Tag: Guru Deshpande

  • ಸಾಹಸಸಿಂಹನ ವೀರಾಭಿಮಾನಿ ಈ ಪಡ್ಡೆಹುಲಿ!

    ಸಾಹಸಸಿಂಹನ ವೀರಾಭಿಮಾನಿ ಈ ಪಡ್ಡೆಹುಲಿ!

    ಸಿನಿಮಾಗಳಲ್ಲಿ ಜನಮೆಚ್ಚಿದ ನಟರ ಪ್ರಭೆಯನ್ನು ಬಳಸಿಕೊಳ್ಳೋದು ಮಾಮೂಲು. ಆದರೆ ಅಂಥಾ ನಟರ ಅಸಲಿ ಅಭಿಮಾನಿಗಳೇ ಥ್ರಿಲ್ ಆಗುವಂತೆ ಚಿತ್ರವೊಂದನ್ನು ರೂಪಿಸೋದು ಸವಾಲಿನ ಸಂಗತಿ. ಈ ವಿಚಾರದಲ್ಲಿ ಗುರುದೇಶಪಾಂಡೆ ನಿರ್ದೇಶನದ ಪಡ್ಡೆಹುಲಿ ಚಿತ್ರ ಗೆದ್ದಿದೆ. ಅದರಿಂದಾಗಿಯೇ ಇಡೀ ಕರ್ನಾಟಕದ ಉದ್ದಗಲಕ್ಕೂ ಹರಡಿಕೊಂಡಿರುವ ಸಾಹಸಸಿಂಹ ವಿಷ್ಣುವರ್ಧನ್ ಅವರ ಅಭಿಮಾನಿಗಳೆಲ್ಲ ಪಡ್ಡೆಹುಲಿಯತ್ತ ಆಕರ್ಷಿತರಾಗಿದ್ದಾರೆ.

    ಎಂ.ರಮೇಶ್ ರೆಡ್ಡಿಯವರು ತೇಜಸ್ವಿನಿ ಎಂಟರ್ ಪ್ರೈಸಸ್ ಬ್ಯಾನರ್ ಅಡಿ ನಿರ್ಮಾಣ ಮಾಡಿರೋ ಚಿತ್ರ ಪಡ್ಡೆಹುಲಿ. ಈ ಸಿನಿಮಾದೊಳಗಿನ ವಿಷ್ಣು ಅಭಿಮಾನ ಥರ ಥರದಲ್ಲಿ ಅನಾವರಣಗೊಳ್ಳುತ್ತಲೇ ಬಂದಿದೆ. ಈ ಅಭಿಮಾನದ ಹಿಂದೆ ರಿಯಲ್ ಆದ ಕಥಾನಕಗಳೂ ಇವೆ. ಯಾಕಂದ್ರೆ ಈ ಚಿತ್ರದಲ್ಲಿ ವಿಷ್ಣು ಅಭಿಮಾನಿಯಾಗಿ ನಟಿಸಿರೋ ಶ್ರೇಯಸ್ ನಿಜ ಜೀವನದಲ್ಲಿಯೂ ಸಾಹಸ ಸಿಂಹನ ಅಪ್ಪಟ ಅಭಿಮಾನಿ!

    ಅಷ್ಟಕ್ಕೂ ಶ್ರೇಯಸ್ ಅವರ ತಂದೆ ನಿರ್ಮಾಪಕರಾದ ಕೆ.ಮಂಜು ಅವರೂ ವಿಷ್ಣು ಅಭಿಮಾನಿಯೇ. ಮಂಜು ಅವರು ವಿಷ್ಣುವರ್ಧನ್ ಅವರ ನಿಕಟ ಸಂಪರ್ಕ ಹೊಂದಿದ್ದವರು. ವಿಷ್ಣು ಮೇಲೆ ಅಪಾರವಾದ ಪ್ರೀತಿ ಹೊಂದಿರೋ ಮಂಜು ತಮ್ಮ ಮಗನ ಮೊದಲ ಚಿತ್ರದ ಮೂಲಕ ಅದನ್ನು ಹೊರಗೆಡವಿದ್ದಾರೆ. ವಿಷ್ಣು ಹುಟ್ಟುಹಬ್ಬದಂದು ಬಿಡುಗಡೆಯಾಗಿದ್ದ ರಾಪ್ ಸಾಂಗ್ ಸೇರಿದಂತೆ ಎಲ್ಲದರಲ್ಲಿಯೂ ಪಡ್ಡೆಹುಲಿ ವಿಷ್ಣು ಅಭಿಮಾನದಿಂದಲೇ ಮಿರುಗುತ್ತಿದೆ!

  • ಶ್ರೇಯಸ್ ಪಡ್ಡೆಹುಲಿಯಾದದ್ದರ ಹಿಂದಿದೆ ಪರಿಶ್ರಮದ ಕಹಾನಿ!

    ಶ್ರೇಯಸ್ ಪಡ್ಡೆಹುಲಿಯಾದದ್ದರ ಹಿಂದಿದೆ ಪರಿಶ್ರಮದ ಕಹಾನಿ!

    ಬೆಂಗಳೂರು: ಪಡ್ಡೆಹುಲಿ ಚಿತ್ರದ ನವನಾಯಕ ಶ್ರೇಯಸ್ ಅವರ ಶ್ರದ್ಧೆ ಎಂಥಾದ್ದೆಂಬುದರ ಝಲಕುಗಳು ಈಗಾಗಲೇ ಅನಾವರಣಗೊಂಡಿವೆ. ಶ್ರೇಯಸ್ ಅವರಲ್ಲೊಬ್ಬ ಪಳಗಿದ ನಟನ ಚಹರೆಯನ್ನ ಕಂಡು ಪ್ರೇಕ್ಷಕರು ಕೂಡಾ ಥ್ರಿಲ್ ಆಗಿದ್ದಾರೆ. ಎಂ.ರಮೇಶ್ ರೆಡ್ಡಿ ನಿರ್ಮಾಣ ಮಾಡಿರೋ ಈ ಚಿತ್ರ, ಗುರುದೇಶಪಾಂಡೆಯವರ ನಿರ್ದೇಶನದಲ್ಲಿ ಇದೇ ಏಪ್ರಿಲ್ 19ರಂದು ತೆರೆ ಕಾಣಲು ರೆಡಿಯಾಗಿದೆ.

    ಈ ಹಿಂದೆ ರಾಜಾಹುಲಿ ಎಂಬ ಸೂಪರ್ ಹಿಟ್ ಕೊಟ್ಟಿದ್ದವರು ನಿರ್ದೇಶಕ ಗುರು ದೇಶಪಾಂಡೆ. ಅವರು ಪಡ್ಡೆಹುಲಿ ಚಿತ್ರವನ್ನೂ ಕೂಡಾ ರಾಜಾಹುಲಿಯಂತೆಯೇ ಬಲು ಕಾಳಜಿಯಿಂದ ರೂಪಿಸಿದ್ದಾರೆ. ಪ್ರತಿಯೊಂದರಲ್ಲಿಯೂ ಪರಿಪೂರ್ಣತೆ ಬಯಸುವ ಗುರುದೇಶಪಾಂಡೆ ಆ ದಿಸೆಯಲ್ಲಿಯೇ ಶ್ರೇಯಸ್ ಅವರನ್ನು ಪಳಗಿದ ನಟನಂತೆ ರೂಪಿಸಿದ್ದಾರೆ.

    ಈ ಸಿನಿಮಾಗಾಗಿಯೇ ದೈಹಿಕವಾಗಿಯೂ ಫಿಟ್ ಆಗಿರೋ ಶ್ರೇಯಸ್ ನಟನೆಯಲ್ಲಿಯೂ ತರಬೇತಿ ಪಡೆದುಕೊಂಡಿದ್ದಾರೆ. ಡ್ಯಾನ್ಸ್, ಫೈಟ್ ಸೇರಿದಂತೆ ಈ ಚಿತ್ರಕ್ಕೆ ಏನೇನು ಬೇಕೋ ಅದೆಲ್ಲದರಲ್ಲಿಯೂ ಪಳಗಿಕೊಂಡಿದ್ದಾರೆ. ಎಂಥಾ ರಿಸ್ಕೀ ಸನ್ನಿವೇಶಗಳಿದ್ದರೂ ಮತ್ತೊಂದು ಯೋಚನೆ ಮಾಡದೆ ಅಖಾಡಕ್ಕಿಳಿದು ಬಿಡುತ್ತಿದ್ದ ಶ್ರೇಯಸ್ ಅವರ ಬದ್ಧತೆಯ ಬಗ್ಗೆ ನಿರ್ದೇಶಕರು, ನಿರ್ಮಾಪಕರು ಸೇರಿದಂತೆ ಇಡೀ ಚಿತ್ರತಂಡದಲ್ಲೊಂದು ಮೆಚ್ಚುಗೆಯಿದೆ.

    ಇಂಥಾ ಪರಿಶ್ರಮಕ್ಕೆ ಯಾವತ್ತಿದ್ದರೂ ಫಲ ಇದ್ದೇ ಇರುತ್ತೆ. ಹೀಗೆ ಶ್ರಮ ವಹಿಸಿ ಬಂದವರನ್ನು ಕನ್ನಡದ ಸಹೃದಯಿ ಪ್ರೇಕ್ಷಕರು ದೂರ ತಳ್ಳಿದ ಉದಾಹರಣೆಗಳೇ ಇಲ್ಲ. ಪಡ್ಡೆಹುಲಿಯನ್ನೂ ಕೂಡಾ ಪ್ರೇಕ್ಷಕರು ಅಂಥಾದ್ದೇ ಮನಸ್ಥಿತಿಯೊಂದಿಗೆ ಸ್ವೀಕರಿಸಿ ಗೆಲ್ಲಿಸೋ ಎಲ್ಲ ಲಕ್ಷಣಗಳೂ ದಟ್ಟವಾಗಿವೆ.

  • ಪಡ್ಡೆಹುಲಿ ಕೊಬ್ಬಿ ಘರ್ಜಿಸಲು ನಿರ್ಮಾಪಕರು ಕಾರಣ!

    ಪಡ್ಡೆಹುಲಿ ಕೊಬ್ಬಿ ಘರ್ಜಿಸಲು ನಿರ್ಮಾಪಕರು ಕಾರಣ!

    ಬೆಂಗಳೂರು: ಶ್ರೇಯಸ್ ನಾಯಕನಾಗಿ ಪಾದಾರ್ಪಣೆ ಮಾಡುತ್ತಿರೋ ಪಡ್ಡೆಹುಲಿ ಚಿತ್ರ ಇದೇ ಏಪ್ರಿಲ್ ಹತ್ತೊಂಬತ್ತರಂದು ತೆರೆ ಕಾಣುತ್ತಿದೆ. ಗುರುದೇಶಪಾಂಡೆ ನಿರ್ದೇಶನದ ಈ ಚಿತ್ರದ ಅದ್ದೂರಿತನ ಎಂಥಾದ್ದೆಂಬುದಕ್ಕೆ ಹಾಡುಗಳೇ ಸೂಕ್ತ ಉದಾಹರಣೆಯಾಗಿ ಎಲ್ಲೆಡೆ ಹರಿದಾಡುತ್ತಿವೆ. ಬಹುಶಃ ಓರ್ವ ಹೊಸಾ ಹೀರೋನನ್ನು ನಂಬಿಕೊಂಡು ಇಷ್ಟು ದೊಡ್ಡ ಮಟ್ಟದ ಬಜೆಟ್ಟಿನಲ್ಲಿ ತಯಾರಾದ ಕನ್ನಡದ ಮೊದಲ ಸಿನಿಮಾ ಪಡ್ಡೆಹುಲಿಯೇ ಇರಬೇಕು!

    ಹೊಸಾ ಹೀರೋ ಅಂದರೇನೇ ಬೆಚ್ಚಿಬಿದ್ದು ಹಿಂದೆ ಸರಿಯೋರೇ ಹೆಚ್ಚು. ಆದರೆ ಹೊಸಾ ಹುಡುಗ ಶ್ರೇಯಸ್ ನಾಯಕನಾಗಿರೋ ಪಡ್ಡೆಹುಲಿ ಚಿತ್ರಕ್ಕೆ ನಿರ್ಮಾಪಕ ಎಂ.ರಮೇಶ್ ರೆಡ್ಡಿಯವರು ಹಣ ಖರ್ಚು ಮಾಡುತ್ತಿರೋ ಪರಿ ಕಂಡು ಗಾಂಧಿನಗರದ ಮಂದಿಯೇ ಅವಾಕ್ಕಾಗಿದ್ದಾರೆ. ಪ್ರೇಕ್ಷಕರೂ ಅಚ್ಚರಿಗೊಂಡಿದ್ದಾರೆ. ಆದರೆ ನಿರ್ಮಾಪಕ ರಮೇಶ್ ರೆಡ್ಡಿಯವರದ್ದು ಮಾತ್ರ ಹೇಗಾದರೂ ಸರಿ, ಸಿನಿಮಾ ಅಚ್ಚಕಟ್ಟಾಗಿ, ಅದ್ದೂರಿಯಾಗಿ ಮೂಡಿ ಬರಬೇಕೆನ್ನುವುದೊಂದೇ ಅಚಲ ಉದ್ದೇಶ!

    ಚಿತ್ರೀಕರಣಕ್ಕೂ ಮುನ್ನ ಮಾಡಿರೋ ಪ್ಲಾನಿಗಿಂತಲೂ ಕೊಂಚ ಕಾಸು ಖರ್ಚಾದರೂ ಕೊಸರಾಡೋದು ಮಾಮೂಲು. ನಿರ್ಮಾಪಕರ ಬಾಧೆಯೂ ಅಂಥಾದ್ದೇ ಇರುತ್ತೆ. ಆದರೆ ರಮೇಶ್ ರೆಡ್ಡಿಯವರ ಔದಾರ್ಯ ಕಂಡು ನಿರ್ದೇಶಕ ಗುರುದೇಶಪಾಂಡೆ ಸೇರಿದಂತೆ ಇಡೀ ಚಿತ್ರತಂಡವೇ ಅಚ್ಚರಿಗೊಂಡಿದೆ. ಯಾಕೆಂದರೆ ಪಡ್ಡೆಹುಲಿಯನ್ನು ಅಂದಗಾಣಿಸೋ ಯಾವ ಐಡಿಯಾಗಳಿಗೂ ರಮೇಶ್ ರೆಡ್ಡಿಯವರು ಬೇಡ ಅನ್ನಲೇ ಇಲ್ಲ. ಅವರು ಅಷ್ಟೊಂದು ಪ್ರೀತಿ, ಕಾಳಜಿ ತೋರಿಸದೇ ಇದ್ದಿದ್ದರೆ ಬರೋಬ್ಬರಿ ಹನ್ನೊಂದು ಹಾಡುಗಳು ರೂಪುಗೊಳ್ಳೋದೂ ಸಾಧ್ಯವಿರುತ್ತಿರಲಿಲ್ಲ!

    ನಿರ್ಮಾಪಕರು ಹೀಗೆ ಪ್ರೀತಿಯಿಂದ ಆರೈಕೆ ಮಾಡಿ ಮೈ ನೇವರಿಸುತ್ತಾ ಬಂದ ಕಾರಣದಿಂದಲೇ ಪಡ್ಡೆಹುಲಿ ಈವತ್ತು ಕೊಬ್ಬಿ ಘರ್ಜಿಸುತ್ತಿದೆ. ಆದ್ದರಿಂದಲೇ ಪ್ರೇಕ್ಷಕರೆಲ್ಲ ಈ ಚಿತ್ರವನ್ನು ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ.

  • ಪಡ್ಡೆಹುಲಿ: ಇಂದು ಬಿಡುಗಡೆಯಾಗಲಿದೆ ಮತ್ತೊಂದು ಲಿರಿಕಲ್ ವೀಡಿಯೋ ಸಾಂಗ್!

    ಪಡ್ಡೆಹುಲಿ: ಇಂದು ಬಿಡುಗಡೆಯಾಗಲಿದೆ ಮತ್ತೊಂದು ಲಿರಿಕಲ್ ವೀಡಿಯೋ ಸಾಂಗ್!

    ಬೆಂಗಳೂರು: ಎಂ. ರಮೇಶ್ ರೆಡ್ಡಿ ತೇಜಸ್ವಿನಿ ಎಂಟರ್ ಪ್ರೈಸಸ್ ಲಾಂಛನದಲ್ಲಿ ನಿರ್ಮಾಣ ಮಾಡಿರುವ ಚಿತ್ರ ಪಡ್ಡೆಹುಲಿ. ಗುರು ದೇಶಪಾಂಡೆ ನಿರ್ದೇಶನದ ಪಡ್ಡೆಹುಲಿ ಪ್ರೇಕ್ಷಕರಿಗೆ ಹತ್ತಿರವಾದದ್ದೇ ಹಾಡುಗಳ ಮೂಲಕ. ಈ ವಿಚಾರದಲ್ಲಿ ಈ ಚಿತ್ರದ ದಾಖಲೆಯನ್ನು ಯಾರೂ ಸದ್ಯಕ್ಕೆ ಮುರಿಯೋದು ಕಷ್ಟವಿದೆ. ಇದೀಗ ಮತ್ತೊಂದು ಹಾಡನ್ನು ಬಿಡುಗಡೆ ಮಾಡಲು ಚಿತ್ರ ತಂಡ ಮುಂದಾಗಿದೆ!

    ಬದುಕು ಜಟಕಾ ಬಂಡಿ ಎಂಬ ಈ ಹಾಡು ಇಂದು ರಾತ್ರಿ ಒಂಬತ್ತು ಘಂಟೆಗೆ ಪಿಆರ್ ಕೆ ಯೂಟ್ಯೂಬ್ ಚಾನೆಲ್ ಮೂಲಕ ಬಿಡುಗಡೆಯಾಗಲಿದೆ. ಹೀಗೆ ಹೊರ ಬರಲಿರೋ ಲಿರಿಕಲ್ ವೀಡಿಯೋ ಕೂಡಾ ಪಡ್ಡೆಹುಲಿಯ ಹಿಟ್ ಲಿಸ್ಟಿಗೆ ಸೇರಿಕೊಳ್ಳೋದರಲ್ಲಿ ಯಾವ ಸಂಶಯವೂ ಇಲ್ಲ.

    ಹಲವಾರು ವಿಚಾರಗಳಲ್ಲಿ ಪಡ್ಡೆಹುಲಿ ಮುಖ್ಯವಾಗುತ್ತದಾದರೂ ಶ್ರೇಯಸ್ ನಾಯಕನಾಗಿ ಲಾಂಚ್ ಆಗುತ್ತಿರೋ ಈ ಚಿತ್ರದ ಬಗ್ಗೆ ಹೇಳ ಹೊರಟರೆ ಮೊದಲು ಕಾಣಸಿಗೋದೇ ಹಾಡುಗಳ ಮೆರವಣಿಗೆ. ಅಜನೀಶ್ ಲೋಕನಾಥ್ ಅವರ ಸಂಗೀತ ನಿರ್ದೇಶನ ಮಾಡಿರೋ ಹನ್ನೊಂದು ಹಾಡುಗಳೂ ಈಗ ಟ್ರೆಂಡಿಂಗ್‍ನಲ್ಲಿವೆ. ಅದರಲ್ಲಿ ಐದು ಹಾಡುಗಳಂತೂ ನಿಜಕ್ಕೂ ವಿಶೇಷವಾದವುಗಳು. ಅದರಲ್ಲಿ ಈಗ ಬಿಡುಗಡೆಯಾಗಲಿರೋ ಬದುಕು ಜಟಕಾಬಂಡಿ ಕೂಡಾ ಸೇರಿಕೊಂಡಿದೆ.

    ಬಹುಶಃ ಪ್ರೇಮಲೋಕದ ನಂತರದಲ್ಲಿ ಪಡ್ಡೆಹುಲಿಯೇ ಹಾಡುಗಳ ವಿಚಾರದಲ್ಲಿ ಫಸ್ಟ್. ಇಷ್ಟು ಸಂಖ್ಯೆಯ ಹಾಡುಗಳು ಯಾವ ಚಿತ್ರದಲ್ಲಿಯೂ ಇರಲಿಲ್ಲ. ಅಷ್ಟು ಸಂಖ್ಯೆಯ ಹಾಡುಗಳೆಲ್ಲವೂ ಹಿಟ್ ಆಗಿವೆ ಅನ್ನೋದು ಪಡ್ಡೆಹುಲಿಯ ನಿಜವಾದ ಹೆಗ್ಗಳಿಕೆ.

  • ಪಡ್ಡೆಹುಲಿಯ ಹತ್ತು ಹಾಡುಗಳನ್ನು ಒಟ್ಟಿಗೇ ಕೇಳೋ ಅವಕಾಶ!

    ಪಡ್ಡೆಹುಲಿಯ ಹತ್ತು ಹಾಡುಗಳನ್ನು ಒಟ್ಟಿಗೇ ಕೇಳೋ ಅವಕಾಶ!

    ಎಮ್. ರಮೇಶ್ ರೆಡ್ಡಿ ನಿರ್ದೇಶನ ಮಾಡಿರುವ ಪಡ್ಡೆಹುಲಿ ಚಿತ್ರದ ಹಾಡುಗಳು ಸೃಷ್ಟಿಸಿರುವ ಕ್ರೇಜ್ ಕಡಿಮೆಯದ್ದೇನಲ್ಲ. ರವಿಚಂದ್ರನ್ ಸೃಷ್ಟಿಸಿದ್ದ ಪ್ರೇಮಲೋಕ ಮತ್ತೊಮ್ಮೆ ಸೃಷ್ಟಿಯಾದಂಥಾ ಸಂಭ್ರಮವೊಂದು ಈ ಹಾಡುಗಳ ಮೂಲಕವೇ ಪ್ರೇಕ್ಷಕರೆದೆಗೂ ದಾಟಿಕೊಂಡಿದೆ. ಇದುವರೆಗೂ ಒಂದೊಂದಾಗಿ ಹೊರ ಬಂದಿದ್ದ ಹಾಡುಗಳಿಗೆ ಪ್ರೇಕ್ಷಕರು ಫಿದಾ ಆಗಿದ್ದರು. ಆದರೀಗ ಪಡ್ಡೆ ಹುಲಿಯ ಅಷ್ಟೂ ಹಾಡುಗಳನ್ನು ಒಟ್ಟಿಗೆ ಕೇಳುವ ಸದಾವಕಾಶ ಕೂಡಿ ಬಂದಿದೆ.

    ಯಾಕೆಂದರೆ, ಚಿತ್ರತಂಡ ಪಡ್ಡೆಹುಲಿ ಹಾಡುಗಳ ಜ್ಯೂಕ್ ಬಾಕ್ಸನ್ನು ಇದೀಗ ಅನಾವರಣಗೊಳಿಸಿದೆ. ಇದು ಕನ್ನಡ ಪ್ರೇಕ್ಷಕರ ಪಾಲಿಗೆ ಅಕ್ಷರಶಃ ಹಬ್ಬ. ಯಾಕೆಂದರೆ, ಹಿಟ್ ಹಾಡುಗಳ ಸರಮಾಲೆಯೇ ಈ ಜ್ಯೂಕ್ ಬಾಕ್ಸ್ ನಲ್ಲಿದೆ. ಒಂದು ಚಿತ್ರವೆಂದರೆ ಮೂರರಿಂದ ಆರು ಹಾಡುಗಳಿರೋದು ಮಾಮೂಲಿ. ಆದರೆ ಪಡ್ಡೆಹುಲಿ ಚಿತ್ರದ ಈ ಜ್ಯೂಕ್ ಬಾಕ್ಸ್ ನಲ್ಲಿ ಬರೋಬ್ಬರಿ ಹತ್ತು ಹಾಡುಗಳಿದ್ದಾವೆ. ಅವೆಲ್ಲವನ್ನೂ ಒಟ್ಟೊಟ್ಟಾಗಿ ಕೇಳೋ ಸದಾವಕಾಶವೊಂದು ಈಗ ಪ್ರೇಕ್ಷಕರ ಪಾಲಿಗೆ ಕೂಡಿ ಬಂದಿದೆ.

    ನಾನ್ ತುಂಬಾ ಹೊಸಬ ಬಾಸು, ಯಂಡ ಯೆಂಡತಿ, ಬದುಕು ಜಟಕಾ ಬಂಡಿ, ಒಂದು ಮಾತಲ್ಲಿ, ನಿನ್ನ ಪ್ರೇಮದ ಪರಿಯ, ಚೂರ್ ಚೂರ್, ಕಳಬೇಡ ಕೊಲಬೇಡ, ಜೀ ಜೀ ಜೀ, ಹೇಳಿ ಹೋಗು ಕಾರಣ ಹಾಗೀ ಟೈಟಲ್ ಸಾಂಗ್ ಸೇರಿದಂತೆ ಒಟ್ಟು ಹತ್ತು ಹಾಡುಗಳು ಈ ಜ್ಯೂಕ್ ಬಾಕ್ಸ್ ನಲ್ಲಿವೆ. ನಿರ್ದೇಶಕ ಗುರುದೇಶಪಾಂಡೆಯವರ ಸಾರಥ್ಯದಲ್ಲಿ ಈ ಹಾಡುಗಳೆಲ್ಲವೂ ಕೂಡಾ ಈಗಾಗಲೇ ಹಿಟ್ ಆಗಿವೆ. ಈ ಮೂಲಕ ಭರತ್ ಬಿಜೆ ಸಂಗೀತ ಮೋಡಿ ಮಾಡಿದೆ.

    ಇದೆಲ್ಲದಕ್ಕಿಂತಲೂ ವಿಶೇಷವಾಗಿ ಈ ಹಾಡುಗಳ ಮೂಲಕವೇ ನವನಾಯಕ ಶ್ರೇಯಸ್ ಅವರ ನಟನಾ ಚಾತುರ್ಯವೂ ಅನಾವರಣಗೊಂಡಿದೆ. ಖ್ಯಾತ ನಿರ್ಮಾಪಕ ಕೆ ಮಂಜು ಪುತ್ರ ಶ್ರೇಯಸ್ ಈ ಚಿತ್ರಕ್ಕಾಗಿ ಎಂಥಾ ತಯಾರಿ ಮಾಡಿಕೊಂಡಿದ್ದಾರೆಂಬುದೂ ಹಾಡುಗಳ ಮೂಲಕವೇ ಜಾಹೀರಾಗಿದೆ. ಈ ಬಗ್ಗೆ ಪ್ರೇಕ್ಷಕರೂ ಕೂಡಾ ಮೆಚ್ಚುಗೆಯಿಂದಲೇ ಈ ಚಿತ್ರಕ್ಕಾಗಿ ಕಾತರದಿಂದ ಕಾಯಲಾರಂಭಿಸಿದ್ದಾರೆ.

  • ಪ್ರೇಮಧ್ಯಾನಕ್ಕೆ ಸಾಥ್ ನೀಡುವಂತಿದೆ ಪಡ್ಡೆಹುಲಿಯ ಸಾಂಗ್!

    ಪ್ರೇಮಧ್ಯಾನಕ್ಕೆ ಸಾಥ್ ನೀಡುವಂತಿದೆ ಪಡ್ಡೆಹುಲಿಯ ಸಾಂಗ್!

    ಬೆಂಗಳೂರು: ಪ್ರತೀ ಹಾಡುಗಳನ್ನೂ ಕೂಡಾ ವಿಶೇಷವಾಗಿಯೇ ಹೊರ ತರಬೇಕೆಂಬ ಇರಾದೆ ಪಡ್ಡೆಹುಲಿ ಚಿತ್ರದ ನಿರ್ದೇಶಕ ಗುರುದೇಶಪಾಂಡೆ ಅವರದ್ದು. ಇಂಥಾ ಇಂಗಿತ ಮತ್ತು ಶ್ರದ್ಧೆಯ ಕಾರಣದಿಂದಲೇ ಈವರೆಗೆ ಹೊರ ಬಂದಿರೋ ಹಾಡುಗಳೆಲ್ಲವೂ ಹೊಸಾ ಅಲೆಯೊಂದಿಗೆ ಪ್ರೇಕ್ಷಕರ ಮನಸು ತಟ್ಟಿದೆ. ಇದೀಗ ಮತ್ತೊಂದು ಹಾಡು ಬಿಡುಗಡೆಯಾಗಿದೆ. ಇದಂತೂ ಪಕ್ಕಾ ಡಿಫರೆಂಟಾಗಿದೆ!

    ನಿರ್ದೇಶಕ ಗುರುದೇಶಪಾಂಡೆಯವರ ಕನಸಿಗೆ ಸದಾ ಸಾಥ್ ನೀಡುತ್ತಾ ಬಂದಿರುವವರು ಅಜನೀಶ್ ಲೋಕನಾಥ್. ಸಮ್ಮೋಹಕವಾದ ಹಾಡುಗಳನ್ನೇ ನೀಡುತ್ತಾ ಬಂದಿರೋ ಅಜನೀಶ್ ಇದೀಗ ಪ್ರಸಿದ್ಧ ಭಾವಗೀತೆಯೊಂದಕ್ಕೆ ಹೊಸ ಸ್ಪರ್ಶ ನೀಡಿದ್ದಾರೆ. ಬಿ.ಆರ್.ಲಕ್ಷ್ಮಣರಾಯರು ಬರೆದಿರುವ ಹೇಳಿ ಹೋಗು ಕಾರಣ ಎಂಬ ಭಾವ ಗೀತೆಗೆ ಬೆರಗಾಗಿಸುವಂಥಾ ಸಂಗೀತ ನೀಡಿದ್ದಾರೆ.

    ಸಿದ್ಧಾರ್ಥ್ ಮಹಾದೇವನ್ ಮತ್ತು ಗುಬ್ಬಿ ಹಾಡಿರುವ ಈ ಹಾಡೀಗ ಅನಾವರಣಗೊಂಡಿದೆ. ಒಂದು ಕಾಲದಲ್ಲಿ ಹೇಳಿ ಹೋಗು ಕಾರಣ ಎಂಬ ಈ ಹಾಡು ಸಿ.ಅಶ್ವತ್ಥ್ ಅವರ ಕಂಠದಲ್ಲಿ ಮಾಡಿದ್ದ ಮೋಡಿ ಸಣ್ಣದೇನಲ್ಲ. ಅದು ಸಾರ್ವಕಾಲಿಕ. ಇದೀಗ ಅಜನೀಶ್ ಅದೇ ಹಾಡನ್ನು ಈ ತಲೆಮಾರಿನ ಮನಸ್ಥಿತಿಗೆ ಒಪ್ಪುವಂಥಾ ಸಂಗೀತದೊಂದಿಗೆ ಸಿದ್ಧಗೊಳಿಸಿದ್ದಾರೆ. ಈ ಹಾಡೀಗ ಈ ಹಿಂದೆ ಬಿಡುಗಡೆಯಾಗಿದ್ದ ಪಡ್ಡೆ ಹುಲಿ ಹಾಡುಗಳನ್ನೇ ಮೀರಿಸುವಂತೆ ಎಲ್ಲೆಡೆ ಹರಿದಾಡುತ್ತಿದೆ.

    ಈ ಮೂಲಕವೇ ಶ್ರೇಯಸ್ ಅಭಿನಯದ ಪಡ್ಡೆಹುಲಿ ಮತ್ತೊಂದು ಥರದಲ್ಲಿ ಅಬ್ಬರಿಸುತ್ತಿದೆ. ಬಿಡುಗಡೆಯ ಹಾದಿಯಲ್ಲಿರೋ ಈ ಸಿನಿಮಾದ ಬಗೆಗಿರುವ ಕ್ರೇಜ್ ಈಗ ಹಾಡುಗಳ ಮೂಲಕವೇ ಮತ್ತಷ್ಟು ಲಕಲಕಿಸಲಾರಂಭಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರೇಮಪಾಠ ಹೇಳಲಿದೆ ಪಡ್ಡೆಹುಲಿ ಹಾಡು!

    ಪ್ರೇಮಪಾಠ ಹೇಳಲಿದೆ ಪಡ್ಡೆಹುಲಿ ಹಾಡು!

    ಬೆಂಗಳೂರು: ಇನ್ನೇನು ವಾರ ಕಳೆದರೆ ಪ್ರೇಮಿಗಳ ದಿನ ಬರುತ್ತೆ. ತುಸು ಕಂಪಿಸುತ್ತಲೇ ಅದೆಷ್ಟೋ ಯುವ ಮನಸುಗಳು ಆ ದಿನದ ಪ್ರೇಮ ಪರೀಕ್ಷೆಗೆ ತಯಾರಾಗುತ್ತಿವೆ. ಇಂಥಾ ಯಾವ ಭಯವೂ ಇಲ್ಲದೇ ಯಶಸ್ವಿಯಾಗಿ ಉತ್ತಮ ಶ್ರೇಣಿಯೊಂದಿಗೇ ಈ ಪರೀಕ್ಷೆ ಪಾಸು ಮಾಡಬಹುದಾದ ಸೂತ್ರವೊಂದನ್ನು ಪಡ್ಡೆಹುಲಿ ಹಾಡು ಹೊತ್ತು ತರುತ್ತಿದೆ. ಪ್ರೇಮಿಗಳಿಗೆಂದೇ ತಯಾರಾಗಿರೋ ಈ ಹಾಡಿನ ಮೂಲಕ ಪಡ್ಡೆಹುಲಿಯ ಪ್ರೇಮ ಪಾಂಡಿತ್ಯವೂ ಜಾಹೀರಾಗಲಿದೆ.

    ವ್ಯಾಲೆಂಟೈನ್ಸ್ ಡೇ ಸ್ಪೆಷಲ್ ಎಂಬಂಥಾ ಈ ಹಾಡನ್ನು ಇದೇ ಫೆಬ್ರವರಿ 11ರಂದು ಸಂಜೆ 7 ಘಂಟೆಗೆ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಈ ವೀಡಿಯೋ ಸಾಂಗ್ ಪ್ರೇಮ ಪರೀಕ್ಷೆಯನ್ನ ಯಶಸ್ವಿಯಾಗಿ ಎದುರಿಸೋ ಸೂತ್ರಗಳು, ಅಮೂಲ್ಯವಾದ ಟಿಪ್ಸ್ ಗಳನ್ನೂ ಹೊಂದಿದೆಯಂತೆ.

    ಇದು ನಿರ್ದೇಶಕ ಗುರುದೇಶಪಾಂಡೆಯವರ ಬತ್ತಳಿಕೆಯಿಂದ ಹೊರ ಬರುತ್ತಿರುವ ಮತ್ತೊಂದು ಬಾಣ. ಇದೊಂಥರಾ ಪ್ರತೀ ಯುವ ಮನಸುಗಳನ್ನು ನೇರವಾಗಿ ತಲುಪುವಂಥಾ ಪ್ರೇಮ ಬಾಣವೂ ಹೌದು. ಈಗಾಗಲೇ ಹಾಡುಗಳ ಮೂಲಕ ಪಡ್ಡೆಹುಲಿ ಯುವ ಮನಸುಗಳನ್ನ ಆವರಿಸಿಕೊಂಡಿದೆ. ಈ ಕಾರಣದಿಂದಲೇ ಈ ವರೆಗೆ ಬಿಡುಗಡೆಯಾಗಿರೋ ಎರಡು ಹಾಡುಗಳು ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್‍ನಲ್ಲಿವೆ.

    ಪ್ರೇಮಿಗಳಿಗೆ ಗಿಫ್ಟ್ ಎಂಬಂತೆ ಬಿಡುಗಡೆಗೆ ರೆಡಿಯಾಗಿರೋ ಹಾಡೂ ಕೂಡಾ ಅಂಥಾದ್ದೇ ಕಮಾಲ್ ಸೃಷ್ಟಿಸೋ ಭರವಸೆ ಚಿತ್ರತಂಡದಲ್ಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಪಡ್ಡೆಹುಲಿ ಹಾಡು ಕೇಳಿ ಭೇಷ್ ಅಂದ್ರು ಡಿ ಬಾಸ್!

    ಪಡ್ಡೆಹುಲಿ ಹಾಡು ಕೇಳಿ ಭೇಷ್ ಅಂದ್ರು ಡಿ ಬಾಸ್!

    ಗುರುದೇಶಪಾಂಡೆ ನಿರ್ದೇಶನದ ಪಡ್ಡೆಹುಲಿ ಚಿತ್ರದ ಹಾಡೀಗ ಎಲ್ಲೆಂದರಲ್ಲಿ ಹರಿದಾಡುತ್ತಾ ಯೂಟ್ಯೂಬ್ ಟ್ರೆಂಡಿಂಗ್‍ನಲ್ಲಿದೆ. ವಿಷ್ಣುವರ್ಧನ್ ಅವರಿಗೆ ಅರ್ಪಿಸಿರೋ ನಾ ತುಂಬಾ ಹೊಸಬ ಬಾಸು ಎಂಬ ಹಾಡು ಅತ್ಯಂತ ಕಡಿಮೆ ಅವಧಿಯಲ್ಲಿಯೇ ಲಕ್ಷ ಲಕ್ಷ ವೀವ್ಸ್ ಪಡೆದುಕೊಂಡು ಟ್ರೆಂಡಿಂಗ್ ನಲ್ಲಿದೆ. ಇದೇ ಖುಷಿಯಲ್ಲಿ ಮಿಂದೇಳುತ್ತಿದ್ದ ಚಿತ್ರತಂಡಕ್ಕೆ ಮತ್ತೊಂದು ಸಂತಸವೂ ಕೈ ಹಿಡಿದಿದೆ. ಅದಕ್ಕೆ ಕಾರಣವಾಗಿರೋದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರೇ ಈ ಹಾಡಿನ ಬಗ್ಗೆ ವ್ಯಕ್ತಪಡಿಸಿರೋ ಮೆಚ್ಚುಗೆ!

    ಅತ್ತ ಯೂಟ್ಯೂಬ್ ನಲ್ಲಿ ಸದರಿ ಹಾಡು ಟ್ರೆಂಡ್ ಕ್ರಿಯೇಟ್ ಮಾಡುತ್ತಲೇ ಇತ್ತ ದರ್ಶನ್ ಅವರು ಇದನ್ನು ಕೊಂಡಾಡಿದ್ದಾರೆ. ನಾಯಕನಾಗಿ ಶ್ರೇಯಸ್ ಹಾಕಿರೋ ಎಫರ್ಟ್ ಬಗ್ಗೆಯೂ ಮನದುಂಬಿ ಮೆಚ್ಚುಗೆ ಸೂಚಿಸಿದ್ದಾರೆ.

    ಈ ಹಾಡು ತುಂಬಾ ಚೆನ್ನಾಗಿ ಮೂಡಿ ಬಂದಿದೆ ಅಂದಿರೋ ದರ್ಶನ್, ಚಿತ್ರರಂಗಕ್ಕೆ ಅನೇಕರು ಬರುತ್ತಾರೆ. ಆದರೆ ಅದಕ್ಕೆ ಬೇಕಾದ ಎಲ್ಲ ತಯಾರಿಯನ್ನೂ ಮಾಡಿಕೊಂಡು ಅಖಾಡಕ್ಕಿಳಿಯುವವರು ಕಡಿಮೆ. ಆದರೆ ಕೆ.ಮಂಜು ಅವರ ಪುತ್ರ ಶ್ರೇಯಸ್ ಸಂಪೂರ್ಣ ತಯಾರಿ ಮಾಡಿಕೊಂಡೇ ಬಂದಿದ್ದಾರೆ. ಅದು ಈಗಾಗಲೇ ಸ್ಪಷ್ಟವಾಗಿ ಕಾಣಿಸುತ್ತಿದೆ. ಶ್ರೇಯಸ್, ನಿರ್ದೇಶಕರಾದ ಗುರುದೇಶಪಾಂಡೆ ಸೇರಿ ಇಡೀ ಚಿತ್ರ ತಂಡಕ್ಕೆ ಒಳ್ಳೇದಾಗಲಿ. ಪಡ್ಡೆಹುಲಿ ಚಿತ್ರ ದೊಡ್ಡ ಮಟ್ಟದ ಯಶ ದಾಖಲಿಸಲಿ ಅಂತ ದರ್ಶನ್ ಹಾರೈಸಿದ್ದಾರೆ.

    ನಾ ತುಂಬಾ ಹೊಸಬ ಬಾಸು ಹಾಡಂತೂ ಈಗ ಎಲ್ಲ ಪ್ರೇಕ್ಷಕರನ್ನೂ ಮೋಡಿ ಮಾಡಿ ಮಾಡಿದೆ. ಯೂಟ್ಯೂಬ್‍ನಲ್ಲಂತೂ ಟ್ರೆಂಡಿಂಗ್ ಅನ್ನು ಈ ಕ್ಷಣದವರೆಗೂ ಕಾಯ್ದುಕೊಂಡಿದೆ. ಶ್ರೇಯಸ್ ಎನರ್ಜಿ, ಅಭಿನಯ ಮತ್ತು ಸಾಹಿತ್ಯದ ಖದರ್ ಸೇರಿದಂತೆ ಎಲ್ಲವೂ ಜನಮನ ಸೆಳೆದುಕೊಂಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವಿಷ್ಣು ಅಭಿಮಾನಿಗಳಿಗೆ ಪಡ್ಡೆಹುಲಿ ಹಾಡಿನ ಉಡುಗೊರೆ!

    ವಿಷ್ಣು ಅಭಿಮಾನಿಗಳಿಗೆ ಪಡ್ಡೆಹುಲಿ ಹಾಡಿನ ಉಡುಗೊರೆ!

    ಬೆಂಗಳೂರು: ಗುರುದೇಶಪಾಂಡೆ ನಿರ್ದೇಶನದಲ್ಲಿ ರೂಪುಗೊಂಡಿರೋ ಚಿತ್ರ ಪಡ್ಡೆಹುಲಿ. ಈ ಮೂಲಕ ನಿರ್ಮಾಪಕ ಕೆ. ಮಂಜು ಪುತ್ರ ಶ್ರೇಯಸ್ ನಾಯಕನಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ಇದೀಗ ಈ ಸಿನಿಮಾದ ಹಾಡೊಂದು ರೆಡಿಯಾಗಿದೆ. ಕೆ.ಮಂಜು ಈ ಹಾಡನ್ನು ತಮ್ಮ ಗುರುಗಳಾದ ವಿಷ್ಣುವರ್ಧನ್ ಅವರಿಗೆ ಅರ್ಪಿಸಿರೋದಲ್ಲದೆ, ವಿಷ್ಣು ಅಭಿಮಾನಿಗಳಿಗೆಂದೇ ವಿಶೇಷ ಪ್ರದರ್ಶನವನ್ನೂ ಏರ್ಪಡಿಸಿದ್ದಾರೆ!

    ಇದು ನಾಯಕನನ್ನು ಪರಿಚಯಿಸೋ ಸಾಂಗು. ನಾ ತುಂಬಾ ಹೊಸಬ ಬಾಸು ಅಂತ ಆರಂಭವಾಗೋ ಈ ಹಾಡನ್ನು ಶ್ರದ್ಧೆಯಿಂದ ಚಿತ್ರತಂಡ ರೂಪಿಸಿದೆ. ಇದನ್ನು ಕೆ.ಮಂಜು ತಮ್ಮ ಗುರುಸ್ವರೂಪಿಯಾದ ವಿಷ್ಣುವರ್ಧನ್ ಅವರಿಗೆ ಅರ್ಪಿಸಿದ್ದಾರೆ. ಫೆಬ್ರವರಿ 2ರಂದು ಮಧ್ಯಾಹ್ನ ಹನ್ನೆರಡು ಘಂಟೆಗೆ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ವಿಷ್ಣು ಅಭಿಮಾನಿಗಳಿಗೆಂದೇ ವಿಶೇಷ ಪ್ರದರ್ಶನವನ್ನೂ ಆಯೋಜಿಸಿದ್ದಾರೆ. ಈ ಹಾಡನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಂದು ವೀಕ್ಷಿಸುವಂತೆ ವಿಷ್ಣು ಅಭಿಮಾನಿಗಳಲ್ಲಿ ಮನವಿಯನ್ನೂ ಮಾಡಿಕೊಂಡಿದ್ದಾರೆ.

    ಈ ಹಿಂದೆ ಪಡ್ಡೆಹುಲಿಯ ರ‍್ಯಾಪ್ ಶೈಲಿಯ ಒಂದು ಹಾಡನ್ನ ವಿಷ್ಣುವರ್ಧನ್ ಅವರಿಗೆ ಅರ್ಪಿಸಲಾಗಿತ್ತು. ಅದರಲ್ಲಿ ಶ್ರೇಯಸ್ ನಾಗರಹಾವಿನ ವಿಷ್ಣು ಗೆಟಪ್ಪಿನಲ್ಲಿ ಮಿಂಚಿದ್ದರು. ಅದರಂತೆಯೇ ಈ ಹಾಡೂ ಕೂಡಾ ಚೆಂದಗೆ ಮೂಡಿ ಬಂದಿದೆಯಂತೆ. ವಿಷ್ಣು ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಮಂಜು ಅವರನ್ನೇ ತಮ್ಮ ಗುರುವೆಂದು ಪರಿಭಾವಿಸಿರುವವರು. ತಮ್ಮ ಮಗನ ಮೊದಲ ಚಿತ್ರದ ಮೂಲಕ ಅವರು ವಿಷ್ಣು ಅಭಿಮಾನವನ್ನ ಮತ್ತಷ್ಟು ಗಾಢವಾಗಿ, ಸಾರ್ಥಕವಾಗಿ ಪ್ರಚುರಪಡಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv