Tag: Gujarati

  • Godhra NEET Case | ಅನ್ಯರಾಜ್ಯಗಳ ವಿದ್ಯಾರ್ಥಿಗಳಿಗೆ ಗುಜುರಾತಿಯಲ್ಲಿ ನೀಟ್ ಬರೆಯಲು ಸೂಚನೆ – ಸಿಬಿಐ ಮಹತ್ವದ ಮಾಹಿತಿ

    Godhra NEET Case | ಅನ್ಯರಾಜ್ಯಗಳ ವಿದ್ಯಾರ್ಥಿಗಳಿಗೆ ಗುಜುರಾತಿಯಲ್ಲಿ ನೀಟ್ ಬರೆಯಲು ಸೂಚನೆ – ಸಿಬಿಐ ಮಹತ್ವದ ಮಾಹಿತಿ

    ನವದೆಹಲಿ: ಒಡಿಶಾ, ಬಿಹಾರ, ಮಹಾರಾಷ್ಟ್ರ, ರಾಜಸ್ಥಾನ ಮತ್ತು ಉತ್ತರ ಪ್ರದೇಶದಂತಹ ರಾಜ್ಯಗಳ ಹಲವಾರು NEET-UG ಅಭ್ಯರ್ಥಿಗಳು ಗುಜರಾತ್‌ನ ಗೋಧ್ರಾದಲ್ಲಿರುವ (Godhra NEET Case) ಕೇಂದ್ರದಲ್ಲಿ ತಮ್ಮ ಪರೀಕ್ಷೆ ಬರೆದಿದ್ದು, ಗುಜುರಾತಿಯನ್ನು (Gujarati) ಪರೀಕ್ಷಾ ಭಾಷೆಯಾಗಿ ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಸಿಬಿಐ ಹೇಳಿದೆ.

    ಪರೀಕ್ಷಾ ಪ್ರಕ್ರಿಯೆಯ ಭಾಗವಾಗಿದ್ದ ಇಬ್ಬರು ಗುಜರಾತಿ ವ್ಯಕ್ತಿಗಳನ್ನು ಕಸ್ಟಡಿಗೆ ಕೋರುವಾಗ ಗುಜರಾತ್ ನ್ಯಾಯಾಲಯದಲ್ಲಿ (Gujarat Court) ಸಿಬಿಐ ಈ ಅಂಶವನ್ನು ಬಹಿರಂಗಪಡಿಸಿದೆ. ಈ ಇಬ್ಬರು ಆರೋಪಿಗಳು ಇತರೆ ರಾಜ್ಯಗಳ ವಿದ್ಯಾರ್ಥಿಗಳಿಗೆ ಶಾಶ್ವತ ವಿಳಾಸವನ್ನು ಪಂಚಮಹಲ್ ಅಥವಾ ವಡೋದರಾ ಎಂದು ತೋರಿಸಲು ಸೂಚಿದ್ದರು. ಈ ಎರಡು ಕೇಂದ್ರಗಳಲ್ಲಿ ಅಕ್ರಮ ನಡೆಸಲಾಗಿದೆ ಎಂದು ಸಿಬಿಐ (CBI) ಹೇಳಿದೆ.

    ಎರಡೂ ಪರೀಕ್ಷಾ ಕೇಂದ್ರಗಳ ನಿಯಂತ್ರಣ ಒಬ್ಬರೇ ನಿರ್ವಾಹಕರದ್ದಾಗಿದ್ದು, ವಿವಿಧ ರಾಜ್ಯಗಳ ಎಲ್ಲ ಅಭ್ಯರ್ಥಿಗಳನ್ನು ಆರೋಪಿಗಳು ವಿವಿಧ ಲಿಂಕ್‌ಗಳ ಮೂಲಕ ಸಂಪರ್ಕಿಸಿದ್ದಾರೆ. ಮೇ 5 ರಂದು ನಡೆದ NEET-UG ಪರೀಕ್ಷೆಗೆ ಗೊತ್ತುಪಡಿಸಿದ ಕೇಂದ್ರಗಳಲ್ಲಿ ಒಂದಾದ ಗೋದ್ರಾದ ಜೈ ಜಲರಾಮ್ ಶಾಲೆಯಲ್ಲಿ ಅಕ್ರಮ ನಡೆಸಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ – ಸಚಿವೆ ಶೋಭಾ ಕರಂದ್ಲಾಜೆಗೆ ಮದ್ರಾಸ್ ಹೈಕೋರ್ಟ್ ತರಾಟೆ

    ಸಾಂದರ್ಭಿಕ ಚಿತ್ರ
    ಸಾಂದರ್ಭಿಕ ಚಿತ್ರ

    ಶಾಲೆಯ ಮಾಲೀಕ ದೀಕ್ಷಿತ್ ಪಟೇಲ್ ಸೇರಿದಂತೆ ಆರು ಆರೋಪಿಗಳ ಪೈಕಿ ಐವರನ್ನು ಈಗಾಗಲೇ ಸಿಬಿಐ ತನ್ನ ಕಸ್ಟಡಿಗೆ ತೆಗೆದುಕೊಂಡಿದೆ. ದೀಕ್ಷಿತ್ ಪಟೇಲ್ ನೀಟ್-ಯುಜಿ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಪ್ರತಿ ವಿದ್ಯಾರ್ಥಿಯಿಂದ 10 ಲಕ್ಷ ರೂ. ಪಡೆದಿದ್ದಾರೆ ಎಂದು ಸಿಬಿಐ ಹೇಳಿದ್ದು, ಕಳೆದ ತಿಂಗಳು ಗುಜರಾತ್ ಪೊಲೀಸರಿಂದ ಪ್ರಕರಣದ ತನಿಖೆಯನ್ನು ವಹಿಸಿಕೊಂಡ ಬಳಿಕ ಈಗ ದೊಡ್ಡ ಪಿತೂರಿಯ ಭಾಗವಾಗಿ ಅಂತರರಾಜ್ಯ ಸಂಪರ್ಕಗಳನ್ನು ಬಯಲಿಗೆಳೆಯುವತ್ತ ಗಮನ ಹರಿಸಿದೆ. ಇದನ್ನೂ ಓದಿ: ಆರ್ಕಿಟೆಕ್ಚರ್ ಕೋರ್ಸ್ ಅರ್ಹತಾ ಅಂಕ ಶೇ.45ಕ್ಕೆ ಇಳಿಕೆ – ಅರ್ಜಿ ಸಲ್ಲಿಸಲು ಜು.13 ರವರೆಗೆ ಅವಕಾಶ: ಕೆಇಎ

    ವೈದ್ಯಕೀಯ ಕೋರ್ಸ್‌ಗಳಿಗೆ ನಡೆಯುವ ಪ್ರವೇಶ ಕೋರ್ಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ, ಇದುವರೆಗೆ ಆರು ಎಫ್‌ಐಆರ್‌ಗಳನ್ನು ದಾಖಲಿಸಿ 11 ಜನರನ್ನು ಬಂಧಿಸಿದೆ. ಬಿಹಾರದಲ್ಲಿ ದಾಖಲಾದ ಎಫ್‌ಐಆರ್ ಪೇಪರ್ ಸೋರಿಕೆಗೆ ಸಂಬಂಧಿಸಿದ್ದು, ಗುಜರಾತ್, ರಾಜಸ್ಥಾನ ಮತ್ತು ಮಹಾರಾಷ್ಟ್ರದಲ್ಲಿ ದಾಖಲಾದ ಎಫ್‌ಐಆರ್ ಅಭ್ಯರ್ಥಿಗಳ ವಂಚನೆಗೆ ಸಂಬಂಧಿಸಿವೆ. ಇದನ್ನೂ ಓದಿ: ನಟ ದರ್ಶನ್‌ ಬಂಧನವಾಗಿ ಒಂದು ತಿಂಗಳು ಪೂರ್ಣ – ಅರೆಸ್ಟ್‌ ದಿನದಿಂದ ಇಲ್ಲಿವರೆಗೆ ಏನೇನಾಯ್ತು? ಇಲ್ಲಿದೆ ಟೈಮ್‌ಲೈನ್‌!

  • ಗುಜರಾತಿ ಸಿನಿಮಾ ಮೊದಲ ಬಾರಿಗೆ ಕನ್ನಡಕ್ಕೆ ಡಬ್

    ಗುಜರಾತಿ ಸಿನಿಮಾ ಮೊದಲ ಬಾರಿಗೆ ಕನ್ನಡಕ್ಕೆ ಡಬ್

    ರಾಯರು ಬಂದರು ಮಾವನ ಮನೆಗೆ (Raayaru Bandaru Maavana Manege) ಇದು ಕನ್ನಡದ ಎವರ್ ಗ್ರೀನ್ ಹಾಡುಗಳಲ್ಲೊಂದು. ಸುಧಾರಾಣಿ ಹಾಗೂ ಆನಂದ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದ ರಾಷ್ಟ್ರ ಪ್ರಶಸ್ತಿಗೆ ಭಾಜನವಾಗಿದ್ದ ಮೈಸೂರು ಮಲ್ಲಿಗೆ ಸಿನಿಮಾದ ಅತ್ಯುತ್ತಮ ಗೀತೆ. ಇದೇ ರಾಯರು ಬಂದರು ಮಾವನ ಮನೆಗೆ ಎಂಬ ಶೀರ್ಷಿಕೆಯಡಿ ಸಿನಿಮಾವೊಂದು ತೆರೆಗೆ ಬರಲು ಸಜ್ಜಾಗಿದೆ. ವಿಶೇಷ ಏನೆಂದರೆ ಇದು ಗುಜರಾತಿ (Gujarati) ಸಿನಿಮಾ.

    ವರ ಪಧಾರವೋ ಸಾವಧಾನ (Var Padharavo Savdhan) ಎಂಬ ಟೈಟಲ್ ನಡಿ ಬಿಡುಗಡೆಯಾಗಲಿರುವ ಈ ಚಿತ್ರ ಕನ್ನಡದಲ್ಲಿಯೂ ಮೂಡಿಬಂದಿದೆ. ಇದೇ ಮೊದಲ ಬಾರಿಗೆ ಗುಜರಾತಿ ಸಿನಿಮಾವೊಂದನ್ನು ಕನ್ನಡದಲ್ಲಿಯೂ ರಿಲೀಸ್ ಮಾಡುವ ಪ್ರಯತ್ನಕ್ಕೆ ಕೈ ಹಾಕಿರೋದು ವಿಕ್ರಾಂತ್ ರೋಣ ಚಿತ್ರ ನಿರ್ಮಿಸಿದ್ದ ಜಾಕ್ ಮಂಜು. ಸುದೀಪ್ ಆಪ್ತರಾಗಿರುವ ಜಾಕ್ ಮಂಜು ತಮ್ಮದೇ ಶಾಲಿನಿ ಆರ್ಟ್ ಬ್ಯಾನರ್ ನಡಿ ರಾಯರು ಬಂದರು ಮಾವನ ಮನೆಗೆ ಸಿನಿಮಾವನ್ನು ಸಿರಿಗನ್ನಡಂ ಪ್ರೇಕ್ಷಕರ ಮಡಿಲಿಗೆ ಹಾಕುತ್ತಿದ್ದಾರೆ. ಇದನ್ನೂ ಓದಿ:ಮತ್ತೆ ವಿನಯ್ ರಾಜ್‌ಕುಮಾರ್ ನಟನೆಯ ‘ಗ್ರಾಮಾಯಣ’ ಸಿನಿಮಾಗೆ ಚಾಲನೆ

    ರತ್ನಪುರ, ಜಿತಿ ಲೇ ಜಿಂದಗಿ ಎಂಬ ಎರಡು ಹಿಟ್ ಚಿತ್ರ ಕೊಟ್ಟಿರುವ ವಿಫುಲ್ ಶರ್ಮಾ ನಿರ್ದೇಶನದಲ್ಲಿ ಈ ಚಿತ್ರ ತಯಾರಾಗಿದ್ದು, ಶೈಲೇಶ್ ಧಮೇಲಿಯಾ, ಅನಿಲ್ ಸಂಘವಿ, ಭರತ್ ಮಿಸ್ತ್ರೀ ಬಂಡವಾಳ ಹೂಡಿದ್ದಾರೆ. ಸಾಧುತುಷಾರ್, ಕಿಂಜಲ್ ರಾಜಪ್ರಿಯಾ, ರಾಗಿ ಜಾನಿ ಮತ್ತು ಕಾಮಿನಿ ಪಾಂಚಾಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ಪ್ರಶಾಂತ್ ಬರೋಟ್, ಜಯ್ ಪಾಂಡ್ಯ ಮತ್ತು ಜೈಮಿನಿ ತ್ರಿವೇದಿ ಇತರರು ತಾರಾಬಳಗದಲ್ಲಿದ್ದಾರೆ. ಜುಲೈ 7ಕ್ಕೆ ಕನ್ನಡದಲ್ಲಿ ರಾಯರು ಬಂದರು ಮಾವನ ಮನೆಗೆ ಸಿನಿಮಾ ಬಿಡುಗಡೆಯಾಗ್ತಿದ್ದು, ಈ ನಿಟ್ಟಿಯಲ್ಲಿ ಇಡೀ ಚಿತ್ರತಂಡ ಬೆಂಗಳೂರಿನಲ್ಲಿಯೂ ಪ್ರಚಾರ ಕಾರ್ಯ ನಡೆಸಲಿದೆ.

    ಇದೇ 9ರಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿದ್ದು, ಇಡೀ ತಂಡ ಭಾಗಿಯಾಗಲಿದೆ. ಅಂದಹಾಗೇ ರಾಯರು ಬಂದರು ಮಾವನ ಮನೆಗೆ ಸಿನಿಮಾ ಫ್ಯಾಮಿಲಿ ಡ್ರಾಮಾ ಕಥಾಹಂದರ ಹೊಂದಿದೆ. ಮದುವೆ. ಕುಟುಂಬ, ಸಂಬಂಧಗಳ ಸುತ್ತಾ ಇಡೀ ಸಿನಿಮಾ ಸಾಗಲಿದೆ. ಗುಜರಾತಿ ಸಿನಿಮಾವೊಂದು ಕನ್ನಡದಲ್ಲಿ ಬಿಡುಗಡೆಯಾಗ್ತಿರೋದು ಖುಷಿ ವಿಚಾರವೇ.

  • ಆಸ್ಕರ್ ಸ್ಪರ್ಧೆಗೆ ಆಯ್ಕೆಯಾದ ಗುಜರಾತಿ ಸಿನಿಮಾ ಭಾರತದ್ದಲ್ಲ: ವಿವಾದದಲ್ಲಿ ‘ಚೆಲ್ಲೋ ಶೋ’ ಸಿನಿಮಾ

    ಆಸ್ಕರ್ ಸ್ಪರ್ಧೆಗೆ ಆಯ್ಕೆಯಾದ ಗುಜರಾತಿ ಸಿನಿಮಾ ಭಾರತದ್ದಲ್ಲ: ವಿವಾದದಲ್ಲಿ ‘ಚೆಲ್ಲೋ ಶೋ’ ಸಿನಿಮಾ

    ಭಾರತದಿಂದ ಅಧಿಕೃತವಾಗಿ ಆಸ್ಕರ್ (Oscar) ಸ್ಪರ್ಧೆಗೆ ಕಳುಹಿಸಿರುವ ಚೆಲ್ಲೋ ಶೋ (Chello Show) ಸಿನಿಮಾ ಬಗ್ಗೆ ಆಕ್ಷೇಪವೊಂದು (Controversy) ಮೂಡಿದೆ. ಈ ಸಿನಿಮಾ ಭಾರತದ್ದೇ ಅಲ್ಲ, ಹೇಗೆ ಭಾರತದಿಂದ ಈ ಸಿನಿಮಾ ಸ್ಪರ್ಧೆ ಮಾಡುತ್ತದೆ ಎಂದು ಫೆಡರೇಶನ್ ಆಫ್ ವೆಸ್ಟರ್ನ್ ಸಿನಿಮಾ ಎಂಪ್ಲಾಯ್ಸ್ ಸಂಘವು ಆಕ್ಷೇಪಿಸಿದೆ. ಈ ಆಯ್ಕೆಯನ್ನು ಕೂಡಲೇ ತಡೆಹಿಡಿದು, ಬೇರೆ ಸಿನಿಮಾವನ್ನು ಆಯ್ಕೆ ಮಾಡುವಂತೆ ಸಂಘದ ಅಧ್ಯಕ್ಷ ಬಿ.ಎನ್. ತಿವಾರಿ (B.N. Tiwari)ಹೇಳಿದ್ದಾರೆ. ಈ ಕುರಿತು ಅವರು ಸಂಬಂಧಪಟ್ಟ ಮಂತ್ರಿಗಳಿಗೂ ಪತ್ರ ಬರೆಯುವುದಾಗಿ ಹೇಳಿದ್ದಾರೆ.

    ಚೆಲ್ಲೋ ಶೋ ಸಿನಿಮಾವನ್ನು ಭಾರತದ ಸಿನಿಮಾ (Cinema) ಎಂದು ಹೇಗೆ ಪರಿಗಣಿಸಿದರೋ ಗೊತ್ತಿಲ್ಲ. ಅದು ಭಾರತೀಯ ಸಿನಿಮಾವಲ್ಲ. ದಿ ಕಾಶ್ಮೀರ್ ಫೈಲ್ಸ್ (The Kashmir Files), ಆರ್.ಆರ್.ಆರ್ (RRR) ಸೇರಿದಂತೆ ಸಾಕಷ್ಟು ಸಿನಿಮಾಗಳು ರೇಸ್ ನಲ್ಲಿ ಇದ್ದವು. ಆದರೆ, ಚೆಲ್ಲೋ ಶೋ ಸಿನಿಮಾವನ್ನು ಯಾವ ಮಾನದಂಡದಿಂದ ಆಯ್ಕೆ ಮಾಡಲಾಗಿದೆ ಎನ್ನುವುದು ಗೊತ್ತಿಲ್ಲ. ಕೂಡಲೇ ಆಯ್ಕೆ ಸಮಿತಿ ಈ ಕುರಿತು ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ ತಿವಾರಿ. ಅಪ್ಪಟ ಭಾರತೀಯ ಸಿನಿಮಾಗಳನ್ನು ಆಯ್ಕೆ ಮಾಡದೇ ಇರುವುದಕ್ಕೆ ದಿಗ್ಭ್ರಮೆಯನ್ನು ಅವರು ವ್ಯಕ್ತ ಪಡಿಸಿದ್ದಾರೆ. ಇದನ್ನೂ ಓದಿ: ಧ್ರುವ ಸರ್ಜಾ ಜೊತೆ ಸ್ಕ್ರೀನ್ ಶೇರ್ ಮಾಡ್ತಾರಾ ರವಿಮಾಮನ ಬೆಡಗಿ ಶಿಲ್ಪಾ ಶೆಟ್ಟಿ

    ಆಯ್ಕೆಯ ಸಮಿತಿಯ ಬಗ್ಗೆಯೂ ಆಕ್ಷೇಪ ವ್ಯಕ್ತ ಪಡಿಸಿರುವ ತಿವಾರಿ, ಪ್ರತಿ ವರ್ಷವೂ ಜ್ಯೂರಿ ಕಮಿಟಿಯಲ್ಲಿ ಇದ್ದವರೇ ಇರುತ್ತಾರೆ. ಅವರು ಸಿನಿಮಾವನ್ನು ನೋಡದೇ ಸುಮ್ಮನೆ ವೋಟು ಮಾಡುತ್ತಾರೆ. ಹೀಗಾಗಿ ಅಪ್ಪಟ ದೇಶಿಯ ಚಿತ್ರಗಳಿಗೆ ಮೋಸವಾಗಿದೆ. ಆಯ್ಕೆಯಾಗಿರುವ ಸಿನಿಮಾವನ್ನು ಕೂಡಲೇ ಹಿಂತೆಗೆದುಕೊಂಡು ಬೇರೆ ಸಿನಿಮಾವನ್ನು ಆಯ್ಕೆ ಮಾಡಬೇಕು ಎಂದು ಅವರು ಕೋರಿದ್ದಾರೆ. ಇಲ್ಲದಿದ್ದರೆ ಹೋರಾಟ ಮಾಡುವ ಎಚ್ಚರಿಕೆಯನ್ನೂ ಅವರು ಕೊಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಗುಜರಾತಿಗಳು, ರಾಜಸ್ಥಾನಿಗಳು ಇಲ್ಲದೇ ಮಹಾರಾಷ್ಟ್ರಕ್ಕೆ ಹಣವಿಲ್ಲ: ವಿವಾದಕ್ಕೆ ಸಿಲುಕಿದ ರಾಜ್ಯಪಾಲರ ಹೇಳಿಕೆ

    ಗುಜರಾತಿಗಳು, ರಾಜಸ್ಥಾನಿಗಳು ಇಲ್ಲದೇ ಮಹಾರಾಷ್ಟ್ರಕ್ಕೆ ಹಣವಿಲ್ಲ: ವಿವಾದಕ್ಕೆ ಸಿಲುಕಿದ ರಾಜ್ಯಪಾಲರ ಹೇಳಿಕೆ

    ನವದೆಹಲಿ: ಗುಜರಾತಿಗಳು, ರಾಜಸ್ಥಾನಿಗಳು ಇಲ್ಲದೇ ಮಹಾರಾಷ್ಟಕ್ಕ್ರೆ ಹಣ ಬರುವುದಿಲ್ಲ ಎಂಬ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಹೇಳಿಕೆ ವಿವಾದಕ್ಕೆ ಸಿಲುಕಿದೆ.

    ಮುಂಬೈನ ಅಂಧೇರಿಯಲ್ಲಿ ಶುಕ್ರವಾರ ನಡೆದ ದಿವಂಗತ ಶಾಂತಿದೇವಿ ಚಂಪಲಾಲ್ಜಿ ಕೊಠಾರಿ ಅವರ ಹೆಸರನ್ನು ಚೌಕ್‍ಗೆ ಹೆಸರಿಸುವ ಕಾರ್ಯಕ್ರಮಕ್ಕೆ ಕೋಶಿಯಾರಿ ಅವರು ಅಗಮಿಸಿದ್ದರು. ಈ ವೇಳೆ ಭಾಷಣ ಮಾಡಿದ ಅವರು, ಗುಜರಾತಿಗಳು ಮತ್ತು ರಾಜಸ್ಥಾನಿಗಳನ್ನು ಮಹಾರಾಷ್ಟ್ರದಿಂದ, ವಿಶೇಷವಾಗಿ ಮುಂಬೈ ಮತ್ತು ಥಾಣೆಯಿಂದ ಓಡಿಸಿದ್ರೆ, ರಾಜ್ಯದಲ್ಲಿ ಹಣ ಉಳಿಯುವುದಿಲ್ಲ. ಅದು ದೇಶದ ಆರ್ಥಿಕ ರಾಜಧಾನಿಯಾಗಿ ಉಳಿಯುವುದಿಲ್ಲ ಎಂದಿದ್ದರು. ಇದನ್ನೂ ಓದಿ: ಬಚ್ಚನಕೇರಿ ಗ್ರಾಮದಲ್ಲಿ ಕಿತ್ತೂರು ಅರಮನೆ ನಿರ್ಮಾಣ – ಸ್ಥಳೀಯರಿಂದ ವಿರೋಧ 

    ಕೋಶಿಯಾರಿ ಅವರು ಮಾರ್ವಾಡಿ ಮತ್ತು ಗುಜರಾತಿ ಸಮುದಾಯವನ್ನು ಶ್ಲಾಘಿಸಿದ್ದು, ಅವರು ಎಲ್ಲಿಗೆ ಹೋದರೂ ಆಸ್ಪತ್ರೆಗಳು, ಶಾಲೆಗಳು ಇತ್ಯಾದಿಗಳನ್ನು ರಚಿಸುವ ಮೂಲಕ ಸ್ಥಳದ ಅಭಿವೃದ್ಧಿಗೆ ಕೊಡುಗೆ ನೀಡುತ್ತಾರೆ ಎಂದು ತಿಳಿಸಿದ್ದಾರೆ.

    ಈ ಹೇಳಿಕೆ ವಿರೋಧಿಸಿದ ಶಿವಸೇನೆ ಮತ್ತು ಕಾಂಗ್ರೆಸ್‍ನ ಹಲವಾರು ನಾಯಕರು ಕೋಶಿಯಾರಿ ಅವರನ್ನು ಟೀಕಿಸಿದ್ದಾರೆ. ಕಷ್ಟಪಟ್ಟು ದುಡಿಯುವ ಮರಾಠಿ ಜನರನ್ನು ರಾಜ್ಯಪಾಲರು ಅವಮಾನಿಸಿದ್ದಾರೆ ಎಂದು ಶಿವಸೇನಾ ಸಂಸದ ಸಂಜಯ್ ರಾವುತ್ ಖಂಡಿಸಿದ್ದಾರೆ. ಬಿಜೆಪಿ ಪ್ರಾಯೋಜಿತ ಮುಖ್ಯಮಂತ್ರಿ ಅಧಿಕಾರಕ್ಕೆ ಬಂದ ಕೂಡಲೇ, ಮರಾಠಿಗರಿಗೆ ಅವಮಾನವಾಗುತ್ತಿದೆ ಎಂದು ಮರಾಠಿಯಲ್ಲಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ವರದಕ್ಷಿಣೆ ನೀಡದ್ದಕ್ಕೆ ಸ್ನೇಹಿತರೊಂದಿಗೆ ಪತ್ನಿಯನ್ನೇ ಗ್ಯಾಂಗ್‌ರೇಪ್‌ಗೈದ 

    ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್ ಮತ್ತು ಸಚಿನ್ ಸಾವಂತ್ ಕೂಡ ಈ ಕೋಶಿಯಾರಿ ಅವರ ಭಾಷಣದ ವೀಡಿಯೋವನ್ನು ಟ್ವೀಟ್ ಮಾಡಿ ರಾಜ್ಯಪಾಲರು ಈ ಹೇಳಿಕೆ ನೀಡಬಾರದಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಿಹಿ, ಹುಳಿ ಮಿಶ್ರಿತ ‘ಧೋಕ್ಲಾ’ ಮಾಡುವ ಸಿಂಪಲ್ ವಿಧಾನ

    ಸಿಹಿ, ಹುಳಿ ಮಿಶ್ರಿತ ‘ಧೋಕ್ಲಾ’ ಮಾಡುವ ಸಿಂಪಲ್ ವಿಧಾನ

    ಗುಜರಾತಿನ ಫುಲ್ ಫೇಮಸ್ ಫುಡ್ ಧೋಕ್ಲಾ ಎಂದರೆ ತಿಂಡಿ ಪ್ರಿಯರಿಗೆ ಸಖತ್ ಇಷ್ಟ. ಈ ತಿನಿಸು ಸಿಹಿ ಮತ್ತು ಹುಳಿ ಮಿಶ್ರಣ ಇರುವುದರಿಂದ ಮಕ್ಕಳಿಗೂ ಇದು ಇಷ್ಟವಾಗುತ್ತೆ. ಈ ತಿನಿಸನ್ನು ನೋಡಿದ ಎಷ್ಟೋ ಜನರು ಇದನ್ನು ಮಾಡುವುದು ಕಷ್ಟ ಎಂದೇ ಭಾವಿಸುತ್ತಾರೆ. ಆದರೆ ಈ ರೆಸಿಪಿ ತುಂಬಾ ಸಿಂಪಲ್ ಆಗಿದೆ. ನೀವು ಇದನ್ನು ಮನೆಯಲ್ಲಿ ಟ್ರೈ ಮಾಡಿ.

    ಬೇಕಾಗಿರುವ ಪದಾರ್ಥಗಳು:
    * ಕಡಲೆ ಹಿಟ್ಟು – 1ವರೆ ಕಪ್
    * ರವಾ – 3 ಟೇಬಲ್ಸ್ಪೂನ್
    * ಶುಂಠಿ ಪೇಸ್ಟ್ – ಅರ್ಧ ಟೀಸ್ಪೂನ್
    * ಮೆಣಸಿನಕಾಯಿ – 2
    * ಅರಿಶಿನ – ಅರ್ಧ ಟೀಸ್ಪೂನ್
    * ಸಕ್ಕರೆ – 1 ಟೀಸ್ಪೂನ್
    * ಹಿಂಗು – ಪಿಂಚ್
    * ಉಪ್ಪು – ಅರ್ಧ ಟೀಸ್ಪೂನ್
    * ನಿಂಬೆ ರಸ – 1 ಟೇಬಲ್ಸ್ಪೂನ್
    * ಎಣ್ಣೆ – 1 ಟೇಬಲ್ಸ್ಪೂನ್
    * ನೀರು – 1 ಕಪ್
    * ಸೋಡಾ – ಅರ್ಧ ಟೀಸ್ಪೂನ್

    ಒಗ್ಗರಣೆಗಾಗಿ:
    * ಎಣ್ಣೆ – 3 ಟೀಸ್ಪೂನ್
    * ಸಾಸಿವೆ – ಅರ್ಧ ಟೀಸ್ಪೂನ್
    * ಜೀರಾ – ಅರ್ಧ ಟೀಸ್ಪೂನ್
    * ಎಳ್ಳು – 1 ಟೀಸ್ಪೂನ್
    * ಹಿಂಗು – ಸ್ವಲ್ಪ
    * ಕರಿಬೇವು – 5 ರಿಂದ 10 ಎಲೆಗಳು
    * ಮೆಣಸಿನಕಾಯಿ – 2
    * ನೀರು – ಅರ್ಧ ಕಪ್
    * ಸಕ್ಕರೆ – 1 ಟೀಸ್ಪೂನ್
    * ಉಪ್ಪು – ಅರ್ಧ ಟೀಸ್ಪೂನ್
    * ನಿಂಬೆ ರಸ – 1 ಟೀಸ್ಪೂನ್

    ಅಲಂಕರಿಸಲು:
    * ತೆಂಗಿನಕಾಯಿ ತುರಿ – 2 ಟೇಬಲ್ಸ್ಪೂನ್
    * ಕೊತ್ತಂಬರಿ ಸೊಪ್ಪು – 2 ಟೇಬಲ್ಸ್ಪೂನ್

    ಮಾಡುವ ವಿಧಾನ:
    * ಮೊದಲಿಗೆ ದೊಡ್ಡ ಬೌಲ್‍ನಲ್ಲಿ ಕಡಲೆ ಹಿಟ್ಟು ಮತ್ತು ರವಾ ಜರಡಿ ಇಡಿದುಕೊಳ್ಳಿ.
    * ಅದಕ್ಕೆ ಶುಂಠಿ ಪೇಸ್ಟ್, ಮೆಣಸಿನಕಾಯಿ, ಅರಿಶಿನ, ಸಕ್ಕರೆ, ಹಿಂಗ್, ಉಪ್ಪು, ನಿಂಬೆ ರಸ ಮತ್ತು ಎಣ್ಣೆ ಸೇರಿಸಿ ಕಲಸಿ.
    * ಅಗತ್ಯವಿರುವಷ್ಟು 1 ಕಪ್ ನೀರು ಹಾಕಿ ಮೃದುವಾದ ಬ್ಯಾಟರ್ ತಯಾರಿಸಿ. 20 ನಿಮಿಷಗಳ ಕಾಲ ಹಾಗೆಯೇ ಬಿಡಿ. ನಂತರ ಅದಕ್ಕೆ ಅರ್ಧ ಟೀಸ್ಪೂನ್ ಅಡಿಗೆ ಸೋಡಾವನ್ನು ಹಾಕಿ.
    * ಮಧ್ಯಮ ಉರಿಯಲ್ಲಿ 20 ನಿಮಿಷಗಳ ಕಾಲ ಧೋಕ್ಲಾ ಮಿಶ್ರಣವನ್ನು ಕೇಕ್ ಪ್ಯಾನ್‍ಗೆ ಹಾಕಿ ಸ್ಟೀಮ್ ಮಾಡಿ. 5 ನಿಮಿಷಗಳ ಕಾಲ ಧೋಕ್ಲಾವನ್ನು ತಣ್ಣಗಾಗಲು ಬಿಡಿ. ಧೋಕ್ಲಾವನ್ನು ಬಯಸಿದ ಆಕಾರಕ್ಕೆ ಕತ್ತರಿಸಿ.

    ಒಗ್ಗರಣೆ ಮಾಡುವ ವಿಧಾನ:
    * ಮಧ್ಯಮ ಉರಿಯಲ್ಲಿ ಒಂದು ಪಾತ್ರೆಗೆ ಎಣ್ಣೆ ಹಾಕಿ ಬಿಸಿ ಮಾಡಿ ಅದಕ್ಕೆ ಸಾಸಿವೆ, ಜೀರಿಗೆ, ಎಳ್ಳಿನ ಬೀಜಗಳು ಮತ್ತು ಹಿಂಗ್ ಸೇರಿಸಿ ಫ್ರೈ ಮಾಡಿ.
    * ನಂತರ ಮೆಣಸಿನಕಾಯಿ, ಕರಿ ಬೇವು ಎಲೆಗಳನ್ನು ಸೇರಿಸಿ. ಅರ್ಧ ಕಪ್ ನೀರು, 1 ಟೀಸ್ಪೂನ್ ಸಕ್ಕರೆ ಮತ್ತು ಉಪ್ಪು ಸೇರಿಸಿ ಕುದಿಸಿ.
    * ಅದಕ್ಕೆ ನಿಂಬೆ ರಸ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ನಂತರ ಧೋಕ್ಲಾ ಮೇಲೆ ಒಗ್ಗರಣೆಯನ್ನು ಸುರಿಯಿರಿ.
    * ಅಲಂಕರಿಸಲು, ಕೊತ್ತಂಬರಿ ಸೊಪ್ಪು ಮತ್ತು ತುರಿದ ತೆಂಗಿನಕಾಯಿಯನ್ನು ಟಾಪ್ ಮೇಲೆ ಹಾಕಿ.

    – ಅಂತಿಮವಾಗಿ, ಹಸಿರು ಚಟ್ನಿ ಮತ್ತು ಹುಣಿಸೇಹಣ್ಣು ಚಟ್ನಿಯೊಂದಿಗೆ ಧೋಕ್ಲಾವನ್ನು ಸೇವಿಸಿ.

    Live Tv
    [brid partner=56869869 player=32851 video=960834 autoplay=true]

  • ಗುಜರಾತ ರಾಜಕಾರಣದಲ್ಲಿ ಸೆಕ್ಸ್ ಸಿಡಿ ಸದ್ದು – ಬಿಜೆಪಿ ಸಂಸದನ ಪುತ್ರರಿಂದ ದೂರು ದಾಖಲು

    ಗುಜರಾತ ರಾಜಕಾರಣದಲ್ಲಿ ಸೆಕ್ಸ್ ಸಿಡಿ ಸದ್ದು – ಬಿಜೆಪಿ ಸಂಸದನ ಪುತ್ರರಿಂದ ದೂರು ದಾಖಲು

    – ಆಗಸ್ಟ್ 15ಕ್ಕೆ ವೀಡಿಯೋ ರಿಲೀಸ್ ಮಾಡಲು ಆಪ್ ಸಿದ್ಧತೆ
    – ಆಪ್ ನಾಯಕರ ವಿರುದ್ಧ ಎಫ್‍ಐಆರ್

    ಗಾಂಧಿನಗರ: ಗುಜರಾತ ರಾಜಕಾರಣದಲ್ಲಿ ಬಿಜೆಪಿ ಸಂಸದರೊಬ್ಬರದ್ದು ಎನ್ನಲಾದ ಸೆಕ್ಸ್ ವೀಡಿಯೋದ ಫೋಟೋ ಸದ್ದು ಮಾಡುತ್ತಿದೆ. ಸದ್ಯ ವೀಡಿಯೋದ ಒಂದು ಫೋಟೋ ರಿವೀಲ್ ಮಾಡಿರುವ ಆಮ್ ಆದ್ಮಿ ಪಕ್ಷ ಆಗಸ್ಟ್ 15ರಂದು ಸಂಪೂರ್ಣ ಕ್ಲಿಪ್ ಬಿಡುಗಡೆಗೊಳಿಸೋದಾಗಿ ಹೇಳಿಕೊಂಡಿದೆ. ಈ ಸಂಬಂಧ ಆಪ್ ನಾಯಕರ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಫೋಟೋದಲ್ಲಿ ಕಾಣುತ್ತಿರುವ ವ್ಯಕ್ತಿಯನ್ನು ಬಿಜೆಪಿ ಸಂಸದ ಪರ್ಬತ್ ಪಟೇಲ್ ಎಂದು ಹೇಳಲಾಗುತ್ತಿದೆ. ಆದ್ರೆ ಸಂಸದರಾದ ಪಟೇಲ್, ಈ ಎಲ್ಲ ಆರೋಪಗಳು ಸುಳ್ಳು ಎಂದು ಅಲ್ಲಗಳೆದ್ರೆ, ಅವರ ಪುತ್ರ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಈ ವೀಡಿಯೋಗೆ ಸಂಬಂಧಿಸಿದಂತೆ ಆಪ್ ಮುಖಂಡ ಮಧಾಭಾಯಿ ಪಟೇಲ್ ಫೇಸ್‍ಬುಕ್ ನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಪೋಸ್ಟ್ ಬನಲ್ಲಿ ಫೋಟೋ ಹಂಚಿಕೊಂಡು ಕೆಲ ಸಾಲುಗಳ್ನು ಬರೆದುಕೊಂಡಿದ್ದಾರೆ. ಆದ್ರೆ ಅದರಲ್ಲಿ ಆ ವ್ಯಕ್ತಿ ಮುಖ ಕಾಣಿಸುತ್ತಿಲ್ಲ. ಈ ಬಿಜೆಪಿ ನಾಯಕನ ಪೂರ್ಣ ವೀಡಿಯೋ ಆಗಸ್ಟ್ 15ರಂದು ಫೇಸ್‍ಬುಕ್ ನಲ್ಲಿ ಅಪ್ಲೋಡ್ ಮಾಡಲಿದ್ದೇನೆ ಎಂದು ತಿಳಿಸಿದ್ದಾರೆ.

    ಆಪ್ ನಾಯಕನ ಪೋಸ್ಟ್ ವೈರಲ್ ಆಗುತ್ತಲೇ ಮಾಧ್ಯಮಗಳ ಮುಂದೆ ಸಂಸದ ಪರ್ಬತ್ ಪಟೇಲ್ ಸ್ಪಷ್ಟನೆ ನೀಡಿದ್ದಾರೆ. ನಾನು ಜೀವನದಲ್ಲಿಯೇ ಯಾವ ಕೆಟ್ಟ ಕೆಲಸವನ್ನೂ ಮಾಡಿಲ್ಲ. ಉದ್ದೇಶಪೂರ್ವಕವಾಗಿ ಫೋಟೋ ಎಡಿಟ್ ಮಾಡಿ ಪೋಸ್ಟ್ ಮಾಡಿರುವ ಹಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಜಾರಕಿಹೊಳಿ ಸಿಡಿ ಕೇಸ್‍ಗೆ ಟ್ವಿಸ್ಟ್ – ಹೈಕೋರ್ಟ್ ಅಸಮಾಧಾನ

    ಇತ್ತ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗ್ತಿದ್ದಂತೆ ಮಧಾಬಾಯಿ ಪಟೇಲ್ ಮತ್ತು ಮುಕೇಶ್ ರಜಪೂತ್ ವಿರುದ್ಧ ಪರ್ಬತ್ ಪಟೇಲ್ ಮಕ್ಕಳು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನನ್ನ ತಂದೆ ನಿರ್ದೋಷಿಗಳಾಗಿದ್ದು, ಅವರ ಹೆಸರಿಗೆ ಕಳಂಕ ತರುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿವೆ. ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಪರ್ಬತ್ ಪಟೇಲ್ ಪುತ್ರ ಶೈಲೇಶ್ ಆಪ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.ಇದನ್ನೂ ಓದಿ: ಅತ್ಯಾಚಾರ ಪ್ರಕರಣದಿಂದ ಸಾಹುಕಾರ್ ಬಚಾವ್ ಆಗ್ತಾರಾ? ಒಪ್ಪಿತ ಸೆಕ್ಸ್ ಅಂತ ಬಿ ರಿಪೋರ್ಟ್ ಹಾಕ್ತಾರಾ?

  • ನಾಡಿನ ರೈತರ ಭೇಟಿ ಮಾಡದ ರಾಜ್ಯಪಾಲರು ಗುಜರಾತಿ ಕಾರ್ಯಕ್ರಮದಲ್ಲಿ ಭಾಗಿ

    ನಾಡಿನ ರೈತರ ಭೇಟಿ ಮಾಡದ ರಾಜ್ಯಪಾಲರು ಗುಜರಾತಿ ಕಾರ್ಯಕ್ರಮದಲ್ಲಿ ಭಾಗಿ

    ಬೆಂಗಳೂರು: ಮಹದಾಯಿ ಹೋರಾಟಗಾರರನ್ನು ಭೇಟಿ ಮಾಡದ ರಾಜ್ಯಪಾಲರು ಇಂದು ಗುಜರಾತಿಯ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

    ಮಹದಾಯಿ ವಿಚಾರವಾಗಿ ಮನವಿ ಸಲ್ಲಿಸಲು ರೈತರು ರಾಜ್ಯಪಾಲರನ್ನು ಭೇಟಿಗೆ ಕಾಲಾವಕಾಶ ಕೇಳಿದ್ದರು. ಆದರೆ ರಾಜ್ಯಪಾಲರು ಅನುಮತಿಯನ್ನು ನೀಡಿರಲಿಲ್ಲ. ಇಂದು ವಜುಬಾಯಿ ವಾಲಾ ಸಿಲಿಕಾನ್ ಸಿಟಿಯ ವೆಸ್ಟ್ ಆಫ್ ಕಾರ್ಡ್ ರೋಡ್ ಬಳಿ ನೆಡೆಯುತ್ತಿರುವ ಗುಜರಾತ್‍ನ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

    2 ದಿನದಿಂದ ಮಳೆ, ಗಾಳಿ, ಬಿಸಿಲಿನಲ್ಲಿ ಆಹೋರಾತ್ರಿ ಧರಣಿ ಮಾಡಿದ್ದ ರೈತರು ರಾಜ್ಯಪಾಲರನ್ನು ಭೇಟಿ ಮಾಡಲು ಶುಕ್ರವಾರದಿಂದ ಎರಡು ದಿನವು ರಾಜಭವನದ ಬಳಿ ತೆರಳಿದ್ದರು. ಆದರೆ ಹೋರಾಟಗಾರರನ್ನು ಕ್ಯಾರೆ ಅನ್ನದ ರಾಜ್ಯಪಾಲರು ಭೇಟಿ ಮಾಡಲು ಅವಕಾಶ ನೀಡಿರಲಿಲ್ಲ. ಆದರೆ ಇಂದು ಸಂಜೆ ಗುಜರಾತಿಗರ ಖಾಸಗಿ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಬಾಯ್ ವಾಲ ಭಾಗವಹಿಸಿದ್ದಾರೆ.

  • 9 ರೂ.ಗಾಗಿ 15 ಲಕ್ಷ ಕಳೆದುಕೊಂಡ ಕಂಡಕ್ಟರ್

    9 ರೂ.ಗಾಗಿ 15 ಲಕ್ಷ ಕಳೆದುಕೊಂಡ ಕಂಡಕ್ಟರ್

    ಅಹಮದಾಬಾದ್: ಗುಜರಾತ್ ಸಾರಿಗೆ ಸಂಸ್ಥೆಯ ನಿರ್ವಾಹಕನೋರ್ವ 9 ರೂ. ಆಸೆಗಾಗಿ ಅಂದಾಜು 15 ಲಕ್ಷ ರೂ. ಕಳೆದುಕೊಂಡಿದ್ದಾನೆ. ಪ್ರಯಾಣಿಕನಿಂದ 9 ರೂ.ಪಡೆದು ಟಿಕೆಟ್ ನೀಡದ್ದಕ್ಕೆ ಆತನ ಸಂಬಳದಿಂದ 15 ಲಕ್ಷ ರೂ.ಗೆ ಕತ್ತರಿ ಹಾಕಲಾಗಿದೆ.

    ಏನಿದು ಪ್ರಕರಣ?
    ನಿರ್ವಾಹಕ ಚಂದ್ರಕಾಂತ್ ಪಟೇಲ್ ವಿರುದ್ಧ ಪ್ರಯಾಣಿಕರಿಗೆ ಟಿಕೆಟ್ ನೀಡದ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಗುಜರಾತಿನ ಸಾರಿಗೆ ಇಲಾಖೆ ವಿಶೇಷ ಸಮಿತಿಯನ್ನು ರಚಿಸಿತ್ತು. ಸುದೀರ್ಘ ವಿಚಾರಣೆ ನಡೆಸಿದ ಸಮಿತಿ ಚಂದ್ರಕಾಂತ್ ದೋಷಿ ಎಂದು ಹೇಳಿತ್ತು. ದೋಷಿ ಎಂದು ಸಾಬೀತಾದ ಬೆನ್ನಲ್ಲೇ ಸಾರಿಗೆ ನಿಗಮ ಮಂಡಳಿ ಆತನ ಸಂಬಳದ ಎರಡು ಏರಿಕೆಯನ್ನು ಕಡಿತಗೊಳಿಸಿತ್ತು. ಸಾರಿಗೆ ಸಂಸ್ಥೆ ನಿರ್ಧರಿಸುವ ಸಂಬಳಕ್ಕೆ ಚಂದ್ರಕಾಂತ್ ತನ್ನ ವೃತ್ತಿಯನ್ನು ಪೂರ್ಣಗೊಳಿಸಬೇಕೆಂದು ಆದೇಶಿಸಿತ್ತು.

    2003 ಜುಲೈ 5ರಂದು ಚಂದ್ರಕಾಂತ್ ಪಟೇಲ್ ಕಾರ್ಯನಿರ್ವಹಿಸುತ್ತಿದ್ದ ಬಸ್ ಮಾರ್ಗ ಮಧ್ಯೆ ಪರಿಶೀಲನೆಗೆ ಒಳಪಟ್ಟಿತ್ತು. ಓರ್ವ ಪ್ರಯಾಣಿಕನಿಂದ 9 ರೂ. ಪಡೆದಿದ್ದ ಚಂದ್ರಕಾಂತ್ ಪಟೇಲ್ ಟಿಕೆಟ್ ನೀಡಿರಲಿಲ್ಲ. ಚಂದ್ರಕಾಂತ್ ವಿರುದ್ಧ ಸಾರಿಗೆ ನಿಗಮದಲ್ಲಿ ಪ್ರಕರಣ ದಾಖಲಾಗಿತ್ತು.

    ಹೈಕೋರ್ಟ್ ಮೆಟ್ಟಿಲೇರಿದ ಚಂದ್ರಕಾಂತ್:
    ದೂರು ದಾಖಲಾದ ಒಂದು ತಿಂಗಳ ಬಳಿಕ ಚಂದ್ರಕಾಂತ್ ದೋಷಿ ಎಂದು ನಿಗಮ ಮಂಡಳಿ ಆದೇಶಿಸಿ ಆತನ ಸಂಬಳದ ಕೆಲ ಮೊತ್ತವನ್ನು ಕಡಿತಗೊಳಿಸಿತ್ತು. ಸಾರಿಗೆ ನಿಗಮದ ತೀರ್ಪು ಪ್ರಶ್ನಿಸಿ ಔದ್ಯೋಗಿಕ ನ್ಯಾಯಧೀಕರಣ ಮತ್ತು ಹೈ ಕೋರ್ಟ್ ಮೊರೆ ಹೋಗಿದ್ದ ಚಂದ್ರಕಾಂತ್ ಗೆ ಅಲ್ಲಿಯೂ ದೋಷಿ ಎಂದು ಪರಿಗಣಿಸಲಾಗಿತ್ತು. ಹಾಗೆ ಗುಜರಾತಿನ ಸಾರಿಗೆ ಸಂಸ್ಥೆಯ ತೀರ್ಪನ್ನು ಎತ್ತಿ ಹಿಡಿದು, ಚಂದ್ರಕಾಂತ್ ಸಲ್ಲಿಸಿದ ಎರಡೂ ಕಡೆ ಅರ್ಜಿ ವಜಾಗೊಂಡಿತ್ತು.

    ಈ ಕುರಿತು ಪ್ರತಿಕ್ರಿಯಿಸಿರುವ ಚಂದ್ರಕಾಂತ್ ಪರ ವಕೀಲರು, ಇಷ್ಟು ಚಿಕ್ಕ ತಪ್ಪಿಗೆ ಇಷ್ಟು ದೊಡ್ಡ ಶಿಕ್ಷೆ. ಸಾರಿಗೆ ಸಂಸ್ಥೆ ನೀಡಿರುವ ಶಿಕ್ಷೆಯಿಂದ ನನ್ನ ಕಕ್ಷಿದಾರರ ವೃತ್ತಿ ಜೀವನದಲ್ಲಿ 15 ಲಕ್ಷ ರೂ. ಕಳೆದುಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

    ನಿರ್ವಾಹಕ ಚಂದ್ರಕಾಂತ್ ಹಣದ ವಿಚಾರಕ್ಕೆ ಸಂಬಂಧಿಸಿದಂತೆ 35 ಪ್ರಕರಣಗಳನ್ನು ಎದುರಿಸಿದ್ದಾರೆ. ಹಲವು ಬಾರಿ ಸಾಮಾನ್ಯ ಶಿಕ್ಷೆ ಮತ್ತು ಸಣ್ಣ ಪ್ರಮಾಣದ ದಂಡವನ್ನು ವಿಧಿಸಲಾಗಿತ್ತು ಎಂದು ಸಾರಿಗೆ ಸಂಸ್ಥೆ ಪರ ವಕೀಲರು ಪ್ರತಿಕ್ರಿಯಿಸಿದ್ದಾರೆ.