Tag: gujarat MLAs

  • ಡಿಕೆಶಿ ಹುಡುಕಿ ರೆಸಾರ್ಟ್ ಗೆ ಬಂದ ಐಟಿ ಅಧಿಕಾರಿಗಳು ಗುಜರಾತ್ ಶಾಸಕರನ್ನು ಸಂಪರ್ಕಿಸಿದ್ದೇಕೆ?

    ಡಿಕೆಶಿ ಹುಡುಕಿ ರೆಸಾರ್ಟ್ ಗೆ ಬಂದ ಐಟಿ ಅಧಿಕಾರಿಗಳು ಗುಜರಾತ್ ಶಾಸಕರನ್ನು ಸಂಪರ್ಕಿಸಿದ್ದೇಕೆ?

    ಬೆಂಗಳೂರು: ಈಗಲ್ ಟನ್ ರೆಸಾರ್ಟ್‍ನಲ್ಲಿ ಐಟಿ ಅಧಿಕಾರಿಗಳು ಸಚಿವ ಡಿಕೆ ಶಿವಕುಮಾರ್ ಅವರನ್ನು ಮಾತ್ರ ಸಂಪರ್ಕಿಸಿದ್ದರು ಎಂಬ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿಕೆಗೆ ಈಗ ಹೊಸ ಟ್ವಿಸ್ಟ್ ಸಿಕ್ಕಿದೆ. ನಿನ್ನೆ ಐಟಿ ಅಧಿಕಾರಿಗಳು ದಾಳಿ ನಡೆಸಿದ ವೇಳೆಯ ಸಿಸಿಟಿವಿ ದೃಶ್ಯಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿದ್ದು, ಇದರಲ್ಲಿ ಐಟಿ ಅಧಿಕಾರಿಗಳು ರೆಸಾರ್ಟಲ್ಲಿದ್ದ ಶಾಸಕರನ್ನು ಮಾತನಾಡುತ್ತಿರೋ ದೃಶ್ಯಗಳಿವೆ.

    ಗುಜರಾತ್ ಶಾಸಕರಿಗಾಗಿಯೇ ಈಗಲ್ಟನ್ ಮೇಲೆ ಐಟಿ ದಾಳಿ ನಡೆಯಿತಾ ಎಂಬ ಅನುಮಾನ ಮೂಡಿದೆ. ಕಾರಣ ರೆಸಾರ್ಟ್‍ನಲ್ಲಿ ಸಚಿವ ಡಿಕೆಶಿ ಮೇಲೆ ದಾಳಿ ವೇಳೆ ಗುಜರಾತ್ ಎಂಎಲ್‍ಎಗಳನ್ನು ಐಟಿ ಅಧಿಕಾರಿಗಳು ಸಂಪರ್ಕಿಸಿದ್ದಾರೆ. ಈ ಎಕ್ಸ್ ಕ್ಲೂಸಿವ್ ದೃಶ್ಯಾವಳಿಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಕಾಂಗ್ರೆಸ್ ಶಾಸಕರಾದ ಜಾವೀದ್ ಪಿರ್ ಜಾದಾ, ಇಂದ್ರಾನಿಲ್ ರಾಜಗುರು, ಬಲದೇವ್ ಜೀ, ನಟವರ್ ಸಿಂಗ್ ಠಾಕೂರ್ ರನ್ನು ಅಧಿಕಾರಿಗಳು ಭೇಟಿಯಾಗಿದ್ದಾರೆ. ಅಧಿಕಾರಿಗಳು ಶಾಸಕರೊಂದಿಗೆ ಮಾತುಕತೆ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಗುಜರಾತ್ ಶಾಸಕರು ಈಗಲ್‍ಟನ್ ರೆಸಾರ್ಟ್‍ನಲ್ಲಿರುವ ಕಾರಣ ಅಲ್ಲಿ ದಾಳಿ ನಡೆದಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಇದು ರಾಜಕೀಯ ಪ್ರೇರಿತ ಎಂದು ಕಿಡಿ ಕಾರಿತ್ತು. ಆದ್ರೆ ಇದಕ್ಕೆ ಬುಧವರಾದಂದು ಸ್ಪಷ್ಟೀಕರಣ ನೀಡಿದ್ದ ಆದಾಯ ತೆರಿಗೆ ಇಲಾಖೆ, ಈ ದಾಳಿ ಸಚಿವ ಡಿಕೆಶಿ ಮೇಲೆ ಮಾತ್ರ. ಗುಜರಾತ್ ಶಾಸಕರಿಗೂ ಇದಕ್ಕೂ ಸಂಬಂಧವಿಲ್ಲ ಎಂದು ಹೇಳಿತ್ತು.

    ಕರ್ನಾಟಕದ ಸಚಿವರಿಗೆ ಸಂಬಂಧಿಸಿದ ಪ್ರಕರಣದ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆಯ ಕರ್ನಾಟಕ ತನಿಖಾ ತಂಡ ಶೋಧ ನಡೆಸುತ್ತಿದೆ. ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 132 ಅಡಿ ನಡೆಯುತ್ತಿರುವ ಈ ಶೋಧ ಸಾಕ್ಷಿ ಸಂಗ್ರಹದ ಪ್ರಕ್ರಿಯೆಯಾಗಿದೆ. ನಿರ್ದಿಷ್ಟ ಸಮಯದಿಂದ ಚಾಲ್ತಿಯಲ್ಲಿರುವ ತನಿಖೆಯ ಮುಂದುವರಿದ ಭಾಗವಾಗಿ ಈ ದಾಳಿ ನಡೆಸಲಾಗಿದೆ. ದಾಳಿಯ ಸಮಯವನ್ನ ಈ ಹಿಂದೆಯೇ ನಿಗದಿಪಡಿಸಲಾಗಿತ್ತು. ಬೇರೆ ರಾಜ್ಯದ ಶಾಸಕರನ್ನ ಕರ್ನಾಟಕಕ್ಕೆ ಕರೆತಂದಿರುವುದು ಅನಿರೀಕ್ಷಿತ ಅಷ್ಟೇ. ದಾಳಿ ನಡೆಸಲಾಗಿರುವ ಸಚಿವರು ಬೆಂಗಳೂರಿನ ರೆಸಾರ್ಟ್‍ನಲ್ಲಿ ಇದ್ದು, ಅದೇ ರೆಸಾರ್ಟ್‍ನಲ್ಲಿ ಬೇರೆ ರಾಜ್ಯದ ಶಾಸಕರನ್ನ ಇರಿಸಲಾಗಿದೆ. ಹೀಗಾಗಿ ಸಚಿವರ ರೂಮನ್ನು ಮಾತ್ರ ಪರಿಶೀಲನೆ ಮಾಡಲಾಗ್ತಿದೆ. ದಾಳಿ ತಂಡಕ್ಕೂ ಬೇರೆ ರಾಜ್ಯದ ಶಾಸಕರಿಗೂ ಯಾವುದೇ ಸಂಬಂಧವಿಲ್ಲ, ಸಂಪರ್ಕವೂ ಇಲ್ಲ. ಓರ್ವ ಕರ್ನಾಟಕ ಸಚಿವರ ಮೇಲೆ ಮಾತ್ರ ಈ ದಾಳಿ ನಡೆದಿದೆ ಎಂದು ಐಟಿ ಇಲಾಖೆ ಹೇಳಿತ್ತು. ಆದರೆ ಈಗ ಅಧಿಕಾರಿಗಳು ಗುಜರಾತ್ ಶಾಸಕರನ್ನು ಭೇಟಿ ಮಾಡಿರುವ ದೃಶ್ಯಗಳು ಅನುಮಾನಕ್ಕೆ ಎಡೆ ಮಾಡಿಕೊಟ್ಟಿವೆ.

  • ರೆಸಾರ್ಟ್ ಪಾಲಿಟಿಕ್ಸ್ ಗೆ ಬಿಗ್ ಟ್ವಿಸ್ಟ್ – ಕೆಲವೇ ಕ್ಷಣದಲ್ಲಿ ಬೇರೆಡೆಗೆ ಶಾಸಕರು ಶಿಫ್ಟ್?

    ರೆಸಾರ್ಟ್ ಪಾಲಿಟಿಕ್ಸ್ ಗೆ ಬಿಗ್ ಟ್ವಿಸ್ಟ್ – ಕೆಲವೇ ಕ್ಷಣದಲ್ಲಿ ಬೇರೆಡೆಗೆ ಶಾಸಕರು ಶಿಫ್ಟ್?

    ಬೆಂಗಳೂರು: ಡಿಕೆ ಶಿವಕುಮಾರ್ ನಿವಾಸದ ಮೇಲೆ ಐಟಿ ದಾಳಿ ನಡೆದ ಬೆನ್ನಲ್ಲೇ ರೆಸಾರ್ಟ್ ಪಾಲಿಟಿಕ್ಸ್ ಗೆ ದೊಡ್ಡ ಟ್ವಿಸ್ಟ್ ಸಿಕ್ಕಿದೆ.

    ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಪರೇಷನ್ ಕಮಲದ ಭೀತಿಯಲ್ಲಿ ಗುಜರಾತ್ ಶಾಸಕರು ಬೆಂಗಳೂರಿನ ಈಗಲ್‍ಟನ್ ರೆಸಾರ್ಟ್‍ನಲ್ಲಿ ತಂಗಿದ್ದರು. ಆದ್ರೆ ಶಾಸಕರನ್ನ ನೋಡಿಕೊಳ್ತಿದ್ದ ಸಚಿವ ಡಿಕೆಶಿಗೆ ಐಟಿ ಶಾಕ್ ನೀಡಿರೋ ಹಿನ್ನೆಲೆಯಲ್ಲಿ ಈಗಲ್‍ಟನ್ ರೆಸಾರ್ಟ್‍ನಲಿಯೂ ಇರೋದು ಸೇಫಲ್ಲ ಎಂದು ಭಾವಿಸಿರುವ ಗುಜರಾತ್ ಕಾಂಗ್ರೆಸ್ ಶಾಸಕರು ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಆಗಲು ಪ್ಲಾನ್ ಮಾಡಿದ್ದಾರೆ ಎಂದು ಹೇಳಲಾಗಿದೆ.

    ಹೈಕಮಾಂಡ್ ಸೂಚನೆ ಪಡೆದು ಬೇರೆಡೆಗೆ ಶಿಫ್ಟ್ ಆಗಲು ತಯಾರಿ ನಡೆಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ಈಗಲ್‍ಟನ್ ರೆಸಾರ್ಟ್‍ನಿಂದ ಗುಜರಾತ್ ಶಾಸಕರು ಬೇರೆಡೆ ಶಿಫ್ಟ್ ಆಗುವ ಸಾಧ್ಯತೆಯಿದೆ.

    ಡಿಕೆಶಿ ಮೇಲಿನ ಐಟಿ ದಾಳಿಗೆ ಹೆದರಿದ ರೆಸಾರ್ಟ್ ಮಾಲೀಕರು ಗುಜರಾತ್ ಕಾಂಗ್ರೆಸ್ ಶಾಸಕರು ರೆಸಾರ್ಟ್ ಖಾಲಿ ಮಾಡುವಂತೆ ಸೂಚಿಸಿದ್ದಾರೆ. ಸದ್ಯ ಗುಜರಾತ್ ಶಾಸಕರ ಮೇಲ್ವಿಚಾರಣೆಯಲ್ಲಿ ತೊಡಗಿರುವ ಡಿ.ಕೆ.ಸುರೇಶ್ ಗೂ ಕೂಡ ಈ ಬಗ್ಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಹೀಗಾಗಿ ರೆಸಾರ್ಟ್‍ನಿಂದ ಗುಜರಾತ್ ಶಾಸಕರು ಬೇರೆಡೆಗೆ ಶಿಫ್ಟ್ ಆಗುವ ಸಾಧ್ಯತೆ ದಟ್ಟವಾಗಿದೆ.

    ಮೊದಲಿಗೆ ವಿಶೇಷ ಬಸ್ ವೊಂದು ರೆಸಾರ್ಟ್‍ನೊಳಗೆ ಎಂಟ್ರಿ ಕೊಟ್ಟಿದ್ದನ್ನು ನೋಡಿ ಗುಜರಾತ್ ಶಾಸಕರು ರೆಸಾರ್ಟ್‍ನಿಂದ ಶಿಫ್ಟ್ ಆಗಲು ಬಂದಿರುವ ಬಸ್ ಇರಬಹುದು ಎಂದು ಊಹಿಸಲಾಗಿತ್ತು. ಆದರೆ ಈ ಬಸ್ ನಟ ಕಿಚ್ಚ ಸುದೀಪ್ ಅವರ ಸಿನಿಮಾ ಚಿತ್ರೀಕರಣಕ್ಕಾಗಿ ಬಂದಿರುವುದು ಎಂದು ತಿಳಿದುಬಂದಿದೆ.

    ಇದನ್ನೂ ಓದಿ: ಡಿಕೆ ಶಿವಕುಮಾರ್ ಮನೆಯಲ್ಲಿ ಸಿಕ್ಕಿತು 7.5 ಕೋಟಿ ರೂ. ಹಣ: ಮುಂದೆ ಈ ನಾಯಕರ ಮನೆ ಮೇಲೆ ದಾಳಿ?

    ಅತ್ತ ಡಿಕೆ ಶಿವಕುಮಾರ್ ಮನೆಯಲ್ಲಿ ಸತತ ಎರಡನೇ ದಿನವೂ ಐಟಿ ಅಧಿಕಾರಿಗಳು ಪರಿಶೀಲನೆ ಮುಂದುವರೆಸಿದ್ದಾರೆ.