Tag: Gruha Jyothi Scheme

  • ಮನೆ, ಬಾಡಿಗೆ ಮನೆ ಬದಲಿಸುವವರಿಗೆ ಗೃಹಜ್ಯೋತಿ; ಡಿ-ಲಿಂಕ್ ಮಾಡುವುದು ಹೇಗೆ?

    ಮನೆ, ಬಾಡಿಗೆ ಮನೆ ಬದಲಿಸುವವರಿಗೆ ಗೃಹಜ್ಯೋತಿ; ಡಿ-ಲಿಂಕ್ ಮಾಡುವುದು ಹೇಗೆ?

    – ಗೃಹಜ್ಯೋತಿ ಲಾಭ ಪಡೆಯಲು ಅವಕಾಶ

    ಬೆಂಗಳೂರು: ಯಾವುದೇ ಕಾರಣಕ್ಕೆ ಮನೆ ಬದಲಿಸುವವರಿಗೆ ಗೃಹಜ್ಯೋತಿ ಅವಕಾಶವನ್ನ ಇಂಧನ ಇಲಾಖೆ ಕಲ್ಪಿಸಿದೆ. ಬಾಡಿಗೆಗೆ ಇದ್ದ ಹಳೆ ಮನೆಯ ಆರ್‌ಆರ್ ಸಂಖ್ಯೆ ಡಿ-ಲಿಂಕ್ ಮಾಡಿ ಹೊಸ ಮನೆಗೆ ಬಾಡಿಗೆಗೆ ಹೋಗುವ ಮನೆಯ ಸಂಖ್ಯೆಯೊಂದಿಗೆ ನೋಂದಣಿಗೆ ಅವಕಾಶ ನೀಡಲಾಗಿದೆ. ಗೃಹಜ್ಯೋತಿ ಯೋಜನೆಗೆ ಒಂದು ವರ್ಷದ ಹಿನ್ನೆಲೆ ಇಂಧನ ಇಲಾಖೆಯಿಂದ ಪ್ರಕಟಣೆ ಹೊರಡಿಸಿದೆ.

    ಗೃಹಜ್ಯೋತಿಗೆ ವರ್ಷದ ಸಂಭ್ರಮ
    2024ರ ಜೂನ್‌ ವರೆಗೆ ಗೃಹಜ್ಯೋತಿಗೆ ಒಟ್ಟು 1.67 ಕೋಟಿ ನೋಂದಣಿಯಾಗಿದೆ. ಒಟ್ಟು ಗೃಹಜ್ಯೋತಿ ಫಲಾನುಭವಿಗಳ ಸಂಖ್ಯೆ 1.56 ಕೋಟಿ ಇದೆ. 2023 ಆಗಸ್ಟ್ ರಿಂದ 2024 ಜೂನ್‌ ವರೆಗೆ ಸರ್ಕಾರ ಬಿಡುಗಡೆ ಮಾಡಿರುವ ಒಟ್ಟ ಸಬ್ಸಿಡಿ ಮೊತ್ತ 8,239 ಕೋಟಿ ರೂ.

    ಮನೆ ಬದಲಾಯಿಸಿದ ನಂತರ ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ಹಳೆ ಮನೆಯ ಆರ್.ಆರ್. ಸಂಖ್ಯೆಯನ್ನು ಡಿ-ಲಿಂಕ್ ಮಾಡುವ ಸೌಲಭ್ಯ ಈಗ ರಾಜ್ಯದ ಜನರಿಗೆ ಲಭ್ಯವಾಗಲಿದೆ. ಗೃಹಜ್ಯೋತಿಗೆ ಒಂದು ವರ್ಷ ಸಂದ ಸಂದರ್ಭದಲ್ಲಿ ಇಂಧನ ಇಲಾಖೆ ಈ ಪ್ರಕಟಣೆ ಹೊರಡಿಸಿದೆ. ಬಾಡಿಗೆ ಮನೆ ಅಥವಾ ಯಾವುದೇ ಕಾರಣಕ್ಕೆ ಮನೆ ಬದಲಿಸುವ ಸಂದರ್ಭದಲ್ಲಿ ಹಳೆಯ ಖಾತೆ ಸಂಖ್ಯೆಯನ್ನು ಡಿ-ಲಿಂಕ್ ಮಾಡಿ, ಮತ್ತೊಂದು ಮನೆಯ ಆರ್.ಆರ್. ಸಂಖ್ಯೆಯೊಂದಿಗೆ ನೋಂದಣಿಯಾಗಿ, ಗೃಹಜ್ಯೋತಿಯ ಲಾಭ ಪಡೆಯಬಹುದಾಗಿದೆ.

    ಡಿ-ಲಿಂಕ್‌ ಮಾಡುವುದು ಹೇಗೆ?
    ಗ್ರಾಹಕರ https://sevasindhu.karnataka.gov.in/GruhaJyothi_Delink/GetAadhaarData.aspx ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಗೃಹಜ್ಯೋತಿ ಪೋರ್ಟಲ್ ಓಪನ್ ಆಗದೇ ಇದ್ದಲ್ಲಿ, Cache Memory Clear ಮಾಡಿ ನಂತರ ಪೋರ್ಟಲ್ ಲಿಂಕ್ ಕ್ಲಿಕ್ ಮಾಡಿ ಸೇವೆಯನ್ನು ಪಡೆಯಬಹುದಾಗಿದೆ.

    ಮನೆ ಬದಲಿಸುವ ಸಂದರ್ಭದಲ್ಲಿ ಆಧಾರ್‌ ನಂಬರ್‌ ಜೊತೆ ಲಿಂಕ್‌ ಆಗಿರುವ ಆರ್‌.ಆರ್‌. ನಂಬರ್‌ ವಿವರ ಪರಿಶೀಲಿಸಿ ಡಿ-ಲಿಂಕ್‌ ಮಾಡಬಹುದು. ಹೊಸ ಮನೆಗೆ ಗೃಹಜ್ಯೋತಿ ಲಾಭ ಪಡೆಯಲು ಸದ್ಯ ಯಾವುದೇ ಆಧಾರ್‌ ಜತೆ ಲಿಂಕ್‌ ಆಗಿರದ ಆರ್‌.ಆರ್‌. ನಂಬರ್‌ಗೆ ಲಿಂಕ್‌ ಮಾಡಬಹುದು. ಅಂದರೆ ಈ ಹಿಂದೆ ಮನೆಯಲ್ಲಿ ವಾಸವಿದ್ದರೂ ಡಿ-ಲಿಂಕ್‌ ಮಾಡಿರುವುದನ್ನು ಖಾತ್ರಿಪಡಿಸಿಕೊಳ್ಳಬಹುದು.

    ಗೃಹಜ್ಯೋತಿ ಯೋಜನೆಯ ವೆಬ್‌ಸೈಟ್‌ ಸಾಫ್ಟ್‌ವೇರ್‌ ಅಪ್‌ಡೇಟ್‌ ಮಾಡುವ ಡಿ-ಲಿಂಕ್‌ಗೆ ಇದ್ದ ತಾಂತ್ರಿಕ ತೊಂದರೆಯನ್ನು ನಿವಾರಿಸಲಾಗಿದೆ. ಡಿ-ಲಿಂಕ್‌ಗೆ ಅವಕಾಶ ಕಲ್ಪಿಸಿಕೊಡವಂತೆ ಗ್ರಾಹಕರು ಕೋರಿದ್ದರು. ಅದಕ್ಕೆ ಸ್ಪಂದಿಸಿ ಈ ಡಿ-ಲಿಂಕ್‌ಗೆ ಅವಕಾಶ ಮಾಡಿಕೊಡಲಿದೆ. ಗ್ರಾಹಕರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಇಂಧನ ಇಲಾಖೆ ತಿಳಿಸಿದೆ.

  • ಕೋವಿಡ್ ನಿರ್ವಹಣೆಯಲ್ಲಿ 30 ಕೋಟಿ ಅಕ್ರಮ – ಬಿಜೆಪಿ ವಿರುದ್ಧ ಯು.ಬಿ ವೆಂಕಟೇಶ್ ಬಾಂಬ್!

    ಕೋವಿಡ್ ನಿರ್ವಹಣೆಯಲ್ಲಿ 30 ಕೋಟಿ ಅಕ್ರಮ – ಬಿಜೆಪಿ ವಿರುದ್ಧ ಯು.ಬಿ ವೆಂಕಟೇಶ್ ಬಾಂಬ್!

    – ಗೃಹಜ್ಯೋತಿ ಯೋಜನೆಯಿಂದ ವಿದ್ಯುತ್ ಉತ್ಪಾದನಾ ಕಂಪನಿಗಳಿಗೆ ಆರ್ಥಿಕ ಸಂಕಷ್ಟ: ಶರವಣ
    – ಡೆಂಗ್ಯೂ ಚಿಕಿತ್ಸೆಗೆ ಹೆಚ್ಚು ಹಣ ಪಡೆದರೆ ಕ್ರಮ: ಖಾಸಗಿ ಆಸ್ಪತ್ರೆಗಳಿಗೆ ಸಚಿವ ಗುಂಡೂರಾವ್‌ ವಾರ್ನಿಂಗ್‌

    ಬೆಂಗಳೂರು: ವಿಧಾನ ಮಂಡಲದ ಮುಂಗಾರು ಅಧಿವೇಶನದ (Karnataka Assembly Session) ಮೊದಲ ದಿನವೇ ಅಕ್ರಮಗಳ ಸದ್ದು – ಗದ್ದಲ ಜೋರಾಗಿ ನಡೆದಿದೆ. ವಾಲ್ಮೀಕಿ ನಿಗಮದ ಹಗರಣ ಮುಡಾ ಹಗರಣಗಳ ಪ್ರಸ್ತಾಪದ ನಡುವೆ ಕೋವಿಡ್ ನಿರ್ವಹಣೆಯಲ್ಲಿ ಆಗಿರುವ ಹಗರಣಗಳ (Covid Scam) ಬಗ್ಗೆ ಕಾಂಗ್ರೆಸ್ ನಾಯಕ ಯು.ಬಿ ವೆಂಕಟೇಶ್ ದನಿ ಎತ್ತಿದ್ದಾರೆ.

    ಶೂನ್ಯ ವೇಳೆಯಲ್ಲಿ ಮಾತನಾಡಿದ ಯು.ಬಿ ವೆಂಕಟೇಶ್ (UB Venkatesh), ಬೆಂಗಳೂರಿನಲ್ಲಿ 2021-22ರಲ್ಲಿ ಬಿಜೆಪಿ ಸರ್ಕಾರದ ಇದ್ದಾಗ ಕೋವಿಡ್ ನಿರ್ವಹಣೆಯಲ್ಲಿ ದೊಡ್ಡ ಅಕ್ರಮವಾಗಿದೆ. ಔಷಧಿ ಸೇರಿ ಇನ್ನಿತರ ಖರೀದಿಯಲ್ಲಿ ಅಕ್ರಮವಾಗಿದೆ. ಲೆಕ್ಕ ಪರಿಶೋಧನೆ ವರದಿಯಲ್ಲಿ ಅಕ್ರಮದ ಬಗ್ಗೆ ಪ್ರಸ್ತಾಪ ಇದೆ. ಸುಮಾರು 30 ಕೋಟಿ ರೂ. ಅಕ್ರಮದ ಆಗಿದೆ. ಈ ಬಗ್ಗೆ ತನಿಖೆ ಮಾಡಿ ತಪ್ಪು ಮಾಡಿರೋರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ಸದಸ್ಯ ಯುಬಿ ವೆಂಕಟೇಶ್ ಆಗ್ರಹಿಸಿದರು.

    ʻಗೃಹಜ್ಯೋತಿʼ ಕರ್ನಾಟಕವನ್ನೇ ಬರ್ಬಾದ್ ಮಾಡುವ ಸ್ಕೀಮ್:
    ಇದಕ್ಕೂ ವಿಧಾನ ಪರಿಷತ್ ಕಲಾಪ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಸದಸ್ಯ ಶರವಣ ಮಾತನಾಡಿದರು. ರಾಜ್ಯ ಸರ್ಕಾರದ ಉಚಿತ ವಿದ್ಯುತ್ ಯೋಜನೆಯಿಂದ (Gruha Jyothi Scheme) ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳು ಬಹಳಷ್ಟು ನಷ್ಟದಲ್ಲಿವೆ. ಕರ್ನಾಟಕವನ್ನೇ ಬರ್ಬಾದ್ ಮಾಡುವ ಸ್ಕೀಮ್ ಇದು. ಇದರಿಂದ ವಿದ್ಯುತ್ ಸರಬರಾಜು ಕಂಪನಿಗಳು ಆರ್ಥಿಕ ಸಂಕಷ್ಟದಲ್ಲಿವೆ. ವಿದ್ಯುತ್ ಉತ್ಪಾದನಾ ಕಂಪನಿಗಳಿಗೂ ಹಣ ಪಾವತಿಯಾಗುತ್ತಿಲ್ಲ ಎಂದು ಆರೋಪಿಸಿದರು. ಇದಕ್ಕೆ ಉತ್ತರಿಸಿದ ಸಚಿವ ಕೆ.ಜೆ ಜಾರ್ಜ್, ಯಾವುದೇ ವಿದ್ಯುತ್ ಕಂಪನಿಗಳ ಬಾಕಿ ಹಣ ಉಳಿಸಿಕೊಂಡಿಲ್ಲ. ಗೃಹ ಜ್ಯೋತಿ ಅಡಿ ಉಪಯೋಗ ಮಾಡಿದ್ದ ಎಲ್ಲ ವಿದ್ಯುತ್‌ಗೂ ಹಣ ಕಂಪನಿಗಳಿಗೆ ಈಗಾಗಲೇ ಸಂದಾಯವಾಗಿದೆ ಎಂದು ಸ್ಪಷ್ಟನೆ ನೀಡಿದರು.

    ಡೆಂಗ್ಯೂ ವಿಚಾರದಲ್ಲಿ 2 ತಿಂಗಳು ಎಚ್ಚರವಾಗಿರಿ:
    ಇನ್ನೆರಡು ತಿಂಗಳು ಡೆಂಗ್ಯೂ ವಿಚಾರದಲ್ಲಿ ಜನರು ಎಚ್ಚರವಾಗಿ ಇರಬೇಕು ಅಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಜನರಿಗೆ ಕರೆ ನೀಡಿದರು. ವಿಧಾನ ಪರಿಷತ್ ಕಲಾಪ ಪ್ರಶ್ನೋತ್ತರ ಅವಧಿಯ ವೇಳೆ ಬಿಜೆಪಿಯ ಧನಂಜಯ ಸರ್ಜಿ ಅವರ ಬದಲಾಗಿ, ಅರುಣ್ ಡೆಂಗ್ಯೂ ಬಗ್ಗೆ ಪ್ರಶ್ನೆ ಕೇಳಿದ್ರು.

    ಇದಕ್ಕೆ ಉತ್ತರ ನೀಡಿದ ಸಚಿವರು, ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಅಂತ ತಿಳಿಸಿದರು.ಈ ವರ್ಷ ನಮ್ಮ ರಾಜ್ಯದಲ್ಲಿ ಡೆಂಗ್ಯೂ ಕೇಸ್ ಜಾಸ್ತಿ ಆಗಿದೆ.ಕಳೆದ ವರ್ಷ ಈ ಅವಧಿಗೆ 25 ಸಾವಿರ ಕೇಸ್ ಇತ್ತು. ಈ ವರ್ಷ ಇಲ್ಲಿವರೆಗೆ 68 ಸಾವಿರ ಕೇಸ್ ಈ ವರೆಗೆ ದಾಖಲಾಗಿದೆ. ಡೆಂಗ್ಯೂವನ್ನ ನಾವು ಗಂಭೀರವಾಗಿ ಪರಿಗಣಿಸಲಾಗಿದೆ. ಸಿಎಂ ನೇತೃತ್ವದಲ್ಲಿ ಸಭೆ ಮಾಡಲಾಗಿದೆ. ಡೆಂಗ್ಯೂವನ್ನ ನೋಟಿಫೈ ಕಾಯಿಲೆ ಅಂತ ಘೋಷಣೆ ಮಾಡಲಾಗಿದೆ. ಯಾವುದೇ ಆಸ್ಪತ್ರೆಯಲ್ಲಿ ದಾಖಲಾಗಿದ್ದರೂ ಮಾಹಿತಿ ಸರ್ಕಾರಕ್ಕೆ ಕೊಡುವ ವ್ಯವಸ್ಥೆ ಮಾಡಿದ್ದೇವೆ ಎಂದು ವಿವರಿಸಿದರು.

    ಡೆಂಗ್ಯೂ ಚಿಕಿತ್ಸೆಗೆ ಹೆಚ್ಚು ಹಣ ಪಡೆದರೆ ಕ್ರಮ:
    ವಿಶೇಷವಾಗಿ ಟಾಸ್ಕ್ ಫೋರ್ಸ್ ನೇಮಕ ಮಾಡಲಾಗಿದೆ ಎಂದರು. ಚಿಕಿತ್ಸೆಗೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ. ಡೆಂಗ್ಯೂ ಕಾಯಿಲೆಯನ್ನು ಕೋವಿಡ್ ಮಾದರಿಯಲ್ಲಿ ಮಾನಿಟರ್ ಮಾಡ್ತಿದ್ದೇವೆ. ಒಂದೇ ಏರಿಯಾದಲ್ಲಿ 2-3 ಕೇಸ್ ಬಂದರೆ ಅದನ್ನ ಹಾಟ್ ಸ್ಪಾಟ್ ಅಂತ ಅಂತ ಘೋಷಣೆ ಮಾಡಿ ಇಡೀ ಏರಿಯಾದಲ್ಲಿ ಫೀವರ್ ಕ್ಲಿನಿಕ್ ಓಪನ್ ಮಾಡಿ ತಪಾಸಣೆ ಮಾಡ್ತಿದ್ದೇವೆ. ಇನ್ನು ಎರಡು ತಿಂಗಳು ನಾವು ಎಚ್ಚರಿಕೆಯಿಂದ ಇರಬೇಕು. ಸೆಪ್ಟೆಂಬರ್ ವರೆಗೂ ನಾವು ಎಚ್ಚರಿಕೆಯಿಂದ ಇರಬೇಕು ಅಂತ ಕರೆ ಕೊಟ್ರು. ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಕೊಡುವ ವ್ಯವಸ್ಥೆ ಮಾಡಲಾಗಿದೆ. ಉಚಿತ ಪ್ಲೇಟ್ ಲೈಟ್ಸ್ ಕೂಡಾ ಸರ್ಕಾರಿ ಆಸ್ಪತ್ರೆಯಲ್ಲಿ ಕೊಡಲಾಗ್ತಿದೆ. ಖಾಸಗಿ ಆಸ್ಪತ್ರೆಯಲ್ಲಿ ಡೆಂಗ್ಯೂ ಟೆಸ್ಟ್ ಗೆ ದರ ನಿಗದಿ ಮಾಡಲಾಗಿದೆ. ಹೆಚ್ಚು ಹಣ ಪಡೆದ್ರೆ ಕ್ರಮ ತೆಗೆದುಕೊಳ್ತಿದ್ದೇವೆ ಅಂತ ತಿಳಿಸಿದರು.

  • ಕುಮಾರಸ್ವಾಮಿ ಬಹಳ ಅನುಭವಸ್ಥರು: ಲಕ್ಷ್ಮಿ ಹೆಬ್ಬಾಳ್ಕರ್‌

    ಕುಮಾರಸ್ವಾಮಿ ಬಹಳ ಅನುಭವಸ್ಥರು: ಲಕ್ಷ್ಮಿ ಹೆಬ್ಬಾಳ್ಕರ್‌

    ಉಡುಪಿ: ಕುಮಾರಸ್ವಾಮಿ (HD Kumaraswamy) ಬಹಳ ಅನುಭವಸ್ಥರು, ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿ ಆಗಿದ್ದವರು. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿಲ್ಲ ಎಂದು ಹೇಳುತ್ತಾರೆ. ಧೈರ್ಯವಿದ್ದರೆ ಮುಂದೆ ಬಂದು ಹೇಳಲಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ (Lakshmi Hebalkar) ಗುಡುಗಿದ್ದಾರೆ.

    ಉಡುಪಿಯಲ್ಲಿ ಗೃಹಜ್ಯೋತಿ ಯೋಜನೆಗೆ (Gruhajyothi Scheme) ಸಾಂಕೇತಿಕವಾಗಿ ಚಾಲನೆ ನೀಡಿದ ಸಚಿವರು ಮಾಧ್ಯಮಗಳೊಂದಿಗೆ ಮಾತನಾಡಿ, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆರೋಪಗಳಿಗೆ ತಿರುಗೇಟು ನೀಡಿದರು. ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರ (Congress Government) ನುಡಿದಂತೆ ನಡೆಯುತ್ತಿಲ್ಲ ಎಂದು ಹೇಳುತ್ತಾರೆ. ಧೈರ್ಯವಿದ್ದರೆ ಮುಂದೆ ಬಂದು ಹೇಳಲಿ. ಕುಮಾರಸ್ವಾಮಿ ಅವರ ಬಗ್ಗೆ ಬಹಳ ಗೌರವವಿದೆ. ಅವರು ಸಿಎಂ ಆಗಿದ್ದಾಗ ನಾನೂ ಶಾಸಕಿಯಾಗಿ ಕೆಲಸ ಮಾಡಿದ್ದೇನೆ. ಹೆಚ್‌ಡಿಕೆ ಹಿಟ್ ಅಂಡ್ ರನ್ ಕೇಸ್ ಮಾಡೋದಕ್ಕೆ ಹೋಗ್ಬಾರದು. ನಾವು ಐದು ಗ್ಯಾರಂಟಿಗಳನ್ನು ಜಾರಿಗೊಳಿಸುತ್ತೇವೆ. ಜನರಿಗೆ ಇದ್ರಿಂದ ಲಾಭ ಇಲ್ಲ, ಮುಚ್ಚಿಬಿಡಿ ಎಂದು ಮುಂದೆ ಬಂದು ಹೇಳಲಿ ಎಂದು ಸವಾಲ್ ಹಾಕಿದ್ದಾರೆ.

    ಗೃಹಲಕ್ಷ್ಮಿ ಯೋಜನೆ ಕುರಿತು ಮಾತನಾಡುತ್ತಾ, 1.28 ಕೋಟಿ ಕುಟುಂಬಗಳ ಫಲಾನುಭವಿಗಳಿದ್ದಾರೆ. ಅದರಲ್ಲಿ 1 ಕೋಟಿ ಕುಟುಂಬಗಳು ನೋಂದಣಿಯಾಗಿದೆ. ಆಗಸ್ಟ್ 18 ಅಥವಾ ಆಗಸ್ಟ್ 20ರಂದು ಸೋನಿಯಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಚಾಲನೆ ನೀಡಲಿದ್ದಾರೆ. ಡಿಬಿಟಿ ಮೂಲಕ ಮನೆ ಯಜಮಾನಿ ಖಾತೆಗೆ ಹಣ ಹಾಕುವ ಮೂಲಕ ಯೋಜನೆಗೆ ಚಾಲನೆ ನಿಡಲಾಗುತ್ತದೆ ಎಂದರು. ಇದನ್ನೂ ಓದಿ: ಹರಿಯಾಣದಲ್ಲಿಯೂ ಘರ್ಜಿಸಿದ ಬುಲ್ಡೋಜರ್- ಅಕ್ರಮವಾಗಿ ನಿರ್ಮಿಸಿದ್ದ ಎರಡು ಡಜನ್‌ ಕಟ್ಟಡಗಳ ತೆರವು

    ಉಡುಪಿ ವೀಡಿಯೋ ಚಿತ್ರೀಕರಣ ಕೇಸ್ ಕುರಿತು ಮಾತನಾಡಿ, ಕಾನೂನು ಚೌಕಟ್ಟಿನಲ್ಲಿ ಪೊಲೀಸರು ಕಾರ್ಯನಿರ್ವಹಿಸುತ್ತಿದ್ದಾರೆ. ನಿಷ್ಪಕ್ಷಪಾತವಾಗಿ ತನಿಖೆ ಆಗುವಂತೆ ಜಿಲ್ಲಾ ಉಸ್ತುವಾರಿ ಸಚಿವೆಯಾಗಿ ನೋಡಿಕೊಳ್ಳುತ್ತೇನೆ. ಒಬ್ಬ ಮಹಿಳೆಯಾಗಿ ಯಾವುದೇ ಹೆಣ್ಣು ಮಕ್ಕಳ ಮೇಲೆ ಅನ್ಯಾಯವಾದರೂ ಸಹಿಸಲು ಸಾಧ್ಯವಿಲ್ಲ. ವಿದ್ಯಾರ್ಥಿನಿಯರ ಭವಿಷ್ಯದ ಪ್ರಶ್ನೆ ಇದೆ. ಆದ್ದರಿಂದ ತನಿಖೆ ಆಗುವವರೆಗೂ ಕಾಯ್ದಿರಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದಿಂದ ಬಂದ ಭಯೋತ್ಪಾದಕರು ನಮ್ಮ ದೇಶದ ಸೈನಿಕರನ್ನು ಹತ್ಯೆ ಮಾಡಿದ್ದಾರೆ: ಓವೈಸಿ ಕಿಡಿ

    ಇನ್ನೂ ಪ್ರತಿಭಟನಾಕಾರರ ಮೇಲೆ ಕೇಸ್ ಹಾಕಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಪ್ರತಿಭಟನೆ ವೇಲೆ ತಪ್ಪಾಗಿ ಮಾತನಾಡಿದ್ದಕ್ಕಾಗಿ ಕೇಸ್ ಆಗಿದೆ. ಪ್ರತಿಭಟನೆ ಮಾಡುವುದು ತಪ್ಪಲ್ಲ, ಆದ್ರೆ ಪ್ರಚೋದನಕಾರಿಯಾಗಿ ಮಾತನಾಡುವುದು ತಪ್ಪು. ಈ ಬಗ್ಗೆ ಎಸ್ಪಿ ಜೊತೆಗೂ ಮಾತನಾಡಿದ್ದೇನೆ. ಎಲ್ಲಾ ಜಾತಿ ಧರ್ಮದವರು ಒಟ್ಟಿಗೆ ಇರೋಣ. ಬಿಜೆಪಿಯವರು ರಾಮ ರಾಜ್ಯದ ಪರಿಕಲ್ಪನೆ ಹೇಳುತ್ತಾರೆ. ರಾಮ ರಾಜ್ಯದಲ್ಲಿ ಎಲ್ಲರೂ ಸೌಹಾರ್ದಯುತವಾಗಿ ಇರಬೇಕು ಅನ್ನುವುದು ಕಾಂಗ್ರೆಸ್ ಸಿದ್ಧಾಂತ ಎಂದು ತಿರುಗೇಟು ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]