Tag: Guru

  • ತನ್ನ ನೆಚ್ಚಿನ ಗುರುವನ್ನು ಪರಿಚಯಿಸಿ ಧನ್ಯವಾದ ಹೇಳಿದ ಧ್ರುವ ಸರ್ಜಾ

    ತನ್ನ ನೆಚ್ಚಿನ ಗುರುವನ್ನು ಪರಿಚಯಿಸಿ ಧನ್ಯವಾದ ಹೇಳಿದ ಧ್ರುವ ಸರ್ಜಾ

    ಬೆಂಗಳೂರು: ಟ್ವಿಟ್ಟರ್ ಚಾಲೆಂಜ್‍ನಲ್ಲಿ ಧ್ರುವ ಸರ್ಜಾ, ಚಿರುನನ್ನು ನೆನೆದು ನನ್ನ ಗುರು ನನ್ನ ಅಣ್ಣ ಎಂದು ಟ್ವೀಟ್ ಮಾಡಿದ್ದಾರೆ.

    ಯುವರತ್ನ ಸಿನಿಮಾ ಬಿಡುಗಡೆಗೆ ಸಿದ್ದವಾಗಿದೆ. ಈಗಾಗಲೇ ಚಿತ್ರದ ಪ್ರೋಮೋಷನ್ ಶುರುವಾಗಿದೆ. ಚಿತ್ರತಂಡ ಟ್ವಿಟ್ಟರ್‍ನಲ್ಲಿ ಒಂದು ಚಾಲೆಂಜ್ ಕಂಟೆಸ್ಟ್ ಆರಂಭಿಸಿದ್ದಾರೆ. ನಿಮ್ಮ ಜೀವನದಲ್ಲಿ ನಿಮ್ಮನ್ನು ಸರಿ ದಾರಿಗೆ ನಡೆಸಿದ ಗುರುವಿನ ಫೋಟೋ ಹಾಕುವ ಮೂಲಕವಾಗಿ ಪರಿಚಯಿಸಬೇಕು ಎಂದು ಹೇಳಿದ್ದರು. ತಮ್ಮ ನೆಚ್ಚಿನ ಗುರುವನ್ನು ಧ್ರುವ ಸರ್ಜಾ ಪರಿಚಯಿಸಿ ಧನ್ಯವಾದ ತಿಳಿಸಿದ್ದಾರೆ.

    ಧ್ರುವ ಸರ್ಜಾ ತಮ್ಮ ಅಣ್ಣ ಚಿರಂಜೀವಿ ಸರ್ಜಾ ಜೊತೆಗಿರುವ ಫೋಟೋವನ್ನು ಹಂಚಿಕೊಂಡು ಬಾಳೆಂಬ ಮೊಳಕೆ ಚಿಗುರೊಡೆಯಲು ಮಳೆಯಾದೆ, ಹೂವಾಗಿ ಅರಳಲು ಸ್ಪೂರ್ತಿಯ ಸೂರ್ಯನಾದೆ, ವೃಕ್ಷವಾಗಿ ಬೆಳೆಯಲು ಆಸರೆಯ ಭೂಮಿಯಾದೆ, ನನ್ನ ಅಣ್ಣ ನನ್ನ ಗುರು ಎಂದು ಬರೆದುಕೊಂಡಿದ್ದಾರೆ.

    ಚಿರುವನ್ನು ಕಳೆದುಕೊಂಡ ಧ್ರುವ ಸರ್ಜಾ ತಮ್ಮ ಅಣ್ಣನನ್ನ ನೆನೆದು ಕಣ್ಣಿರು ಹಾಕುತ್ತಾ ಬೇಸರವನ್ನು ವ್ಯಕ್ತಪಡಿಸುತ್ತಲೇ ಇರುತ್ತಾರೆ. ಕೆಆರ್‍ಜಿ ಸ್ಟೂಡಿಯೋ ಸಂಸ್ಥೆ ಮಾಲೀಕನಾದ ಕಾರ್ತಿಕ್ ಗೌಡ ಅವರು ಹಾಕಿರುವ ಚಾಲೆಂಜ್ ಸ್ವೀಕರಿಸಿದ ಧ್ರುವ ಸರ್ಜಾ ಅಣ್ಣನನ್ನು ತನ್ನ ಗುರು ಎಂದು ಹೇಳಿದ್ದಾರೆ.

    ಯುವರತ್ನ ಸಿನಿಮಾ ತಂಡ ಹಾಕಿರುವ ಚಾಲೆಂಜ್‍ಅನ್ನು ಹಲವು ನಟ ನಟಿಯರು, ನಿರ್ದೇಶಕರು ತಮ್ಮ ನೆಚ್ಚಿನ ಗುರುವನ್ನು ಪರಿಚಯಿಸುವ ಮೂಲಕವಾಗಿ ಜೀವನದಲ್ಲಿ ಹೊಸ ದಾರಿ ತೋರಿಸಿಕೊಟ್ಟ ಗುರುವಿಗೆ ಧನ್ಯವಾದವನ್ನು ಈ ಮೂಲಕವಾಗಿ ಹೇಳುತ್ತಿದ್ದಾರೆ.

  • ಹುತಾತ್ಮ ಯೋಧ ಗುರು ಕುಟುಂಬದಲ್ಲಿ ಬಗೆಹರಿಯದ ಕಲಹ

    ಹುತಾತ್ಮ ಯೋಧ ಗುರು ಕುಟುಂಬದಲ್ಲಿ ಬಗೆಹರಿಯದ ಕಲಹ

    – ಸಮಾಧಿಗೆ ಪತ್ನಿ, ಪೋಷಕರಿಂದ ಪ್ರತ್ಯೇಕ ಪೂಜೆ

    ಮಂಡ್ಯ: ಪುಲ್ವಾಮಾ ದಾಳಿ ನಡೆದು ನಾಳೆಗೆ ಎರಡು ವರ್ಷಗಳು ಕಳೆಯುತ್ತಿವೆ. ಈ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಗುಡಿಗೆರೆಯ ಯೋಧ ಗುರು ಅವರು ಸಹ ಹುತಾತ್ಮರಾಗಿದ್ದರು. ಈ ಕಹಿ ಘಟನೆಯನ್ನು ಇಡೀ ದೇಶ ಇಂದಿಗೂ ಸಹ ಮರೆತಿಲ್ಲ.

    ಗುರು ಅವರು ಹುತಾತ್ಮರಾದ ಬಳಿಕ, ಗುರು ಅವರ ಕುಟುಂಬಕ್ಕೆ ಸರ್ಕಾರಗಳು, ಕರ್ನಾಟಕ ಸೇರಿದಂತೆ ದೇಶದ ನಾನಾ ಭಾಗದಿಂದ ಅಪಾರ ಪ್ರಮಾಣದ ಹಣ ಬರಿದು ಬಂದಿದೆ. ಆ ಹಣ ಬಂದಿದ್ದೇ ಏನೋ ಗೊತ್ತಿಲ್ಲ, ಗುರು ಕುಟುಂಬದಲ್ಲಿ ಅಂದು ನಿರ್ಮಾಣವಾದ ಕಲಹ ಇಂದಿಗೂ ಸಹ ನಿಂತಿಲ್ಲ. ಕಳೆದ ವರ್ಷ ಗುರು ಪತ್ನಿ ಹಾಗೂ ಅಪ್ಪ-ಅಮ್ಮ, ತಮ್ಮ ಪ್ರತ್ಯೇಕವಾಗಿ ಗುರು ಸಮಾಧಿಗೆ ಪೂಜೆ ಸಲ್ಲಿಸಿದ್ದರು.

    ಈ ವೇಳೆ ಗುರು ಪತ್ನಿ ತನ್ನ ಅತ್ತೆ-ಮಾವ ಹಾಗೂ ಮೈದುನನ ಬಗ್ಗೆ ಆರೋಪಗಳನ್ನು ಮಾಡಿದ್ದರೆ, ಗುರುವಿನ ತಾಯಿಯೂ ಸಹ ಸೊಸೆಯ ಬಗ್ಗೆ ಕೆಲ ಆರೋಪಗಳನ್ನು ಮಾಡುವ ಮೂಲಕ ಗುರು ಕುಟುಂಬದಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದಕ್ಕೆ ಪುಷ್ಟಿ ನೀಡಿದ್ದರು. ಇದೀಗ ನಾಳೆಯೂ ಸಹ ಗುರುವಿನ ಸಮಾಧಿಗೆ, ಗುರು ಹೆಂಡತಿ ಹಾಗೂ ಪೋಷಕರು ಪ್ರತ್ಯೇಕವಾಗಿ ಪೂಜೆ ಸಲ್ಲಿಸಲಿದ್ದಾರೆ. ಈ ಮೂಲಕ ಹುತಾತ್ಮ ಯೋಧ ಗುರು ಅವರ ಕುಟುಂಬದಲ್ಲಿ ಕಲಹ ನಿಂತಿಲ್ಲ ಎಂದು ಸ್ಪಷ್ಟವಾಗಿ ಗೋಚರವಾಗುತ್ತಿದೆ.

  • ದೇಶ ಕಾಯುವ ಜೊತೆ ಗುರು ನಮ್ಮ ಮನೆಯನ್ನು ಕಾಯುತ್ತಿದ್ದ – ತಾಯಿ ಚಿಕ್ಕತಾಯಮ್ಮ

    ದೇಶ ಕಾಯುವ ಜೊತೆ ಗುರು ನಮ್ಮ ಮನೆಯನ್ನು ಕಾಯುತ್ತಿದ್ದ – ತಾಯಿ ಚಿಕ್ಕತಾಯಮ್ಮ

    – ಗುರು ಸಮಾಧಿಗೆ ಕುಟುಂಬಸ್ಥರಿಂದ ಪೂಜೆ
    – ಸೊಸೆ ಬೆಂಗಳೂರಿನಲ್ಲಿದ್ದಾಳೆ, ಮನೆಯಲ್ಲಿ ಇಲ್ಲ

    ಮಂಡ್ಯ: ಇಂದು ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕ ದಾಳಿ ನಡೆದು 40 ಮಂದಿ ವೀರಯೋಧರು ಹುತಾತ್ಮರಾಗಿದ್ದರು. ಇವರಲ್ಲಿ ಮಂಡ್ಯ ಜಿಲ್ಲೆಯ ಕೆ.ಎಂ ದೊಡ್ಡಿಯಲ್ಲಿರುವ ಸಿಆರ್​ಪಿಎಫ್ ಯೋಧ ಗುರು ಕೂಡ ಒಬ್ಬರು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಗುರು ಅವರ ಸಮಾಧಿಗೆ ಪೂಜೆ ಸಲ್ಲಿಸಿದರು.

    ಪೂಜೆ ವೇಳೆ ಗುರು ಅವರ ತಾಯಿ ಚಿಕ್ಕತಾಯಮ್ಮ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಈ ಘಟನೆಯಿಂದ ನನಗೆ ತುಂಬಾ ಸಂಕಟವಾಗುತ್ತೆ. ನನ್ನ ಮಗ ಈಗ ಹಿಂತಿರುಗಿ ಬರುವುದಿಲ್ಲ. ಇಂದು ಇಲ್ಲಿ ಪೂಜೆ ಇಟ್ಟುಕೊಂಡಿದ್ದೇವೆ. ನನ್ನ ಸೊಸೆ ಕಲಾವತಿ ಆಕೆ ತನ್ನ ಅಪ್ಪನ ಮನೆಯಲ್ಲಿದ್ದು, ನಮ್ಮ ಮನೆಗೆ ಬರುತ್ತಿಲ್ಲ. ಹಣದ ವಿಚಾರದಲ್ಲಿ ನಾವೇನು ಜಗಳವಾಡಿಲ್ಲ. ಇಬ್ಬರು ಮನೆಯಲ್ಲಿ ಕುಳಿತುಕೊಂಡು ಹಣವನ್ನು ಹಂಚಿಕೊಂಡಿದ್ದೇವೆ ಹೊರತು ಯಾವುದೇ ಜಗಳವಾಡಿಲ್ಲ. ಬೇಡದಿರುವ ವಿಚಾರದ ಬಗ್ಗೆ ಮಾತನಾಡುವುದರಲ್ಲಿ ಯಾವುದೇ ಪ್ರಯೋಜನ ಇಲ್ಲ. ಎಷ್ಟೇ ಹಣ ಇದ್ದರೂ ಮಗ ಇದ್ದ ಹಾಗೇ ಇರುವುದಿಲ್ಲ. ನನ್ನ ಮಗ ಬದುಕಿದ್ದರೆ ಅದರ ಹತ್ತರಷ್ಟು ಹಣ ಸಂಪಾದಿಸುತ್ತಿದ್ದನು ಎಂದು ಹೇಳಿದರು. ಇದನ್ನೂ ಓದಿ: ಭಾರತಕ್ಕಿಂದು ಕರಾಳ ದಿನ – ಪುಲ್ವಾಮಾ ದಾಳಿಗೆ 1 ವರ್ಷ

    15 ದಿನಗಳ ಹಿಂದೆ ನನ್ನ ಸೊಸೆ ಕರೆ ಮಾಡಿ ಏನೂ ಕಾರ್ಯಕ್ರಮ ಮಾಡಬೇಕು ಎಂದು ಕೇಳಿದ್ದಳು. ಆಗ ನಾನು, ನಮ್ಮ ಹುಡುಗರು ಏನು ಮಾಡಬೇಕು ಎಂದುಕೊಂಡಿದ್ದಾರೆ ನನಗೆ ಗೊತ್ತಿಲ್ಲ ಎಂದು ಹೇಳಿದ್ದೆ. ನನ್ನ ಸೊಸೆ ಕಲಾವತಿ ಪೂಜೆ ಸಲ್ಲಿಸಲು ಬರುತ್ತಾಳೋ ಇಲ್ಲವೋ ಗೊತ್ತಿಲ್ಲ. ನಮ್ಮ ಸೊಸೆ ಈಗ ಜೊತೆಯಲ್ಲಿಲ್ಲ. ನನ್ನ ಮಗನ ಸಾವಿನ ಬಳಿಕ ಕಲಾವತಿ ಬೆಂಗಳೂರಿಗೆ ಹೋದಳು. ಮಂಡ್ಯಕ್ಕೆ ಬರುತ್ತಾಳೆ ಎಂದು ಎಲ್ಲರೂ ಹೇಳುತ್ತಾರೆ, ಆದರೆ ಅವರು ನಮ್ಮ ಮನೆಗೆ ಬರುವುದಿಲ್ಲ. ಆಕೆ ಜೊತೆ ನಮ್ಮ ಸಂಪರ್ಕದಲ್ಲಿ ಇಲ್ಲ. ಆದರೆ ನಾವೇನು ಜಗಳವಾಡಿಲ್ಲ ಎಂದರು. ಇದನ್ನೂ ಓದಿ: ಪುಲ್ವಾಮಾ ಕೇಸ್ – ಎನ್‍ಐಎ ತನಿಖೆ ಎಲ್ಲಿಯವರೆಗೆ ಬಂದಿದೆ? ‘ಕೀ’ ಯಿಂದ ಕೇಸ್ ಓಪನ್ ಆದ ರೋಚಕ ಕಥೆ ಓದಿ

    ನಾವು ನಮ್ಮ ಸೊಸೆ ಈಗ ಜೊತೆಯಲ್ಲಿ ಇಲ್ಲ. ನನ್ನ ಮಗ ಇದ್ದಾಗ ಸೊಸೆಯನ್ನು ಮಗಳಂತೆ ನೋಡಿಕೊಂಡಿದ್ದೆ. ನನ್ನ ಮಗ ಗುರು ನಮ್ಮಲ್ಲಿ ಏನೇ ಜಗಳವಾದರೂ ಅದನ್ನು ಸರಿಪಡಿಸುತ್ತಿದ್ದನು. ದೇಶ ಕಾಯುವ ಜೊತೆ ನಮ್ಮ ಮನೆಯನ್ನೂ ಗುರು ಕಾಯುತ್ತಿದ್ದನು. ಈಗ ಅವನು ದೇಶದ ಮಗನಾಗಿದ್ದಾನೆ. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಎಂಬ ಹೆಮ್ಮೆ ನಮಗಿದೆ. ಗುರು ಹುತಾತ್ಮನಾದಾಗ ಸಾವಿರಾರು ಜನ ನಮಗೆ ಸಾಂತ್ವಾನ ಹೇಳಿದ್ದರು. ಅವರೆಲ್ಲರಿಗೂ ನನ್ನ ಧನ್ಯವಾದ ಎಂದು ಚಿಕ್ಕತಾಯಮ್ಮ ಮಗನನ್ನು ನೆನಪಿಸಿಕೊಂಡು ಕಣ್ಣೀರು ಹಾಕಿದರು.

  • ಅಣ್ಣಾವ್ರ ಹುಟ್ಟುಹಬ್ಬದ ದಿನವೇ ಮಗನ ಮದ್ವೆ – ಕಾರಣ ಬಿಚ್ಚಿಟ್ಟ ಜಗ್ಗೇಶ್

    ಅಣ್ಣಾವ್ರ ಹುಟ್ಟುಹಬ್ಬದ ದಿನವೇ ಮಗನ ಮದ್ವೆ – ಕಾರಣ ಬಿಚ್ಚಿಟ್ಟ ಜಗ್ಗೇಶ್

    ಬೆಂಗಳೂರು: ನವರಸ ನಾಯಕ ಜಗ್ಗೇಶ್ ವರನಟ ನಟ ಡಾ.ರಾಜ್‍ಕುಮಾರ್ ಅವರ ಹುಟ್ಟುಹಬ್ಬದ ದಿನವೇ ತಮ್ಮ ಗುರು ಜಗ್ಗೇಶ್ ಅವರ ಮದುವೆ ಮಾಡಿಸಿ ತಮ್ಮ ಅಭಿಮಾನವನ್ನು ಮೆರೆದಿದ್ದರು. ಹೀಗಾಗಿ ಆ ದಿನವೇ ಮಗನ ಮದುವೆ ಮಾಡಿಸಿದ್ದು, ಯಾಕೆ ಎನ್ನುವುದನ್ನು ಹಂಚಿಕೊಂಡಿದ್ದಾರೆ.

    ಕಳೆದ ದಿನ ರಾ.ರಾಜ್‍ಕುಮಾರ್ ಅವರ 90ನೇ ಹುಟ್ಟುಹಬ್ಬವನ್ನು ಅಭಿಮಾನಿಗಳು ಆಚರಿಸಿದ್ದಾರೆ. ನಟ ಜಗ್ಗೇಶ್ ಅವರಿಗೆ ಅಣ್ಣಾವ್ರು ಎಂದರೆ ತುಂಬಾ ಅಭಿಮಾನ. ಹೀಗಾಗಿ ಅವರ ಹುಟ್ಟಹಬ್ಬದ ಪ್ರಯುಕ್ತ ಕುಟುಂಬರೆಲ್ಲರೂ ಒಟ್ಟಾಗಿ ಸೇರಿ ಆಚರಿಸಿದ್ದಾರೆ. ಇದೇ ವೇಳೆ ತಮ್ಮ ಮಗ ಗುರು ಅವರ ಮದುವೆಯನ್ನು ರಾಜ್‍ಕುಮಾರ್ ಅವರ ಜನ್ಮದಿನವೇ ಮಾಡಿರುವ ಬಗ್ಗೆ ಹೇಳಿಕೊಂಡಿದ್ದಾರೆ.

    “ರಾಜಣ್ಣನ ನೆನಪು ಸದಾ ನನ್ನ ಮಾನಸದಲ್ಲಿ ಉಳಿಸಿಕೊಳ್ಳಲು, ನನ್ನ ಹಿರಿಯ ಮಗ ಗುರು ಜಗ್ಗೇಶ್‍ಗೆ 2014ರ ಏಪ್ರಿಲ್ 24 ರಂದು ರಾಜಣ್ಣನ ಹುಟ್ಟುಹಬ್ಬದ ದಿನ ಮದುವೆ ಮಾಡಿಸಿದ್ದೆ. ಹಾಗಾಗಿ ರಾಜಣ್ಣನ ಹುಟ್ಟುಹಬ್ಬ ನಮ್ಮ ಮನೆಯಲ್ಲಿಯು ಭಾವನಾತ್ಮಕವಾಗಿ ಬೆಸೆದಿದೆ” ಎಂದು ಬರೆದು ಇನ್‍ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ಜೊತೆ ತಮ್ಮ ಮಗನ ಮದುವೆ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ.

    https://www.instagram.com/p/Bwn7ctqjeVO/

  • ಪಾಕಿಸ್ತಾನವನ್ನು ಯಾಕೆ ಸುಮ್ನೆ ಬಿಡ್ತಿದ್ದಾರೆ ಗೊತ್ತಿಲ್ಲ: ಗುರು ಪತ್ನಿ ಗರಂ

    ಪಾಕಿಸ್ತಾನವನ್ನು ಯಾಕೆ ಸುಮ್ನೆ ಬಿಡ್ತಿದ್ದಾರೆ ಗೊತ್ತಿಲ್ಲ: ಗುರು ಪತ್ನಿ ಗರಂ

    ಧಾರವಾಡ: ಮಂಡ್ಯದ ಹುತಾತ್ಮ ಯೋಧ ಗುರು ಕುಟುಂಬ ಧಾರವಾಡಕ್ಕೆ ಭೇಟಿ ನೀಡಿತು. ಈ ವೇಳೆ ಗುರು ಕುಟುಂಬದಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ಕಾರ್ಗಿಲ್ ಸ್ಥೂಪಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

    ಬಳಿಕ ಮಾತನಾಡಿದ ಗುರು ಪತ್ನಿ ಕಲಾವತಿ, ಸೈನಿಕರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು. ಸೈನಿಕರಿಗೂ ಭದ್ರತೆ ಕೊಡಬೇಕು. ಭಾರತೀಯ ಸೈನಿಕರನ್ನು ಇಷ್ಟೆಲ್ಲ ಸಾಯಿಸಿದ್ರೂ ಪಾಕಿಸ್ತಾನವನ್ನು ಯಾಕೆ ಸುಮ್ಮನೆ ಬಿಡ್ತಾ ಇದ್ದಾರೆ ಗೊತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

    ಅಲ್ಲದೆ ಇಷ್ಟು ಜನ ಸೈನಿಕರನ್ನು ನಾವು ಕಳೆದುಕೊಳ್ಳುತ್ತಲೇ ಇದ್ದೇವೆ ಎಂದು ದುಃಖ ತೊಡಿಕೊಂಡರು. ಪಾಕ್‍ನಲ್ಲಿ ಸೈನಿಕರನ್ನು ಕಳೆದುಕೊಳ್ಳುವ ಸ್ಥಿತಿ ಇಲ್ಲ, ಪಾಕ್ ಮೇಲೆ ಭಾರತೀಯ ಸೈನಿಕರು ದಾಳಿ ಮಾಡಬೇಕು ಎಂದು ಕಲಾವತಿ ಆಗ್ರಹಿಸಿದ್ದಾರೆ.

    ನಮ್ಮ ಎಷ್ಟು ಜನ ಸೈನಿಕರನ್ನು ಅವರು ಸಾಯಿಸಿದ್ದಾರೆಯೋ ಅದರ ಎರಡು ಪಟ್ಟು ಪಾಕ್ ಸೈನಿಕರನ್ನು ಸಾಯಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಈ ಕಾರ್ಯ ಮಾಡಬೇಕು ಎಂದು ಅವರು ಒತ್ತಾಯಿಸಿದರು. ಇದೇ ವೇಳೇ ಗುರು ತಂದೆ ಮಾತನಾಡಿ, ನನ್ನ ಮಗ ಇಡೀ ಭಾರತಕ್ಕೆ ಮಗನಾಗಿ ಹೋದ ಎಂದು ಹೇಳಿ ಕಣ್ಣೀರು ಹಾಕಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮತ್ತೊಬ್ಬ ಮಗ ವಾಪಸ್ ಬರ್ತಿದ್ದಾರೆ – ಗುರು ಪೋಷಕರ ಸಂತಸ

    ಮತ್ತೊಬ್ಬ ಮಗ ವಾಪಸ್ ಬರ್ತಿದ್ದಾರೆ – ಗುರು ಪೋಷಕರ ಸಂತಸ

    – ಬಿಬಿಎಂಪಿ ವತಿಯಿಂದ 25 ಲಕ್ಷ ರೂ. ಪರಿಹಾರ

    ಬೆಂಗಳೂರು: ವಿಂಗ್ ಕಮಾಂಡರ್ ಅಭಿನಂದನ್ ಭಾರತಕ್ಕೆ ವಾಪಸ್ ಕರೆತರುತ್ತಿರುವುದು ಸಂತಸ ವಿಷಯ. ನಮ್ಮ ಸಹೋದರರ ನೋವಿನಲ್ಲೂ ಅವರು ವಾಪಸ್ ಬರುತ್ತಿರುವುದು ಸಂತಸ ತಂದಿದೆ ಎಂದು ಯೋಧರ ಗುರು ಅವರ ಪೋಷಕರು ಹೇಳಿದ್ದಾರೆ.

    ಬಿಬಿಎಂಪಿ ಕಚೇರಿಗೆ ಆಗಮಿಸಿದ್ದ ವೇಳೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಅಭಿನಂದನ್ ವಾಪಸ್ ಬರುತ್ತಿರುವುದು ನಮ್ಮ ಮತ್ತೊಬ್ಬ ಮಗ ವಾಪಸ್ ಬರುತ್ತಿದಂತೆ ಎನಿಸುತ್ತಿದೆ ಎಂದರು. ಇದೇ ವೇಳೆ ಮಾತನಾಡಿದ ಗುರು ಸಹೋದರ, ನನ್ನ ದೊಡ್ಡಣ್ಣ ವಾಪಸ್ ಬರುತ್ತಿದ್ದಾರೆ. ಆದರೆ ನಮ್ಮನ್ನು ಮೋಸ ಮಾಡಿದವರು ಈ ದೇಶದಲ್ಲಿ ಮತ್ತೆ ಉಳಿದಂತೆ ಮಾಡಬೇಕು ಎಂದರು.

    ಈ ವೇಳೆ ಮಾತನಾಡಿದ ಬಿಬಿಎಂಪಿ ಮೇಯರ್ ಅವರು, ಪಾಲಿಕೆ ವತಿಯಿಂದ 25 ಲಕ್ಷ ರೂ. ಪರಿಹಾರ ನೀಡಲಾಗಿದೆ. ಬಿಬಿಎಂಪಿ ಸದಸ್ಯರ ಗೌರವಧನ ಹಾಗು ನೌಕರರ ಹಣ ಒಟ್ಟು ಸೇರಿ ಹಣ ನೀಡಲಾಗಿದೆ. ಅಲ್ಲದೇ ಪಾಲಿಕೆ ನೌಕರರು ಸ್ವಾತಂತ್ರ್ಯ ಉದ್ಯಾನವನದಲ್ಲಿ ಯೋಧ ಗುರು ಅವರ ಪ್ರತಿಮೆಯನ್ನು ನಿರ್ಮಿಸಲು ಮನವಿ ಮಾಡಿದ್ದಾರೆ. ಈ ಕುರಿತು ಕೌನ್ಸಿಲ್ ಸಭೆಯಲ್ಲಿ ಪ್ರಸ್ತಾಪ ಮಾಡಿ ನಿರ್ಣಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    ಇದೇ ವೇಳೆ ತಮ್ಮ ಕುಟುಂಬದಲ್ಲಿ ಯಾವುದೇ ರೀತಿಯ ಅಸಮಾಧಾನ ಇಲ್ಲ ಎಂದು ಸ್ಪಷ್ಟಪಡಿಸಿದ ಗುರು ಅವರ ತಾಯಿ ಚಿಕ್ತಾಯಮ್ಮ ಅವರು, ನಿಮ್ಮೆಲರ ಸಹಾಯದಿಂದ ನಾವು ಮತ್ತೆ ನಗು ಕಾಣಲು ಸಾಧ್ಯವಾಗುತ್ತಿದೆ. ಅತ್ತೆ, ಸೊಸೆ ಮಧ್ಯೆ ಜಗಳ ಹಾಗೂ ಪೊಲೀಸ್ ಠಾಣೆಯ ಮೆಟ್ಟಿಲೆರಿದ್ದಾರೆ ಎಂದು ವರದಿಯಾಗಿದೆ. ಆದರೆ ಅಂತಹ ಯಾವುದೇ ಘಟನೆ ನಡೆದಿಲ್ಲ. ನಮ್ಮ ಸೊಸೆ ಮಗಳ ರೀತಿ ಇದ್ದೇವೆ. ಜನರ ಮಾತಿನಿಂದ ಮತ್ತೆ ನೋವು ಆಗುತ್ತಿದೆ. ದಯವಿಟ್ಟು ಇದನ್ನೆಲ್ಲ ಯಾರೂ ನಂಬಬೇಡಿ, ಸದ್ಯ ನಮಗೇ ಹಣಕ್ಕಿಂತ ನೆಮ್ಮದಿ ಬೇಕು ಅಷ್ಟೇ ಎಂದು ಸ್ಪಷ್ಟಪಡಿಸಿದರು.

    ಮಗನ ಸುದ್ದಿ ಕೇಳಿ ಮನೆಯಲ್ಲಿ ಯಾರು ಒಂದು ವಾರ ಅನ್ನ ತಿನ್ನಲು ಆಗದ ಸ್ಥಿತಿ ಇತ್ತು. ಸದ್ಯ ಸರ್ಕಾರ ಉದ್ಯೋಗ ನೀಡುವ ಭರವಸೆ ನೀಡಿದೆ. ನನಗೆ ಹಣ ಬೇಡ, ನಮ್ಮ ಗೌರವ ಉಳಿಸಿಕೊಂಡರೆ ಸಾಕು ಎಂದು ಕಣ್ಣೀರಿಟ್ಟರು. ಈ ವೇಳೆ ಗುರು ತಂದೆ ಹೊನ್ನಯ್ಯ ಹಾಗೂ ಸಹೋದರ ಹಾಜರಿದ್ದರು.

    ಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಇಂದು ಹುತಾತ್ಮ ಯೋಧ ಗುರು ತಿಥಿ ಕಾರ್ಯ – ಇಂದೇ ಪಾಕ್ ಉಗ್ರರು ಮಟಾಷ್

    ಇಂದು ಹುತಾತ್ಮ ಯೋಧ ಗುರು ತಿಥಿ ಕಾರ್ಯ – ಇಂದೇ ಪಾಕ್ ಉಗ್ರರು ಮಟಾಷ್

    ಮಂಡ್ಯ: ಇಂದು ಹುತಾತ್ಮ ಯೋಧ ಗುರು ಅವರ ಹನ್ನೊಂದನೆ ದಿನದ ತಿಥಿ ಕಾರ್ಯವಿದ್ದು, ಗುರು ಅಂತ್ಯಕ್ರಿಯೆ ನಡೆದ ಸ್ಥಳದಲ್ಲೇ ಕಾರ್ಯ ನಡೆಯುತ್ತಿದೆ.

    ಜಿಲ್ಲೆಯ ಮದ್ದೂರು ತಾಲೂಕಿನ ಗುಡಿಗೆರೆ ಗ್ರಾಮದ ಯೋಧ ಗುರು ಅವರ ತಿಥಿ ಕಾರ್ಯಕ್ಕೆ ಸಾವಿರಾರು ಜನರು ಆಗಮಿಸಿ ನಮನ ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಗುರು ಅಂತ್ಯ ಸಂಸ್ಕಾರ ಮಾಡಿದ ಜಾಗದಲ್ಲಿ ಜೆಸಿಬಿ, ಬುಲ್ಡೋಜರ್‍ನಿಂದ ಜಾಗ ಸಮತಟ್ಟು ಮಾಡಿಸಿ ವ್ಯವಸ್ಥೆ ಮಾಡಲಾಗಿದೆ. ಗುರು ಅವರ ತಿಥಿ ಕಾರ್ಯದ ಸಂಪೂರ್ಣ ಜವಬ್ದಾರಿಯನ್ನು ಸಾರಿಗೆ ಸಚಿವ ಡಿಸಿ.ತಮ್ಮಣ್ಣ ಹೊತ್ತಿದ್ದಾರೆ.

    ಹುತಾತ್ಮ ಯೋಧ ಗುರು ಅವರ ಸಮಾಧಿ ಸ್ಥಳದಲ್ಲಿ ಶಾಮಿಯಾನ ಹಾಕಲಾಗಿದೆ. ಒಂದು ಬಾರಿಗೆ ಒಂದೂವರೆ ಸಾವಿರ ಜನ ಕುಳಿತು ಊಟ ಮಾಡಲು ವ್ಯವಸ್ಥೆ ಮಾಡಲಾಗಿದೆ. ಇನ್ನೂ ಹುತಾತ್ಮ ಗುರುವಿನ ಸಮಾಧಿ ಪಕ್ಕದಲ್ಲೆ ಪುಟ್ಟದಾದ ವೇದಿಕೆಯನ್ನು ನಿರ್ಮಿಸಲಾಗಿದೆ. ಈ ವೇದಿಕೆಯಲ್ಲಿ ಮಳವಳ್ಳಿ ಮಹಾದೇವ ಸ್ವಾಮಿ ಅವರ ತಂಡದಿಂದ ಭಜನೆಯನ್ನು ಮಾಡಲಾಗುತ್ತದೆ.

    ಹುತಾತ್ಮ ಗುರು ಅವರ ಸಮಾಧಿಯನ್ನ ಅಭಿಮಾನಿಗಳು ಹೂಗಳಿಂದ ಅಲಂಕಾರ ಮಾಡಿದ್ದು, ಸಮಾಧಿ ಸ್ಥಳದಲ್ಲಿ 4/4 ಅಡಿ ಅಳತೆಯ ಭಾವಚಿತ್ರ ಇಡಲೂ ವ್ಯವಸ್ಥೆ ಮಾಡಲಾಗಿದೆ. ಅನ್ನ ಸಾಂಬಾರ್, ಸಿಹಿ ಬೂಂದಿ, ಪಾಯಸ, ಮಸಾಲೆ ವಡೆ, ಜಾಂಗೀರು, ಅವರೇಕಾಳಿನ ಕೂಟು, ಮೊಸರು, ಹಪ್ಪಳ ಉಪ್ಪಿನ ಕಾಯಿ, ತಿಥಿ ಊಟಕ್ಕೆ ಅಡುಗೆ ತಯಾರಿ ಮಾಡಲಾಗಿದೆ.

    ತಿಥಿ ಕಾರ್ಯದ ಊಟದ ವ್ಯವಸ್ಥೆ ಸೇರಿದಂತೆ ಇನ್ನಿತರ ಕಾರ್ಯ ಸಂಪೂರ್ಣವಾಗಿ ಡಿ.ಸಿ.ತಮ್ಮಣ್ಣ ಅವರ ನೇತೃತ್ವದಲ್ಲಿ ನಡೆಯುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹುತಾತ್ಮ ಯೋಧ ಗುರು ತವರಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಯುವಕ

    ಹುತಾತ್ಮ ಯೋಧ ಗುರು ತವರಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಯುವಕ

    ಮಂಡ್ಯ: ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧ ಗುರು ಸಮಾಧಿ ಮಾಡಲಾಗಿರುವ ಕೆ.ಎಂ.ದೊಡ್ಡಿಯಲ್ಲೇ ಯುವಕನೊಬ್ಬ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ.

    ಅಸ್ಸಾಂನಿಂದ ಆಗಮಿಸಿರುವ ಕೆಲವು ಯುವಕರು ಇಲ್ಲಿ ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಇವರಲ್ಲಿ ಒಬ್ಬ ಯುವಕ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ. ಇದನ್ನ ಅರಿತ ಸ್ಥಳೀಯ ಯುವಕರು ನಾವು ಗುರುವನ್ನ ಕಳೆದುಕೊಂಡು ಪಾಕಿಸ್ತಾನದ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದರೆ, ಇವ ಇಲ್ಲೇ ಇದ್ದಾನೆ ಏ ಯಾವ ಊರು ನಿಂದು, ನಿನ್ ಐಡಿ ಕಾರ್ಡ್ ತೋರಿಸು ಯಾಕ್ ಹಾಗೆ ಕೂಗುತ್ತೀಯಾ ಎಂದೆಲ್ಲಾ ವಿಚಾರಿಸಿದ್ದಾರೆ.

    ಕೊನೆಗೆ ಸ್ಥಳೀಯ ಯುವಕರು ಪ್ರಶ್ನೆ ಮಾಡುತ್ತಿದ್ದಂತೆ ಭಾರತ್ ಮಾತಾಕಿ ಜೈ ಎಂದು ಒಮ್ಮೆ ಹೇಳಿ ಮತ್ತೆ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದಾನೆ. ಇದರಿಂದ ಮತ್ತಷ್ಟು ಕೋಪಗೊಂಡ ಯುವಕರು ಆತನಿಗೆ ಒಂದು ಕೊಟ್ಟು ಭಾರತಕ್ಕೆ ಜೈಕಾರ ಕೂಗಿಸಿದ್ದಾರೆ. ನಂತರ ಆತನನ್ನ ಕೂಲಿಗೆ ಕರೆತಂದಿದ್ದ ಮೇಸ್ತ್ರಿಗೆ ಇದೆಲ್ಲಾ ಸರಿ ಹೋಗಲ್ಲ ಎಂದು ಬುದ್ಧಿ ಹೇಳಿ ಕಳುಹಿಸಿದ್ದಾರೆ.

    https://www.youtube.com/watch?v=gPEqbHEdcfg

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಳ್ಕೊಂಡ ನೋವು ಅನುಭವಿಸಿದವರಿಗಷ್ಟೇ ಗೊತ್ತು- ಸುಮಲತಾ ಅಂಬರೀಶ್

    ಕಳ್ಕೊಂಡ ನೋವು ಅನುಭವಿಸಿದವರಿಗಷ್ಟೇ ಗೊತ್ತು- ಸುಮಲತಾ ಅಂಬರೀಶ್

    ಮಂಡ್ಯ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರನ ಆತ್ಮಾಹುತಿ ದಾಳಿಗೆ ಬಲಿಯಾದ ಯೋಧ ಗುರು ಮನೆಗೆ ನಟಿ ಸುಮಲತಾ ಅಂಬರೀಶ್ ಅವರು ಇಂದು ತೆರಳಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಕುಟುಂಬ ನೋವು ಏನು ಎಂದು ನನಗೆ ಚೆನ್ನಾಗಿ ಗೊತ್ತಿದೆ. ಒಬ್ಬರನ್ನು ಕಳೆದುಕೊಂಡಿರುವ ನೋವನ್ನು ಮಾತಿನಲ್ಲೇ ತುಂಬಿಸಲು ಸಾಧ್ಯವಿಲ್ಲ. ಆದ್ರೂ ನಿಮ್ಮ ನೋವಿನಲ್ಲಿ ನಾವು ಮಾತ್ರ ಅಲ್ಲ ಇಡೀ ದೇಶವೇ ಜೊತೆ ಇದೆ. ದೇಶದ ಜನ ನಿಂತು ನಿಮಗೆ ಸೆಲ್ಯೂಟ್ ಹೊಡೆಯುತ್ತೇವೆ. ನಿಮ್ಮನ್ನು ಪ್ರೀತಿಸುತ್ತಾ ಇದೆ. ನಿಮ್ಮ ಮಗನಿಂದ ದೊಡ್ಡ ಗೌರವ ನಿಮಗೆಲ್ಲರಿಗೂ ಸಿಕ್ಕಿದೆ. ಧೈರ್ಯವಾಗಿರಿ ಎಂದು ಸಾಂತ್ವನ ಹೇಳಿದ್ದಾರೆ.

    ನಮ್ಮ ನೋವನ್ನು ಇನ್ನೊಬ್ಬರಿಗೆ ಹೇಳಿದ್ರೆ ಅರ್ಥವಾಗಲ್ಲ. ಅದನ್ನು ಅನುಭವಿಸಿದವರಿಗೆ ಆ ನೋವು ಏನೆಂಬುದು ತಿಳಿಯುತ್ತದೆ. ಗುರು ಪತ್ನಿ ತುಂಬಾ ಚಿಕ್ಕ ಹುಡುಗಿ. ಅವಳಿಗೆ ಜೀವನದಲ್ಲಿ ಇನ್ನೂ ತುಂಬಾನೇ ಧೈರ್ಯ ತುಂಬಬೇಕಿದೆ. ಈಗಾಗಲೇ ತುಂಬಾ ಜನ ಅವರ ಪರವಾಗಿ ನಿಂತಿದ್ದಾರೆ. ಜೊತೆಗೆ ನಾವು ಒಂದು ಸಣ್ಣ ಸೇವೆಯನ್ನು ಮಾಡಿದ್ದೇವೆ ಅಂದ್ರು.

    ಜಮೀನು ಹಸ್ತಾಂತರದ ಬಗ್ಗೆ ಅವರಿಗೆ ತಿಳಿಸಿದ್ದೇನೆ. ಇದು ನಮ್ಮ ಕರ್ತವ್ಯ ಅಂತ ಹೇಳಿದ್ದೇನೆ. ನಾವು ಮಾಡಬೇಕಾಗಿರೋ ಕನಿಷ್ಟ ಧರ್ಮ ಇದಾಗಿದೆ. ಒಪ್ಪಿಕೊಂಡರೆ ನಮ್ಮ ಪುಣ್ಯ. ಇದರಿಂದ ಅಂಬರೀಶ್ ಅವರ ಆತ್ಮಕ್ಕೆ ಶಾಂತಿ, ತೃಪ್ತಿ ಸಿಗುತ್ತದೆ ಎಂದು ಹೇಳಿದೆ. ಅವರು ಅದನ್ನು ಒಪ್ಪಿಕೊಂಡಿದ್ದಾರೆ. ಹೀಗಾಗಿ ಮುಂದಿನ ಪ್ರಕ್ರಿಯೆ ಆರಂಭಿಸುವುದಾಗಿ ಅವರು ಹೇಳಿದ್ರು.

    ಇಂದು ಜಿಲ್ಲೆಯ ಚಿಕ್ಕರಸಿನಕೆರೆ ಗ್ರಾಮದ ಕಾಲಭೈರವೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ಬಳಿಕ ಬಸವನ ಆಶೀರ್ವಾದ ಪಡೆದು, ಕಾಣಿಕೆ ಸಲ್ಲಿಸಿದ ಬಳಿಕ ಅವರು ಗುರು ಮನೆಗೆ ತೆರಳಿ ಸಾಂತ್ವನ ತಿಳಿಸಿದ್ದಾರೆ.

    ಫೆ.14ರಂದು ಗುರುವಾರ ಮಧ್ಯಾಹ್ನ 3.30ರ ಸುಮಾರಿಗೆ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಅದಿಲ್ ದರ್ ಎಂಬ ಉಗ್ರ ಸ್ಕಾರ್ಪಿಯೋ ಕಾರಿನಲ್ಲಿ ಸ್ಫೋಟಕ ತುಂಬಿ ಆತ್ಮಾಹುತಿ ದಾಳಿ ಮಾಡಿದ್ದನು. ಈ ದಾಳಿಯಲ್ಲಿ 44 ಯೋಧರು ಹುತಾತ್ಮರಾಗಿದ್ದು, ಹಲವರು ಗಾಯಗೊಂಡಿದ್ದಾರೆ.

    https://www.youtube.com/watch?v=u3eOKo1jwdw

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಇಂದು ಹುತಾತ್ಮ ಯೋಧನ ಕುಟುಂಬಕ್ಕೆ ಸುಮಲತಾ  ಸಾಂತ್ವಾನ- 20 ಗುಂಟೆ ಜಮೀನು ಹಸ್ತಾಂತರ

    ಇಂದು ಹುತಾತ್ಮ ಯೋಧನ ಕುಟುಂಬಕ್ಕೆ ಸುಮಲತಾ ಸಾಂತ್ವಾನ- 20 ಗುಂಟೆ ಜಮೀನು ಹಸ್ತಾಂತರ

    ಮಂಡ್ಯ: ನಟಿ ಸುಮಲತಾ ಅವರು ಇಂದು ಹುತಾತ್ಮ ಯೋಧ ಗುರು ಮನೆಗೆ ತೆರಳಿ ಕುಟುಂಬಕ್ಕೆ ಸಾಂತ್ವಾನ ಹೇಳಲಿದ್ದಾರೆ. ಅಲ್ಲದೆ ಇದೇ ವೇಳೆ ತಮ್ಮ ಪುತ್ರ ಅಭಿಷೇಕ್ ಹೆಸರಲ್ಲಿರೋ 20 ಗುಂಟೆ ಜಮೀನನ್ನು ಯೋಧನ ಕುಟುಂಬಸ್ಥರಿಗೆ ಹಸ್ತಾಂತರಿಸಲಿದ್ದಾರೆ.

    ಬುಧವಾರವಷ್ಟೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನ ಭೇಟಿ ಆಗಿದ್ದ ಸುಮಲತಾ ಅಂಬರೀಶ್ ಅವರು ಇಂದು ಮಂಡ್ಯಕ್ಕೆ ಹೋಗ್ತಿದ್ದಾರೆ. ಚಿಕ್ಕರಸಿಕೆರೆಯಲ್ಲಿರೋ ಕಾಲಭೈರವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾಗಿರುವ ಗುಡಿಗೆರೆ ಗುರು ಮನೆಗೆ ಭೇಟಿ ನೀಡ್ತಾರೆ. ಇದನ್ನೂ ಓದಿ: ಮಂಡ್ಯ ಜನರ ಅಭಿಪ್ರಾಯವೇ ಅಂತಿಮ: ಸುಮಲತಾ ಅಂಬರೀಶ್

    ಸಾಂತ್ವನ ಹೇಳೋದರ ಜೊತೆಗೆ ಪುತ್ರ ಅಭಿಷೇಕ್ ಹೆಸರಲ್ಲಿರೋ 20 ಗುಂಟೆ ಜಮೀನನ್ನು ಯೋಧನ ಕುಟುಂಬಸ್ಥರಿಗೆ ಹಸ್ತಾಂತರಿಸಲಿದ್ದಾರೆ. ಈ ನೆಲದ ಮಗಳಾಗಿ ಸೊಸೆಯಾಗಿ ನಾನು ಮಾಡುವ ಪುಟ್ಟ ಸೇವೆ ಅಂತ ಯೋಧನ ಅಂತ್ಯಸಂಸ್ಕಾರ ನಡೆದಿದ್ದ ದಿನ ಸುಲಮತಾ ಹೇಳಿದ್ದರು. ಈ ಹಿಂದೆ ಸಿಎಂ ಕುಮಾರಸ್ವಾಮಿ ಮಂಡ್ಯಕ್ಕೆ ಸುಮಲತಾ ಕೊಡುಗೆ ಏನು ಅಂತ ಪ್ರಶ್ನಿಸಿ ವಿವಾದಕ್ಕೊಳಗಾಗಿದ್ದರು. ಇದನ್ನೂ ಓದಿ:  ಅಂಬರೀಶ್ ಹೆಸರಲ್ಲಿರೋ ಅರ್ಧ ಎಕರೆ ಜಮೀನನ್ನು ಗುರು ಕುಟುಂಬಕ್ಕೆ ಕೊಡುತ್ತೇನೆ: ಸುಮಲತಾ

    https://www.youtube.com/watch?v=8VMxyfP3zjM

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv