Tag: Guliga Daiva

  • Kodagu | ದೇವಾಲಯಕ್ಕೂ ಹಬ್ಬಿದ ವಕ್ಫ್‌ ಭೂತ – ವನದುರ್ಗ, ಗುಳಿಗ ದೈವಾರಾಧನೆ ನಡೆಯುವ 11 ಎಕ್ರೆ ಜಾಗ ವಕ್ಫ್‌ ಆಸ್ತಿ!

    Kodagu | ದೇವಾಲಯಕ್ಕೂ ಹಬ್ಬಿದ ವಕ್ಫ್‌ ಭೂತ – ವನದುರ್ಗ, ಗುಳಿಗ ದೈವಾರಾಧನೆ ನಡೆಯುವ 11 ಎಕ್ರೆ ಜಾಗ ವಕ್ಫ್‌ ಆಸ್ತಿ!

    ಮಡಿಕೇರಿ: ವಿಜಯಪುರದಿಂದ ಆರಂಭವಾದ ವಕ್ಫ್ ಬೋರ್ಡ್‌ನ (Waqf Board) ರಾದ್ಧಾಂತ ಇದೀಗ ರಾಜ್ಯಾದ್ಯಂತ ಹಬ್ಬಿದೆ. ರೈತರ ಜಮೀನಾಯ್ತು, ಮನೆಗಳಾಯ್ತು, ಈಗ ನೂರಾರು ವರ್ಷಗಳಿಂದ ಪೂಜೆ ಮಾಡಿಕೊಂಡು ಬರುತ್ತಿರುವ ದೇವಸ್ಥಾನ (Kodagu Temple) ಜಾಗದ ಮೇಲೂ ವಕ್ಫ್‌ ವಕ್ರದೃಷ್ಟಿ ನೆಟ್ಟಿದೆ. ದೇವಾಲಯದ ಆರ್‌ಟಿಸಿಯಲ್ಲಿ ವಕ್ಫ್‌ ಆಸ್ತಿ ಎಂದು ನಮೂದಾಗಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ.

    ಕೊಡಗು ಜಿಲ್ಲೆಯ ಸೋಮವಾರಪೇಟೆ ಪಟ್ಟಣದ ಹೃದಯ ಭಾಗದಲ್ಲಿ ವನದುರ್ಗಾ ದೇವಾಲಯದ (Vanadurgha Temple) ಟ್ರಸ್ಟ್‌ನ ಸುಮಾರು 11 ಎಕರೆ ಜಾಗ‌ದ ಆರ್‌ಟಿಸಿಯಲ್ಲಿ ವಕ್ಫ್‌ ಆಸ್ತಿ ಎಂದು ಉಲ್ಲೇಖವಾಗಿದೆ. ನೂರಾರು ವರ್ಷಗಳಿಂದ ಪೂರ್ವಜರು ಇಲ್ಲಿ ವನದುರ್ಗಾ ಚೌಡೇಶ್ವರಿ ಹಾಗೂ ಗುಳಿಗ ದೈವಗಳ ಆರಾಧಾನೆ ಮಾಡಿಕೊಂಡು ಬರುತ್ತಿದ್ದಾರೆ. ಆದ್ರೆ ಆರ್‌ಟಿಸಿಯಲ್ಲಿ ವಕ್ಫ್‌ ಆಸ್ತಿ ಎಂದು ನಮೂದಾಗಿರುವುದು ಅಚ್ಚರಿ ಮೂಡಿಸಿದೆ. ಇದನ್ನೂ ಓದಿ: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದ ಟ್ರಂಪ್‌, ಸೋತ ಹ್ಯಾರಿಸ್‌ಗೆ ರಾಹುಲ್‌ ಗಾಂಧಿ ಪತ್ರ

    10 ವರ್ಷಗಳ ಹಿಂದೆ ದೇವಸ್ಥಾನದ 11 ಎಕರೆ ಜಾಗದ ಆರ್‌ಟಿಸಿಯಲ್ಲಿ ಸಂಗಮನಾಥ್ ಪಟೇಲ್ ಪೂವಯ್ಯ, ಅಬ್ದುಲ್ ಗನಿ, ಮಹಮ್ಮದ್ ಇಬ್ರಾಹಿಂ, ಟ್ರಸ್ಟಿ ಎಂದು ನಮೂದಾಗಿತ್ತು. ಆದರೀಗ ಜುಮ್ಮ ಮಸೀದಿ, ಸುನ್ನಿ ನಗರೂರು ಮತ್ತು ವಕ್ಪ್ ಆಸ್ತಿ ಎಂದು ಉಲ್ಲೇಖವಾಗಿದೆ. ಇದರಿಂದ ಸ್ಥಳೀಯರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಅಲಿಗಢ ಮುಸ್ಲಿಂ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ಕೇಸ್‌ – ವಿವಿ ಯಾರು ಸ್ಥಾಪಿಸಿದ್ರು ಅನ್ನೋದರ ಮೇಲೆ ನಿರ್ಧರಿಸಲಾಗುತ್ತೆ: ಸುಪ್ರೀಂ

    ಇದು ಹಿಂದೂಗಳ ದೇವಾಲಯ ಅನ್ನೋದಕ್ಕೆ ನೂರಾರು ವರ್ಷಗಳ ಹಿಂದೆ ಹಳೆಗನ್ನಡದಲ್ಲಿ ಬರೆದಿರುವ ಚೌಡೇಶ್ವರಿ ದೇವಾಲಯದ ಕಲ್ಲು ಸಹ ಸಾಕ್ಷಿಯಿದೆ. ಪ್ರತಿ ವರ್ಷ ಈ ದೇವಾಲಯದಲ್ಲಿ ವಾರ್ಷಿಕೋತ್ಸವ, ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯುತ್ತಿದೆ. ದೇವಾಲಯದೊಂದಿಗೆ ಭಕ್ತರಿಗೆ ಭಾವನ್ಮಾಕ ಸಂಬಂಧ ಇದೆ. ಈ ನಡುವೆ ವಕ್ಫ್‌ ಆಸ್ತಿ ವಿವಾದ ಜಿಲ್ಲೆಯಲ್ಲಿ ಎರಡು ಸಮುದಾಯಗಳ ನಡುವೆ ಸಂಘರ್ಷದ ವಾತಾವರಣ ನಿರ್ಮಾಣ ಮಾಡಿದೆ. ರಾಜ್ಯ ಸರ್ಕಾರ ಎಚ್ಚೆತ್ತು ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

    ನಿನ್ನೆಯಷ್ಟೇ ರಾಜ್ಯದ ಕೆಲ ರೈತರಿಗೆ ನೀಡಿದ್ದ ನೋಟಿಸ್‌ ಅನ್ನು ಕಂದಾಯ ಇಲಾಖೆ ವಾಪಸ್‌ ಪಡೆದಿರುವುದಾಗಿ ಹೇಳಿದೆ. ಈ ಬೆನ್ನಲ್ಲೇ ಹಿಂದೂ ದೇವಾಲಯದ ಆರ್‌ಟಿಸಿಯಲ್ಲಿ ವಕ್ಫ್‌ ಆಸ್ತಿ ಎಂದು ನಮೂದಾಗಿರುವುದು ಜನರಲ್ಲಿ ಆಕ್ರೋಶ ತರಿಸಿದೆ. ಇದನ್ನೂ ಓದಿ: ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿರೋ ಕ್ಷೇತ್ರದಲ್ಲಿ ಸಿದ್ದರಾಮಯ್ಯ, ಡಿಕೆಶಿ ಭಾವಚಿತ್ರ ಇರುವ 30 ರೇಶನ್ ಕಿಟ್‌ಗಳು ಜಪ್ತಿ 

  • ಏಕಕಾಲದಲ್ಲಿ ಒಂಬತ್ತು ಗುಳಿಗ ದೈವಗಳ ನರ್ತನ – ಬೆಳ್ತಂಗಡಿಯ ಬರ್ಕಜೆಯಲ್ಲಿ ಗಗ್ಗರ ಸೇವೆ

    ಏಕಕಾಲದಲ್ಲಿ ಒಂಬತ್ತು ಗುಳಿಗ ದೈವಗಳ ನರ್ತನ – ಬೆಳ್ತಂಗಡಿಯ ಬರ್ಕಜೆಯಲ್ಲಿ ಗಗ್ಗರ ಸೇವೆ

    ಮಂಗಳೂರು: ಕರಾವಳಿಯಲ್ಲಿ ದೈವಾರಾಧನೆಗೆ ವಿಶಿಷ್ಟ ಸ್ಥಾನಮಾನವಿದೆ. ಜನ ದೈವಾರಾಧನೆಯನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಮಾಡುತ್ತಾರೆ. ಹಾಗಾಗಿ ಇಂದಿಗೂ ಸುಮಾರು 450ಕ್ಕಿಂತಲೂ ಹೆಚ್ಚು ದೈವಗಳನ್ನು ಆರಾಧಿಸಲಾಗುತ್ತದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹಳ ಅಪರೂಪವಾದ ನವಗುಳಿಗ ದೈವಗಳಿಗೆ ಗಗ್ಗರ ಸೇವೆಯೊಂದು ನಡೆದಿದೆ.

    ಕರಾವಳಿ ಭಾಗದಲ್ಲಿ ಗುಳಿಗ ದೈವದ ಆರಾಧನೆಗೆ ವಿಶೇಷ ಆಕರ್ಷಣೆ ಇದೆ. ಗುಳಿಗ ದೈವದ ರೋಷಾವೇಷ ನೋಡೋದೇ ಒಂದು ರೋಮಾಂಚಕ ಅನುಭವ. ಸಾಮಾನ್ಯವಾಗಿ ಒಂದು ಗುಳಿಗ ದೈವಕ್ಕೆ ಆರಾಧನೆ ನಡೆಯುವುದು ಮಾಮೂಲಿ. ಆದರೆ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿಟ್ಟೆಡೆ ಗ್ರಾಮದ ಬರ್ಕಜೆಯಲ್ಲಿರುವ ದುರ್ಗಾಪರಮೇಶ್ವರಿ ನವಗುಳಿಗ ಕ್ಷೇತ್ರದಲ್ಲಿ ನವ ಗುಳಿಗ ದೈವ ನೆಲೆಯೂರಿದೆ. ಒಂದೇ ದಿನ ಒಂದೇ ಬಾರಿ ಈ ನವ ಗುಳಿಗ ದೈವಗಳಿಗೆ ಗಗ್ಗರ ಸೇವೆ ನಡೆಯುತ್ತದೆ. ಈ ಬಾರಿಯ ವಾರ್ಷಿಕ ಉತ್ಸವವೂ ಅತ್ಯಂತ ಯಶಸ್ವಿಯಾಗಿ ನಡೆಯಿತು. ಏಕಕಾಲದಲ್ಲಿ ಒಂಬತ್ತು ಮಂದಿ ದೈವ ನರ್ತಕರು ನವ ಗುಳಿಗನ ನೇಮೋತ್ಸವ ನಡೆಸಿಕೊಟ್ಟರು. ಈ ಅದ್ಭುತವನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು. ಇದನ್ನೂ ಓದಿ: ನಾನು ಹಿಜಬ್ ಬಗ್ಗೆ ಮಾತಾಡುವವನೇ, ನಾನ್ಯಾಕೆ ಕ್ಷಮೆ ಕೇಳಬೇಕು – ಡಿಕೆಶಿಗೆ ಜಮೀರ್ ಟಾಂಗ್

    ದುರ್ಗಾಪರಮೇಶ್ವರಿಯ ಸನ್ನಿದಿಯ ಮುಂಭಾಗದಲ್ಲೇ ಈ ನವ ಗುಳಿಗನ ಸಾನಿಧ್ಯ ಇದ್ದು, ಈ ಹಿಂದೆ ಒಂದು ಗುಳಿಗ ದೈವಕ್ಕೆ ಮಾತ್ರ ನೇಮೋತ್ಸವ ನಡೆಯುತ್ತಿತ್ತು. ಆದ್ರೆ ಮೂರು ವರ್ಷದ ಹಿಂದೆ ಪ್ರಶ್ನಾ ಚಿಂತನೆಯಲ್ಲಿ ನವಗುಳಿಗ ದೈವ ಇಲ್ಲಿ ನೆಲೆಯೂರಿದೆ ಎಂದು ತಿಳಿದುಬಂದಿತ್ತು. ಹೀಗಾಗಿ ಕಳೆದ ಮೂರು ವರ್ಷಗಳಿಂದ ನವಗುಳಿಗ ದೈವಗಳಿಗೆ ಉತ್ಸವ ನಡೆಯುತ್ತಿದೆ. ಈ ನವ ಗುಳಿಗ ದೈವಗಳೇ ಕ್ಷೇತ್ರದ ರಕ್ಷಣೆಯನ್ನು ಮಾಡುತ್ತಿದ್ದು ನಂಬಿ ಬರುವ ಭಕ್ತರ ಸಂಕಷ್ಟಗಳನ್ನು ಸಹ ದೂರ ಮಾಡುತ್ತಿದೆ. ಕೇವಲ ಜಿಲ್ಲೆ ಮಾತ್ರವಲ್ಲದೇ ಹೊರೆ ಜಿಲ್ಲೆಯ ಭಕ್ತರು ಸಹ ಇಲ್ಲಿ ಬಂದು ಪ್ರಾರ್ಥನೆ ಮಾಡಿಕೊಂಡು ಇಷ್ಟಾರ್ಥಗಳನ್ನು ಸಿದ್ದಿಸಿಕೊಳ್ಳುತ್ತಾರೆ. ಇದನ್ನೂ ಓದಿ: ಜಮೀರ್ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷ ಒಪ್ಪುವುದಿಲ್ಲ, ಅವರು ಕ್ಷಮೆ ಕೇಳಬೇಕು: ಡಿಕೆಶಿ

    ರೋಷದಿಂದ ನರ್ತನ ನೀಡುವುದರಿಂದ ಗುಳಿಗ ದೈವದ ಆರಾಧನೆಗೆ ವಿಶೇಷ ಮಹತ್ವವಿದೆ. ಹೀಗಾಗಿ ಒಂದೇ ಕಡೇ ಏಕಕಾಲದಲ್ಲಿ ನವ ಗುಳಿಗನ ನರ್ತನಧಾರಿಗಳು ನೇಮೋತ್ಸವವನ್ನು ನಡೆಸಿಕೊಡುವುದೇ ಚಂದ.