Tag: grandson

  • ಗಾಜನೂರಿನ ಮನೆಯಲ್ಲಿ ರಾಜ್ ಮೊಮ್ಮಗನ ಅರಿಶಿಣ ಶಾಸ್ತ್ರ

    ಗಾಜನೂರಿನ ಮನೆಯಲ್ಲಿ ರಾಜ್ ಮೊಮ್ಮಗನ ಅರಿಶಿಣ ಶಾಸ್ತ್ರ

    ಚಾಮರಾಜನಗರ: ನಟ ರಾಘವೇಂದ್ರ ರಾಜ್‍ಕುಮಾರ್ ಅವರ ಎರಡನೇ ಪುತ್ರ ಯುವರಾಜ್ ಅವರ ಅರಿಶಿಣ ಶಾಸ್ತ್ರ ಗಾಜನೂರಿನ ನಿವಾಸದಲ್ಲಿ ಇಂದು ನಡೆದಿದೆ.

    ಮೇ 26ರಂದು ಯುವ ರಾಜ್‍ಕುಮಾರ್ ಅವರ ಮದುವೆ ನಿಗದಿಯಾಗಿದ್ದು, ಇಂದು ಗಾಜನೂರಿನ ಮನೆಯಲ್ಲಿ ಅರಿಶಿಣದ ಶಾಸ್ತ್ರ ನಡೆಯಿತು. ಅರಿಶಿಣದ ಶಾಸ್ತ್ರದಲ್ಲಿ ರಾಜ್‍ಕುಮಾರ್ ಕುಟುಂಬಸ್ಥರು ಭಾಗಿಯಾಗಿದ್ದು, ಮದುವೆ ಸಂಭ್ರಮ ಮನೆ ಮಾಡಿದೆ.

    ಯುವರಾಜ್‍ಕುಮಾರ್ ತಮ್ಮ ಗೆಳತಿ ಶ್ರೀದೇವಿ ಜೊತೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‍ನಲ್ಲಿ ಅದ್ಧೂರಿಯಾಗಿ ಮದುವೆ ಆಗಲಿದ್ದಾರೆ. ಈ ಮದುವೆಗೆ ಎಲ್ಲಾ ತಯಾರಿ ನಡೆಯುತ್ತಿದೆ. ಅದೇ ದಿನ ಆರತಕ್ಷತೆ ಕಾರ್ಯಕ್ರಮ ಕೂಡ ಹಮ್ಮಿಕೊಂಡಿದ್ದಾರೆ. ಈಗಾಗಲೇ ಸಿನಿಮಾರಂಗದ ಗಣ್ಯರಿಗೆ ಆಹ್ವಾನ ಪತ್ರಿಕೆ ನೀಡುತ್ತಿದ್ದು, ಮದುವೆ ತಯಾರಿಯಲ್ಲಿ ದೊಡ್ಮನೆ ಮಂದಿ ಸಾಕಷ್ಟು ಬ್ಯುಸಿಯಾಗಿದ್ದಾರೆ.

    ಕಳೆದ ವರ್ಷ ಜುಲೈ ತಿಂಗಳಿನಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಯುವ ರಾಜ್‍ಕುಮಾರ್ ಹಾಗೂ ಶ್ರೀದೇವಿ ಉಂಗುರ ಬದಲಾಯಿಸಿಕೊಂಡಿದ್ದರು. ಖಾಸಗಿ ಹೊಟೇಲ್‍ನಲ್ಲಿ ನಡೆದ ಸಮಾರಂಭದಲ್ಲಿ ಈ ಜೋಡಿ ಎಂಗೇಜ್ ಆಗಿದ್ದರು. ಯುವ ರಾಜ್‍ಕುಮಾರ್ ಹಾಗೂ ಶ್ರೀದೇವಿ ಉಂಗುರ ಬದಲಾವಣೆ ವೇಳೆ ರಾಜ್ ಕುಟುಂಬ ಸದಸ್ಯರು ಹಾಜರಾಗಿದ್ದು, ನವ ಜೋಡಿಗೆ ಶುಭ ಹಾರೈಸಿದ್ದರು.

    ಈ ಹಿಂದೆ ಯುವ ಅವರ ಹೆಸರು ಗುರು ರಾಜ್‍ಕುಮಾರ್ ಆಗಿದ್ದು, ಈಗ ಯುವ ರಾಜ್‍ಕುಮಾರ್ ಎಂದು ಹೆಸರು ಬದಲಾಯಿಸಿಕೊಂಡಿದ್ದಾರೆ. ಯುವ ರಾಜ್‍ಕುಮಾರ್ ಇದುವರೆಗೂ ಯಾವ ಸಿನಿಮಾದಲ್ಲೂ ಹೀರೋ ಆಗಿ ಕಾಣಿಸಿಕೊಂಡಿಲ್ಲ. ಆದರೆ ತಮ್ಮ ಹೋಮ್ ಬ್ಯಾನರ್ ನಲ್ಲಿ ಬರುವ ಚಿತ್ರಗಳ ತೆರೆ ಹಿಂದೆ ಕೆಲಸ ಮಾಡಿದ್ದಾರೆ. ಸದ್ಯ ಯುವ ಮದುವೆ ಆದ ನಂತರ ಹೀರೋ ಆಗಿ ಕಾಣಿಸಿಕೊಳ್ಳಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.

  • ಸಿಎಂ ಚಂದ್ರಬಾಬು ನಾಯ್ಡು ಆಸ್ತಿಗಿಂತ 3 ವರ್ಷದ ಮೊಮ್ಮಗನ ಆಸ್ತಿಯೇ 6 ಪಟ್ಟು ಹೆಚ್ಚು!

    ಸಿಎಂ ಚಂದ್ರಬಾಬು ನಾಯ್ಡು ಆಸ್ತಿಗಿಂತ 3 ವರ್ಷದ ಮೊಮ್ಮಗನ ಆಸ್ತಿಯೇ 6 ಪಟ್ಟು ಹೆಚ್ಚು!

    ಹೈದರಾಬಾದ್: ಆಂಧ್ರಪ್ರದೇಶ ಸಿಎಂ, ತೆಲುಗುದೇಶಂ (ಟಿಡಿಪಿ) ಪಕ್ಷದ ಮುಖ್ಯಸ್ಥರಾಗಿರುವ ಚಂದ್ರಬಾಬು ನಾಯ್ಡು ಸತತವಾಗಿ 8ನೇ ವರ್ಷ ತಮ್ಮ ಆಸ್ತಿ ವಿವರಗಳನ್ನು ಘೋಷಣೆ ಮಾಡಿದ್ದು, ಅವರಿಗಿಂತ ಮೊಮ್ಮಗ 6 ಪಟ್ಟು ಹೆಚ್ಚು ಆಸ್ತಿಯನ್ನು ಹೊಂದಿದ್ದಾನೆ.

    ಚಂದ್ರಬಾಬು ನಾಯ್ಡು ತನ್ನ ಬಳಿ 2.99 ಕೋಟಿ ರೂ. ಆಸ್ತಿ ಇದೆ ಎಂದು ಘೋಷಣೆ ಮಾಡಿಕೊಂಡಿದ್ದಾರೆ. ಆದರೆ ಅವರ 3 ವರ್ಷದ ಮೊಮ್ಮದ ನಾರಾ ದೇವಾಂಶ್ 18.71 ಕೋಟಿ ಆಸ್ತಿಯನ್ನು ಹೊಂದಿದ್ದಾನೆ.

    ಕಳೆದ ವರ್ಷಕ್ಕಿಂತ ಈ ಬಾರಿ ನಾಯ್ಡು ಅವರ ಆಸ್ತಿ 46 ಲಕ್ಷ ರೂ. ಹೆಚ್ಚಾಗಿದೆ. ಆದರೆ ಕಳೆದ ಬಾರಿ ಹೂಡಿಕೆ ಮಾಡಿದ್ದ 5.64 ಕೋಟಿ ರೂ. ಮೊತ್ತ 5.31 ಕೋಟಿ ರೂ.ಗೆ ಇಳಿಕೆ ಆಗಿದೆ.

    ನಾಯ್ಡು ಅವರ ಮೊಮ್ಮಗ 16.17 ಕೋಟಿ ರೂ. ಮೌಲ್ಯದ ಮನೆಯನ್ನು ಹೈದರಾಬಾದ್‍ನ ಜುಬ್ಲಿ ಹಿಲ್ಸ್ ನಲ್ಲಿ ಹೊಂದಿದ್ದು, 2.49 ಕೋಟಿ ರೂ. ಠೇವಣಿ ಇಟ್ಟಿದ್ದಾರೆ. ಹೆರಿಟೇಜ್ ಫುಡ್ಸ್ ಸಂಸ್ಥೆಯ ಮುಖ್ಯಸ್ಥರಾಗಿರುವ ನಾಯ್ಡು ಅವರ ಪತ್ನಿ ಭುವನೇಶ್ವರಿ ಅವರು ಕುಟುಂಬದಲ್ಲಿ ಹೆಚ್ಚು ಆಸ್ತಿಯನ್ನು ಹೊಂದಿದ್ದಾರೆ. ಕಳೆದ ಬಾರಿ 25.41 ಕೋಟಿ ರೂ. ಇದ್ದ ಅವರ ಆಸ್ತಿ ಈಗ 31.01 ಕೋಟಿ ರೂ.ಗೆ ಏರಿಕೆಯಾಗಿದೆ.

    ಅಂದಹಾಗೇ ದೇವಾಂಶ್, ಚಂದ್ರಬಾಬು ನಾಯ್ಡು ಮಾತ್ರವಲ್ಲದೇ ತಂದೆ ನಾರಾ ಲೋಕೇಶ್ ಅವರಗಿಂತಲೂ ಹೆಚ್ಚಿನ ಆಸ್ತಿಯನ್ನು ಹೊಂದಿದ್ದಾನೆ. ಲೋಕೇಶ್ ಟಿಡಿಪಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದು, ಈ ಬಾರಿ ಅವರ ಆಸ್ತಿಯಲ್ಲಿ 15.21 ಕೋಟಿ ರೂ. ಹೆಚ್ಚಳವಾಗಿದೆ. 2017 ರಲ್ಲಿ ಲೋಕೇಶ್ 21.40 ಕೋಟಿ ರೂ. ಆಸ್ತಿ ಹೊಂದಿದ್ದರು. ಉಳಿದಂತೆ ಲೋಕೇಶ್ ಅವರ ಪತ್ನಿ ಬ್ರಹ್ಮಣಿ ಅವರ ಆಸ್ತಿ ಕಳೆದ ಬಾರಿಗಿಂತ ಕಡಿಮೆ ಆಗಿದ್ದು, 15.01 ಕೋಟಿ ರೂ. ಆಸ್ತಿ ಹೊಂದಿದ್ದ ಅವರು ಈ ಬಾರಿ 7.72 ಕೋಟಿ ರೂ. ಆಸ್ತಿ ಹೊಂದಿರುವುದಾಗಿ ಘೋಷಣೆ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಮೊಮ್ಮಗನ ಶಿಕ್ಷಣದ ಭವಿಷ್ಯದ ಕನಸು ಕಾಣುತ್ತಿರುವ ಅಜ್ಜಿಗೆ ನೆರವು ಬೇಕಿದೆ

    ಮೊಮ್ಮಗನ ಶಿಕ್ಷಣದ ಭವಿಷ್ಯದ ಕನಸು ಕಾಣುತ್ತಿರುವ ಅಜ್ಜಿಗೆ ನೆರವು ಬೇಕಿದೆ

    ಹಾಸನ: ಕುಡಿತದ ಚಟಕ್ಕೆ ಬಿದ್ದವರು ಮನ, ಮನೆಯನ್ನು ಮಾರಿಕೊಳ್ಳುವರು ಎಂಬ ಮಾತಿದೆ. ಆ ಮಾತಿಗೆ ಪೂರಕವಂತೆ ಈ ವರದಿ ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತಿದ್ದೇವೆ. ಹೌದು ಹಾಸನ ಜಲ್ಲೆ ಶೆಟ್ಟಿ ಹಳ್ಳಿ ಗ್ರಾಮದ ವೃದ್ಧಾಶ್ರಮದಲ್ಲಿರುವ ವೃದ್ಧೆಯ ಕರುಣಾಜನಕ ಕಥೆ ಇದು.

    ಹಾಸನದ ನಿವಾಸಿಯಾಗಿರುವ ಜಯಲಕ್ಷ್ಮಮ್ಮ ಆಸ್ತಿ ಪಾಸ್ತಿ ಹೊಂದಿದ್ದ ಐಶ್ವರ್ಯವಂತ, ಗಂಡ ಮತ್ತು ಮಗನೊಂದಿಗೆ ಸುಖ ಸಂಸಾರದ ಜೀವನ ನಡೆಸುತ್ತಿದ್ದರು. ಗಂಡ ತೀರಿಹೋದ ನಂತರ ಮಗನಿಗೆ ಆಸರೆಯಾಗಿದ್ದರು. ಮಗನಿಗೆ ಮದುವೆ ಮಾಡಿ ಮಗ ಮತ್ತು ಸೊಸೆ, ಮೊಮ್ಮಗನೊಂದಿಗೆ ವಾಸ ಮಾಡುತ್ತಿದ್ದರು. ಮಗ ನವೀನ್ ಬರೋಬ್ಬರಿ 40 ಆಟೋಗಳ ಮಾಲೀಕನಾಗಿದ್ದ. ಆದರೆ ಕುಡಿತದ ಚಟಕ್ಕೆ ಬಿದ್ದು ಆಸ್ತಿ ಮನೆಯನ್ನು ಮಾರಿಬಿಟ್ಟ. ಮಗನ ಕುಡಿತದ ಚಟಕ್ಕೆ ಬೇಸತ್ತ ಪತ್ನಿ ಬೆಂಗಳೂರಿನಲ್ಲಿ ರೈಲಿಗೆ ತಲೆಕೊಟ್ಟಿದ್ದಾರೆ.

    ಆದರೆ ಮಗ ಎರಡನೇ ಮದ್ವೆಯಾಗಿ ವೃದ್ಧೆ ತಾಯಿಯ ತಾಳಿಯನ್ನು ಕಸಿದುಕೊಂಡು ಕುಡಿತಕ್ಕೆ ಮಾರಿಕೊಂಡು ಬಳಿಕ ಸ್ವತಃ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ. ಮಗನ ಸಾವನ್ನು ಕಂಡು ವೃದ್ಧೆ ಜಯಲಕ್ಷ್ಮಮ್ಮ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆದರೆ ಅದೃಷ್ಟವಶಾತ್ ಕೆಲದಿನಗಳ ಕಾಲ ಕೋಮಾದಲ್ಲಿದ್ದು ಮರಳಿ ಪ್ರಜ್ಞೆ ಪಡೆದುಕೊಂಡಿದ್ದಾರೆ. ಮಗನ ಎರಡನೇ ಪತ್ನಿ ಮನೆಯೂ ಸಹ ತವರು ಸೇರಿದ್ದು, ಸದ್ಯ ಅಜ್ಜಿ ಮೊಮ್ಮಗ ಇಬ್ಬರು ಬೀದಿ ಪಾಲಾಗಿದ್ದಾರೆ.

    ಸದ್ಯ ಸ್ವಂತ ಇರಲು ಮನೆ ಇಲ್ಲ, ತಿನ್ನಲೂ ಊಟ ಇಲ್ಲದ ಪರಿಸ್ಥಿತಿಯಲ್ಲಿರುವ ಅಜ್ಜಿ ಜಯಲಕ್ಷಮ್ಮ ಸ್ಥಳೀಯರ ಸಹಾಯದಿಂದ ಮೊಮ್ಮಗನಿಗೆ ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಉತ್ತಮ ವಿದ್ಯಾಭ್ಯಾಸ ಕೊಡಿಸುತ್ತಿದ್ದರು. 4ನೇ ತರಗತಿಯಲ್ಲಿ ಓದುತ್ತಿದ್ದ ಪ್ರಜ್ವಲ್‍ಗೆ ಪರೀಕ್ಷಾ ಶುಲ್ಕ ಕಟ್ಟಿಲ್ಲವೆಂದು ಶಾಲೆಯವರು ಪರೀಕ್ಷೆಗೆ ಕೂರಿಸದೆ ಹೊರ ಹಾಕಿದ್ದರು. ಇದರಿಂದ ಈಗ ದಾರಿ ಕಾಣದೇ ಕಂಗಾಲಾಗಿರುವ ಅಜ್ಜಿ, ಮೊಮ್ಮಗನನ್ನು ಅನಾಥಾಶ್ರಮವೊಂದಕ್ಕೆ ಸೇರಿಸಿ ತಾನೂ ಕೂಡ ವೃದ್ಧಾಶ್ರಮದಲ್ಲಿ ಆಶ್ರಯ ಪಡೆದಿದ್ದಾರೆ.

    ಇಷ್ಟೆಲ್ಲ ಕಷ್ಟಗಳ ನಡುವೆ ಶಿಕ್ಷಣದ ಮಹತ್ವ ಅರಿತಿರುವ ಈ ಅಜ್ಜಿ ನನಗೆ ಏನೂ ಬೇಡ ನಾನು ಅನಾಥಾಶ್ರಮದಲ್ಲಿ ಜೀವಿಸುತ್ತೇನೆ. ನನ್ನ ಮೊಮ್ಮಗ ಪ್ರಜ್ವಲ್‍ಗೆ ವಿದ್ಯಾಭ್ಯಾಸ ಕೊಡಿಸಿ ಅವನ ಭವಿಷ್ಯ ಪ್ರಜ್ವಲಿಸುವಂತೆ ಮಾಡಿ ಎಂದು ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮಕ್ಕೆ ಬಂದಿದ್ದಾರೆ.

  • ತಾಯಿಯ ಸಾವಿನ ದುಃಖದಲ್ಲಿಯೂ ಮತ ಚಲಾಯಿಸಿದ ಮಗ!

    ತಾಯಿಯ ಸಾವಿನ ದುಃಖದಲ್ಲಿಯೂ ಮತ ಚಲಾಯಿಸಿದ ಮಗ!

    ಯಾದಗಿರಿ: ಮನೆಯಲ್ಲಿ ತಾಯಿ ಮೃತಪಟ್ಟರು ಮಗ ಹಾಗೂ ಮೊಮ್ಮಗ ಮತದಾನ ಚಲಾಯಿಸಿರುವ ಘಟನೆ ಶಹಾಪುರ ವಿಧಾನಸಭೆ ಕ್ಷೇತ್ರದ ನಗನೂರ ಗ್ರಾಮದಲ್ಲಿ ನಡೆದಿದೆ.

    ಸೋಮಣ್ಣ ಎಂಬವರ ತಾಯಿ ಗುರುಸಿದ್ದವ್ವ ಇಂದು ಬೆಳಗಿನ ಜಾವ ಸಾವನಪ್ಪಿದ್ರು. ಮನೆಯಲ್ಲಿ ತಾಯಿಯ ಮೃತದೇಹ ಇಟ್ಟು ಮತದಾನ ಹಕ್ಕು ಚಲಾಯಸಬೇಕು ಎಂದು ಸೋಮಣ್ಣ ಹಾಗೂ ಮಗ ಶರಣು ತಮ್ಮ ವೋಟ್ ಮಾಡಿದ್ದಾರೆ.

    ನಗನೂರನ 123 ಸಂಖ್ಯೆಯ ಮತಗಟ್ಟೆಗೆ ಬಂದು ಮಗ ಮತ್ತು ಮೊಮ್ಮಗ ಮತವನ್ನು ಚಲಾಯಿಸಿದ್ದಾರೆ. ಮತ ಚಲಾಯಿಸಿದ ನಂತರ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದಾರೆ.

  • ತುಮಕೂರಿನ ತಿಪಟೂರಿನಲ್ಲಿ ಪೈಶಾಚಿಕ ಕೃತ್ಯ- ಅಜ್ಜಿಯ ಮೇಲೆ ಸ್ವಂತ ಮೊಮ್ಮಗನಿಂದಲೇ ಅತ್ಯಾಚಾರ

    ತುಮಕೂರಿನ ತಿಪಟೂರಿನಲ್ಲಿ ಪೈಶಾಚಿಕ ಕೃತ್ಯ- ಅಜ್ಜಿಯ ಮೇಲೆ ಸ್ವಂತ ಮೊಮ್ಮಗನಿಂದಲೇ ಅತ್ಯಾಚಾರ

    ತುಮಕೂರು: ಮೊಮ್ಮಗನೇ ತನ್ನ ಸ್ವಂತ ಅಜ್ಜಿಯ ಮೇಲೆ ಅತ್ಯಾಚಾರವೆಸಗಿರೋ ಪೈಶಾಚಿಕ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಬೊಮ್ಮಲಾಪುರದಲ್ಲಿ ನಡೆದಿದೆ.

    ತಂದೆಯ ತಾಯಿಯಾದ 58 ವರ್ಷದ ವೃದ್ಧೆಯ ಮೇಲೆ ಪಾಪಿ ಮೊಮ್ಮಗ ಅತ್ಯಾಚಾರ ಮಾಡಿದ್ದಾನೆ. 19 ವರ್ಷದ ಕೀರ್ತಿ ಎಂಬಾತನಿಂದ ಈ ಕೃತ್ಯ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಅಜ್ಜಿಯ ಮೇಲೆ ಪೈಶಾಚಿಕ ಕೃತ್ಯವೆಸಗಿದ್ದಾನೆ.

    ಈ ಬಗ್ಗೆ ವೃದ್ಧೆ ಮೊಮ್ಮೊಗನ ವಿರುದ್ಧ ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಆರೋಪಿ ಕೀರ್ತಿಯನ್ನು ಬಂಧಿಸಿದ್ದಾರೆ.

    ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.