Tag: grass

  • ವಿಘ್ನೇಶ್ವರನ ಪೂಜೆಗೆ ಗರಿಕೆ ಯಾಕೆ ಬೇಕು? – ಇದರ ಹಿಂದಿದೆ ಐತಿಹಾಸಿಕ ಕಥೆ!

    ವಿಘ್ನೇಶ್ವರನ ಪೂಜೆಗೆ ಗರಿಕೆ ಯಾಕೆ ಬೇಕು? – ಇದರ ಹಿಂದಿದೆ ಐತಿಹಾಸಿಕ ಕಥೆ!

    ಯಾವುದೇ ಶುಭ ಕಾರ್ಯಗಳು ನಿರ್ವಿಘ್ನವಾಗಿ ಆಚರಣೆ ಮಾಡುವುದಕ್ಕಾಗಿಯೇ ಮೊದಲು ವಿಘ್ನೇಶ್ವರನ್ನು (Ganesha) ಪೂಜಿಸುತ್ತಾರೆ. ಆದ್ರೆ ಪೂಜಾ ಸಂದರ್ಭದಲ್ಲಿ ಗೋವಿನ ಸಗಣಿಯೊಂದಿಗೆ ಒಂದೆರಡು ಗರಿಕೆಗಳನ್ನೂ ಇಡುತ್ತಾರೆ. ಈ ಗರಿಕೆಯನ್ನು ಪೂಜಾ  ಕೈಂಕರ್ಯಕ್ಕೆ (Pooja Perfam) ಬಳಸುವುದಕ್ಕೂ ಒಂದು ಕಾರಣವಿದೆ. ಅದೇನು ಎಂದು ತಿಳಿಯಬೇಕೇ ಹಾಗಿದ್ದರೆ ಮುಂದೆ ಓದಿ…

    ಒಂದು ಸಾರಿ ಯಮಲೋಕದಲ್ಲಿ ಉತ್ಸವ ನಡೆದಿತ್ತು. ಉತ್ಸವದಲ್ಲಿ ಅಪ್ಸರೆಯರು ಮತ್ತು ನರ್ತಕಿಯರು ನೃತ್ಯ ಮಾಡುತ್ತಿದ್ದರು. ತಿಲೋತ್ತೆಮೆ ನೃತ್ಯ ಕಂಡ ಯಮ ಮೋಹಿತನಾದನು. ಯಮ ಅನುರಕ್ತನಾದ ಪರಿಣಾಮ ತಿಲೋತ್ತಮೆಯ ಗರ್ಭದಲ್ಲಿ ಭಯಂಕರ, ಕ್ರೂರ ಮತ್ತು ವಿಕಾರವಾದ ಅನಲಾಸುರ ಎಂಬ ರಾಕ್ಷಸ ಹುಟ್ಟಿಕೊಂಡನು. ಅನಲಾಸುರ ಹೋದ ಸ್ಥಳದಲ್ಲಿ ಅಗ್ನಿ ನಿರ್ಮಾಣವಾಗಿ ಎಲ್ಲವೂ ಭಸ್ಮವಾಗುತಿತ್ತು. ಇಂತಹ ಭಯಂಕರ ರಾಕ್ಷಸ ದೇವತೆಗಳನ್ನು ಬೆನ್ನಟ್ಟಲು ಆರಂಭಿಸಿದನು.

    ಅನಲಾಸುರನಿಂದ ಭಯಭೀತರಾದ ದೇವತೆಗಳು ಗಜಾನನ್ನು ಪ್ರಾರ್ಥಿಸಲು ಆರಂಭಿಸಿದರು. ಆಗ ಗಜಾನನ ಬಾಲ ರೂಪದಲ್ಲಿ ದೇವತೆಗಳ ಮುಂದೆ ಪ್ರತ್ಯಕ್ಷನಾಗಿ ಅನಲಾಸುರನನ್ನು ವಧೆ ಮಾಡಲಾಗುವುದು ಎಂದು ಭರವಸೆ ನೀಡಿದನು. ಅಷ್ಟರಲ್ಲಿ ದಶ ದಿಕ್ಕುಗಳನ್ನು ಭಸ್ಮ ಮಾಡುತ್ತ ಅನಲಾಸುರ ದೇವತೆಗಳ ಬಳಿ ಬಂದನು. ಎಲ್ಲ ದೇವತೆಗಳು ಭಯಗೊಂಡು ಅತ್ತಿತ್ತ ಓಡಾಡ ತೊಡಗಿದರು.

    ಬಾಲಗಣೇಶ ಮಾತ್ರ ನಿಂತಲ್ಲಿಯೇ ನಿಂತಿದ್ದನು. ಗಜಾನನ ಬಳಿ ಬಂದ ಅನಲಾಸುರ ಬಾಲಗಣೇಶನನ್ನು ನುಂಗಲು ಮುಂದೆ ಬಂದನು. ಅಷ್ಟರಲ್ಲಿಯೇ ಬಾಲ ಗಣೇಶ ದೈತ್ಯ ರೂಪ ತಾಳಿ ಅನಲಾಸುರನ್ನು ನುಂಗಿ ಬಿಟ್ಟನು. ಸಾಕ್ಷಾತ್ ಅಗ್ನಿ ಸ್ವರೂಪನಾದ ಅನಲಾಸುರನನ್ನು ನುಂಗಿದ್ದರಿಂದ ಗಜಾನನ ಶರೀರದಲ್ಲಿ ದಾಹ ಉದ್ಭವಿಸಿತು.

    ಗಣೇಶನ ಬಳಿ ಬಂದ ಸರ್ವ ದೇವತೆಗಳು ಆತನ ದಾಹವನ್ನು ಉಪಶಮನಿಸಲು ವಿವಿಧ ಉಪಾಯಗಳನ್ನು ಮಾಡಿದರು. ಇಂದ್ರದೇವ ಶೀತಲ ಚಂದ್ರ ಮತ್ತು ಅಮೃತವನ್ನು ಗಜಾನನ ತಲೆಯ ಮೇಲಿಟ್ಟರೂ ದಾಹ ಕಡಿಮೆಯಾಗಲಿಲ್ಲ. ಬ್ರಹ್ಮ ಸಿದ್ಧಿ ಮತ್ತು ಬುದ್ಧಿ ಎಂಬ ಮಾನಸ ಕನ್ಯೆಗಳನ್ನು ನೀಡಿದರೆ, ವಿಷ್ಣು ತನ್ನ ಕೈಯಲ್ಲಿದ್ದ ತಂಪಾದ ಕಮಲ ನೀಡಿದ. ವರುಣ ದೇವ ತಂಪಾದ ಜಲಾಭಿಷೇಕ ಮಾಡಿದ. ಪರಮೇಶ್ವರ ತನ್ನ ಶೇಷನಾಗನನ್ನು ಗಣೇಶನ ಹೊಟ್ಟೆಯ ಮೇಲೆ ಸುತ್ತಿದ. ದೇವತೆಗಳು ಎಲ್ಲಾ ರೀತಿಯಿಂದಲೂ ಉಪಾಯ ಮಾಡಿದರೂ ಗಜಾನನ ದಾಹ ಮಾತ್ರ ಕಡಿಮೆಯಾಗಲಿಲ್ಲ.

    ಕೊನೆಗೆ 88 ಸಹಸ್ರ ಮುನಿಗಳು 21 ಹಚ್ಚ ಹಸಿರಾದ ದ್ರುವ (ಗರಿಕೆ) ಗಣೇಶನ ಮಸ್ತಕದ ಮೇಲೆ ಸುರಿದರು. ಆಗ ಗಜಾನನ ದಾಹ ಕಡಿಮೆ ಆಯ್ತು. ಇದರಿಂದ ಗಣೇಶ ಪ್ರಸನ್ನಗೊಂಡು, ಅನೇಕ ಉಪಾಯದಿಂದ ನನ್ನ ಅಂಗದ ದಾಹ ಕಡಿಮೆ ಆಗಲಿಲ್ಲ. ದ್ರುವದಿಂದ ಮಾತ್ರ ನನ್ನ ಅಂಗದ ದಾಹ ಕಡಿಮೆ ಆಯ್ತು. ಇನ್ನ್ಮುಂದೆ ನನಗೆ ದ್ರುವ ಅರ್ಪಣೆ ಮಾಡುವವರಿಗೆ ಸಾವಿರಾರು ಯಜ್ಞ, ವ್ರತ, ತೀರ್ಥಯಾತ್ರೆ ಮತ್ತು ದಾನ ಮಾಡಿದ ಪುಣ್ಯ ಲಭಿಸಲಿದೆ ಎಂದು ಹೇಳಿದ. ಹೀಗಾಗಿ ಈಗಲೂ ಗಣಪತಿಗೆ ಗರಿಕೆಯನ್ನು ಇಟ್ಟು ಪೂಜೆ ಮಾಡಲಾಗುತ್ತದೆ. ಹೀಗೆ ಮಾಡಿದ್ರೆ ಪುಣ್ಯ ಲಭಿಸುತ್ತದೆ ಎಂಬುದು ಭಕ್ತರ ನಂಬಿಕೆ.

  • ವಿದ್ಯುತ್ ತಂತಿ ತಗುಲಿ 11 ಸಾವಿರ ರೂ. ಭತ್ತದ ಹುಲ್ಲು ಸುಟ್ಟು ಭಸ್ಮ

    ವಿದ್ಯುತ್ ತಂತಿ ತಗುಲಿ 11 ಸಾವಿರ ರೂ. ಭತ್ತದ ಹುಲ್ಲು ಸುಟ್ಟು ಭಸ್ಮ

    ಹಾವೇರಿ: ಭತ್ತದ ಹುಲ್ಲು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌ಗೆ ವಿದ್ಯುತ್ ತಂತಿ ತಗುಲಿದ್ದು, ಭತ್ತದ ಹುಲ್ಲು ಧಗಧಗನೆ ಹೊತ್ತಿ ಉರಿದ ಘಟನೆ ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಕುಡುಪಲಿ ಗ್ರಾಮದಲ್ಲಿ ಬಳಿ ಇರೋ ಕುಡುಪಲಿ-ಕಡೂರು ರಸ್ತೆಯಲ್ಲಿ ನಡೆದಿದೆ.

    ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ದಂಡಗಿಹಳ್ಳಿ ಗ್ರಾಮ ನಿವಾಸಿಯಾಗಿರುವ, ರುದ್ರಪ್ಪ ಮಕರಿ ಅವರಿಗೆ ಸೇರಿದ ಭತ್ತದ ಹುಲ್ಲು ಇದಾಗಿದೆ. ಬೆಂಕಿ ಹೊತ್ತಿಕೊಂಡಿದ್ದನ್ನ ಗಮನಿಸಿ ಟ್ರ್ಯಾಕ್ಟರ್ ನಿಂದ ಭತ್ತದ ಹುಲ್ಲು ಕೆಳಗಿಳಿಸಿ ಪ್ರಾಣಹಾನಿ ಮತ್ತು ವಾಹನ ಹಾನಿಯನ್ನು ರೈತರು ತಪ್ಪಿಸಿದ್ದಾರೆ. ಭತ್ತದ ಹುಲ್ಲು ಸಂಪೂರ್ಣ ಸುಟ್ಟು ಕರಕಲು ಆಗಿದೆ.

    ಹನ್ನೊಂದು ಸಾವಿರ ರುಪಾಯಿ ಮೌಲ್ಯದ ಭತ್ತದ ಹುಲ್ಲು ಸುಟ್ಟು ಭಸ್ಮವಾಗಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ರೈತರೊಬ್ಬರಿಂದ ಭತ್ತದ ಹುಲ್ಲು ಖರೀದಿಸಿ ತರುತ್ತಿದ್ದ ವೇಳೆ ದುರ್ಘಟನೆ ಈ ನಡೆದಿದೆ. ಬೆಂಕಿ ಹೊತ್ತಿಕೊಂಡು ಉರಿಯುತ್ತಿದ್ದರಿಂದ ವಾಹನಗಳ ಓಡಾಟಕ್ಕೆ ಆಗುತ್ತಿದ್ದ ತೊಂದರೆಯಾಗಿದೆ. ಇದನ್ನೂ ಓದಿ:  ಪತ್ನಿ ನೆರವಿನಿಂದ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ- ಸಂತ್ರಸ್ತೆ ವಿದೇಶಕ್ಕೆ ಹೋದ್ರೂ ಬಿಟ್ಟಿಲ್ಲ ಆತನ ಕಾಮದಾಟ

    ರಸ್ತೆ ಪಕ್ಕಕ್ಕೆ ಬೆಂಕಿ ಹೊತ್ತಿಕೊಂಡಿರೋ ಭತ್ತದ ಹುಲ್ಲು ಸರಿಸಿ ಬಸ್ ದಾಟಿಸಿದ ಬಸ್ಸಿನಲ್ಲಿದ್ದ ಪ್ರಯಾಣಿಕರು. ಬೆಳಗಿನ ಜಾವ ಬೆಂಕಿ ಹೊತ್ತಿಕೊಂಡಿದ್ದರೂ ಇನ್ನೂ ಬೆಂಕಿ ಉರಿಯುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಇನ್ನೂವರೆಗೂ ಬಂದಿಲ್ಲ. ರಟ್ಟೀಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಮತಾಂತರ ತಡೆ ಮಸೂದೆಗೆ ವಿರೋಧ ಇದೆ: ಸಿದ್ದರಾಮಯ್ಯ

  • ರಸ್ತೆ ಪಕ್ಕದಲ್ಲಿ ಹುಲ್ಲಿಗೆ ಹಚ್ಚಿದ್ದ ಬೆಂಕಿಯಿಂದ ಸುಟ್ಟು ಕರಕಲಾಯಿತು ಬೈಕ್

    ರಸ್ತೆ ಪಕ್ಕದಲ್ಲಿ ಹುಲ್ಲಿಗೆ ಹಚ್ಚಿದ್ದ ಬೆಂಕಿಯಿಂದ ಸುಟ್ಟು ಕರಕಲಾಯಿತು ಬೈಕ್

    – ಬೈಕ್ ಸವಾರನ ಕುಟುಂಬದವರಿಗೆ ಗಾಯ

    ಗದಗ: ರಸ್ತೆ ಪಕ್ಕದ ಒಣ ಹುಲ್ಲಿಗೆ ಬೆಂಕಿ ಹಚ್ಚಿದ್ದರಿಂದ ದಟ್ಟವಾದ ಹೊಗೆಯಲ್ಲಿ ದಾರಿ ಕಾಣದೆ ಬೈಕ್ ಸವಾರ ಸೇರಿ ಕುಟುಂಬದ ಮೂವರು ಬೆಂಕಿನಲ್ಲಿ ಬಿದ್ದ  ಘಟನೆ ಜಿಲ್ಲೆಯ ರೋಣ ಪಟ್ಟಣದ ಬಳಿ ನಡೆದಿದೆ.

    ರೋಣ ಹಾಗೂ ಜಕ್ಕಲಿ ನಡುವೆ ಘಟನೆ ಸಂಭವಿಸಿದೆ. ಬೆಂಕಿ ದುರಂತದಲ್ಲಿ ಬೈಕ್ ಸವಾರ, ಹಿಂಬದಿ ಕುಳಿತ ತಾಯಿ ಮಗುವಿಗೆ ಗಂಭೀರ ಗಾಯಗಳಾಗಿವೆ. ಬೈಕ್ ಸವಾರ 29 ವರ್ಷದ ನಾಗರಾಜ್ ರ್ಯಾವಣಕಿ, 2 ವರ್ಷದ ಮಗು ಲಲಿತಾ ಹಾಗೂ ತಾಯಿ ಅಕ್ಕಮ್ಮ ಅವರಿಗೆ ಗಾಯಗಳಾಗಿವೆ. ಬೈಕ್ ಸುಟ್ಟು ಸಂಪೂರ್ಣ ಕರಕಲಾಗಿದೆ.

    ರಸ್ತೆ ಪಕ್ಕದಲ್ಲಿನ ಹುಲ್ಲಿಗೆ ಯಾರೋ ಬೆಂಕಿ ಹಚ್ಚಿದ್ದರಿಂದ ರಸ್ತೆ ತುಂಬೆಲ್ಲಾ ಹೊಗೆ ಆವರಿಸಿದೆ. ಹೊಗೆಯಲ್ಲೆ ಬೈಕ್ ಮೇಲೆ ಸಂಚಾರ ಮಾಡುವ ವೇಳೆ ರಸ್ತೆ ಕಾಣದೆ ರಸ್ತೆ ಪಕ್ಕ ಬೆಂಕಿನಲ್ಲಿ ಬಿದ್ದಿದ್ದಾರೆ. ಕೂಡಲೆ ಸ್ಥಳಿಯರು ದೌಡಾಯಿಸಿ ಈ ಮೂವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನಿಸಿದ್ದಾರೆ. ನಂತರ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಧಾವಿಸಿ ಬೆಂಕಿ ನಂದಿಸಿದ್ದಾರೆ.

    ಗಾಯಗೊಂಡ ಬೈಕ್ ಸವಾರ, ಮಗು, ತಾಯಿಯನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಗೆ ಕರೆತಂದರೂ ಸಿಬ್ಬಂದಿ ಬೇಗ ಬಾರದ ಹಿನ್ನಲೆ ಅಂಬುಲೆನ್ಸ್ ನಲ್ಲೇ 15 ನಿಮಿಷ ಮಗು, ತಾಯಿ ನರಳಾಡಬೇಕಾಯಿತು. ನಂತರ ಸಂಬಂಧಿಕರೇ ತುರ್ತು ಚಿಕಿತ್ಸಾ ಘಟಕ್ಕೆ ಮಗುವನ್ನು ಎತ್ತಿಕೊಂಡು ಹೋಗಿ ನಂತರ ತಾಯಿಯನ್ನು ಸ್ಟ್ರೇಚ್ಚರ್ ನಲ್ಲಿ ಶಿಫ್ಟ್ ಮಾಡಿದರು ಎಂದು ಗಾಯಾಳು ಕುಟುಂಬದವರು ಆರೋಪಿಸಿದ್ದಾರೆ. ಜಿಮ್ಸ್ ಆಸ್ಪತ್ರೆ ಅವ್ಯವಸ್ಥೆ ವಿರುದ್ಧ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

  • ‘ಬ್ರೇಕ್‍ಫಾಸ್ಟ್ ವಿಥ್ ಲವ್’ – ಕುದುರೆ ಜೊತೆ ಸೊಪ್ಪು ತಿಂದ ಸಲ್ಲು ಭಾಯ್

    ‘ಬ್ರೇಕ್‍ಫಾಸ್ಟ್ ವಿಥ್ ಲವ್’ – ಕುದುರೆ ಜೊತೆ ಸೊಪ್ಪು ತಿಂದ ಸಲ್ಲು ಭಾಯ್

    ಮುಂಬೈ: ಕೊರೊನಾ ಭೀತಿಗೆ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಈ ಸಮಯವನ್ನು ಸೆಲೆಬ್ರಿಟಿಗಳು ಹೇಗೆ ಕಳೆಯುತ್ತಿದ್ದಾರೆ ಎನ್ನುವ ವಿಡಿಯೋಗಳು, ಫೋಟೋಗಳನ್ನು ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಈ ಸಮಯವನ್ನು ನಟ ಸಲ್ಮಾನ್ ಖಾನ್ ಹೇಗೆ ಕಳೆಯುತ್ತಿದ್ದಾರೆ ಎನ್ನುವ ವಿಡಿಯೋವನ್ನು ಅವರೇ ಹಂಚಿಕೊಂಡಿದ್ದಾರೆ.

    ಸದ್ಯ ಸಲ್ಲು ಭಾಯ್ ತಮ್ಮ ಕುಟುಂಬದ ಜೊತೆಗೆ ಮುಂಬೈನ ಪನ್ವೆಲ್‍ನಲ್ಲಿರುವ ತೋಟದ ಮನೆಯಲ್ಲಿ ಸೆಲ್ಫ್ ಕ್ವಾರಂಟೈನ್ ಆಗಿದ್ದಾರೆ. ಈ ಸಮಯವನ್ನು ತಮ್ಮ ಪ್ರೀತಿಪಾತ್ರರ ಜೊತೆ ಕಳೆಯುತ್ತಿರುವ ಸಲ್ಲು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ತೋಟದಲ್ಲಿ ಸಾಕಿದ್ದ ತಮ್ಮ ಕುದುರೆಗೆ ಸೊಪ್ಪು ತಿನ್ನಿಸುತ್ತಾ, ಆ ಸೊಪ್ಪನ್ನು ತಾವೂ ತಿನ್ನುತ್ತಿರುವ ವಿಡಿಯೋವನ್ನು ಸಲ್ಲು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಾರೆ. ನನ್ನ ಪ್ರೀತಿ ಜೊತೆ ಬೆಳಗ್ಗಿನ ತಿಂಡಿ ಎಂದು ವಿಡಿಯೋಗೆ ಕ್ಯಾಪ್ಷನ್ ಕೂಡ ಹಾಕಿ ಖುಷಿಯನ್ನು ಹಂಚಿಕೊಂಡಿದ್ದಾರೆ.

    ಈ ವಿಡಿಯೋ ಸದ್ಯ ಎಲ್ಲೆಡೆ ಸಖತ್ ವೈರಲ್ ಆಗಿದ್ದು, ಸಲ್ಮಾನ್ ಅವರ ಸರಳತೆ, ಪ್ರಾಣಿ ಪ್ರೀತಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಸೊಪ್ಪು ತಿನ್ನುವಾಗ ಇದು ರುಚಿಯಾಗಿದೆ ಎಂದು ಸಲ್ಲು ಭಾಯ್ ಹೇಳುತ್ತಿರುವ ಮಾತುಗಳು ಕೂಡ ವಿಡಿಯೋದಲ್ಲಿ ಸೆರೆಯಾಗಿದೆ.

    https://www.instagram.com/p/B-yf_IjlvK6/?utm_source=ig_embed

    ಸದ್ಯ ತೋಟದ ಮನೆಯಲ್ಲಿಯೇ ಇರುವ ಸಲ್ಮಾನ್ ಅವರು ತಮಗೆ ಭಯವಾಗುತ್ತಿದೆ ಎಂದು ಹೇಳಿಕೊಂಡಿರುವ ವಿಡಿಯೋವೊಂದನ್ನು ಈ ಹಿಂದೆ ಹಂಚಿಕೊಂಡಿದ್ದರು. ನಾನು ನಿರ್ವಾಣ್ ಜೊತೆಗಿದ್ದು, ನಮ್ಮಿಬ್ಬರಿಗೂ ತುಂಬಾ ಭಯವಾಗುತ್ತಿದೆ. ಆದರೆ ಭಯವಾಗುತ್ತಿರುವುದು ನಮಗೆ ಒಳ್ಳೆಯದೇ ಆಗಿದೆ. ಭಯವಾಗುತ್ತಿರುವುದರಿಂದಲೇ ನಾವು ಬದುಕಿದ್ದೇವೆ ಎಂದು ಹೇಳಿಕೊಂಡಿದ್ದರು. ಅಲ್ಲದೆ ಕೊನೆಗೆ ಮಾರಲ್ ಆಫ್ ದಿ ಸ್ಟೋರಿ ಇಸ್, `ಕೆ ಹಮ್ ಡರ್ ಗಯಾ’ ಎಂದು ಹೇಳಿಕೊಂಡಿದ್ದಾರೆ. ನೀವು ಮನೆಯಲ್ಲಿರಿ, ಸುರಕ್ಷಿತವಾಗಿರಿ ಎಂದು ಕೇಳಿಕೊಂಡಿದ್ದರು.

    ಆದರೆ ಮನೆಯಲ್ಲಿ ತಂದೆ ಸಲೀಂ ಖಾನ್ ಒಬ್ಬರೇ ಇದ್ದು, ಅವರನ್ನು ನೋಡಿ 3 ವಾರಗಳಾಯಿತು ಎಂದು ಸಲ್ಮಾನ್ ಅಳಲು ತೋಡಿಕೊಂಡಿದ್ದರು. ಆದರೂ ಸದ್ಯದ ಪರಿಸ್ಥಿತಿಯಲ್ಲಿ ಇದ್ದಲ್ಲೇ ಇರುವುದು ಒಳ್ಳೆಯದು ಎಂದು ಸಲ್ಮಾನ್ ಅಭಿಪ್ರಾಯ ಪಟ್ಟಿದ್ದರು. ಇತ್ತೀಚೆಗಷ್ಟೇ ಸಲ್ಮಾನ್ ಖಾನ್ ಸಿನಿಮಾ ದಿನಗೂಲಿ ಕಾರ್ಮಿಕರಿಗೆ ಸಹಾಯ ಹಸ್ತ ಚಾಚಿದ್ದರು. ಈ ಮೂಲಕ ಇತರರಿಗೆ ಮಾದರಿಯಾಗಿದ್ದರು. ಸುಮಾರು 25,000 ಮಂದಿ ಸಿನಿಮಾ ದಿನಗೂಲಿ ಕಾರ್ಮಿಕರ ನೆರವಿಗೆ ನಿಂತಿರುವ ಸಲ್ಲು ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ತಲಾ 3,000 ರೂ. ಹಣವನ್ನು ಕೂಡ ಹಾಕಿದ್ದರು.

  • ಹೊತ್ತಿ ಉರಿದ ಭತ್ತದ ಹುಲ್ಲು- ನದಿಗೆ ಲಾರಿ ಇಳಿಸಿದ ಚಾಲಕ

    ಹೊತ್ತಿ ಉರಿದ ಭತ್ತದ ಹುಲ್ಲು- ನದಿಗೆ ಲಾರಿ ಇಳಿಸಿದ ಚಾಲಕ

    ಹಾಸನ: ಭತ್ತದ ಹುಲ್ಲು ತುಂಬಿಕೊಂಡು ಹೋಗುತ್ತಿದ್ದ ಲಾರಿಗೆ ವಿದ್ಯುತ್ ತಂತಿ ಸ್ಪರ್ಶವಾಗಿ ಹುಲ್ಲು ಹೊತ್ತಿ ಉರಿದಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದ ಘಟನೆ ಜಿಲ್ಲೆ ಅರಕಲಗೂಡು ತಾಲೂಕಿನ ಚೌರಗಲ್ ಬಳಿ ನಡೆದಿದೆ.

    ಚಾಲಕ ಲಾರಿಯಲ್ಲಿ ಭತ್ತದ ಹುಲ್ಲು ತುಂಬಿಕೊಂಡು ಬರುತ್ತಿದ್ದನು. ಆದರೆ ಚೌರಗಲ್ ಬಳಿ ವಿದ್ಯುತ್ ಸ್ಪರ್ಶದಿಂದ ಭತ್ತದ ಹುಲ್ಲು ಹೊತ್ತಿಕೊಂಡು ಧಗಧಗ ಉರಿಯಲಾರಂಭಿಸಿದೆ. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ ಚಾಲಕನಿಗೆ ಬೆಂಕಿ ಹೊತ್ತಿರುವ ಬಗ್ಗೆ ತಿಳಿಸಿದ್ದಾರೆ. ತಕ್ಷಣ ಚಾಲಕ ಹೆಚ್ಚಿನ ಅನಾಹುತ ತಪ್ಪಿಸಲು ಲಾರಿಯನ್ನು ಸಮೀಪದಲ್ಲಿ ಹರಿಯುತ್ತಿದ್ದ ಹೇಮಾವತಿ ನದಿಗೆ ಇಳಿಸಿದ್ದಾನೆ.

    ನಂತರ ಚಾಲಕ ಲಾರಿಯಿಂದ ಜಿಗಿದು ದಡಕ್ಕೆ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಬಗ್ಗೆ ಮಾಹಿತಿ ತಿಳಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಚಾಲಕನ ಸಮಯ ಪ್ರಜ್ಞೆಯಿಂದ ಬೆಂಕಿ ಹೊತ್ತಿದ್ದ ಲಾರಿಯನ್ನು ಹೇಮಾವತಿ ನದಿಗೆ ಇಳಿಸಿದ್ದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ.

  • ಹುಲ್ಲು ತಿಂದ ಸಿಂಹ – ಸಸ್ಯಾಹಾರಿ ಲಯನ್ ಎಂದ ಜನರು

    ಹುಲ್ಲು ತಿಂದ ಸಿಂಹ – ಸಸ್ಯಾಹಾರಿ ಲಯನ್ ಎಂದ ಜನರು

    ಗಾಂಧಿನಗರ: ಗುಜರಾತಿನ ಗಿರ್ ಕಾಡಿನಲ್ಲಿ ಸಿಂಹವೊಂದು ಹುಲ್ಲು ತಿನ್ನುತ್ತಿರುವ ವಿಡಿಯೋ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಖತ್ ಚರ್ಚೆಯಾಗುತ್ತಿದೆ.

    ಅಪ್ಪಟ ಮಾಂಸಹಾರಿಯಾಗಿರುವ ಸಿಂಹ ಪ್ರಾಣಿಗಳನ್ನು ಬೇಟೆಯಾಡಿ ತಿನ್ನುವುದನ್ನು ನಾವು ನೋಡಿದ್ದೇವೆ. ಆದರೆ ಈ ಸಿಂಹ ಕಾಡಿನಲ್ಲಿ ಇರುವ ಗರಿಕೆ ಹುಲ್ಲು ಮತ್ತು ಗಿಡಮೂಲಿಕೆಯನ್ನು ತಿನ್ನುತ್ತಿರುವುದು ವಿಚಿತ್ರ ಎಂದು ತೋರುತ್ತದೆ.

    ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ನೋಡಿದ ಕೆಲವರು ಆಶ್ಚರ್ಯ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ಸಿಂಹಗಳು ಹುಲ್ಲು ತಿನ್ನುವುದು ಸಹಜ ಎಂದು ಕಮೆಂಟ್ ಮಾಡಿದ್ದಾರೆ. ಇದನ್ನು ಒಪ್ಪಿಕೊಂಡಿರುವ ಪ್ರಾಣಿ ತಜ್ಞರು ಸಿಂಹಗಳು ಹಸಿ ಮಾಂಸವನ್ನು ತಿನ್ನುವುದರಿಂದ ಅದು ಬೇಗ ಜೀರ್ಣವಾಗುವುದಿಲ್ಲ. ಅದ್ದರಿಂದ ಜೀರ್ಣಕ್ರಿಯೇಗೆ ತೊಂದರೆಯಾದಾಗ ಸಿಂಹಗಳು ಹುಲ್ಲನ್ನು ತಿಂದು ಹೊಟ್ಟೆಯನ್ನು ಸ್ವಚ್ಛಮಾಡಿಕೊಳ್ಳುತ್ತವೆ ಎಂದು ಹೇಳಿದ್ದಾರೆ.

    ಎಲ್ಲಾ ಜಾತಿಯ ಮಾಂಸಹಾರಿ ಪ್ರಾಣಿಗಳು ಹುಲ್ಲನ್ನು ತಿನ್ನುತ್ತವೆ. ಏಕೆಂದರೆ ಅವುಗಳು ಬೇಟೆಯಾಡಿ ಹಸಿ ಮಾಂಸವನ್ನು ತಿನ್ನುವ ಕಾರಣ ಅವುಗಳ ದೇಹಕ್ಕೆ ಫೈಬರ್ ಅಂಶವು ಜಾಸ್ತಿ ಸೇರುತ್ತದೆ. ಇದರಿಂದ ಅವು ತಮ್ಮ ಕರುಳುಗಳನ್ನು ಸ್ವಚ್ಛಮಾಡಿಕೊಳ್ಳಲು ಆಗಾಗ ಈ ರೀತಿ ಹುಲ್ಲುಗಳನ್ನು ತಿನ್ನುತ್ತವೆ ಎಂದು ಪ್ರಾಣಿ ತಜ್ಞರು ತಿಳಿಸಿದ್ದಾರೆ.

    https://twitter.com/Adamiington/status/1167016863802355712

    ಈ ವಿಡಿಯೋ ನೋಡಿದ ಕೆಲವರು ವ್ಯಂಗ್ಯವಾಗಿ ಕೂಡ ಕಮೆಂಟ್ ಮಾಡಿದ್ದು, ಪಾಪ ಆದರ ಗಂಡ ಡಯಟ್ ಮಾಡು ಎಂದು ಹೇಳಿರಬೇಕು ಅದಕ್ಕೆ ಅ ಸಿಂಹಿಣಿ ಹಲ್ಲು ತಿನ್ನುತ್ತಿದೆ ಎಂದು ಹೇಳಿದ್ದಾರೆ. ಇನ್ನೂ ಕೆಲವರು ಇದು ಸಸ್ಯಾಹಾರಿ ಸಿಂಹ ಎಂದು ತಮಾಷೆಯಾಗಿ ಕಮೆಂಟ್ ಮಾಡಿದ್ದಾರೆ.

  • ಹುಲ್ಲು ತುಂಬಿದ್ದ ಲಾರಿಗೆ ಬೆಂಕಿ – ಜಮೀನಿನ ತುಂಬಾ ಲಾರಿ ಚಾಲನೆ

    ಹುಲ್ಲು ತುಂಬಿದ್ದ ಲಾರಿಗೆ ಬೆಂಕಿ – ಜಮೀನಿನ ತುಂಬಾ ಲಾರಿ ಚಾಲನೆ

    ಕೊಪ್ಪಳ: ವಿದ್ಯುತ್ ತಂತಿ ತಗುಲಿ ಭತ್ತದ ಹುಲ್ಲು ತುಂಬಿದ್ದ ಲಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ಕೊಪ್ಪಳದಲ್ಲಿ ನೆಡದಿದೆ.

    ಗಂಗಾವತಿ ತಾಲೂಕಿನ ಗುಂಡೂರು ಕ್ಯಾಂಪ್‍ನ ಮಲ್ಲಿಕಾರ್ಜುನ ಕಾಲೋನಿಯಲ್ಲಿ ಈ ಅವಘಡ ಸಂಭವಿಸಿದ್ದು, ಲಾರಿ ಚಾಲಕ ಸಾಯಪ್ಪನ ಜಾಣ್ಮೆ ಮತ್ತು ಧೈರ್ಯದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಜಮೀನಿನಲ್ಲಿ ಹುಲ್ಲು ತುಂಬಿಕೊಂಡು ಬರುವಾಗ ಹೊಲದಲ್ಲಿದ್ದ ವಿದ್ಯುತ್ ಕಂಬದ ತಂತಿಗಳು ಹುಲ್ಲಿಗೆ ತಾಗಿ ಬೆಂಕಿ ಹತ್ತಿಕೊಂಡಿದೆ.

    ತಕ್ಷಣ ಧೃತಿಗೆಡದೆ ಲಾರಿ ಡ್ರೈವರ್ ಜಮೀನಿನ ತುಂಬಾ ಬೆಂಕಿ ಹತ್ತಿದ ಲಾರಿಯನ್ನು ಚಾಲಾಯಿಸಿದ್ದಾನೆ. ಇದರಿಂದ ಗಾಳಿಗೆ ಬೆಂಕಿ ಪ್ರಮಾಣ ಇಳಿಮುಖವಾಗಿ ಬಾರೀ ಅನಾಹುತವನ್ನು ತಪ್ಪಿಸಿದ್ದಾನೆ. ಅಗ್ನಿಶಾಮಕ ಸ್ಥಳಕ್ಕೆ ಆಗಮಿಸುವವರೆಗೂ ಲಾರಿಯನ್ನು ಜಮೀನಿನಲ್ಲಿ ಸುತ್ತು ಹಾಕಿದ್ದಾನೆ.

    ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಸಂಪೂರ್ಣ ಬೆಂಕಿ ನಂದಿಸಿದ್ದಾರೆ. ಲಾರಿ ಡ್ರೈವರ್ ಚಾಣಕ್ಷತನದಿಂದ ಸುಟ್ಟು ಕರಕಲಾಗಬೇಕಿದ್ದ ಲಾರಿ ಸುರಕ್ಷಿತವಾಗಿದೆ. ಈ ಘಟನೆ ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  • ಗ್ರಹಣ ಎಫೆಕ್ಟ್ – ಗರಿಕೆ ತಿಂದು ದೋಷ ನಿವಾರಣೆ ಮಾಡ್ಕೊಂಡ ಶ್ವಾನ!

    ಗ್ರಹಣ ಎಫೆಕ್ಟ್ – ಗರಿಕೆ ತಿಂದು ದೋಷ ನಿವಾರಣೆ ಮಾಡ್ಕೊಂಡ ಶ್ವಾನ!

    ಗದಗ: ದೇಶಾದ್ಯಂತ ಗ್ರಹಣದ ಸುದ್ದಿಯೇ ಇರುವಾಗ ಜಿಲ್ಲೆಯ ಮದಗಾನೂರ ಗ್ರಾಮದ ನಾಯಿಯೊಂದು ಗ್ರಹಣ ಆಚರಣೆ ಮಾಡಿ ಕುತೂಹಲ ಮೂಡಿಸಿದೆ. ಸದ್ಯ ನಾಯಿಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಮನೆಯ ಅಂಗಳದಲ್ಲಿ ನಾಯಿಯ ಮಾಲೀಕರು ಸೇರಿದಂತೆ ಗ್ರಾಮದ ಕೆಲವರು ಗ್ರಹಣದ ಬಗ್ಗೆ ಮಾತನಾಡುತ್ತಾ ಕೂತಿದ್ದರು. ನೆರೆದವರು ಗ್ರಹಣದಿಂದಾಗುವ ಲಾಭ, ನಷ್ಟ, ಪರಿಹಾರಗಳ ಬಗ್ಗೆ ಚರ್ಚೆ ಮಾಡುತ್ತಿದ್ದರು. ಈ ವೇಳೆ ಗ್ರಹಣ ಕಾಲದಲ್ಲಿ ಮನೆಯೊಳಗಿನ ನೀರಿಗೆ ಗರಿಕೆ ಹಾಕಿದರೆ ಅದರಿಂದ ಯಾವುದೇ ರೀತಿಯ ದೋಷ ಬರುವುದಿಲ್ಲ ಎಂಬ ಮಾತಿನ ಮೇಲೆ ಚರ್ಚೆ ಏರ್ಪಟ್ಟಿತ್ತು. ಆಗ ಓರ್ವ ತಮ್ಮ ಮನೆಗೆ ಗರಿಕೆ ತಗೆದುಕೊಂಡು ಹೋಗುತ್ತಿದ್ದನು.

    ವ್ಯಕ್ತಿ ಗರಿಕೆ ತೆಗೆದುಕೊಂಡು ಹೋಗುವಾಗ ಕೈ ಜಾರಿ ಗರಿಕೆ ಎಸಳುಗಳು ಕೆಳಗೆ ಬಿದ್ದಿವೆ. ಕೂಡಲೇ ನಾಯಿಯೊಂದು ಓಡಿ ಬಂದು ಗರಿಕೆಯ ಎಳೆಯನ್ನು ತಿನ್ನುವ ಮೂಲಕ ಅಲ್ಲಿದ್ದವರ ಗಮನ ಸೆಳೆದಿದೆ. ಕೂಡಲೇ ಅಲ್ಲಿನ ಯುವಕರು ಗರಿಕೆ ತಿಂದ ಆ ನಾಯಿಯ ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಿಗೆ ಅಪ್ಲೋಡ್ ಮಾಡಿ ವೈರಲ್ ಮಾಡಿದ್ದಾರೆ.

    ಮನುಷ್ಯರೆಲ್ಲರೂ ತಮ್ಮ ಮನೆಯೊಳಗಿನ ನೀರಿನ ಪಾತ್ರೆ ಸೇರಿದಂತೆ ಇತರೆ ವಸ್ತುಗಳಲ್ಲಿ ಗರಿಕೆ ಹಾಕಿದರೆ ದೋಷ ಹೋಗುತ್ತದೆ ಅನ್ನೋ ನಂಬಿಕೆಯಲ್ಲಿದ್ದರು. ಆದರೆ ಈ ನಾಯಿ ತನ್ನ ಹೊಟ್ಟೆಯೊಳಗೆನೇ ಗರಿಕೆ ಹಾಕಿಕೊಂಡಿದ್ದು, ನಾಯಿ ಮನುಷ್ಯ ಜೀವನಕ್ಕೆ ಹತ್ತಿರವಿದೆಯಾ ಎಂದು ಗ್ರಾಮಸ್ಥರು ಮಾತನಾಡಿಕೊಂಡಿದ್ದಾರೆ.

  • ಜಕ್ಕೂರು ವಿಮಾನ ನಿಲ್ದಾಣದಲ್ಲಿ ಅಗ್ನಿ ಅವಘಡ

    ಜಕ್ಕೂರು ವಿಮಾನ ನಿಲ್ದಾಣದಲ್ಲಿ ಅಗ್ನಿ ಅವಘಡ

    ಬೆಂಗಳೂರು: ಜಕ್ಕೂರು ವಿಮಾನ ನಿಲ್ದಾಣದಲ್ಲಿನ ಒಳ ಹುಲ್ಲಿಗೆ ಬೆಂಕಿ ಹೊತ್ತಿಕೊಂಡಿದೆ.

    ಒಳ ಭಾಗದ ಹುಲ್ಲಿಗೆ ಬೆಂಕಿ ಬಿದ್ದಿದ್ದು, ವಿಮಾನ ನಿಲ್ದಾಣದ ಸುತ್ತಮುತ್ತ ಬೆಂಕಿ ವ್ಯಾಪಿಸಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

    ಬೆಂಕಿ ಬಿದ್ದ ಹಿನ್ನೆಲೆಯಲ್ಲಿ ವಿಐಪಿ ವಿಮಾನಗಳು ಎಚ್‍ಎಎಲ್, ಯಲಹಂಕ ಮತ್ತು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಳಿಯುವಂತೆ ವ್ಯವಸ್ಥೆ ಮಾಡಲಾಗಿದೆ.