Tag: Guruvayur

  • ಹುಟ್ಟುಹಬ್ಬದಂದು ಗುರುವಾಯೂರಿಗೆ ಗೋಲ್ಡ್ ಕಿರೀಟ ಅರ್ಪಿಸಲಿದ್ದಾರೆ ಚಿನ್ನದ ವ್ಯಾಪಾರಿ

    ಹುಟ್ಟುಹಬ್ಬದಂದು ಗುರುವಾಯೂರಿಗೆ ಗೋಲ್ಡ್ ಕಿರೀಟ ಅರ್ಪಿಸಲಿದ್ದಾರೆ ಚಿನ್ನದ ವ್ಯಾಪಾರಿ

    ತಿರುವನಂತಪುರಂ: ಚಿನ್ನದ ವ್ಯಾಪಾರಿಯೊಬ್ಬರು (Gold Merchant) ಪ್ರಸಿದ್ಧ ಗುರುವಾಯೂರು (Guruvayur Temple) ದೇಗುಲಕ್ಕೆ ಚಿನ್ನದ ಕಿರೀಟವನ್ನು ನೀಡುತ್ತಿರುವ ಮೂಲಕ ಇದೀಗ ಎಲ್ಲರ ಗಮನಸೆಳೆದಿದ್ದಾರೆ.

    ಕೊಯಮತ್ತೂರಿನಲ್ಲಿ ಚಿನ್ನದ ಉದ್ಯಮ ನಡೆಸುತ್ತಿರುವ ತ್ರಿಶೂರ್ ಮೂಲದ ಕೆ.ವಿ ರಾಜೇಶ್ ಆಚಾರ್ಯ ತನ್ನ ಹುಟ್ಟುಹಬ್ಬದ ದಿನದಂದು ಈ ಉಡುಗೊರೆಯನ್ನು  ನೀಡಲಿದ್ದಾರೆ.

    ಸೆಪ್ಟೆಂಬರ್ 6ರ ಬುಧವಾರದಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಇದೆ. ಅದೇ ದಿನ ದೇವರಿಗೆ 38 ಪವನ್ ನ ಈ ಚಿನ್ನದ ಕಿರೀಟವನ್ನು (Golden Crown) ಧರಿಸಲಾಗುತ್ತದೆ. ಜನ್ಮಾಷ್ಟಮಿ ದಿನ ಕಾಣಿಕೆಯಾಗಿ ಸ್ವೀಕರಿಸಿದ ವಸ್ತುಗಳನ್ನು ವಿಗ್ರಹದ ಮೇಲೆ ಧರಿಸಲಾಗುತ್ತದೆ. ನಂತರ ದೇವಸ್ವಂನ ರಿಜಿಸ್ಟರ್ ನಲ್ಲಿ ದಾಖಲಿಸಲಾಗುತ್ತದೆ ಮತ್ತು ಸುರಕ್ಷಿತ ಲಾಕರ್ ಗೆ ವರ್ಗಾಯಿಸಲಾಗುತ್ತದೆ. ಇದನ್ನೂ ಓದಿ: ಗಂಡಸರೆ ನನ್ನ ಮುಟ್ಟಬೇಡಿ, ನಾನು ಪವಿತ್ರಳು : ರಾಖಿ ಸಾವಂತ್ ಮನವಿ

    ಕಳೆದ ತಿಂಗಳು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರ ಪತ್ನಿ ದುರ್ಗಾ ಅವರು ಗುರುವಾಯೂರಪ್ಪನವರಿಗೆ 14 ಲಕ್ಷ ಮೌಲ್ಯದ ಚಿನ್ನದ ಕಿರೀಟವನ್ನು ಅರ್ಪಿಸಿದ್ದರು. ಜೊತೆಗೆ ಶ್ರೀಗಂಧವನ್ನು ಅರೆಯುವ ಅಂದಾಜು 2 ಲಕ್ಷ ಮೌಲ್ಯದ ಯಂತ್ರವನ್ನೂ ದೇಗುಲಕ್ಕೆ ದಾನ ಮಾಡಿದ್ದರು. ಇನ್ನು ಉದ್ಯಮಿ ಡಾ. ರವಿ ಪಿಳ್ಳೈ ಅವರು 2021ರ ಸೆಪ್ಟೆಂಬರ್‍ನಲ್ಲಿ 725 ಗ್ರಾಂ. ಚಿನ್ನದ ಕಿರೀಟವನ್ನು ಉಡುಗೊರೆಯಾಗಿ ನೀಡಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗುರುವಾಯೂರ್ ದೇವಾಲಯದಲ್ಲಿ ಕಮಲದ ಹೂಗಳಿಂದ ಮೋದಿ ತುಲಾಭಾರ

    ಗುರುವಾಯೂರ್ ದೇವಾಲಯದಲ್ಲಿ ಕಮಲದ ಹೂಗಳಿಂದ ಮೋದಿ ತುಲಾಭಾರ

    ತಿರುವನಂತಪುರಂ: ಪ್ರಧಾನಿ ಮೋದಿ ಅವರು ಮಾಲ್ಡೀವ್ಸ್‍ಗೆ ವಿದೇಶ ಪ್ರವಾಸಕ್ಕೆ ಹೋಗುತ್ತಿದ್ದು, ಆದಕ್ಕೂ ಮುನ್ನ ಬೆಳಗ್ಗೆ ಕೇರಳದ ಗುರುವಾಯೂರ್  ಸನ್ನಿಧಿಯಲ್ಲಿಯಲ್ಲಿ ತುಲಾಭಾರ ಮಾಡಿಸಿದ್ದಾರೆ.

    ಲೋಕಸಭಾ ಚುನಾವಣೆಯ ಭರ್ಜರಿ ಗೆಲುವಿನ ನಂತರ ಮೊದಲ ಬಾರಿಗೆ ದೇವಸ್ಥಾನಕ್ಕೆ ಭೇಟಿ ನೀಡಿ 5 ಸಾವಿರ ವರ್ಷಗಳ ಇತಿಹಾಸ ಇರುವ ಗುರುವಾಯೂರ್ ಶ್ರೀ ಕೃಷ್ಣನ ದರ್ಶನ ಪಡೆದರು.

    ಬಿಳಿ ಬಣ್ಣದ ಧೋತಿ ಮತ್ತು ಶಲ್ಯ ಧರಿಸಿದ್ದ ಮೋದಿ ಅವರು ಬಿಜೆಪಿಯ ಚಿಹ್ನೆಯಾದ ಕಮಲದ ಹೂಗಳಿಂದ ತುಲಾಭಾರ ಮಾಡಿಸಿಕೊಂಡರು. ಒಂದು ಗಂಟೆಯ ದರ್ಶನದ ನಂತರ ಮೋದಿ ಅವರು, ಕೇರಳದ ಬಿಜೆಪಿ ಸಮಿತಿ ಗುರುವಾಯೂರ್ ನಲ್ಲಿ ಆಯೋಜಿಸಿದ್ದ ಅಭಿನಂದನಾ ಸಭೆಯಲ್ಲಿ ಭಾಗವಹಿಸಿದರು.

    ಎರಡನೇ ಬಾರಿ ಪ್ರಧಾನಿಯಾಗಿ ಆಯ್ಕೆಯಾದ ನಂತರ ಮೊದಲ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ಕೇರಳದ ಜನತೆ ಬಿಜೆಪಿಗೆ ಮತಹಾಕದಿದ್ದರೂ ಮೋದಿ ಯಾಕೆ ಕೇರಳಕ್ಕೆ ಬಂದಿದ್ದಾರೆ ಎಂದು ಆಶ್ಚರ್ಯವಾಗಬಹುದು. ಆದರೆ ಕೇರಳ ಬಿಜೆಪಿಗೆ ವೋಟ್ ಮಾಡದೇ ಇದ್ದರೂ ನನ್ನ ಕ್ಷೇತ್ರ ವಾರಣಾಸಿಯಂತೆ ಈ ರಾಜ್ಯವೂ ನನಗೆ ಇಷ್ಟ. ಚುನಾವಣೆ ಮತ್ತು ಪ್ರಜಾಪ್ರಭುತ್ವದ ಆಚರಣೆಗಳು ಬೇರೆ ಬೇರೆ. ಇದನ್ನು ನಾವು ಗೌರವಿಸಬೇಕು ಎಂದು ಹೇಳಿದರು.

    ಕೇರಳದಲ್ಲಿ ಬಿಜೆಪಿ ಒಂದು ಸ್ಥಾನವನ್ನು ಗೆದ್ದಿಲ್ಲ. ಆದರೆ ಮೋದಿ ಅಲ್ಲಿನ ಜನರಿಗೆ ಧನ್ಯವಾದ ತಿಳಿಸಲು ಹೋಗಿದ್ದು ಯಾಕೆ. ಮೋದಿ ತಲೆಯಲ್ಲಿ ಏನಿದೆ ಎಂದು ಕೆಲ ರಾಜಕೀಯ ಚಿಂತಕರು ಪ್ರಶ್ನೆ ಮಾಡುತ್ತಿರಬಹುದು. ಆದರೆ ಇದು ನಮ್ಮ ಸಂಸ್ಕೃತಿ ಇದು ನಮ್ಮ ಚಿಂತನೆ. ಈ ಕಾರಣಕ್ಕೆ ನಾನು ಕೇರಳಕ್ಕೆ ಬಂದಿದ್ದೇನೆ ಎಂದು ತಿಳಿಸಿದರು.

    ಶುಕ್ರವಾರ ರಾತ್ರಿ ಕೇರಳಕ್ಕೆ ಬಂದಿದ್ದ ಮೋದಿ ಅವರು ಸರ್ಕಾರಿ ಅತಿಥಿ ಗೃಹದಲ್ಲಿ ತಂಗಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕೇರಳದಲ್ಲಿ ಖಾತೆ ತೆರೆಯಲು ವಿಫಲವಾಗಿತ್ತು. ಕೇರಳದಲ್ಲಿ ಕಾಂಗ್ರೆಸ್ ಸ್ಪರ್ಧಿಸಿದ 16 ಕ್ಷೇತ್ರಗಳ ಪೈಕಿ 15ರಲ್ಲಿ ಗೆಲುವು ಸಾಧಿಸಿತ್ತು. ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟ 20 ಕ್ಷೇತ್ರಗಳ ಪೈಕಿ 19 ಸ್ಥಾನಗಳನ್ನು ಗೆದ್ದುಕೊಂಡಿತ್ತು.