Tag: Gurdaspur

  • ಕ್ರೀಡಾ ಉತ್ಸವದಲ್ಲಿ ಟ್ರ್ಯಾಕ್ಟರ್ ಅಡಿಗೆ ಸಿಲುಕಿ ವ್ಯಕ್ತಿ ಸಾವು – ಟ್ರ್ಯಾಕ್ಟರ್ ಸ್ಟಂಟ್ ಬ್ಯಾನ್ ಮಾಡಿದ ಪಂಜಾಬ್

    ಕ್ರೀಡಾ ಉತ್ಸವದಲ್ಲಿ ಟ್ರ್ಯಾಕ್ಟರ್ ಅಡಿಗೆ ಸಿಲುಕಿ ವ್ಯಕ್ತಿ ಸಾವು – ಟ್ರ್ಯಾಕ್ಟರ್ ಸ್ಟಂಟ್ ಬ್ಯಾನ್ ಮಾಡಿದ ಪಂಜಾಬ್

    ಚಂಡೀಗಢ: ಪಂಜಾಬ್‌ನ (Punjab) ಗುರುದಾಸ್‌ಪುರ ಜಿಲ್ಲೆಯಲ್ಲಿ ನಡೆದ ಕ್ರೀಡಾ ಉತ್ಸವವೊಂದರಲ್ಲಿ ಸ್ಟಂಟ್‌ಮ್ಯಾನ್ (Stuntman) ಒಬ್ಬರು ಟ್ರ‍್ಯಾಕ್ಟರ್‌ನಡಿ ಸಿಲುಕಿಸಿ ಭೀಕರವಾಗಿ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯಿಂದ ಎಚ್ಚೆತ್ತ ಪಂಜಾಬ್ ಸರ್ಕಾರ ಸೋಮವಾರ ಯಾವುದೇ ರೀತಿಯ ಸ್ಟಂಟ್ ಅಥವಾ ಟ್ರ‍್ಯಾಕ್ಟರ್‌ನೊಂದಿಗೆ ಅಪಾಯಕಾರಿ ಸಾಹಸ ಪ್ರದರ್ಶನ ನೀಡುವುದನ್ನು ನಿಷೇಧಿಸಿದೆ.

    ಈ ಬಗ್ಗೆ ಎಕ್ಸ್‌ನಲ್ಲಿ ಬರೆದಿರುವ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann), ಪ್ರಿಯ ಪಂಜಾಬಿಗಳೇ, ಟ್ರಾಕ್ಟರ್ ಅನ್ನು ಗದ್ದೆಗಳ ರಾಜ ಎಂದು ಕರೆಯಲಾಗುತ್ತದೆ. ಆದರೆ ಅದನ್ನು ಸಾವಿನ ದೇವತೆಯನ್ನಾಗಿ ಮಾಡಬೇಡಿ. ಟ್ರಾಕ್ಟರ್ ಮತ್ತು ಸಂಬಂಧಿತ ಉಪಕರಣಗಳೊಂದಿಗೆ ಯಾವುದೇ ರೀತಿಯ ಸಾಹಸ ಅಥವಾ ಅಪಾಯಕಾರಿ ಪ್ರದರ್ಶನವನ್ನು ಪಂಜಾಬ್‌ನಲ್ಲಿ ನಿಷೇಧಿಸಲಾಗಿದೆ. ಈ ಸಂಬಂಧ ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಹೇಳಿದ್ದಾರೆ.

    ವರದಿಗಳ ಪ್ರಕಾರ ಪಂಜಾಬ್‌ನ ಗುರುದಾಸ್‌ಪುರದ ಬಟಾಲಾದಲ್ಲಿ ನಡೆದ ಜಾತ್ರೆಯಲ್ಲಿ ಸಾಹಸ ಪ್ರದರ್ಶಿಸುತ್ತಿದ್ದ 29 ವರ್ಷದ ಸ್ಟಂಟ್‌ಮ್ಯಾನ್‌ನ ಮೇಲೆ ಟ್ರ‍್ಯಾಕ್ಟರ್ (Tractor) ಹರಿದು ಸಾವನ್ನಪ್ಪಿದ್ದಾರೆ. ಸ್ಟಂಟ್‌ಮ್ಯಾನ್ ಅನ್ನು ಸುಖ್ಮನ್‌ದೀಪ್ ಸಿಂಗ್ ಎಂದು ಗುರುತಿಸಲಾಗಿದೆ. ಅವರು ಕ್ರೀಡಾ ಉತ್ಸವದ ಸಮಯದಲ್ಲಿ ಸಾಹಸ ಪ್ರದರ್ಶಿಸುತ್ತಿದ್ದ ಟ್ರ್ಯಾಕ್ಟರ್‌ನ ಅಡಿಗೆ ಸಿಲುಕಿ ಭೀಕರವಾಗಿ ಸಾವನ್ನಪ್ಪಿದ್ದಾರೆ. ದುರ್ಘಟನೆಗೆ ಸಂಬಂಧಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಪ್ರಚಾರದ ವೇಳೆ ಬಿಆರ್‌ಎಸ್‌ ಸಂಸದನಿಗೆ ಚಾಕು ಇರಿತ

    ವೀಡಿಯೋದಲ್ಲೇನಿದೆ?
    ಸರಚೂರು ಗ್ರಾಮದ ಕ್ರೀಡಾ ಮೈದಾನದಲ್ಲಿ ನಡೆಯುತ್ತಿದ್ದ ಉತ್ಸವದಲ್ಲಿ ಸಾಹಸ ಪ್ರದರ್ಶಿಸಲು ಸುಖ್ಮನ್‌ದೀಪ್ ಸಿಂಗ್ ತಮ್ಮ ಟ್ರ‍್ಯಾಕ್ಟರ್‌ನೊಂದಿಗೆ ಆಗಮಿಸಿದ್ದರು. ಅವರು ತಮ್ಮ ಟ್ರಾಕ್ಟರ್‌ನ ಮುಂಭಾಗದ ಚಕ್ರಗಳನ್ನು ಮೇಲಕ್ಕೆತ್ತಿ, ಹಿಂಬದಿಯ ಟೈರ್‌ಗಳನ್ನು ನೆಲದ ಮೇಲೆ ಒತ್ತಿ, ಮತ್ತು ಟ್ರ‍್ಯಾಕ್ಟರ್‌ನೊಂದಿಗೆ ಓಡಲು ಪ್ರಾರಂಭಿಸಿದ್ದರು. ಆದರೆ ಟ್ರ‍್ಯಾಕ್ಟರ್ ನಿಯಂತ್ರಣ ತಪ್ಪಿ ಜನರತ್ತ ಓಡಲಾರಂಭಿಸಿತು. ಸುಖ್ಮನ್‌ದೀಪ್ ಅದರ ನಿಯಂತ್ರಣ ಸಾಧಿಸಲು ಟ್ರ‍್ಯಾಕ್ಟರ್ ಬಳಿ ಬಂದಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ಟ್ರ‍್ಯಾಕ್ಟರ್‌ನ ಅಡಿಗೆ ಅವರು ಸಿಲುಕಿದ್ದಾರೆ. ಮೈದಾನದಲ್ಲಿದ್ದ ಇಬ್ಬರು ಟ್ರ‍್ಯಾಕ್ಟರ್ ಅಡಿಯಲ್ಲಿ ಸಿಲುಕಿದ್ದ ಸುಖ್ಮನ್‌ದೀಪ್ ಅವರನ್ನು ರಕ್ಷಿಸಲು ಪ್ರಯತ್ನಿಸಿದ್ದರು. ಆದರೆ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಭಾರತದ ನೆಲದಲ್ಲಿ ಹಮಾಸ್‌ ಕಾರ್ಯಕ್ರಮ ಬೇಕಿತ್ತಾ? – ಕೇರಳ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಂಜಾಬ್ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಸೋಲಿಗೆ ಕಾರಣವೇನು?

    ಪಂಜಾಬ್ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಸೋಲಿಗೆ ಕಾರಣವೇನು?

    ಚಂಡೀಗಢ: ಪಂಜಾಬ್‍ನ ಗುರ್‍ದಾಸಪುರ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸ್ವರನ್ ಸಲಾರಿಯಾ ಸೋಲು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯನ್ನು ಹುಟ್ಟು ಹಾಕಿದೆ. ಉಪಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿದ್ದು, ಆಡಳಿತ ರೂಢ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಜಾಕರ್ ಭರ್ಜರಿ ಗೆಲುವನ್ನು ಪಡೆದಿದ್ದಾರೆ.

    ಕಾಂಗ್ರೆಸ್ ಪಕ್ಷದ ಈ ಗೆಲುವನ್ನು ಕೇಂದ್ರದಲ್ಲಿರುವ ಎನ್‍ಡಿಎ ಸರ್ಕಾರದ ಆಡಳಿತದ ವಿರುದ್ಧದ ಜನಭಿಪ್ರಾಯ ಇದಾಗಿದ್ದು, ಈ ಮೂಲಕ ಗುರ್ದಾಸ್‍ಪುರ ಕ್ಷೇತ್ರದ ಜನರು ಕೇಂದ್ರ ಸರ್ಕಾರದ ಆಡಳಿತ ಬಗ್ಗೆ ತಮ್ಮ ಅಸಮಧಾನವನ್ನು ಹೊರ ಹಾಕಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಅದರೆ ಮಧ್ಯೆ ಹೊಸ ಅಂಶವೊಂದು ಬೆಳಕಿಗೆ ಬಂದಿದ್ದು, ಬಿಜೆಪಿ ಪಕ್ಷದ ಅಭ್ಯರ್ಥಿ ಸ್ವರನ್ ಅವರ ವಿರುದ್ಧ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣವೇ ಸೋಲಿಗೆ ಕಾರಣ ಎಂದು ಹೇಳಲಾಗುತ್ತಿದೆ.

    ಆರೋಪವೇನು? ಸ್ವರನ್ ಅವರ ವಿರುದ್ಧ 45 ವರ್ಷದ ಮುಂಬೈ ಮೂಲದ ಮಹಿಳೆ ಎಂಬವರು ಲೈಂಗಿಕ ದೌಜನ್ಯದ ದೂರನ್ನು ದಾಖಲು ಮಾಡಿದ್ದರು. ಅಲ್ಲದೇ ಅವರಿಬ್ಬರ ನಡುವಿನ ಹಲವು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆಯನ್ನು ಗೊಳಿಸಿದ್ದರು. ಮಹಿಳೆ ತಮ್ಮ ದೂರಿನಲ್ಲಿ ತಿಳಿಸಿರುವಂತೆ ತಮ್ಮನ್ನು ಮದುವೆಯಾಗುವುದಾಗಿ ಮಾತು ನೀಡಿ, 1982 ರಿಂದ 2014 ವರೆಗೇ ಸುಮಾರು 32 ವರ್ಷಗಳ ಕಾಲ ತಮ್ಮ ಮೇಲೆ ದೌರ್ಜನ್ಯವನ್ನು ಎಸಗಿದ್ದಾರೆ. ಅಲ್ಲದೆ ಆ ಅವಧಿಯಲ್ಲಿ ತಾವು ವಾಸಿಸಲು ಒಂದು ಫ್ಲಾಟ್ ಸಹ ನೀಡಿದ್ದರು ಎಂದು ತಿಳಿಸಿದ್ದರು.

    ಆದರೆ ಮಹಿಳೆಯ ಆರೋಪವನ್ನು ಸ್ವರನ್ ನಿರಾಕರಿಸಿದ್ದರು. ತಮ್ಮ ವ್ಯಕ್ತಿತ್ವಕ್ಕೆ ಕಪ್ಪು ಚುಕ್ಕೆ ತರಲು ಈ ರೀತಿ ದೂರು ನೀಡಿದ್ದಾರೆ ಎಂದು ತಿಳಿಸಿದ್ದರು. ಸ್ವರನ್ ಮೂಲತಃ ಮುಂಬೈನ ಉದ್ಯಮಿಯಾಗಿದ್ದಾರೆ.

    ಸ್ವರನ್ ಅವರು ಚುನಾವಣೆ ಆಯೋಗಕ್ಕೆ ನಾಮಪತ್ರ ಸಲ್ಲಿಕೆ ವೇಳೆ ಈ ವಿಷಯವನ್ನು ಮುಚ್ಚಿಟ್ಟಿದ್ದರು ಎಂದು ಕಾಂಗ್ರೆಸ್ ಆರೋಪಿಸಿತ್ತು. ಪಂಜಾಬ್ ಹಣಕಾಸು ಸಚಿವ ಮನ್‍ಪ್ರೀತ್ ಸಿಂಗ್ ಬಾದಲ್ ಈ ಕುರಿತು ಪ್ರತಿಕ್ರಿಯೆಯನ್ನು ನೀಡಿದ್ದು, ಬಿಜೆಪಿಯ ಅಭ್ಯರ್ಥಿಯ ವಿರುದ್ಧ 2014 ಡಿಸೆಂಬರ್ 15ರಲ್ಲಿ ಭಾರತೀಯ ದಂಡ ಸಂಹಿತೆ (ಐಪಿಸಿ)ಯ 376, 420 ಮತ್ತು 306 ರ ಸೆಕ್ಷನ್‍ಗಳ ಪ್ರಕಾರ ದೂರು ದಾಖಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    ಸುನಿಲ್ ಜಾಕರ್ ಅವರು ಒಟ್ಟು 4,99,752 ಮತಗಳನ್ನು ಗಳಿಸಿದ್ದು, ಬಿಜೆಪಿಯ ಸಲಾರಿಯಾ 3,06,533 ಮತ ಪಡೆದರೆ, ಆಪ್ ಅಭ್ಯರ್ಥಿ ಖಜುರಿಯಾ 23,579 ಮತಗಳನ್ನು ಗಳಿಸಿದ್ದಾರೆ. ಹಿರಿಯ ನಟ ಮತ್ತು ಸಂಸದರಾಗಿದ್ದ ವಿನೋದ್ ಖನ್ನಾ ಸಾವಿನ ಬಳಿಕ ಗುರುದಾಸ್‍ಪುರ ಲೋಕಸಭಾ ಕ್ಷೇತ್ರ ತೆರವಾಗಿತ್ತು. ವಿನೋದ್ ಖನ್ನಾ ಬಿಜೆಪಿ ಅಭ್ಯರ್ಥಿಯಾಗಿ ಗೆಲುವನ್ನು ಪಡೆದುಕೊಂಡಿದ್ದರು.

  • ಪಂಜಾಬ್ ಉಪಚುನಾವಣೆ ಕಾಂಗ್ರೆಸ್ ತೆಕ್ಕೆಗೆ-ಬಿಜೆಪಿಗೆ ಭಾರೀ ಮುಖಭಂಗ

    ಪಂಜಾಬ್ ಉಪಚುನಾವಣೆ ಕಾಂಗ್ರೆಸ್ ತೆಕ್ಕೆಗೆ-ಬಿಜೆಪಿಗೆ ಭಾರೀ ಮುಖಭಂಗ

    ಚಂಡೀಗಢ: ಪಂಜಾಬ್ ನ ಗುರ್‍ದಾಸ್‍ಪುರ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಫಲಿತಾಂಶ ರಾಜಕೀಯ ವಲಯದಲ್ಲಿ ಭಾರೀ ಕೂತೂಹಲವನ್ನು ಹುಟ್ಟುಹಾಕಿತ್ತು. ಉಪಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿದ್ದು, ಆಡಳಿತ ರೂಢ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವನ್ನು ಪಡೆದುಕೊಂಡಿದೆ.

    ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಜಾಕರ್ ತಮ್ಮ ಪ್ರತಿ ಸ್ಪರ್ಧಿ ಬಿಜೆಪಿಯ ಸ್ವರನ್ ಸಲಾರಿಯಾ ಅವರಿಂದ ಸುಮಾರು 1,93,219 ಮತಗಳ ಅಂತರದಿಂದ ಗೆಲುವನ್ನು ಪಡೆದಿದ್ದಾರೆ. ಕೇಂದ್ರದಲ್ಲಿಯ ಎನ್‍ಡಿಎ ಸರ್ಕಾರದ ಆಡಳಿತದ ಜನಮತಸಂಗ್ರಹ ಇದಾಗಿದ್ದು, ಗುರ್‍ದಾಸ್‍ಪುರ ಕ್ಷೇತ್ರದ ಜನರು ಕೇಂದ್ರದಲ್ಲಿರುವ ಸರ್ಕಾರದ ಆಡಳಿತ ವಿರುದ್ಧ ತಮ್ಮ ಅಸಮಧಾನವನ್ನು ಹೊರ ಹಾಕಿದ್ದಾರೆ ಎಂದು ಸುನಿಲ್ ಜಾಕರ್ ತಿಳಿಸಿದ್ದಾರೆ.

    ಕೇವಲ ಆರು ತಿಂಗಳು ಹಿಂದೆ ರಾಜ್ಯ ಚುಕ್ಕಾಣಿ ಹಿಡಿದಿದ್ದ ಕಾಂಗ್ರೆಸ್ ಪಕ್ಷಕ್ಕೆ ಗುರ್‍ದಾಸ್‍ಪುರ ಉಪ ಚುನಾವಣೆ ಪ್ರತಿಷ್ಠೆಯ ಕಣವಾಗಿ ಏರ್ಪಟ್ಟಿತ್ತು. ಇನ್ನೂ ಬಿಜೆಪಿಗೂ ಉಪಚುನಾವಣೆ ಗೆಲ್ಲುವುದು ಅನಿವಾರ್ಯವಾಗಿತ್ತು. ಆಪ್ ಸಹ ತನ್ನಪಕ್ಷದಿಂದ ನಿವೃತ್ತ ಮೇಜರ್ ಜನರಲ್ ಸುರೇಶ್ ಖಜುರಿಯಾ ಅವರನ್ನು ಕಣಕ್ಕೀಳಿಸಿತ್ತು. ಆದರೆ ಖಜುರಿಯಾ ಕೇವಲ 23,579 ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

    ಸುನಿಲ್ ಜಾಕರ್ ಅವರು ಒಟ್ಟು 4,99,752 ಮತಗಳನ್ನು ಗಳಿಸಿದ್ದು, ಬಿಜೆಪಿಯ ಸಲಾರಿಯಾ 3,06,533 ಮತ ಪಡೆದರೆ, ಆಪ್ ಅಭ್ಯರ್ಥಿ ಖಜುರಿಯಾ 23,579 ಮತಗಳನ್ನು ಗಳಿಸಿದ್ದಾರೆ.

    ಹಿರಿಯ ನಟ ಮತ್ತು ಸಂಸದರಾಗಿದ್ದ ವಿನೋದ್ ಖನ್ನಾ ಸಾವಿನ ಬಳಿಕ ಗುರುದಾಸ್‍ಪುರ ಲೋಕಸಭಾ ಕ್ಷೇತ್ರ ತೆರವಾಗಿತ್ತು. ವಿನೋದ್ ಖನ್ನಾ ಬಿಜೆಪಿ ಅಭ್ಯರ್ಥಿಯಾಗಿ ಗೆಲುವನ್ನು ಪಡೆದುಕೊಂಡಿದ್ದರು. ಪಂಜಾಬ್ ಮುಖ್ಯಮಂತ್ರಿ ಆಗಿರುವ ಅಮರಿಂದರ್ ಸಿಂಗ್ ಅವರು ಸುಬಿಲ್ ಜಾಕರ್ ಅವರಿಗೆ ಶುಭಾಶಯವನ್ನು ತಿಳಿಸಿದ್ದಾರೆ.

    ಗೆಲುವಿನ ಬಳಿಕ ಪ್ರತಿಕ್ರಿಯಿಸಿದ ಸಚಿವ ಹಾಗೂ ಮಾಜಿ ಕ್ರಿಕೆಟಿಗ ಇದು ರಾಹುಲ್ ಗಾಂಧಿ ಅವರಿಗೆ ದೀಪಾವಳಿಯ ಉಡುಗೊರೆ ನೀಡಿದ್ದೇವೆ ಎಂದು ತಿಳಿಸಿದ್ದಾರೆ.