Tag: Gruhalakshmi App

  • ಆಗಸ್ಟ್‌ನಲ್ಲಿ ಫಲಾನುಭವಿಗಳ ಖಾತೆಗೆ ʻಗೃಹಲಕ್ಷ್ಮಿʼ – ಲಕ್ಷ್ಮಿ ಹೆಬ್ಬಾಳ್ಕರ್

    ಆಗಸ್ಟ್‌ನಲ್ಲಿ ಫಲಾನುಭವಿಗಳ ಖಾತೆಗೆ ʻಗೃಹಲಕ್ಷ್ಮಿʼ – ಲಕ್ಷ್ಮಿ ಹೆಬ್ಬಾಳ್ಕರ್

    ಬೆಂಗಳೂರು: ಮುಂದಿನ ಆಗಸ್ಟ್ ತಿಂಗಳಲ್ಲೇ ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಫಲಾನುಭವಿಗಳಿಗೆ 2 ಸಾವಿರ ರೂ. ಹಾಕೋದು ಖಚಿತ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಸ್ಪಷ್ಟಪಡಿಸಿದ್ದಾರೆ.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಹೇಮಲತಾ ನಾಯಕ್ (Hemalatha Nayak) ಅವರು ಗೃಹಲಕ್ಷ್ಮಿ ಯೋಜನೆ ಕುರಿತು ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಆಗಸ್ಟ್‌ನಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ 2 ಸಾವಿರ ರೂ. ಜಮೆ ಮಾಡಲಾಗುತ್ತದೆ ಅಂತ ಭರವಸೆ ನೀಡಿದರು. ಗೃಹಲಕ್ಷ್ಮಿ ಯೋಜನೆಗೆ 30 ಸಾವಿರ ಕೋಟಿ ಹಣ ಬೇಕೆಂದು ಅಂದಾಜಿಸಲಾಗಿದೆ. 2023-24ರ ಬಜೆಟ್‌ನಲ್ಲಿ ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರು 17,500 ಕೋಟಿ ಅನುದಾನ ಒದಗಿಸಿದ್ದಾರೆ ‌ಎಂದು ವಿವರಿಸಿದರು.

    ಗೃಹಲಕ್ಷ್ಮಿ ಅರ್ಜಿ ಸಲ್ಲಿಕೆ ನಾವು ಪ್ರಾರಂಭ ಮಾಡಿಲ್ಲ, ಹಾಗಾಗಿ ಸರ್ವರ್ ಸಮಸ್ಯೆ ವಿಷಯವೇ ಬರೋದಿಲ್ಲ. ಆ್ಯಪ್ ಕೂಡಾ ಬಿಡುಗಡೆ ಆಗಿಲ್ಲ. 2-3 ದಿನಗಳಲ್ಲಿ ಸುದ್ದಿಗೋಷ್ಠಿ ಮಾಡಿ ಅರ್ಜಿ ಸಲ್ಲಿಕೆಗೆ ದಿನಾಂಕ ಘೋಷಣೆ ಮಾಡ್ತೀವಿ. ಅಂದೇ ಆ್ಯಪ್ ಕೂಡ ರಿಲೀಸ್ ಮಾಡ್ತೀವಿ ಎಂದರು. ಇದನ್ನೂ ಓದಿ: ಚಂದ್ರಯಾನ-3 ಯಶಸ್ಸಿಗೆ ತಿರುಪತಿ ದೇವರಲ್ಲಿ ಪ್ರಾರ್ಥನೆ; ಇಸ್ರೋ ವಿಜ್ಞಾನಿಗಳ ನಡೆಗೆ ಪ್ರಗತಿಪರ ಚಿಂತಕರ ಖಂಡನೆ

    ಆಗಸ್ಟ್ 16 ಅಥವಾ 17 ರಂದು ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಹಾಕ್ತೀವಿ. ಮನೆ ಯಜಮಾನಿಗೆ ನಾವು 2 ಸಾವಿರ ರೂ. ಕೊಡ್ತಿದ್ದೇವೆ. ಕುಟುಂಬದ ಯಜಮಾನಿಗೆ ಯೋಜನೆ ಲಾಭ ಹೋಗುತ್ತೆ. ಯಾರ ಮನೆಯಲ್ಲೂ ಜಗಳ ತರಲು ಈ ಯೋಜನೆ ಕಾಂಗ್ರೆಸ್ ಮಾಡಿಲ್ಲ. ಬೆಲೆ ಏರಿಕೆಯಿಂದ ತತ್ತರಿಸಿದ ಮಹಿಳೆಯರಿಗೆ ಅನುಕೂಲ ಆಗಲು ಯೋಜನೆ ಜಾರಿ ಮಾಡಿದ್ವಿ. 4-5 ದಿನಗಳಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಚಾಲನೆ ಕೊಡಲಿದ್ದೇವೆ ಎಂದು ತಿಳಿಸಿದರು.

    ನಾವು ಪ್ರಾರಂಭ ಮಾಡಿರೋ ಸಹಾಯವಾಣಿಗೆ ಅತಿ ಹೆಚ್ಚು ಮಾಹಿತಿ ಗೃಹಲಕ್ಷ್ಮಿ ಬಗ್ಗೆ ಜನ ಕೇಳ್ತಿದ್ದಾರೆ. ಹೀಗಾಗಿ ಗೃಹಲಕ್ಷ್ಮಿ ಯೋಜನೆಗೆ ಜನ ಉತ್ಸುಕರಾಗಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ವಿಧಾನಸೌಧದಲ್ಲಿ ನಮಾಜ್‌ ಮಾಡೋಕೆ ಅನುಮತಿ ಕೊಟ್ರೆ ಕರ್ನಾಟಕವೇ ಹೊತ್ತಿ ಉರಿಯುತ್ತೆ – ಮುತಾಲಿಕ್‌ ಎಚ್ಚರಿಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗೃಹಲಕ್ಷ್ಮೀ ಆ್ಯಪ್ ಹ್ಯಾಕ್ ಬಗ್ಗೆ ಜಾರಕಿಹೊಳಿಯನ್ನೇ ಕೇಳಿ ಎಂದ ಜಾರ್ಜ್

    ಗೃಹಲಕ್ಷ್ಮೀ ಆ್ಯಪ್ ಹ್ಯಾಕ್ ಬಗ್ಗೆ ಜಾರಕಿಹೊಳಿಯನ್ನೇ ಕೇಳಿ ಎಂದ ಜಾರ್ಜ್

    ಬೆಂಗಳೂರು: ಗೃಹಲಕ್ಷ್ಮೀ ಆ್ಯಪ್ (Gruhalakshmi App) ಅನ್ನು ಕೇಂದ್ರ ಸರ್ಕಾರ ಹ್ಯಾಕ್ (Hack) ಮಾಡಿದೆ ಎಂಬ ಸತೀಶ್ ಜಾರಕಿಹೊಳಿ (Satish Jarkiholi) ಆರೋಪಕ್ಕೆ ಈ ಕುರಿತು ಅವರನ್ನೇ ಕೇಳಿ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ (K.J.George) ಪ್ರತಿಕ್ರಿಯೆ ನೀಡಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮೀ ಆ್ಯಪ್ ವಿಚಾರವಾಗಿ ಸತೀಶ್ ಜಾರಕಿಹೊಳಿಯವರನ್ನು ಕೇಳಿದರೆ ಅದರ ವಿವರ ಕೊಡುತ್ತಾರೆ. ಈ ವಿಚಾರದ ಬಗ್ಗೆ ನನಗೆ ಹೆಚ್ಚು ಗೊತ್ತಿಲ್ಲ. ಯಾವುದೇ ಸಂದರ್ಭದಲ್ಲಿ ಸಮೇತ ಹೆಚ್ಚು ಬೇಡಿಕೆಗಳು ಬಂದಾಗ ಈ ರೀತಿಯಾದ ಸಮಸ್ಯೆಗಳು ಎದರಾಗುತ್ತವೆ. ತುಂಬಾ ಜನ ಒಂದೇ ಸಲ ಹೋಗಿ ಅರ್ಜಿ ಸಲ್ಲಿಕೆ ಮಾಡಿದಾಗ ಈ ರೀತಿಯಾಗುತ್ತದೆ ಎಂದರು. ಇದನ್ನೂ ಓದಿ: ಕಾಂಗ್ರೆಸ್‍ನಿಂದಲೇ ಸರ್ವರ್ ಹ್ಯಾಕ್ – ಇವಿಎಂ ಹ್ಯಾಕ್ ಮಾಡಿ ಕಾಂಗ್ರೆಸ್ ಗೆದ್ದಿರಬಹುದು ಎಂದ ಮುನಿಸ್ವಾಮಿ

    ನೋಂದಣಿ ಸಾಮರ್ಥ್ಯ 5 ಲಕ್ಷ ಇತ್ತು. ಅದು ಈಗ ಹೆಚ್ಚಾಗಿದ್ದರಿಂದ ಸಮಸ್ಯೆಗಳು ಎದುರಾಗಿದೆ. ಜನರು ಏಕಾಏಕಿ ನೋಂದಣಿ ಮಾಡಿಸುತ್ತಿರುವುದರಿಂದ ಸರ್ವರ್ (Server) ಸಮಸ್ಯೆ ಆಗುತ್ತಿದೆ. ಮುಂದಿನ ಮೂರು ನಾಲ್ಕು ದಿನಗಳಲ್ಲಿ ಸಮಸ್ಯೆ ಬಗೆಹರಿಯುತ್ತದೆ. ಸಮಸ್ಯೆ ಸರಿ ಆಗದಿದ್ದರೂ ಜನ ಯಾರೂ ಗಾಬರಿ ಪಡಬೇಕಾಗಿಲ್ಲ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಶಾಲಾ ಮಕ್ಕಳ ಮೊಟ್ಟೆಗೆ ಕತ್ತರಿ ಹಾಕಿದ ಸರ್ಕಾರ

    ಒಂದೇ ಸಲ ಹೆಚ್ಚು ಜನ ನೋಂದಣಿ ಮಾಡುತ್ತಿರುವುದರಿಂದ ಸರ್ವರ್ ಪ್ರಾಬ್ಲಮ್ ಆಗುವುದು ಸಹಜ. ಗೃಹಜ್ಯೋತಿ (Gruhajyothi) ನೋಂದಣಿಗೆ ನಾವು ಡೆಡ್‌ಲೈನ್ ಕೊಡಲಿಲ್ಲ. ಈ ಸಮಸ್ಯೆ ಆದಷ್ಟು ಬೇಗ ಬಗೆಹರಿಯುತ್ತದೆ. ಇದಕ್ಕೆ ಟೋಕನ್ ಸಿಸ್ಟಮ್ ಜಾರಿ ಮಾಡುವಂತೆ ಸೂಚನೆ ನೀಡಿದ್ದೇವೆ ಎಂದರು. ಇದನ್ನೂ ಓದಿ: ಆಧುನಿಕ ಆರೋಗ್ಯ ಸಮಸ್ಯೆಗಳಿಗೆ ಯೋಗ ಮದ್ದು: ದಿನೇಶ್ ಗುಂಡೂರಾವ್

    ಗೃಹಜ್ಯೋತಿ ಯೋಜನೆಯಲ್ಲಿ ಜನರು 59 ಯೂನಿಟ್‌ನಿಂದ 200 ಯೂನಿಟ್ ಒಳಗಿನ ವ್ಯತ್ಯಾಸ ಎಷ್ಟು ಬರುತ್ತದೆ ಅಷ್ಟು ಕಟ್ಟಿದರೆ ಸಾಕು. ಉಳಿದಂತೆ 200 ಯೂನಿಟ್ ದಾಟಿದರೆ ಪೂರ್ತಿ ಕಟ್ಟಬೇಕಾಗುತ್ತದೆ. ವಿದ್ಯುತ್ ದರ ಮಾರ್ಚ್‌ನಲ್ಲಿ ಏರಿಕೆಯಾಗುತ್ತಿದ್ದರೆ ಸಮಸ್ಯೆ ಆಗುತ್ತಿರಲಿಲ್ಲ. ಅದನ್ನು ಮೇಯಲ್ಲಿ ಏರಿಕೆ ಮಾಡಿರುವುದರಿಂದ ಸಮಸ್ಯೆ ಆಗುತ್ತಿದೆ. ಈ ಕುರಿತು ನಾವು ಸಿಎಂ ಜೊತೆ ಚರ್ಚೆ ಮಾಡುತ್ತೇವೆ. ಟ್ಯಾಕ್ಸ್ ಇಳಿಕೆ ಕುರಿತು ಸಿಎಂ ಜೊತೆ ಚರ್ಚೆ ಮಾಡಿದ ಬಳಿಕ ನಿರ್ಧಾರ ಮಾಡುತ್ತೇವೆ. ಈ ಕುರಿತು ನಾನು ಯಾವುದೇ ಭರವಸೆ ನೀಡುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಅನ್ನ ಭಾಗ್ಯ ಫೈಟ್‌ ದೆಹಲಿಗೆ ಶಿಫ್ಟ್‌