Tag: Guidlines

  • ಮೈಸೂರು ದಸರಾಗೆ ಪ್ರತ್ಯೇಕ ಮಾರ್ಗಸೂಚಿ – ಉದ್ಘಾಟನೆಗೆ ಕೇವಲ 100 ಮಂದಿಗಷ್ಟೇ ಅವಕಾಶ

    ಮೈಸೂರು ದಸರಾಗೆ ಪ್ರತ್ಯೇಕ ಮಾರ್ಗಸೂಚಿ – ಉದ್ಘಾಟನೆಗೆ ಕೇವಲ 100 ಮಂದಿಗಷ್ಟೇ ಅವಕಾಶ

    – ದಸರಾ ಆಚರಣೆಯಲ್ಲಿ 400 ಮಂದಿಗೆ ಅನುಮತಿ
    – ರಾಜ್ಯಕ್ಕೆ ಮತ್ತೊಂದು ಗೈಡ್‍ಲೈನ್ಸ್

    ಮೈಸೂರು/ಬೆಂಗಳೂರು: ಅರಮನೆ ನಗರಿಯ ದಸರಾ ಹಬ್ಬಕ್ಕೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗಿದೆ. ದಸರಾ ಹಬ್ಬ, ದುರ್ಗಾ ಪೂಜೆಗೆ ಮಾರ್ಗಸೂಚಿ ರೆಡಿಯಾಗಿದೆ. ಈ ಮೂಲಕ ಮೈಸೂರಿಗೆ ಒಂದು, ಇಡೀ ರಾಜ್ಯಕ್ಕೆ ಮತ್ತೊಂದು ಗೈಡ್‍ಲೈನ್ಸ್ ಎನ್ನುವಂತಾಗಿದೆ.

    ಮೈಸೂರು ದಸರಾಗೆ ಮಾರ್ಗಸೂಚಿ..!
    ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅಂತರ, ಮಾಸ್ಕ್ ಬಳಕೆ ಕಡ್ಡಾಯ. ವರ್ಚುವಲ್ ಮೂಲಕ ದಸರಾ ವೈಭವ ವೀಕ್ಷಣೆಗೆ ಅವಕಾಶ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ. ದಸರಾ ವೀಕ್ಷಣೆಗೆ ಬಂದ ಸಾರ್ವಜನಿಕರಿಗೆ ಮಾಸ್ಕ್ ಕಡ್ಡಾಯವಾಗಿರುತ್ತದೆ.

    ಆಚರಣೆಯಲ್ಲಿ ಪಾಲ್ಗೊಳ್ಳುವ ವ್ಯಕ್ತಿಗಳ ಸಂಖ್ಯೆ ಸೀಮಿತ ಮಾಡಲಾಗಿದೆ. ದಸರೆಯಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರಿಗೂ ನೆಗೆಟಿವ್ ರಿಪೋರ್ಟ್ ಜೊತೆಗೆ 1 ಡೋಸ್ ಲಸಿಕೆ ಕಡ್ಡಾಯ. ಕರ್ತವ್ಯ ನಿರತ ಅಧಿಕಾರಿಗಳು, ರಕ್ಷಣಾ ಸಿಬ್ಬಂದಿ, ಕಲಾವಿದರಿಗೆ ಇದು ಅನ್ವಯವಾಗಲಿದೆ.

    ಮೈಸೂರು ಸೇರಿದ ಕರ್ನಾಟಕದ ಕಲಾವಿದರಿಗೆ ಆದ್ಯತೆ ನೀಡುವುದು. ಚಾಮುಂಡಿ ಬೆಟ್ಟಕ್ಕೆ 100 ಜನರಿಗೆ ಮಾತ್ರ, 8 ದಿನಗಳ ಕಾಲ 500 ಕಲಾವಿದರಿಗೆ ಮಾತ್ರ ಅವಕಾಶ ನೀಡಲಾಗುವುದು. ಪ್ರತಿದಿನ ಸಂಜೆ 2 ಗಂಟೆ ಮೀರದಂತೆ ಸಾಂಸ್ಕೃತಿಕ ಕಾರ್ಯಕ್ರಮವಿದ್ದು, ಜಂಬೂ ಸವಾರಿಗೆ 500 ಜನರಿಗೆ ಮಾತ್ರ ಅವಕಾಶ ನಿಡಲಾಗುತ್ತಿದೆ. ಇದನ್ನೂ ಓದಿ:  ಚಾಮುಂಡಿ ಭಕ್ತರಿಗಿಲ್ಲ ಅಮ್ಮನವರ ದರ್ಶನ- 3ದಿನ ಪ್ರವೇಶಕ್ಕೆ ನಿರ್ಬಂಧ

    ರಾಜ್ಯಕ್ಕೆ ರೂಲ್ಸ್ ಗಳೇನು..?
    ಮೈಸೂರು ಹೊರತಾಗಿ ರಾಜ್ಯದ ಇತರೆಡೆ ನಡೆಸಲಾಗುವ ಆಚರಣೆಗೆ 400 ಕಿಂತ ಹೆಚ್ಚು ಜನ ಒಮ್ಮೆಲೆ ಸೇರಬಾರದು. ಸಾಮಾಜಿಕ ಅಂತರವಿಲ್ಲದೇ ನಡೆಸಲಾಗುವ ದಸರಾ ಕಾರ್ಯಕ್ರಮಗಳಿಗೆ ನಿಷೇಧ. ಸರ್ಕಾರ ಮತ್ತು ಜಿಲ್ಲಾಡಳಿತ ಹೊರಡಿಸಿರುವ ನಿಯಮಗಳನ್ನ ಪಾಲಿಸತಕ್ಕದು, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಜಿಲ್ಲಾಡಳಿತ ಸ್ಥಳೀಯ ಸಂಸ್ಥೆಗಳು ರೂಲ್ಸ್ ಫಾಲೋ ಮಾಡಬೇಕು. ಕಾನೂನು ಸುವ್ಯವಸ್ಥೆಗೆ ಭಂಗ ಬರದಂತೆ ದಸರಾ ಹಬ್ಬ ಆಚರಣೆ ಮಾಡಬೇಕು.

    ರಾಜ್ಯಾದ್ಯಂತ ಆಚರಿಸಲಾಗುವ ನಾಡಹಬ್ಬ, ದಸರಾ ತಯಾರಿ ಮತ್ತು ಚಟುವಟಿಕೆ ಕುರಿತು ಸಂಬಂಧಿಸಿದ ಪ್ರಾಧಿಕಾರಗಳಿ ಆಗಾಗ್ಗೆ ಕ್ರಮ ವಹಿಸುವುದು. ಕೊವಿಡ್ 19 ಇರುವ ಹಿನ್ನೆಲೆ ದಸರಾ ಹಬ್ಬವನ್ನ ಅತ್ಯಂತ ಸರಳವಾಗಿ ಮತ್ತು ಭಕ್ತಿ ಪೂರ್ವಕವಾಗಿ ಆಚರಿಸಬೇಕು. ಜಿಲ್ಲಾಡಳಿತ ಅಗತ್ಯ ಮುನ್ನೆಚ್ಚರಿಕಾ ಕ್ರಮವಹಿಸಿ ಆಚರಣೆಗೆ ಮುನ್ನವೇ ನಿಷೇಧ ಕುರಿತು ಪ್ರಚಾರ ಮಾಡತಕ್ಕದ್ದಾಗಿದೆ.

  • ನಂದಿ ಗಿರಿಧಾಮದಲ್ಲಿ ಪ್ರವಾಸಿಗರ ದಂಡು- ಮಾಸ್ಕ್ ಧರಿಸದವರಿಗೆ ಬಿತ್ತು ದಂಡ

    ನಂದಿ ಗಿರಿಧಾಮದಲ್ಲಿ ಪ್ರವಾಸಿಗರ ದಂಡು- ಮಾಸ್ಕ್ ಧರಿಸದವರಿಗೆ ಬಿತ್ತು ದಂಡ

    – ವೀಕೆಂಡ್ ಮಸ್ತ್ ಮಜಾ, ಸುರಕ್ಷತಾ ಕ್ರಮ ಮರೆತರು
    – ಕಾರು, ಬೈಕ್ ಗಳಲ್ಲಿ ಪ್ರವಾಸಿಗರ ಲಗ್ಗೆ

    ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರ ಅನ್‍ಲಾಕ್ 4 ಮಾರ್ಗಸೂಚಿ ಪ್ರಕರಟಿಸಿದ್ದು, ಪ್ರವಾಸಿ ತಾಣಗಳು ಹಾಗೂ ಮೆಟ್ರೊ ರೈಲು ಸಂಚಾರಕ್ಕೂ ಅವಕಾಶ ಕಲ್ಪಿಸಿದೆ. ಈ ಹಿನ್ನೆಲೆ ನಂದಿ ಗಿರಿಧಾಮವನ್ನು ಸಹ ಪ್ರವಾಸಿಗರಿಗೆ ಮುಕ್ತಗೊಳಿಸಲಾಗಿದೆ. ಪ್ರವಾಸಿಗರು ಸಹ ನಂದಿ ಗಿರಿಧಾಮದಲ್ಲಿ ವೀಕೆಂಡ್ ಮಜಾ ಮಾಡುತ್ತಿದ್ದಾರೆ. ಆದರೆ ಎಷ್ಟೇ ಎಚ್ಚರಿಕೆ, ಅರಿವು ಮೂಡಿಸಿದರೂ ಕೊರೊನಾ ನಿಯಮ ಪಾಲಿಸುತ್ತಿಲ್ಲ. ಹೀಗೆ ಮಾಸ್ಕ್ ಧರಿಸಿದೇ ಆಗಮಿಸಿದ ಪ್ರವಾಸಿಗರಿಗೆ ದಂಡ ವಿಧಿಸಿ ಬುದ್ಧಿ ಕಲಿಸಲಾಗಿದೆ.

    ಕೊರೊನಾ ಹಿನ್ನೆಲೆ ಆತಂಕದ ನಡುವೆ ನಂದಿ ಗಿರಿಧಾಮವನ್ನು ಇಂದು ಪ್ರವಾಸಿಗರಿಗೆ ಮುಕ್ತಗೊಳಿಸಲಾಗಿದೆ. ಈ ಕುರಿತು ವಿಷಯ ತಿಳಿಯುತ್ತಿದ್ದಂತೆ ನಾ ಮುಂದು ತಾ ಮುಂದು ಎಂದು ಪ್ರವಾಸಿಗರು ನಂದಿಬೆಟ್ಟಕ್ಕೆ ಲಗ್ಗೆಯಿಟ್ಟಿದ್ದಾರೆ. ಆದರೆ ಕೊರೊನಾ ನಿಯಮಗಳ ಪಾಲನೆಯನ್ನು ಮರೆಯುತ್ತಿದ್ದು, ಸಾಮಾಜಿಕ ಅಂತರ ಕಾಪಾಡದೆ, ಮಾಸ್ಕ್ ಧರಿಸದೆ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಈ ರೀತಿ ಮಾಸ್ಕ್ ಧರಿಸದೆ ನಿರ್ಲಕ್ಷ್ಯ ವಹಿಸುವವರಿಗೆ ಬುದ್ಧಿ ಕಲಿಸಲಾಗುತ್ತಿದ್ದು, ದಂಡ ಹಾಕಲಾಗುತ್ತಿದೆ.

    ಇಂದು ಬೆಳಗ್ಗೆ 8ಕ್ಕೆ ನಂದಿ ಗಿರಿಧಾಮದ ಚೆಕ್‍ಪೋಸ್ಟ್ ತೆಗೆದಿದ್ದೇ ತಡ ಮುಂಜಾನೆಯಿಂದಲೇ ಕಾತರದಿಂದ ಕಾಯುತ್ತಿದ್ದ ಪ್ರವಾಸಿಗರು, ನಂದಿ ಬೆಟ್ಟಕ್ಕೆ ಲಗ್ಗೆಯಿಟ್ಟರು. ಕೊರೊನಾ ಹರಡುವಿಕೆ ಹಿನ್ನೆಲೆ ಮಾರ್ಚ್ 14 ರಿಂದ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಆದೇಶ ಮಾಡಿತ್ತು. ಸುಮಾರು 5 ತಿಂಗಳ ನಂತರ ಇಂದಿನಿಂದ ನಂದಿ ಗಿರಿಧಾಮಕ್ಕೆ ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗಿದೆ.

    ಇಂದು ಬೆಳ್ಳಂ ಬೆಳಗ್ಗೆ ನೂರಾರು ಪ್ರವಾಸಿಗರು ನಂದಿಬೆಟ್ಟಕ್ಕೆ ಆಗಮಿಸಿ ನಂದಿಗಿರಿಧಾಮದ ಪ್ರಾಕೃತಿಕ ಸೌಂದರ್ಯವನ್ನು ಸವಿದರು. ಜಿಲ್ಲಾಡಳಿತ ಮಾಸ್ಕ್ ಸಾಮಾಜಿಕ ಅಂತರ ಪಾಲನೆ ಸೇರಿದಂತೆ ಕೊರೊನಾ ನಿಯಮ ಪಾಲನೆ ಕಡ್ಡಾಯ ಮಾಡಿದೆ. ಆದರೆ ಪ್ರವಾಸಿಗರು ಮಾತ್ರ ಯಾವುದಕ್ಕೂ ಕ್ಯಾರೆ ಎನ್ನುತ್ತಿಲ್ಲ. ಹೀಗಾಗಿ ಮಾಸ್ಕ್ ಧರಿಸದವರಿಗೆ ತಲಾ 100 ರೂಪಾಯಿ ದಂಡ ವಿಧಿಸಿ ಬುದ್ಧಿ ಕಲಿಸಲಾಗುತ್ತಿದೆ. ಪ್ರತಿದಿನ ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.