Tag: gramayana film

  • ಮೇಘಾ ಶೆಟ್ಟಿ ಬರ್ತ್‌ಡೇ- ಫ್ಯಾನ್ಸ್‌ಗೆ ಭರ್ಜರಿ ಸರ್ಪ್ರೈಸ್

    ಮೇಘಾ ಶೆಟ್ಟಿ ಬರ್ತ್‌ಡೇ- ಫ್ಯಾನ್ಸ್‌ಗೆ ಭರ್ಜರಿ ಸರ್ಪ್ರೈಸ್

    ರಾವಳಿ ನಟಿ ಮೇಘಾ ಶೆಟ್ಟಿ (Megha Shetty) ಅವರು ಇಂದು (ಆ.4) ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ದಿನ ಅವರ ಮುಂದಿನ ಸಿನಿಮಾದ ಲುಕ್ ಅನ್ನು ಚಿತ್ರತಂಡ ಅನಾವರಣ ಮಾಡುವ ಮೂಲಕ ಫ್ಯಾನ್ಸ್‌ಗೆ ಸೂಪರ್ ಸರ್ಪ್ರೈಸ್ ಕೊಟ್ಟಿದ್ದಾರೆ. ಇದನ್ನೂ ಓದಿ:ಬದುಕಿನಲ್ಲಿ ಎದುರಿಸಿದ ಏರಿಳಿತಗಳ ಬಗ್ಗೆ ಮಾತನಾಡಿದ ಸಮಂತಾ

    ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಿರುವ ಮೇಘಾ ಶೆಟ್ಟಿ ಇದೀಗ ಅವರ ಮುಂಬರುವ 3 ಸಿನಿಮಾಗಳ ಪೋಸ್ಟರ್ ರಿವೀಲ್ ಆಗಿದೆ. ಈ ಮೂಲಕ ಅಭಿಮಾನಿಗಳ ಕುತೂಹಲಕ್ಕೆ ಚಿತ್ರತಂಡ ತೆರೆ ಎಳೆದಿದ್ದಾರೆ. ಆಪರೇಷನ್ ಲಂಡನ್ ಕೆಫೆ, ಗ್ರಾಮಾಯಣ, ಚೀತಾ (Cheetah) ಸಿನಿಮಾಗಳ ಪೋಸ್ಟರ್‌ನಲ್ಲಿ ಡಿಫರೆಂಟ್ ಲುಕ್‌ನಲ್ಲಿ ನಟಿ ಕಾಣಿಸಿಕೊಂಡಿದ್ದಾರೆ.

    ‘ಆಪ್ಟರ್‌ ಆಪರೇಷನ್ ಲಂಡನ್ ಕೆಫೆ’ (After Operation London Cafe) ಸಿನಿಮಾದಲ್ಲಿ ಲಂಗ ದಾವಣಿ ಧರಿಸಿ ನಟಿ ಮುದ್ದಾಗಿ ಕಾಣಿಸಿಕೊಂಡಿರುವ ಲುಕ್ ರಿವೀಲ್ ಆಗಿದೆ. ಈ ಚಿತ್ರಕ್ಕೆ ಸಡಗರ ರಾಘವೇಂದ್ರ ನಿರ್ದೇಶನ ಮಾಡಿದ್ದಾರೆ. ಸದ್ಯದಲ್ಲೇ ಚಿತ್ರದ ಟೀಸರ್ ಮತ್ತು ರಿಲೀಸ್ ಬಗ್ಗೆ ಮಾಹಿತಿ ಸಿಗಲಿದೆ. ಕವೀಶ್ ಶೆಟ್ಟಿಗೆ ಮೇಘಾ ನಾಯಕಿಯಾಗಿ ನಟಿಸಿದ್ದಾರೆ. ಕನ್ನಡ, ಮರಾಠಿ ಸೇರಿದಂತೆ ಹಲವು ಭಾಷೆಗಳಲ್ಲಿ ಚಿತ್ರ ಮೂಡಿ ಬಂದಿದೆ.

    ‘ಗ್ರಾಮಾಯಣ’ (Gramayana) ಸಿನಿಮಾದಲ್ಲಿ ವಿನಯ್ ರಾಜ್ ಕುಮಾರ್‌ಗೆ ಮೇಘಾ ಹೀರೋಯಿನ್ ಆಗಿ ನಟಿಸಿದ್ದಾರೆ. ಈ ಚಿತ್ರದಲ್ಲೂ ಭಿನ್ನ ಪಾತ್ರಕ್ಕೆ ನಟಿ ಜೀವ ತುಂಬಿದ್ದಾರೆ. ಈ ಚಿತ್ರವನ್ನು ಜಿ. ಮನೋಹರ್ ಮತ್ತು ಶ್ರೀಕಾಂತ್ ಕೆ.ಪಿ ನಿರ್ಮಾಣ ಮಾಡಿದ್ದಾರೆ. ಈ ಚಿತ್ರಕ್ಕೆ ದೇವನೂರು ಚಂದ್ರು ನಿರ್ದೇಶನ ಮಾಡಿದ್ದಾರೆ.

    ಪ್ರಜ್ವಲ್ ದೇವರಾಜ್ ನಟನೆಯ ‘ಚೀತಾ’ (Cheetah) ಸಿನಿಮಾದಲ್ಲಿ ಮೇಘಾ ಶೆಟ್ಟಿ ಲೀಡ್ ರೋಲ್‌ನಲ್ಲಿ ನಟಿಸಿದ್ದು, ರೌದ್ರಾವತಾರದಲ್ಲಿ ಕಾಣಿಸಿಕೊಂಡಿರುವ ನಟಿಯ ಪೋಸ್ಟರ್ ಈಗ ರಿವೀಲ್ ಆಗಿದೆ. ಮೇಘಾ ನಟಿಸಿರುವ 3 ಸಿನಿಮಾಗಳ ಪೋಸ್ಟರ್ ಲುಕ್ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ನೆಚ್ಚಿನ ನಟಿಯ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ಶುಭಕೋರಿದ್ದಾರೆ.

    ಅಂದಹಾಗೆ, ‘ಜೊತೆ ಜೊತೆಯಲಿ’ (Jothe Jotheyali) ಸೀರಿಯಲ್ ಮೂಲಕ ಅನು ಸಿರಿಮನೆ ಪಾತ್ರದಿಂದ ಮನಗೆದ್ದ ನಟಿ ಮೇಘಾ ಬೆಳ್ಳಿಪರದೆಯಲ್ಲಿ ಬ್ಯಾಕ್ ಟು ಬ್ಯಾಕ್ ಚಿತ್ರಗಳ ಮೂಲಕ ಮಿಂಚುತ್ತಿದ್ದಾರೆ.

  • ದೊಡ್ಮನೆ ಹೀರೋಗೆ ಮೇಘಾ ಶೆಟ್ಟಿ ಹೀರೋಯಿನ್

    ದೊಡ್ಮನೆ ಹೀರೋಗೆ ಮೇಘಾ ಶೆಟ್ಟಿ ಹೀರೋಯಿನ್

    ಕಿರುತೆರೆಯ ಜನಪ್ರಿಯ ನಟಿ ಮೇಘಾ ಶೆಟ್ಟಿ (Megha Shetty)  ಈಗ ಬೆಳ್ಳಿತೆರೆಯಲ್ಲಿ ಬಂಪರ್ ಆಫರ್ ಬಾಚಿಕೊಳ್ತಿದ್ದಾರೆ. ದೊಡ್ಮನೆ ಕುಡಿ ವಿನಯ್ ರಾಜ್‌ಕುಮಾರ್ ಚಿತ್ರಕ್ಕೆ (Vinay Rajkumar) ನಾಯಕಿಯಾಗಿ ನಟಿ ಸೆಲೆಕ್ಟ್ ಆಗಿದ್ದಾರೆ. ‘ಗ್ರಾಮಾಯಣ’ (Gramayana Film) ಚಿತ್ರಕ್ಕೆ ಜೊತೆ ಜೊತೆಯಲಿ ನಟಿ ಎಂಟ್ರಿ ಕೊಡುತ್ತಿದ್ದಾರೆ.

    ದೊಡ್ಮನೆ ಹೀರೋ ವಿನಯ್ ರಾಜ್‌ಕುಮಾರ್ ನಟನೆಯ ಗ್ರಾಮಾಯಣ ಚಿತ್ರ ಇತ್ತೀಚೆಗೆ ಮಗದೊಮ್ಮೆ ಚಾಲನೆ ನೀಡಲಾಗಿದ್ದು, ಈ ಸಿನಿಮಾದಲ್ಲಿ ವಿನಯ್ ಎದುರು ನಾಯಕಿಯಾಗಿ ಕರಾವಳಿ ನಟಿ ಮೇಘಾ ಶೆಟ್ಟಿ ಕಾಣಿಸಿಕೊಳ್ತಿದ್ದಾರೆ. ಇದನ್ನೂ ಓದಿ:ದುನಿಯಾ ವಿಜಯ್ ನಿರ್ದೇಶನದ ಭೀಮನ ‘ಸೈಕ್ ಸಾಂಗ್’ ರಿಲೀಸ್

    ‘ಗ್ರಾಮಾಯಣ’ ಹಳ್ಳಿ ಸೊಗಡಿನ ಕಥೆಯಾಗಿದ್ದು, ಮೇಘಾ ಹಳ್ಳಿ ಹುಡುಗಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಅಕ್ಟೋಬರ್ 4ರಿಂದ ಹೊಸದಾಗಿ ಚಿತ್ರೀಕರಣ ಶುರು ಮಾಡಲಾಗುತ್ತದೆ. ಕೆಲ ವರ್ಷಗಳ ಹಿಂದೆ ಆರಂಭವಾಗಿದ್ದ ಗ್ರಾಮಾಯಣ ಚಿತ್ರ ಈಗ ಹೊಸ ಟೀಮ್‌ನೊಂದಿಗೆ ಮತ್ತೆ ಶುರುವಾಗುತ್ತಿದೆ.

    ಗೋಲ್ಡನ್ ಹೀರೋ ಗಣೇಶ್‌ಗೆ (Golden Star Ganesh) ನಾಯಕಿ ‘ತ್ರಿಬಲ್ ರೈಡಿಂಗ್’ (Triple Riding) ಸಿನಿಮಾದಲ್ಲಿ ನಟಿಸಿದ್ದರು. ಧನ್ವೀರ್ ಗೌಡ ನಟನೆಯ ಕೈವ ಸಿನಿಮಾ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ‘ಆಪರೇಷನ್ ಲಂಡನ್ ಕೆಫೆ’ ಸಿನಿಮಾದಲ್ಲೂ ನಾಯಕಿಯಾಗಿ ನಟಿಸಿದ್ದಾರೆ. ಸದ್ಯದಲ್ಲೇ ರಿಲೀಸ್ ಅಪ್‌ಡೇಟ್ ಸಿಗಲಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸದ್ದಿಲ್ಲದೆ ಹಸೆಮಣೆ ಏರಿದ್ರಾ ʻಗ್ರಾಮಾಯಣʼ ಚಿತ್ರದ ನಾಯಕಿ ಅಮೃತಾ ಅಯ್ಯರ್

    ಸದ್ದಿಲ್ಲದೆ ಹಸೆಮಣೆ ಏರಿದ್ರಾ ʻಗ್ರಾಮಾಯಣʼ ಚಿತ್ರದ ನಾಯಕಿ ಅಮೃತಾ ಅಯ್ಯರ್

    ಹುಭಾಷಾ ನಟಿ ಅಮೃತಾ ಅಯ್ಯರ್ ದಕ್ಷಿಣದ ಸಿನಿಮಾಗಳ ಮೂಲಕ ಮೋಡಿ ಮಾಡಿದ್ದಾರೆ. ಇದೀಗ `ಗ್ರಾಮಾಯಣ’ ಚಿತ್ರದ ಮೂಲಕ ಈಗಾಗಲೇ ಕನ್ನಡ ಚಿತ್ರದಲ್ಲಿ ನಟಿಸಿದ್ದಾರೆ. ಇನ್ನು ಸದಾ ಸಿನಿಮಾ ವಿಷ್ಯವಾಗಿ ಸುದ್ದಿಯಲ್ಲಿರುತ್ತಿದ್ದ ನಟಿ ಈಗ ಸದ್ದಿಲ್ಲದೆ ಹಸೆಮಣೆ ಏರಿದ್ರಾ ಎಂಬ ಪ್ರಶ್ನೆ ಅಭಿಮಾನಿಗಳನ್ನ ಕಾಡುತ್ತಿದೆ.

     

    View this post on Instagram

     

    A post shared by Amritha – Thendral (@amritha_aiyer)

    ಬೆಂಗಳೂರು ಮೂಲದ ನಟಿ ಅಮೃತಾ ಅಯ್ಯರ್ ಕಾಲಿವುಡ್ ಮತ್ತು ಟಾಲಿವುಡ್ ಸಿನಿಮಾಗಳ ಮೂಲಕ ಸಂಚಲನ ಮೂಡಿಸಿದ್ದಾರೆ. ತಮಿಳಿನ `ಬಿಗಿಲ್’ ಮತ್ತು ಸೂಪರ್ ಸ್ಟಾರ್ ರಜನೀಕಾಂತ್ ಜತೆ ಲಿಂಗಾ ಚಿತ್ರದಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇನ್ನು ಕಳೆದರೆಡು ದಿನಗಳಿಂದ ನಟಿ ಅಮೃತಾಗೆ ಮದುವೆ ಆಗಿದೆ ಎಂದು ಅನ್ನುವ ಗುಸು ಗುಸು ಶುರುವಾಗಿದೆ. ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ವೆಡ್ಡಿಂಗ್ ಫೋಟೋ ಕೂಡ ವೈರಲ್ ಆಗಿದೆ. ಈ ಕುರಿತು ನಟಿ ಸ್ಪಷ್ಟನೆ ನೀಡಿದ್ದಾರೆ.

     

    View this post on Instagram

     

    A post shared by Amritha – Thendral (@amritha_aiyer)

    ದಕ್ಷಿಣ ಭಾರತದ ಚಿತ್ರಗಳಲ್ಲಿ ಗುರುತಿಸಿಕೊಂಡಿರುವ ಕನ್ನಡತಿಗೆ ಇದೀಗ ತಮ್ಮ ಮದುವೆ ವದಂತಿಗೆ ಸ್ಪಷ್ಟನೆ ನೀಡಿದ್ದಾರೆ. ವಣಕಂ ಡಾ ಮಾಪಿಳೈ ಸಿನಿಮಾದ ಫೋಟೋಗಳು ಎಂದು ನಟಿ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ. ನಟಿಯ ಪೋಸ್ಟ್‌ಗೆ ಫ್ಯಾನ್ಸ್ ಕೂಡ ರಿಯಾಕ್ಟ್ ಮಾಡಿದ್ದು, ಈಗಲೇ ಮದುವೆ ಬೇಡ, ನಟಿಸಿ ಎಂದು ಕಾಮೆಂಟ್ ಮಾಡಿದ್ದಾರೆ. ಇದನ್ನೂ ಓದಿ:ಬುದ್ದಿಮಾಂದ್ಯ ಮಗನ ನೆನೆದು ಕಣ್ಣೀರಿಟ್ಟ ಮಾಳವಿಕಾ ಅವಿನಾಶ್

     

    View this post on Instagram

     

    A post shared by Amritha – Thendral (@amritha_aiyer)

    `ವಣಕಂ ಡಾ ಮಾಪಿಳೈ’ ಚಿತ್ರದಲ್ಲಿ ಅಮೃತಾ ಮದುವೆಯಾಗುವ ಸನ್ನಿವೇಶವೊಂದಿತ್ತು. ಆ ಫೋಟೊದಲ್ಲಿರುವ ವರನ ಫೋಟೋವನ್ನು ಕ್ರಾಪ್ ಮಾಡಿ ಬರೀ ಅಮೃತಾ ಫೊಟೊವನ್ನು ಯಾರೋ ಶೇರ್ ಮಾಡಿದ್ದಾರೆ. ಇದನ್ನು ನೋಡಿ ನಿಜವಾಗಿಯೂ ಅಮೃತಾಗೆ ಮದುವೆ ಆಗಿದೆ ಎಂದು ಫ್ಯಾನ್ಸ್ ಅಂದುಕೊಂಡಿದ್ದರು. ಹಾಗಾಗಿ ಈ ಫೋಟೊಗಳು ಸಖತ್ ವೈರಲ್ ಆಗಿತ್ತು. ಆಕೆಯ ಸ್ನೇಹಿತೆಯರು ಶುಭಾಶಯ ಕೋರಲು ಶುರು ಮಾಡಿದ ಮೇಲೆ ಎಚ್ಚೆತ್ತುಕೊಂಡು ನಟಿ ಮದುವೆ ವದಂತಿಗೆ ಸ್ಪಷ್ಟನೆ ನೀಡಿದ್ದಾರೆ.

    ಇನ್ನು ವಿನಯ್ ರಾಜ್‌ಕುಮಾರ್‌ಗೆ ನಾಯಕಿಯಾಗಿ, `ಗ್ರಾಮಾಯಣ’ ಚಿತ್ರದಲ್ಲಿ ನಟಿ ಅಮೃತಾ ಅಯ್ಯರ್ ನಟಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]