Tag: Gulbarga High Court

  • ಮರ್ಯಾದೆಗೇಡು ಹತ್ಯೆಗೈದ ಇಬ್ಬರು ಸಹೋದರರಿಗೆ ಮರಣದಂಡನೆ, ಐವರಿಗೆ ಜೀವಾವಧಿ ಶಿಕ್ಷೆ

    ಮರ್ಯಾದೆಗೇಡು ಹತ್ಯೆಗೈದ ಇಬ್ಬರು ಸಹೋದರರಿಗೆ ಮರಣದಂಡನೆ, ಐವರಿಗೆ ಜೀವಾವಧಿ ಶಿಕ್ಷೆ

    – ವಿಜಯಪುರ ಜಿಲ್ಲಾ ಕೋರ್ಟ್‌ ತೀರ್ಪನ್ನು ಎತ್ತಿ ಹಿಡಿದ ಕಲಬುರಗಿ ಹೈಕೋರ್ಟ್‌

    ವಿಜಯಪುರ: ಮರ್ಯಾದೆ ಹತ್ಯೆಗೈದ (Honor killing) ಇಬ್ಬರು ಸಹೋದರರಿಗೆ ಮರಣದಂಡನೆ, ಐವರಿಗೆ ಜೀವಾವಧಿ ಶಿಕ್ಷೆಯನ್ನ ವಿಧಿಸಿ ಕಲಬುರಗಿ ಹೈಕೋರ್ಟ್ (Gulbarga High Court) ದ್ವಿ ಸದಸ್ಯ ಪೀಠದಿಂದ ಐತಿಹಾಸಿಕ ತೀರ್ಪು ಹೊರಬಿದ್ದಿದೆ.

    ವಿಜಯಪುರ (Vijayapura) ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಗುಂಡಕನಲ್ ಗ್ರಾಮದ ಇಬ್ರಾಹಿಂ ಸಾಬ್ (31) ಹಾಗೂ ಈತನ ಸಹೋದರ ಲಾರಿ ಚಾಲಕ ಅಕ್ಬರ್ (28) ಮರಣ ದಂಡನೆ ಶಿಕ್ಷೆಗೋಳಗದವರು. ಇದನ್ನೂ ಓದಿ: ಸರ್ಕಾರಿ ಕಾರ್ಯಕ್ರಮದಲ್ಲಿ ಕುರಾನ್ ಪಠಣ – ಹೋಮ ನೆರವೇರಿಸಿ ಬಿಜೆಪಿ ಕೌಂಟರ್‌

    ದಲಿತ ಯುವಕನನ್ನ ಪ್ರೀತಿಸಿ ಮದುವೆಯಾಗಿದ್ದಾಳೆ ಎನ್ನುವ ಕಾರಣಕ್ಕೆ ಅಣ್ಣತಮ್ಮಂದಿರಿಬ್ಬರು ತಮ್ಮ ತಂಗಿಯನ್ನೇ ಬೆಂಕಿ ಹಚ್ಚಿ ಜೀವಂತವಾಗಿ ಸುಟ್ಟು ಹಾಕಿದ್ದರು.

    ಸಾಯಿಬಣ್ಣ ಎನ್ನುವ ದಲಿತ ಯುವಕನ ಜೊತೆ ಬಾನು ಬೇಗಂ ಪ್ರೀತಿಸಿ ಮದುವೆಯಾಗಿದ್ದಳು. ಇದನ್ನ ಸಹಿಸದ ಸಹೋದರರು ಬಾನು ಬೇಗಂ ಒಂಬತ್ತು ತಿಂಗಳ ತುಂಬು ಗರ್ಭಿಣಿಯಾಗಿದ್ದ ಸಂರ್ಭದಲ್ಲಿ ಆಕೆಗೆ ಬೆಂಕಿ ಹಚ್ಚಿ ಸಜೀವವಾಗಿ ಕೊಂದು ಹಾಕಿದ್ದರು. ಇನ್ನು ಈ 2017 ರಲ್ಲಿ ವಿಜಯಪುರದಲ್ಲಿ ನಡೆದ ಕೊಲೆ ಪ್ರಕರಣ ನಡೆದಿತ್ತು. ಇದನ್ನೂ ಓದಿ: ಕಟ್ಟಡ ಕಾರ್ಮಿಕರ ಶೆಡ್‌ನಲ್ಲಿ ಅಗ್ನಿ ಅವಘಡ – ಚಿಕಿತ್ಸೆ ಫಲಿಸದೇ ನಾಲ್ವರು ಸಾವು, ಮೂವರ ಸ್ಥಿತಿ ಗಂಭೀರ

    ಈ ಮೊದಲು ವಿಚಾರಣೆ ನಡೆಸಿದ್ದ ವಿಜಯಪುರ ಜಿಲ್ಲಾ ಕೋರ್ಟ್ ಈ ಇಬ್ಬರು ಸಹೋದರರಿಗೆ ಮರಣದಂಡನ ಶಿಕ್ಷೆ ಹಾಗೂ ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದೀಗ ಕಲಬುರಗಿ ಹೈಕೋರ್ಟ್ ದ್ವಿಸದಸ್ಯ ಪೀಠ ಈ ತೀರ್ಪುನ್ನು ಮಾನ್ಯ ಮಾಡಿದೆ. ಕೊಲೆಯಾದ ಬಾನು ಬೇಗಂನ ತಾಯಿ ಹಾಗೂ ಕುಟುಂಬದ ಐವರು ಸದಸ್ಯರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ.

  • ಮಾಜಿ ಸೈನಿಕನಿಗೆ ಭೂಮಿ ನೀಡದ ಡಿಸಿ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ದಾಖಲು

    ಮಾಜಿ ಸೈನಿಕನಿಗೆ ಭೂಮಿ ನೀಡದ ಡಿಸಿ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ದಾಖಲು

    ರಾಯಚೂರು: ಜಿಲ್ಲೆಯ ಮಾಜಿ ಸೈನಿಕರೊಬ್ಬರಿಗೆ ಭೂಮಿ ನೀಡಬೇಕೆಂದು ಕಲಬುರಗಿ ಉಚ್ಚನ್ಯಾಯಾಲಯ ಆದೇಶ ನೀಡಿದ್ದರೂ, ನಿರ್ಲಕ್ಷ್ಯ ತೋರಿದ ಜಿಲ್ಲಾಧಿಕಾರಿ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ದಾಖಲಾಗಿದೆ.

    ಮಾಜಿ ಸೈನಿಕ ಪೌಲ್ ಮಿತ್ರ ಅವರಿಗೆ ಭೂಮಿ ನೀಡುವಂತೆ ಕೋರ್ಟ್ ಜಿಲ್ಲಾಧಿಕಾರಿ ಬಗಾದಿ ಗೌತಮ್‍ಗೆ ಆದೇಶ ನೀಡಿತ್ತು. ಆದರೆ ಜಿಲ್ಲೆಯಲ್ಲಿ ಜಮೀನಿನ ಕೊರತೆಯಿದ್ದು, ಪೌಲ್ ಮಿತ್ರ ಅವರಿಗೆ ಭೂಮಿ ನೀಡಲು ಸಾಧ್ಯವಿಲ್ಲ ಅಂತಾ ಬಗಾದಿ ಗೌತಮ್ ಹೇಳಿ, ನ್ಯಾಯಾಲಯದ ಆದೇಶವನ್ನ ಉಲ್ಲಂಘಿಸಿದ್ದರು.

    1962 ರಲ್ಲೇ ಭಾರತೀಯ ಸೈನ್ಯದಿಂದ ಪೌಲ್ ಮಿತ್ರ (93) ನಿವೃತ್ತಿಯಾಗಿದ್ದರು. ಸುಮಾರು ವರ್ಷಗಳಿಂದ ಭೂಮಿಗಾಗಿ ಕಚೇರಿಯಿಂದ ಕಚೇರಿಗೆ ಅಲೆದಾಡಿ ಈಗ ನ್ಯಾಯಾಲಯದ ಮೆಟ್ಟಿಲೇರಿದ್ದರು.

    ಜಿಲ್ಲಾಧಿಕಾರಿ ವಿರುದ್ಧ ನ್ಯಾಯಾಂಗ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, ಆಗಸ್ಟ್ 6 ರಂದು ವಿಚಾರಣೆಗೆ ಹಾಜರಾಗುವಂತೆ ಬಗಾದಿ ಗೌತಮ್ ಅವರಿಗೆ ಉಚ್ಚನ್ಯಾಯಾಲಯ ದ್ವಿಸದಸ್ಯ ಪೀಠ ತಾಕೀತು ಮಾಡಿದೆ.