಂಡು ಗುತ್ತಿಗೆದಾರನ್ನು ಉಡುಪಿ ಪೊಲೀಸರು ವಿಚಾರಣೆ ನಡೆಸಿದ್ದರು. ಈ ವೇಳೆ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಸಂತೋಷ್ ಮನೆಯನ್ನು ಗ್ರಾ.ಪಂ.ಅಧ್ಯಕ್ಷ ನಾಗೇಶ್ ಮನ್ನೋಳಕರ್ ಜಿಪಿಎ ಮಾಡಿಸಿಕೊಂಡಿದ್ರಾ? ಎನ್ನುವ ಮಾತುಗಳು ಕೇಳಿಬಂದಿವೆ.

    ಹಿಂಡಲಗಾ ಗ್ರಾಪಂ ಅಧ್ಯಕ್ಷ ನಾಗೇಶ್ ಮನ್ನೋಳಕರ್, ಉದ್ಯಮಿ ಹಾಗೂ ಗ್ರಾ.ಪಂ ಸದಸ್ಯ ಎನ್.ಎಸ್.ಪಾಟೀಲ್ ಸೇರಿ ಮೃತ ಸಂತೋಷ್ ಪಾಟೀಲ್ ಮನೆಯನ್ನು ಜಿಪಿಎ ಮಾಡಿಸಿಕೊಂಡಿದ್ದಾರೆ ಎನ್ನುವ ಮಾಹಿತಿ ಉಡುಪಿ ಪೊಲೀಸರ ತನಿಖೆ ವೇಳೆ ಮಹತ್ವದ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ:  ಏಪ್ರಿಲ್ 28 ರಂದು ಇಸ್ರೇಲ್‍ನಲ್ಲಿ ಬಿಡುಗಡೆಯಾಗಲಿದೆ ‘ದಿ ಕಾಶ್ಮೀರ್ ಫೈಲ್ಸ್’

    ಈ ವೇಳೆ ಉಡುಪಿ ಪೊಲೀಸರಿಗೆ ಮಾಹಿತಿ ನೀಡಿರುವ ಗ್ರಾಮ ಪಂಚಾಯತಿ ಅಧ್ಯಕ್ಷ, ನಾಗೇಶ್ ಮನ್ನೋಳಕರ್ ಮನೆ ಜಿಪಿಎ ಮಾಡಿಸಿಕೊಂಡಿದ್ದಕ್ಕೂ ಕಾಮಗಾರಿ ವ್ಯವಹಾರಕ್ಕೂ ಸಂಬಂಧವಿಲ್ಲ. ಅದು ಬೇರೆ ವ್ಯವಹಾರ, ಇದು ಬೇರೆ ವ್ಯವಹಾರ ಇದೆ ಅಂತಾ ಹೇಳಿದ್ದಾರೆ. ಸಂತೋಷ್ ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಸಂಪೂರ್ಣ ತನಿಖೆ ನಂತರವಷ್ಟೇ ಸತ್ಯಾಸತ್ಯತೆ ಹೊರಬರಲಿದೆ.