Tag: Gratitude

  • 85 ಗಂಟೆಯಲ್ಲಿ ಮೈಸೂರಿನ ಅತ್ಯಾಚಾರ ಪ್ರಕರಣ ಭೇದಿಸಿದ ಪೊಲೀಸರಿಗೆ ನನ್ನ ಕೃತಜ್ಞತೆ: ಅರಗ ಜ್ಞಾನೇಂದ್ರ

    85 ಗಂಟೆಯಲ್ಲಿ ಮೈಸೂರಿನ ಅತ್ಯಾಚಾರ ಪ್ರಕರಣ ಭೇದಿಸಿದ ಪೊಲೀಸರಿಗೆ ನನ್ನ ಕೃತಜ್ಞತೆ: ಅರಗ ಜ್ಞಾನೇಂದ್ರ

    – ಕುಸಿದು ಬಿದ್ದ ಸಿಬ್ಬಂದಿ, ಮಾನವೀಯತೆ ಮೆರೆದ ಚಿಕ್ಕಮಗಳೂರು ಎಸ್ಪಿ

    ಚಿಕ್ಕಮಗಳೂರು: 85 ಗಂಟೆಯಲ್ಲಿ ಮೈಸೂರಿನ ಅತ್ಯಾಚಾರ ಪ್ರಕರಣ ಭೇದಿಸಿದ ಪೊಲೀಸರಿಗೆ ನನ್ನ ಕೃತಜ್ಞತೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರಶಂಸಿದ್ದಾರೆ.

    ಜಿಲ್ಲೆಯ ಕಡೂರಿನಲ್ಲಿರುವ ಪೊಲೀಸ್ ತರಬೇತಿ ಶಾಲೆಯಲ್ಲಿ 5ನೇ ತಂಡ ತರಬೇತಿ ಪಡೆದು ನಿರ್ಗಮಿತ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅವರು ಮಾಧ್ಯಮಗಳ ಜೊತೆ ಮೈಸೂರಿನ ಗ್ಯಾಂಗ್ ರೇಪ್ ವಿಚಾರವಾಗಿ ಮಾತನಾಡಿದ್ದು, ಮೈಸೂರು ಅತ್ಯಾಚಾರ ಪ್ರಕರಣದಲ್ಲಿ ಯಾವ ಸಾಕ್ಷಿಗಳು ಇಲ್ಲ. ತೊಂದರೆಗೊಳಗಾದವರು ಹೇಳಿಕೆ ನೀಡಿಲ್ಲ. ಆದರೂ ನಮ್ಮ ಪೊಲೀಸರು ಪ್ರಕರಣವನ್ನು ಹೇಗೆ ಭೇದಿಸುತ್ತಾರೆ ಎಂದು ಅನ್ನಿಸಿತ್ತು. ಮಂತ್ರಿಯಾಗಿ ನಾನೇ ಕುತೂಹಲದಿಂದ ವೀಕ್ಷಿಸುತ್ತಿದ್ದೆ. ನಮ್ಮ ಪೊಲೀಸರು 85 ಗಂಟೆಯಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಆಗ ನನ್ನ ಹೃದಯ ತುಂಬಿ ಬಂತು ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ.

    ನಮ್ಮ ಪೊಲೀಸರ ಇಮೇಜ್ ಜಾಸ್ತಿಯಾಯ್ತು. ನಮ್ಮ ಪೊಲೀಸ್ ವ್ಯವಸ್ಥೆ ಅತ್ಯಂತ ಬಿಗಿಯಾಗಿದೆ. ವೈಜ್ಞಾನಿಕವಾಗಿ ಇಂತಹ ಪ್ರಕರಣಗಳನ್ನು ಪತ್ತೆ ಹಚ್ಚುವ ಎಲ್ಲಾ ಕಲೆ ನಮ್ಮ ಪೊಲಿಸರಿಗೆ ಕರಗತವಾಗಿದೆ. ನಮ್ಮ ಸೇನಾ ಪಡೆ ಜಗತ್ತಿನ ಅತ್ಯಂತ ಮೂರನೇ ದೊಡ್ಡ ಪಡೆ. ಜಗತ್ತಿನಲ್ಲಿ ನಮ್ಮ ಪೊಲೀಸ್ ಪಡೆಗೆ ಒಳ್ಳೆಯ ಹೆಸರಿದೆ. ಅದರಲ್ಲೂ ನಮ್ಮ ಕರ್ನಾಟಕದ ಪೊಲೀಸರಿಗೆ ಇದೆ ಎಂದು ತರಬೇತಿ ಪಡೆದ ನೂತನ ನಿರ್ಗಮಿತ ಪೊಲೀಸರಿಗೆ ಹುರಿದುಂಬಿಸಿದ್ದಾರೆ.ಇದನ್ನೂ ಓದಿ:KSRTC ಬಸ್ ತಡೆದು ವಿದ್ಯಾರ್ಥಿಗಳು, ಜನರಿಂದ ಪ್ರತಿಭಟನೆ

    ಮೈಸೂರು ಪ್ರಕರಣದ ಎಲ್ಲಾ ಅಪರಾಧಿಗಳನ್ನು ಪೊಲೀಸರು ಬಂಧಿಸುತ್ತಿದ್ದಾರೆ. ಅವರಿಗೆ ಶಿಕ್ಷೆ ಆಗುವಂತೆ ನಮ್ಮ ಪೊಲೀಸರು ವಿಶೇಷ ಶ್ರಮ ವಹಿಸಿದ್ದಾರೆ. ಸರ್ಕಾರ ಕೂಡ ಅದರ ಬಗ್ಗೆ ವಿಶೇಷವಾದ ಆದ್ಯತೆ ನೀಡಿದೆ. ಮೈಸೂರಿನ ಎರಡೂ ಪ್ರಕರಣಗಳನ್ನು ಕಡಿಮೆ ಸಮಯದಲ್ಲಿ ಭೇದಿಸಿದ ಎಲ್ಲಾ ಪೊಲೀಸ್ ತಂಡಕ್ಕೆ ನನ್ನ ಕೃತಜ್ಞತೆ ಎಂದು ಪ್ರಶಂಸಿದ್ದಾರೆ.

    ಯಾರು ಅಪರಾಧ ಮಾಡುತ್ತಾರೋ ಅವರಿಗೆ ದೊಡ್ಡ ಸಂದೇಶ ಹೋಗಿದೆ. ಏನಾದರೂ ಮಾಡಿ ಹೇಗಾದರೂ ಬಚಾವ್ ಆಗಬಹುದು ಅನ್ನೋದು ಆಗಲ್ಲ. ಪೊಲೀಸರು ಅದರ ಹಿಂದೆ ಬೀಳುತ್ತಾರೆ. ಅದನ್ನು ಯಶಸ್ವಿಯಾಗಿ ಭೇದಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ..ಇದನ್ನೂ ಓದಿ:ಚುನಾವಣೆ ಪ್ರಚಾರದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ ಕಟೀಲ್

    ಸಂತ್ರಸ್ತೆ ಈಗ ಹೇಳಿಕೆ ಕೊಡುವ ಸ್ಥಿತಿಯಲ್ಲಿ ಇಲ್ಲ. ಇಂತಹಾ ಸಮಯದಲ್ಲಿ ಹೆಚ್ಚು ಒತ್ತಡ ಹಾಕುವುದು ಸರಿಯಲ್ಲ. ನಮ್ಮ ಮಹಿಳಾ ಪೊಲೀಸ್ ಅಧಿಕಾರಿಗಳು ವಿಶೇಷ ಪ್ರಯತ್ನ ಮಾಡಿದರು. ಸ್ವಲ್ಪ ಸಮಯದ ನಂತರ ಹೇಳಬಹುದು. ಮಣಿಪಾಲ್ ಘಟನೆಯಲ್ಲಿ ಹೇಳಿಕೆ ಕೊಡುವುದಿಲ್ಲ ಎಂದವರು ಮೂರು ತಿಂಗಳ ಬಳಿಕ ಹೇಳಿಕೆ ನೀಡಿದ್ದರು. ಮನವೊಲಿಸುವ ಪ್ರಯತ್ನ ನಡೆಯುತ್ತಿದೆ ಎಂದಿದ್ದಾರೆ.

    ಈ ಕಾರ್ಯಕ್ರಮದಲ್ಲಿ ಜ್ಞಾನೇಂದ್ರ ಅವರು ಭಾಷಣ ಮಾಡುವ ವೇಳೆ ವೇದಿಕೆ ಮುಂಭಾಗ ಎಡ ಹಾಗೂ ಬಲಭಾಗದಲ್ಲಿ ನಿಂತಿದ್ದ ಪೊಲೀಸರಲ್ಲಿ ಮೈಸೂರಿನ ಅಶ್ವದಳದ ಮೈಲುದ್ದೀನ್ ಎಂಬ ಸಿಬ್ಬಂದಿ ಬಿಸಿಲಿಗೆ ತಲೆಸುತ್ತು ಬಂದು ಬಿದ್ದರು. ಕೂಡಲೇ ಚಿಕ್ಕಮಗಳೂರು ಎಸ್ಪಿ ಅಕ್ಷಯ್ ವೇದಿಕೆ ಮೇಲಿಂದ ಎದ್ದು ಬಂದು ಸಿಬ್ಬಂದಿಯನ್ನು ಎತ್ತಿ ನೀರು ಕುಡಿಸಿ ಆಂಬುಲೆನ್ಸ್ ಗೆ ಕಾಲ್ ಮಾಡಿದ್ದಾರೆ. ಸ್ವತಃ ಎಸ್ಪಿಯೇ ಆ ಸಿಬ್ಬಂದಿಯನ್ನು ಎತ್ತಿಕೊಂಡು ಹೋಗಿ ಆಂಬುಲೆನ್ಸ್ ನಲ್ಲಿ ಕೂರಿಸಿದರು. ಅಲ್ಲಿವರೆಗೆ ಜ್ಞಾನೇಂದ್ರ ಅವರು ಕೂಡ ಮಾತು ನಿಲ್ಲಿಸಿದ್ದರು..ಇದನ್ನೂ ಓದಿ:ಬಿಬಿಎಂಪಿ ಮುಖ್ಯ ಆಯುಕ್ತರಿಗೆ ದೂರು ನೀಡಿದ ಎನ್.ಆರ್.ರಮೇಶ್

  • ನಿಮ್ಮ ಪ್ರೀತಿಯೇ ನನಗೆ ಆಸರೆ, ರಕ್ಷಾಕವಚ – ಅಭಿಮಾನಿಗಳ ಬಗ್ಗೆ ಮೇಘನಾ ಮಾತು

    ನಿಮ್ಮ ಪ್ರೀತಿಯೇ ನನಗೆ ಆಸರೆ, ರಕ್ಷಾಕವಚ – ಅಭಿಮಾನಿಗಳ ಬಗ್ಗೆ ಮೇಘನಾ ಮಾತು

    – ನಾನು ಅತ್ತಾಗ ನೀವು ಅತ್ತಿದ್ದೀರಿ

    ಬೆಂಗಳೂರು: ನಿಮ್ಮ ಪ್ರೀತಿಯೇ ನನಗೆ ಆಸರೆ, ರಕ್ಷಾಕವಚ ಎಂದು ಟ್ವೀಟ್ ಮಾಡುವ ಮೂಲಕ ದಿವಂಗತ ಚಿರಂಜೀವಿ ಸರ್ಜಾ ಅವರ ಪತ್ನಿ ಹಾಗೂ ನಟಿ ಮೇಘನಾ ರಾಜ್ ಅವರು ತಮ್ಮ ಕಷ್ಟದ ದಿನಗಳಲ್ಲಿ ಜೊತೆಗಿದ್ದ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

    ಇದೇ ಜೂನ್ 7ರಂದು ಹೃದಯಾಘಾತದಿಂದ ಸಾವನ್ನಪ್ಪಿದ್ದ ತನ್ನ ಪತಿ ಚಿರು ನೆನಪಿನಲ್ಲಿ ಗುರುವಾರ ಅವರ ಬಗ್ಗೆ ಟ್ವೀಟ್ ಮಾಡಿದ್ದ ಮೇಘನಾ, ಇಂದು ಕಷ್ಟದ ಕಾಲದಲ್ಲಿ ಸ್ಪಂದಿಸಿದ, ಆಕೆಯ ನೋವಿನಲ್ಲಿ ಜೊತೆಗೆ ಇದ್ದ ಅಭಿಮಾನಿಗಳ ಬಗ್ಗೆ ಟ್ವೀಟ್ ಮಾಡಿದ್ದಾರೆ. ಈ ಮೂಲಕ ನಾನು ಅತ್ತಾಗ ನೀವು ಅತ್ತಿದ್ದೀರಾ ನಿಮಗೆ ಧನ್ಯವಾದಗಳು ಎಂದು ಹೇಳಿದ್ದಾರೆ.

    ಅಭಿಮಾನಿಗಳಿಗಾಗಿ ಟ್ವೀಟ್ ಮಾಡಿರುವ ಮೇಘನಾ, ಕಳೆದ ಕೆಲವು ದಿನಗಳು ನನ್ನ ಜೀವನದಲ್ಲಿ ಅತಿ ಕಠಿಣ ಹಾಗೂ ಆಘಾತಕರ. ಕಲ್ಪನೆಗೂ ಮೀರಿ ಅದ್ಭುತವಾಗಿದ್ದ ನನ್ನ ಸುಂದರ ಲೋಕ ಅಲ್ಲೋಲ ಕಲ್ಲೋಲ ಆದಾಗ, ಇನ್ನು ನನಗಾಗಿ ಏನೂ ಇಲ್ಲವೆಂದು ಅಂದುಕೊಂಡಾಗ ಕಗ್ಗತ್ತಲೆಯಲ್ಲಿ ಆಶಾದೀಪದ ಬೆಳಕಿನಂತೆ ಕಂಡಿದ್ದು, ನನ್ನ ಕುಟುಂಬ, ಸ್ನೇಹಿತರು, ಚಿತ್ರರಂಗದ ಸಹಪಾಠಿಗಳು. ಎಲ್ಲರಿಗಿಂತ ಹೆಚ್ಚಾಗಿ ಅಭಿಮಾನಿಗಳು ತೋರಿದ ಪ್ರೀತಿ, ವಾತ್ಸಲ್ಯ, ಮಮತೆ. ನಿಮ್ಮ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ನಿಮ್ಮ ಅಭಿಮಾನಕ್ಕೆ ಕೃತಜ್ಞತೆ ಸಲ್ಲಿಸಲು ಒಂದು ಜನುಮ ಸಾಲದು. ಆ ನಿಮ್ಮ ಪ್ರೀತಿಯೇ ನನಗೆ ಆಸರೆ ರಕ್ಷಾಕವಚ ಎಂದು ಬರೆದುಕೊಂಡಿದ್ದಾರೆ.

    ಇದರ ಜೊತೆಗೆ ನಾನು ಅತ್ತಾಗ ನೀವು ನನ್ನೊಂದಿಗೆ ಕಣ್ಣೀರು ಹಾಕಿದ್ದೀರಿ, ನನ್ನ ನೋವನ್ನು ನೀವು ಉಂಡಿದ್ದೀರಿ, ನನ್ನಷ್ಟೇ ಚಿರು ಅವರನ್ನು ಪ್ರೀತಿಸಿದ್ದೀರಿ. ನಿಮ್ಮ ಆ ಪ್ರೀತಿಗೆ ನಾನು ಚಿರಋಣಿ. ಇಂತಹ ನೋವಿನ ಸಮಯದಲ್ಲಿ ನಿಮ್ಮ ಅಭಿಮಾನ, ಚಿತ್ರರಂಗದ ಬೆಂಬಲ ಎಲ್ಲವೂ ಚಿರು ಸಂಪಾದಿಸಿದ ಪ್ರೀತಿಯ ರಾಶಿಯ ಗುರುತು. ನಿಮ್ಮ ಅಭಿಮಾನ ಗೆದ್ದ ಅವರಿಗಿಂತ ಸಿರಿವಂತ ಇನ್ಯಾರು ಇಲ್ಲ. ಚಿರು ಅವರನ್ನು ನಿಮ್ಮ ಮನೆ ಮಗನಂತೆ ಭಾವಿಸಿ ಇದ್ದಷ್ಟು ದಿನ ರಾಜನಂತೆ ಬದುಕ್ಕಿದ್ದ ಚಿರು ಅವರನ್ನು ಸಾಲು ಸಾಲಾಗಿ ಬಂದು ಪ್ರೀತಿಯಿಂದ ಮಹಾರಾಜನಂತೆ ಕಳುಹಿಸಿಕೊಟ್ಟ ನಿಮಗೆಲ್ಲರಿಗೂ ನನ್ನ ನಮಸ್ಕಾರಗಳು. ಆ ಮಹಾರಾಜ ನನ್ನ ಮಡಿಲಿಗೆ ಪುಟ್ಟ ಪುಟ್ಟ ಹೆಜ್ಜೆ ಇಟ್ಟು ತಿರುಗಿ ಬರುವನು ಎಂದು ಹೇಳಿದ್ದಾರೆ.

    ಗುರುವಾರ ಚಿರು ಬಗ್ಗೆ ಬರೆದುಕೊಂಡಿದ್ದ ಮೇಘನಾ, ನಾನು ಪದೇ ಪದೇ ಪ್ರಯತ್ನ ಮಾಡುತ್ತಲೇ ಇದ್ದೇನೆ. ಆದರೆ ನಿನ್ನ ಬಗ್ಗೆ ಹೇಳಲು ಪದಗಳು ಸಾಲುತ್ತಿಲ್ಲ. ಪ್ರಪಂಚದಲ್ಲಿರುವ ಎಲ್ಲ ಪದಗಳು ನೀನು. ನನಗೆ ಏನಾಗಬೇಕು ಎಂಬುದನ್ನು ವಿವರಿಸಲು ಸಾಕಾಗುವುದಿಲ್ಲ. ನನ್ನ ಸ್ನೇಹಿತ, ನನ್ನ ಪ್ರಿಯತಮ, ನನ್ನ ಸಂಗಾತಿ, ನನ್ನ ಮಗು, ನನ್ನ ಆತ್ಮವಿಶ್ವಾಸ, ನನ್ನ ಪತಿ ಇದೆಲ್ಲದಕ್ಕಿಂತ ಮಿಗಿಲು ನೀನು. ನೀನು ನನ್ನ ಆತ್ಮದ ಒಂದು ಭಾಗ ಎಂದು ಭಾವನಾತ್ಮಕವಾಗಿ ಹೇಳಿದ್ದರು.

    ಜೂನ್ 7ರಂದು ಮಧ್ಯಾಹ್ನದವರೆಗೂ ಚೆನ್ನಾಗಿದ್ದ ಚಿರು, ನಂತರ ಸುಮಾರು 3.48ರ ಸಮಯಕ್ಕೆ ಹೃದಯಾಘಾತದಿಂದ ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಇಳಿವಯಸ್ಸಿನಲ್ಲಿ ಬಾರದ ಲೋಕಕ್ಕೆ ಬಹಬೇಗ ತೆರಳಿದ ಚಿರುಗಾಗಿ ಇಡೀ ಕರುನಾಡೇ ಕಂಬನಿ ಮಿಡಿದಿತ್ತು. ಚಿರು ಅವರು ಅಂತ್ಯಕ್ರಿಯೆ ಕನಕಪುರ ರಸ್ತೆಯಲ್ಲಿ ಇರುವ ತಮ್ಮ ಧ್ರವ ಸರ್ಜಾ ಅವರ ತೋಟದ ಮನೆಯಲ್ಲಿ ನಡೆದಿತ್ತು.