Tag: Gyanvapi Case

  • ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ರೂಪದ ಆಕೃತಿ ಪತ್ತೆ – ವೈಜ್ಞಾನಿಕ ಪರೀಕ್ಷೆ ಸಾಧ್ಯವಿಲ್ಲ ಎಂದು ಕೋರ್ಟ್‌

    ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ರೂಪದ ಆಕೃತಿ ಪತ್ತೆ – ವೈಜ್ಞಾನಿಕ ಪರೀಕ್ಷೆ ಸಾಧ್ಯವಿಲ್ಲ ಎಂದು ಕೋರ್ಟ್‌

    ನವದೆಹಲಿ: ಜ್ಞಾನವಾಪಿ ಮಸೀದಿಯ (Gyanvapi Mosque) ಆವರಣದಲ್ಲಿ ಪತ್ತೆಯಾಗಿದ್ದ ಶಿವಲಿಂಗ (Shivling) ರೂಪದ ಆಕೃತಿಯ ವೈಜ್ಞಾನಿಕ ಪರೀಕ್ಷೆ ಕೋರಿ ಹಿಂದೂಪರ ನಾಲ್ವರು ಮಹಿಳೆಯರು ಸಲ್ಲಿಸಿದ್ದ ಅರ್ಜಿಯನ್ನು ವಾರಣಾಸಿ ಜಿಲ್ಲಾ ನ್ಯಾಯಾಲಯ (Varanasi Court) ವಜಾ ಮಾಡಿದೆ. ಸುಪ್ರೀಂ ಕೋರ್ಟ್ (Supreme Court) ಆದೇಶ ಹಿನ್ನಲೆ ಕಾರ್ಬನ್ ಡೇಟಿಂಗ್ ಪರೀಕ್ಷೆ ಸಾಧ್ಯವಿಲ್ಲ ಎಂದು ಹೇಳಿದೆ.

    ಪ್ರಕರಣ ವಿಚಾರಣೆ ನಡೆಸಿದ್ದ ನ್ಯಾ. ಅಜಯ್ ಕೃಷ್ಣ ವಿಶ್ವೇಶಾ ಎರಡು ಬಾರಿ ಆದೇಶವನ್ನು ಮುಂದೂಡಿಸಿದ್ದರು. ಇಂದು ಆದೇಶ ಪ್ರಕಟಿಸಿದ ಅವರು ಮೇ 16 ರಂದು ಸುಪ್ರೀಂ ಕೋರ್ಟ್ ಶಿವಲಿಂಗ ಪತ್ತೆಯಾದ ಸ್ಥಳವನ್ನು ಸೀಲಿಂಗ್ ಮಾಡಲು ಆದೇಶಿಸಿದ್ದರಿಂದ ವೈಜ್ಞಾನಿಕ ತನಿಖೆಯ ಮನವಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ಅದೇಶದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ವಿವಾದ; ಶಿವಲಿಂಗದ ವೈಜ್ಞಾನಿಕ ಪರೀಕ್ಷೆಗೆ ಆಕ್ಷೇಪ – ತೀರ್ಪಿನ ದಿನಾಂಕ ಮುಂದೂಡಿದ ವಾರಣಾಸಿ ಕೋರ್ಟ್‌

    ಜ್ಞಾನವಾಪಿ ಮಸೀದಿಯ ಸರ್ವೇ ವೇಳೆ ವಝುಖಾನದಲ್ಲಿ ಶಿವಲಿಂಗ ಪತ್ತೆಯಾಗಿದೆ ಎನ್ನಲಾಗಿತ್ತು. ಈ ಶಿವಲಿಂಗ ರೂಪದ ಆಕೃತಿಯನ್ನು ವೈಜ್ಞಾನಿಕ ಪರೀಕ್ಷೆ ನಡೆಸಬೇಕು ಎಂದು ಮನವಿ ಮಾಡಲಾಗಿತ್ತು. ಈ ಅರ್ಜಿಯನ್ನು ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯು ವಿರೋಧಿಸಿತ್ತು.

    ಜ್ಞಾನವಾಪಿ ಮಸೀದಿ ಆವರಣದಲ್ಲಿರುವ ಶಿವಲಿಂಗವು ಸೂಟ್ ಆಸ್ತಿಯ ಭಾಗವಾಗಿದೆಯೇ ಅಥವಾ ಇಲ್ಲವೇ? ಆಪಾದಿತ ರಚನೆಯ ‘ವೈಜ್ಞಾನಿಕ ತನಿಖೆ’ಗೆ ನಿರ್ದೇಶಿಸಲು ನ್ಯಾಯಾಲಯಕ್ಕೆ ಅಧಿಕಾರವಿದೆಯೇ? ಎನ್ನುವ ಎರಡು ಪ್ರಶ್ನೆಗಳನ್ನು ಮುಂದಿಟ್ಟು ಮೊದಲು ಈ ಬಗ್ಗೆ ವಿಚಾರಣೆ ನಡೆಯಬೇಕು ಎಂದು ಮಸೀದಿ ಪರ ವಕೀಲರು ವಾದಿಸಿದ್ದರು‌. ಇದನ್ನೂ ಓದಿ: ಜ್ಞಾನವಾಪಿ ಕೇಸ್‌ ಪೂಜಾ ಸ್ಥಳಗಳ ಕಾಯ್ದೆಯ ವ್ಯಾಪ್ತಿಗೆ ಒಳಪಡಲ್ಲ: ವಾರಣಾಸಿ ಕೋರ್ಟ್‌ ಹೇಳಿದ್ದೇನು?

    court order law

    ಇದಕ್ಕೆ ಪ್ರತಿವಾದ ಮಂಡಿಸಿದ್ದ ಹಿಂದೂ ಆರಾಧಕರ ಪರ ವಕೀಲ ವಿಷ್ಣು ಶಂಕರ್ ಜೈನ್, ಶಿವಲಿಂಗವು ಸೂಟ್ ಆಸ್ತಿಯ ಒಂದು ಭಾಗವಾಗಿದೆ. ಸಿವಿಲ್ ಪ್ರೊಸೀಜರ್ ಕೋಡ್ 1908 ರ ಆದೇಶ 26 ನಿಯಮ 10A ರ ಪ್ರಕಾರ, ಸಮೀಕ್ಷೆಯ ಸಮಯದಲ್ಲಿ ಜ್ಞಾನವಾಪಿ ಮಸೀದಿ ಆವರಣದಲ್ಲಿ ಕಂಡುಬಂದಿರುವ ಶಿವಲಿಂಗದ ‘ವೈಜ್ಞಾನಿಕ ತನಿಖೆ’ಗೆ ನಿರ್ದೇಶಿಸಲು ನ್ಯಾಯಾಲಯಕ್ಕೆ ಅಧಿಕಾರವಿದೆ ಎಂದು ಹೇಳಿದ್ದರು.

    ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ಅಂತಿಮವಾಗಿ ಸುಪ್ರೀಂ ಕೋರ್ಟ್‌ ಹಳೆಯ ತೀರ್ಪಿನ ಅಂಶವನ್ನು ಗಮನದಲ್ಲಿಟ್ಟುಕೊಂಡು ಹಿಂದೂ ಆರಾಧಕ ಮಹಿಳೆಯರು ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದ್ದಾರೆ. ಇದನ್ನು ಪ್ರಶ್ನಿಸಿ ಮಹಿಳೆಯರು ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ಮೊರೆ ಹೋಗುವ ಸಾಧ್ಯತೆಯಿದೆ. ಇದನ್ನೂ ಓದಿ: ಜ್ಞಾನವಾಪಿ ಕೇಸ್‌ – ಹಿಂದೂ ಮಹಿಳೆಯರಿಗೆ ಗೆಲುವು, ಅರ್ಜಿ ವಿಚಾರಣೆಗೆ ಯೋಗ್ಯ

    Live Tv
    [brid partner=56869869 player=32851 video=960834 autoplay=true]

  • ಜ್ಞಾನವಾಪಿ ಮಸೀದಿ ವಿವಾದ; ಶಿವಲಿಂಗದ ವೈಜ್ಞಾನಿಕ ಪರೀಕ್ಷೆಗೆ ಆಕ್ಷೇಪ – ತೀರ್ಪಿನ ದಿನಾಂಕ ಮುಂದೂಡಿದ ವಾರಣಾಸಿ ಕೋರ್ಟ್‌

    ಜ್ಞಾನವಾಪಿ ಮಸೀದಿ ವಿವಾದ; ಶಿವಲಿಂಗದ ವೈಜ್ಞಾನಿಕ ಪರೀಕ್ಷೆಗೆ ಆಕ್ಷೇಪ – ತೀರ್ಪಿನ ದಿನಾಂಕ ಮುಂದೂಡಿದ ವಾರಣಾಸಿ ಕೋರ್ಟ್‌

    ಲಕ್ನೋ: ಜ್ಞಾನವಾಪಿ ಮಸೀದಿ (Gyanvapi Mosque) ಆವರಣದಲ್ಲಿ ನಡೆಸಿದ ಸರ್ವೆ ವೇಳೆ ಪತ್ತೆಯಾದ ವಸ್ತು ಶಿವಲಿಂಗವೇ ಅಥವಾ ನೀರಿನ ಕಾರಂಜಿಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ವೈಜ್ಞಾನಿಕ ತನಿಖೆ ನಡೆಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ನಿರ್ದೇಶನ ನೀಡುವಂತೆ ಕೋರಿ ಹಿಂದೂ ಪರ ಅರ್ಜಿದಾರರು ಸಲ್ಲಿಸಿದ್ದ ಮನವಿಯ ತೀರ್ಪನ್ನು ವಾರಣಾಸಿ ನ್ಯಾಯಾಲಯ (Varanasi Court) ಶುಕ್ರವಾರ ಮುಂದೂಡಿದೆ.

    ಪ್ರಕರಣ ತೀರ್ಪನ್ನು ಅಕ್ಟೋಬರ್ 11 ರಂದು ನೀಡಲಾಗುವುದು ಎಂದು ಜಿಲ್ಲಾ ನ್ಯಾಯಾಧೀಶ ಡಾ. ಎ.ಕೆ.ವಿಶ್ವೇಶ ಅವರು ಹೇಳಿದರು‌. ಮಸೀದಿ ಸಮಿತಿ ಪರ ವಕೀಲರು ಇಂದು ಆಕ್ಷೇಪ ವ್ಯಕ್ತಪಡಿಸಿದರು. ಜ್ಞಾನವಾಪಿ ಮಸೀದಿ ಆವರಣದಲ್ಲಿರುವ ಶಿವಲಿಂಗವು (Shivlinga) ಮೂಲ ಪ್ರಕರಣ ಆಸ್ತಿಯ ಭಾಗವಾಗಿದೆಯೇ ಅಥವಾ ಇಲ್ಲವೇ? ಶಿವಲಿಂಗ ರೂಪದ ಈ ಪಳಿಯುಳಿಯ ‘ವೈಜ್ಞಾನಿಕ ತನಿಖೆ’ಗೆ ನಿರ್ದೇಶಿಸಲು ನ್ಯಾಯಾಲಯಕ್ಕೆ ಅಧಿಕಾರವಿದೆಯೇ ಎಂದು ಪ್ರಶ್ನಿಸಿದರು. ಈ ಬಗ್ಗೆ ವಾದ ಮಂಡಿಸಲು ಅವಕಾಶ ನೀಡಬೇಕು ಎಂದು ಕೋರಿಕೊಂಡರು. ಇದನ್ನೂ ಓದಿ: ರಾವಣನ ಪ್ರತಿಕೃತಿಯ ತಲೆಗಳು ಸುಟ್ಟುಹೋಗದಕ್ಕೆ ನೌಕರ ಅಮಾನತು

    Gyanvapi mosque, 

    ಇದಕ್ಕೆ ಒಪ್ಪಿಕೊಂಡ ನ್ಯಾಯಾಧೀಶರು ತೀರ್ಪಿನ ದಿನಾಂಕವನ್ನು ಮುಂದೂಡಿದರು. ಮಸೀದಿ ಸಮಿತಿಯ ವಕೀಲರ ವಾದ ಆಲಿಸಿದ ಬಳಿಕ ಕೋರ್ಟ್ ಆದೇಶವನ್ನು ಪ್ರಕಟಿಸುವ ಸಾಧ್ಯತೆಯಿದೆ. ಅಕ್ಟೋಬರ್ 11 ರೊಳಗೆ ಈ ಬಗ್ಗೆ ಮಸೀದಿಯ ಸಮಿತಿಯ ವಕೀಲರು ಕೋರ್ಟ್ ಮುಂದೆ ತಮ್ಮ ವಾದವನ್ನು ಮಂಡಿಸಲಿದ್ದಾರೆ.

    ಇದೇ ವೇಳೆ ಕೋರ್ಟ್‌ನಲ್ಲಿದ್ದ ಹಿಂದೂ ಆರಾಧಕರ ಪರ ವಕೀಲ ವಿಷ್ಣು ಶಂಕರ್ ಜೈನ್, ಶಿವಲಿಂಗವು ಮೂಲ ಪ್ರಕರಣದ ಆಸ್ತಿಯ ಒಂದು ಭಾಗವಾಗಿದೆ. ಸಿವಿಲ್ ಪ್ರೊಸೀಜರ್ ಕೋಡ್ 1908ರ ಆದೇಶ 26 ನಿಯಮ 10Aರ ಪ್ರಕಾರ, ಸಮೀಕ್ಷೆಯ ಸಮಯದಲ್ಲಿ ಜ್ಞಾನವಾಪಿ ಮಸೀದಿ (Gyanvapi Case) ಆವರಣದಲ್ಲಿ ಕಂಡುಬಂದಿರುವ ಶಿವಲಿಂಗದ ‘ವೈಜ್ಞಾನಿಕ ತನಿಖೆ’ಗೆ ನಿರ್ದೇಶಿಸಲು ನ್ಯಾಯಾಲಯಕ್ಕೆ ಅಧಿಕಾರವಿದೆ ಎಂದು ಹೇಳಿದರು. ಇದನ್ನೂ ಓದಿ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಜಖಂ – ಎಮ್ಮೆಗಳ ಮಾಲೀಕನ ವಿರುದ್ಧ FIR

    Live Tv
    [brid partner=56869869 player=32851 video=960834 autoplay=true]

  • ಜ್ಞಾನವಾಪಿ ಕೇಸ್‌ ಪೂಜಾ ಸ್ಥಳಗಳ ಕಾಯ್ದೆಯ ವ್ಯಾಪ್ತಿಗೆ ಒಳಪಡಲ್ಲ: ವಾರಣಾಸಿ ಕೋರ್ಟ್‌ ಹೇಳಿದ್ದೇನು?

    ಜ್ಞಾನವಾಪಿ ಕೇಸ್‌ ಪೂಜಾ ಸ್ಥಳಗಳ ಕಾಯ್ದೆಯ ವ್ಯಾಪ್ತಿಗೆ ಒಳಪಡಲ್ಲ: ವಾರಣಾಸಿ ಕೋರ್ಟ್‌ ಹೇಳಿದ್ದೇನು?

    ಲಕ್ನೋ: ಜ್ಞಾನವ್ಯಾಪಿ ಮಸೀದಿ ವಿವಾದಕ್ಕೆ(Gyanvapi Mosque Suit) ಮಹತ್ವದ ತಿರುವು ಸಿಕ್ಕಿದೆ. ಹಿಂದೂಗಳಿಗೆ ಮೊದಲ ಹಂತದ ಜಯ ಲಭಿಸಿದೆ. ಮಸೀದಿಯ ಆವರಣದಲ್ಲಿ ಪತ್ತೆಯಾಗಿದ್ದ ಶಿವಲಿಂಗ ಮತ್ತು ಶೃಂಗಾರಗೌರಿ ಪೂಜೆಗೆ ಅನುಮತಿ ಕೋರಿ ಐದು ಮಂದಿ ಮಹಿಳೆಯರು ಸಲ್ಲಿಸಿದ್ದ ಅರ್ಜಿಗಳು ವಿಚಾರಣೆಗೆ ಯೋಗ್ಯವಾಗಿವೆ ಎಂದು ವಾರಣಾಸಿ ಜಿಲ್ಲಾ ಕೋರ್ಟ್ (Varanasi Court) ಮಹತ್ವದ ಆದೇಶ ಪ್ರಕಟಿಸಿದೆ.

    1991ರ ಪೂಜಾ ಸ್ಥಳಗಳ ಕಾಯ್ದೆಯ(Places of Worship Act) ಪ್ರಕಾರ ಈ ಜಾಗದಲ್ಲಿ ಪೂಜೆ ಮಾಡಲು ಸಾಧ್ಯವಿಲ್ಲ ಎಂದು ಮಸೀದಿ ಪರ ಅರ್ಜಿದಾರರು ವಾದ ಮಾಡಿದ್ದರು. ಆದರೆ ನ್ಯಾ. ಎಕೆ ವೈಷ್ಣವ್‌ ಈ ವಾದವನ್ನು ಪರಿಗಣಿಸದೇ ಶೃಂಗಾರ ಗೌರಿ ಹಾಗೂ ಶಿವಲಿಂಗದ ದರ್ಶನ ಮತ್ತು ಪ್ರತಿನಿತ್ಯ ಪೂಜೆ ಸಲ್ಲಿಸಲು ಅವಕಾಶ ನೀಡುವುಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಒಪ್ಪಿಗೆ ನೀಡಿ ಮಸೀದಿ ಪರ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿದ್ದಾರೆ.

    ಐವರು ಮಹಿಳೆಯರು ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಯೋಗ್ಯ ಎಂಬ ಆದೇಶ ಪ್ರಕಟವಾದ ಹಿನ್ನೆಲೆಯಲ್ಲಿ ಕೋರ್ಟ್ ಮಸೀದಿ ಒಳಗಡೆ ಪೂಜೆಗೆ ಅವಕಾಶ ನೀಡಬೇಕಾ? ಬೇಡವೋ ಎಂಬ ಅರ್ಜಿಯ ವಿಚಾರಣೆಯನ್ನು ನಡೆಸಲಿದೆ. ಮುಂದಿನ ಅರ್ಜಿಯ ವಿಚಾರಣೆ ಸೆ.22 ರಂದು ನಡೆಯಲಿದೆ.

    ಮಸೀದಿ ಪರ ವಕೀಲರ ವಾದ ಏನಿತ್ತು?
    1991ರ ಪೂಜಾ ಸ್ಥಳಗಳ ಕಾಯ್ದೆಯ ಪ್ರಕಾರ ದೇಶದಲ್ಲಿರುವ ಪೂಜಾ ಸ್ಥಳಗಳು ಮತ್ತು ತೀರ್ಥಯಾತ್ರೆಯ ಸ್ಥಳಗಳು 1947ರ ಆಗಸ್ಟ್ 15ರಂದು ಹೇಗಿತ್ತೋ ಅದೇ ಸ್ಥಿತಿಯಲ್ಲಿ ಮುಂದುವರಿಯಬೇಕು ಮತ್ತು ಅದರ ಸ್ವರೂಪವನ್ನು ಬದಲಾಯಿಸುವುದಕ್ಕಾಗಿ ಯಾವುದೇ ನ್ಯಾಯಾಲಯದಲ್ಲಿ ದಾವೆ ಹೂಡುವುದಕ್ಕೆ ಅವಕಾಶ ಇಲ್ಲ ಎಂದು ಅಂಜುಮಾನ್‌ ಮಸೀದಿಯ ಪರ ವಕೀಲರು ವಾದಿಸಿದ್ದರು. ಇದನ್ನೂ ಓದಿ: ಷರತ್ತು ವಿಧಿಸಿ ಭಾರತಕ್ಕೆ ಇನ್ನಷ್ಟು ಡಿಸ್ಕೌಂಟ್ ದರದಲ್ಲಿ ತೈಲ ನೀಡಲು ಮುಂದಾದ ರಷ್ಯಾ

    ಕೋರ್ಟ್‌ ಹೇಳಿದ್ದು ಏನು?
    ಮಸೀದಿ ಒಳಗಡೆ ಇರುವ ಶೃಂಗಾರ ಗೌರಿ ಹಾಗೂ ಶಿವಲಿಂಗದ ದರ್ಶನ ಮತ್ತು ಪ್ರತಿನಿತ್ಯ ಪೂಜೆ ಸಲ್ಲಿಸಲು ಅವಕಾಶ ನೀಡುವುಂತೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ 1993ರ ವರೆಗೆ ಪೂಜೆ ಮಾಡಲು ಅವಕಾಶವಿತ್ತು. ಆದರೆ 1993ರ ನಂತರ ಉತ್ತರ ಪ್ರದೇಶ ಸರ್ಕಾರ ನಿಯಂತ್ರಣದ ಅಡಿ ವರ್ಷಕ್ಕೆ ಒಂದು ಬಾರಿ ಪೂಜೆ ಸಲ್ಲಿಸಲಾಗುತ್ತಿದೆ ಎಂದಿದ್ದಾರೆ. ಹೀಗಾಗಿ ವಿವಾದಿತ ಜಾಗದಲ್ಲಿ 1947ರ ಆಗಸ್ಟ್‌ 15 ರ ನಂತರವೂ ಪೂಜೆ ಸಲ್ಲಿಕೆಗೆ ಅನುಮತಿ ಇದ್ದ ಕಾರಣ 1991ರ ಪೂಜಾ ಸ್ಥಳಗಳ ಕಾಯ್ದೆಯ ವ್ಯಾಪ್ತಿಯ ಒಳಗಡೆ ಬರುವುದಿಲ್ಲ. ನ್ಯಾಯಾಲಯದಲ್ಲಿ ದಾವೆ ಹೂಡದಂತೆ ನಿರ್ಬಂಧಿಸಲು ಸಾಧ್ಯವಿಲ್ಲ.

    ಅರ್ಜಿದಾರರು ಇಲ್ಲಿ ಪೂಜೆ ಮಾಡಲು ಮಾತ್ರ ಅವಕಾಶ ನೀಡುವಂತೆ ಅರ್ಜಿ ಸಲ್ಲಿಸಿದ್ದಾರೆ ಹೊರತು ಈ ವಿವಾದಿತ ಜಾಗದ ಸಂಪೂರ್ಣ ಹಕ್ಕು ದೇವಸ್ಥಾನಕ್ಕೆ ಸೇರಬೇಕೆಂದು ಕೇಳಿಲ್ಲ. ಹೀಗಾಗಿ ಇದು ಪೂಜಾ ಸ್ಥಳಗಳ ಕಾಯ್ದೆಯ ಅಡಿಯಲ್ಲಿ ಬರುವುದಿಲ್ಲ. ಪೂಜೆಗೆ ಮಾತ್ರ ಸೀಮಿತವಾಗಿ ಅರ್ಜಿ ಸಲ್ಲಿಸಿದರಿಂದ ಇದು ಮೂಲಭೂತ ಹಕ್ಕು ಜೊತೆಗೆ ಇದು ಸಾಂಪ್ರದಾಯಿಕ ಧಾರ್ಮಿಕ ಹಕ್ಕು ಆಗಿದೆ.

    ಪ್ರಶ್ನೆ ಮಾಡುತ್ತೇವೆ:
    ಜಿಲ್ಲಾ ಕೋರ್ಟ್‌ ನೀಡಿದ ಆದೇಶವನ್ನು ಪ್ರಶ್ನಿಸಿ ನಾವು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಅಂಜುಮಾನ್‌ ಇಂತಜಾಮೀಯಾ ಮಸೀದಿ ಸಮಿತಿ ಹೇಳಿದೆ.

    ಏನಿದು ಪ್ರಕರಣ?
    ಈ ಹಿಂದೆ ಕೆಳ ಹಂತದ ಕೋರ್ಟ್ ಮಸೀದಿಯಲ್ಲಿ ಉತ್ಖನನಕ್ಕೆ ಅನುಮತಿ ನೀಡಿತ್ತು. ಉತ್ಖನನ ವೇಳೆ ಮಸೀದಿಯಲ್ಲಿ ಶೃಂಗಾರ ಗೌರಿ ಮೂರ್ತಿ ಮತ್ತು ವಝುಖಾನದಲ್ಲಿ ಶಿವಲಿಂಗ ಪತ್ತೆಯಾಗಿತ್ತು. ಬಳಿಕ ಹಿಂದೂ ಧಾರ್ಮಿಕ ಕುರುಹುಗಳಿಗೆ ನಿತ್ಯ ಪೂಜೆ ಸಲ್ಲಿಸಲು ಅನುಮತಿ ಕೋರಿ ಸೀತಾ ಸಾಹು ಸೇರಿ, ಐವರು ಮಹಿಳೆಯರು ಕೋರ್ಟ್ ಮೊರೆ ಹೋಗಿದ್ದರು. ಇದಕ್ಕೆ ಪ್ರತಿಯಾಗಿ ಮಸೀದಿಯ ಆಡಳಿತ ಮಂಡಳಿ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಐವರ ಅರ್ಜಿಗಳು ವಿಚಾರಣೆಗೆ ಯೋಗ್ಯವೇ ಎಂಬುದನ್ನು ಮೊದಲು ನಿರ್ಧರಿಸಿ ಎಂದು ವಾರಣಾಸಿ ಕೋರ್ಟ್‍ಗೆ ನಿರ್ದೇಶನ ನೀಡಿತ್ತು.

    1991ರ ಕಾಯ್ದೆ ಪ್ರಶ್ನಿಸಿ ಸುಪ್ರೀಂನಲ್ಲಿದೆ ಅರ್ಜಿ
    ಬಿಜೆಪಿ ಮುಖಂಡ ಅಶ್ವಿನಿ ಉಪಾಧ್ಯಾಯ ಮತ್ತು ಇತರರು 1991ರ ಪೂಜಾ ಸ್ಥಳಗಳ (ವಿಶೇಷ ಅವಕಾಶಗಳು) ಕಾಯ್ದೆಯಲ್ಲಿರುವ ವಿವಿಧ ಅವಕಾಶಗಳ ಸಿಂಧುತ್ವವನ್ನು ಪ್ರಶ್ನಿಸಿ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದು ಈ ಅರ್ಜಿಯ ವಿಚಾರಣೆ ನಡೆಯಬೇಕಿದೆ.

    ಹಲವು ಕಾರಣಗಳಿಂದಾಗಿ ಕಾಯ್ದೆಯ ಅಸಾಂವಿಧಾನಿಕವಾಗಿದೆ. ಹಿಂದೂ, ಜೈನ, ಬೌದ್ಧ ಮತ್ತು ಸಿಖ್ಖರ ಪೂಜಾ ಸ್ಥಳಗಳು ಮತ್ತು ತೀರ್ಥಯಾತ್ರೆ ಸ್ಥಳಗಳನ್ನು ನಿರ್ವಹಿಸುವ ಹಕ್ಕನ್ನು ಈ ಕಾಯ್ದೆಯಿಂದ ನಿರ್ಬಂಧಿಸಲಾಗಿದೆ. ಮಥುರಾದಲ್ಲಿರುವ ಕೃಷ್ಣ ಜನ್ಮಸ್ಥಾನದ ಜಾಗಕ್ಕಾಗಿ ಹಿಂದೂಗಳು ನೂರಾರು ವರ್ಷಗಳಿಂದ ಹೋರಾಡುತ್ತಿದ್ದಾರೆ. ಶಾಂತಿಯುತವಾದ ಚಳವಳಿ ನಡೆಸುತ್ತಿದ್ದಾರೆ. ಆದರೆ ಈ ಕಾಯ್ದೆ ರೂಪಿಸುವಾಗ ಕೇಂದ್ರ ಸರ್ಕಾರ ಆಯೋಧ್ಯೆಯ ರಾಮ ಜನ್ಮಭೂಮಿ ಪ್ರಕರಣವನ್ನು ಮಾತ್ರ ಕಾಯ್ದೆಯ ವ್ಯಾಪ್ತಿಯಿಂದ ಹೊರಗೆ ಇರಿಸಿದೆ. ಕೃಷ್ಣ ಜನ್ಮಸ್ಥಾನವಾದ ಮಥುರಾವನ್ನು ಹೊರಗೆ ಇರಿಸಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಜ್ಞಾನವಾಪಿ ಕೇಸ್‌ – ಹಿಂದೂ ಮಹಿಳೆಯರಿಗೆ ಗೆಲುವು, ಅರ್ಜಿ ವಿಚಾರಣೆಗೆ ಯೋಗ್ಯ

    ಜ್ಞಾನವಾಪಿ ಕೇಸ್‌ – ಹಿಂದೂ ಮಹಿಳೆಯರಿಗೆ ಗೆಲುವು, ಅರ್ಜಿ ವಿಚಾರಣೆಗೆ ಯೋಗ್ಯ

    – ವಾರಣಾಸಿ ಜಿಲ್ಲಾ ನ್ಯಾಯಾಲಯದಿಂದ ತೀರ್ಪು ಪ್ರಕಟ

    ಲಕ್ನೋ: ಜ್ಞಾನವಾಪಿ ಮಸೀದಿಯ (Gyanvapi Masjid) ಆವರಣದಲ್ಲಿ ಇದೆ ಎನ್ನಲಾಗಿರುವ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ಅವಕಾಶ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆಗೆ ಯೋಗ್ಯವಾಗಿದೆ ಎಂದು ವಾರಣಾಸಿ (Varanasi) ಜಿಲ್ಲಾ ನ್ಯಾಯಾಲಯ ಇಂದು ಮಹತ್ವದ ತೀರ್ಪು (Verdict) ಪ್ರಕಟಿಸಿದೆ.

    ರಾಖಿಸಿಂಗ್ ಸೇರಿ ಐವರು ಮಹಿಳೆಯರು ಮಸೀದಿ ಒಳಗಡೆ ಇರುವ ಶೃಂಗಾರ ಗೌರಿ ಹಾಗೂ ಶಿವಲಿಂಗದ ದರ್ಶನ ಮತ್ತು ಪ್ರತಿನಿತ್ಯ ಪೂಜೆ ಸಲ್ಲಿಸಲು ಅವಕಾಶ ನೀಡುವುಂತೆ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ್ ಅವರು ಕೋಮು ಸೂಕ್ಷ್ಮ ಪ್ರಕರಣದ ಆದೇಶವನ್ನು ಸೆಪ್ಟೆಂಬರ್ 12ಕ್ಕೆ  ಕಾಯ್ದಿರಿಸಿದ್ದರು.

    ಇಂದು ನ್ಯಾಯಾಲಯವು ಮಸೀದಿ ಸಮಿತಿ ಪ್ರಶ್ನಿಸಿದ್ದ ಅರ್ಜಿಯನ್ನು ವಜಾಗೊಳಿಸಿ, ಪೂಜಿಸುವ ಹಕ್ಕು ಕೋರಿ 5 ಹಿಂದೂ ಮಹಿಳೆಯರು ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಯೋಗ್ಯ ಎಂದು ತೀರ್ಪು ಪ್ರಕಟಿಸಿದೆ.

    ಅರ್ಜಿ ವಿಚಾರಣೆಗೆ ಯೋಗ್ಯವಾಗಿದೆ ಎಂಬ ಆದೇಶ ಪ್ರಕಟವಾದ ಹಿನ್ನೆಲೆಯಲ್ಲಿ ಕೋರ್ಟ್ ಪೂಜೆಗೆ ಅವಕಾಶ ನೀಡಬೇಕಾ? ಬೇಡವೋ ಎಂಬ ಅರ್ಜಿಯ ವಿಚಾರಣೆಯನ್ನು ನಡೆಸಲಿದೆ. ಮುಂದಿನ ಅರ್ಜಿಯ ವಿಚಾರಣೆ ಸೆ.22 ರಂದು ನಡೆಯಲಿದೆ.

    ಈ ಐದು ಮಂದಿ ಮಹಿಳೆಯರು ಸಲ್ಲಿಸಿರುವ ಅರ್ಜಿಯನ್ನು ವಜಾ ಮಾಡಬೇಕು ಇದು ವಿಚಾರಣೆಗೆ ಯೋಗ್ಯವಾಗಿಲ್ಲ ಎಂದು ಮಸೀದಿ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದರು. ಗಂಭೀರವಾಗಿರುವ ಹಿನ್ನಲೆ ಸುಪ್ರೀಂಕೋರ್ಟ್ (Supreme Court) ಜಿಲ್ಲಾ ನ್ಯಾಯಾಲಯಕ್ಕೆ ವಿಚಾರಣೆ ನಡೆಸಲು ಸೂಚಿಸಿತ್ತು. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಪ್ರಕರಣ- ದೂರುದಾರಳ ಪತಿಗೆ ಪಾಕಿಸ್ತಾನದಿಂದ ಬೆದರಿಕೆ ಕರೆ

    ಈ ಹಿಂದೆ ಜ್ಞಾನವ್ಯಾಪಿ ಮಸೀದಿಯಲ್ಲಿ ಉತ್ಖನನ ನಡೆಸಲು ಕೆಳ ಹಂತದ ನ್ಯಾಯಾಲಯ ಅನುಮತಿ ನೀಡಿತ್ತು. ಪರಿಶೀಲನೆ ವೇಳೆ ಮಸೀದಿಯ ಆವರಣದಲ್ಲಿದ್ದ ವಝುಖಾನದಲ್ಲಿ ಶಿವಲಿಂಗ ಪತ್ತೆಯಾಗಿದೆ ಹಾಗೂ ಮಂಗಳ ಗೌರಿಯ ದೇವಸ್ಥಾನ ಇದೆ ಎಂದು ಅಧಿಕಾರಿಗಳು ಕೋರ್ಟ್‍ಗೆ ವರದಿ ನೀಡಿದ್ದರು. ಈ ವರದಿಯ ಬೆನ್ನಲ್ಲೇ ದೊಡ್ಡ ಪ್ರಮಾಣ ಸಂಚಲನ ಸೃಷ್ಟಿಯಾಗಿತ್ತು. ಮಸೀದಿಯ ಜಾಗದಲ್ಲಿ ಮಂದಿರ ಇದೆ ಎಂದು ವಾದಿಸಿದ್ದರು.

    ಮುಸ್ಲಿಮರ ಪರ ವಾದ ಮಂಡಿಸಿದ ವಕೀಲರು 1991ರ ವಿಶೇಷ ಪೂಜಾ ಸ್ಥಳ ಕಾಯ್ದೆಯನ್ನು ಪ್ರಮುಖವಾಗಿ ವಿಚಾರಣೆ ವೇಳೆ ಉಲ್ಲೇಖಿಸಿದ್ದರು. 1991ರ ಪೂಜಾ ಸ್ಥಳಗಳ ಕಾಯ್ದೆ ಪ್ರಕಾರ ದೇಶದ ಯಾವುದೇ ಧಾರ್ಮಿಕ ಸ್ಥಳದಲ್ಲಿ ಸದ್ಯ ಚಾಲ್ತಿಯಲ್ಲಿ ಇರುವ ಯಾವುದೇ ಧರ್ಮದ ಆಚರಣೆಯ ಧಾರ್ಮಿಕ ಸ್ವರೂಪವನ್ನು ಬದಲಿಸುವಂತಿಲ್ಲ. 1947ರ ಆಗಸ್ಟ್ 15ರ ನಂತರ ಯಾವ ಧಾರ್ಮಿಕ ಸ್ಥಳದಲ್ಲಿ ಯಾವ ಧರ್ಮದ ಆಚರಣೆ ಇತ್ತೋ, ಅದೇ ಆಚರಣೆ ಮುಂದೆಯೂ ನಿರಂತರವಾಗಿ ಮುಂದುವರೆಯಬೇಕು. ಈ ಕಾಯಿದೆಯ ಅನ್ವಯ ಜ್ಞಾನವ್ಯಾಪಿ ಮಸೀದಿಯಲ್ಲಿ ಪೂಜೆ ಸಲ್ಲಿಸಲು ಸಾಧ್ಯವಿಲ್ಲ. ಜ್ಞಾನವ್ಯಾಪಿ ಮಸೀದಿ 16-17 ಶತಮಾನದ ಪುರಾತನ ಧಾರ್ಮಿಕ ಪ್ರದೇಶವಾಗಿರುವ ಈ ಹಿನ್ನಲೆ ಈ ನಿಯಮ ಅನ್ವಯವಾಗಲಿದೆ. ಒಂದು ವೇಳೆ ಪೂಜೆಗೆ ಅವಕಾಶ ನೀಡಿದ್ದಲ್ಲಿ ದೇಶದಲ್ಲಿ ಇಂತಹ ಹತ್ತಾರು ವಿವಾದಾತ್ಮಕ ಪ್ರದೇಶಗಳಲ್ಲೂ ಪೂಜೆ ಅವಕಾಶ ಕೇಳುವ ಸಾಧ್ಯತೆಗಳಿರುತ್ತದೆ, ಇದು ಒಳ್ಳೆಯ ಬೆಳವಣಿಗೆಯಲ್ಲ. ಎಲ್ಲದಕ್ಕಿಂತ ಮುಖ್ಯವಾಗಿ ವಝುಖಾನದಲ್ಲಿ ಪತ್ತೆಯಾಗಿರುವುದು ನೀರಿನ ಕಾರಂಜಿ ಮತ್ತು ಅಲ್ಲಿ ಯಾವುದೇ ಶೃಂಗಾರ ಗೌರಿ ಮೂರ್ತಿಗಳಿಲ್ಲ, ಅದು ಹಳೆಯ ವಾಸ್ತು ಶಿಲ್ಪ ಶೈಲಿಯಾಗಿದೆ ಎಂದು ವಾದ ಮಂಡಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಜ್ಞಾನವಾಪಿ ಮಸೀದಿ ಪ್ರಕರಣ- ದೂರುದಾರಳ ಪತಿಗೆ ಪಾಕಿಸ್ತಾನದಿಂದ ಬೆದರಿಕೆ ಕರೆ

    ಜ್ಞಾನವಾಪಿ ಮಸೀದಿ ಪ್ರಕರಣ- ದೂರುದಾರಳ ಪತಿಗೆ ಪಾಕಿಸ್ತಾನದಿಂದ ಬೆದರಿಕೆ ಕರೆ

    ಲಕ್ನೋ: ಜ್ಞಾನವಾಪಿ ಮಸೀದಿ ಹಾಗೂ ಶೃಂಗಾರ ಗೌರಿ ಪ್ರಕರಣದಲ್ಲಿ ವಿಚಾರಣೆ ನಡೆಸುತ್ತಿರುವ 5 ಮಹಿಳೆಯರಲ್ಲಿ ಒಬ್ಬರ ಪತಿಗೆ ಅರ್ಜಿಯನ್ನು ಹಿಂಪಡೆಯುವಂತೆ ಪಾಕಿಸ್ತಾನದಿಂದ ಬೆದರಿಕೆ ಕರೆಗಳು ಬಂದಿವೆ ಎಂಬ ಆರೋಪ ಕೇಳಿ ಬರುತ್ತಿದೆ.

    ವಿಶ್ವನಾಥ ದೇಗುಲದ ಪಕ್ಕದಲ್ಲಿರುವ ಮಸೀದಿಯ ಹಿಂಭಾಗದಲ್ಲಿರುವ ಶೃಂಗಾರ ಗೌರಿ ದೇವರಿಗೆ ನಿತ್ಯ ಪ್ರಾರ್ಥನೆ ಸಲ್ಲಿಸಲು ಅನುಮತಿ ಕೋರಿ ಐವರು ಮಹಿಳೆಯರು ಸ್ಥಳೀಯ ನ್ಯಾಯಾಲಯಕ್ಕೆ ಮೊರೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಪಾಕಿಸ್ತಾನದ ನಂಬರ್‌ನಿಂದ ಹಲವಾರು ಬಾರಿ ಅರ್ಜಿಯನ್ನು ಹಿಂತೆಗೆದುಕೊಳ್ಳಬೇಕು ಎಂದು ಬೆದರಿಕೆ ಕರೆಗಳು ಬಂದಿವೆ. ಆದರೆ ನಾವು ಯಾವುದೇ ಬೆದರಿಕೆಗೂ ಹೆದರುವುದಿಲ್ಲ ಎಂದು ಸೋಹನ್ ಲಾಲ್ ಆರ್ಯ ತಿಳಿಸಿದ್ದಾರೆ.

    ಸೋಹನ್ ಲಾಲ್ ಆರ್ಯ ಅವರ ಪತ್ನಿ ಲಕ್ಷ್ಮಿ ದೇವಿ ಹಾಗೂ ವಾರಣಾಸಿ ಮೂಲದ ಮೂವರು ಮಹಿಳೆಯರು, ಇನ್ನೊಬ್ಬರು ದೆಹಲಿಯ ಮಹಿಳೆಯೊಬ್ಬರು ಅರ್ಜಿಯನ್ನು ಸಲ್ಲಿಸಿದ್ದರು. ಇದನ್ನೂ ಓದಿ: ರಾಷ್ಟ್ರಧ್ವಜವನ್ನು ಸಿಗರೇಟ್‍ನಿಂದ ಸುಟ್ಟ ವ್ಯಕ್ತಿಯ ಬಂಧನ

    ಘಟನೆಗೆ ಸಂಬಂಧಿಸಿ ಲಕ್ಸಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಹಿನ್ನೆಲೆಯಲ್ಲಿ ಅವರ ಭದ್ರತೆಗಾಗಿ ಇಬ್ಬರು ಪೊಲೀಸರನ್ನು ನಿಯೋಜಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಹಾಯಕ ಪೊಲೀಸ್ ಆಯುಕ್ತ ಅವಧೇಶ್ ಕುಮಾರ್ ಪಾಂಡೆ ತಿಳಿಸಿದ್ದಾರೆ. ಇದನ್ನೂ ಓದಿ: ಕಾಣೆಯಾಗಿ ಮತ್ತೆ ಸಿಕ್ಕಿದ್ದ ಗಿಳಿಯನ್ನು ಗುಜರಾತ್ ಝೂಗೆ ಬಿಟ್ಟ ಮಾಲೀಕರು

    Live Tv
    [brid partner=56869869 player=32851 video=960834 autoplay=true]

  • ಜ್ಞಾನವಾಪಿ ಕೇಸ್ ವಾರಣಾಸಿ ಕೋರ್ಟ್‍ಗೆ ವರ್ಗಾವಣೆ – ವಾದ, ಪ್ರತಿವಾದ ಹೇಗಿತ್ತು?

    ಜ್ಞಾನವಾಪಿ ಕೇಸ್ ವಾರಣಾಸಿ ಕೋರ್ಟ್‍ಗೆ ವರ್ಗಾವಣೆ – ವಾದ, ಪ್ರತಿವಾದ ಹೇಗಿತ್ತು?

    ನವದೆಹಲಿ: ಜ್ಞಾನವಾಪಿ ಮಸೀದಿ ವಿಚಾರಣೆ ತಡೆ ನೀಡಲು ನಿರಾಕರಿಸಿರುವ ಸುಪ್ರೀಂಕೋರ್ಟ್ ಇಂದು ವಾರಣಾಸಿ ಜಿಲ್ಲಾ ನ್ಯಾಯಾಲಯಕ್ಕೆ ಪ್ರಕರಣವನ್ನು ವರ್ಗಾಯಿಸಿದೆ.

    ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿರುವ ಪ್ರಕರಣ ಈಗ ಮತ್ತೊಂದು ಸ್ವರೂಪ ಪಡೆದುಕೊಂಡಿದೆ. ವಾರಣಾಸಿ ಸಿವಿಲ್ ಕೋರ್ಟ್‍ನಲ್ಲಿದ್ದ ಇಡೀ ಪ್ರಕರಣವನ್ನು ಇಂದು ಸುಪ್ರೀಂಕೋರ್ಟ್ ವಾರಣಾಸಿ ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾಯಿಸಿದೆ. ಸಿವಿಲ್ ಕೋರ್ಟ್ ನೀಡಿದ ಸರ್ವೆ ಕಾರ್ಯಕ್ಕೆ ತಡೆ ನೀಡಬೇಕು ಎಂದು ಅಂಜುಮನ್ ಇಂತೇಜಾಮಿಯ ಸಮಿತಿ ಹಾಗೂ ಪತ್ತೆಯಾಗಿರುವ ಶಿವಲಿಂಗ ಪೂಜೆಗೆ ಅವಕಾಶ ನೀಡಬೇಕು ಎಂದು ಹಿಂದೂ ಸಂಘಟನೆಗಳು ಸಲ್ಲಿಸಿದ್ದ ಅರ್ಜಿಗಳನ್ನು ಇಂದು ಸುಪ್ರೀಂಕೋರ್ಟ್ ವಿಚಾರಣೆ ನಡೆಸಿತು. ಇದನ್ನೂ ಓದಿ: 1 ವರ್ಷ ಜೈಲು ಶಿಕ್ಷೆ – ನ್ಯಾಯಾಲಯಕ್ಕೆ ಶರಣಾದ ಸಿಧು

    ವಿಚಾರಣೆ ವೇಳೆ ವಾದ ಮಂಡಿಸಿದ ಹಿಂದೂ ಪರ ವಕೀಲರು, ಜ್ಞಾನವಾಪಿ ಮಸೀದಿಯಲ್ಲಿ ಈಗಾಗಲೇ ಸರ್ವೇ ಕಾರ್ಯ ಮಾಡಿ ಮುಗಿಸಲಾಗಿದೆ. ಹೀಗಾಗಿ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿ ಅನುರ್ಜಿತವಾಗಿದೆ. ಈ ಅರ್ಜಿಯನ್ನು ವಿಚಾರಣೆ ನಡೆಸಬಾರದು ಎಂದು ಮನವಿ ಮಾಡಿದರು. ಇದೇ ವೇಳೆ ಪತ್ತೆಯಾಗಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಕೋರಿದರು. ಇದನ್ನೂ ಓದಿ: ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿರುವುದು ಹೆಮ್ಮೆ ಎನಿಸಿತು: ನಿಖತ್ ಜರೀನ್

    ಪ್ರತಿವಾದ ಸಲ್ಲಿಸಿದ ಮಸೀದಿ ಪರ ವಕೀಲರು, ಇಂತಹ ಅರ್ಜಿಗಳಿಗೆ ಮಹತ್ವ ನೀಡಬಾರದು. ಇಂತಹ ಅರ್ಜಿಗಳನ್ನು ಅನುಮತಿಸಿದರೆ ನಾಳೆ ಇನ್ನೊಂದು ಮಸೀದಿಯು ದೇವಾಲಯವಾಗಿದೆ ಎಂದು ಹೇಳುತ್ತಾರೆ. ಇದು ಈ ನೆಲದ ಮೇಲೆ ಅಗಾಧವಾದ ಪರಿಣಾಮ ಬೀರಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ಇದಲ್ಲದೇ ಮಸೀದಿಯಲ್ಲಿ ವಜುಖಾನ ಸೀಲ್ ಮಾಡಿದ್ದು ಪ್ರಾರ್ಥನೆ ಸಲ್ಲಿಸಲು ತೊಡಕಾಗಿದೆ, ಹೀಗಾಗಿ ಸರ್ವೇ ಕಾರ್ಯಗಳಿಗೆ ತಡೆ ನೀಡಿ ಮೊದಲಿನಂತೆ ಪೂರ್ಣ ಪ್ರಮಾಣದಲ್ಲಿ ಪ್ರಾರ್ಥನೆ ಸಲ್ಲಿಸಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ರಾಜ್ಯದ ಮೂರು ಜಿಲ್ಲೆಗಳ ಅದಿರು ರಫ್ತಿಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್

    ವಾದ, ಪ್ರತಿವಾದ ಆಲಿಸಿದ ಪೀಠ, ಜಿಲ್ಲಾ ನ್ಯಾಯಾಲಯಕ್ಕೆ ಪ್ರಕರಣವನ್ನು ವರ್ಗಾಯಿಸುವ ನಿರ್ಧಾರಕ್ಕೆ ಬಂತು. ವಾರಣಾಸಿ ಜಿಲ್ಲಾ ನ್ಯಾಯಾಲಯ ವಿಚಾರಣೆ ನಡೆಸಬೇಕು. ಹಿರಿಯ ನ್ಯಾಯಾಧೀಶರು ವಿಚಾರಣೆ ಆಲಿಸಬೇಕು ಎಂದು ಸೂಚಿಸಿದ ಪೀಠ, ಶಿವಲಿಂಗ ರಕ್ಷಣೆ ಮತ್ತು ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡುವ ಮೇ. 17ರ ಆದೇಶವನ್ನು ಮುಂದಿನ ಎಂಟು ವಾರಗಳ ವರೆಗೂ ಮುಂದುವರಿಸಬೇಕು ಎಂದು ಆದೇಶ ನೀಡಿತು.

    ಜಿಲ್ಲಾಡಳಿತ ಮೇಲೆ ಸುಪ್ರೀಂ ಗರಂ:
    ವಿಚಾರಣೆ ವೇಳೆ ಸರ್ವೇ ಅಧಿಕಾರಿಗಳ ವಿರುದ್ಧವೂ ಸುಪ್ರೀಂಕೋರ್ಟ್ ಆಕ್ರೋಶ ವ್ಯಕ್ತಪಡಿಸಿತು. ಸರ್ವೇ ನಡೆಸಿದ ಕೆಲವು ಅಂಶಗಳನ್ನು ಉದ್ದೇಶಪೂರ್ವಕವಾಗಿ ಲೀಕ್ ಮಾಡುವುದು ಸರಿಯಲ್ಲ. ಮುಂದೆ ಹೀಗೆ ಆಗಬಾರದು. ಸರ್ವೇ ವರದಿ ಮುಚ್ಚಿದ ಲಕೋಟೆಯಲ್ಲಿ ನೇರವಾಗಿ ಮೊದಲು ಕೋರ್ಟ್‍ಗೆ ಸಲ್ಲಿಕೆಯಾಗಬೇಕು ಎಂದು ಸೂಚಿಸಿತು.

    ಇಷ್ಟು ದಿನ ಸಿವಿಲ್ ಕೋರ್ಟ್ ನಲ್ಲಿದ್ದ ಜ್ಞಾನವಾಪಿ ಮಸೀದಿ ಪ್ರಕರಣ ಈಗ ಜಿಲ್ಲಾ ನ್ಯಾಯಾಲಯ ಪ್ರವೇಶಿಸಿದ್ದು ಮುಂದೆ ಹೈಕೋರ್ಟ್‍ಗೂ ಎಂಟ್ರಿಯಾಗುವ ಸಾಧ್ಯತೆ ಹೆಚ್ಚಿದೆ.