Tag: Guntur Kharam

  • ಮಹೇಶ್ ಬಾಬು ಜೊತೆ ಸಖತ್ತಾಗಿ ಕುಣಿಯಲಿದ್ದಾರೆ ಕನ್ನಡತಿ ಶ್ರೀಲೀಲಾ

    ಮಹೇಶ್ ಬಾಬು ಜೊತೆ ಸಖತ್ತಾಗಿ ಕುಣಿಯಲಿದ್ದಾರೆ ಕನ್ನಡತಿ ಶ್ರೀಲೀಲಾ

    ತೆಲುಗಿನ ಸೂಪರ್ ಸ್ಟಾರ್ ಮಹೇಶ್ ಬಾಬು (Mahesh Babu) ಮುಖ್ಯಭೂಮಿಕೆಯ ಗುಂಟೂರು ಖಾರಂ ಸಿನಿಮಾದ ಟಪ್ಪಾಂಗುಚ್ಚಿ ಹಾಡಿಗೆ ಕನ್ನಡತಿ ಶ್ರೀಲೀಲಾ (Sreeleela) ಹೆಜ್ಜೆ ಹಾಕಲಿದ್ದಾರೆ. ಅದೊಂದು ಡಾನ್ಸ್ ನಂಬರ್ ಸಾಂಗ್ ಆಗಿದ್ದು, ಶ್ರೀಲೀಲಾ ಮೈಚಳಿ ಬಿಟ್ಟು ಕುಣಿಯಲಿದ್ದಾರೆ. ಅಂದುಕೊಂಡಂತೆ ಆಗಿದ್ದರೆ, ಈ ಸಿನಿಮಾದಲ್ಲಿ ಇವರು ನಾಯಕಿಯಾಗಿ ನಟಿಸಬೇಕಿತ್ತು. ಆದರೆ, ಸಾಂಗ್ ವೊಂದಕ್ಕೆ ಹೆಜ್ಜೆ ಹಾಕಬೇಕಾಗಿದೆ.

    ಗುಂಟೂರು ಖಾರಂ (Guntur Kharam) ಸಿನಿಮಾಗೆ ನಾಯಕಿ ಯಾರು ಎನ್ನುವ ಚರ್ಚೆ ಹಲವು ದಿನಗಳಿಂದ ನಡೆಯುತ್ತಲೇ ಇತ್ತು. ಪೂಜಾ ಹೆಗಡೆ (Pooja Hegde) ಬಿಟ್ಟು ಹೋದ ಸ್ಥಾನವನ್ನು ತುಂಬುವವರು ಯಾರು? ಎನ್ನುವ ಪ್ರಶ್ನೆ ಮೂಡಿತ್ತು. ಶ್ರೀಲೀಲಾ, ತ್ರಿಷಾ ಸೇರಿದಂತೆ ಹಲವರು ಹೆಸರು ನಾಯಕಿ ಸ್ಥಾನಕ್ಕಾಗಿ ಕೇಳಿ ಬಂದಿತ್ತು. ಈ ಎಲ್ಲ ಸ್ಟಾರ್ ನಟಿಯರಿಗೆ ಕೊಕ್ ನೀಡಿ, ಯುವ ನಟಿಗೆ ಮಣೆ ಹಾಕಿತ್ತು ಚಿತ್ರತಂಡ.

    ಹೌದು, ಈ ಹಿಂದೆ ಕನ್ನಡದ ನಟಿ ಶ್ರೀಲೀಲಾ ಅಥವಾ ಸ್ಟಾರ್ ನಟಿ ತ್ರಿಷಾ ಈ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಲಿದ್ದಾರೆ ಎನ್ನುವ ಸುದ್ದಿಯಿತ್ತು. ಆದರೆ, ಯುವ ನಟಿ ಮೀನಾಕ್ಷಿ ಚೌಧರಿ (Meenakshi Chaudhary) ಎಂಟ್ರಿಯಾಗಿತ್ತು.  ಕಿರುತೆರೆಯ ಮೂಲಕ ಬಣ್ಣದ ಪ್ರಪಂಚಕ್ಕೆ ಕಾಲಿಟ್ಟವರು ಮೀನಾಕ್ಷಿ. ಆನಂತರ ಸಿನಿಮಾ ರಂಗವನ್ನು ಪ್ರವೇಶ ಮಾಡಿದವರು. ಹಿಟ್ : ದಿ ಸೆಕೆಂಡ್ ಕೇಸ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ಇವರು ನಟಿಸಿದ್ದಾರೆ.

    ಮೀನಾಕ್ಷಿ ನಾಯಕಿಯಾಗಿ ನಟಿಸುತ್ತಿದ್ದರೆ, ಹಾಟ್ ಬ್ಯೂಟಿ ರಮ್ಯಾ ಕೃಷ್ಣ (Ramya Krishna) ವಿಶೇಷ ಪಾತ್ರವೊಂದನ್ನು ಮಾಡಲಿದ್ದಾರೆ. ಬಾಹುಬಲಿ ಸಿನಿಮಾದಲ್ಲಿ ಶಿವಗಾಮಿನಿ ಪಾತ್ರ ಮಾಡಿದ್ದ ರಮ್ಯಾ ಕೃಷ್ಣ ಅಲ್ಲಿಂದ ಅವರು ಮತ್ತೆ ಬೇಡಿಕೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಮಹೇಶ್ ಬಾಬು ಸಿನಿಮಾವನ್ನು ರಮ್ಯಾ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಅವರಿಗಾಗಿಯೇ ಪಾತ್ರವನ್ನು ಹಿಗ್ಗಿಸಿದ್ದಾರಂತೆ ಚಿತ್ರತಂಡ.

     

    ಗುಂಟೂರು ಖಾರಂ’ ಸಿನಿಮಾ ಶೂಟಿಂಗ್ ಪದೇ ಪದೇ ತಡವಾಗುತ್ತಿದೆ. ಚಿತ್ರಕಥೆಯಲ್ಲಿ ಬದಲಾವಣೆ ಮಾಡುತ್ತಿದ್ದು ಬರುವ ಸಂಕ್ರಾಂತಿಗೂ ಸಿನಿಮಾ ರಿಲೀಸ್ ಆಗಲ್ಲ ಎನ್ನುವ ವಾದ ಶುರುವಾಗಿದೆ. ಟಾಲಿವುಡ್ ಮಾತ್ರವಲ್ಲದೇ ಬಾಲಿವುಡ್‌ನಲ್ಲೂ ಬೇಡಿಕೆ ಸೃಷ್ಟಿಸಿಕೊಂಡಿರುವ ಪೂಜಾ ಹೆಗ್ಡೆಗೆ ಈಗ ಡೇಟ್ಸ್ ಸಮಸ್ಯೆ ಕಾರಣದಿಂದಾಗಿ ಶೂಟಿಂಗ್ ಮುಂದೂಡಲ್ಪಟ್ಟಿತ್ತು. ಕೆಲವು ದೃಶ್ಯಗಳನ್ನು ರೀಶೂಟ್ ಮಾಡುವಂತೆ ಮಹೇಶ್ ಬಾಬು ತಿಳಿಸಿದ್ದಾರೆ ಎಂದೂ ಹೇಳಲಾಗುತ್ತಿದೆ.

  • ಸ್ಟಾರ್ ನಟಿಯರಿಗೆ ಕೊಕ್ ನೀಡಿ, ಯುವ ನಟಿಗೆ ಅವಕಾಶ ಕೊಟ್ಟ ಗುಂಟೂರು ಖಾರಂ

    ಸ್ಟಾರ್ ನಟಿಯರಿಗೆ ಕೊಕ್ ನೀಡಿ, ಯುವ ನಟಿಗೆ ಅವಕಾಶ ಕೊಟ್ಟ ಗುಂಟೂರು ಖಾರಂ

    ಹೇಶ್ ಬಾಬು (Mahesh Babu) ಮುಖ್ಯ ಭೂಮಿಕೆಯ ಗುಂಟೂರು ಖಾರಂ (Guntur Kharam) ಸಿನಿಮಾಗೆ ನಾಯಕಿ ಯಾರು ಎನ್ನುವ ಚರ್ಚೆ ಹಲವು ದಿನಗಳಿಂದ ನಡೆಯುತ್ತಲೇ ಇದೆ. ಪೂಜಾ ಹೆಗಡೆ (Pooja Hegde) ಬಿಟ್ಟು ಹೋದ ಸ್ಥಾನವನ್ನು ತುಂಬುವವರು ಯಾರು? ಎನ್ನುವ ಪ್ರಶ್ನೆ ಮೂಡಿತ್ತು. ಶ್ರೀಲೀಲಾ, ತ್ರಿಷಾ ಸೇರಿದಂತೆ ಹಲವರು ಹೆಸರು ನಾಯಕಿ ಸ್ಥಾನಕ್ಕಾಗಿ ಕೇಳಿ ಬಂದಿತ್ತು. ಈ ಎಲ್ಲ ಸ್ಟಾರ್ ನಟಿಯರಿಗೆ ಕೊಕ್ ನೀಡಿ, ಯುವ ನಟಿಗೆ ಮಣೆ ಹಾಕಿದೆ ಚಿತ್ರತಂಡ.

    ಹೌದು, ಈ ಹಿಂದೆ ಕನ್ನಡದ ನಟಿ ಶ್ರೀಲೀಲಾ ಅಥವಾ ಸ್ಟಾರ್ ನಟಿ ತ್ರಿಷಾ ಈ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಲಿದ್ದಾರೆ ಎನ್ನುವ ಸುದ್ದಿಯಿತ್ತು. ಆದರೆ, ಇದೀಗ ಬಂದ ಮಾಹಿತಿಯ ಪ್ರಕಾರ, ಯುವ ನಟಿ ಮೀನಾಕ್ಷಿ ಚೌಧರಿ (Meenakshi Chaudhary) ಎಂಟ್ರಿಯಾಗಿದೆ.  ಕಿರುತೆರೆಯ ಮೂಲಕ ಬಣ್ಣದ ಪ್ರಪಂಚಕ್ಕೆ ಕಾಲಿಟ್ಟವರು ಮೀನಾಕ್ಷಿ. ಆನಂತರ ಸಿನಿಮಾ ರಂಗವನ್ನು ಪ್ರವೇಶ ಮಾಡಿದವರು. ಹಿಟ್ : ದಿ ಸೆಕೆಂಡ್ ಕೇಸ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ಇವರು ನಟಿಸಿದ್ದಾರೆ. ಇದನ್ನೂ ಓದಿ: ಹೃದಯ ಕಿತ್ತು ಎದೆಗೆ ಹಚ್ಚಿಕೊಂಡು ಪಾರ್ಟಿಗೆ ಬಂದ ಉರ್ಫಿ ಜಾವೇದ್

    ಮೀನಾಕ್ಷಿ ನಾಯಕಿಯಾಗಿ ನಟಿಸುತ್ತಿದ್ದರೆ, ಹಾಟ್ ಬ್ಯೂಟಿ ರಮ್ಯಾ ಕೃಷ್ಣ (Ramya Krishna) ವಿಶೇಷ ಪಾತ್ರವೊಂದನ್ನು ಮಾಡಲಿದ್ದಾರೆ. ಬಾಹುಬಲಿ ಸಿನಿಮಾದಲ್ಲಿ ಶಿವಗಾಮಿನಿ ಪಾತ್ರ ಮಾಡಿದ್ದ ರಮ್ಯಾ ಕೃಷ್ಣ ಅಲ್ಲಿಂದ ಅವರು ಮತ್ತೆ ಬೇಡಿಕೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಮಹೇಶ್ ಬಾಬು ಸಿನಿಮಾವನ್ನು ರಮ್ಯಾ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಅವರಿಗಾಗಿಯೇ ಪಾತ್ರವನ್ನು ಹಿಗ್ಗಿಸಿದ್ದಾರಂತೆ ಚಿತ್ರತಂಡ.

     

    ಗುಂಟೂರು ಖಾರಂ’ ಸಿನಿಮಾ ಶೂಟಿಂಗ್ ಪದೇ ಪದೇ ತಡವಾಗುತ್ತಿದೆ. ಚಿತ್ರಕಥೆಯಲ್ಲಿ ಬದಲಾವಣೆ ಮಾಡುತ್ತಿದ್ದು ಬರುವ ಸಂಕ್ರಾಂತಿಗೂ ಸಿನಿಮಾ ರಿಲೀಸ್ ಆಗಲ್ಲ ಎನ್ನುವ ವಾದ ಶುರುವಾಗಿದೆ. ಟಾಲಿವುಡ್ ಮಾತ್ರವಲ್ಲದೇ ಬಾಲಿವುಡ್‌ನಲ್ಲೂ ಬೇಡಿಕೆ ಸೃಷ್ಟಿಸಿಕೊಂಡಿರುವ ಪೂಜಾ ಹೆಗ್ಡೆಗೆ ಈಗ ಡೇಟ್ಸ್ ಸಮಸ್ಯೆ ಕಾರಣದಿಂದಾಗಿ ಶೂಟಿಂಗ್ ಮುಂದೂಡಲ್ಪಟ್ಟಿತ್ತು. ಕೆಲವು ದೃಶ್ಯಗಳನ್ನು ರೀಶೂಟ್ ಮಾಡುವಂತೆ ಮಹೇಶ್ ಬಾಬು ತಿಳಿಸಿದ್ದಾರೆ ಎಂದೂ ಹೇಳಲಾಗುತ್ತಿದೆ. ಹೀಗಾಗಿ ಎಲ್ಲ ಪಕ್ಕಾ ಮಾಡಿಕೊಂಡೇ ಈ ಬಾರಿ ಚಿತ್ರೀಕರಣಕ್ಕೆ ಹೊರಡಲಿದೆ ಚಿತ್ರತಂಡ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ನಟಿ ಪೂಜಾ ಹೆಗಡೆ ‘ಗುಂಟೂರು ಖಾರಂ’ ಬಿಡೋಕೆ ಕರಣ್ ಜೋಹಾರ್ ಕಾರಣನಾ?

    ನಟಿ ಪೂಜಾ ಹೆಗಡೆ ‘ಗುಂಟೂರು ಖಾರಂ’ ಬಿಡೋಕೆ ಕರಣ್ ಜೋಹಾರ್ ಕಾರಣನಾ?

    ಪೂಜಾ ಹೆಗಡೆ (Pooja Hegde) ವಾರದಿಂದ ಸುದ್ದಿಯಲ್ಲಿದ್ದಾರೆ. ಒಂದೇ ಸಿನಿಮಾ ಬಿಟ್ಟು ಹೊರ ಬಂದಿದ್ದೇ ಕಾರಣ. ಸತತ ಸೋಲಿನಿಂದ ಒದ್ದಾಡುತ್ತಿರುವ ಪೂಜಾ ‘ಗುಂಟೂರು ಖಾರಂ’ (Guntur Kharam) ನಿಂದ ದೂರವಾದರು. ಮಹೇಶ್ ಬಾಬು ಜೊತೆ ನಟಿಸುವ ಅವಕಾಶ ಕಳೆದುಕೊಂಡರು. ಇದಕ್ಕೆಲ್ಲ ಯಾವ್ಯಾವುದೋ ಕಾರಣ ಎನ್ನುವ ಖಬರ್ ಹರಡಿತು. ಆದರೆ ಅಸಲಿಗೆ ಬಾಲಿವುಡ್ ಸ್ಟಾರ್ ಡೈರೆಕ್ಟರ್ ಇದಕ್ಕೆ ಮೂಲ ಹೂರಣ ಎನ್ನುವ ಮಾತು ಹೊಗೆಯಾಡುತ್ತಿದೆ. ಯಾಕಾಗಿ ಪೂಜಾ ಖಾರ ತಿನ್ನಲು ಒಲ್ಲೆ ಎಂದರು? ಬಾಲಿವುಡ್ ನಿರ್ದೇಶಕನ ಸ್ಕೆಚ್ ಮತ್ತೇನು? ಗುಂಟೂರು ಪೂಜಾ ಸಜಾ ಕಥನ ನಿಮ್ಮ ಮುಂದೆ.

    ಪೂಜಾ ಹೆಗಡೆ ಕಳೆದ ನಾಲ್ಕು ವರ್ಷಳಿಂದ ಒಂದೇ ಒಂದು ಹಿಟ್ ಕೊಟ್ಟಿಲ್ಲ. ಟಾಪ್ ಸ್ಟಾರ್ಸ್ ಜೊತೆ ಕುಣಿದರೂ ಜನರು ಕ್ಯಾರೇ ಎನ್ನಲಿಲ್ಲ. ಒಂದಾದರೂ ಹಿಟ್ ಕೊಡಬೇಕು. ಇದನ್ನೇ ಜಪ ಮಾಡಿದರೂ ದೇವರು ಆಶೀರ್ವಾದ ಮಾಡಲಿಲ್ಲ. ಇದೇ ಹೊತ್ತಲ್ಲಿ ಮಹೇಶ್ ಬಾಬು ಜೊತೆ ಗುಂಟೂರು ಖಾರಂ ಸಿನಿಮಾಕ್ಕೆ ಬುಲಾವ್ ಬಂದಿತು. ಆದರೆ ಅದು ತಡವಾಯಿತು. ಇದನ್ನೂ ಓದಿ:‘ಕಬಾಲಿ’ ನಿರ್ಮಾಪಕ ಅರೆಸ್ಟ್ ಬೆನ್ನಲ್ಲೇ ಡ್ರಗ್ಸ್ ಪ್ರಕರಣದಲ್ಲಿ ನಟಿ ಅಶು ರೆಡ್ಡಿ ಹೆಸರು

    ಪೂಜಾ ಕೊಟ್ಟ ಡೇಟ್ಸ್ ಮುಗಿಯಿತು. ಪೂಜಾ ಔಟ್ ಆದರು. ಆ ಜಾಗಕ್ಕೆ ಅದೇ ಚಿತ್ರಕ್ಕೆ ಸೆಕೆಂಡ್ ಹೀರೋಯಿನ್ ಆಗಿದ್ದ ಕನ್ನಡದ ಶ್ರೀಲೀಲಾ (Srileela) ಪವಡಿಸಿ ಪಕಪಕ ನಕ್ಕರು. ಆದರೆ ಪೂಜಾ ಆ ಚಿತ್ರದಿಂದ ಹೊರ ಬೀಳಲು ಅಸಲಿ ಕಾರಣ ಇದ್ಯಾವುದೂ ಅಲ್ಲ, ಬಾಲಿವುಡ್ ಡೈರೆಕ್ಟರ್ ಕರಣ್‌ ಜೋಹರ್ (Karan Johar) ಅನ್ನೋದು ಗಿಚ್ಚಿ ಗಿಲಿಗಿಲಿ.

    ಬಾಲಿವುಡ್‌ನಲ್ಲಿ (Bollywood) ಪೂಜಾ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ಅದ್ಯಾವುದೂ ಹೇಳಿಕೊಳ್ಳುವ ಹೆಸರು ತರಲಿಲ್ಲ. ಖುದ್ದು ಸಲ್ಮಾನ್ ಖಾನ್ ಜೊತೆ ಕುಣಿದ ಕಿಸಿ ಕಾ ಭಾಯಿ ಕಿಸಿ ಕೀ ಜಾನ್ ಕೂಡ ಅಂಗಾತ ಮಲಗಿತು. ಟಾಲಿವುಡ್‌ನಲ್ಲಿ ಗುಂಟೂರು ಖಾರಂ ಮಾತ್ರ ಕೈಯಲ್ಲಿತ್ತು. ನಿರ್ದೇಶಕ ತ್ರಿವಿಕ್ರಮ್ ಸ್ಕಿಪ್ಟ್ ಚೇಂಜ್ ಮಾಡಿದ್ದು, ಪೂಜಾ ಪಾತ್ರಕ್ಕೆ ಕತ್ತರಿ ಹಾಕಿದ್ದು, ಶ್ರೀಲೀಲಾಗೆ ರತ್ನಗಂಬಳಿ ಹಾಸಿದ್ದು. ಇದೆಲ್ಲ ಒಂದೇ ಕುಕ್ಕರಿನಲ್ಲಿ ಬೆಂದಾಗ ಪೂಜಾ ಕುದ್ದು ಹೋಗದೇ ಇರುತ್ತಾರಾ? ಅದಕ್ಕೆ `ನೀನು ಬ್ಯಾಡ ನಿನ್ ಸಿನಿಮಾನೂ ಬ್ಯಾಡ…’ ಅಂತ ಸ್ವಾಟೆ ತಿರುವಿ ಎದ್ದು ಬಂದರಂತೆ. ಇದೇ ನಿಜವಾ ಅಥವಾ ಬೇರೆ ಯಾರಾದರೂ ಊದಿನ ಕಡ್ಡಿ ಹಚ್ಚಿದರಾ? ಆಗ ಕರಣ್ ಕುಲುಕುಲು ನಗುತ್ತಾ ಬಂದರಲ್ಲಾ.

    ಕರಣ್ ಜೋಹರ್ ಬಾಲಿವುಡ್‌ನ ದೊಡ್ಡ ಹೆಸರು. ಅವರದೇ ಬ್ಯಾನರ್‌ನ ಎರಡು ಸಿನಿಮಾಗಳಿಗೆ ಪೂಜಾರನ್ನು ಬುಕ್ ಮಾಡಿದ್ದಾರಂತೆ. `ಕಾಲಿವುಡ್, ಟಾಲಿವುಡ್‌ಗೆ ಮಾರೋ ಗೋಲಿ. ಬಾಲಿವುಡ್‌ನಲ್ಲಿ ಆಡು ಬಾ ಹೋಳಿ…’ ಹೀಗೆ ಎರಡೂ ಕೈಗಳಿಂದ ಅಪ್ಪಿಕೊಂಡಿದ್ದಾರೆ. ನಾಲ್ಕು ಸಿನಿಮಾ ಗೋತಾ ಹೊಡೆದ ಸುಸ್ತಿನಲ್ಲಿದ್ದ ಪೂಜಾಗೆ ಕರಣ್ ಕಣ್ಣಲ್ಲಿ ಐರನ್ ಕಂಟೆಂಟ್ ಇರುವ ಕರಿಬೇವಿನ ಸೊಪ್ಪು ಕಾಣಿಸಿದೆ. ಫಲಿತಾಂಶ ಟಾಲಿವುಡ್‌ಗೆ ಟಾಟಾ ಬಾಲಿವುಡ್‌ನಲ್ಲಿ ಆಟ. ಜಸ್ಟ್ ಆರಂಭ. ಹತ್ತಿದ ಏಣಿ ಒದ್ದಿರುವ ಡಸ್ಕಿ ಬ್ಯೂಟಿಗೆ ಬಾಲಿವುಡ್ ಮಾವಿನ ಹಣ್ಣು ತಿನ್ನಿಸುತ್ತಾ ಅಥವಾ ಹಸಿ ಹಾಗಲಕಾಯಿ ಹಸಿಹಸಿಯಾಗಿಯೇ ಮುಕ್ಕಿಸುತ್ತಾ? ನೋಡೋಣ. ಕಾಯೋಣ.

  • ಗುಂಟೂರು ಖಾರ ಸವಿಯಲು ಬರುತ್ತಿದ್ದಾರೆ ರಮ್ಯಾ ಕೃಷ್ಣ

    ಗುಂಟೂರು ಖಾರ ಸವಿಯಲು ಬರುತ್ತಿದ್ದಾರೆ ರಮ್ಯಾ ಕೃಷ್ಣ

    ಹೇಶ್ ಬಾಬು (Mahesh Babu) ನಟನೆಯ ಗುಂಟೂರು ಖಾರಂ ಸಿನಿಮಾದಲ್ಲಿ ಹಾಟ್ ಬ್ಯೂಟಿ ರಮ್ಯಾ ಕೃಷ್ಣ (Ramya Krishna) ವಿಶೇಷ ಪಾತ್ರವೊಂದನ್ನು ಮಾಡಲಿದ್ದಾರೆ. ಬಾಹುಬಲಿ ಸಿನಿಮಾದಲ್ಲಿ ಶಿವಗಾಮಿನಿ ಪಾತ್ರ ಮಾಡಿದ್ದ ರಮ್ಯಾ ಕೃಷ್ಣ ಅಲ್ಲಿಂದ ಅವರು ಮತ್ತೆ ಬೇಡಿಕೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಮಹೇಶ್ ಬಾಬು ಸಿನಿಮಾವನ್ನು ರಮ್ಯಾ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಅವರಿಗಾಗಿಯೇ ಪಾತ್ರವನ್ನು ಹಿಗ್ಗಿಸಿದ್ದಾರಂತೆ ಚಿತ್ರತಂಡ.

    ಕಲಾವಿದರ ವಿಚಾರದಲ್ಲಿ ಈ ಸಿನಿಮಾ ಸಾಕಷ್ಟು ಸದ್ದು ಮಾಡುತ್ತಿದೆ. ಕರಾವಳಿ ಬ್ಯೂಟಿ ಪೂಜಾ ಹೆಗ್ಡೆ ‘ಗುಂಟೂರು ಖಾರಂ’ (Guntur Kharam) ಪ್ರಾಜೆಕ್ಟ್‌ನಿಂದ ಹೊರಬಂದಿದ್ದಾರೆ. ಎಂದು ಹೇಳಲಾಗುತ್ತಿದೆ.  ಗುಂಟೂರು ಖಾರಂ’ ಸಿನಿಮಾ ಶೂಟಿಂಗ್ ಪದೇ ಪದೇ ತಡವಾಗುತ್ತಿದೆ. ಚಿತ್ರಕಥೆಯಲ್ಲಿ ಬದಲಾವಣೆ ಮಾಡುತ್ತಿದ್ದು ಬರುವ ಸಂಕ್ರಾಂತಿಗೂ ಸಿನಿಮಾ ರಿಲೀಸ್ ಆಗಲ್ಲ ಎನ್ನುವ ವಾದ ಶುರುವಾಗಿದೆ. ಟಾಲಿವುಡ್ ಮಾತ್ರವಲ್ಲದೇ ಬಾಲಿವುಡ್‌ನಲ್ಲೂ ಬೇಡಿಕೆ ಸೃಷ್ಟಿಸಿಕೊಂಡಿರುವ ಪೂಜಾ ಹೆಗ್ಡೆಗೆ ಈಗ ಡೇಟ್ಸ್ ಸಮಸ್ಯೆ ಎದುರಾಗಿದೆ.

    ಕಳೆದ ವರ್ಷ ಈ ಚಿತ್ರಕ್ಕಾಗಿ ಕಾಲ್‌ಶೀಟ್ ಕೊಟ್ಟಿದ್ದರು. ಆದರೆ ಈವರೆಗೆ ಚಿತ್ರೀಕರಣ ಮುಗಿದಿಲ್ಲ. ಈ ವರ್ಷ ಜೂನ್‌ನಿಂದ ಡಿಸೆಂಬರ್‌ವರೆಗೆ ಬೇರೆ ಸಿನಿಮಾಗಳಿಗೆ ಕಾಲ್‌ಶೀಟ್ ಕೊಟ್ಟಿದ್ದಾರಂತೆ. ಆ ಸಿನಿಮಾಗಳಿಗೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಮಹೇಶ್ ಬಾಬು ಚಿತ್ರದಿಂದ ಹೊರ ಬರುವ ನಿರ್ಧಾರ ಮಾಡಿದ್ದಾರೆ. ಈಗಾಗಲೇ ಶೂಟ್‌ ಮಾಡಿದ ಭಾಗ ಮಹೇಶ್‌ ಬಾಬು ಅವರಿಗೆ ತೃಪ್ತಿ ಸಿಗದ ಕಾರಣ ಮತ್ತೊಮ್ಮೆ ರೀ-ಶೂಟ್‌ ಮಾಡಲಾಗುತ್ತಿದೆ. ಹಾಗಾಗಿ ಡೇಟ್‌ ಸಮಸ್ಯೆಯಿಂದ ಪೂಜಾ ಸಿನಿಮಾಗೆ ಬೈ ಬೈ ಹೇಳಿದ್ದಾರೆ. ಇದನ್ನೂ ಓದಿ:ಲೈಂಗಿಕ ಕಿರುಕುಳ ಆರೋಪ: ಧಾರಾವಾಹಿ ನಿರ್ಮಾಪಕನ ಮೇಲೆ ಎಫ್.ಐ.ಆರ್ ದಾಖಲು

    ಸದ್ಯ ಚಿತ್ರದಿಂದ ಪೂಜಾ ಹೆಗ್ಡೆ ಹೊರನಡೆದಿದ್ದಾರೆ ಎನ್ನುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಇದರ ನಡುವೆ ತ್ರಿಷಾ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆ ಆಗಿದ್ದಾರೆ ಎನ್ನುವ ಸುದ್ದಿಯನ್ನು ಕೆಲವರು ತೇಲಿಬಿಟ್ಟಿದ್ದಾರೆ. ಈ ಹಿಂದೆ ಮಹೇಶ್ ಬಾಬು ಹಾಗೂ ತ್ರಿಷಾ ‘ಅತಡು’ ಚಿತ್ರದಲ್ಲಿ ಒಟ್ಟಿಗೆ ನಟಿಸಿದ್ದರು. ಆ ಚಿತ್ರಕ್ಕೂ ತ್ರಿವಿಕ್ರಮ್ ಆಕ್ಷನ್ ಕಟ್ ಹೇಳಿದ್ದರು. ‘ಪೊನ್ನಿಯಿನ್ ಸೆಲ್ವನ್’ 2 (Ponniyin Selvan 2) ಸರಣಿ ಚಿತ್ರದಿಂದ ತ್ರಿಷಾ ಭರ್ಜರಿ ಕಂಬ್ಯಾಕ್ ಮಾಡಿದ್ದಾರೆ.

     

    ‘ಗುಂಟೂರು ಖಾರಂ’ ಸಿನಿಮಾದಲ್ಲಿ ಮಹೇಶ್ ಬಾಬುಗೆ ನಾಯಕಿಯರಾಗಿ ಪೂಜಾ ಹೆಗ್ಡೆ, ಶ್ರೀಲೀಲಾ ಸ್ಕ್ರೀನ್  ಶೇರ್ ಮಾಡಿದ್ದರು. ಅರ್ಧ ಭಾಗ ಚಿತ್ರೀಕರಣ ಮುಗಿದಿರೋ ಬೆನ್ನಲ್ಲೇ ಪೂಜಾ ಹೆಗ್ಡೆ ಹೊರನಡೆದಿದ್ದಾರೆ. ತ್ರಿಷಾ, ಶ್ರೀಲೀಲಾ ಲೀಡ್ ನಾಯಕಿಯರಾಗಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ.