Tag: Gubbi MLA

  • ಅಂತ್ಯಸಂಸ್ಕಾರಕ್ಕೆ ಗುಬ್ಬಿ ಶಾಸಕ ಬರಬೇಕು – ಡೆತ್‌ನೋಟ್ ಬರೆದಿಟ್ಟು ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

    ಅಂತ್ಯಸಂಸ್ಕಾರಕ್ಕೆ ಗುಬ್ಬಿ ಶಾಸಕ ಬರಬೇಕು – ಡೆತ್‌ನೋಟ್ ಬರೆದಿಟ್ಟು ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

    ನೆಲಮಂಗಲ: ಕೆರೆಗೆ ಹಾರಿ ವ್ಯಕ್ತಿಯೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು (Bengaluru) ಹೊರವಲಯ ನೆಲಮಂಗಲ (Nelamangala) ತಾಲೂಕಿನ ಸೋಂಪುರ ಹೋಬಳಿಯ ದೇವರಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಮೃತ ವ್ಯಕ್ತಿಯನ್ನು ತುಮಕೂರು (Tumkur) ಜಿಲ್ಲೆಯ ಗುಬ್ಬಿ (Gubbi) ಪಟ್ಟಣದ ನಿವಾಸಿ ಜಯಪ್ರಕಾಶ್ (39) ಎಂದು ಗುರುತಿಸಲಾಗಿದೆ. ಗ್ರಾನೆಟ್ ಕೆಲಸ ನಿರ್ವಹಿಸುತ್ತಾ ಜೀವನ ಸಾಗಿಸುತ್ತಿದ್ದ ಜಯಪ್ರಕಾಶ್ ಜೀವನ ನಿರ್ವಹಣೆಗಾಗಿ ಸಣ್ಣ ಪುಟ್ಟ ಸಾಲ ಮಾಡಿಕೊಂಡಿದ್ದ. ಜೊತೆಗೆ ಗೋಮಾಳದಲ್ಲಿ ಜಮೀನು ಸಾಗುವಳಿ ಮಾಡಿಕೊಂಡು ಬಂದಿದ್ದು, ಸಾಗುವಳಿ ಚೀಟಿ ಸಹ ನೀಡಲಾಗಿತ್ತು. ಆದರೆ ಅದರ ಪಾಣಿ ಇನ್ನು ಆತನ ಹೆಸರಿಗೆ ಬಂದಿರಲಿಲ್ಲ. ಈ ಬಗ್ಗೆ ತೀವ್ರವಾಗಿ ನೊಂದಿದ್ದ ಜಯಪ್ರಕಾಶ್ ವಿಸ್ತೃತವಾದ ಡೆತ್ ನೋಟ್ ಬರೆದಿಟ್ಟು ತಮ್ಮ ಮನೆದೇವರಾದ ದೇವರ ಹೊಸಹಳ್ಳಿಯ ವೀರಭದ್ರ ಸ್ವಾಮಿಯ ಗ್ರಾಮದಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ಜನಾರ್ದನ್‌ ರೆಡ್ಡಿಗೆ ಬಿಗ್‌ ರಿಲೀಫ್‌ – ಒಂದೇ ದಿನ 4 ಪ್ರಕರಣಗಳಿಂದ ಮುಕ್ತಿ

    ಡೆತ್‌ ನೋಟ್‌ನಲ್ಲಿ ನನ್ನ ಅಂತ್ಯಸಂಸ್ಕಾರಕ್ಕೆ ಗುಬ್ಬಿ ಶಾಸಕ ವಾಸು ಬರಬೇಕು ಹಾಗೂ ನನ್ನ ಕುಟುಂಬಕ್ಕೆ ಸಹಾಯ ಮಾಡಬೇಕೆಂದು ಬರೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಡಾಬಸ್ಪೇಟೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮೃತದೇಹವನ್ನು ಹೊರ ತೆಗೆಯುವಲ್ಲಿ ತುಮಕೂರು ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಹಾಗೂ ಸಿಬ್ಬಂದಿ ಹರಸಾಹಸಪಟ್ಟರು. ಡಾಬಸ್ ಪೇಟೆಯ ಸರ್ಕಾರಿ ಆಸ್ಪತ್ರೆ ಶವಗಾರಕ್ಕೆ ಮೃತ ದೇಹವನ್ನು ಸಾಗಿಸಿದ್ದಾರೆ. ಸ್ಥಳಕ್ಕೆ ಡಾಬಸ್ ಪೇಟೆ ಠಾಣೆಯ ಇನ್ಸ್‌ಪೆಕ್ಟರ್ ರವಿ.ಎಸ್, ಆರಕ್ಷಕ ಉಪ ನಿರೀಕ್ಷಕರಾದ ಮಂಗಳಮ್ಮ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಮಹಾರಾಷ್ಟ್ರ ವಿರುದ್ಧ ಕರ್ನಾಟಕ ಸಂಚು ನಡೆಸ್ತಿದೆ- ಸಂಸತ್‍ನಲ್ಲಿಯೂ ಕ್ಯಾತೆ ತೆಗೆದ ಎನ್‍ಸಿಪಿ ಸಂಸದೆ

    Live Tv
    [brid partner=56869869 player=32851 video=960834 autoplay=true]

  • ಜೆಡಿಎಸ್ ತೊರೆಯುವ ಸುಳಿವು ನೀಡಿದ ಗುಬ್ಬಿ ಶಾಸಕ ಶ್ರೀನಿವಾಸ್

    ಜೆಡಿಎಸ್ ತೊರೆಯುವ ಸುಳಿವು ನೀಡಿದ ಗುಬ್ಬಿ ಶಾಸಕ ಶ್ರೀನಿವಾಸ್

    – ತೆನೆ ‘ಹೊರೆ’ ಇಳಿಸಿ ‘ಕೈ’ ಹಿಡಿತಾರಾ?

    ತುಮಕೂರು: ಗುಬ್ಬಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ತೆನೆ ಹೊರೆಯನ್ನ ಇಳಿಸುವ ಸುಳಿವು ನೀಡಿದ್ದಾರೆ. ಒಂದು ಜೆಡಿಎಸ್ ಮುಖಂಡರು ಬಿಜೆಪಿ ಜೊತೆಗೆ ಹೋದ್ರೆ ನೂರಕ್ಕೆ ನೂರರಷ್ಟು ಜನತಾದಳದಲ್ಲಿರಲ್ಲ ಎಂದು ಹೇಳಿದ್ದಾರೆ.

    ನಾನು ಅಧಿಕಾರದ ಹಿಂದೆ ಹೋಗಿದ್ರೆ ತುಮಕೂರು ಜಿಲ್ಲೆಯ ಉಸ್ತುವಾರಿ ಆಗಿರುತ್ತಿದ್ದೆ. ನಾನು ವಾಮ ಮಾರ್ಗದಲ್ಲಿ ರಾಜಕಾರಣ ಮಾಡುವ ವ್ಯಕ್ತಿಯಲ್ಲ. ಜೆಡಿಎಸ್ ನಲ್ಲಿಯ ಕೆಲವರು ಬಿಜೆಪಿ ಜೊತೆ ಹೋಗುವ ಬಗ್ಗೆ ಮಾತನಾಡಿದ್ರೆ, ಇನ್ನು ಕೆಲವರು ಬೇಡ ಅಂತಿದ್ದಾರೆ. ಕುಮಾರಸ್ವಾಮಿ ಬಿಜೆಪಿ ಹೋಗುವ ನಿರ್ಧಾರವನ್ನು ನಮ್ಮದೇ ಪಕ್ಷದ ಕೆಲ ಶಾಸಕರು ವಿರೋಧ ಮಾಡುತ್ತಾರೆ. ಒಂದು ವೇಳೆ ನಾನು ಪಕ್ಷ ತೊರೆದ್ರೆ ಕುಮಾರಸ್ವಾಮಿ ಅವರು ತಲೆ ಕೆಡಿಸಿಕೊಳ್ಳಲ್ಲ. ಬಿಜೆಪಿ ಜೊತೆಗಿನ ಸ್ನೇಹದ ಬಗ್ಗೆ ಕೆಲ ಶಾಸಕರು ನನ್ನೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿಸಿದರು.

    ಇದೇ ವೇಳೆ ಕಾಂಗ್ರೆಸ್ ಮುಖಂಡ ರಾಜಣ್ಣ ಭೇಟಿಗೆ ಪ್ರತಿಕ್ರಿಯಿಸಿದ ಶಾಸಕರು, ಅವರು ಹಿರಿಯ ಮುಖಂಡರು. ರಾಜಣ್ಣ ಜೊತೆಗೆ ತುಂಬಾ ದಿನಗಳಿಂದ ಒಡನಾಟವಿದ್ದು, ಹಾಗಾಗಿ ಅವರ ಮನೆಗೆ ಬಂದಿದ್ದೇನೆ. ಕಾಂಗ್ರೆಸ್ ನಾಯಕರು ಯಾರು ನನ್ನನ್ನು ಸಂಪರ್ಕಿಸಿಲ್ಲ. ಸದ್ಯಕ್ಕೆ ನಾನು ಜೆಡಿಎಸ್ ಶಾಸಕನಾಗಿದ್ದು, ಪಕ್ಷ ಬಿಟ್ಟು ಹೋಗಲ್ಲ ಎಂದು ಸ್ಪಷ್ಟಪಡಿಸಿದರು.

    ನನಗೆ ರಾಜಕೀಯ ಬೇಸರವಾಗಿದ್ದು, ಪ್ರಸ್ತುತ ರಾಜಕೀಯ ವಿದ್ಯಾಮಾನಗಳ ಬಗ್ಗೆ ಅಸಮಾಧಾನ ಇದೆ. ಪ್ರಸ್ತುತ ರಾಜಕೀಯ ವ್ಯವಸ್ಥೆ ಅಸಹ್ಯಪಡುವಂತಿದ್ದು, ಹೀಗಾಗಿ ಎಲ್ಲೂ ಹೋಗದೇ ತೋಟದಲ್ಲಿದ್ದೇನೆ. ಬಿಜೆಪಿ ಜೊತೆಗಿನ ಸಖ್ಯ ಬಗ್ಗೆ ನೀವು ಕುಮಾರಸ್ವಾಮಿ ಅವರನ್ನ ಕೇಳಬೇಕು. ನಾನು ಜೆಡಿಎಸ್ ಶಾಸಕ, ಇಲ್ಲಿಯೇ ಇದ್ದೇನೆ. ಕುಮಾರಸ್ವಾಮಿ ಬಿಜೆಪಿ ಜೊತೆ ಹೋದ್ರೆ ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳುವ ಮೂಲಕ ಪರೋಕ್ಷವಾಗಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರ ಹಾಕಿದರು.

    ಬಿಜೆಪಿ ಜೊತೆ ಒಳ ಒಪ್ಪಂದ ಮಾಡಿಕೊಂಡಿರುವುದು ಇಡೀ ದೇಶಕ್ಕೆ ಗೊತ್ತಿದೆ. ಸಿದ್ದರಾಮಯ್ಯನವರಿಗೆ ಈಗ ಜ್ಞಾನೋದಯವಾದಂತಿದೆ. ಸಿದ್ದರಾಮಯ್ಯರನ್ನ ಸೋಲಿಸಬೇಕೆಂದು ಬೆಂಬಲ ನೀಡಿದ್ದು ನಿಜ. ಅಕ್ಷರಶಃ ಸತ್ಯ, ಅದೊಂದೇ ಕ್ಷೇತ್ರವಲ್ಲ ಸುಮಾರು ಕ್ಷೇತ್ರಗಳಲ್ಲಿ ಬಿಜೆಪಿ ನಾವು ಒಡಂಬಡಿಕೆ ಮಾಡಿಕೊಂಡು ಚುನಾವಣೆಗೆ ಹೋಗಿದ್ದೀವಿ. ಇದು ಎಲ್ಲರಿಗೂ ಗೊತ್ತಿರುವ ವಿಚಾರ ಇದರಲ್ಲಿ ಹೊಸದೇನಿದೆ ಎಂದು ಎಸ್.ಆರ್.ಶ್ರೀನಿವಾಸ್ ಪ್ರಶ್ನೆ ಮಾಡಿದ್ದಾರೆ.

  • ‘ನಾನು ಗಂಡು, ನನಗೆ ಎರಡು ಮಕ್ಕಳಿವೆ.., ಬೇಕಾದ್ರೆ ನಿನ್ನ ಮನೆಗೆ ಬಂದು ತೋರಿಸ್ತೀನಿ’ ಎಂದ ಜೆಡಿಎಸ್ ಶಾಸಕ

    ‘ನಾನು ಗಂಡು, ನನಗೆ ಎರಡು ಮಕ್ಕಳಿವೆ.., ಬೇಕಾದ್ರೆ ನಿನ್ನ ಮನೆಗೆ ಬಂದು ತೋರಿಸ್ತೀನಿ’ ಎಂದ ಜೆಡಿಎಸ್ ಶಾಸಕ

    ತುಮಕೂರು: ಚುನಾವಣೆಗೆ ಇನ್ನೂ ಕೆಲವು ತಿಂಗಳು ಬಾಕಿ ಇರುವಂತೆಯೇ ಜನಪ್ರತಿನಿಧಿಗಳ ನಾಲಿಗೆ ಯದ್ವಾತದ್ವಾ ತಿರುಗುತ್ತಿದೆ. ಆಚಾರವಿಲ್ಲದ ನಾಲಿಗೆಯಲ್ಲಿ ಮನಸಿಗೆ ಬಂದಂತೆ ತುಚ್ಛವಾಗಿ, ಕೀಳುಮಟ್ಟದ ಭಾಷಣ ಆರಂಭವಾಗಿದೆ. ತುಮಕೂರು ಜಿಲ್ಲೆ ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್. ಶ್ರೀನಿವಾಸ್ ತಮ್ಮ ನಾಲಗೆಯನ್ನು ಹರಿಬಿಟ್ಟಿದ್ದಾರೆ. ಜೆಡಿಎಸ್ ನ ಅತೃಪ್ತ ಸ್ಥಳೀಯ ಮುಖಂಡ ಶಿವಣ್ಣರನ್ನು ಟೀಕಿಸುವ ಭರದಲ್ಲಿ ಸಭ್ಯತೆಯ ಎಲ್ಲೆ ಮೀರಿ ಮಾತನಾಡಿದ್ದಾರೆ. ‘ನಾನೂ ಗಂಡಸು…, ನನಗೂ ಇಬ್ಬರು ಮಕ್ಕಳಿದ್ದಾರೆ. ಬೇಕಾದ್ರೆ ನಾನು ಆ ಶಿವಣ್ಣನ ಮನೆಗೆ ಬಂದು ನನ್ನ ಗಂಡಸ್ತನ ಸಾಬೀತುಪಡಿಸ್ತೀನಿ’ ಎಂದು ಅಸಭ್ಯವಾಗಿ ಹೊಸಕೆರೆಯಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ್ದಾರೆ. ಶಾಸಕರ ಅಸಂವಿಧಾನಿಕ ಪದಪ್ರಯೋಗಗಳ ಭಾಷಣದ ತುಣುಕು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಶ್ರೀನಿವಾಸ್ ಭಾಷಣದಲ್ಲೇನಿದೆ..?: ‘ಅವನ್ಯಾವನೋ ಶಿವಣ್ಣನಂತೆ, ಅವನು ಸೀದಾ ಅವನ ಅಪ್ಪನಿಗೆ ಹುಟ್ಟಿದರೆ ನನ್ನ ಮುಂದೆ ಬಂದು ಮಾತನಾಡಬೇಕು. ನಾನು ಗಂಡಸಾ ಹೆಂಗಸಾ ಅಂತಾ ಅವನು ಕೇಳಲಿ. ನಾನು ಜಿಲ್ಲಾ ಪಂಚಾಯತ್ ಸದಸ್ಯನಾಗಿ, ಶಾಸಕನಾಗಿದ್ದೀನಿ ಇದರಲ್ಲಿ ನಾನು ಗಂಡ್ಸು ಅಂತಾ ನಿರೂಪಿಸಿದ್ದೀನಿ. ನನಗೆ ಎರಡು ಮಕ್ಕಳಿವೆ. ಇವರ ಮುಂದೇನೇ ತಿರುಗಾಡ್ತಾನೆ ನನ್ ಮಗಾ. ಅವನಿಗೆ ಈಗ 21 ವರ್ಷ. ನಾನು ಗಂಡಸು ಅಂತಾ ನೀವು ಒಪ್ಕೋತೀರಾ. ಅದ್ರ ಮೇಲೂ ಅವರಿಗೆ ಅನುಮಾನ ಇದೆ ಅಂದ್ರೆ ಬೇಕಾದ್ರೆ ನಾನು ಅವರ ಮನೆಗೆ ಬರ್ತೀನಿ. ಗಂಡಸಾ ಹೆಂಗಸಾ ಅಂತಾ ತೋರಿಸಲಿ’ ಎಂದು ಹರಿಹಾಯ್ದಿದ್ದಾರೆ ಶ್ರೀನಿವಾಸ್. ಇದಕ್ಕೆಲ್ಲಾ ಶ್ರೀನಿವಾಸ್ ಬೆಂಬಲಿಗರು ಚಪ್ಪಾಳೆ, ತಟ್ಟಿ ಶಿಳ್ಳೆ ಹೊಡೆದು ಸಂಭ್ರಮಿಸಿದ್ದಾರೆ.

    ಇಷ್ಟೆಲ್ಲಾ ಹೇಳಬಾರದ್ದನ್ನು ಹೇಳಿದ ಮೇಲೆ, ‘ಮಾತಾಡುವಾಗ ನಾಲಿಗೆ ಮೇಲೆ ಹಿಡಿತ ಇಟ್ಕೊಂಡು ಮಾತನಾಡಬೇಕು. ಇನ್ನೊಬ್ಬ ವ್ಯಕ್ತಿಯ ಅವಹೇಳನ ಮಾಡುವಂಥಾ ಕೆಲಸ ಮಾಡಬಾರದು. ಆ ಶಿವಣ್ಣ ಅನ್ನೋ ಬಡ್ಡೀಮಗ ಅವನ ಅಪ್ಪನಿಗೇ ಹುಟ್ಟಿದರೆ ನನ್ಮುಂದೆ ಬಂದು ನಿಂತು ಮಾತನಾಡಲಿ. ನಾನು ಮಾಡಬೇಕಾದ ಕೆಲಸವನ್ನು ಕಾಯಾ ವಾಚಾ ಮನಸಾ ಮಾಡ್ತೀನಿ ಎಂದು ಹೇಳಿದ್ದಾರೆ.

    ಜನರು ಏನ್ ಹೇಳ್ತಿದ್ದಾರೆ: ಶಿವಣ್ಣ ಜೆಡಿಎಸ್ ಅತೃಪ್ತ ನಾಯಕ. ಅವರು ಬಿಜೆಪಿಗೆ ಒಳಗಿಂದೊಳಗೇ ಬೆಂಬಲ ನೀಡುತ್ತಿದ್ದಾರೆ ಎಂಬ ಆರೋಪ ಶ್ರೀನಿವಾಸ್ ಅವರದ್ದು. ಶಿವಣ್ಣ ಲಿಂಗಾಯತ ಸಮುದಾಯದ ಮುಖಂಡ. ನಿಜವಾಗಿಯೂ ಶ್ರೀನಿವಾಸ್ ಅವರಿಗೆ ತಾನು ಯಾರ ಬಗ್ಗೆ ಮಾತನಾಡುತ್ತಿದ್ದರೋ ಅವರ ಹೆಸರೇ ಗೊತ್ತಿರಲಿಲ್ಲ ಎನ್ನುತ್ತಾರೆ ಗ್ರಾಮಸ್ಥರು. ಶಾಸಕ ಶ್ರೀನಿವಾಸ್ ಅವರು ಸಿಟ್ಟಾಗಿರೋರ ನಿಜವಾದ ಹೆಸರು ಸೊಣಬನಹಳ್ಳಿ ರಾಜಣ್ಣ ಅಂತೆ. ಆದರೆ ಮಾತಿನ ಭರದಲ್ಲಿ ಅವರ ಬಾಯಿಯಿಂದ ಶಿವಣ್ಣ ಎಂದು ಹೆಸರು ಬಂದಿದೆ ಎನ್ನುವುದು ಸ್ಥಳೀಯರ ವಾದ.

    ಇದನ್ನೆಲ್ಲಾ ಕೇಳಿಸಿಕೊಂಡ ಮೇಲೆ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮತ್ತು ಅವರ ಪಕ್ಷದ ನಾಯಕರು ಈ ಬಗ್ಗೆ ಏನನ್ನುತ್ತಾರೋ ಎಂಬ ಕುತೂಹಲ ಎಲ್ಲರದು.

    https://www.youtube.com/watch?v=qyvMXDy82ow