ಕಲಬುರಗಿ: ಗುಟ್ಕಾ (Gutka) ತಿನ್ನಬೇಡ, ಶರೀರ ಹಾಳಾಗುತ್ತದೆ ಎಂದು ಅಜ್ಜಿ ಬುದ್ಧಿವಾದ ಹೇಳಿದ್ದಕ್ಕೆ, ಮೊಮ್ಮಗನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಅಫಜಲಪುರ (Afzalpur) ತಾಲೂಕಿನ ಕರ್ಜಗಿ ಗ್ರಾಮದಲ್ಲಿ ಶನಿವಾರ ನಡೆದಿದೆ.
ರೋಹಿತ್ ಮಣ್ಣಾಂಕಲಗಿ ಆತ್ಮಹತ್ಯೆ ಮಾಡಿಕೊಂಡ ಬಾಲಕ. ಅಫಜಲಪುರ ತಾಲೂಕಿನ ಕರ್ಜಗಿ ಗ್ರಾಮದ ರೋಹಿತ್ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ದಮಯಂತಿ ಎಂಬ ಅಜ್ಜಿ ತನ್ನ ಮೊಮ್ಮಗನನ್ನು ಕಳೆದ ಏಳೆಂಟು ವರ್ಷಗಳಿಂದ ಸಾಕಿ ಸಲುಹಿ, ವಿದ್ಯಾಭ್ಯಾಸ ಕೊಡಿಸುತ್ತಿದ್ದಳು. ಅಜ್ಜಿಗೆ ಮೊಮ್ಮಗ ಗುಟ್ಕಾ ತಿನ್ನುವ ವಿಚಾರ ಆತನ ಸ್ನೇಹಿತರಿಂದ ಗೊತ್ತಾಗಿದ್ದು, ತಿನ್ನಬೇಡಾ ಎಂಬ ಬುದ್ಧಿಮಾತುಗಳನ್ನು ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿಂದು ʻಧರ್ಮ ಸಂರಕ್ಷಣಾʼ ಸಮಾವೇಶ
ಮುಂಬೈ: ಮಹಾರಾಷ್ಟ್ರದ ಪುಣೆಯಲ್ಲಿರುವ ಕಂಪನಿಯ (Pune Company) ಕ್ಯಾಂಟೀನ್ನಲ್ಲಿ ಸಮೋಸಾದೊಳಗೆ (Samosa) ಬ್ಯಾಂಡೇಜ್, ಕಾಂಡೋಮ್, ಕಲ್ಲುಗಳು ಮತ್ತು ತಂಬಾಕು ಮುಂತಾದ ವಸ್ತುಗಳು ಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಐವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಮಾಧ್ಯಮ ವರದಿಗಳ ಪ್ರಕಾರ, ಪುಣೆಯ ಪಿಂಪ್ರಿ ಚಿಂಚ್ವಾಡ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಚಿಖಾಲಿ ಮೂಲದ ಕಂಪನಿಯೊಂದರ ಅಧಿಕಾರಿ ಕೀರ್ತಿಕುಮಾರ್ ಶಂಕರರಾವ್ ದೇಸಾಯಿ ಅವರು ಏ.7 ರಂದು ಪೊಲೀಸರಿಗೆ ದೂರು ನೀಡಿದ್ದಾರೆ. ಚಿಖಾಲಿ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಲ್ಲಿ, ತಮ್ಮ ಕಂಪನಿಯು ಚಿಖಾಲಿಯ ಮತ್ತೊಂದು ದೊಡ್ಡ ಕಂಪನಿಯಿಂದ ಆಹಾರ ಪೂರೈಕೆಗಾಗಿ ಆದೇಶವನ್ನು ಪಡೆದಿದೆ. ಅದರಂತೆ ಕೀರ್ತಿಕುಮಾರ್ ಅವರು ರಹೀಮ್ ಖಾನ್ ಮಾಲೀಕತ್ವದ SRS ಎಂಟರ್ ಪ್ರೈಸಸ್ ಹೆಸರಿನ ಕಂಪನಿಯೊಂದಿಗೆ ಸಮೋಸಾ ಪೂರೈಕೆಗೆ ಒಪ್ಪಂದ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ.
ಆಗಿದ್ದೇನು..?: ಕೀರ್ತಿಕುಮಾರ್ ಪ್ರಕಾರ , ಒಂದು ದಿನ SRS ಕಂಪನಿಯಿಂದ ಸರಬರಾಜಾಗುತ್ತಿದ್ದ ಸಮೋಸದಲ್ಲಿ ಗಾಯಗಳಿಗೆ ಹಾಕುವ ಬ್ಯಾಂಡೇಜ್ (Bandage) ಪತ್ತೆಯಾಗಿದೆ. ಸಿಬ್ಬಂದಿಯಿಂದ ಈ ಕುರಿತು ದೂರು ಸ್ವೀಕರಿಸಿದ ಕೀರ್ತಿಕುಮಾರ್ ಅವರ ಕಂಪನಿಯು ಎಸ್ಆರ್ಎಸ್ನೊಂದಿಗಿನ ಒಪ್ಪಂದವನ್ನು ಮುರಿದುಕೊಳ್ಳಲಾಯಿತು. ಬಳಿಕ ಪುಣೆ ಮೂಲದ ಮತ್ತೊಂದು ಕಂಪನಿಯಾದ ಮನೋಹರ್ ಎಂಟರ್ಪ್ರೈಸಸ್ಗೆ ಸಮೋಸಾಗಳನ್ನು ಪೂರೈಸಲು ಸೂಚನೆ ನೀಡಿತು. ಇದರಿಂದ ಸಿಟ್ಟಿಗೆದ್ದ SRS ಮಾಲೀಕ ರಹೀಮ್ ಖಾನ್ ತನ್ನ ಸಹಚರರಾದ ಅಜರ್ ಶೇಖ್ ಮತ್ತು ಮಜರ್ ಶೇಖ್ ಜೊತೆ ಸೇರಿ ದೊಡ್ಡ ಸಂಚು ರೂಪಿಸಿದ್ದ.
ಅದರಂತೆ ಮಾರ್ಚ್ 27 ರಂದು ರಹೀಮ್ ಖಾನ್, ತನ್ನ ಕೆಲಸಗಾರರಿಗೆ ಕಾಂಡೋಮ್ಗಳು (Condoms), ಗುಟ್ಕಾ (Gutkha) ಮತ್ತು ಕಲ್ಲುಗಳನ್ನು ಸಮೋಸಾಳ ಒಳಗೆ ತುಂಬಲು ಸೂಚಿಸಿದ್ದಾನೆ. ಬಳಿಕ ಒಪ್ಪದ ಕೊನೆಗೊಳಿಸಲು ಮುಂದಾದ ಕಂಪನಿಗೆ ಬೆಳಗ್ಗೆ 7:30 ರಿಂದ 9 ರ ನಡುವೆ ಈ ಸಮೋಸಗಳನ್ನು ವಿತರಿಸಿದರು. ಈ ವೇಳೆ ಕಾಂಡೋಮ್, ಗುಟ್ಕಾ ಮೊದಲಾದ ವಸ್ತುಗಳು ಸಿಕ್ಕಿವೆ. ಈ ಕುರಿತು ಸಿಬ್ಬಂದಿಯು ಕೀರ್ತಿಕುಮಾರ್ ಅವರಿಗೆ ದೂರು ನೀಡಿದ್ದಾರೆ. ಕೂಡಲೇ ಕೀರ್ತಿ ಕುಮಾರ್ ಅವರು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದೂರು ಸ್ವೀಕರಿಸಿದ ಪೊಲೀಸರು ರಹೀಮ್ ಶೇಖ್, ಫಿರೋಜ್ ಶೇಖ್, ವಿಕ್ಕಿ ಶೇಖ್, ಅಜರ್ ಶೇಖ್ ಮತ್ತು ಮಜರ್ ಶೇಖ್ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಅಲ್ಲದೇ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 328 (ವಿಷದ ಮೂಲಕ ನೋವುಂಟುಮಾಡುವುದು), 120-ಬಿ (ಕ್ರಿಮಿನಲ್ ಪಿತೂರಿ) ಮತ್ತು 34 (ಸಾಮಾನ್ಯ ಉದ್ದೇಶದ ಮುಂದುವರಿಕೆಗಾಗಿ ಹಲವಾರು ವ್ಯಕ್ತಿಗಳು ಮಾಡಿದ ಕೃತ್ಯಗಳು) ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣ ಸಂಬಂಧ ಈಗಾಗಲೇ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಈ ಕುರಿತು ತನಿಖೆ ಮುಂದುವರಿದಿದೆ.
ಬೆಳಗಾವಿ: ಗುಟ್ಕಾ (Gutka) ತಿಂದು ಉಗುಳಿದ ವಿಚಾರಕ್ಕೆ ಇಬ್ಬರ ನಡುವೆ ವಾಗ್ವಾದ ಏರ್ಪಟ್ಟು ಗಲಾಟೆಗೆ ತಿರುಗಿ ಕೊಲೆಯಲ್ಲಿ (Murder) ಅಂತ್ಯವಾಗಿರುವ ಘಟನೆ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅನಿಗೋಳದಲ್ಲಿ ನಡೆದಿದೆ.
ಆರೋಪಿ ಹಾಗೂ ಹತ್ಯೆಯಾದ ಇಬ್ಬರೂ ಕಳೆದ ರಾತ್ರಿ ಕುಡಿದ ಮತ್ತಿನಲ್ಲಿ ಪಾನ್ ಶಾಪ್ ಬಳಿ ನಿಂತಿದ್ದರು. ಈ ವೇಳೆ ಇಬ್ಬರ ನಡುವೆ ಗಲಾಟೆ ನಡೆದಿದೆ. ಜಗಳ ತಾರಕಕ್ಕೇರಿ ಅಜಯ್ ಮಂಜುನಾಥ್ ತಲೆ ಮೇಲೆ ದೊಡ್ಡ ಗಾತ್ರದ ಕಲ್ಲನ್ನು ಎತ್ತಿ ಹಾಕಿ ಹತ್ಯೆ ನಡೆಸಿದ್ದಾನೆ. ಬಳಿಕ ಆತ ಸ್ಥಳದಿಂದ ಪರಾರಿಯಾಗಿದ್ದಾನೆ.
ಭೋಪಾಲ್: ಮದ್ಯಪಾನ (Liquor) ಬೇಕಾದರೂ ಮಾಡಿ, ಗುಟ್ಕಾ (Gutka) ಬೇಕಾದರೂ ತಿನ್ನಿ, ಅಯೋಡೆಕ್ಸ್ನಾದ್ರೂ ತಿನ್ನಿ ಆದರೆ, ನೀರಿನ ಮಹತ್ವವನ್ನು ಅರ್ಥಮಾಡಿಕೊಳ್ಳಿ ಎಂದು ನೀರಿನ ಸಂರಕ್ಷಣೆ ಕುರಿತಂತೆ ಸಲಹೆ ನೀಡುವ ಭರದಲ್ಲಿ ಬಿಜೆಪಿ (Bharatiya Janata Party) ಸಂಸದ ಜನಾರ್ದನ್ ಮಿಶ್ರಾ (Janardan Mishra) ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಭಾನುವಾರ ಜಿಲ್ಲೆಯ ರೇವಾದ (Rewa) ಕೃಷ್ಣರಾಜ್ ಕಪೂರ್ ಸಭಾಂಗಣದಲ್ಲಿ (Krishnaraj Kapoor Auditorium) ಜಲ ಸಂರಕ್ಷಣೆ ಕುರಿತಂತೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇಳೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಮೀನುಗಳು ನೀರಿನಿಂದ ಬತ್ತಿ ಹೋಗುತ್ತಿದ್ದು, ಅವುಗಳನ್ನು ಉಳಿಸಬೇಕು. ನೀವು ಗುಟ್ಕಾನಾದ್ರೂ ತಿನ್ನಿ, ಮದ್ಯನಾದ್ರೂ ಸೇವಿಸಿ, ವಾಸನೆ ಬರುವ ಅಯೋಡೆಕ್ಸ್ ಆದ್ರೂ ತಿನ್ನಿ, ಆದರೆ ನೀರಿನ ಮಹತ್ವವನ್ನು ಅರ್ಥಮಾಡಿಕೊಳ್ಳಿ ಎಂದು ಹೇಳಿದ್ದಾರೆ. ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ನೆಟ್ ಪ್ರಾಕ್ಟೀಸ್ ವೇಳೆ ರೋಹಿತ್ ಶರ್ಮಾ ಬಲಗೈಗೆ ಪೆಟ್ಟು – ಟೀಂ ಇಂಡಿಯಾಗೆ ಆಘಾತ
#WATCH | Rewa, Madhya Pradesh: “Lands are running dry of water, it must be saved… Drink alcohol, chew tobacco, smoke weed or smell thinner and solution but understand the importance of water,” says BJP MP Janardan Mishra during a water conservation workshop pic.twitter.com/Nk878A9Jgc
ಇದೇ ವೇಳೆ ಯಾವುದಾದರೂ ಸರ್ಕಾರ ನೀರಿನ ತೆರಿಗೆಯನ್ನು ಮನ್ನಾ ಮಾಡಲು ಘೋಷಿಸಿದರೆ ನಾವು ನೀರಿನ ತೆರಿಗೆಯನ್ನು ಪಾವತಿಸುತ್ತೇವೆ ಮತ್ತು ನೀವು ವಿದ್ಯುತ್ ಬಿಲ್ ಸೇರಿದಂತೆ ಉಳಿದ ತೆರಿಗೆಗಳಿಂದಲೂ ರಿಲೀಫ್ ಪಡೆದುಕೊಳ್ಳಬಹುದು ಎಂದಿದ್ದಾರೆ. ಇದನ್ನೂ ಓದಿ: ಬಾಲಕಿಯರ ಶೌಚಾಲಯವನ್ನು ಬರಿಗೈಯಲ್ಲೇ ಸ್ವಚ್ಛಗೊಳಿಸಿದ ಬಿಜೆಪಿ MP
ಜನಾರ್ದನ್ ಮಿಶ್ರಾ ಅವರು ಸುದ್ದಿಯಾಗುತ್ತಿರುವುದು ಇದೇ ಮೊದಲೆನಲ್ಲ, ಈ ಹಿಂದೆ ಬಾಲಕಿಯರ ಶಾಲೆಯ ಶೌಚಾಲಯದ ಅನೈರ್ಮಲ್ಯವನ್ನು ಗಮನಿಸಿ ಅದನ್ನು ಬರಿಗೈಯಲ್ಲಿ ಸ್ವಚ್ಛಗೊಳಿಸಿದ್ದರು. ಅಲ್ಲದೇ , ಸ್ವಚ್ಛತೆ ಮತ್ತು ಶುಚಿತ್ವವನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ. ಇದು ಮಹಾತ್ಮ ಗಾಂಧಿ ಮತ್ತು ಪ್ರಧಾನಿ ಮೋದಿಯವರ ಸಂದೇಶವಾಗಿದೆ. ಇಂತಹ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದ್ದು ಇದೇ ಮೊದಲಲ್ಲ ಎಂದಿದ್ದರು. ಈ ವೀಡಿಯೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.
Live Tv
[brid partner=56869869 player=32851 video=960834 autoplay=true]
ವಿಜಯವಾಡ: ತಂಬಾಕು, ನಿಕೊಟಿನ್ ಹಾಗೂ ಇತರೆ ತಂಬಾಕಿನ ಉತ್ಪನ್ನಗಳ ತಯಾರಿಕೆಯಾದ ಗುಟ್ಕಾ ಹಾಗೂ ಪಾನ್ ಮಸಾಲಗಳ ಮಾರಾಟವನ್ನು ಆಂಧ್ರಪ್ರದೇಶ ಸರ್ಕಾರ ನಿಷೇಧಿಸಿದೆ.
ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕಾಯ್ದೆ ಅಡಿಯಲ್ಲಿ ಈ ಕಾನೂನನ್ನು ಜಾರಿಗೆ ತರಲಾಗಿದೆ. ಇನ್ಸ್ಟಿಟ್ಯೂಟ್ ಆಫ್ ಪ್ರಿವೆಂಟಿವ್ ಮೆಡಿಸಿನ್, ಸಾರ್ವಜನಿಕ ಆರೋಗ್ಯ ಪ್ರಯೋಗಾಲಯಗಳು ಮತ್ತು ಆರೋಗ್ಯ, ಆಹಾರ ಸುರಕ್ಷತಾ ನಿರ್ದೇಶನಾಲಯದ ಆಯುಕ್ತರು ಈ ಆದೇಶವನ್ನು ಹೊರಡಿಸಿದ್ದಾರೆ.
ಇಂದಿನಿಂದ ಒಂದು ವರ್ಷದವರೆಗೆ ಈ ನಿಯಮವೂ ರಾಜ್ಯಾದ್ಯಂತ ಜಾರಿಯಲ್ಲಿರುತ್ತದೆ ಎಂದು ಸರ್ಕಾರ ತಿಳಿಸಿದೆ. ರಾಜ್ಯ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಪದಾರ್ಥಗಳನ್ನು ಹೊಂದಿರುವ ಗುಟ್ಕಾ, ಪಾನ್ ಮಸಾಲ ತಯಾರಿಕೆ, ಸಂಗ್ರಹಣೆ, ವಿತರಣೆ, ಸಾಗಣೆ ಮತ್ತು ಮಾರಾಟದಿಂದ ಅಪಾರ ಹಾನಿಯಾಗುತ್ತದೆ. ಅದನ್ನು ತಿನ್ನುವುದರಿಂದ ಹೃದಯಕ್ಕೆ ಸಂಬಂಧಿಸಿದ ಕಾಯಲೆಗಳು ಬರುವ ಸಾಧ್ಯತೆಯಿದ್ದು, ಇದರಿಂದಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಯುಎಸ್, ಭಾರತದ 900ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾಗೊಳಿಸಿದ CEO
ತಂಬಾಕು ಉತ್ಪನ್ನಗಳನ್ನು ಜಗಿಯುವ ತಂಬಾಕು, ಖೈನಿ, ಖರ್ರಾ, ಪರಿಮಳಯುಕ್ತ ತಂಬಾಕು ಹೀಗೆ ವಿವಿಧ ಬಗೆಯಲ್ಲಿ ಪ್ಯಾಕ್ ಮಾಡಲಾಗುವ ತಂಬಾಕು ಮಾರಾಟವನ್ನು ಇಡೀ ಆಂಧ್ರಪ್ರದೇಶದಲ್ಲಿ ಒಂದು ವರ್ಷಗಳ ಕಾಲ ನಿಷೇಧಿಸಲಾಗಿದೆ.
ಬೆಳಗಾವಿ: ಗುಟ್ಕಾ ಸಾಲ ಕೊಡಲಿಲ್ಲ ಎಂಬ ಕಾರಣಕ್ಕೆ ಪಾನ್ ಶಾಪ್ ಮಾಲೀಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ಘಟನೆಯಿಂದ ಕುಂದಾನಗರಿ ಜನ ಬೆಚ್ಚಿಬಿದ್ದಿದ್ದಾರೆ.
ಮಂಗಳವಾರ ರಾತ್ರಿ ಬೆಳಗಾವಿಯ ವಡಗಾವಿ ಪ್ರದೇಶದ ಲಕ್ಷ್ಮೀ ನಗರದಲ್ಲಿ ಗಣೇಶ ವಿಸರ್ಜನೆ ಕಾರ್ಯಕ್ರಮ ಜೋರಾಗಿತ್ತು. ಜನರು ಗಣೇಶನ ವಿಸರ್ಜನೆಯಲ್ಲಿಯೇ ತಲ್ಲೀನರಾಗಿದ್ದರು. ಆದರೆ ಇತ್ತ ಆರೋಪಿ ದತ್ತಾತ್ರೇಯ ಶಿವಾನಂದ ಜತ್ತಿನಮಠ ಗುಟ್ಕಾ ಸಾಲ ಕೊಡು ಎಂದು ಬಂದಿದ್ದು, ಉದ್ರಿ ಕೊಡುವುದಿಲ್ಲ ಎಂದು ಪಾನ್ ಶಾಪ್ ಮಾಲೀಕ ಬಾಲಕೃಷ್ಣ ಶೆಟ್ಟಿ ಹೇಳಿದ್ದಾರೆ. ಇಷ್ಟು ಅಂದಿದ್ದೇ ತಡ ಪಾನ್ ಅಂಗಡಿ ಮಾಲೀಕನನ್ನು ದತ್ತಾತ್ರೇಯ ಶಿವಾನಂದ ಜತ್ತಿನಮಠ ಹತ್ಯೆ ಮಾಡಿದ್ದಾನೆ. ಇದನ್ನೂ ಓದಿ: ಎಲೆಕ್ಟ್ರಾನಿಕ್ ಸಿಟಿ ಅಪಘಾತ – ನಿನ್ನೆಯಷ್ಟೇ ಕೆಲಸಕ್ಕೆ ಸೇರಿದ್ದ ಕೃತಿಕ ರಾಮಾನ್
ಹತ್ಯೆಯಾದ ಬಾಲಕೃಷ್ಣ ಶೆಟ್ಟಿ ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರದವರು. ಕಳೆದ 25 ವರ್ಷಗಳಿಂದ ಪಾನ್ ಶಾಪ್ ನಡೆಸುತ್ತಿದ್ದರು. ಬೆಳಗ್ಗೆಯಿಂದ ರಾತ್ರಿವರೆಗೂ ಪಾನ್ ಶಾಪ್ ನಡೆಸಿಕೊಂಡು ಪತ್ನಿ, ಮಕ್ಕಳನ್ನು ಸಾಕುತ್ತಿದ್ದರು.
ಘಟನೆ ಸಂಬಂಧ ಕೊಲೆಯಾದ ಬಾಲಕೃಷ್ಣ ಶೆಟ್ಟಿ ಆಪ್ತ ಪ್ರಭಾಕರ್ ಶೆಟ್ಟಿ ಮಾಧ್ಯಮಗಳ ಜೊತೆಗೆ ಮಾತನಾಡಿ, ಮಾದಕ ವಸ್ತು ಸೇವಿಸಿ ಬಂದು, ಗುಟ್ಕಾ ಸಾಲ ಕೊಡುವಂತೆ ಪದೇ ಪದೇ ಕಿರಿ ಕಿರಿ ಮಾಡುತ್ತಿದ್ದರು. ಉದ್ರಿ ಕೊಟ್ಟಿಲ್ಲ ಎಂಬ ಕಾರಣಕ್ಕೆ ಮನೆಗೆ ಹೋಗುತ್ತಿದ್ದ ಸಮಯದಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಆರೋಪಿ ದತ್ತಾತ್ರೇಯ ಶಿವಾನಂದ ಜತ್ತಿನಮಠ ನಮ್ಮ ಉಡುಪಿಯವರಿಗೆ ಸಾಕಷ್ಟು ತೊಂದರೆ ಕೊಡುತ್ತಿದ್ದ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಯಾವುದೇ ಕಾರಣಕ್ಕೂ ಹೊರಗೆ ಬಿಡಬಾರದು, ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.
ಚಿಕ್ಕೋಡಿ(ಬೆಳಗಾವಿ): ಗುಡ್ಕಾ ತಿಂದು ರಸ್ತೆಗೆ ಉಗುಳಿದ ವ್ಯಕ್ತಿಗೆ ಕೊರೊನಾ ವಾರಿಯರ್ ಶಿಕ್ಷೆ ನೀಡಿದ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ನಡೆದಿದೆ.
ಕೊರೊನಾ ಮಹಾಮಾರಿ ಹರಡುತ್ತಿರುವುದರಿಂದ ಜನ ಭಯಭೀತರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ವ್ಯಕ್ತಿ ಗುಟ್ಕಾ ತಿಂದು ನಿಪ್ಪಾಣಿ ನಗರಸಭೆ ಎದುರು ರಸ್ತೆಗೆ ಉಗುಳಿದ್ದಾನೆ. ಇದನ್ನು ಕೊರೊನಾ ವಾರಿಯರ್ ಒಬ್ಬರು ಗಮನಿಸಿದ್ದಾರೆ. ಅಲ್ಲದೆ ಕೂಡಲೇ ಆತನಿಗೆ ಸ್ಥಳದಲ್ಲಿಯೇ ಶಿಕ್ಷೆ ನೀಡಿದ್ದಾರೆ.
ವ್ಯಕ್ತಿ ಉಗಿದ ಕೂಡಲೇ ಸ್ಥಳಕ್ಕೆ ಬಂದ ಪೌರಾಯುಕ್ತ ಮಹಾವೀರ ಬೋರನ್ನ, ಆತನ ಅಂಗಿ ಬಿಚ್ಚಿಸಿ ಅದರಿಂದಲೇ ಉಗಿದ ಜಾಗ ಕ್ಲೀನ್ ಮಾಡಿಸಿದ್ದಾರೆ. ಈ ಮೂಲಕ ಕೊರೊನಾ ಆತಂಕದ ನಡುವೆ ಗುಟ್ಕಾ ತಿಂದು ಉಗುಳುವವರಿಗೆ ಪೌರಾಯುಕ್ತರು ಪಾಠ ಕಲಿಸಿದ್ದಾರೆ.
ರಾಯಚೂರು: ಸರ್ಕಾರ ಮದ್ಯ ಮಾರಾಟಕ್ಕೆ ಅವಕಾಶ ನೀಡಿದ ಬಳಿಕ ಮದ್ಯದ ಅಂಗಡಿ ಮುಂದೆ ಮದ್ಯಪ್ರಿಯರು ಕ್ಯೂ ನಿಂತಿದ್ದರು. ಈಗ ಗುಟ್ಕಾ, ಸಿಗರೇಟ್ ಅಂಗಡಿ ಮುಂದೆ ದೊಡ್ಡ ಕ್ಯೂ ಕಾಣಿಸುತ್ತಿದೆ.
ಪಾನ್ ಬೀಡ ವ್ಯಾಪಾರಕ್ಕೆ ಅವಕಾಶ ಸಿಕ್ಕ ಹಿನ್ನೆಲೆ ಸಗಟು ಅಂಗಡಿಗಳ ಮುಂದೆ ವ್ಯಾಪಾರ ಜೋರಾಗಿದೆ. ರಾಯಚೂರಿನ ಮಾನ್ವಿಯಲ್ಲಿ ನೂರಾರು ಜನರಿಂದ ಭರ್ಜರಿ ವ್ಯಾಪಾರ ನಡೆದಿದೆ. ಮಾನ್ವಿಯ ಸಗಟು ವ್ಯಾಪಾರ ಅಂಗಡಿಗಳ ಮುಂದೆ ಜನಜಂಗುಳಿ ಸೇರಿದ್ದು ಸಾಮಾಜಿಕ ಅಂತರ, ಮಾಸ್ಕ್ಗಳನ್ನು ಮರೆತು ಗುಟ್ಕಾ ಪ್ಯಾಕೆಟ್ ಗಳನ್ನು ಜನ ಕೊಳ್ಳುತ್ತಿದ್ದಾರೆ.
ಕ್ಯೂನಲ್ಲಿ ನಿಂತ ಪಾನ್ ಬೀಡ ಅಂಗಡಿ, ಕಿರಾಣಿ ಅಂಗಡಿ ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಕೊರೊನಾ ಭೀತಿಯನ್ನೇ ಮರೆತಿದ್ದಾರೆ. ಗ್ರಾಮೀಣ ಭಾಗದಿಂದಲೂ ಬಂದ ನೂರಾರು ಜನ ಗುಟ್ಕಾ ಪ್ಯಾಕೆಟ್ಗಳನ್ನು ತೆಗೆದುಕೊಂಡು ಹೋದರು. ಮೊದಮೊದಲಿಗೆ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.
ಮೇ 4 ರಂದು ರಾಜ್ಯಾದ್ಯಂತ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದ್ದು, ಈ ಬೆನ್ನಲ್ಲೇ ಮದ್ಯದಂಗಡಿಗಳು ಓಪನ್ ಆಗಿದ್ದವು. ಇದೇ ಸಂದರ್ಭದಲ್ಲಿ 42 ದಿನಗಳ ಕಾಲ ಮದ್ಯವಿಲ್ಲದೆ ಕಂಗಾಲಾಗಿದ್ದ ಎಣ್ಣೆಪ್ರಿಯರು ಬಿಸಿಲು ಎನ್ನದೇ ಸರತಿ ಸಾಲಿನಲ್ಲಿ ನಿಂತು ಮದ್ಯ ಖರೀದಿ ಮಾಡಿದ್ದರು. ಆದರೆ ಈ ವೇಳೆ ಸಾಮಾಜಿಕ ಅಂತರ ಕಾಯ್ದುಕೊಂಡಿದ್ದರು.
ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ತಂಬಾಕು ಉತ್ಪನ್ನ, ಮಾರಾಟ ಹಾಗೂ ಬಳಕೆ ಮಾಡುವುದನ್ನು ನಿಷೇಧ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಹರೀಶ್ ಕುಮಾರ್ ಕೆ.ಅವರು ಆದೇಶ ಹೊರಡಿಸಿದ್ದಾರೆ.
ಪಾನ್ ಮಸಾಲಾ ಮತ್ತು ಅಡಿಕೆಯಿಂದ ತಯಾರಾದ ಉತ್ಪನ್ನಗಳಿಂದ ಕೋವಿಡ್-19 ಸಾಂಕ್ರಾಮಿಕ ರೋಗವು ವ್ಯಾಪಕವಾಗಿ ಹರಡುವ ಸಾಧ್ಯತೆ ಇದೆ. ಹೀಗಾಗಿ ಹೊಗೆ ರಹಿತ ತಂಬಾಕು ಉತ್ಪನ್ನಗಳನ್ನು ಮಾರಾಟ ಮತ್ತು ಬಳಕೆ ಮಾಡುವುದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕರ ಆರೋಗ್ಯ ಹಿತ ದೃಷ್ಟಿಯಿಂದ ಕೊರೊನಾ ಹತೋಟಿಗೆ ಬರುವವರೆಗೂ ಈ ನಿಷೇಧ ಜಾರಿಯಲ್ಲಿ ಇರುತ್ತದೆ ಎಂದು ಡಿಸಿ ಅದೇಶ ಮಾಡಿದ್ದಾರೆ.
ಒಂದು ವೇಳೆ ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ, ಸಾಂಕ್ರಾಮಿಕ ರೋಗಗಳ ಕಾಯ್ದೆ-1897, ವಿಪತ್ತು ನಿರ್ವಹಣಾ ಕಾಯ್ದೆ-2005, ಐಪಿಸಿ-1960, ಸಿ.ಆರ್.ಪಿ.ಸಿ.ಅಡಿಯಲ್ಲಿ ಪ್ರಕರಣ ದಾಖಲಿಲಾಗುವುದು. ಈ ನಿಯಮವನ್ನು ಉಲ್ಲಂಘಿಸಿದರೆ ಸಂಬಂಧಿಸಿದವರ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
ಲಕ್ನೋ: ಕೊರೊನಾ ವೈರಸ್ ಭೀತಿ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಭಾರತ ಬಂದ್ ಘೋಷಣೆ ಬಳಿಕ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ತಾತ್ಕಾಲಿಕವಾಗಿ ಪಾನ್ ಮಸಾಲ ಉತ್ಪಾದನೆಗೆ ಬ್ರೇಕ್ ಹಾಕಿದೆ.
ಕೊರೊನಾ ವೈರಸ್ ಸೋಂಕು ಹರಡುವ ಭೀತಿ ಹಿನ್ನೆಲೆ ಪಾನ್ ಗುಟ್ಕಾ ಮತ್ತು ತಂಬಾಕು ಉತ್ಪನ್ನಗಳ ಉತ್ಪಾದನೆ ಮಾಡದಂತೆ ಉತ್ಪಾದಕರಿಗೆ ಉತ್ತರ ಪ್ರದೇಶ ಸರ್ಕಾರದಿಂದ ಸೂಚನೆ ನೀಡಿದೆ. ತಂಬಾಕು ತಿಂದು ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಲಾಲಾ ರಸದಲ್ಲಿರುವ ಸೋಂಕು ಮತ್ತೊಬ್ಬರಿಗೆ ಹರಡುಬಹುದು ಎನ್ನುವ ಕಾರಣಕ್ಕೆ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದ ಎಲ್ಲಾ ಸರ್ಕಾರಿ ಕಟ್ಟಡಗಳಲ್ಲಿ ಗುಟ್ಕಾ, ಪಾನ್ ಮಸಾಲ ಮತ್ತು ಚೂಯಿಂಗ್ ತಂಬಾಕು ಬಳಕೆಯನ್ನು ತಕ್ಷಣ ನಿಷೇಧಿಸುವಂತೆ ಮುಖ್ಯಮಂತ್ರಿ ಹಿಂದೆ ಆದೇಶಿಸಿದರು. ಆದಾಗ್ಯೂ ಸರ್ಕಾರಿ ನೌಕರರು ತಂಬಾಕು ಮತ್ತು ಪಾನ್ ಮಸಾಲವನ್ನು ಅಗಿಯಲು ಪ್ರಾರಂಭಿಸಿದ್ದರು. ಆದರೆ ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ತಂಬಾಕು ನಿಷೇಧದ ಬದಲಿಗೆ ಅದರ ಉತ್ಪಾದನೆಗೆ ಬ್ರೇಕ್ ಹಾಕುವ ಪ್ರಯತ್ನ ಸಿಎಂ ಯೋಗಿ ಆದಿತ್ಯನಾಥ್ ಮಾಡಿದ್ದಾರೆ.