Tag: gurantee

  • ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ – ಗ್ಯಾರಂಟಿಯನ್ನು ಟೀಕಿಸಿದ ಬೆನ್ನಲ್ಲೇ ದೇಶಪಾಂಡೆ ಸ್ಪಷ್ಟನೆ

    ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ – ಗ್ಯಾರಂಟಿಯನ್ನು ಟೀಕಿಸಿದ ಬೆನ್ನಲ್ಲೇ ದೇಶಪಾಂಡೆ ಸ್ಪಷ್ಟನೆ

    ಬೆಂಗಳೂರು: ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಿ, ವಾಸ್ತವದ ವಿರುದ್ಧವಾಗಿ ಸುದ್ದಿ ಪ್ರಕಟವಾಗಿದೆ ಎಂದು ಮಾಜಿ ಸಚಿವ ಆರ್‌ವಿ ದೇಶಪಾಂಡೆ (RV Deshpande) ಹೇಳಿದ್ದಾರೆ.

    ನಾನು ಸಿಎಂ ಆಗಿದ್ದರೆ ಪಂಚ ಗ್ಯಾರಂಟಿ ಯೋಜನೆಗಳನ್ನು (Gurantee Sddcheme) ಅನುಷ್ಠಾನ ಮಾಡುತ್ತಿರಲಿಲ್ಲ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಅವರು ಸ್ಪಷ್ಟನೆ ನೀಡಿದ್ದಾರೆ.

     

    ಸ್ಪಷ್ಟನೆಯಲ್ಲಿ ಏನಿದೆ?
    ದಾಂಡೇಲಿಯಲ್ಲಿ ನಡೆದ ಸಭೆಯಲ್ಲಿ ನಾನು ಮಾತನಾಡುವ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳ ಕುರಿತು ಹೇಳುವಾಗ ನಾನು ಮುಖ್ಯಮಂತ್ರಿಯವರ ಸಮೀಪದಲ್ಲಿರುವವನು, ಆದರೆ ಸಿದ್ದರಾಮಯ್ಯನವರು ಯಾವ ಯೋಜನೆಗಳನ್ನು ಘೋಷಿಸುತ್ತಾರೆ ಎಂಬುದು ನನಗೂ ಗೊತ್ತಿರುವುದಿಲ್ಲ. ಸಿದ್ದರಾಮಯ್ಯನವರು ಪಳಗಿದ ನಾಯಕರು, ಜನನಾಯಕರಾಗಿದ್ದಾರೆ. ಬಡವರ ಪರವಾಗಿ ಹೋರಾಡುವ ನಿಜವಾದ ನಾಯಕರು. ಅವರು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿ, ಒಳ್ಳೆಯ ಆಡಳಿತ ನೀಡುತ್ತಿರುವುದು ಅವರ ಶಕ್ತಿ. ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿರುವುದು ಅವರ ಜನಪರಮನೋಭಾವದಿಂದಾಗಿದೆ ಎಂಬುದು ನನ್ನ ಮಾತಿನ ತಾತ್ಪರ್ಯವಾಗಿತ್ತು.  ಇದನ್ನೂ ಓದಿ:  ನಾನು ಸಿಎಂ ಆಗಿದ್ದಿದ್ರೆ ʻಪಂಚ ಗ್ಯಾರಂಟಿʼ ಅನುಷ್ಠಾನ ಮಾಡ್ತಿರಲಿಲ್ಲ, ಗ್ಯಾರಂಟಿ ಹೊರೆಯಾಗಿದೆ: ಆರ್.ವಿ.ದೇಶಪಾಂಡೆ

    ಈ ಮಾತಿನ ಉದ್ದೇಶ ಗ್ಯಾರಂಟಿ ಯೋಜನೆಗಳ ವಿರುದ್ಧ ಮಾತನಾಡುವುದಲ್ಲ, ಬದಲಿಗೆ ಸಿದ್ದರಾಮಯ್ಯನವರು ಬಡವರ ಪರವಾಗಿ, ಜನಪರ ನಿಲುವು ಹೊಂದಿರುವ ನಾಯಕರು ಎಂಬುದನ್ನು ಶ್ಲಾಘಿಸುವುದು ಆಗಿತ್ತು. ಅವರು ಯಾವಾಗಲೂ ಜನರ ಹಿತದೃಷ್ಟಿಯಿಂದ ನಿರ್ಧಾರಗಳನ್ನು ಕೈಗೊಳ್ಳುವ ಹಿರಿಯ ಹಾಗೂ ಅನುಭವಸಂಪನ್ನ ನಾಯಕರು. ನನ್ನ ಮಾತುಗಳ ಮೂಲಕ ನಾನು ಅವರ ಜನಪರ ನೀತಿಗಳನ್ನು ಮೆಚ್ಚಿಕೊಂಡಿದ್ದು ಹೊರತು ಟೀಕಿಸಿದ್ದಲ್ಲ. ಅಲ್ಲದೇ ನಾನು ಈ ಸಭೆಯಲ್ಲಿ ಗ್ಯಾರಂಟಿಗಳಿಂದ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎನ್ನುವ ಮಾತನ್ನು ಎಲ್ಲಿಯೂ ನಾನು ಉಲ್ಲೇಖಿಸಿರುವುದಿಲ್ಲ ಎಂದಿದ್ದಾರೆ.

  • ಐದು ಗ್ಯಾರಂಟಿ ಯೋಜನೆ ಪೂರೈಸಲು ಸರ್ಕಾರದ ಖಜಾನೆಯಲ್ಲಿ ಹಣವಿಲ್ಲ: ನಿಖಿಲ್

    ಐದು ಗ್ಯಾರಂಟಿ ಯೋಜನೆ ಪೂರೈಸಲು ಸರ್ಕಾರದ ಖಜಾನೆಯಲ್ಲಿ ಹಣವಿಲ್ಲ: ನಿಖಿಲ್

    ರಾಮನಗರ: ಐದು ಗ್ಯಾರಂಟಿ  (Gurantee) ಯೋಜನೆಯನ್ನು ಪೂರೈಸಲು ಸರ್ಕಾರದ ಖಜಾನೆಯಲ್ಲಿ ಹಣ ಇಲ್ಲ ಎಂದು ಜಿಡಿಎಸ್ (JDS) ಯುವನಾಯಕ ನಿಖಿಲ್ ಕುಮಾರಸ್ವಾಮಿ (Nikhil Kumaraswamy)  ಟೀಕಿಸಿದ್ದಾರೆ.

    ಸಿದ್ದರಾಮಯ್ಯ (Siddaramaiah)  ಬಜೆಟ್‌ನಲ್ಲಿ ರಾಮನಗರ (Ramanagara)  ಜಿಲ್ಲೆ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡದ ವಿಚಾರದ ಬಗ್ಗೆ ಮಾತನಾಡಿ, ಐದು ಗ್ಯಾರಂಟಿ ಯೋಜನೆ ಪೂರೈಸಲು ಸರ್ಕಾರ ಖಜಾನೆಯಲ್ಲಿ ಹಣ ಇಲ್ಲ. ಇಂತಹ ಪರಿಸ್ಥಿತಿಗೆ ಕಾಂಗ್ರೆಸ್ ಪಕ್ಷ ಸಿಲುಕಿದೆ. ಹಾಗಾಗಿ ಬಜೆಟ್ (Budget)  ಬಗ್ಗೆ ಆಶ್ಚರ್ಯ ಪಡುವಂತದ್ದು ಏನು ಇಲ್ಲ. ರಾಮನಗರದಲ್ಲಿ ಹಿಂದಿನ ಶಾಸಕರು ನೀಡಿದ ಅನುದಾನವನ್ನೆ ಇಟ್ಟುಕೊಂಡು ಈಗಿನ ಶಾಸಕರು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಹೋರಾಟ ಮಾಡಿ ಯಾವುದೇ ಅನುದಾನ ತಂದಿಲ್ಲ. ರಾಮನಗರ ಜಿಲ್ಲೆ ಹಾಗೂ ತಾಲೂಕು ಅಭಿವೃದ್ಧಿಗೆ ಸ್ಥಳೀಯ ಶಾಸಕರು ಮತ್ತು ಕಾಂಗ್ರೆಸ್ ಪಕ್ಷ ಗಮನಹರಿಸಿಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ:  ಶಾಲಾ-ಕಾಲೇಜುಗಳ ಅಭಿವೃದ್ಧಿಗೆ 850 ಕೋಟಿ ರೂ. ಅನುದಾನ; ಸಿಎಂಗೆ ಮಧು ಬಂಗಾರಪ್ಪ ಅಭಿನಂದನೆ

    ಲೋಕಸಭಾ ಚುನಾವಣೆ ಸಿದ್ಧತೆ ಬಗ್ಗೆ ಮಾತನಾಡಿ, ರಾಜ್ಯದ 28 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಶೀಘ್ರದಲ್ಲೇ ಬಿಡುಗಡೆ ಆಗಲಿದೆ. ಪಟ್ಟಿ ಬಿಡುಗಡೆ ಸಂಬಂಧ ಬಿಜೆಪಿ ವರಿಷ್ಠರು ದೆಹಲಿಗೆ ಕರೆದಿದ್ದಾರೆ. ನಾನೂ ಕೂಡಾ ದೆಹಲಿಗೆ ಹೋಗುತ್ತಿದ್ದೀನಿ. ಬಿಜೆಪಿ ವರಿಷ್ಠರ ಜೊತೆ ಮಾತುಕತೆ ನಡೆಸಿ ತೀರ್ಮಾನ ಮಾಡ್ತೀವಿ. ಹಳೇ ಮೈಸೂರು ಭಾಗದ ಎಲ್ಲಾ ಮುಖಂಡರನ್ನ ಕರೆದು ಸಭೆ ಮಾಡಿದ್ದೇನೆ. ಶೀಘ್ರದಲ್ಲೇ ಹಳೇ ಮೈಸೂರು ಭಾಗದ ಎಲ್ಲಾ ತಾಲೂಕುಗಳಿಗೂ ಪ್ರವಾಸ ಮಾಡುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರತಿಭಟನಾ ನಿರತರ ಮೇಲೆ ಮತ್ತೆ ಅಶ್ರುವಾಯು ದಾಳಿ – ಹೃದಯಾಘಾತದಿಂದ ರೈತ ಸಾವು!

    ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಗೆಲುವಿಗೆ ತಂತ್ರಗಾರಿಕೆ ಮಾಡ್ತೀವಿ. ನಾನು ಮಂಡ್ಯದಿಂದ ಸ್ಪರ್ಧೆ ಮಾಡಬೇಕು ಎನ್ನುವ ಭಾವನೆಯನ್ನ ಕಾರ್ಯಕರ್ತರು ವ್ಯಕ್ತಪಡಿಸಿದ್ದಾರೆ. ಕಳೆದ ಚುನಾವಣೆಯಲ್ಲಿ 5 ಲಕ್ಷಕ್ಕಿಂತ ಅಧಿಕ ಮತಗಳನ್ನ ಕೊಟ್ಟಿದ್ದರು. ಹಾಗಾಗಿ ಮಂಡ್ಯದ ಜನತೆಗೆ ನಾನು ಚಿರಋಣಿ ಆಗಿ ಇರ್ತೀನಿ. ಅದರೆ ಮೋದಿಯವರನ್ನ ಮತ್ತೊಮ್ಮೆ ಪ್ರಧಾನಿ ಮಾಡಲು ಹೋರಾಟ ಮಾಡಬೇಕಿದೆ. ರಾಜ್ಯದ 28 ಕ್ಷೇತ್ರದಲ್ಲೂ ಮೈತ್ರಿ ಅಭ್ಯರ್ಥಿಗಳನ್ನ ಗೆಲ್ಲಿಸಿ ಮೋದಿಗೆ ಉಡುಗೊರೆ ನೀಡುತ್ತೀವಿ. ನನ್ನ ಸ್ಪರ್ಧೆ ಬಗ್ಗೆ ಮುಂದೆ ಚರ್ಚೆ ಮಾಡೋಣ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಇದನ್ನೂ ಓದಿ:  ಬಜೆಟ್ ಮೊತ್ತ ನೋಡಿ ಬಿಜೆಪಿಗರಿಗೆ ಕುಳಿತುಕೊಳ್ಳಲು ಆಗದೆ ಕೈ ಹಿಸುಕಿಕೊಂಡಿದ್ದಾರೆ: ಡಿಕೆಶಿ