Tag: guest house

  • ಗೆಸ್ಟ್ ಹೌಸ್‌ನಲ್ಲಿ ಕಸ ಗುಡಿಸುತ್ತಿರೋ ಪ್ರಿಯಾಂಕಾ ಗಾಂಧಿ ವೀಡಿಯೋ ವೈರಲ್

    ಗೆಸ್ಟ್ ಹೌಸ್‌ನಲ್ಲಿ ಕಸ ಗುಡಿಸುತ್ತಿರೋ ಪ್ರಿಯಾಂಕಾ ಗಾಂಧಿ ವೀಡಿಯೋ ವೈರಲ್

    ಲಕ್ನೋ: ಪೊಲೀಸರ ವಶದಲ್ಲಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಗೆಸ್ಟ್ ಹೌಸ್‌ನಲ್ಲಿ ಕಸ ಗುಡಿಸುತ್ತಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

    ಪೊಲೀಸರ ವಶದಲ್ಲಿರುವ ಪ್ರಿಯಾಂಕಾ ಅವರು ಸದ್ಯ ಸೀತಾಪುರದ ಅತಿಥಿಗೃಹದಲ್ಲಿದ್ದು, ಅಲ್ಲಿ ಅವರು ಕಸ ಗುಡಿಸುತ್ತಿದ್ದಾರೆ. ಈ ವೀಡಿಯೋವನ್ನು ಕಾಂಗ್ರೆಸ್ ಯುವ ಘಟಕದ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿವಿ ಟ್ವೀಟ್ ಮಾಡಿದ್ದಾರೆ. ಸೀತಾಪುರ ಪೊಲೀಸ್ ವಶದಲ್ಲಿರುವ ಪ್ರಿಯಾಂಕಾ ಅವರು, ಗಾಂಧೀಜಿ ಅವರ ರ್ಮಾಗವನ್ನು ಅನುಸರಿಸುತ್ತಿದ್ದಾರೆ. ಶ್ರಮದಾನ ಮಾಡುವ ಮೂಲಕವಾಗಿ ಉಪವಾಸವನ್ನು ಆರಂಭಿಸಿದ್ದಾರೆ. ಅನ್ನದಾತರ ಸಾವಿಗೆ ಕಾರಣವಾಗಿರುವ ಕೊಲೆಗಾರರನ್ನು ಬಂಧಿಸುವವರೆಗೂ ಈ ಚಳುವಳಿ ಮುಂದುವರಿಯುತ್ತದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಹತ್ಯಾಕಾಂಡದ ನಂತರವೂ ಮೌನವಾಗಿರುವವರು ಈಗಾಗಲೇ ಸತ್ತಿದ್ದಾರೆ: ರಾಹುಲ್ ಗಾಂಧಿ

    ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಇಂದು ಬೆಳಗ್ಗೆ ಉತ್ತರಪ್ರದೇಶದ ಸೀತಾಪುರ ಜಿಲ್ಲೆಯ ಹರ್‍ಗಾಂವ್ ನಲ್ಲಿ ಬಂಧಿಸಲಾಗಿದೆ. ಲಖಿಂಪುರ್ ಖೇರಿಯಲ್ಲಿ ಭಾನುವಾರ ನಡೆದ ಹಿಂಸಾಚಾರದಲ್ಲಿ ಎಂಟು ಜನರು ಸಾವನ್ನಪ್ಪಿದ್ದು ಅಲ್ಲಿಗೆ ಭೇಟಿ ನೀಡಲು ಪ್ರಿಯಾಂಕಾ ಹೋಗುತ್ತಿದ್ದ ವೇಳೆ ಪೊಲೀಸರು ತಡೆದಿದ್ದಾರೆ. ಭಾನುವಾರದ ಘಟನೆಯ ನಂತರ ಲಖಿಂಪುರ್ ಖೇರಿಗೆ ಹೋಗುತ್ತಿರುವ ಹಲವಾರು ವಿರೋಧ ಪಕ್ಷದ ನಾಯಕರನ್ನು ತಡೆಯಲಾಗಿದೆ. ಇದನ್ನೂ ಓದಿ: ನೀವು ಹತ್ಯೆ ಮಾಡಿದ ಜನರಿಗಿಂತ ನಾನು ಮುಖ್ಯ ಅಲ್ಲ: ಪ್ರಿಯಾಂಕಾ ಗಾಂಧಿ

    ಪ್ರಿಯಾಂಕಾ ಗಾಂಧಿ ಲಕ್ನೋಗೆ ಭೇಟಿ ನೀಡಿದಾಗ, ಆಕೆಯ ಬೆಂಗಾವಲು ವಾಹನಕ್ಕೆ ತಡೆಯೊಡ್ಡಲಾಯಿತು. ಪ್ರಿಯಾಂಕಾ ಲಕ್ನೋಗೆ ಭೇಟಿ ನೀಡಿದಾಗ ತಂಗಿದ್ದ ಕೌಲ್ ಹೌಸ್ ಅನ್ನು ಉತ್ತರ ಪ್ರದೇಶ ಪೊಲೀಸರು ಸುತ್ತುವರಿದರು. ಪ್ರಿಯಾಂಕಾ ಪೊಲೀಸರ ಕಣ್ತಪ್ಪಿಸಿ ತನ್ನ ನಿವಾಸದಿಂದ ಪಕ್ಕದ ಗೇಟ್ ಮೂಲಕ ಹೊರ ಬಂದು ಕಾರು ಹತ್ತಿದ್ದರು. ಕಾಂಗ್ರೆಸ್ ನಾಯಕ ದೀಪೇಂದ್ರ ಸಿಂಗ್ ಹೂಡಾ, ಪ್ರಿಯಾಂಕಾ ಅವರನ್ನು ಕಾರಿನಲ್ಲಿ ಲಖಿಂಪುರ್ ಖೇರಿಗೆ ಕರೆದೊಯ್ದಿದ್ದಾರೆ. ವಶದಲ್ಲಿರುವ ಪ್ರಿಯಾಂಕಾ ಅವರನ್ನು ಉತ್ತರ ಪ್ರದೇಶದ ಪೊಲೀಸರು ಗೃಹ  ಬಂಧನದಲ್ಲಿ ಇರಿಸಿದ್ದಾರೆ.

  • ಎಚ್‍ಡಿಕೆ – ಜಮೀರ್ ಬೆಂಬಲಿಗರ ಮಧ್ಯೆ ಗಲಾಟೆ

    ಎಚ್‍ಡಿಕೆ – ಜಮೀರ್ ಬೆಂಬಲಿಗರ ಮಧ್ಯೆ ಗಲಾಟೆ

    ಬೆಂಗಳೂರು: ಸದಾಶಿವನಗರದ ಗೆಸ್ಟ್ ಹೌಸ್ ವಿಚಾರವಾಗಿ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಬೆಂಬಲಿಗರು ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಬೆಂಬಲಿಗರ ನಡುವೆ ಗಲಾಟೆ ನಡೆದು ತಣ್ಣಗಾಗಿದೆ.

    ಇಂದು ಸಂಜೆ ಗೆಸ್ಟ್ ಹೌಸ್ ಬಳಿ ತೆರಳಿದ ನಿಖಿಲ್ ಕುಮಾರಸ್ವಾಮಿ ಅವರ ಮೂವರು ಬಾಡಿಗಾರ್ಡ್‍ಗಳು ಬೀಗ ಮುರಿದಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಜಮೀರ್ ಕಡೆಯ ಗೆಸ್ಟ್ ಹೌಸ್ ಕೇರ್ ಟೇಕರ್ ಅಡ್ಡ ಬಂದಾಗ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ಈ ವೇಳೆ ಬಾಡಿಗಾರ್ಡ್‍ಗಳು ಬೀಗ ಮುರಿದು ಒಳಗೆ ನುಗ್ಗಿ ಮನೆಯ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ ಎಂದು ಕೇರ್ ಟೇಕರ್ ಜಮೀರ್ ಅಹ್ಮದ್‍ಗೆ ವಿಷಯ ಮುಟ್ಟಿಸಿದ್ದಾರೆ. ಇದನ್ನು ಓದಿ:ರಮೇಶ್ ಜಾರಕಿಹೊಳಿ ಪ್ರಕರಣ- ಎಸ್‍ಐಟಿಗೆ ಮುಖ್ಯಸ್ಥರೇ ಇಲ್ಲ..!

    ವಿಷಯ ತಿಳಿದು ಜಮೀರ್ ಅವರು ತನ್ನ ಪಿಎ ಫಾರೂಖ್ ಅವರಿಗೆ ಸದಾಶಿವನಗರದ ಪೊಲೀಸ್ ಠಾಣೆಗೆ ದೂರು ಕೊಡುವಂತೆ ಸೂಚಿಸಿದ್ದಾರೆ. ನಿಖಿಲ್ ಬಾಡಿಗಾರ್ಡ್‍ಗಳು ಎಚ್‍ಡಿಕೆಯ ಕೆಲ ವಸ್ತುಗಳನ್ನು ಕೊಂಡೊಯ್ಯಲು ಬಂದಿದ್ದರು ಎಂದು ಹೇಳಲಾಗುತ್ತಿದ್ದು, 2006ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ, ಜಮೀರ್ ಅಹಮದ್ ಖಾನ್‍ಗೆ ಈ ಗೆಸ್ಟ್ ಹೌಸ್ ನೀಡಿದ್ದರು. ನಂತರದ ಬೆಳವಣಿಗೆಯಲ್ಲಿ ಇಬ್ಬರ ನಡುವಿನ ಸ್ನೇಹ ಮುರಿದು ಬಿದ್ದಿತ್ತು.

    ಎಚ್‍ಡಿಕೆ ಪಲ್ಟಿ ಗಿರಾಕಿ ಕಾಸು ಇರುವ ಕಡೆ ತಿರುಗುತ್ತಾರೆ ಅಂತೆಲ್ಲ ಜಮೀರ್ ಟಾಂಗ್ ಕೊಟ್ಟಿದ್ದರು. ಇದರ ನಡುವೆ ಗೆಸ್ಟ್ ಹೌಸ್ ಗಲಾಟೆ ಮೇಲಕ್ಕೆ ಎದ್ದಿತ್ತು. ಹೀಗಾಗಿ ಎಂಎಲ್‍ಸಿ ಬೋಜೇಗೌಡ ಮಧ್ಯಪ್ರವೇಶ ಮಾಡಿ ಜಮೀರ್ ಜೊತೆ ಸಂಧಾನ ನಡೆಸಿ, ದೂರು ಹಿಂಪಡೆಯುವಂತೆ ಮನವೊಲಿಸಿದ್ದಾರೆ. ಸ್ಟೇಷನ್ ಮೆಟ್ಟಿಲು ಹತ್ತಿದ್ದ ಗೆಸ್ಟ್ ಹೌಸ್ ಗಲಾಟೆ ಸದ್ಯ ತಣ್ಣಗಾಗಿದೆ. ಇದನ್ನು ಓದಿ: ಗೂಡ್ಸ್ ವಾಹನ ಚಾಲಕರಿಗೆ ಸರ್ಕಾರ ಸಹಾಯ ಮಾಡದಿದ್ದರೆ ಪ್ರತಿಭಟನೆಯ ಎಚ್ಚರಿಕೆ

  • ಮುಂಬೈ ವಲಸಿಗರಿಗೆ ಸ್ವಂತ ಗೆಸ್ಟ್‌ಹೌಸ್‌ನಲ್ಲಿ ಆಶ್ರಯ ಕಲ್ಪಿಸಿದ ಸತೀಶ್ ಜಾರಕಿಹೊಳಿ

    ಮುಂಬೈ ವಲಸಿಗರಿಗೆ ಸ್ವಂತ ಗೆಸ್ಟ್‌ಹೌಸ್‌ನಲ್ಲಿ ಆಶ್ರಯ ಕಲ್ಪಿಸಿದ ಸತೀಶ್ ಜಾರಕಿಹೊಳಿ

    ಬೆಳಗಾವಿ/ಚಿಕ್ಕೋಡಿ: ಮುಂಬೈನಿಂದ ಬಂದ 200ಕ್ಕೂ ಹೆಚ್ಚು ವಲಸೆ ಕಾರ್ಮಿಕರಿಗೆ ಯಮಕನಮರಡಿ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಮ್ಮ ಗೆಸ್ಟ್ ಹೌಸ್‍ನಲ್ಲೇ ಆಶ್ರಯ ಕಲ್ಪಿಸಿ ಮಾನವೀಯತೆ ಮೆರೆದಿದ್ದಾರೆ.

    ಮಹಾಮಾರಿ ಕೊರೊನಾದಿಂದ ವಲಸೆ ಕಾರ್ಮಿಕರ ಬದುಕು ಬೀದಿಗೆ ಬಂದಂತಾಗಿದೆ. ಕೊರೊನಾ ಭೀತಿಯಿಂದ ದುಡಿಮೆ ಇಲ್ಲದೇ ತಮ್ಮ ಗ್ರಾಮಗಳಿಗೆ ವಾಪಸ್ ಆಗುತ್ತಿರುವ ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದೆ. ತಮ್ಮ ಗ್ರಾಮಗಳಿಗೆ ಬರುವ ಕಾರ್ಮಿಕರನ್ನು ಯಾವುದೋ ಸರ್ಕಾರಿ ಕಟ್ಟಡದಲ್ಲಿ ಇಟ್ಟು ಕ್ವಾರಂಟೈನ್ ಮಾಡುವ ಬದಲು ಸತೀಶ್ ಜಾರಕಿಹೊಳಿ ಅವರು ವಲಸೆ ಕಾರ್ಮಿಕರನ್ನು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅಲದಾಳ ಗ್ರಾಮದಲ್ಲಿರುವ ತಮ್ಮ ಗೆಸ್ಟ್ ಹೌಸ್‍ನಲ್ಲಿ ಕ್ವಾರಂಟೈನ್ ಮಾಡಿಸಿ ಮಾದರಿಯಾಗಿದ್ದಾರೆ.

    ಗೆಸ್ಟ್ ಹೌಸ್‍ನಲ್ಲಿ ಇರುವ ಎಲ್ಲ ಕಾರ್ಮಿಕರು ಮುಂಬೈನಿಂದ ಬಂದವರಾಗಿದ್ದಾರೆ. ದಿನನಿತ್ಯ ಎಲ್ಲ ಕಾರ್ಮಿಕರಿಗೂ ತಮ್ಮ ಸ್ವಂತ ಹಣದಿಂದ 2 ಬಾರಿ ಊಟ, 2 ಬಾರಿ ಉಪಹಾರ ಸೇರಿದಂತೆ ಹಣ್ಣು ಹಂಪಲ ನೀಡುತ್ತಿದ್ದಾರೆ. ಇಷ್ಟೇ ಅಲ್ಲದೇ ತಮ್ಮ ಕ್ಷೇತ್ರದಲ್ಲಿ ವಿವಿಧ ಕಡೆ ಕ್ವಾರಂಟೈನ್ ಇರುವ 1 ಸಾವಿರಕ್ಕೂ ಹೆಚ್ಚು ವಲಸೆ ಕಾರ್ಮಿಕರಿಗೆ ಊಟ ಉಪಹಾರ ತಲುಪಿಸುತ್ತಿದ್ದಾರೆ. ಅಲ್ಲದೇ ಎಲ್ಲ ಕಾರ್ಮಿಕರಿಗೆ ಕಾಲ ಕಳೆಯಲು ಆಟಿಕೆ ಸಾಮಾನುಗಳನ್ನು ವಿತರಿಸಿದ್ದಾರೆ.

    ದೇಶದಲ್ಲಿ ಕೊರೊನಾ ಕೇಂದ್ರವೆಂದೇ ಬಿಂಬಿತವಾಗಿರುವ ಮುಂಬೈನಿಂದ ತಮ್ಮ ಊರುಗಳಿಗೆ ಆಗಮಿಸಿದ ಯಮಕನಮರಡಿ ಕ್ಷೇತ್ರದ ವಲಸೆ ಕಾರ್ಮಿಕರನ್ನು ಕೊರೊನಾ ಭಯದಿಂದ ಗ್ರಾಮಸ್ಥರು ಊರಿನೊಳಗೆ ಸೇರಿಸಿಕೊಳ್ಳಲಿಲ್ಲ. ಕ್ವಾರಂಟೈನ್‍ನಲ್ಲಿ ವ್ಯವಸ್ಥೆಯೂ ಆಗಿರಲಿಲ್ಲ. ಇಂಥ ಸಂದರ್ಭದಲ್ಲಿ ವಲಸೆ ಕಾರ್ಮಿಕರು ತನ್ನ ಕ್ಷೇತ್ರದವರು ಎಂದು ಅರಿತ ಸತೀಶ್ ಜಾರಕಿಹೊಳಿ ಹೆಚ್ಚು ಯೋಚನೆ ಮಾಡದೆ, ಸುಮಾರು 200ಕ್ಕೂ ಹೆಚ್ಚು ವಲಸೆ ಕಾರ್ಮಿಕರಿಗೆ ಉಳಿದುಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದಾರೆ. ತಮ್ಮ ಸಹಾಯಕ್ಕೆ ನಿಂತಿರುವ ಸತೀಶ್ ಜಾರಕಿಹೊಳಿ ಸೇವೆಗೆ ಕಾರ್ಮಿಕರು ಸಂತಸ ವ್ಯಕ್ತಪಡಿಸಿದ್ದಾರೆ.

    ಈ ಹಿಂದೆಯೂ ಸತೀಶ್ ಜಾರಕಿಹೊಳಿ ಕೊರೊನಾ ದಾಳಿಗೆ ಸಿಲುಕಿದ ರೈತರ, ಬಡವರ ಸಂಕಷ್ಟಕ್ಕೆ ಸಹಾಯ ಹಸ್ತ ಚಾಚಿದ್ದರು. ರೈತರು ಬೆಳೆದ ತರಕಾರಿ ಮಾರಾಟಕ್ಕೆ ಸಾಧ್ಯವಾಗದೆ ಹೊಲದಲ್ಲಿಯೇ ಕೊಳೆತು ಹೋಗುವ ಸಂದರ್ಭದಲ್ಲಿ ತಮ್ಮ ಕಾರ್ಯಕರ್ತರೊಂದಿಗೆ ಸ್ವತಃ ಹೊಲಗದ್ದೆಗಳಿಗೆ ಇಳಿದು, ರೈತರ ತರಕಾರಿಗಳನ್ನು ಖರೀದಿಸಿ, ಬಡವರಿಗೆ, ಅಸಹಾಯಕರಿಗೆ ಉಚಿತವಾಗಿ ಹಂಚುವುದರ ಮೂಲಕ ಸಹಾಯ ಮಾಡಿದ್ದರು. ಈಗ ಮತ್ತೆ ವಲಸೆ ಕಾರ್ಮಿಕರ ನೆರವಿಗೆ ನಿಂತಿದ್ದಾರೆ.

  • ಚಳಿಗಾಲದ ಅಧಿವೇಶನದಲ್ಲೂ ಸಿಎಂ ಹೆಚ್‍ಡಿಕೆಗೆ ವಾಸ್ತು ದೋಷ

    ಚಳಿಗಾಲದ ಅಧಿವೇಶನದಲ್ಲೂ ಸಿಎಂ ಹೆಚ್‍ಡಿಕೆಗೆ ವಾಸ್ತು ದೋಷ

    ಬೆಳಗಾವಿ: ಜಿಲ್ಲೆಯಲ್ಲಿ ನಾಳೆಯಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ 10 ದಿನ ಬೆಳಗಾವಿಯಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಾಸ್ತವ್ಯ ಹೂಡಲಿದ್ದಾರೆ. ಆದರೆ ಇಲ್ಲೂ ಸಿಎಂ ಕುಮಾರಸ್ವಾಮಿ ಅವರ ವಾಸ್ತವ್ಯಕ್ಕೆ ವಾಸ್ತು ದೋಷ ಅಡ್ಡಿ ಉಂಟಾಗಿದೆ.

    ಸಿಎಂ ಕುಮಾರಸ್ವಾಮಿ ಅವರು ನಗರದ ನ್ಯೂ ಸರ್ಕ್ಯೂಟ್ ಹೌಸ್ ಬದಲು ವಿಟಿಯು ಗೆಸ್ಟ್ ಹೌಸ್‍ಗೆ ವಾಸ್ತವ್ಯ ಹೂಡಲು ಶಿಫ್ಟ್ ಆಗಲಿದ್ದಾರೆ. ನ್ಯೂ ಸರ್ಕ್ಯೂಟ್ ಹೌಸ್ ವಾಸ್ತು ಸರಿ ಇಲ್ಲ ಎಂದು ಸಿಎಂ ವಾಸ್ತವ್ಯಕ್ಕೆ ಹಿಂದೇಟು ಹಾಕಿದ್ದಾರಾ ಎಂಬ ಮಾತು ಕೇಳಿಬರುತ್ತಿದೆ. ಸಚಿವ ಎಚ್.ಡಿ.ರೇವಣ್ಣ ಅವರ ಸೂಚನೆ ಹಿನ್ನೆಲೆಯಲ್ಲಿ ಸಿಎಂ ಕುಮಾರಸ್ವಾಮಿ ಅವರು ವಿಟಿಯುಗೆ ಶಿಫ್ಟ್ ಆಗಿಲಿದ್ದಾರೆ.

    ವಿಟಿಯು ಗೆಸ್ಟ್ ಹೌಸನ್ನು ಅಧಿಕಾರಿಗಳಾದ ಬೆಳಗಾವಿ ಪ್ರಾದೇಶಿಕ ಆಯುಕ್ತ ಮೇಘಣ್ಣವರ್, ಡಿಸಿ ಎಸ್.ಬಿ ಬೊಮ್ಮನಹಳ್ಳಿ ಪರಿಶೀಲನೆ ನಡೆಸಿದ್ದಾರೆ. ಸದ್ಯಕ್ಕೆ ಸರ್ಕ್ಯೂಟ್ ಹೌಸ್ ಸಿಎಂ ಕುಮಾರಸ್ವಾಮಿ ಅವರಿಗೆ ಕಾಯ್ದಿರಿಸಲು ಅಧಿಕಾರಿಗಳು ನಿರ್ಧಾರ ಮಾಡಿದ್ದಾರೆ. ಈ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ವರ್ಷಗಳ ಕಾಲ ಸರ್ಕ್ಯೂಟ್ ಹೌಸ್ ನಲ್ಲಿ ವಾಸ್ತವ್ಯ ಮಾಡಿದ್ದರು. ಸರ್ಕ್ಯೂಟ್ ಹೌಸ್ ವಾಸ್ತವ್ಯದಿಂದ ಸಾರ್ವಜನಿಕರಿಗೂ ಅನುಕೂಲವಾಗುತ್ತದೆ.

    ವಿಟಿಯು ಅತಿಥಿ ಗೃಹ ಬೆಳಗಾವಿಯಿಂದ 18 ಕಿ.ಮೀ ದೂರವಿದೆ. ಇದರಿಂದ ಸಿಎಂ ಭೇಟಿಗೆ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಲಿದೆ. ಅಷ್ಟೇ ಅಲ್ಲದೇ ಸುವರ್ಣ ಸೌಧದಿಂದ ವಿಟಿಯು ಅತಿಥಿ ಗೃಹಕ್ಕೆ ಸಿಎಂ ನಿತ್ಯ ಓಡಾಟ ಮಾಡಬೇಕಾಗುತ್ತದೆ. ಬೆಳಗಾವಿಯ ಪ್ರಮುಖ ರಸ್ತೆಯಲ್ಲಿ ಸಿಎಂ ಓಟಾಡದಿಂದ ಸಂಚಾರ ಅಸ್ತವ್ಯಸ್ತವಾಗುವ ಸಾಧ್ಯತೆ ಕೂಡ ಇದೆ. ಇತ್ತ ಸಿಎಂ ಕುಮಾರಸ್ವಾಮಿ ಅವರು ಸಾರ್ವಜನಿಕರಿಂದ ದೂರು ಉಳಿಯಲು ವಿಟಿಯು ಆಯ್ಕೆ ಮಾಡಿಕೊಂಡ್ರಾ ಎಂಬ ಅನುಮಾನ ಮೂಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 300 ರೋಗಿಗಳಿಗೆ ಮೂರೇ ವೈದ್ಯರು – ವಸತಿಗೃಹದಲ್ಲಿ ಹಾವು, ಚೇಳುಗಳ ದರ್ಬಾರ್

    300 ರೋಗಿಗಳಿಗೆ ಮೂರೇ ವೈದ್ಯರು – ವಸತಿಗೃಹದಲ್ಲಿ ಹಾವು, ಚೇಳುಗಳ ದರ್ಬಾರ್

    ಬೆಳಗಾವಿ: ಒಂದೆಡೆ ಖಾಸಗಿ ಆಸ್ಪತ್ರೆಗಳಿಗೆ ಮೂಗುದಾರ ತೊಡಿಸಲು ಸರ್ಕಾರ ಮುಂದಾಗಿದೆ. ಆದರೆ ಮತ್ತೊಂದೆಡೆ ಸರ್ಕಾರಿ ಆಸ್ಪತ್ರೆಗಳೇ ಐಸಿಯುನಲ್ಲಿದೆ.

    ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಕಬ್ಬೂರು ಗ್ರಾಮದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ 10 ಹಳ್ಳಿಗಳಿಂದ ದಿನನಿತ್ಯ ಇನ್ನೂರರಿಂದ ಮುನ್ನೂರು ರೋಗಿಗಳು ಬರುತ್ತಾರೆ. ಆದ್ರೆ ಸೂಕ್ತ ಸಮಯದಲ್ಲಿ ಇಲ್ಲಿ ಚಿಕಿತ್ಸೆ ಸಿಗುವುದು ಮಾತ್ರ ಅಪರೂಪ.

    ಇಲ್ಲಿರುವುದು ಕೇವಲ ಮೂರು ವೈದ್ಯರು ಹಾಗೂ ಮೂವರು ನರ್ಸ್‍ಗಳು ಮಾತ್ರ. ಡಿ ದರ್ಜೆ ಸಿಬ್ಬಂದಿಯಿರುವುದು ಕೇವಲ ಒಬ್ಬರು ಮಾತ್ರ. ಹಲವು ಬಾರಿ ಗರ್ಭಿಣಿಯರಿಗೆ ನರ್ಸಗಳೇ ಹೆರಿಗೆ ಮಾಡಿಸಿದ್ದಾರೆ. ಮತ್ತೊಂದಡೆ ವೈದ್ಯರಿಗಾಗಿ ನಿರ್ಮಿಸಲಾಗಿರುವ ವಸತಿ ಗೃಹಗಳು ಹಾವು ಚೇಳುಗಳ ಆವಾಸ ಸ್ಥಾನವಾಗಿದೆ.

  • ನಂದಿ ಗಿರಿಧಾಮದಲ್ಲಿ ಆರಂಭವಾಯ್ತು ಹೈಟೆಕ್ ಅತಿಥಿ ಗೃಹ

    ನಂದಿ ಗಿರಿಧಾಮದಲ್ಲಿ ಆರಂಭವಾಯ್ತು ಹೈಟೆಕ್ ಅತಿಥಿ ಗೃಹ

    – ಪ್ರವಾಸೋದ್ಯಮ ಇಲಾಖೆ ವತಿಯಿಂದ ಕಟ್ಟಡ ನಿರ್ಮಾಣ

    ಚಿಕ್ಕಬಳ್ಳಾಪುರ: ವಿಶ್ವ ವಿಖ್ಯಾತ ನಂದಿ ಗಿರಿಧಾಮದಲ್ಲಿ ಇದೀಗ ಹೈಟೆಕ್ ಮಾದರಿಯ ಅತ್ಯಾಕರ್ಷಕ ನೂತನ ಅತಿಥಿ ಗೃಹಗಳು ಪ್ರವಾಸಿಗರ ಸೌಲಭ್ಯಕ್ಕೆ ಲಭ್ಯವಾಗಲಿವೆ. ನಂದಿಗಿರಿಧಾಮದ ಗಾಂಧಿ ನಿಲಯದ ಪಕ್ಕದಲ್ಲಿ ಪ್ರವಾಸೋದ್ಯಮ ಇಲಾಖೆ ವತಿಯಿಂದ ಸರಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣ ಮಾಡಲಾಗಿದೆ.

    ಕಟ್ಟಡದಲ್ಲಿ 14 ಕೊಠಡಿಗಳು ಪ್ರವಾಸಿಗರ ಬಳಕೆಗೆ ಲಭ್ಯವಾಗಲಿದ್ದು, ಬೃಹತ್ ಸಭಾಂಗಣ ಕೂಡ ಇದೆ. ನಂದಿ ಗಿರಿಧಾಮದಲ್ಲಿ ತಂಗಲು ಸಮರ್ಪಕ ಕೊಠಡಿಗಳ ವ್ಯವಸ್ಥೆ ಇಲ್ಲದೆ ಪ್ರವಾಸಿಗರು ಪರದಾಡುವಂತಾಗಿತ್ತು. ಇದನ್ನ ಮನಗಂಡ ಪ್ರವಾಸೋದ್ಯಮ ಇಲಾಖೆ ಇದೀಗ ನೂತನ ಕಟ್ಟಡ ನಿರ್ಮಾಣ ಮಾಡಿ ಪ್ರವಾಸಿಗರ ಸೌಲಭ್ಯಕ್ಕೆ ಅನೂಕೂಲ ಮಾಡಿಕೊಟ್ಟಿದೆ.

    ಅಂದ ಹಾಗೆ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಡಾ.ಕೆ ಸುಧಾಕರ್ ನೂತನ ಕಟ್ಟಡದ ಉದ್ಘಾಟನೆಯನ್ನ ನೇರವೇರಿಸಿದ್ರು. ಪ್ರವಾಸೋದ್ಯಮ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಅನ್‍ಲೈನ್ ಮೂಲಕ ಕೊಠಡಿಗಳನ್ನ ಕಾಯ್ದಿರಿಬಹುದಾಗಿದ್ದು. ಒಂದು ಕೊಠಡಿಗೆ ದಿನಕ್ಕೆ 2000 ರೂಪಾಯಿ ಬಾಡಿಗೆ ನಿಗದಿ ಮಾಡಲಾಗಿದೆ ಅಂತ ಆಧಿಕಾರಿಗಳು ತಿಳಿಸಿದ್ದಾರೆ.