Tag: gravem public tv

  • ಸಿದ್ದರಾಮಯ್ಯ ವಿರುದ್ಧ ದೇವೇಗೌಡರಿಂದ ರಾಹುಲ್‍ಗೆ ದೂರು

    ಸಿದ್ದರಾಮಯ್ಯ ವಿರುದ್ಧ ದೇವೇಗೌಡರಿಂದ ರಾಹುಲ್‍ಗೆ ದೂರು

    ಬೆಂಗಳೂರು: ಮೈತ್ರಿ ಸರ್ಕಾರದ ಮೇಲೆ ಗುರು-ಶಿಷ್ಯರ ಪ್ರತಿಷ್ಠೆಯ ಫೈಟ್ ನಡೆಯುತ್ತಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರು ದೂರು ನೀಡಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಸಂಪುಟ ಪುನರ್ ರಚನೆಗೆ ಸಿದ್ದರಾಮಯ್ಯ ಕಿರಿಕ್ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಪರಿಸ್ಥಿತಿ ನಿಯಂತ್ರಿಸದಿದ್ದರೆ ಮೈತ್ರಿ ಅಂತ್ಯ ಆಗಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಅಪಾಯ ತಂದೊಡ್ಡುವ ಮಿತ್ರಪಕ್ಷಗಳ ‘ಹಿತಶತ್ರು’ಗಳನ್ನು ನಿವಾರಿಸಿಕೊಳ್ಳಿ ಎಂದು ದೇವೇಗೌಡರು ರಾಹುಲ್ ಗಾಂಧಿ ಹಾಗೂ ಅಹ್ಮದ್ ಪಟೇಲ್‍ಗೆ ದೂರು ಕೊಟ್ಟಿದ್ದಾರೆ. ಈ ಮೂಲಕ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರೇ ಅಡ್ಡಗಾಲಾಗಿದ್ದಾರೆ ಎಂದು ದೂರು ಕೊಟ್ಟಿದ್ದಾರೆ.

    ಜೆಡಿಎಸ್ ಕೋಟಾದ 2 ಸಚಿವ ಸ್ಥಾನ ಪಕ್ಷೇತರರಿಗೆ ಬಿಟ್ಟುಕೊಡುವಂತೆ ಸಿದ್ದರಾಮಯ್ಯ ಹೇಳಿಕೆಗೆ ಗೌಡರು ಕೆಂಡಾಮಂಡಲರಾಗಿದ್ದು, ಸಚಿವ ಸಂಪುಟ ವಿಸ್ತರಣೆ ವೇಳೆ ಜೆಡಿಎಸ್ ಕೋಟಾ ಬಿಟ್ಟುಕೊಡಲ್ಲ. ಜೆಡಿಎಸ್‍ನಿಂದ ಮುಸ್ಲಿಮರು, ದಲಿತರಿಗೆ ಸಚಿವ ಸ್ಥಾನ ಕೊಡಬೇಕು. ಹಾಗಾಗಿ, ಜೆಡಿಎಸ್ ಕೋಟಾ ಬಿಟ್ಟುಕೊಡಲ್ಲ ಎಂದು ದೇವೇಗೌಡರು ತಿಳಿಸಿದ್ದಾರೆ.

    ಇದೇ ವೇಳೆ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಬಗ್ಗೆಯೂ ದೇವೇಗೌಡರು ಅಸಮಾಧಾನ ವ್ಯಕ್ತಪಡಿಸಿದ್ದು, ಈ ಹಿಂದೆ ರಾಹುಲ್‍ಗೆ ಬರೆದಿದ್ದ ಪತ್ರವನ್ನು ನೆನಪಿಸಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳು ತಿಳಿಸಿವೆ.

    ರಾಜ್ಯ ಸಚಿವ ಸಂಪುಟ ಬುಧವಾರ ವಿಸ್ತರಣೆಯಾಗುವುದಾಗಿ ನಿಗದಿಯಾಗಿತ್ತು. ಆದರೆ ಸೋಮವಾರ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ಅವರ ನಿಧನರಾದ ಹಿನ್ನೆಲೆಯಲ್ಲಿ ಇದೀಗ ಶುಕ್ರವಾರಕ್ಕೆ ಮುಂದೂಡಲಾಗಿದೆ.

  • ಸಮಾಧಿ ಮಾಡಲಾಗಿದ್ದ ನವಜಾತ ಶಿಶುವನ್ನ ಜೀವಂತವಾಗಿ ಹೊರತೆಗೆದ್ರು!

    ಸಮಾಧಿ ಮಾಡಲಾಗಿದ್ದ ನವಜಾತ ಶಿಶುವನ್ನ ಜೀವಂತವಾಗಿ ಹೊರತೆಗೆದ್ರು!

    ಭೋಪಾಲ್: ಸ್ಮಶಾನದಲ್ಲಿ ಸಮಾಧಿ ಮಾಡಲಾಗಿದ್ದ ಮಗುವನ್ನ ಜೀವಂತವಾಗಿ ಹೊರತೆಗೆದಿರೋ ಘಟನೆ ಮಂಗಳವಾರದಂದು ಮಧ್ಯಪ್ರದೇಶದಲ್ಲಿ ನಡೆದಿದೆ.

    ಇಲ್ಲಿನ ಘಸ್ ಗ್ರಾಮದ ಸ್ಮಶಾನದಲ್ಲಿ ಮಗುವೊಂದು ಅಳೋದನ್ನ ಕೇಳಿ ಕೆಲವು ಮಕ್ಕಳು ಈ ವಿಷಯವನ್ನ ತಿಳಿಸಿದ್ದಾರೆ. ನಂತರ ಗಂಡ ಹೆಂಡತಿ ಇಬ್ಬರು ಸ್ಥಳಕ್ಕೆ ಹೋಗಿ ನೋಡಿದಾಗ ಮಗು ಪತ್ತೆಯಾಗಿದೆ.

    ಸಣ್ಣ ದಿಬ್ಬವೊಂದರಿಂದ ಮಗುವಿನ ಅಳು ಕೇಳಿಬರ್ತಿದೆ ಎಂದು ಕೇಳಿ 32 ವರ್ಷದ ಶೇರ್ ಸಿಂಗ್ ಶಾಕ್ ಆಗಿದ್ರು. ನಂತರ ಅವರ ಹೆಂಡತಿ ಸುನಿತಾ ಜೊತೆ ಸ್ಥಳಕ್ಕೆ ಹೋಗಿದ್ರು.”ನಾವು ಕೈಯಿಂದ ಮಣ್ಣನ್ನು ತೆಗೆಯಲು ಶುರು ಮಾಡಿದೆವು. ಒಳಗೆ ಅಳುತ್ತಿದ್ದ ನವಜಾತ ಗಂಡು ಮಗು ಸಿಕ್ಕಿತು. ನಂತರ ಒಜ್ಹಾರ್ ಪೊಲೀಸರಿಗೆ ಈ ಘಟನೆ ಬಗ್ಗೆ ಮಾಹಿತಿ ನೀಡಿದ್ವಿ” ಎಂದು ಶೇರ್ ಸಿಂಗ್ ಹೇಳಿದ್ದಾರೆ.

    ಮಗುವನ್ನ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗ್ತಿದೆ. ಮಗುವಿಗೆ ಚಿಕಿತ್ಸೆ ನೀಡ್ತಿರೋ ಮಕ್ಕಳ ತಜ್ಞರಾದ ರೂಪ್ ಸಿಂಗ್ ಭದಾಲೆ ಈ ಬಗ್ಗೆ ಹೇಳಿಕೆ ನೀಡಿದ್ದು, ಮಗು ಜನಿಸಿ 10 ದಿನಗಳಾಗಿರಬಹುದು. ಮಗುವಿಗೆ ಹುಳುಗಳು ಕಚ್ಚಿದ್ದು, ಜ್ವರ ಹಾಗೂ ನೆಗಡಿಯಿಂದ ಬಳಲುತ್ತಿದೆ. ಆದ್ರೆ ಮಗುವಿನ ಪ್ರಾಣಕ್ಕೆ ಯಾವುದೇ ಅಪಾಯವಿಲ್ಲ ಎಂದಿದ್ದಾರೆ. ಮಗುವಿನ ಪೋಷಕರ ಬಗ್ಗೆ ಮಾಹಿತಿ ಕಲೆ ಹಾಕಲು ಆಸ್ಪತ್ರೆಗಳ ದಾಖಲೆಗಳನ್ನ ಪರಿಶೀಲಿಸುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

    ಸದ್ಯ ಮೂವರು ಹೆಣ್ಣು ಮಕ್ಕಳನ್ನ ಹೊಂದಿರೋ ಶೇರ್ ಸಿಂಗ್ ದಂಪತಿ, ಈ ಮಗುವನ್ನ ಆ ದೇವರೇ ನಮಗಾಗಿ ಕಳಿಸಿದ್ದಾನೆ ಎಂದು ಭಾವಿಸಿದ್ದು, ಮಗುವನ್ನ ದತ್ತು ಪಡೆಯಲು ಇಚ್ಛಿಸಿದ್ದಾರೆ ಎಂದು ವರದಿಯಾಗಿದೆ.