Tag: Gujarat Taitans

  • IPL 2023 Finals: ಜೋರಾಯ್ತು ಮ್ಯಾಚ್‌ ಫಿಕ್ಸಿಂಗ್‌ ಸದ್ದು, ಪಂದ್ಯ ಆರಂಭಕ್ಕೂ ಮುನ್ನವೇ ರಿಸಲ್ಟ್ – CSK ರನ್ನರ್ ಅಪ್?

    IPL 2023 Finals: ಜೋರಾಯ್ತು ಮ್ಯಾಚ್‌ ಫಿಕ್ಸಿಂಗ್‌ ಸದ್ದು, ಪಂದ್ಯ ಆರಂಭಕ್ಕೂ ಮುನ್ನವೇ ರಿಸಲ್ಟ್ – CSK ರನ್ನರ್ ಅಪ್?

    ಅಹಮದಾಬಾದ್‌: ಚೆನ್ನೈ ಸೂಪರ್‌ ಕಿಂಗ್ಸ್‌ (CSK) ಹಾಗೂ ಗುಜರಾತ್‌ ಟೈಟಾನ್ಸ್‌ (GT) ನಡುವಿನ ಫೈನಲ್ಸ್‌ (IPL Finals) ಪಂದ್ಯ ಭಾನುವಾರ ಮಳೆಯಿಂದಾಗಿ ರದ್ದಾಗಿದೆ. ಸೋಮವಾರವೂ (ಮೇ 29) ಮಳೆಯ ಆರ್ಭಟ ಮುಂದುವರಿದರೆ, ಲೀಗ್‌ ರ‍್ಯಾಂಕಿಂಗ್‌ ಪಟ್ಟಿಯ ಆಧಾರದ ಮೇಲೆ ಚಾಂಪಿಯನ್ಸ್‌ ಪಟ್ಟ ನಿರ್ಧರಿಸಲಾಗುತ್ತದೆ.

    ಸೋಮವಾರ ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ. ಈ ನಡುವೆ ಪಂದ್ಯ ಆರಂಭಕ್ಕೂ ಮುನ್ನವೇ ರಿಸಲ್ಟ್‌ ಹೊರಬಿದ್ದಂತೆ ಕಾಣ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಎಲ್‌ಇಡಿ ಸ್ಕ್ರೀನ್‌ನ ಫೋಟೋವೊಂದು ಸದ್ದು ಮಾಡುತ್ತಿದೆ. ಭಾನುವಾರ ರಾತ್ರಿ ಮಳೆಯಿಂದಾಗಿ ಪಂದ್ಯವನ್ನ ರದ್ದು ಮಾಡಲಾಯಿತು. ಈ ವೇಳೆ ಕ್ರಿಕೆಟ್‌ ವೀಕ್ಷಣೆಗೆ ಇರಿಸಲಾಗಿದ್ದ ಎಲ್‌ಇಡಿ ಸ್ಕ್ರೀನ್‌ಬೋರ್ಡ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ರನ್ನರ್‌ ಅಪ್‌ ಎಂದು ತೋರಿಸಲಾಗುತ್ತಿತ್ತು. ಈ ಫೋಟೋ ಸಖತ್‌ ವೈರಲ್‌ ಆಗ್ತಿದೆ. ಇದರಿಂದ ಮತ್ತೆ ಕ್ರಿಕೆಟ್‌ ಅಭಿಮಾನಿಗಳನ್ನ ಗೊಂದಲಕ್ಕೀಡುಮಾಡಿದೆ, ಜೊತೆಗೆ ಮ್ಯಾಚ್‌ ಫಿಕ್ಸಿಂಗ್‌ ಸದ್ದು ಕೇಳಿಬರುತ್ತಿದೆ. ಇದನ್ನೂ ಓದಿ: ಐಪಿಎಲ್‌ಗೆ ಗುಡ್‌ ಬೈ ಹೇಳಿದ CSK ಸ್ಟಾರ್‌ ಅಂಬಾಟಿ ರಾಯುಡು

    ಮತ್ತೆ ಮಳೆಯಾದ್ರೆ ಯಾರಿಗೆ ಲಾಭ?
    ಹೌದು.. ನಿನ್ನೆಯಂತೆ ಇಂದೂ ಸಹ ಮಳೆ ಮುಂದುವರಿದು ರಾತ್ರಿ 9:40ರ ಒಳಗೆ ಬಿಡುವು ಸಿಕ್ಕರೆ ಸಂಪೂರ್ಣ 20 ಓವರ್‌ಗಳ ಪಂದ್ಯ ನಡೆಯಲಿದೆ. 5 ಓವರ್‌ಗಳ ಪಂದ್ಯವನ್ನಾಡಿಸಲು ರಾತ್ರಿ 12:06ರ ವರೆಗೆ ಸಮಯವಿರಲಿದೆ. ಅದೂ ಸಾಧ್ಯವಾಗದಿದ್ದಲ್ಲಿ ಸೂಪರ್‌ ಓವರ್‌ ಆಡಿಸಲು ರಾತ್ರಿ 12:50ರ ವರೆಗೆ ಸಮಯವಿರಲಿದೆ. ಒಂದು ವೇಳೆ ಸಂಪೂರ್ಣವಾಗಿ ಪಂದ್ಯ ರದ್ದಾದರೆ ಲೀಗ್‌ ಹಂತದ ಮುಕ್ತಾಯಕ್ಕೆ ಹೆಚ್ಚು ಅಂಕ ಪಡೆದ ತಂಡವನ್ನ ಚಾಂಪಿಯನ್‌ ಆಗಿ ಘೋಷಣೆ ಮಾಡಲಾಗುತ್ತದೆ. ಇದನ್ನೂ ಓದಿ: ಗಿಲ್‌ ಗಿಲ್‌ ಗಿಲ್‌ – ಕೊಹ್ಲಿ IPL ದಾಖಲೆ ಉಡೀಸ್‌ ಮಾಡ್ತಾರಾ ಗಿಲ್‌?

    ಐಪಿಎಲ್‌ 14 ಲೀಗ್‌ ಪಂದ್ಯಗಳಲ್ಲಿ 10ರಲ್ಲಿ ಗೆಲುವು ಸಾಧಿಸಿರುವ ಗುಜರಾತ್‌ ಟೈಟಾನ್ಸ್‌ +0.809 ರನ್‌ರೇಟ್‌ನೊಂದಿಗೆ 20 ಅಂಕ ಪಡೆದು ಅಗ್ರ ಸ್ಥಾನದಲ್ಲಿದೆ. ಆದ್ರೆ 14ರಲ್ಲಿ 8ರಲ್ಲಿ ಗೆಲುವು ಸಾಧಿಸಿರುವ‌ ಚೆನ್ನೈ ಸೂಪರ್‌ ಕಿಂಗ್ಸ್‌ +0.652 ರನ್‌ರೇಟ್‌ನೊಂದಿಗೆ 17 ಅಂಕ ಪಡೆದು 2ನೇ ಸ್ಥಾನದಲ್ಲಿದೆ. ಲೀಗ್‌ ಹಂತದ ಪಾಯಿಂಟ್ಸ್‌ ಆಧರಿಸಿ ಚಾಂಪಿಯನ್ಸ್‌ ನಿರ್ಧರಿಸುವುದಾದರೆ, ಗುಜರಾತ್‌ ಟೈಟಾನ್ಸ್‌ ಸತತ 2ನೇ ಬಾರಿಗೆ ಚಾಂಪಿಯನ್‌ ಕಿರೀಟ ಧರಿಸಲಿದೆ.

  • IPL 2023 Finals: ಬಿಟ್ಟು ಬಿಟ್ಟು ಕಾಡುತ್ತಿದೆ ಮಳೆ – ಕ್ಲೈಮ್ಯಾಕ್ಸ್‌ ಕದನಕ್ಕೆ ಬ್ರೇಕ್‌?

    IPL 2023 Finals: ಬಿಟ್ಟು ಬಿಟ್ಟು ಕಾಡುತ್ತಿದೆ ಮಳೆ – ಕ್ಲೈಮ್ಯಾಕ್ಸ್‌ ಕದನಕ್ಕೆ ಬ್ರೇಕ್‌?

    ಅಹಮದಾಬಾದ್‌: ಗುಜರಾತ್‌ ಟೈಟಾನ್ಸ್‌ ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ನಡುವಿನ ಫೈನಲ್‌ ಪಂದ್ಯ ರೋಚಕ ಘಟ್ಟಕ್ಕೆ ಬಂದುನಿಂತಿದೆ. 7 ಗಂಟೆಗೆ ಶುರುವಾದ ಮಳೆ ಬಿಟ್ಟು ಬಿಟ್ಟು ಕಾಡುತ್ತಿದೆ. ರಾತ್ರಿ 10.50 ಸಮಯ ಮೀರಿದರೂ ಮಳೆ ಬಿಡುವು ನೀಡದೇ ಆಟವಾಡಿಸುತ್ತಿದೆ.

    ರಾತ್ರಿ 9.35ರ ವೇಳೆಗೆ ಮಳೆ ನಿಂತರೇ 20 ಓವರ್‌ಗಳ ಪಂದ್ಯವನ್ನೇ ಆಡಿಸಲು ಐಪಿಎಲ್‌ ಮಂಡಳಿ ನಿರ್ಧರಿಸಿತ್ತು. ಆದ್ರೆ ಸಮಯ ಮೀರಿದ್ದು, ಇದೀಗ 5 ಓವರ್‌ಗಳ ಪಂದ್ಯಕ್ಕೆ ಆಟಗಾರರು ಅಣಿಯಾಗಬೇಕಾಗಿದೆ. ಒಂದು ವೇಳೆ 11 ಗಂಟೆ ಬಳಿಕ ಮಳೆ ನಿಂತರೇ ಮೈದಾನ ಶುಚಿಗೊಳಿಸಲು ಕನಿಷ್ಠ 1 ಗಂಟೆ ಸಮಯ ತೆಗೆದುಕೊಳ್ಳುತ್ತದೆ. ನಂತರ ಮಧ್ಯರಾತ್ರಿ 12.06 ರಿಂದ 5 ಓವರ್‌ ಪಂದ್ಯಕ್ಕೆ ಸೀಮಿತಗೊಳಿಸಲಾಗುತ್ತದೆ. ಮಳೆ ನಿರಂತರವಾಗಿ ಮುಂದುವರಿದರೆ ಪಂದ್ಯ ರದ್ದು ಮಾಡಬೇಕಾಗುತ್ತದೆ ಎಂದು ಐಪಿಎಲ್‌ ಮಂಡಳಿ ತಿಳಿಸಿದೆ. ಇದನ್ನೂ ಓದಿ: ಐಪಿಎಲ್‌ಗೆ ಗುಡ್‌ ಬೈ ಹೇಳಿದ CSK ಸ್ಟಾರ್‌ ಅಂಬಾಟಿ ರಾಯುಡು

    ಸಂಜೆ 7 ಗಂಟೆಯಿಂದಲೇ ಆರಂಭಗೊಂಡ ಮಳೆ 8:30ರ ವೇಳೆಗೆ ಬಿಡುವು ನೀಡಿತ್ತು. ಇನ್ನೇನು ಪಂದ್ಯ ಆರಂಭಕ್ಕೆ ಎಲ್ಲ ಸಿದ್ಧತೆ ಮತ್ತೆ ವಕ್ಕರಿಸಿದ ಮಳೆರಾಯ ಬಿಟ್ಟೂ ಬಿಡದೇ ಕಾಡುತ್ತಿದೆ. ಈಗಾಗಲೇ ಪ್ರೇಕ್ಷಕರು ಹೊರಾಂಗಣದತ್ತ ಮುಖ ಮಾಡುತ್ತಿದ್ದಾರೆ. ಆದ್ದರಿಂದ ಇಂದಿನ ಪಂದ್ಯ ನಡೆಯುವುದು ಅನುಮಾನವಾಗಿದೆ. ಇಂದಿಗೆ ಪಂದ್ಯ ರದ್ದಾದರೇ ಮೇ 29 ರಂದು ಸಂಜೆ 7:30ಕ್ಕೆ ಪಂದ್ಯ ನಡೆಯಲಿದೆ. ಇದನ್ನೂ ಓದಿ: IPL 2023 Finals: ಕ್ಲೈಮ್ಯಾಕ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ – ಪಂದ್ಯ ರದ್ದಾದ್ರೆ ಕಥೆ ಏನು?

  • IPL 2023 Finals: ಕ್ಲೈಮ್ಯಾಕ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ – ಪಂದ್ಯ ರದ್ದಾದ್ರೆ ಕಥೆ ಏನು?

    IPL 2023 Finals: ಕ್ಲೈಮ್ಯಾಕ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ – ಪಂದ್ಯ ರದ್ದಾದ್ರೆ ಕಥೆ ಏನು?

    ಅಹಮದಾಬಾದ್‌: 16ನೇ ಐಪಿಎಲ್‌ (IPL 2023) ಆವೃತ್ತಿ ಅಂತಿಮ ಘಟ್ಟಕ್ಕೆ ತಲುಪಿದೆ. ಭಾನುವಾರ ಗುಜರಾತ್‌ ಟೈಟಾನ್ಸ್‌ (GT) ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ (CSK) ನಡುವೆ ರೋಚಕ ಕಾದಾಟ ನಡೆಯಲಿದೆ. ಆದ್ರೆ ಈ ಪಂದ್ಯಕ್ಕೆ ಮಳೆ (Rain) ಅಡ್ಡಿಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    10ನೇ ಬಾರಿಗೆ ಐಪಿಎಲ್‌ ಫೈನಲ್‌ಗೆ ಲಗ್ಗೆಯಿಟ್ಟಿರುವ ಚೆನ್ನೈ 4 ಬಾರಿ ಪ್ರಶಸ್ತಿ ಗೆದ್ದಿದೆ. ಆದ್ರೆ ಕಳೆದ ವರ್ಷ ಐಪಿಎಲ್‌ಗೆ ಪದಾರ್ಪಣೆ ಮಾಡಿದ ಬಲಿಷ್ಠ ಗುಜರಾತ್‌ ಟೈಟಾನ್ಸ್‌ ಪಡೆ ಚೊಚ್ಚಲ ಆವೃತ್ತಿಯಲ್ಲೇ ಪ್ರಶಸ್ತಿ ಗೆದ್ದು, ಸತತ 2ನೇ ಬಾರಿ ಟ್ರೋಫಿ ಮುಡಿಗೇರಿಸಿಕೊಳ್ಳಲು ಕಾತುರವಾಗಿದೆ. ಆದ್ರೆ ಈ ಪಂದ್ಯಕ್ಕೆ ಮಳೆ ಅಡ್ಡಿ ಉಂಟುಮಾಡುವ ಸಾಧ್ಯತೆ ಇದೆ. ಭಾನುವಾರ ರಾತ್ರಿ ಅಹಮದಾಬಾದ್‌ನಲ್ಲಿ 40% ರಿಂದ 65% ರಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

    ವರದಿಯ ಪ್ರಕಾರ, ಭಾನುವಾರ (ಮೇ 28) ಸಂಜೆ ವೇಳೆಗೆ 78% ಮೋಡ ಕವಿದ ವಾತಾವರಣವಿದ್ದು, ಆಟ ಮೊಟಕುಗೊಳ್ಳುವ ಸಾಧ್ಯತೆ ಹೆಚ್ಚಿದೆ. ಮಳೆ ಬಂದ್ರೆ, ಕನಿಷ್ಠ 2 ಗಂಟೆಗಳ ಕಾಲ ಸುರಿಯಲಿದೆ ಎನ್ನಲಾಗಿದೆ.

    ಮಳೆ ಅಡ್ಡಿಯಾದ್ರೆ ಕಥೆ ಏನು?
    ಫೈನಲ್‌ ಪಂದ್ಯ ಮಳೆಯಿಂದಾಗಿ ಅಡ್ಡಿಯಾದರೆ ಅದಕ್ಕೆ ರೈನ್‌ ರೂಲ್ಸ್‌ ಮೂಲಕ ಫಲಿತಾಂಶ ನಿಗದಿಮಾಡಲು ಐಪಿಎಲ್‌ ಮಂಡಳಿ ನಿರ್ಧರಿಸಿದೆ. ಫೈನಲ್ ಪಂದ್ಯ ಆರಂಭಕ್ಕೂ ಮುನ್ನ ಮಳೆ ಬಂದು ಪಂದ್ಯ ತಡವಾಗಿ ರಾತ್ರಿ 9.40ರ ಒಳಗೆ ಶುರುವಾದರೆ ಯಾವುದೇ ಓವರ್​ ಕಡಿತ ಇರುವುದಿಲ್ಲ. ಇತ್ತಂಡಗಳು 20 ಓವರ್​ಗಳನ್ನು ಆಡಲಿದೆ. ಒಂದು ವೇಳೆ 9.40ರ ಬಳಿಕ ಪಂದ್ಯ ಆರಂಭವಾಗುವುದಾರೆ, ಓವರ್​ಗಳ ಕಡಿತ ಮಾಡಲಾಗುತ್ತದೆ. ಅಲ್ಲದೆ ಆ ಬಳಿಕ ಡಕ್​ವರ್ತ್​ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶ ನಿರ್ಧರಿಸಬೇಕಿದ್ದರೆ ಉಭಯ ತಂಡಗಳು ಕನಿಷ್ಠ 5 ಓವರ್​ಗಳನ್ನು ಆಡಿರಬೇಕು.

    ನಿಗದಿತ ಸಮಯದೊಳಗೆ ಪಂದ್ಯ ನಡೆಯದಿದ್ದರೆ ಹೆಚ್ಚುವರಿ ಸಮಯ ತೆಗೆದುಕೊಳ್ಳಲಾಗುತ್ತದೆ. ಈ ಮೂಲಕ 5 ಓವರ್​ಗಳ ಪಂದ್ಯವನ್ನು ಆಯೋಜಿಸಲಿದೆ. ಈ 5 ಓವರ್​ಗಳ ಪಂದ್ಯವು ರಾತ್ರಿ 11.56 ರಿಂದ ಶುರುವಾಗಲಿದ್ದು, 12.50 ರೊಳಗೆ ಮುಗಿಯಲಿದೆ. ರಾತ್ರಿ 11.56 ರಿಂದ 12.50ರ ಒಳಗೆ 5 ಓವರ್​ಗಳ ಪಂದ್ಯ ಆಯೋಜಿಸಲು ಸಾಧ್ಯವಾಗದಿದ್ದರೆ ಸೂಪರ್ ಓವರ್​ ನಡೆಯಲಿದೆ. ಆದರೆ ಸೂಪರ್ ಓವರ್​ ನಡೆಸಲು ಪಿಚ್ ಮತ್ತು ಮೈದಾನವು ಆಟಕ್ಕೆ ಸಿದ್ಧವಾಗಿರಬೇಕು. ಅದರಂತೆ 12.50ಕ್ಕೆ ಸೂಪರ್ ಓವರ್​ ಪಂದ್ಯ ಶುರುವಾಗಲಿದೆ.

    ಸೂಪರ್‌ ಓವರ್‌ ನಡೆಸುವುದಕ್ಕೂ ಸಾಧ್ಯವಾಗದಿದ್ದಲ್ಲಿ ಐಪಿಎಲ್‌ ಲೀಗ್‌ ಪಾಯಿಂಟ್ಸ್‌ ರ‍್ಯಾಂಕಿಂಗ್‌ನಿಂದ ಚಾಂಪಿಯನ್ಸ್‌ ಎಂದು ಘೋಷಿಸಲು ಅಥವಾ ಪಂದ್ಯವನ್ನು ಮುಂದೂಡಲು ಐಪಿಎಲ್‌ ಮಂಡಳಿ ನಿರ್ಧರಿಸಿದೆ.

    ಐಪಿಎಲ್‌ 14 ಲೀಗ್‌ ಪಂದ್ಯಗಳಲ್ಲಿ 10ರಲ್ಲಿ ಗೆಲುವು ಸಾಧಿಸಿರುವ ಗುಜರಾತ್‌ ಟೈಟಾನ್ಸ್‌ +0.809 ರನ್‌ರೇಟ್‌ನೊಂದಿಗೆ 20 ಅಂಕ ಪಡೆದು ಅಗ್ರ ಸ್ಥಾನದಲ್ಲಿದೆ. ಆದ್ರೆ 14ರಲ್ಲಿ 8ರಲ್ಲಿ ಗೆಲುವು ಸಾಧಿಸಿರುವ‌ ಚೆನ್ನೈ ಸೂಪರ್‌ ಕಿಂಗ್ಸ್‌ +0.652 ರನ್‌ರೇಟ್‌ನೊಂದಿಗೆ 17 ಅಂಕ ಪಡೆದು 2ನೇ ಸ್ಥಾನದಲ್ಲಿದೆ. ಲೀಗ್‌ ಹಂತದ ಪಾಯಿಂಟ್ಸ್‌ ಆಧರಿಸಿ ಚಾಂಪಿಯನ್ಸ್‌ ನಿರ್ಧರಿಸುವುದಾದರೆ, ಗುಜರಾತ್‌ ಟೈಟಾನ್ಸ್‌ ಸತತ 2ನೇ ಬಾರಿಗೆ ಚಾಂಪಿಯನ್‌ ಕಿರೀಟ ಧರಿಸಲಿದೆ.

  • IPL 2023 Finals: ಗಿಲ್‌ ಅಬ್ಬರಕ್ಕೆ ಮುಂಬೈ ಬರ್ನ್‌ – 2ನೇ ಬಾರಿಗೆ ಗುಜರಾತ್‌ ಟೈಟಾನ್ಸ್‌ ಫೈನಲ್‌ಗೆ

    IPL 2023 Finals: ಗಿಲ್‌ ಅಬ್ಬರಕ್ಕೆ ಮುಂಬೈ ಬರ್ನ್‌ – 2ನೇ ಬಾರಿಗೆ ಗುಜರಾತ್‌ ಟೈಟಾನ್ಸ್‌ ಫೈನಲ್‌ಗೆ

    ಅಹಮದಾಬಾದ್‌: ಶುಭಮನ್‌ ಗಿಲ್‌ ಸ್ಫೋಟಕ ಶತಕದ ಬ್ಯಾಟಿಂಗ್‌ ಹಾಗೂ ಸಂಘಟಿತ ಬೌಲಿಂಗ್‌ ಪ್ರದರ್ಶನದಿಂದ ಗುಜರಾತ್‌ ಟೈಟಾನ್ಸ್‌ ತಂಡವು ಮುಂಬೈ ಇಂಡಿಯನ್ಸ್‌ ವಿರುದ್ಧ 62 ರನ್‌ಗಳ ಭರ್ಜರಿ ಜಯದೊಂದಿಗೆ ಸತತ 2ನೇ ಬಾರಿಗೆ ಐಪಿಎಲ್‌ನಲ್ಲಿ ಫೈನಲ್‌ ಪ್ರವೇಶಿಸಿದೆ. ಇನ್ನೂ 5 ಬಾರಿ ಚಾಂಪಿಯನ್ಸ್‌ ಪಟ್ಟಕ್ಕೇರಿದ್ದ ಮುಂಬೈ ಇಂಡಿಯನ್ಸ್‌ ಸೋಲಿನೊಂದಿಗೆ 2023ರ ಐಪಿಎಲ್‌ ಆವೃತ್ತಿಗೆ ವಿದಾಯ ಹೇಳಿದೆ.

    2022ರ ಆವೃತ್ತಿಯಲ್ಲಿ ಐಪಿಎಲ್‌ ಪ್ರವೇಶಿಸಿದ ಹಾರ್ದಿಕ್‌ ಪಾಂಡ್ಯ ನಾಯಕತ್ವದ ಗುಜರಾತ್‌ ಟೈಟಾನ್ಸ್‌ ತಂಡ ಸತತ 2ನೇ ಬಾರಿಗೆ ಐಪಿಎಲ್‌ನಲ್ಲಿ ಫೈನಲ್‌ ತಲುಪಿದೆ. ಸೂಪರ್‌ ಸಂಡೇನಲ್ಲಿ (ಮೇ 28) ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸೆಣಸಲಿದೆ.

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್‌ ಟೈಟಾನ್ಸ್‌ 20 ಓವರ್‌ಗಳಲ್ಲಿ 20 ಓವರ್‌ಗಳಲ್ಲಿ 233 ರನ್‌ ಗಳಿಸಿತು. ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್‌ 18.2 ಓವರ್‌ಗಳಲ್ಲಿ 171 ರನ್‌ಗಳಿಗೆ ಸರ್ವಪತನ ಕಂಡಿತು.

    ಚೇಸಿಂಗ್‌ ಆರಂಭಿಸಿದ ಮುಂಬೈ ಇಂಡಿಯನ್ಸ್‌ ಆರಂಭದಲ್ಲೇ ರೋಹಿತ್‌ ಶರ್ಮಾ ಹಾಗೂ ನೆಹಾಲ್‌ ವಧೇರಾ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೀಡಾಗಿತ್ತು. ನಂತರ ಕಣಕ್ಕಿಳಿದ ‌14 ಎಸೆತಗಳಲ್ಲಿ ವರ್ಮಾ 307.14 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿ ಸ್ಫೋಟಕ 43 ರನ್‌ (5 ಬೌಂಡರಿ, 3 ಸಿಕ್ಸರ್‌) ಚಚ್ಚಿ ತಂಡಕ್ಕೆ ಚೇತರಿಕೆ ತಂದರು.

    ನಂತರ 4ನೇ ವಿಕೆಟ್‌ಗೆ ಜೊತೆಯಾದ ಕ್ಯಾಮರೂನ್‌ ಗ್ರೀನ್‌ ಹಾಗೂ ಸೂರ್ಯಕುಮಾರ್‌ ಯಾದವ್‌ ಜೋಡಿ 32 ಎಸೆತಗಳಲ್ಲಿ 52 ರನ್‌ ಜೊತೆಯಾಟ ನೀಡಿತ್ತು. ಅಷ್ಟರಲ್ಲೇ 20 ಎಸೆತಗಳಲ್ಲಿ 30 ರನ್‌ (2 ಸಿಕ್ಸರ್‌, 2 ಬೌಂಡರಿ) ಗಳಿಸಿದ್ದ ಗ್ರೀನ್‌ ವಿಕೆಟ್‌ ಕೈಚೆಲ್ಲಿ ನಿರಾಸೆ ಮೂಡಿಸಿದರು. ಇನ್ನೂ ಅರ್ಧಶತಕ ಗಳಿಸಿ ಸ್ಫೋಟಕ ಬ್ಯಾಟಿಂಗ್‌ ಮಾಡುತ್ತಿದ್ದ ಸೂರ್ಯಕುಮಾರ್‌ ಯಾದವ್‌, ತಂಡಕ್ಕೆ ಗೆಲುವು ತಂದುಕೊಡುತ್ತಾರೆ ಎಂಬ ನಿರೀಕ್ಷೆಯಿತ್ತು. ಆದ್ರೆ ಬೇಡದ ಶಾಟ್‌ ಹೊಡೆಯಲು ಯತ್ನಿಸಿ ಸೂರ್ಯ ಕ್ಲೀನ್‌ ಬೌಲ್ಡ್‌ ಆಗಿ ತಂಡದ ಗೆಲುವಿನ ಕನಸನ್ನ ನುಚ್ಚು ನೂರು ಮಾಡಿದರು.

    ಸೂರ್ಯಕುಮಾರ್‌ ಯಾದವ್‌ 61 ರನ್‌ (38 ಎಸೆತ, 7 ಬೌಂಡರಿ, 2 ಸಿಕ್ಸರ್‌) ಗಳಿಸಿ ಔಟಾಗುತ್ತಿದ್ದಂತೆ ವಿಷ್ಣು ವಿನೋದ್‌ 5 ರನ್‌ ಗಳಿಸಿ ಔಟಾದರು. ಕೊನೆಯಲ್ಲಿ ಟಿಮ್‌ ಡೇವಿಡ್‌ 2 ರನ್‌, ಕ್ರಿಸ್‌ ಜೋರ್ಡಾನ್‌ 2 ರನ್‌ ಗಳಿಸಿದರೆ ಪಿಯೂಷ್‌ ಚಾವ್ಲಾ ಶೂನ್ಯಕ್ಕೆ ನಿರ್ಗಮಿಸಿದರು. ಕುಮಾರ್‌ ಕಾರ್ತಿಕೇಯನ್‌ 6 ರನ್‌ ಗಳಿಸಿ ಔಟಾದರೆ, ಜೇಸನ್ ಬೆಹ್ರೆನ್ಡಾರ್ಫ್ 3 ರನ್‌ ಗಳಿಸಿ ಕ್ರೀಸ್‌ನಲ್ಲಿ ಉಳಿದರು.

    ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್‌ ಟೈಟಾನ್ಸ್‌ತಂಡ ಉತ್ತಮ ಆರಂಭ ಪಡೆಯುವಲ್ಲಿ ವಿಫಲರಾದರೂ ಬಳಿಕ ಆಕ್ರಮಣಕಾರಿ ಬ್ಯಾಟಿಂಗ್‌ನಿಂದ ಬೃಹತ್‌ ಮೊತ್ತ ದಾಖಲಿಸಿತು. 6.3 ಓವರ್‌ಗಳಲ್ಲಿ 54 ರನ್‌ಗಳಿಗೆ ಮೊದಲ ವಿಕೆಟ್‌ ಕಳೆದುಕೊಂಡರು. 2ನೇ ವಿಕೆಟ್‌ಗೆ 16.5 ಓವರ್‌ಗಳಲ್ಲಿ ತಂಡದ ಮೊತ್ತ 192ಕ್ಕೆ ಏರಿತ್ತು.

    ಶುಭಮನ್‌ ಗಿಲ್‌ ಸ್ಫೋಟಕ ಶತಕದಾಟಕ್ಕೆ ಮುಂಬೈ ಬೌಲರ್‌ಗಳು ಕಂಗಾಲಾಗಿದ್ದರು. ಸಾಯಿ ಸುದರ್ಶನ್‌ ಹಾಗೂ ಶುಭಮನ್‌ ಗಿಲ್‌ ಜೋಡಿ 64 ಎಸೆತಗಳಲ್ಲಿ 138 ರನ್‌ ಗಳಿಸಿತ್ತು. ಮೊದಲ 32 ಎಸೆತಗಳಲ್ಲಿ 50 ರನ್‌ ಗಳಿಸಿದ್ದ ಗಿಲ್‌, ಮುಂದಿನ 17 ಎಸೆತಗಳಲ್ಲಿ 50 ರನ್‌ ಚಚ್ಚಿ ಶತಕ ಪೂರೈಸಿದರು. ಕೊನೆಗೆ 60 ಎಸೆತಗಳನ್ನು ಎದುರಿಸಿ 10 ಭರ್ಜರಿ ಸಿಕ್ಸರ್‌ ಹಾಗೂ 7 ಬೌಂಡರಿಗಳೊಂದಿಗೆ 129 ರನ್‌ ಗಳಿಸಿ ಔಟಾದರು.

    ಈ ನಡುವೆ ಸಾಯಿ ಸುದರ್ಶನ್‌ 43 ರನ್‌ (‌ 31 ಎಸೆತ, 5 ಬೌಂಡರಿ, 1 ಸಿಕ್ಸರ್), ವೃದ್ಧಿಮಾನ್‌ ಸಾಹಾ 18 ರನ್‌, ಹಾರ್ದಿಕ್‌ ಪಾಂಡ್ಯ ಅಜೇಯ 28 ರನ್‌, ರಶೀದ್‌ ಖಾನ್‌ ಅಜೇಯ 5 ರನ್‌ ಗಳಿಸಿದರು.

    ಮುಂಬೈ ಪರ ಆಕಾಶ್‌ ಮಧ್ವಾಲ್‌, ಪಿಯೂಷ್‌ ಚಾವ್ಲಾ ತಲಾ ಒಂದೊಂದು ವಿಕೆಟ್‌ ಪಡೆದರು.

  • ಗಿಲ್‌ ಗಿಲ್‌ ಗಿಲ್‌ – ಕೊಹ್ಲಿ IPL ದಾಖಲೆ ಉಡೀಸ್‌ ಮಾಡ್ತಾರಾ ಗಿಲ್‌?

    ಗಿಲ್‌ ಗಿಲ್‌ ಗಿಲ್‌ – ಕೊಹ್ಲಿ IPL ದಾಖಲೆ ಉಡೀಸ್‌ ಮಾಡ್ತಾರಾ ಗಿಲ್‌?

    ಅಹಮದಾಬಾದ್‌: ಭರ್ಜರಿ ಬ್ಯಾಟಿಂಗ್‌ ಫಾರ್ಮ್‌ನಲ್ಲಿರುವ ಟೀಂ ಇಂಡಿಯಾ ಹಾಗೂ ಗುಜರಾತ್‌ ಟೈಟಾನ್ಸ್‌ (GT) ಆಟಗಾರ ಶುಭಮನ್‌ ಗಿಲ್‌ (Shubman Gill) ಈ ಬಾರಿ ವಿರಾಟ್‌ ಕೊಹ್ಲಿ (Virat Kohli) ಐಪಿಎಲ್‌ ದಾಖಲೆ ಮುರಿಯುವ ಸನಿಹದಲ್ಲಿದ್ದಾರೆ.

    ಲೀಗ್‌ ಹಂತದ ಕೊನೆಯ ಪಂದ್ಯದಲ್ಲಿ ಆರ್‌ಸಿಬಿ ಪಾಲಿಗೆ ಮುಳ್ಳಾಗಿ ಕಾಡಿದ ಗಿಲ್‌, ಶತಕ ಬಾರಿಸಿ ಆರ್‌ಸಿಬಿ ತಂಡವನ್ನು ಪ್ಲೇ ಆಫ್‌ಗೆ ಬಾರದಂತೆ ತಡೆದರು. ಶುಕ್ರವಾರ (ಮೇ 26) ಕ್ವಾಲಿಫೈಯರ್‌ 2ನೇ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್‌ ಮಾಡಿದ ಗಿಲ್‌ ಮುಂಬೈ ಬೌಲರ್‌ಗಳನ್ನ ಚೆಂಡಾಡಿದರು. ಆರಂಭಿಕನಾಗಿ ಕಣಕ್ಕಿಳಿದ ಶುಭಮನ್‌ ಗಿಲ್‌ 60 ಎಸೆತಗಳಲ್ಲಿ 10 ಸಿಕ್ಸ್‌, 7 ಬೌಂಡರಿಗಳೊಂದಿಗೆ ಬರೋಬ್ಬರಿ 129 ರನ್‌ ಚಚ್ಚಿದರು. ಈ ಮೂಲಕ 2023ರ ಐಪಿಎಲ್‌ನಲ್ಲಿ ಅತಿಹೆಚ್ಚು ರನ್‌ ಗಳಿಸಿದ ಬ್ಯಾಟ್ಸ್‌ಮ್ಯಾನ್‌ ಆಗಿದ್ದಾರೆ. ಇದನ್ನೂ ಓದಿ: IPL 2023: ಧೋನಿಯಿಂದ ಉದ್ದೇಶಪೂರ್ವಕವಾಗಿ ಸಮಯ ವ್ಯರ್ಥ- ಲಾಸ್ಟ್ 5 ಓವರ್‌ಗೂ ಮುನ್ನ ನಡೆದಿದ್ದೇನು?

    ಆರ್‌ಸಿಬಿ ತಂಡದ ನಾಯಕ ಫಾಫ್‌ ಡು ಪ್ಲೆಸಿಸ್‌ 730 ರನ್‌ಗಳಿಸಿ ಆರೆಂಜ್‌ಕ್ಯಾಪ್‌ ರೇಸ್‌ನಲ್ಲಿದ್ದರು. ಆದ್ರೆ ಗಿಲ್‌ ಈ ಸೀಸನ್‌ನಲ್ಲಿ 3 ಶತಕಗಳನ್ನ ಸಿಡಿಸುವ ಮೂಲಕ ಆರೆಂಜ್‌ ಕ್ಯಾಪ್‌‌ ರೇಸ್‌ನಲ್ಲಿ ಮೊದಲಿಗರಾಗಿದ್ದಾರೆ.

    ಕೊಹ್ಲಿ ದಾಖಲೆ ಉಡೀಸ್‌ ಆಗುತ್ತಾ?
    ಆರ್‌ಸಿಬಿ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ 2016ರ ಐಪಿಎಲ್‌ ಒಂದೇ ಸೀಸನ್‌ನಲ್ಲಿ 4 ಭರ್ಜರಿ ಶತಕ, 7 ಅರ್ಧಶತಕಗಳೊಂದಿಗೆ 973 ರನ್‌ ಗಳಿಸಿದ್ದರು. ಇದು ಈವರೆಗೆ ಯಾರೂ ಮುರಿಯದ ದಾಖಲೆಯಾಗಿದೆ. 2016ರ ಸೀಸನ್‌ನಲ್ಲೇ ಡೇವಿಡ್‌ ವಾರ್ನರ್‌ 848 ರನ್‌ ಗಳಿಸಿದ್ದರು. 2022ರ ಐಪಿಎಲ್‌ ಸೀಸನ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ ತಂಡದ ಜೋಸ್‌ ಬಟ್ಲರ್‌ 4 ಶತಕಗಳೊಂದಿಗೆ 863 ರನ್‌ ಗಳಿಸಿದ್ದರು.

    2023ರ ಸೀಸನ್‌ನಲ್ಲಿ 16 ಪಂದ್ಯ 16 ಇನ್ನಿಂಗ್ಸ್‌ಗಳನ್ನಾಡಿರುವ ಶುಭಮನ್‌ ಗಿಲ್‌ 3 ಶತಕಗಳೊಂದಿಗೆ 851 ರನ್‌ ಗಳಿಸಿದ್ದಾರೆ. ಈ ಮೂಲಕ ಡೇವಿಡ್‌ ವಾರ್ನರ್‌ ದಾಖಲೆಯನ್ನ ಮುರಿದಿದ್ದು, ಜೋಸ್‌ ಬಟ್ಲರ್‌ ಹಾಗೂ ವಿರಾಟ್‌ ಕೊಹ್ಲಿ ಅವರ ಸಾರ್ವಕಾಲಿಕ ದಾಖಲೆಯನ್ನ ಮುರಿಯುವ ಸನಿಹದಲ್ಲಿದ್ದಾರೆ. ಒಂದು ವೇಳೆ ಶುಕ್ರವಾರದ ಪಂದ್ಯದಲ್ಲಿ ಟೈಟಾನ್ಸ್‌ ಫೈನಲ್‌ ತಲುಪಿ, ಇದೇ ಆಟ ಮುಂದುವರಿಸಿದರೆ,‌ ಗಿಲ್‌ ಕೊಹ್ಲಿಯ ದಾಖಲೆಯನ್ನ ಮುರಿಯುವ ಸಾಧ್ಯತೆಗಳಿದೆ. ಇದನ್ನೂ ಓದಿ: ಕೊಹ್ಲಿ ಕೆಣಕಿದ ನವೀನ್‌ಗೆ ಮುಂಬೈ ಸ್ಟಾರ್ಸ್‌ ಕೊಟ್ರು ಪಂಚ್‌ – RCB ಫ್ಯಾನ್ಸ್‌ಗೆ ಡಬಲ್‌ ಖುಷಿ

  • IPL 2023: GT vs MI ಹೈವೋಲ್ಟೇಜ್‌ ಪಂದ್ಯಕ್ಕೆ ಮಳೆ ಕಾಟ

    IPL 2023: GT vs MI ಹೈವೋಲ್ಟೇಜ್‌ ಪಂದ್ಯಕ್ಕೆ ಮಳೆ ಕಾಟ

    ಅಹಮದಾಬಾದ್‌: ಮುಂಬೈ ಇಂಡಿಯನ್ಸ್‌ (Mumbai Indians) ಹಾಗೂ ಗುಜರಾತ್‌ ಟೈಟಾನ್ಸ್‌ (Gujarat Taitans) ನಡುವಿನ ಹೈವೋಲ್ಟೇಜ್‌ ಕದನಕ್ಕೆ ಕೆಲವೇ ಕ್ಷಣಗಳು ಬಾಕಿಯಿದ್ದು, ಮಳೆ ಅಡ್ಡಿಯಾಗಿದೆ.

    ಅಹಮದಾಬಾದ್‌ನಲ್ಲಿ ಮಳೆ ಜೋರಾಗಿದ್ದು, ಮೈದಾನವನ್ನು ಟಾರ್ಪಲ್‌ಗಳಿಂದ ಮುಚ್ಚಲಾಗಿದೆ. ಸದ್ಯ ಮಳೆಯಿಂದ (Rain) ಪಂದ್ಯ ರದ್ದಾಗುವ ಭೀತಿ ಎದುರಾಗಿದೆ. ಇದನ್ನೂ ಓದಿ: IPL 2023 Final: ಗುಜರಾತ್‌ಗೆ ಗುನ್ನ ಕೊಟ್ಟ ಚೆನ್ನೈ – 10ನೇ ಬಾರಿಗೆ ಫೈನಲ್‌ಗೆ CSK ಎಂಟ್ರಿ

    2ನೇ ಆವೃತ್ತಿಯಲ್ಲಿ ಪ್ಲೇ ಆಫ್‌ ಪ್ರವೇಶಿಸಿರುವ ಗುಜರಾತ್‌ ಟೈಟಾನ್ಸ್‌ ಸತತ 2ನೇ ಬಾರಿಗೆ ಪ್ರಶಸ್ತಿ ಗೆಲ್ಲುವ ತವಕದಲ್ಲಿದ್ದರೆ, 5 ಬಾರಿ ಚಾಂಪಿಯನ್‌ ಪಟ್ಟಕ್ಕೇರಿರುವ ಮುಂಬೈ ಇಂಡಿಯನ್ಸ್‌ 2ನೇ ಎಲಿಮಿನೇಟರ್‌ ಪಂದ್ಯದಲ್ಲಿ ಗೆದ್ದು 6ನೇ ಬಾರಿ ಕಪ್‌ ಗೆಲ್ಲುವ ತವಕದಲ್ಲಿದೆ. ಇಂದು ಇತ್ತಂಡಗಳ ನಡುವೆ ಹಣಾಹಣಿ ನಡೆಯಲಿದ್ದು, ಗೆದ್ದ ತಂಡ ಫೈನಲ್‌ನಲ್ಲಿ ಇದೇ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಸೆಣಸಲಿದೆ. ಇದನ್ನೂ ಓದಿ: ಧೋನಿ ಫ್ಯಾನ್ಸ್‌ ಜೊತೆ ಕಿರಿಕ್‌ ತೆಗೆದ ಜಡೇಜಾ – RCB ತಂಡ ಸೇರಲು ಆಫರ್‌ ಕೊಟ್ರು ಫ್ಯಾನ್ಸ್‌

  • ಡಿಕೆ ಡಕೌಟ್‌ – IPLನಲ್ಲಿ ಕೆಟ್ಟ ದಾಖಲೆ ಹೆಗಲಿಗೇರಿಸಿಕೊಂಡ ದಿನೇಶ್‌ ಕಾರ್ತಿಕ್‌

    ಡಿಕೆ ಡಕೌಟ್‌ – IPLನಲ್ಲಿ ಕೆಟ್ಟ ದಾಖಲೆ ಹೆಗಲಿಗೇರಿಸಿಕೊಂಡ ದಿನೇಶ್‌ ಕಾರ್ತಿಕ್‌

    ಬೆಂಗಳೂರು: 2022ರ ಐಪಿಎಲ್‌ (IPL) ಸೀಸನ್‌ನಲ್ಲಿ ಭರ್ಜರಿ ಬ್ಯಾಟಿಂಗ್‌ನಿಂದ T20 ವಿಶ್ವಕಪ್‌ಗೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದುಕೊಂಡಿದ್ದ ದಿನೇಶ್‌ ಕಾರ್ತಿಕ್‌ (Dinesh Karthik) ಈ ಬಾರಿ ಕಳಪೆ ಬ್ಯಾಟಿಂಗ್‌ ಪ್ರದರ್ಶನ ನೀಡಿ ಬೇಡದ ದಾಖಲೆಯೊಂದನ್ನ ಹೆಗಲಿಗೇರಿಸಿಕೊಂಡಿದ್ದಾರೆ.

    ಆರಂಭದಿಂದಲೂ ಕಳಪೆ ಬ್ಯಾಟಿಂಗ್‌ ಮುಂದುವರಿಸಿದ ದಿನೇಶ್‌ ಕಾರ್ತಿಕ್‌ 17ನೇ ಬಾರಿಗೆ ಡಕೌಟ್‌ ಆಗುವ ಮೂಲಕ ಐಪಿಎಲ್‌ನಲ್ಲಿ ಅತಿಹೆಚ್ಚು ಬಾರಿ ಡಕೌಟ್‌ ಆದ ಕೆಟ್ಟ ದಾಖಲೆ ಬರೆದಿದ್ದಾರೆ. ಇದನ್ನೂ ಓದಿ: ಗ್ರೀನ್‌ ಸ್ಫೋಟಕ ಶತಕ, ಮುಂಬೈಗೆ 8 ವಿಕೆಟ್‌ಗಳ ಭರ್ಜರಿ ಜಯ – RCB ಗೆದ್ದರಷ್ಟೇ ಪ್ಲೇ ಆಫ್‌ಗೆ

    ಐಪಿಎಲ್‌ನಲ್ಲಿ ಕೆಕೆಆರ್‌ (KKR) ತಂಡದ ಆಟಗಾರ ಸುನೀಲ್‌ ನರೇನ್‌, ಮಂದೀಪ್‌ ಸಿಂಗ್‌ ತಲಾ 15 ಬಾರಿ, ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ (Rohit Sharma) 16 ಬಾರಿ ಡಕೌಟ್‌ ಆದ ಕೆಟ್ಟ ಸಾಧನೆ ಮಾಡಿದ್ದರು. ಆದ್ರೆ 2023ರ ಸೀಸನ್‌ನಲ್ಲಿ ಸತತ ಕಳಪೆ ಬ್ಯಾಟಿಂಗ್‌ನಿಂದ ದಿನೇಶ್‌ ಕಾರ್ತಿಕ್‌ ಅತಿಹೆಚ್ಚುಬಾರಿ ಡಕೌಟ್‌ ಆದ ಕೆಟ್ಟ ದಾಖಲೆ ಬರೆದಿದ್ದಾರೆ. ಇದನ್ನೂ ಓದಿ: ಕೊನೆಯಲ್ಲಿ ರಿಂಕು 6,4,6 – ಹೋರಾಡಿ ಸೋತ KKR – 1 ರನ್‌ನಿಂದ ಗೆದ್ದು ಪ್ಲೇ ಆಫ್‌ಗೆ ಹಾರಿದ ಲಕ್ನೋ

    dinesh karthik

    ಒಟ್ಟಾರೆಯಾಗಿ ಕ್ರಿಕೆಟ್‌ ವೃತ್ತಿ ಬದುಕಿನಲ್ಲಿ 386 ಟಿ20 ಪಂದ್ಯಗಳನ್ನಾಡಿರುವ ದಿನೇಶ್‌ ಕಾರ್ತಿಕ್‌ 25 ಬಾರಿ ಡಕೌಟ್‌ ಆಗಿದ್ದರೆ, ರೋಹಿತ್‌ ಶರ್ಮಾ 27 ಬಾರಿ ಡಕೌಟ್‌ ಆಗಿದ್ದಾರೆ. ಇದರಿಂದ ಆರ್‌ಸಿಬಿ ಅಭಿಮಾನಿಗಳು ದಿನೇಶ್‌ ಕಾರ್ತಿಕ್‌ ವಿರುದ್ಧ ಕಿಡಿ ಕಾರಿದ್ದಾರೆ.

    ಸೂಪರ್‌ ಸಂಡೇನಲ್ಲಿ ಗುಜರಾತ್‌ ಟೈಟಾನ್ಸ್‌ ವಿರುದ್ಧ ಕೊನೆಯ ಲೀಗ್‌ ಪಂದ್ಯವನ್ನಾಡುತ್ತಿರುವ ಆರ್‌ಸಿಬಿ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 197 ರನ್‌ಗಳನ್ನು ಕಲೆಹಾಕಿತು.

  • ಬೆಂಗ್ಳೂರಿನಲ್ಲಿ ಮಳೆ ಆರ್ಭಟ – ಇಂದಿನ RCB ಮ್ಯಾಚ್ ರದ್ದಾಗುತ್ತಾ?

    ಬೆಂಗ್ಳೂರಿನಲ್ಲಿ ಮಳೆ ಆರ್ಭಟ – ಇಂದಿನ RCB ಮ್ಯಾಚ್ ರದ್ದಾಗುತ್ತಾ?

    ಬೆಂಗಳೂರು: ಭಾನುವಾರ ಮಧ್ಯಾಹ್ನ ಬೆಂಗಳೂರು ನಗರದಲ್ಲಿ ಮಳೆಯ ಆರ್ಭಟ (Rain In Bengaluru) ಜೋರಾಗಿದ್ದು, ರಸ್ತೆಗಳು ಕೆರೆಯಂತಾಗಿವೆ. ಮಠ ಮಠ ಮಧ್ಯಾಹ್ನ 3:30ರ ವೇಳೆಗೆ ಕತ್ತಲು ಆವರಿಸಿದ್ದು, ವಾಹನ ಸವಾರರು ಪರದಾಡಿದ್ದಾರೆ.

    ಮಳೆಯ ಆರ್ಭಟ ಜೋರಾದ ಹಿನ್ನೆಲೆ ಭಾನುವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ನಡೆಯಬೇಕಿದ್ದ ಗುಜರಾತ್ ಟೈಟಾನ್ಸ್ (GT) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವಿನ ಹೈವೋಲ್ಟೇಜ್ ಪಂದ್ಯ ರದ್ದಾಗುವ ಸಾಧ್ಯತೆ ಏರ್ಪಟ್ಟಿದೆ. ಇದನ್ನೂ ಓದಿ: ಕೊನೆಯಲ್ಲಿ ರಿಂಕು 6,4,6 – ಹೋರಾಡಿ ಸೋತ KKR – 1 ರನ್‌ನಿಂದ ಗೆದ್ದು ಪ್ಲೇ ಆಫ್‌ಗೆ ಹಾರಿದ ಲಕ್ನೋ

    ಭಾರೀ ಮಳೆ ಹಿನ್ನೆಲೆಯಲ್ಲಿ ಮೈದಾನದ ತುಂಬಾ ನೀರು ಆವರಿಸಿದೆ. ಜೊತೆಗೆ ಪ್ರೇಕ್ಷಕರು ಕುಳಿತುಕೊಳ್ಳುವ ಆಸನಗಳ ಸ್ಥಳ ಹಾಗೂ ವಿಐಪಿ ಕ್ಯಾಬಿನ್‌ಗಳಿಗೂ ನೀರು ನುಗ್ಗಿದೆ. ಈ ಹಿನ್ನೆಲೆಯಲ್ಲಿ ಲೀಗ್ ಹಂತದ ಕೊನೆಯ ಪಂದ್ಯ ರದ್ದಾಗುವ ಸಾಧ್ಯತೆಯಿದೆ. ಇದನ್ನೂ ಓದಿ: IPL 2023: ಗೆದ್ದು ಪ್ಲೇ ಆಫ್‌ಗೆ ಹಾರಿದ ಚೆನ್ನೈ – ಹೀನಾಯವಾಗಿ ಸೋತು ಆಟ ಮುಗಿಸಿದ ಡೆಲ್ಲಿ ಕ್ಯಾಪಿಟಲ್ಸ್‌

    ಭಾನುವಾರ ಆರ್‌ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವೆ ಕೊನೆಯ ಲೀಗ್ ಪಂದ್ಯ ಇದ್ದು, ಆರ್‌ಸಿಬಿ ಪ್ಲೇ ಆಫ್ ತಲುಪಲು ಈ ಪಂದ್ಯ ನಿರ್ಣಾಯಕವಾಗಿದೆ. ಉತ್ತಮ ರನ್‌ರೇಟ್‌ನೊಂದಿಗೆ 4ನೇ ಸ್ಥಾನ ಖಚಿತಪಡಿಸಿಕೊಂಡಿರುವ ಆರ್‌ಸಿಬಿ ತಂಡಕ್ಕೆ ಪಂದ್ಯ ಗೆಲ್ಲಲೇಬೇಕಾದ ಅನಿವಾರ್ಯತೆಯಿದೆ. ಒಂದು ವೇಳೆ ಪಂದ್ಯ ಸಂಪೂರ್ಣ ರದ್ದಾದರೆ, ಹೈದರಾಬಾದ್ ವಿರುದ್ಧ ಮುಂಬೈ ಇಂಡಿಯನ್ಸ್ ಸಹ ಸೋಲಬೇಕಾಗುತ್ತದೆ. ಮುಂಬೈ ಇಂಡಿಯನ್ಸ್ ಗೆದ್ದರೆ ಆರ್‌ಸಿಬಿ ಪ್ಲೇ ಆಫ್ ಪ್ರವೇಶಿಸುವ ಅವಕಾಶ ಕಳೆದುಕೊಳ್ಳಲಿದೆ.

    ಚಿನ್ನಸ್ವಾಮಿ ಅಂಗಳಕ್ಕೆ ಸಮಸ್ಯೆಯಿಲ್ಲ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎಷ್ಟೇ ಮಳೆಯಾದರೂ, ಮಳೆ ನಿಂತ ನಂತರ ಕೆಲವೇ ನಿಮಿಷಗಳಲ್ಲಿ ಪಂದ್ಯಗಳು ಆರಂಭಿಸಬಹುದಾಗಿದೆ. ಉದಾಹರಣೆಗೆ ಒಂದು ಗಂಟೆ ಭಾರೀ ಮಳೆ ಸುರಿದರೆ ಕೇವಲ 7 ನಿಮಿಷಗಳಲ್ಲಿ ಪಂದ್ಯವನ್ನು ಆರಂಭಿಸಬಹುದು. ಕ್ರೀಡಾಂಗಣದಲ್ಲಿ ಸಬ್ ಏರ್ ಸಿಸ್ಟಂ ಅಳವಡಿಕೆಯಾಗಿದ್ದು ಕೂಡಲೇ ನೀರನ್ನು ಹೊರ ಹಾಕಲಾಗುತ್ತದೆ. ಬಿಸಿ ಗಾಳಿಯನ್ನು ಹಾಯಿಸಿ ಮೈದಾನವನ್ನ ಒಣಗಿಸುವ ವ್ಯವಸ್ಥೆಯಿದೆ. 4.5 ಕೋಟಿ ರೂ. ವೆಚ್ಚದಲ್ಲಿ ಈ ವ್ಯವಸ್ಥೆಯನ್ನು ಅಳವಡಿಸಲಾಗಿದೆ.