Tag: Gujarat Suspension Bridge

  • ಮೋರ್ಬಿ ತೂಗು ಸೇತುವೆ ದುರಂತಕ್ಕೆ 135 ಬಲಿ – ಸಂತ್ರಸ್ತರಿಗೆ ಪ್ರಧಾನಿ ಮೋದಿ ಸಾಂತ್ವನ

    ಮೋರ್ಬಿ ತೂಗು ಸೇತುವೆ ದುರಂತಕ್ಕೆ 135 ಬಲಿ – ಸಂತ್ರಸ್ತರಿಗೆ ಪ್ರಧಾನಿ ಮೋದಿ ಸಾಂತ್ವನ

    ಗಾಂಧಿನಗರ: ಮೋರ್ಬಿ ತೂಗುಸೇತುವೆ ದುರಂತ (Morbi Bridge Collapse) ಸಂಬಂಧ ರಕ್ಷಣಾ ಕಾರ್ಯಾಚರಣೆ ಬಹುತೇಕ ಅಂತ್ಯಗೊಂಡಿದೆ. ಸರ್ಕಾರದ ಅಧಿಕೃತ ಮಾಹಿತಿ ಪ್ರಕಾರ ದುರಂತದಲ್ಲಿ 135 ಮಂದಿ ಮೃತಪಟ್ಟಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ.

    ಮೃತರ ಕುಟುಂಬಗಳಿಗೆ ಗುಜರಾತ್ ಸರ್ಕಾರ (Gujarat Government) 5.40 ಕೋಟಿ ಪರಿಹಾರ ವಿತರಿಸಿದೆ. ನಾಳೆ ಗುಜರಾತ್‌ನಲ್ಲಿ ಶೋಕಾಚರಣೆಗೆ ಸರ್ಕಾರ ನಿರ್ಧರಿಸಿದೆ. ಈ ಮಧ್ಯೆ, ಇವತ್ತು ಮೋರ್ಬಿಗೆ ಪ್ರಧಾನಿ ಮೋದಿ (Narendra Modi) ಭೇಟಿ ನೀಡಿದ್ದು, ಗಾಯಾಳುಗಳ ಆರೋಗ್ಯ ವಿಚಾರಿಸಿ, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಇದನ್ನೂ ಓದಿ: ನಮಗೆ ಪ್ರಧಾನಿ ಬೇಕು, ಜೋಕರ್ ಅಲ್ಲ – `ಗೋ-ಬ್ಯಾಕ್ ಮೋದಿ’ ಅಭಿಯಾನ

    ಎಸ್‌ಪಿ ಕಚೇರಿಯಲ್ಲಿ ಸಿಎಂ (Chief Minister) ಜೊತೆ ಮಹತ್ವದ ಸಭೆ ನಡೆಸಿದ್ದಾರೆ. ಮೋದಿ ಆಗಮನ ಕಾರಣ ನಿನ್ನೆ ರಾತ್ರಿ ತರಾತುರಿಯಲ್ಲಿ ಮೋರ್ಬಿ ಸರ್ಕಾರಿ ಆಸ್ಪತ್ರೆಗೆ (Hospital) ಸುಣ್ಣ-ಬಣ್ಣ ಬಳಿದಿದ್ದು, ವಿಪಕ್ಷಗಳಿಗೆ ಆಹಾರವಾಗಿದೆ. ದುರಂತಕ್ಕೆ ಕಾರಣರಾದವರ ವಿರುದ್ಧ ಈವರೆಗೂ ಯಾವುದೇ ಕ್ರಮ ಇಲ್ಲ. ಆದ್ರೆ ಫೋಟೋಶೂಟ್‌ಗಾಗಿ ಹೇಗೆಲ್ಲಾ ಮಾಡ್ತಿದ್ದಾರೆ ಎಂದು ಎಎಪಿ (AAP) ಕಿಡಿಕಾರಿದೆ. ಇದನ್ನೂ ಓದಿ: ಮೋದಿ ಬರ್ತಾರೆ ಅಂತ ರಾತ್ರೋರಾತ್ರಿ ಆಸ್ಪತ್ರೆ ಕ್ಲೀನ್

    ಭಾರೀ ಭ್ರಷ್ಟಾಚಾರದ ಕಾರಣ ಈ ದುರಂತ ಸಂಭವಿಸಿದೆ. ಇದು ಸರ್ಕಾರವೇ ನಡೆಸಿದ ಸರ್ಕಾರಿ ಕೊಲೆ ಎಂದು ಸಿಎಂ ಕೇಜ್ರಿವಾಲ್ (Arvind Kejriwal) ಆಪಾದಿಸಿದ್ದಾರೆ. ಆದರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಇದನ್ನ ನಾನು ರಾಜಕೀಯಗೊಳಿಸಲು ಬಯಸಲ್ಲ ಎಂದು ಮೃದುಸ್ವಭಾವ ತೋರಿಸಿದ್ದಾರೆ.

    ಈ ಮಧ್ಯೆ ಮೋರ್ಬಿ ದುರಂತದ ಬಗ್ಗೆ ಸುಪ್ರೀಂಕೋರ್ಟ್ (Supreme Court) ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಉನ್ನತಮಟ್ಟದ ತನಿಖೆಗೆ ಕೋರಿ ವಕೀಲರೊಬ್ಬರು ಪಿಐಎಲ್ (ಸಾರ್ವಜನಿಕ ಹಿತಾಸಕ್ತಿ ಅರ್ಜಿ) ಸಲ್ಲಿಸಿದ್ದು, ಈ ಅರ್ಜಿಯ ವಿಚಾರಣೆಗೆ ಸಮ್ಮತಿ ಸೂಚಿಸಿದೆ. ನವೆಂಬರ್ 14ರಂದು ಸುಪ್ರೀಂಕೋರ್ಟ್ ಈ ಅರ್ಜಿ ವಿಚಾರಣೆ ನಡೆಸಲಿದೆ.

    Live Tv
    [brid partner=56869869 player=32851 video=960834 autoplay=true]

  • ನಮಗೆ ಪ್ರಧಾನಿ ಬೇಕು, ಜೋಕರ್ ಅಲ್ಲ – `ಗೋ-ಬ್ಯಾಕ್ ಮೋದಿ’ ಅಭಿಯಾನ

    ನಮಗೆ ಪ್ರಧಾನಿ ಬೇಕು, ಜೋಕರ್ ಅಲ್ಲ – `ಗೋ-ಬ್ಯಾಕ್ ಮೋದಿ’ ಅಭಿಯಾನ

    ಗಾಂಧಿನಗರ: ಮೋರ್ಬಿಯಲ್ಲಿ ತೂಗು ಸೇತುವೆ (MorbiBridge) ದುರಂತಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ (Narendra Modi) ಮತ್ತು ಗುಜರಾತ್ ಸರ್ಕಾರದ (Gujarat Government) ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.

    ತೂಗು ಸೇತುವೆ ಕುಸಿದು 135 ಮಂದಿ ಮೃತಪಟ್ಟಿದ್ದಾರೆ, ಅವರಲ್ಲಿ 47 ಮಕ್ಕಳಿದ್ದಾರೆ. ರಕ್ಷಣೆ ಮಾಡಿರುವ 100ಕ್ಕೂ ಹೆಚ್ಚು ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ಸಂತ್ರಸ್ತರನ್ನ ಭೇಟಿ ಮಾಡಲು ತೆರಳಿದ್ದಾರೆ. ಮೋರ್ಬಿ ಆಸ್ಪತ್ರೆಗೆ (Morbi Hospital) ಹಾಗೂ ತೂಗು ಸೇತುವೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ನಡುವೆಯೂ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ಮೋದಿ ಬರ್ತಾರೆ ಅಂತ ರಾತ್ರೋರಾತ್ರಿ ಆಸ್ಪತ್ರೆ ಕ್ಲೀನ್

    ಸಾಮಾಜಿಕ ಜಾಲತಾಣದಲ್ಲಿ ಬಾಯ್‌ಕಾಟ್ ಮೋದಿ, ಬಾಯ್‌ಕಾಟ್ ಬಿಜೆಪಿ (BJP) ಹಾಗೂ ಗೋ ಬ್ಯಾಕ್ ಮೋದಿ (Go-Back-Modi) ಅಭಿಯಾನ ಆರಂಭಿಸಿದ್ದು, ತೀವ್ರವಾಗಿ ಖಂಡಿಸಿದ್ದಾರೆ. `ಭಾರತಕ್ಕೆ ಪ್ರಧಾನಿ ಬೇಕು, ಜೋಕರ್ ಬೇಡ, ಫ್ಯಾಷನ್ ಡಿಸೈನರ್ ಬೇಡ, ಪ್ರಧಾನಿ ಮೋದಿ ಅವಧಿಯಲ್ಲಿ ದೇಶದಲ್ಲೇ ಅತಿಹೆಚ್ಚು ಭ್ರಷ್ಟ ಅಧಿಕಾರಿಗಳಿದ್ದಾರೆ ಎಂದು ನೆಟ್ಟಿಗರು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಅಪ್ಪುಗೆ ‘ಕರ್ನಾಟಕ ರತ್ನ’ ಪ್ರದಾನ: ಅತಿಥಿಯಾಗಿ ಬೆಂಗಳೂರಿಗೆ ಬಂದ ಜ್ಯೂನಿಯರ್ ಎನ್.ಟಿ.ಆರ್

    ಗುಜರಾತಿನಲ್ಲಿ ನಡೆದ ದುರಂತದಿಂದ ನೂರಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಆದರೂ ನಿಮ್ಮ ಗಮನ ಮಾತ್ರ ಚುನಾವಣೆಯ ಮೇಲಿದೆ. ಇದು ಮೋದಿ ಅವರಿಗೆ ನಾಚಿಗೇಡಿನ ಸಂಗತಿ ಎಂದು ಕಿಡಿ ಕಾರಿದ್ದಾರಲ್ಲದೇ ಪ್ರಾಣ ಕಳೆದುಕೊಂಡವರಿಂದಾಗಿ ಅವರಿಗೆ 134 ಮತಗಳು ನಷ್ಟವಾಗಿದೆ ಎಂಬ ಚಿಂತೆ ಅವರಿಗಿದೆ ಎಂದು ಟೀಕಿಸಿದ್ದಾರೆ.

    ನಮಗೆ ಪ್ರಧಾನಿ ಬೇಕಾಗಿದೆಯೇ ಹೊರತು ಸ್ವಂತ ದೇಶದ ಜನರ ಜೀವಗಳ ಜೊತೆ ಚೆಲ್ಲಾಟ ಆಡೋರು ಬೇಡ ಎಂದು ವಾಗ್ದಾಳಿ ನಡೆಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೋಲ್ಕತ್ತಾ ಫ್ಲೈಓವರ್ ಕುಸಿದಾಗ ಬ್ಯಾನರ್ಜಿಯನ್ನು ನಿಂದಿಸಿದ್ದ ನೀವು ಇದಕ್ಕೆ ಏನ್ ಹೇಳ್ತೀರಿ: ಮೋದಿ ವಿರುದ್ಧ ವಿಪಕ್ಷಗಳು ಕಿಡಿ

    ಕೋಲ್ಕತ್ತಾ ಫ್ಲೈಓವರ್ ಕುಸಿದಾಗ ಬ್ಯಾನರ್ಜಿಯನ್ನು ನಿಂದಿಸಿದ್ದ ನೀವು ಇದಕ್ಕೆ ಏನ್ ಹೇಳ್ತೀರಿ: ಮೋದಿ ವಿರುದ್ಧ ವಿಪಕ್ಷಗಳು ಕಿಡಿ

    ಗಾಂಧಿನಗರ: ಗುಜರಾತಿನ ಮೋರ್ಬಿ (Gujarat Morbi Bridge) ಜಿಲ್ಲೆಯಲ್ಲಿ ಸಂಭವಿಸಿದ ತೂಗು ಸೇತುವೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 141ಕ್ಕೆ ಏರಿಕೆಯಾಗಿದೆ. ಇದರೊಂದಿಗೆ 100 ಮಂದಿ ನಾಪತ್ತೆಯಾಗಿದ್ದು, ತೀವ್ರ ಶೋಧಕಾರ್ಯ ನಡೆಯುತ್ತಿದೆ. ಈ ವೇಳೆ ಪ್ರಧಾನಿ ಮೋದಿ (Narendra Modi) ತವರಿನಲ್ಲಿ ನಡೆದ ಭೀಕರ ದುರಂತವನ್ನು 2016ರ ಮಧ್ಯ ಕೋಲ್ಕತ್ತಾದಲ್ಲಿ ನಡೆದ ಮೇಲ್ಸೇತುವೆ (Flyover) ಕುಸಿತಕ್ಕೆ ಹೋಲಿಸಿ ಟೀಕೆ ಮಾಡಲಾಗುತ್ತಿದೆ.

    ಈ ಕುರಿತು ಟ್ವಿಟ್ಟರ್‌ನಲ್ಲಿ ಟ್ರೆಂಡ್ ಶುರುವಾಗಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.

    2016ರಲ್ಲಿ ಪಶ್ಚಿಮ ಬಂಗಾಳದ ಚುನಾವಣಾ (West Bengal Election) ಸಂದರ್ಭದಲ್ಲಿ ಕೋಲ್ಕತ್ತಾದ ವಿವೇಕಾನಂದ ನಗರದ ಮೇಲ್ಸೇತುವೆ ಕುಸಿತವಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ಮಮತಾ ಬ್ಯಾನರ್ಜಿ ಅವರು ಗುರಿಯಾಗಿಸಿಕೊಂಡು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೇ ಸೇತುವೆ ಕುಸಿದ ಬಳಿಕ ಇದು ದೇವರ ಕಾರ್ಯ. ಇದು ಮೋಸದ ಕೃತ್ಯ, ವಂಚನೆಯ ಪರಿಣಾಮ, ಚುನಾವಣೆಯ ಸಮಯದಲ್ಲೇ ಕುಸಿದು ಬಿದ್ದಿದೆ. ನೀವು ಯಾವ ರೀ ಸರ್ಕಾರ ನಡೆಸುತ್ತೀದ್ದೀರಿ. ಇದು ನಿಜವಾಗಿಯೂ ಜನರಿಗೆ ದೇವರು ಕೊಟ್ಟ ಸಂದೇಶವಾಗಿದೆ ಎಂದು ಮೋದಿ ಅವರು ಮಮತಾ ಬ್ಯಾನರ್ಜಿ ಅವರನ್ನ ಟೀಕಿಸಿದ್ದರು.

    ಅವರು ಎಡಪಂಥೀಯರೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ. ಎಡ-ಬಲ ಹೇಗಾದರೂ ಇರಲಿ. ಮೊದಲು ಸಾಯುತ್ತಿರುವವರ ಬಗ್ಗೆ ಯೋಚಿಸಿ, ಸತ್ತವರನ್ನು ಗೌರವಿಸಿ ಎಂದು ಮೋದಿ ಕಿಡಿಕಾರಿದ್ದರು. ಈ ಮಾಹಿತಿಯನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ಪ್ರತಿಪಕ್ಷದ ನಾಯಕರು ಪ್ರಧಾನಿ ಮೋದಿ ಅವರೇ ಇಂದು ನಿಮ್ಮ ತವರಿನಲ್ಲೇ ನಡೆದಿರುವ ಘಟನೆಗೆ ಏನು ಹೇಳುತ್ತೀರಿ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ವಿಜಯಪುರ ನಗರಪಾಲಿಕೆ ಚುನಾವಣೆ – ಬಿಜೆಪಿಗೆ ಸಿಂಹಪಾಲು

    ಟಿಎಂಸಿ (TMC) ನಾಯಕ ಮತ್ತು ರಾಜ್ಯಸಭಾ ಸಂಸದ ಸುಖೇಂದು ಶೇಖರ್ ರಾಯ್ ಟ್ವೀಟ್ (Twitter) ಮಾಡಿದ್ದು, ಕೋಲ್ಕತ್ತಾ ಫ್ಲೈಓವರ್ ಕುಸಿದಾಗ ಮಮತಾ ಬ್ಯಾನರ್ಜಿ (Mamata Banerjee) ಅವರನ್ನು ನಿಂದಿಸಿದ್ದೀರಿ. ಈಗ ಗುಜರಾತ್‌ನಲ್ಲಿ ಹೊಸದಾಗಿ ನವೀಕರಿಸಿದ ಸೇತುವೆ ಕುಸಿತು 141 ಜನ ಸಾವನ್ನಪ್ಪಿದ್ದಾರೆ. ಮೋದಿ ಜೀ ಅವರೇ ಸತ್ತವರ ಬಗ್ಗೆ ಕೆಲವು ಹನಿ ಕಣ್ಣೀರು ಇರಲಿ ಎಂದು ಮೋದಿ ವಿರುದ್ಧ ಕಿಡಿಕಾರಿದ್ದಾರೆ.

    ಇನ್ನೂ 2016ರ ಘಟನೆಯನ್ನು ಟ್ವೀಟ್‌ನಲ್ಲಿ ಹಂಚಿಕೊಂಡಿರುವ ಶಿವಸೇನಾ (Shivsena) ಸಂಸದೆ ಪ್ರಿಯಾಂಕಾ ಚತುರ್ವೇದಿ (Priyanka Chaturvedi), ಪಶ್ಚಿಮ ಬಂಗಾಳದಲ್ಲಿ ಸೇತುವೆ ಕುಸಿದಾಗ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇದು ದೇವರ ಕಾರ್ಯ, ವಂಚನೆಯ ಕೃತ್ಯ ಎಂದು ಹೇಳಿದ್ದನ್ನು ಗುಜರಾತಿನ ಘಟನೆ ನೆನಪಿಸುತ್ತದೆ ಎಂದು ಬರೆದು, 2016 ಘಟನೆಯ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: 15-20 ಹುಡುಗರು ಉದ್ದೇಶಪೂರ್ವಕವಾಗಿ ಮೋರ್ಬಿ ಸೇತುವೆಯನ್ನು ಅಲುಗಾಡಿಸಿದ್ದೆ ದುರಂತಕ್ಕೆ ಕಾರಣ: ಪ್ರತ್ಯಕ್ಷದರ್ಶಿ

    2016ರ ಮಾರ್ಚ್ 31ರಂದು ಮಧ್ಯ ಕೋಲ್ಕತ್ತಾದಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 30 ಜನರು ಸಾವನ್ನಪ್ಪಿದ್ದರು. ಚುನಾವಣಾ ಸಂದರ್ಭದಲ್ಲಿ ನಡೆದಿದ್ದರಿಂದ ಪ್ರತಿ ಪಕ್ಷಗಳು ಇದನ್ನು ರಾಜಕೀಯವಾಗಿ ಬಳಸಿಕೊಂಡಿದ್ದವು.

    Live Tv
    [brid partner=56869869 player=32851 video=960834 autoplay=true]