ನವದೆಹಲಿ: ಬಿಲ್ಕಿಸ್ ಬಾನೋ ಪ್ರಕರಣದ (Bilkis Bano Case) ಅಪರಾಧಿಗಳನ್ನು ಬಿಡುಗಡೆ ಮಾಡಿದ್ದಕ್ಕೆ ಗುಜರಾತ್ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶದಲ್ಲಿದ್ದ ಕಟು ಟೀಕೆಯನ್ನು ತೆಗೆದುಹಾಕಲು ನ್ಯಾಯಾಲಯ ನಿರಾಕರಿಸಿದೆ.
2002ರ ಗುಜರಾತ್ ಗಲಭೆಯ ವೇಳೆ (Gujarat riots) ಬಿಲ್ಕಿಸ್ ಬಾನೊ ಮೇಲೆ ಅತ್ಯಾಚಾರವೆಸಗಿ ಆಕೆಯ ಕುಟುಂಬಸ್ಥರನ್ನು ಹತ್ಯೆಗೈದಿದ್ದ 11 ಮಂದಿ ಅಪರಾಧಿಗಳ ಅಕಾಲಿಕ ಬಿಡುಗಡೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಈ ವೇಳೆ ಸುಪ್ರೀಂ ಕೋರ್ಟ್ ಗುಜರಾತ್ ಸರ್ಕಾರದ ವಿರುದ್ಧ ತೀವ್ರ ಟೀಕೆ ಮಾಡಿತ್ತು. ಬಳಿಕ ತನ್ನ ವಿರುದ್ಧದ ಕೆಲವು ಟೀಕೆಗಳನ್ನು ತೆಗೆದುಹಾಕುವಂತೆ ಗುಜರಾತ್ ಸರ್ಕಾರ (Gujarat government) ಮನವಿ ಮಾಡಿತ್ತು. ಇದನ್ನೂ ಓದಿ: Badlapur Encounter | ಆರೋಪಿ ಗುಂಡು ಹಾರಿಸಿದ್ರೆ ಪೊಲೀಸರು ಚಪ್ಪಾಳೆ ತಟ್ಟಬೇಕಾ?: ದೇವೇಂದ್ರ ಫಡ್ನವೀಸ್
ಸುಪ್ರೀಂ ಕೋರ್ಟ್ (Supreme Court) ಅಪರಾಧಿಗಳ ಶಿಕ್ಷೆ ರದ್ದುಗೊಳಿಸುವ ವೇಳೆ ರಾಜ್ಯ ಸರ್ಕಾರ `ಅಪರಾಧಿಗಳೊಂದಿಗೆ ಸಹಕರಿಸಿ ಒಪ್ಪಂದದಿಂದ ವರ್ತಿಸಿದೆ’ ಎಂದು ಟೀಕಿಸಿತ್ತು. ಈ ಸಂಬಂಧ ರಾಜ್ಯ ಸರ್ಕಾರವು ಈ ಟೀಕೆ ಸೂಕ್ತವಲ್ಲ ಮತ್ತು ಪ್ರಕರಣದ ದಾಖಲೆಗೆ ವಿರುದ್ಧವಾಗಿದೆ. ಅರ್ಜಿದಾರರ ವಿರುದ್ಧ ಪಕ್ಷಪಾತವಾಗಿದೆ ಎಂದು ವಾದಿಸಿತ್ತು.
ನ್ಯಾಯಮೂರ್ತಿ ಬಿ.ವಿ.ನಾಗರತ್ನ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರಿದ್ಧ ದ್ವಿಸದಸ್ಯ ಪೀಠ ಗುಜರಾತ್ ಸರ್ಕಾರದ ವಾದವನ್ನು ಒಪ್ಪಲಿಲ್ಲ.
ಈ ಪ್ರಕರಣದಲ್ಲಿ ಸನ್ನಡತೆ ಆಧಾರದ ಮೇಲೆ ಗುಜರಾತ್ ಸರ್ಕಾರದಿಂದ ಬಿಡುಗಡೆಯಾದ 11 ಮಂದಿ ಜೈಲಿಗೆ ಮರಳಬೇಕೆಂದು ಜನವರಿಯಲ್ಲಿ ಸುಪ್ರೀಂ ಕೋರ್ಟ್ ಹೇಳಿತ್ತು.
ಅಪರಾಧಿಗಳನ್ನು ವಿಚಾರಣೆ ನಡೆಸಿದ ರಾಜ್ಯದಿಂದ ಮಾತ್ರ ಬಿಡುಗಡೆ ಮಾಡಬಹುದು. ಈ ಸಂದರ್ಭದಲ್ಲಿ, ಮಹಾರಾಷ್ಟ್ರ ಈ ಪ್ರಕರಣದ ತನಿಖೆ ನಡೆಸಿದೆ. ಗುಜರಾತ್ ರಾಜ್ಯವು ಅಧಿಕಾರವನ್ನು ಚಲಾಯಿಸುವುದು, ಅಧಿಕಾರದ ದುರುಪಯೋಗದ ನಿದರ್ಶನವಾಗಿದೆ ಎಂದು ನ್ಯಾಯಾಲಯ ಹೇಳಿತ್ತು.
ಜುಲೈನಲ್ಲಿ ಸುಪ್ರೀಂ ಕೋರ್ಟ್, ಇಬ್ಬರು ಅಪರಾಧಿಗಳಾದ ರಾಧೇಶ್ಯಾಮ್ ಭಗವಾನದಾಸ್ ಮತ್ತು ರಾಜುಭಾಯ್ ಬಾಬುಲಾಲ್ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಗಳನ್ನು ವಜಾಗೊಳಿಸಿತ್ತು.
ನವದೆಹಲಿ: ಬಾಬ್ರಿ ಮಸೀದಿ ಧ್ವಂಸ, 2002ರ ಗುಜರಾತ್ ಗಲಭೆಗಳ (Gujarat Riots And Babri Masjid) ಬಗ್ಗೆ ಶಾಲೆಗಳಲ್ಲಿ ಬೋಧಿಸುವ ಅಗತ್ಯವಿರಲಿಲ್ಲ ಎಂದು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ ನಿರ್ದೇಶಕ ದಿನೇಶ್ ಪ್ರಸಾದ್ ಸಕ್ಲಾನಿ (Dinesh Prasad Saklani) ಹೇಳಿದ್ದಾರೆ.
ಸಂವಾದ ಕಾರ್ಯಕ್ರಮವೊಂದರಲ್ಲಿ ಮಾತಮಾಡಿದ ಅವರು, ನಾವು ನಮ್ಮ ವಿದ್ಯಾರ್ಥಿಗಳನ್ನು ಆಕ್ರಮಣಕಾರಿಗಳನ್ನಾಗಿ ಮಾಡಬೇಕೇ? ಸಮಾಜದಲ್ಲಿ ದ್ವೇಷ ಬಿತ್ತಬೇಕೆ? ದ್ವೇಷಕ್ಕೆ ಮಕ್ಕಳು ಬಲಿಯಾಗಬೇಕೇ? ಇದು ಶಿಕ್ಷಣದ ಉದ್ದೇಶವೇ? ಅಂತಹ ಚಿಕ್ಕ ಮಕ್ಕಳಿಗೆ ನಾವು ಗಲಭೆಗಳ ಬಗ್ಗೆ ಕಲಿಸಬೇಕೇ? ಪ್ರಶ್ನೆಗಳ ಮಳೆ ಸುರಿಸಿದರಲ್ಲದೇ ಪ್ರತಿ ವರ್ಷ ನಡೆಸುವ ಪರಿಷ್ಕರಣೆ ಭಾಗವಾಗಿ ಪಠ್ಯಪುಸ್ತಕಗಳಲ್ಲಿ ಬದಲಾವಣೆ ಮಾಡಲಾಗಿದ್ದು, ವಿವಾದ ಎಬ್ಬಿಸುವಂತಹ ವಿಷಯವೇ ಇದಲ್ಲ ಎಂದಿದ್ದಾರೆ.
ಎನ್ಸಿಇಆರ್ಟಿ 12ನೇ ತರಗತಿ ರಾಜ್ಯಶಾಸ್ತ್ರ ಪುಸ್ತಕದಲ್ಲಿ ಅಯೋಧ್ಯೆ ಪಠ್ಯ ವಿಭಾಗವನ್ನು 2 ಪುಟಗಳಿಗೆ ಇಳಿಸಲಾಗಿದೆ. ಗಲಭೆಗಳ ಕುರಿತ ಬೋಧನೆಯು ಆವೇಶಭರಿತ ಮತ್ತು ಖಿನ್ನತೆಯಿಂದ ಬಳಲುವ ನಾಗರಿಕರನ್ನು ಸೃಷ್ಟಿಸುತ್ತದೆ. ಈ ಕಾರಣಕ್ಕಾಗಿಯೇ, ಗುಜರಾತ್ ಗಲಭೆಗಳು, ಬಾಬ್ರಿ ಮಸೀದಿ ಧ್ವಂಸ ಕುರಿತು ಶಾಲೆಗಳಲ್ಲಿ ಬೋಧಿಸುವ ಅಗತ್ಯ ಇಲ್ಲ. ವಿದ್ಯಾರ್ಥಿಗಳು ಬೆಳೆದು ದೊಡ್ಡವರಾದಾಗ ಅದರ ಬಗ್ಗೆ ಕಲಿಯಬಹುದು ಶಾಲೆಯ ಪಠ್ಯಪುಸ್ತಕಗಳು ಏಕೆ? ಅವರು ಬೆಳೆದಾಗ ಏನಾಯಿತು ಮತ್ತು ಏಕೆ ಸಂಭವಿಸಿತು ಎಂಬುದನ್ನು ಅವರು ಅರ್ಥಮಾಡಿಕೊಳ್ಳಲಿ ಎಂದು ಅವರು ಪ್ರತಿಪಾದಿಸಿದ್ದಾರೆ.
ಶಾಲಾ ಪಠ್ಯಕ್ರಮದಲ್ಲಿ ಕೇಸರಿಕರಣದ ಆರೋಪವನ್ನು ತಳ್ಳಿಹಾಕಿರುವ ಅವರು, ನಮ್ಮ ಶಿಕ್ಷಣದ ಉದ್ದೇಶ ಹಿಂಸಾತ್ಮಕ ಪ್ರವೃತ್ತಿಯ, ಖಿನ್ನತೆಗೆ ಒಳಗಾದ ನಾಗರಿಕರನ್ನು ಸೃಷ್ಟಿಸುವುದಲ್ಲ. ದ್ವೇಷ ಮತ್ತು ಹಿಂಸೆ ಬೋಧನೆಯ ವಿಷಯಗಳಲ್ಲ. ಅವು ನಮ್ಮ ಪಠ್ಯಪುಸ್ತಕಗಳ ಕೇಂದ್ರಬಿಂದುವಾಗಿರಬಾರದು ಎಂದು ಸಕ್ಲಾನಿ ಹೇಳಿದ್ದಾರೆ.
ವಾಷಿಂಗ್ಟನ್: ಕಳೆದ ಎರಡು ದಿನಗಳ ಹಿಂದೆಯಷ್ಟೇ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನ ಟ್ವಿಟ್ಟರ್ನಲ್ಲಿ ಫಾಲೋ ಮಾಡಲು ಶುರುಮಾಡಿದ ಟೆಸ್ಲಾ (Tesla) ಮುಖ್ಯಸ್ಥ ಹಾಗೂ ಟ್ವಿಟ್ಟರ್ ಸಿಇಒ ಎಲೋನ್ ಮಸ್ಕ್ ಇದೀಗ ಗುಜರಾತ್ ಗಲಭೆ, ಪ್ರಧಾನಿ ಮೋದಿ ಅವರ ಕುರಿತು ಬಿಬಿಸಿ ನಿರ್ಮಿಸಿದ್ದ ಸಾಕ್ಷ್ಯಚಿತ್ರ (BBC Documentary) ಪ್ರಸಾರದಲ್ಲಿ ಟ್ವಿಟ್ಟರ್ ಪಾತ್ರದ ಕುರಿತು ಮಾತನಾಡಿದ್ದಾರೆ.
ಬಿಬಿಸಿಗೆ ನೀಡಿದ ಸಂದರ್ಶನದಲ್ಲಿ ಟ್ವಿಟರ್ ವೇದಿಕೆಯಲ್ಲಿ ಲೈವ್ ಪ್ರಸಾರ ಮಾಡಿದ್ದರಿಂದ, ಭಾರತ ಸರ್ಕಾರದ ಆದೇಶದ ಮೇರೆಗೆ ಸೈಟ್ ಕೆಲವು ವಿಷಯವನ್ನು ತೆಗೆದುಹಾಕಿದೆಯೇ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಸ್ಕ್, ನನಗೆ ಈ ನಿರ್ದಿಷ್ಟ ಸನ್ನಿವೇಶದ ಬಗ್ಗೆ ತಿಳಿದಿಲ್ಲ. ಭಾರತದಲ್ಲಿನ ಕೆಲವು ವಿಷಯಗಳಲ್ಲಿ ಪರಿಸ್ಥಿತಿ ನಿಖರವಾಗಿ ಏನಾಯಿತು ಎಂದು ತಿಳಿದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: Twitter ನಲ್ಲಿ ಮೋದಿ ಫಾಲೋ ಮಾಡ್ತಿರುವ ಮಸ್ಕ್ – ಭಾರತಕ್ಕೆ ಬರುತ್ತೆ ಟೆಸ್ಲಾ ಎಂದ ನೆಟ್ಟಿಗರು!
2002ರ ಗುಜರಾತ್ ಗಲಭೆ (Gujarat Riots) ಮತ್ತು ಪ್ರಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ನಿರ್ಮಿಸಿದ್ದ `India: The Modi Question’ ಸಾಕ್ಷ್ಯಚಿತ್ರವನ್ನು ಭಾರತ ಸರ್ಕಾರ ಬ್ಯಾನ್ ಮಾಡಿದ್ದು ಅದರ ಲಿಂಕ್ಗಳನ್ನು ತೆಗೆದುಹಾಕುವಂತೆ ಟ್ವಿಟ್ಟರ್ ಮತ್ತು ಯೂಟ್ಯೂಬ್ಗೆ ಆದೇಶಿಸಿತ್ತು. ಮಾಹಿತಿ ತಂತ್ರಜ್ಞಾನ ನಿಯಮಗಳು 2021ರ ಅಡಿಯಲ್ಲಿ ತುರ್ತು ಅಧಿಕಾರ ಬಳಸಿಕೊಂಡು ಲಿಂಕ್ಗಳನ್ನು ತೆಗೆದುಹಾಕಲು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಆದೇಶ ನೀಡಿದ್ದು ಟ್ವಿಟ್ಟರ್ ಮತ್ತು ಯೂಟ್ಯೂಬ್ ಈ ಆದೇಶ ಪಾಲನೆ ಮಾಡಲು ಒಪ್ಪಿಕೊಂಡಿದ್ದವು.
ಭಾರತದಲ್ಲಿ ಬಿಬಿಸಿ ಸಾಕ್ಷ್ಯಚಿತ್ರವನ್ನ ಬ್ಯಾನ್ ಮಾಡಿದ್ದರೂ, ಕೆಲವು ಯೂಟ್ಯೂಬ್ ಚಾನೆಲ್ಗಳಲ್ಲಿ ವೀಡಿಯೋಗಳನ್ನ ಅಪ್ಲೋಡ್ ಮಾಡಲಾಗಿತ್ತು. ಆದ್ದರಿಂದ ಸಾಕ್ಷ್ಯಚಿತ್ರದ ವೀಡಿಯೋಗಳನ್ನು ಲಿಂಕ್ ಮಾಡುವ 50ಕ್ಕೂ ಹೆಚ್ಚು ಟ್ವಿಟ್ಟರ್ ಖಾತೆಗಳನ್ನ ನಿರ್ಬಂಧಿಸುವಂತೆ ಕೇಂದ್ರ ಸರ್ಕಾರ ಟ್ವಿಟ್ಟರ್ಗೆ ಆದೇಶಿಸಿತು ಎಂದು ಸರ್ಕಾರದ ಸಲಹೆಗಾರ ಕಾಂಚನ್ಗುಪ್ತಾ ತಿಳಿಸಿದ್ದಾರೆ. ಇದನ್ನೂ ಓದಿ: ಹೈದರಾಬಾದ್ ವಿವಿ ಕ್ಯಾಂಪಸ್ನಲ್ಲಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ – ತನಿಖೆಗೆ ಆದೇಶ
ಈ ಕುರಿತು ಸಂದರ್ಶನದಲ್ಲಿ ಮಾತನಾಡಿದ ಮಸ್ಕ್, ಸಾಮಾಜಿಕ ಮಾಧ್ಯಮ ವಿಚಾರದಲ್ಲಿ ಭಾರತ ಸರ್ಕಾರದ ನಿಯಮಗಳು ಕಟ್ಟುನಿಟ್ಟಾಗಿವೆ. ನಾವು ಯಾವುದೇ ಕಾರಣಕ್ಕೂ ದೇಶದ ಕಾನೂನುಗಳನ್ನ ಮೀರಿ ಹೋಗಲು ಸಾಧ್ಯವಿಲ್ಲ. ಒಂದು ವೇಳೆ ಜನರು ಜೈಲಿಗೆ ಹೋಗ್ತೀರಾ? ಅಥವಾ ಕಾನೂನು ಪಾಲನೆ ಮಾಡ್ತೀರಾ? ಎಂಬ ಆಯ್ಕೆಗಳನ್ನ ನೀಡಿದ್ರೆ, ನಾವು ಕಾನೂನು ಪಾಲನೆ ಮಾಡುವ ಆಯ್ಕೆಯನ್ನೇ ಅನುಸರಿಸುತ್ತೇವೆ ಎಂದು ಭಾರತ ಕಾನೂನಿನ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ.
ತುಮಕೂರು: ಬಜರಂಗದಳ ಶೌರ್ಯ ಸಂಚಲನ ಕಾರ್ಯಕ್ರಮದಲ್ಲಿ ವಿವಾದಾತ್ಮಕ ಭಾಷಣ ಮಾಡಿದ್ದ ವಿಎಚ್ಪಿ (VHP) ಮುಖಂಡ ಶರಣ್ ಪಂಪ್ವೆಲ್ (Sharan Pumpwell) ವಿರುದ್ಧ ತುಮಕೂರು (Tumakuru) ನಗರದ ತಿಲಕ್ ಪಾರ್ಕ್ ಪೊಲೀಸ್ (Police) ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ.
ತುಮಕೂರು ನಗರದ ಬಾರ್ ಲೈನ್ ರೋಡ್ ನಿವಾಸಿ ಸೈಯದ್ ಬುರ್ಹಾನ್ ಉದ್ದೀನ್ ಎಂಬುವರು ಶರಣ್ ಪಂಪ್ವೆಲ್ ವಿರುದ್ಧ ತಿಲಕ್ ಪಾರ್ಕ್ ಠಾಣೆ ಹಾಗೂ ಎಸ್ಪಿಗೆ ದೂರು ನೀಡಿದ್ದರು. ಈ ದೂರು ಆಧರಿಸಿ ತಿಲಕ್ ಪಾರ್ಕ್ ಪೊಲೀಸರು ಶರಣ್ ಪಂಪ್ ವೆಲ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಇದನ್ನೂ ಓದಿ: ಮದ್ಯದಂಗಡಿಗಳನ್ನು ಗೋ ಶಾಲೆಯನ್ನಾಗಿ ಪರಿವರ್ತಿಸುತ್ತೇನೆ: ಉಮಾಭಾರತಿ
ಕಳೆದ ಜ.28 ರಂದು ತುಮಕೂರು ನಗರದ ಟೌನ್ ಹಾಲ್ ವೃತ್ತದಲ್ಲಿ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಸಂಘಟನೆಗಳು ಶೌರ್ಯ ಸಂಚಲನ ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶರಣ್ ಪಂಪ್ವೆಲ್, ಹಿಂದೂಗಳು ಶಕ್ತಿ ಹೀನರಲ್ಲ. ಏಟಿಗೆ ಎದುರೇಟು ಕೊಟ್ಟಿರುವ ಹಲವಾರು ಉದಾಹರಣೆಗಳು ಇವೆ ಎಂದಿದ್ದರು. ಅಲ್ಲದೇ 59 ಜನ ಕರಸೇವಕರು ಪ್ರಯಾಣಿಸುತಿದ್ದ ರೈಲಿಗೆ ಬೆಂಕಿಹಾಕಿ ಅವರನ್ನು ಜೀವಂತ ಸುಡಲಾಗಿತ್ತು. ಅದಕ್ಕೆ ಪ್ರತಿಕಾರ ಎಂಬಂತೆ ಗುಜರಾತ್ ಗಲಭೆ ನಡೆಯಿತು. ಇದು ಹಿಂದೂಗಳ ಶೌರ್ಯದ ಪ್ರತೀಕ ಎಂದು ವಿವಾದಾತ್ಮಕ ಭಾಷಣ ಮಾಡಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಮಂಗಳೂರನ್ನು (Mangaluru) ಹಿಂದೂತ್ವದ ಫ್ಯಾಕ್ಟರಿ ಅಂತಾರೆ, ಅದೇ ರೀತಿ ತುಮಕೂರು ಹಾಗೂ ಇಡೀ ಕರ್ನಾಟಕವನ್ನು ಹಿಂದೂತ್ವದ ಫ್ಯಾಕ್ಟರಿ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು. ಇದನ್ನೂ ಓದಿ: ದೇವರ ಮಾತು ಕೇಳಿ ಹೆಂಡತಿ ಬಿಟ್ಟ ಗಂಡ – ನ್ಯಾಯಾಲಯದಲ್ಲಿ ಮತ್ತೆ ಒಂದಾದರು
ಈ ಭಾಷಣದ ತುಣುಕು ಮಾಧ್ಯಮಗಳಲ್ಲಿ ಪ್ರಸಾರವಾಗಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಶರಣ್ ಪಂಪ್ವೆಲ್ ತುಮಕೂರಿನಲ್ಲಿ ಶಾಂತಿಕದಡಲು ಯತ್ನಿಸಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೈಯದ್ ಬುರ್ಹಾನ್ ಉದ್ದೀನ್ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಶರಣ್ ಪಂಪ್ವೆಲ್ ವಿರುದ್ಧ ಕಲಾಂ 157, ಸಿಆರ್ಪಿಸಿ (a)(b) ಅಡಿಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: 2002ರ ಗುಜರಾತ್ ಗಲಭೆ (2002 Gujarat Riots) ಮತ್ತು ಪ್ರಧಾನಿ ನರೇಂದ್ರ ಮೋದಿ (Narendra Modi) ಕುರಿತ ಬಿಬಿಸಿ ಸಾಕ್ಷ್ಯಚಿತ್ರವನ್ನು (BBC Documentary) ಭಾರತ ಸರ್ಕಾರ ಬ್ಯಾನ್ ಮಾಡಿದ್ದು ಅದರ ಲಿಂಕ್ಗಳನ್ನು ತೆಗೆದುಹಾಕುವಂತೆ ಕೇಂದ್ರ ಸರ್ಕಾರ ಟ್ವಿಟ್ಟರ್ ಮತ್ತು ಯೂಟ್ಯೂಬ್ಗೆ ಆದೇಶಿಸಿದೆ.
CENSORSHIP@Twitter @TwitterIndia HAS TAKEN DOWN MY TWEET of the #BBCDocumentary, it received lakhs of views
ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ’ಬ್ರಿಯಾನ್ ಅವರು ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ಮಾಡಿದ ಟ್ವೀಟ್ ಅನ್ನು ಟ್ವಿಟ್ಟರ್ ತೆಗೆದು ಹಾಕಿದೆ. ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಾನು ಮಾಡಿದ ಟ್ವೀಟ್ ಅನ್ನು ಟ್ವಿಟ್ಟರ್ ತೆಗೆದಿದೆ. ಒಂದು ಗಂಟೆಯ ಬಿಬಿಸಿ ಡಾಕ್ಯುಮೆಂಟರಿ ಪ್ರಧಾನಿ ನರೇಂದ್ರ ಮೋದಿ ಹೇಗೆ ಅಲ್ಪಸಂಖ್ಯಾತರನ್ನು ದ್ವೇಷಿಸುತ್ತಾರೆ ಎಂಬುದನ್ನು ಬಹಿರಂಗಪಡಿಸುತ್ತದೆ. ನಾನು ಸ್ವೀಕರಿಸಿದ ಮೇಲ್ ಇಲ್ಲಿದೆ. ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಬರೆದುಕೊಂಡಿದ್ದಾರೆ.
ನಿವೃತ್ತ ಅಧಿಕಾರಿಗಳು ಗರಂ:
ಬಿಬಿಸಿ ವಿರುದ್ದ ನಿವೃತ್ತ ನ್ಯಾಯಾಧೀಶರು, ಮಾಜಿ ಅಧಿಕಾರಿಗಳು ಸೇರಿ 302 ನಿವೃತ್ತ ಅಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಗುಜರಾತ್ ಗಲಭೆಯಲ್ಲಿ ಮೋದಿ ಪಾತ್ರವನ್ನು ಬಿಂಬಿಸಿದ್ದು ಪೂರ್ವಾಗ್ರಹಪೀಡಿತ ಎಂದು ಬಹಿರಂಗ ಪತ್ರ ಬರೆದಿದ್ದಾರೆ.
ಈ ಪತ್ರಕ್ಕೆ 13 ನಿವೃತ್ತ ನ್ಯಾಯಾಧೀಶರು, 13 ಮಂದಿ ನಿವೃತ್ತ ಅಧಿಕಾರಿಗಳು, ರಾಯಭಾರಿಗಳು ಮತ್ತು 156 ನಿವೃತ್ತ ಸೇನಾಧಿಕಾರಿಗಳು ಸಹಿ ಮಾಡಿದ್ದಾರೆ. ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾದ ಬಳಿಕವೂ ಬಿಬಿಸಿ ಈ ರೀತಿ ನಮ್ಮ ಆಂತರಿಕ ವಿಚಾರಗಳಲ್ಲಿ ಮೂಗು ತೂರಿಸುತ್ತಿದೆ. ದೇಶದ ಸುಪ್ರೀಂ ಕೋರ್ಟ್ ತೀರ್ಪನ್ನು ತಳ್ಳಿಹಾಕಿ ತನಗೆ ಬೇಕಾದಂತೆ ಮಾಡಿ ಪ್ರಚಾರ ಮಾಡುತ್ತದೆ. ಈ ಸಾಕ್ಷ್ಯಚಿತ್ರ ಬ್ರಿಟಿಷ್ ವಸಾಹತುಶಾಹಿಯ ಭ್ರಮೆ. ಆಧಾರಗಳು ಇದೆ ಎಂದ ಮಾತ್ರಕ್ಕೆ ನಂಬಲು ಸಾಧ್ಯವಿಲ್ಲ. ಸರ್ಕಾರದ ವಿರುದ್ಧ ಸ್ವಯಂಪ್ರೇರಿತ ಚಾರ್ಜ್ಶೀಟ್ ಎಂದು ಕಿಡಿಕಾರಿದ್ದಾರೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: 1992ರ ಬಾಬರಿ ಮಸೀದಿ ದ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ನ್ಯಾಯಂಗ ನಿಂದನೆಯ ಎಲ್ಲ ಅರ್ಜಿಗಳನ್ನು ವಿಚಾರಣೆಯಿಂದ ಸುಪ್ರೀಂ ಕೋರ್ಟ್ ಕೈಬಿಟ್ಟಿದೆ. ಇಂದು ಈ ಬಗ್ಗೆ ಮಹತ್ವದ ತೀರ್ಪು ನೀಡಿದ ನ್ಯಾಯಾಲಯ ರಾಮ ಮಂದಿರಕ್ಕೆ ಸಂಬಂಧಿಸಿದ ಅಂತಿಮ ತೀರ್ಪು ಪ್ರಕಟವಾಗಿರುವ ಹಿನ್ನೆಲೆ ಈ ಎಲ್ಲ ಅರ್ಜಿಗಳು ಅಪ್ರಸುತ್ತ ಎಂದು ಹೇಳಿದೆ.
ಬಾಬರಿ ಮಸೀದಿ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು. ಅದನ್ನು ನೆಲಸಮಗೊಳಿಸಬೇಡಿ ಎಂದು 1991ರಲ್ಲಿ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಈ ಆದೇಶ ರಾಜ್ಯ ಸರ್ಕಾರ, ಅಧಿಕಾರಿಗಳು, ರಾಜಕಾರಣಿಗಳು ಎಲ್ಲರಿಗೂ ಅನ್ವಯ ಆಗಿತ್ತು. ಈ ಆದೇಶ ಬಳಿಕ 1992 ರಲ್ಲಿ ಬಾಬರಿ ಮಸೀದಿಯನ್ನು ಧ್ವಂಸ ಮಾಡಲಾಗಿತ್ತು. ಇದನ್ನೂ ಓದಿ: ಪೊಲೀಸ್ ಠಾಣೆಯಲ್ಲೇ ಮಹಿಳೆಯೊಂದಿಗೆ ಚಕ್ಕಂದ – ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ASI
ಸುಪ್ರೀಂ ಕೋರ್ಟ್ ಆದೇಶದ ಉಲ್ಲಂಘನೆ ಹಿನ್ನೆಲೆ ಮುಹಮ್ಮದ್ ಅಸ್ಲಾಮ್ ಭುರೆ ನ್ಯಾಯಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಮಾಜಿ ಸಿಎಂ ಕಲ್ಯಾಣ ಸಿಂಗ್, ಬಿಜೆಪಿ ನಾಯಕರಾದ ಎಲ್.ಕೆ ಅಡ್ವಾಣಿ, ಮುರುಳಿ ಮನೋಹರ್ ಜೋಶಿ, ಉಮಾ ಭಾರತಿ ಸೇರಿದಂತೆ ಹಲವು ನಾಯಕರ ವಿರುದ್ಧ ನ್ಯಾಯಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.
ಅರ್ಜಿದಾರ ಮಹಮ್ಮದ್ ಅಸ್ಲಾಮ್ 2010ರಲ್ಲಿ ಮೃತಪಟ್ಟ ಹಿನ್ನೆಲೆ ಈ ಅರ್ಜಿ ಹೆಚ್ಚು ವಿಚಾರಣೆಗೆ ಬಂದಿರಲಿಲ್ಲ. 2019ರಲ್ಲಿ ಅಯೋಧ್ಯೆ ವಿವಾದಿತ ಜಮೀನಿನ ಮೇಲೆ ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಇಂದು ಈ ಅರ್ಜಿ ಇತ್ಯರ್ಥಪಡಿಸಿದ ಕೋರ್ಟ್, ಪ್ರಕರಣ ಸಂಪೂರ್ಣ ಇತ್ಯರ್ಥವಾಗಿರುವ ಹಿನ್ನೆಲೆ ವಿಚಾರಣೆ ಅಗತ್ಯವಿಲ್ಲ. ಮುಖ್ಯ ಅರ್ಜಿ ವಿಚಾರಣೆ ವೇಳೆ ಈ ಬಗ್ಗೆ ಪ್ರಸ್ತಾಪಿಸಬೇಕಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿತು. ಇದನ್ನೂ ಓದಿ: ವರದಕ್ಷಿಣೆಗಾಗಿ ಸೊಸೆಯನ್ನು ಹೊರಹಾಕಿದವರ ಮನೆ ಮುಂದೆ ಘರ್ಜಿಸಿತು ಬುಲ್ಡೋಜರ್ – ಮುಂದೇನಾಯ್ತು?
ಈಗ ಈ ಕೇಸುಗಳ ಪ್ರಸ್ತುತತೆ ಇಲ್ಲದ ಕಾರಣ ಎಲ್ಲ ನ್ಯಾಯಾಂಗ ನಿಂದನೆ ಕೇಸುಗಳನ್ನು ಕೈಬಿಡುತ್ತಿದ್ದೇವೆ ಎಂದು ಕೋರ್ಟ್ ಆದೇಶಿಸಿತು. ಸುಪ್ರೀಂ ಕೋರ್ಟ್ನ ಈ ಆದೇಶದಿಂದಾಗಿ ಎಲ್.ಕೆ.ಅಡ್ವಾಣಿ, ಮುರುಳಿ ಮನೋಹರ್ ಜೋಶಿ, ಉಮಾ ಭಾರತಿ ಸೇರಿದಂತೆ ಬಿಜೆಪಿಯ ಹಲವು ನಾಯಕರಿಗೆ ಬಿಗ್ ರಿಲೀಫ್ ಸಿಕ್ಕಿದೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 19 ವರ್ಷಗಳಿಂದ ಗುಜರಾತ್ ಗಲಭೆ ಕುರಿತಾಗಿ ಒಂದು ಮಾತನ್ನೂ ಮಾತನಾಡದೆ ನೋವನ್ನು ವಿಷಕಂಠನಂತೆ ಸಹಿಸಿಕೊಂಡಿದ್ದಾರೆ. ವಿಷ ನುಂಗಿ ತನ್ನ ಗಂಟಲಿನಲ್ಲಿ ಹಿಡಿದಿಟ್ಟುಕೊಂಡ ಶಿವನಂತೆ ಮೋದಿ ಇದ್ದರು ಎಂದು ಗೃಹ ಸಚಿವ ಅಮಿತ್ ಶಾ ಅಭಿಪ್ರಾಯಪಟ್ಟಿದ್ದಾರೆ.
ಗುಜರಾತ್ನ ಗೋಧ್ರಾ ನರಮೇಧ ನಂತರದ ಹಿಂಸಾಚಾರ ಪ್ರಕರಣದಲ್ಲಿ ನರೇಂದ್ರ ಮೋದಿ ಅವರಿಗೆ ಎಸ್ಐಟಿ (ವಿಶೇಷ ತನಿಖಾ ತಂಡ) ಕ್ಲೀನ್ ಚಿಟ್ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಿನ್ನೆ ವಜಾಗೊಳಿಸಿತ್ತು. ಈ ಬಗ್ಗೆ ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿದ ಅಮಿತ್ ಶಾ, ಗುಜರಾತ್ ಗಲಭೆ ಯಾಕಾಯಿತು, ಹೇಗಾಯಿತು, ನಂತರದ ಪರಿಣಾಮಗಳು ಹೇಗೆ ಬೀರಿದ್ದವು ಎಂಬುದನ್ನು ವಿವರಿಸಿದ್ದಾರೆ. ಇದನ್ನೂ ಓದಿ: ಗುಜರಾತ್ ಗಲಭೆ – ಮೋದಿಗೆ ಬಿಗ್ ರಿಲೀಫ್, ಸುಪ್ರೀಂನಿಂದ ಸಿಕ್ತು ಕ್ಲೀನ್ ಚಿಟ್
ಗುಜರಾತ್ ಗಲಭೆಗೆ ಪ್ರಮುಖ ಕಾರಣ ಗೋಧ್ರಾ ರೈಲಿಗೆ ಬೆಂಕಿ ಹಚ್ಚಿದ್ದು. 16 ದಿನದ ಮಗು ಸೇರಿದಂತೆ 59 ಮಂದಿ ಸಜೀವ ದಹನವಾಗಿದ್ದರು. ಆಗ ಮೆರವಣಿಗೆ ಮಾಡಿರಲಿಲ್ಲ. ಮೃತದೇಹಗಳನ್ನು ಸಿವಿಲ್ ಆಸ್ಪತ್ರೆಗೆ ತೆಗೆದುಕೊಂಡು ಹೋಗಿ ನಂತರ ಅಂಬುಲೆನ್ಸ್ ನಲ್ಲಿ ಮೃತದೇಹಗಳನ್ನು ಅವರ ಕುಟುಂಬಸ್ಥರಿಗೆ ಒಪ್ಪಿಸಲಾಯಿತು. ಆದರೆ ಘಟನೆಯ ಬಳಿಕ ಈ ಬಗ್ಗೆ ಸುಳ್ಳು ಸುದ್ದಿಗಳು ಹರಿದಾಡಿದವು. ಸತ್ಯದ ಪರವಾಗಿದ್ದರೂ ಆರೋಪಗಳನ್ನು ಎದುರಿಸುತ್ತಿರುವ ಮೋದಿಜೀ ಈ ನೋವನ್ನು ಸಹಿಸಿಕೊಳ್ಳುವುದನ್ನು ನಾನು ಹತ್ತಿರದಿಂದ ನೋಡಿದ್ದೇನೆ. ನ್ಯಾಯಾಂಗ ಪ್ರಕ್ರಿಯೆ ನಡೆಯುತ್ತಿದ್ದರಿಂದ ಅವರು ಮಾತನಾಡಲಿಲ್ಲ. ಅಂದು ಗುಜರಾತ್ನ ಗೃಹ ಸಚಿವನಾಗಿದ್ದ ನಾನು ಈ ಬಗ್ಗೆ ಮಾತನಾಡಲಿಲ್ಲ. ಇಂದಿನ ಸಂದರ್ಶನವನ್ನು ನಾನು 2003ರಲ್ಲಿ ಗುಜರಾತ್ ಗೃಹ ಸಚಿವನಾಗಿ ನೀಡಬಹುದಿತ್ತು. ಆದರೆ ನ್ಯಾಯಾಂಗ ಪ್ರಕ್ರಿಯೆ ಮುಗಿಯುವವರೆಗೂ ಮೋದಿಜೀ ಯಾವುದೇ ಪ್ರಭಾವ ಬೀರದಂತೆ ಏನನ್ನೂ ಹೇಳಲಿಲ್ಲ. ಇದೆಲ್ಲವನ್ನೂ ಅವರು ಮೌನವಾಗಿ ಸಹಿಸಿಕೊಂಡಿದ್ದರು ಇದರ ಫಲವಾಗಿ ಸತ್ಯಕ್ಕೆ ಜಯವಾಗಿದೆ ಎಂದರು.
ಬಿಜೆಪಿಯ ರಾಜಕೀಯ ವಿರೋಧಿಗಳು, ರಾಜಕೀಯ ಪ್ರೇರಿತ ಪತ್ರಕರ್ತರು ಮತ್ತು ಸರ್ಕಾರೇತರ ಸಂಘಟನೆಗಳು ಒಟ್ಟಾಗಿ ಬಿಜೆಪಿ ಮತ್ತು ಪಕ್ಷದ ನಾಯಕರ ವಿರುದ್ಧ ಗಲಭೆ ಪ್ರಕರಣದ ಆರೋಪ ಹೊರಿಸಿದರು. ನಮ್ಮ ಮೇಲೆ ಸುಳ್ಳು ಆರೋಪ ಹೊರಿಸಿದ್ದರೂ ಕೂಡ ಬಿಜೆಪಿಗೆ ಗುಜರಾತ್ನ ಜನತೆಯ ಮೇಲೆ ನಮಗೆ ನಂಬಿಕೆ ಇತ್ತು. ಅಲ್ಲಿನ ಜನರು ಬಿಜೆಪಿಯನ್ನು ಕೈಬಿಡಲಿಲ್ಲ. ಅಧಿಕಾರ ತಂದು ಕೊಟ್ಟರು. ಇಂದಿಗೆ ಈ ಘಟನೆ ನಡೆದು 20 ವರ್ಷಗಳಾಗಿದೆ. ಜನರ ಆದೇಶವೇ ದೊಡ್ಡದು, ಸಾರ್ವಜನಿಕರು ಎಲ್ಲವನ್ನೂ ನೋಡುತ್ತಾರೆ. ದೇಶದ 130 ಕೋಟಿ ಜನರಿಗೆ 260 ಕೋಟಿ ಕಣ್ಣುಗಳು ಮತ್ತು 260 ಕೋಟಿ ಕಿವಿಗಳಿವೆ. ಅವರು ಎಲ್ಲವನ್ನೂ ನೋಡುತ್ತಾರೆ ಮತ್ತು ಕೇಳುತ್ತಾರೆ, ನಾವು ಎಂದಿಗೂ ಚುನಾವಣೆಯಲ್ಲಿ ಗುಜರಾತ್ನಲ್ಲಿ ಸೋತಿಲ್ಲ. ಜನ ನಮ್ಮನ್ನು ಕೈಬಿಟ್ಟಿಲ್ಲ. ನಮ್ಮ ಮೇಲೆ ಜನರಿಗೆ ನಂಬಿಕೆ ಇತ್ತು ಇದೀಗ ಮತ್ತೆ ನಾವು ತಪ್ಪು ಮಾಡಿಲ್ಲ ಎಂಬುದು ಸಾಬೀತಾಗಿದೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: 7 ಭ್ರೂಣಗಳ ಪತ್ತೆ ಪ್ರಕರಣ – ಭ್ರೂಣಗಳನ್ನು ಎಸೆದಿದ್ದ ಆಸ್ಪತ್ರೆ ಸೀಜ್ ಮಾಡಿದ DHO
ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ನಾನು ಬಹಳ ಎಚ್ಚರಿಕೆಯಿಂದ ಓದಿದ್ದೇನೆ. ತೀರ್ಪಿನಲ್ಲಿ ತೀಸ್ತಾ ಸೆಟಲ್ವಾಡ್ ಹೆಸರನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಆಕೆಯು ನಡೆಸುತ್ತಿದ್ದ ಎನ್ಜಿಒ ನನಗೆ ಆ ಎನ್ಜಿಒ ಹೆಸರು ನೆನಪಿಲ್ಲ ಆದರೆ ಗಲಭೆಯ ಬಗ್ಗೆ ಆಧಾರರಹಿತ ಮಾಹಿತಿಯನ್ನು ಪೊಲೀಸರಿಗೆ ನೀಡಲಾಗಿತ್ತು. ಇದರಿಂದ ನಮ್ಮ ಮೇಲೆ ಸುಳ್ಳು ಆರೋಪ ಪಿತೂರಿ ನಡೆಸಲಾಗಿತ್ತು. ಇದೀಗ ಪ್ರಕರಣದ ಬಗ್ಗೆ ಸತ್ಯ ಹೊರಬಂದಿದ್ದು, ಸುಪ್ರೀಂ ಕೋರ್ಟ್ ಎಲ್ಲಾ ಆರೋಪಗಳನ್ನು ತಳ್ಳಿಹಾಕಿದೆ. ಆರೋಪಗಳನ್ನು ಕೋರ್ಟ್ ಸರಿಯಾಗಿ ಪ್ರಶ್ನಿಸಿದೆ. ಆರೋಪಗಳನ್ನು ರಾಜಕೀಯ ಪ್ರೇರಿತ ಎಂದು ನೀವು ಹೇಳಬಹುದು, ಇದು ಸಹ ಸಾಭೀತಾಗಿದೆ. ಈ ಹೋರಾಟ ಕಳೆದ 19 ವರ್ಷಗಳಿಂದ ನಾವು ನಡೆಸಿರುವ ಹೋರಾಟ ಕಡೆಗೆ ಜಯ ನಮ್ಮದಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಗೋಧ್ರಾ ನರಮೇಧ ನಂತರ ನಡೆದ ಹಿಂಸಾಚಾರ ಪ್ರಕರಣದ ತನಿಖೆ ನಡೆಸಿದ್ದ ಎಸ್ಐಟಿ ಅಂದಿನ ಮುಖ್ಯಮಂತ್ರಿ ನರೇಂದ್ರ ಮೋದಿ ಅವರಿಗೆ ಕ್ಲೀನ್ ಚಿಟ್ ನೀಡಿತ್ತು. ಕ್ಲೀನ್ ಚಿಟ್ ನೀಡಿದ್ದನ್ನು ಪ್ರಶ್ನಿಸಿ ಹಿಂಸಾಚಾರದ ವೇಳೆ ಹತ್ಯೆಗೀಡಾದ ಸಂಸದ ಇಸಾನ್ ಜಫ್ರಿ ಅವರ ಪತ್ನಿ ಜಾಕಿಯಾ ಜಫ್ರಿ ತಕರಾರು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿಗಳಾದ ಎ.ಎಂ.ಖನ್ವಿಲ್ಕರ್, ದಿನೇಶ್ ಮಹೇಶ್ವರಿ, ಸಿಟಿ ರವಿಕುಮಾರ್ ಅವರಿದ್ಧ ಪೀಠ ನಿನ್ನೆ ತೀರ್ಪು ನೀಡಿತ್ತು. ಸುಪ್ರೀಂ ಕೋರ್ಟ್ ನೇಮಕ ಮಾಡಿದ್ದ ಎಸ್ಐಟಿ ಕ್ಲೀನ್ ಚಿಟ್ ನೀಡಿದ್ದನ್ನು ಎತ್ತಿ ಹಿಡಿದ ಕೋರ್ಟ್ ಈ ಅರ್ಜಿಗೆ ಯಾವುದೇ ಅರ್ಹತೆಯಿಲ್ಲ ಎಂದು ಅಭಿಪ್ರಾಯಪಟ್ಟು ವಜಾಗೊಳಿಸಿತು. ಇದನ್ನೂ ಓದಿ: ಇದೇ ವರ್ಷ ಬರಲಿದೆ ಇ-ಪಾಸ್ಪೋರ್ಟ್ – ಹೇಗಿರಲಿದೆ? ಕೆಲಸ ಹೇಗೆ?
ಏನಿದು ಪ್ರಕರಣ?
2002ರ ಫೆಬ್ರವರಿ 22 ರಂದು ಗೋಧ್ರಾದಲ್ಲಿ ಸಬರಮತಿ ಎಕ್ಸ್ ಪ್ರೆಸ್ ರೈಲಿನ ಎಸ್6 ಬೋಗಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಪರಿಣಾಮ ಆಯೋಧ್ಯೆಯಿಂದ ಗುಜರಾತ್ ಗೆ ಮರಳುತ್ತಿದ್ದ 59 ಕರಸೇವಕರು ಸಜೀವವಾಗಿ ದಹನವಾಗಿದ್ದರು. ಈ ಘಟನೆ ಬಳಿಕ ಗುಜರಾತಿನಲ್ಲಿ ವ್ಯಾಪಕ ಹಿಂಸಾಚಾರ ಭುಗಿಲೆದ್ದಿತ್ತು. ಅನೇಕ ಕಡೆಗಳಲ್ಲಿ ಕೋಮುಗಲಭೆ ಸಂಭವಿಸಿ 1,200 ಕ್ಕೂ ಹೆಚ್ಚು ಮಂದಿಯ ಹತ್ಯೆಯಾಗಿತ್ತು. ವಿಶೇಷವಾಗಿ ಗುಲ್ಬರ್ಗಾ ಸೊಸೈಟಿಯಲ್ಲಿ ನರಮೇಧವೇ ನಡೆದು ಹೋಗಿತ್ತು. ಇದರಲ್ಲಿ ಇಸಾನ್ ಜಫ್ರಿ ಸೇರಿ 68 ಮಂದಿ ಹತರಾಗಿದ್ದರು. 2002 ಫೆಬ್ರವರಿ 27ರಿಂದ ಮೇ ತಿಂಗಳವರೆಗೆ ವ್ಯಾಪಕ ಹಿಂಸಾಚಾರ ನಡೆದಿದ್ದು, ಇದರ ಹಿಂದೆ ಬಹುದೊಡ್ಡ ಪಿತೂರಿ ಅಡಗಿದೆ. ನರೇಂದ್ರ ಮೋದಿ ಅವರ ಪಾತ್ರವಿದೆ ಎಂದು ಆರೋಪಿಸಿ ಅರ್ಜಿ ಸಲ್ಲಿಸಲಾಗಿತ್ತು.
ಮಂಗಳೂರು: ದಿ ಕಾಶ್ಮೀರ್ ಫೈಲ್ಸ್ ಚಿತ್ರದ ಕುರಿತು ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ. ಜೊತೆಗೆ ಗುಜರಾತ್ ಹತ್ಯಾಕಾಂಡ ಬಗ್ಗೆ ಸಿನಿಮಾ ಮಾಡಿ ಎಂದು ಹೇಳುತ್ತಿದ್ದಾರೆ. ಗುಜರಾತ್ ಹತ್ಯಾಕಾಂಡದ ಸಿನಿಮಾ ಮಾಡಿದ್ರೆ ಸಿದ್ದರಾಮಯ್ಯ ಊರು ಬಿಟ್ಟು ಓಡಬೇಕಾಗುತ್ತದೆ ಎಂದು ಆರ್ಎಸ್ಎಸ್ನ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವ್ಯಂಗ್ಯವಾಡಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಶ್ಮೀರ್ ಫೈಲ್ಸ್ ಚಿತ್ರದಲ್ಲಿ ಬಂದಿರೋದು ಎಲ್ಲವೂ ಸುಳ್ಳು ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಗುಜರಾತ್ನಲ್ಲಿ ಮುಸಲ್ಮಾನರು ಮಾಡಿದ ಅತ್ಯಾಚಾರವನ್ನು ಯಾರು ಒಪ್ಪಿಕೊಳ್ಳಲು ಸಾಧ್ಯವಿಲ್ಲ, ಸಿದ್ದರಾಮಯ್ಯ ಬೇಕಾದರೆ ಒಂದು ಸಲ ಹೋಗಿ ಬರಲಿ, 56 ಜನರನ್ನು ರೈಲಿನಲ್ಲಿ ಬೆಂಕಿ ಹಾಕಿ ಕೊಂದಿದ್ದರು. ಅವರ ಮನೆಗೆ ಹೋಗಿ ಕುಟುಂಬದ ದುಃಖ ಏನು ಎಂದು ಕೇಳಿದಾಗ ಗೊತ್ತಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಭಗವದ್ಗೀತೆಯನ್ನು ಪಠ್ಯಪುಸ್ತಕದಲ್ಲಿ ಸೇರಿಸಲು ಸಿಎಂಗೆ ಒತ್ತಾಯಿಸುವೆ: ಬಿಎಸ್ವೈ
ಸಿದ್ದರಾಮಯ್ಯ ಬದುಕಿರೋದು ಅವರ ತಾಯಿ, ಹೆಂಡ್ತಿ ಮಾಡಿರೋ ಪುಣ್ಯದ ಫಲದಿಂದ:
ರಸ್ತೆ ಮಧ್ಯೆ ದನದ ಮಾಂಸ ತಿನ್ನುತ್ತೇವೆ ಎನ್ನುವ ಸಿದ್ದರಾಮಯ್ಯ ಇವತ್ತು ಬದುಕಿರುವುದು ಅವರ ತಾಯಿ ಹಾಗೂ ಹೆಂಡತಿ ಬೆಳಗ್ಗೆಯಿಂದ ರಾತ್ರಿವರೆಗೆ ದೇವರ ಪೂಜೆ ಮಾಡಿರುವುದರಿಂದ ಅನ್ನೋದು ಅವರಿಗೆ ಗೊತ್ತಿರಲಿ. ಸಿದ್ದರಾಮಯ್ಯನವರ ಮನೆಯಲ್ಲಿ ಪೂಜೆ ಮಾಡುತ್ತಾರೆ ಎಂದು ಅವರ ಹೆಂಡತಿ ಮತ್ತು ತಾಯಿಯನ್ನು ಮನೆಯಿಂದ ಹೊರಗೆ ಹಾಕ್ತಾರ, ಅವರ ಪುಣ್ಯದ ಫಲದಿಂದ ಸಿದ್ದರಾಮಯ್ಯ ಬದುಕಿದ್ದಾರೆ ಅನ್ನೋದು ಅವರಿಗೆ ಗೊತ್ತಿರಬೇಕು. ಹಿಂದೂ ಸಮಾಜವನ್ನು ಹೀಯಾಳಿಸುವ ಕೆಲಸ ಅವರು ಮಾಡಬಾರದು ಎಂದು ಕಿವಿಮಾತು ಹೇಳಿದರು. ಇದನ್ನೂ ಓದಿ: ಭಗವದ್ಗೀತೆ ಹೊಟ್ಟೆ ತುಂಬಿಸುವುದಿಲ್ಲ, ತಲೆಯನ್ನು ತುಂಬಿಸುತ್ತದೆ: ಪ್ರತಾಪ್ಸಿಂಹ
ಹಿಜಬ್ ಪ್ರಕರಣದಲ್ಲಿ ಇವರಿಗೆ ಹಿಜಬ್ ದೊಡ್ಡ ವಿಷಯ ಆಗಿಲ್ಲ, ಹುಡುಗರು ಕೇಸರಿ ಶಾಲು ಹಾಕಿರೋದು ದೊಡ್ಡ ವಿಷಯ ಆಗಿದೆ. ಹಿಜಬ್ನ ಬಗ್ಗೆ ಇವರಿಗೆ ಮಾತನಾಡಲು ಧೈರ್ಯವಿಲ್ಲ. ಆ ಕಡೆ ಮಾತನಾಡಿದ್ರು ವೋಟು ಹೋಗುತ್ತೆ, ಈ ಕಡೆ ಮಾತನಾಡಿದ್ರು ವೋಟ್ ಹೋಗುತ್ತೆ ಎಂಬ ಭಯ ಇದೆ. ಸಿದ್ದರಾಮಯ್ಯ ಬಗ್ಗೆ ಗೌರವವಿದೆ ಆದ್ರೆ ಹುಚ್ಚುಚ್ಚಾಗಿ ಮಾತನಾಡಬಾರದು ಎಂದು ಕಿಡಿಕಾರಿದರು.