Tag: Greece

  • ಸಲಿಂಗ ವಿವಾಹಕ್ಕೆ ಗ್ರೀಸ್‌ ಗ್ರೀನ್‌ ಸಿಗ್ನಲ್‌ – ಕಾನೂನುಬದ್ಧಗೊಳಿಸಿದ ಮೊದಲ ರಾಷ್ಟ್ರ

    ಸಲಿಂಗ ವಿವಾಹಕ್ಕೆ ಗ್ರೀಸ್‌ ಗ್ರೀನ್‌ ಸಿಗ್ನಲ್‌ – ಕಾನೂನುಬದ್ಧಗೊಳಿಸಿದ ಮೊದಲ ರಾಷ್ಟ್ರ

    ಅಥೆನ್ಸ್‌: ಆರ್ಥೊಡಾಕ್ಸ್‌ ಕ್ರಿಶ್ಚಿಯನ್‌ ಬಹುಸಂಖ್ಯಾತರಿರುವ ಗ್ರೀಸ್‌ನಲ್ಲಿ (Greece) ಸಲಿಂಗ ವಿವಾಹವನ್ನು (Same-Sex Marriage) ಕಾನೂನುಬದ್ಧಗೊಳಿಸಲಾಗಿದೆ. ಸಲಿಂಗ ವಿವಾಹ ಮಾನ್ಯಗೊಳಿಸಿದ ಜಗತ್ತಿನ ಮೊದಲ ದೇಶವಾಗಿ ಗ್ರೀಸ್‌ ಹೊರಹೊಮ್ಮಿದೆ.

    ಸಂಸತ್ತಿನಲ್ಲಿ, ಸಲಿಂಗ ದಂಪತಿಯು ಮಕ್ಕಳನ್ನು ದತ್ತು ತೆಗೆದುಕೊಳ್ಳಲು ಕಾನೂನುಬದ್ಧವಾಗಿ ಅನುಮತಿಸಲಾಗಿದೆ. ಈ ಹೊಸ ಕಾನೂನು ಅಸಮಾನತೆಯನ್ನು ನಿರ್ಮೂಲನೆ ಮಾಡುತ್ತದೆ ಎಂದು ಪ್ರಧಾನ ಮಂತ್ರಿ ಕಿರಿಯಾಕೋಸ್ ಮಿಟ್ಸೊಟಾಕಿಸ್ ತಿಳಿಸಿದ್ದಾರೆ. ಇದನ್ನೂ ಓದಿ: ಮುಸ್ಲಿಂ ರಾಷ್ಟ್ರದಲ್ಲಿ ಹಿಂದೂ ದೇಗುಲ ಉದ್ಘಾಟಿಸಿದ PM ಮೋದಿ- ಫೋಟೋಗಳಲ್ಲಿ ನೋಡಿ

    ಆದರೆ ಈ ಕಾನೂನಿಗೆ ಆರ್ಥೊಡಾಕ್ಸ್‌ ಚರ್ಚ್‌ ನೇತೃತ್ವದಲ್ಲಿ ತೀವ್ರ ಪ್ರತಿರೋಧ ವ್ಯಕ್ತವಾಗಿದೆ. ಇದರ ವಿರುದ್ಧ ಅಥೆನ್ಸ್‌ನಲ್ಲಿ ಪ್ರತಿಭಟನಾ ರ‍್ಯಾಲಿ ಕೂಡ ನಡೆಸಲಾಗಿದೆ. ರಾಜಧಾನಿಯ ಸಿಂಟಾಗ್ಮಾ ಸ್ಕ್ವೇರ್‌ನಲ್ಲಿ ಅನೇಕರು ಬ್ಯಾನರ್‌, ಶಿಲುಬೆ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಬೈಬಲ್‌ ಸಾಲುಗಳನ್ನು ಸಹ ವಾಚಿಸಿದ್ದಾರೆ.

    ಆರ್ಥೊಡಾಕ್ಸ್ ಚರ್ಚ್‌ನ ಮುಖ್ಯಸ್ಥ ಆರ್ಚ್‌ಬಿಷಪ್ ಐರೋನಿಮೋಸ್, ಈ ಕ್ರಮವು ತಾಯ್ನಾಡಿನ ಸಾಮಾಜಿಕ ಒಗ್ಗಟ್ಟನ್ನು ಭ್ರಷ್ಟಗೊಳಿಸುತ್ತದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. 300 ಸದಸ್ಯ ಬಲದ ಸಂಸತ್ತಿನಲ್ಲಿ ಮಸೂದೆ ಅಂಗೀಕಾರವಾಗಲು ಸರಳ ಬಹುಮತದ ಅಗತ್ಯವಿದೆ. ಇದನ್ನೂ ಓದಿ: ಭಾರತೀಯ ಕಾರ್ಮಿಕರಿಗಾಗಿ ಆಸ್ಪತ್ರೆ ನಿರ್ಮಾಣಕ್ಕೆ ದುಬೈನಲ್ಲಿ ಭೂಮಿ: UAE ಘೋಷಣೆಗೆ ಮೋದಿ ಕೃತಜ್ಞತೆ

  • ಚಂದ್ರನ ಮೇಲೆ ತ್ರಿವರ್ಣ ಧ್ವಜ ಹಾರಿಸಿ ಭಾರತ ವಿಶ್ವಕ್ಕೇ ತನ್ನ ಸಾಮರ್ಥ್ಯ ತೋರಿಸಿದೆ- ಮೋದಿ

    ಚಂದ್ರನ ಮೇಲೆ ತ್ರಿವರ್ಣ ಧ್ವಜ ಹಾರಿಸಿ ಭಾರತ ವಿಶ್ವಕ್ಕೇ ತನ್ನ ಸಾಮರ್ಥ್ಯ ತೋರಿಸಿದೆ- ಮೋದಿ

    – ಗ್ರೀಸ್‌ನಲ್ಲಿ ಚಂದ್ರಯಾನ ಗುಣಗಾನ, ಮೋದಿಗೆ ಗ್ರೀಸ್‌ ಅತ್ತುನ್ನತ ನಾಗರಿಕ ಗೌರವ

    ಅಥೆನ್ಸ್:‌ ಭಾರತ ಚಂದ್ರನ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಇಡೀ ವಿಶ್ವಕ್ಕೇ ತನ್ನ ಸಾಮರ್ಥ್ಯವನ್ನ ತೋರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಚಂದ್ರಯಾನ ಗುಣಗಾನ ಮಾಡಿದ್ದಾರೆ.

    ಸುಮಾರು 40 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಗ್ರೀಸ್‌ (Greece) ದೇಶಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ್ದು, ಪ್ರಧಾನಿ ಮೋದಿ ಅವರನ್ನ ಗ್ರೀಸ್‌ ರಾಷ್ಟ್ರಪತಿ ಹಾಗೂ ಪ್ರಧಾನಿ ಬರಮಾಡಿಕೊಂಡರು. ಭಾರತೀಯ ಸಮುದಾಯ ಸಾಂಪ್ರದಾಯಿಕವಾಗಿ ಮೋದಿ ಅವರನ್ನು ಸ್ವಾಗತಿಸಲಾಯಿತು. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗ್ರೀಸ್‌ ನಾಗರಿಕ ಗೌರವ ‘ದಿ ಗ್ರ್ಯಾಂಡ್‌ ಕ್ರಾಸ್‌ ಆಫ್‌ ದಿ ಆರ್ಡರ್‌ ಆಫ್‌ ಹಾನರ್‌’ ನೀಡಿ ಗೌರವಿಸಲಾಯಿತು. ಅಧ್ಯಕ್ಷೆ ಕ್ಯಾಥರೀನಾ ಸಕೆಲ್ಲರೊಪೌಲೊ ಅವರು ಮೋದಿಗೆ ಅವರಿಗೆ ಗ್ರೀಸ್‌ ನಾಗರಿಕ ಗೌರವ ನೀಡಿ ಸನ್ಮಾನಿಸಿದರು.

    ನಂತರ ಗ್ರೀಸ್‌ನ ರಾಜಧಾನಿ ಅಥೆನ್ಸ್‌ನಲ್ಲಿ (Athens) ಭಾರತೀಯ ಸಮುದಾಯದವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಭಾರತದ ಚಂದ್ರಯಾನ ಸಾಧನೆಯನ್ನ ಹಾಡಿ ಹೊಗಳಿದರು. ಚಂದ್ರನ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಇಡೀ ಜಗತ್ತಿಗೆ ಭಾರತ ತನ್ನ ಸಾಮರ್ಥ್ಯ ತೋರಿಸಿದೆ ಎಂದು ಶ್ಲಾಘಿಸಿದರು.

    ಈ ತಿಂಗಳು ಶಿವನನ್ನು ಪೂಜಿಸುವ ಪರ್ವಕಾಲ, ಶ್ರಾವಣ ಮಾಸದಲ್ಲಿ ದೇಶವು ಹೊಸ ಸಾಧನೆ ಮಾಡಿದೆ. ಚಂದ್ರನ ಕತ್ತಲಿನ ವಲಯವಾದ ದಕ್ಷಿಣ ಧ್ರುವದಲ್ಲಿ ಇಳಿದ ಮೊದಲ ದೇಶವಾಗಿ ಭಾರತ ಹೊರಹೊಮ್ಮಿದೆ. ತಿರಂಗವನ್ನು ಚಂದ್ರನ ಮೇಲೆ ಹಾರಿಸುವ ಮೂಲಕ ಜಗತ್ತಿಗೆ ನಮ್ಮ ಸಾಮರ್ಥ್ಯ ತೋರಿಸಿದ್ದೇವೆ. ಜಗತ್ತಿನ ಮೂಲೆಮೂಲೆಗಳಿಂದ ಅಭಿನಂದನೆಯ ಸಂದೇಶಗಳು ಹರಿದು ಬರುತ್ತಿವೆ. ಸಾಧನೆಯು ಇಷ್ಟು ದೊಡ್ಡದಾಗಿರುವಾಗ ಸಂಭ್ರಮವೂ ಸಹ ಮುಂದುವರಿಯುತ್ತದೆ. ಚಂದ್ರಯಾನ-3ರ ಯಶಸ್ಸಿಗೆ ನಾನು ಮತ್ತೊಮ್ಮೆ ಅಭಿನಂದನೆ ಸಲ್ಲಿಸುತ್ತೇನೆ. ನಿಮ್ಮ ಮುಖದ ಭಾವನೆಗಳೇ ಹೇಳುತ್ತಿವೆ, ನೀವು ಜಗತ್ತಿನ ಯಾವುದೇ ಜಾಗದಲ್ಲಿದ್ದರೂ ಹೃದಯದಲ್ಲಿ ಭಾರತವು ಮಿಡಿಯುತ್ತಿರುತ್ತದೆ ಎಂದು ಹೊಗಳಿದರು.

    ಮುಂದುವರಿದು, ವಿಶ್ವದ ದೊಡ್ಡ ಕಂಪನಿಗಳು ಭಾರತದಲ್ಲಿ ಹೂಡಿಕೆ ಮಾಡಲು ಮುಂಚೂಣಿಯಲ್ಲಿವೆ. ಭಾರತದ ಜಗತ್ತಿನ 5ನೇ ಅತಿ ದೊಡ್ಡ ಆರ್ಥಿಕ ಶಕ್ತಿಯನ್ನು ಹೊಂದಿರುವ ದೇಶವಾಗಿದ್ದು, ತಜ್ಞರ ಪ್ರಕಾರ ದೇಶವು 3ನೇ ಸ್ಥಾನಕ್ಕೆ ಏರಲಿದೆ. ಆರ್ಥಿಕತೆ ಬೆಳೆಯುತ್ತಿದ್ದಂತೆ ದೇಶವು ಬಡತನದಿಂದ ವೇಗವಾಗಿ ಹೊರಬರುತ್ತದೆ. ಭಾರತದಲ್ಲಿ 5 ವರ್ಷಗಳಲ್ಲಿ 13.5 ಕೋಟಿ ಭಾರತೀಯರು ಬಡತನ ಮಟ್ಟದಿಂದ ಹೊರಬಂದಿದ್ದಾರೆ ಎಂದು ಹೇಳಿದರಲ್ಲದೇ, ಭಾರತ ತಾಂತ್ರಿಕವಾಗಿಯೂ ಬೆಳೆಯುತ್ತಿದ್ದ ಸುಮಾರು 700 ಜಿಲ್ಲೆಗಳಲ್ಲಿ ಈಗಾಗಲೇ 5 ಜಿ ತಂತ್ರಜ್ಞಾನವನ್ನು ಹೊಂದಿದೆ ಎಂದು ಬೀಗಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Greece Boat Tragedyː 300 ಪಾಕ್‌ ಪ್ರಜೆಗಳ ದುರಂತ ಸಾವು – ಬದುಕುಳಿದವರು 12 ಮಂದಿ ಮಾತ್ರ

    Greece Boat Tragedyː 300 ಪಾಕ್‌ ಪ್ರಜೆಗಳ ದುರಂತ ಸಾವು – ಬದುಕುಳಿದವರು 12 ಮಂದಿ ಮಾತ್ರ

    ಇಸ್ಲಾಮಾಬಾದ್‌: ಜೂನ್‌ 14ರಂದು ಗ್ರೀಸ್‌ನ ಕರಾವಳಿ ಪ್ರದೇಶದಲ್ಲಿ ನಡೆದ ಬೋಟ್‌ ದುರಂತದಲ್ಲಿ (Deadliest Shipping Disasters) 300 ಮಂದಿ ಪಾಕ್‌ ಪ್ರಜೆಗಳು (Pakistanis) ದುರಂತ ಸಾವಿಗೀಡಾಗಿದ್ದು, ಕೇವಲ 12 ಮಂದಿ ಮಾತ್ರವೇ ಘಟನೆಯಲ್ಲಿ ಬದುಕುಳಿದಿದ್ದಾರೆ ಎಂದು ಪಾಕಿಸ್ತಾನ ಸಚಿವಾಲಯ ಹೇಳಿದೆ.

    ಹೌದು. ಪ್ರತಿ ವರ್ಷ ಪಾಕಿಸ್ತಾನದ ಸಾವಿರಾರು ಸಂಖ್ಯೆಯ ಯುವ ಸಮೂಹ ಉತ್ತಮ ಜೀವನ ಕಂಡುಕೊಳ್ಳುವ ಸಲುವಾಗಿ ಯೂರೋಪ್‌ಗೆ ವಲಸೆ ಹೋಗುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಹಾಗೆಯೇ ಕಳೆದ ವಾರ ವಲಸೆ ಹೋಗುತ್ತಿದ್ದ ವೇಳೆ ಗ್ರೀಸ್‌ ಕರಾವಳಿ ಪ್ರದೇಶದಲ್ಲಿ ನೂರಾರು ಜನರಿದ್ದ ಬೋಟ್‌ ಮುಳುಗಿ 300 ಮಂದಿ ಪಾಕ್‌ ಪ್ರಜೆಗಳು ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ 12 ಮಂದಿ ಪಾಕ್‌ ಪ್ರಜೆಗಳು ಮಾತ್ರ ಬದುಕುಳಿದಿರುವುದಾಗಿ ಪಾಕ್‌ ಸಚಿವಾಲಯ ಹೇಳಿದೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಕಳ್ಳಸಾಗಣೆ ಮಾಡುತ್ತಿದ್ದ 10 ಮಂದಿಯನ್ನ ಬಂಧಿಸಲಾಗಿದೆ. ಪಾಕ್‌ ಆಡಳಿತ ಕಾಶ್ಮೀರದ 9 ಜನರನ್ನು ಬಂಧಿಸಲಾಗಿದೆ. ಮತ್ತೊಬ್ಬನನ್ನ ಗುಜರಾತ್‌ನಲ್ಲಿ ಬಂಧಿಸಲಾಗಿದೆ.

    ಶೋಕಾಚರಣೆ:
    ಬೋಟ್‌ ದುರಂತದಲ್ಲಿ ಸುಮಾರು 300 ಪಾಕಿಸ್ತಾನದ ಪ್ರಜೆಗಳ ದುರಂತ ಸಾವಿನ ಸ್ಮರಣಾರ್ಥವಾಗಿ ಸೋಮವಾರ (ಜೂನ್‌ 19) ರಾಷ್ಟ್ರೀಯ ಶೋಕಾಚರಣೆ ಆಚರಿಸಲಾಗುತ್ತಿದೆ. ಇದೇ ವೇಳೆ ಪ್ರಧಾನಿ ಶೆಹಬಾಜ್ ಷರೀಫ್ ಅವರು ಕಳ್ಳಸಾಗಣೆಯಲ್ಲಿ ತೊಡಗಿರುವ ಏಜೆಂಟ್‌ಗಳ ವಿರುದ್ಧ ತಕ್ಷಣ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: Boat Disaster: ಅಗತ್ಯಕ್ಕಿಂತ ಹೆಚ್ಚು ವಲಸಿಗರಿದ್ದ ಹಡಗು ಮುಳುಗಡೆ – 79 ಮಂದಿ ಜಲಸಮಾಧಿ

    ಏನಿದು ಬೋಟ್‌ ದುರಂತ? 
    ಇದೇ ತಿಂಗಳ ಜೂನ್‌ 14ರಂದು ರಾತ್ರಿ ಗ್ರೀಸ್‌ ಕರಾವಳಿಯಿಂದ ಯುರೋಪ್‌ನತ್ತ ಹೊರಟಿದ್ದ ಹಡಗಿನಲ್ಲಿ ಅಗತ್ಯಕ್ಕಿಂತ ಹೆಚ್ಚು ಜನರು ತುಂಬಿದ್ದರಿಂದ ಬೋಟ್‌ ಮುಳುಗಿ 79 ಮಂದಿ ಜಲಸಮಾಧಿಯಾಗಿದ್ದರು. ನೂರಾರು ಮಂದಿಯನ್ನು ರಕ್ಷಣೆ ಮಾಡಲಾಗಿತ್ತು. ಸುಮಾರು 400 ರಿಂದ 750 ಮಂದಿ ಹಡಗಿನಲ್ಲಿ ಪ್ರಯಾಣಿಸುತ್ತಿದ್ದರು. ಹಡಗಿನಲ್ಲಿದ್ದ ಹೆಚ್ಚಿನ ಸಂಖ್ಯೆಯ ವಲಸಿಗರು ಈಜಿಪ್ಟ್, ಸಿರಿಯಾ ಮತ್ತು ಪಾಕಿಸ್ತಾನದಿಂದ ಬಂದವರು ಎಂದು ಹೇಳಲಾಗಿತ್ತು. ಗ್ರೀಸ್‌ನಲ್ಲಿ ನಡೆದ ಈ ಹಡಗು ದುರಂತವನ್ನು ಪ್ರಸಕ್ತ ವರ್ಷದ ಮಹಾ ದುರಂತ ಎಂದೇ ಹೇಳಲಾಗುತ್ತಿದೆ. ಇದನ್ನೂ ಓದಿ: ಬಿಕ್ಕಟ್ಟಿನ ನಡುವೆ 5 ವರ್ಷಗಳ ಬಳಿಕ ಅಮೆರಿಕ ರಾಜ್ಯ ಕಾರ್ಯದರ್ಶಿ ಚೀನಾಗೆ ಮೊದಲ ಭೇಟಿ

  • Boat Disaster: ಅಗತ್ಯಕ್ಕಿಂತ ಹೆಚ್ಚು ವಲಸಿಗರಿದ್ದ ಹಡಗು ಮುಳುಗಡೆ – 79 ಮಂದಿ ಜಲಸಮಾಧಿ

    Boat Disaster: ಅಗತ್ಯಕ್ಕಿಂತ ಹೆಚ್ಚು ವಲಸಿಗರಿದ್ದ ಹಡಗು ಮುಳುಗಡೆ – 79 ಮಂದಿ ಜಲಸಮಾಧಿ

    ಅಥೆನ್ಸ್‌: ಅಗತ್ಯಕ್ಕಿಂತ ಹೆಚ್ಚು ವಲಸಿಗರು (Migrants) ಪ್ರಯಾಣಿಸುತ್ತಿದ್ದ ಹಡಗು ಮುಳುಗಿ 79 ಮಂದಿ ಜಲಸಮಾಧಿಯಾಗಿದ್ದು, ನೂರಾರು ಮಂದಿ ನಾಪತ್ತೆಯಾಗಿರುವ ಘಟನೆ ಗ್ರೀಸ್‌ನ (Greece) ಕರಾವಳಿ ಭಾಗದಲ್ಲಿ ನಡೆದಿದೆ.

    ಜೂನ್‌ 14ರಂದು ರಾತ್ರಿ ಗ್ರೀಸ್‌ ಕರಾವಳಿಯಿಂದ ಯುರೋಪ್‌ನತ್ತ (Europe) ಹೊರಟಿದ್ದ ಹಡಗಿನಲ್ಲಿ ನೂರಾರು ಮಂದಿ ಪ್ರಯಾಣಿಸುತ್ತಿದ್ದರು. ಮೀನುಗಾರಿಕೆ ಹಡಗಿನಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಜನರನ್ನ ಕೂರಿಸಿದ್ದರಿಂದ ಹಡಗು ಮುಳುಗಡೆಯಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಬೋಟ್ ಮುಳುಗಿ ಮದುವೆಯಿಂದ ಹಿಂದಿರುಗುತ್ತಿದ್ದ 103 ಮಂದಿ ದುರ್ಮರಣ- ಹಲವರು ನಾಪತ್ತೆ

    ಯುರೋಪಿಯನ್ ರಕ್ಷಣಾ ತಂಡದ ಪ್ರಕಾರ ಸುಮಾರು 750 ಮಂದಿ ಹಡಗಿನಲ್ಲಿದ್ದರು ಎನ್ನಲಾಗಿದೆ. ಆದ್ರೆ ಯುಎನ್‌ ವಲಸಿಗ ಏಜೆನ್ಸಿ 400 ಮಂದಿ ಹಡಗಿನಲ್ಲಿದ್ದರು ಎಂದು ಹೇಳಿದೆ. ಹಡಗಿನಲ್ಲಿದ್ದ ಹೆಚ್ಚಿನ ಸಂಖ್ಯೆಯ ವಲಸಿಗರು ಈಜಿಪ್ಟ್, ಸಿರಿಯಾ ಮತ್ತು ಪಾಕಿಸ್ತಾನದಿಂದ ಬಂದವರು ಎಂದು ಹೇಳಲಾಗಿದೆ.

    ಗ್ರೀಸ್‌ನಲ್ಲಿ ನಡೆದ ಈ ಹಡಗು ದುರಂತವನ್ನು ಪ್ರಸಕ್ತ ವರ್ಷದ ಮಹಾ ದುರಂತ ಎಂದೇ ಹೇಳಲಾಗುತ್ತಿದೆ. ಸಮುದ್ರದಲ್ಲಿ ಮುಳುಗಿದ್ದ 104ಕ್ಕೂ ಹೆಚ್ಚು ಜನರನ್ನ ರಕ್ಷಿಸಲಾಗಿದೆ. ಇನ್ನೂ ಸಾಕಷ್ಟು ಮಂದಿ ನೀರಿನಲ್ಲಿ ಮುಳುಗಿದ್ದು ಅವರು ಮೃತಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಶವಗಳ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದೆ.

    ಬುಧವಾರ ತಡರಾತ್ರಿ ದುರಂತ ಸಂಭವಿಸಿದ್ದು, ಕೂಡಲೇ ಕರಾವಳಿ ಪಡೆ, ನೌಕಾಪಡೆ ಅಧಿಕಾರಿಗಳು ದುರಂತ ನಡೆದ ಸ್ಥಳಕ್ಕೆ ಧಾವಿಸಿ, ಸಾಧ್ಯವಾದಷ್ಟು ಜನರನ್ನ ರಕ್ಷಿಸಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ನೆದರ್ಲೆಂಡ್‌ನಲ್ಲಿ ಮಹಿಳೆಯರು, ಮಕ್ಕಳು, ವಯಸ್ಕರಿಗೂ ಸನ್ ಕ್ರೀಮ್ ಉಚಿತ, ಎಲ್ಲರಿಗೂ ಖಚಿತ – ಏಕೆ ಗೊತ್ತೇ?

  • ರೈಲುಗಳ ನಡುವೆ ಭೀಕರ ಅಪಘಾತ- 32 ಮಂದಿ ದುರ್ಮರಣ

    ರೈಲುಗಳ ನಡುವೆ ಭೀಕರ ಅಪಘಾತ- 32 ಮಂದಿ ದುರ್ಮರಣ

    ಅಥೆನ್ಸ್: ಪ್ಯಾಸೆಂಜರ್ ಹಾಗೂ ಗೂಡ್ಸ್ ರೈಲಿನ (Train) ನಡುವೆ ಅಪಘಾತ ಸಂಭವಿಸಿ 32 ಜನರು ಮೃತಪಟ್ಟು, 85 ಮಂದಿ ಗಾಯಗೊಂಡ ಘಟನೆ ಮಂಗಳವಾರ ತಡರಾತ್ರಿ ಗ್ರೀಸ್‍ನ (Greece) ಟೆಂಪೆಯಲ್ಲಿ ನಡೆದಿದೆ.

    ಘಟನೆ ಬಗ್ಗೆ ಮಾಹಿತಿ ನೀಡಿರುವ ಥೆಸ್ಸಾಲಿ ಪ್ರದೇಶದ ಗವರ್ನರ್ (Governor) ಕಾನ್ಸಾಂಟಿನೋಸ್ ಅಗೋರಾಸ್ಟೋಸ್, ಅಪಘಾತ (Accident) ಬಹಳ ಪ್ರಬಲವಾಗಿ ನಡೆದಿದೆ. ರೈಲಿನ ಮುಂಭಾಗದ ನಾಲ್ಕು ಬೋಗಿಗಳು ಹಳಿ ತಪ್ಪಿವೆ. ಎದುರಿನ ಎರಡು ಬೋಗಿಗಳು ಸಂಪೂರ್ಣ ನಜ್ಜುಗುಜ್ಜಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಲಾರಿ ಮೇಲೆ ಮುರಿದು ಬಿದ್ದ ಭಾರೀ ಗಾತ್ರದ ಕಬ್ಬಿಣದ ಸಲಾಕೆ- ತಪ್ಪಿದ ಅನಾಹುತ

    ರೈಲಿನಲ್ಲಿ ಸುಮಾರು 350 ಪ್ರಯಾಣಿಕರಿದ್ದರು. ಅದರಲ್ಲಿ 250 ಪ್ರಯಾಣಿಕರನ್ನು (Passengers) ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಗವರ್ನರ್ ತಿಳಿಸಿದ್ದಾರೆ.

    ಎರಡು ರೈಲುಗಳ ನಡುವಿನ ಘರ್ಷಣೆಯ ತೀವ್ರತೆಯಿಂದ ರಕ್ಷಣಾ ಕಾರ್ಯದಲ್ಲಿ ವಿಳಂಬವಾಗುತ್ತಿದೆ ಎಂದು ಅಗ್ನಿಶಾಮಕ ದಳದ (Fire service) ವಕ್ತಾರ ವಾಸಿಲಿಸ್ ವರ್ತಕೊಯಾನಿಸ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

    ರಕ್ಷಣಾ ಕಾರ್ಯಕ್ಕೆ ಸೇನೆಯ ನೆರವುಕೋರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕಾಣೆಯಾಗಿದ್ದ 6ರ ಬಾಲಕಿ ಶವವಾಗಿ ಪತ್ತೆ – ಅತ್ಯಾಚಾರದ ಶಂಕೆ

  • ಗ್ರೀಸ್‍ನಲ್ಲಿ 6.2 ತೀವ್ರತೆಯ ಭೂಕಂಪ

    ಗ್ರೀಸ್‍ನಲ್ಲಿ 6.2 ತೀವ್ರತೆಯ ಭೂಕಂಪ

    ಅಥೆನ್ಸ್: ಗ್ರೀಸ್‍ನಲ್ಲಿ 6.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರ ಬುಧವಾರ ತಿಳಿಸಿದೆ.

    ಸುಮಾರು 6.9 ಮತ್ತು 5.9ರಷ್ಟು ಭೂಕಂಪದ ತೀವ್ರತೆ ವರದಿಯಾಗಿದೆ. ಕೇಂದ್ರ ಗ್ರೀಸ್ ಎಲಾಸೊನಾ ಪಟ್ಟಣದಿಂದ ದಕ್ಷಿಣಕ್ಕೆ 20 ಕಿ.ಮೀ ದೂರದಲ್ಲಿ,  10 ಕಿ.ಮೀ ಆಳದಲ್ಲಿ ಇದರ ಕೇಂದ್ರ ಬಿಂದು ಪತ್ತೆಯಾಗಿದೆ.

    ನನ್ನ ಸಹೋದ್ಯೋಗಿಗಳಿಗೆ ಭೂಕಂಪದ ಅನುಭವ ಮತ್ತು ಅದರ ತೀವ್ರತೆಯ ಅನುಭವವಾಗಿದೆ ಎಂದು ಅಥೆನ್ಸ್‍ನ ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ಹೇಳಿದ್ದಾರೆ.

    ಗ್ರೀಸ್‍ನ ಹಲವು ಭಾಗದಲ್ಲಿ ಭೂಮಿ ಕಂಪಿಸಿದೆ ಗ್ರೀಕ್ ಭೂಕಂಪ ಶಾಸ್ತ್ರಜ್ಞ ವಾಸಿಲಿಸ್ ಕರಥಾನಸಿಸ್ ತಿಳಿಸಿದ್ದಾರೆ.

  • ಬೆಂಗಳೂರಲ್ಲಿ ಮತ್ತೊಂದು – ಕರ್ನಾಟಕದಲ್ಲಿ ಕೊರೊನಾ ಪೀಡಿತರ ಸಂಖ್ಯೆ 5ಕ್ಕೆ ಏರಿಕೆ

    ಬೆಂಗಳೂರಲ್ಲಿ ಮತ್ತೊಂದು – ಕರ್ನಾಟಕದಲ್ಲಿ ಕೊರೊನಾ ಪೀಡಿತರ ಸಂಖ್ಯೆ 5ಕ್ಕೆ ಏರಿಕೆ

    ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಪೀಡಿತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

    ಗ್ರೀಸ್‍ನಿಂದ ಆಗಮಿಸಿದ 26 ವರ್ಷದ ಯುವಕನಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿದೆ. ಯುವಕನ ಆರೋಗ್ಯನ ಸ್ಥಿರವಾಗಿದ್ದು ಆಸ್ಪತ್ರೆಯಲ್ಲಿ ನಿಗಾ ವಹಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

    ಇವತ್ತಿನವರೆಗೆ 1,220 ಮಂದಿಯನ್ನು ನಿಗಾ ಇಡಲಾಗಿದ್ದು ಈ ಪೈಕಿ 292 ಕಳೆದ 28 ದಿನಗಳಿಂದ ನಿಗಾದಲ್ಲಿದ್ದಾರೆ. 906 ಮಂದಿ ಮನೆಯಲಿದ್ದರೆ 18 ಮಂದಿ ಆಸ್ಪತ್ರೆ ನಿಗಾದಲ್ಲಿದ್ದಾರೆ ಎಂದು ತಿಳಿಸಿದೆ.

    ಕೊರೊನಾ ಶಂಕೆ ಹಿನ್ನೆಲೆಯಲ್ಲಿ ಒಟ್ಟು 18 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನಲ್ಲಿ 12, ಹಾಸನದಲ್ಲಿ 2, ದಕ್ಷಿಣ ಕನ್ನಡದಲ್ಲಿ 3, ಬಳ್ಳಾರಿಯಲ್ಲಿ ಒಬ್ಬರು ನಿಗಾದಲ್ಲಿದ್ದಾರೆ. ಈ 18 ಮಂದಿ ಪರೀಕ್ಷೆ ನಡೆದಿದ್ದು ವರದಿ ಬರಬೇಕಿದೆ. ದೇಶದಲ್ಲಿ ಇಲ್ಲಿಯವರೆಗೆ 74 ಮಂದಿ ಕೊರೊನಾ ಸೋಂಕು ಬಂದಿದೆ.