Tag: Gyanvapi mosque

  • ಜ್ಞಾನವಾಪಿಯೇ ಸಾಕ್ಷಾತ್ ವಿಶ್ವನಾಥ, ಅದನ್ನು ಮಸೀದಿ ಎನ್ನುವುದು ವಿಷಾದನೀಯ: ಯೋಗಿ ಆದಿತ್ಯನಾಥ್

    ಜ್ಞಾನವಾಪಿಯೇ ಸಾಕ್ಷಾತ್ ವಿಶ್ವನಾಥ, ಅದನ್ನು ಮಸೀದಿ ಎನ್ನುವುದು ವಿಷಾದನೀಯ: ಯೋಗಿ ಆದಿತ್ಯನಾಥ್

    ಲಕ್ನೋ: ಇಂದು ಜನರು ಜ್ಞಾನವಾಪಿಯನ್ನು (Gyanvapi Mosque) ಮಸೀದಿ ಎಂದು ಕರೆಯುತ್ತಾರೆ. ಆದರೆ ಜ್ಞಾನವಾಪಿ ವಾಸ್ತವವಾಗಿ ‘ವಿಶ್ವನಾಥ’ (Vishwanath Temple) ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಹೇಳಿದ್ದಾರೆ.

    ಡಿಡಿಯು ಗೋರಖ್‌ಪುರ ವಿಶ್ವವಿದ್ಯಾಲಯದಲ್ಲಿ ನಾಥಪಂಥದ ಕುರಿತು ಆಯೋಜಿಸಿದ್ದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜ್ಞಾನವಾಪಿಯೇ ಸಾಕ್ಷಾತ್ ವಿಶ್ವನಾಥ. ನಾಥ ಸಂಪ್ರದಾಯವು ಯಾವಾಗಲೂ ಎಲ್ಲರನ್ನೂ ಸಂಪರ್ಕಿಸಲು ಪ್ರಯತ್ನಿಸಿದೆ. ಗುರು ಗೋರಖನಾಥರು ತಮ್ಮ ಕಾಲದಲ್ಲಿ ರಾಷ್ಟ್ರೀಯ ಏಕತೆಯತ್ತ ಗಮನ ಸೆಳೆದಿದ್ದರು. ರಾಮಚರಿತ್ ಮಾನಸ್ ಸಮಾಜವನ್ನು ಸಂಪರ್ಕಿಸುತ್ತದೆ. ಅದು ನಮ್ಮ ಜೀವನದ ಒಂದು ಭಾಗವಾಗಿದೆ ಎಂದರು‌. ಇದನ್ನೂ ಓದಿ: ಬೇಡಿಕೆ ಈಡೇರಿಸಲು ಸ್ವಲ್ಪ ಸಮಯ ಕೊಡಿ: ಪ್ರತಿಭಟನಾ ನಿರತ ಕಿರಿಯ ವೈದ್ಯರಿಗೆ ಸಿಎಂ ಮಮತಾ ಬ್ಯಾನರ್ಜಿ ಮನವಿ

    ಶಂಕರಾಚಾರ್ಯರು ಭಾರತದ ನಾಲ್ಕು ಮೂಲೆಗಳಲ್ಲಿ ನಾಲ್ಕು ಪೀಠಗಳನ್ನು ಸ್ಥಾಪಿಸಿದರು. ಅವರು ಕಾಶಿಗೆ ಬಂದಾಗ ವಿಶ್ವನಾಥ ದೇವರು ಅವನನ್ನು ಪರೀಕ್ಷಿಸಲು ಬಯಸಿದನು. ಬೆಳಗ್ಗೆ ಆದಿ ಶಂಕರಾಚಾರ್ಯರು ಬ್ರಹ್ಮಮೂರ್ತದಲ್ಲಿ ಗಂಗಾಸ್ನಾನಕ್ಕೆ ಹೋಗುತ್ತಿರುವಾಗ ಇದ್ದಕ್ಕಿದ್ದಂತೆ ದೇವರು ಓರ್ವ ವ್ಯಕ್ತಿ ರೂಪದಲ್ಲಿ ಪ್ರತ್ಯಕ್ಷನಾಗುತ್ತಾನೆ. ನಂತರ ಶಂಕರಾಚಾರ್ಯರಿಗೆ ಒಂದು ಪ್ರಶ್ನೆಯನ್ನು ಕೇಳುತ್ತಾರೆ. ನಿಮ್ಮ ಜ್ಞಾನವು ಈ ಭೌತಿಕ ದೇಹವನ್ನು ನೋಡುತ್ತಿದೆಯೇ ಅಥವಾ ಬ್ರಹ್ಮವನ್ನು ನೋಡುತ್ತಿದೆಯೇ? ನೀವು ಯಾರನ್ನು ತೆಗೆದುಹಾಕಲು ಪ್ರಯತ್ನಿಸುತ್ತಿದ್ದೀರಿ? ಎಂದು ಕೇಳುತ್ತಾರೆ.

    ಬ್ರಹ್ಮವು ಸತ್ಯವಾಗಿದ್ದರೆ ಈ ಬ್ರಹ್ಮವು ನನ್ನೊಳಗೂ ಇದೆ ಮತ್ತು ಈ ಬ್ರಹ್ಮವನ್ನು ತಿಳಿದ ನಂತರ ಅದು ಸತ್ಯವಲ್ಲ ಎಂದು ಹೇಳುತ್ತಾರೆ‌. ಇದನ್ನು ಕೇಳಿದ ಆದಿ ಶಂಕರಾಚಾರ್ಯರು ನೀವು ಯಾರು ಎಂದು ಕೇಳಿದರು. ಜ್ಞಾನಪ್ಯರ ಧ್ಯಾನಕ್ಕಾಗಿ ಕಾಶಿಗೆ ಬಂದಿರುವ ನಾನು ನಿಜವಾದ ವಿಶ್ವನಾಥ ಎಂದು ಹೇಳಿದರು. ಇದನ್ನು ಕೇಳಿದ ಆದಿಶಂಕರಾಚಾರ್ಯರು ಅವರ ಮುಂದೆ ನಮಸ್ಕರಿಸಿದರು. ಕೆಲವರು ಇಂದು ಇದನ್ನು ಮಸೀದಿ ಎಂದು ಕರೆಯುತ್ತಿರುವುದು ವಿಷಾದನೀಯ ಎಂದರು. ಇದನ್ನೂ ಓದಿ: ಸುರಕ್ಷಿತ, ಸಮೃದ್ಧ ಜಮ್ಮು-ಕಾಶ್ಮೀರ ನಿರ್ಮಿಸುತ್ತೇವೆ, ಇದು ಮೋದಿ ಗ್ಯಾರಂಟಿ: ಪ್ರಧಾನಿ ಭರವಸೆ

    ಇದೇ ವೇಳೆ ಅವರು ಹಿಂದಿ ದಿವಸ್ ಹಿನ್ನೆಲೆ ಅವರು ಅಭಿನಂದನೆ ಸಲ್ಲಿಸಿದರು. ಹೆಚ್ಚಿನ ಜನಸಂಖ್ಯೆಯಿಂದ ಮಾತನಾಡಲ್ಪಡುವ ದೇಶವನ್ನು ಸಂಪರ್ಕಿಸಲು ಪ್ರಾಯೋಗಿಕ ಭಾಷೆ ಇದೆ ಎಂದು ಹೇಳಿದರು. ಹಿಂದಿಯ ಮೂಲವು ದೇವವಾಣಿ ಸಂಸ್ಕೃತದಿಂದ ಬಂದಿದೆ. ಪ್ರತಿಯೊಂದು ಭಾಷೆಯ ಮೂಲವು ಸಂಸ್ಕೃತದೊಂದಿಗೆ ಸಂಬಂಧ ಹೊಂದಿದೆ. ನಮ್ಮ ಭಾಷೆ ಮತ್ತು ಭಾವನೆಗಳು ನಮ್ಮದೇ ಆಗದಿದ್ದರೆ ಪ್ರಗತಿಗೆ ಧಕ್ಕೆಯಾಗುತ್ತದೆ.

    ಮೋದಿ ಸರ್ಕಾರ 10 ವರ್ಷಗಳಲ್ಲಿ ಹಿಂದಿಯನ್ನು ಪ್ರತಿ ಹಂತದಲ್ಲೂ ಪ್ರಚಾರ ಮಾಡಿದೆ. ಅದರ ಪರಿಣಾಮವೇ ಇಂದು ವೈದ್ಯಕೀಯ, ಇಂಜಿನಿಯರಿಂಗ್ ಕೋರ್ಸ್‌ಗಳು ಹಿಂದಿಯಲ್ಲೂ ಕಾಣುತ್ತಿವೆ. ಈಗ ರಾಜತಾಂತ್ರಿಕರು ಬಂದಾಗ, ಅವರು ನಮ್ಮೊಂದಿಗೆ ಸಂವಹನ ನಡೆಸಲು ಹಿಂದಿಯನ್ನು ಮಾಧ್ಯಮವಾಗಿ ಬಳಸುತ್ತಾರೆ. ಭಾರತದ ಸಂತರು ಎಲ್ಲರನ್ನೂ ಸಂಪರ್ಕಿಸುವ ಸಂಪ್ರದಾಯವನ್ನು ಹೊಂದಿದ್ದಾರೆ ಎಂದರು. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಎನ್‍ಕೌಂಟರ್ – ಐವರು ಉಗ್ರರು ಬಲಿ

  • ಜ್ಞಾನವಾಪಿ ಮಸೀದಿ ಆವರಣದಲ್ಲಿ ಪೂಜೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

    ಜ್ಞಾನವಾಪಿ ಮಸೀದಿ ಆವರಣದಲ್ಲಿ ಪೂಜೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

    ನವದೆಹಲಿ: ವಾರಣಾಸಿಯ (Varanasi) ಜ್ಞಾನವಾಪಿ ಮಸೀದಿಯ (Gyanvapi Mosque) ದಕ್ಷಿಣ ನೆಲಮಾಳಿಗೆಯಲ್ಲಿ ಪೂಜೆ ನಡೆಸಲು ಹಿಂದೂಗಳಿಗೆ ನೀಡಿದ ಅನುಮತಿಗೆ ತಡೆ ನೀಡಲು ಸುಪ್ರೀಂ ಕೋರ್ಟ್ (Supreme Court) ನಿರಾಕರಿಸಿದೆ. ಎರಡೂ ಸಮುದಾಯಗಳು ಜ್ಞಾನವಾಪಿ ಆವರಣದಲ್ಲಿ ಧಾರ್ಮಿಕ ಪ್ರಾರ್ಥನೆಗಳನ್ನು ಸಲ್ಲಿಸುತ್ತಿದ್ದು, ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಕಕ್ಷಿದಾರರಿಗೆ ಆದೇಶಿಸಿದೆ.

    ತೆಹ್ಖಾನಾದಲ್ಲಿ ಪೂಜೆಗೆ ಅನುಮತಿ ನೀಡಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಮಸೀದಿ ಸಮಿತಿ ಮತ್ತು ಮುಸ್ಲಿಂ ಪಕ್ಷಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ತ್ರಿ ಸದಸ್ಯ ಪೀಠ, ಎರಡೂ ಸಮುದಾಯಗಳು ಪೂಜೆಗಳನ್ನು ಸಲ್ಲಿಸಲು ಸಾಧ್ಯವಾಗುವಂತೆ ಯಥಾಸ್ಥಿತಿ ಕಾಯ್ದುಕೊಳ್ಳುವುದು ಸೂಕ್ತವಾಗಿದೆ ಎಂದು ಹೇಳಿದೆ. ಇದನ್ನೂ ಓದಿ: ಇವಿಎಂ ಫಿಕ್ಸಿಂಗ್ ಎಂದ ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

    ಪ್ರಾಥನೆ ಸಲ್ಲಿಕೆಯಲ್ಲಿ ಎರಡೂ ಪಕ್ಷಗಳಿಂದ ತೊಂದರೆಯಾಗಬಾರದು. ಹಿಂದೂಗಳು ದಕ್ಷಿಣದಿಂದ ಪ್ರವೇಶಿಸಿ ನೆಲಮಾಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಾರೆ ಮತ್ತು ಮುಸ್ಲಿಮರು ಉತ್ತರ ಭಾಗದಲ್ಲಿ ಪ್ರಾರ್ಥನೆ ಸಲ್ಲಿಸುತ್ತಾರೆ. ಪ್ರಕರಣವು ಅಂತಿಮವಾಗಿ ತೀರ್ಮಾನವಾಗುವವರೆಗೆ ಈ ವ್ಯವಸ್ಥೆ ಮುಂದುವರಿಯುತ್ತದೆ ಎಂದು ನ್ಯಾಯಾಲಯ ಇದೇ ಸಮಯದಲ್ಲಿ ಹೇಳಿತು.

    ಮುಸ್ಲಿಂ ಸಮುದಾಯದವರು ನಮಾಜ್‌ಗೆ ಅಡೆತಡೆಯಿಲ್ಲದೆ ನಮಾಜ್‌ ಸಲ್ಲಿಸುತ್ತಿದ್ದಾರೆ ಮತ್ತು ತೆಹಖಾನಾದಲ್ಲಿ ಪ್ರಾರ್ಥನೆ ಕೇವಲ ಹಿಂದೂ ಅರ್ಚಕರಿಗೆ ಮಾತ್ರ ಸೀಮಿತವಾಗಿದೆ ಎಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು ಯಥಾಸ್ಥಿತಿ ಕಾಯ್ದುಕೊಳ್ಳುವುದು ಅಗತ್ಯವಾಗಿದೆ. ಎರಡೂ ಸಮುದಾಯಗಳು ಮೇಲಿನ ನಿಯಮಗಳಲ್ಲಿ ಧಾರ್ಮಿಕ ಪೂಜೆಯನ್ನು ಮಾಡಬಹುದು ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ಹೇಳಿದೆ. ಇದನ್ನೂ ಓದಿ: ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ – ಬಿಜೆಪಿ ಸಂಸದ ದಿಲೀಪ್ ಘೋಷ್, ಕಾಂಗ್ರೆಸ್‌ನ ಸುಪ್ರಿಯಾಗೆ ಚು‌ನಾವಣಾ ಆಯೋಗ ಛೀಮಾರಿ

    ಮುಸ್ಲಿಂ ಪಕ್ಷಗಳು ಸಲ್ಲಿಸಿದ ಮೇಲ್ಮನವಿಯ ಮೇಲೆ ನ್ಯಾಯಾಲಯವು ಹಿಂದೂ ಪಕ್ಷಗಳಿಗೆ ನೋಟಿಸ್ ಜಾರಿಗೊಳಿಸಿತು ಮತ್ತು ಜುಲೈನಲ್ಲಿ ಪರಿಗಣನೆಗೆ ವಿಷಯವನ್ನು ಪಟ್ಟಿ ಮಾಡಿದೆ. ಕಳೆದ ಜನವರಿ 31 ರಂದು ಹಿಂದೂ ಪಕ್ಷಗಳು ಪೂಜೆಯನ್ನು ಮುಂದುವರಿಸಬೇಕು ಎಂದು ವಾರಣಾಸಿ ಸಿವಿಲ್ ನ್ಯಾಯಾಲಯ ಎಂದು ಆದೇಶಿಸಿದೆ. ಆದೇಶಕ್ಕೆ ತಡೆ ನೀಡಲು ಅಲಹಬಾದ್ ಹೈಕೋರ್ಟ್ ನಿರಾಕರಿಸಿತ್ತು.

  • ವಕೀಲರು Vs ಪೊಲೀಸರು – ಫೇಸ್‌ಬುಕ್‌ ಪೋಸ್ಟ್‌ನಿಂದ ಅಹೋರಾತ್ರಿ ಧರಣಿಯವರೆಗೆ: ರಾಮನಗರದಲ್ಲಿ ಪ್ರತಿಭಟನೆ ಯಾಕೆ?

    ವಕೀಲರು Vs ಪೊಲೀಸರು – ಫೇಸ್‌ಬುಕ್‌ ಪೋಸ್ಟ್‌ನಿಂದ ಅಹೋರಾತ್ರಿ ಧರಣಿಯವರೆಗೆ: ರಾಮನಗರದಲ್ಲಿ ಪ್ರತಿಭಟನೆ ಯಾಕೆ?

    ರಾಮನಗರ: ವಕೀಲರು (Lawyers) ಮತ್ತು ಪೊಲೀಸರ (Police) ಮಧ್ಯೆ ವಾರದಿಂದ ನಡೆಯುತ್ತಿರುವ ಪ್ರತಿಭಟನೆ (Protest) ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಪ್ರತಿಭಟನೆಗೆ ಮೂಲ ಕಾರಣವಾಗಿದ್ದು ಒಂದು ಫೇಸ್‌ಬುಕ್‌ ಪೋಸ್ಟ್‌

    ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿ (Gyanvapi Mosque) ನೆಲಮಹಡಿಯಲ್ಲಿ ಪೂಜೆ ಸಲ್ಲಿಸಲು ತೀರ್ಪು ನೀಡಿದ ವಾರಾಣಸಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಎಸ್​ಡಿಪಿಐ ಕಾರ್ಯಕರ್ತ, ವಕೀಲ ಚಾಂದ್ ಪಾಷಾ ಅವಹೇಳನಕಾರಿಯಾಗಿ ಪೋಸ್ಟ್‌ ಹಾಕಿದ್ದ.

    ನ್ಯಾಯಾಧೀಶರ ವಿರುದ್ಧವೇ ಪೋಸ್ಟ್‌ ಹಾಕಿದ್ದಕ್ಕೆ ಹಿಂದೂಪರ ಕಾರ್ಯಕರ್ತರು ಎಸ್‌ಪಿ ಹಾಗೂ ವಕೀಲರ ಸಂಘಕ್ಕೆ ದೂರು ನೀಡಿದ್ದರು. ಈ ಸಂಬಂಧ ವಕೀಲ ಚಾನ್ ಪಾಷಾ ಮೇಲೆ ಎಫ್‌ಐಆರ್‌ ದಾಖಲಾಗಿ ಬಂಧಿಸಲಾಗಿತ್ತು.  ಇದನ್ನೂ ಓದಿ: ಕರ್ನಾಟಕ, ಜಮ್ಮು- ಕಾಶ್ಮೀರ ಸೇರಿ ದೇಶದ ವಿವಿಗಳ ಅಭಿವೃದ್ಧಿಗೆ 3600 ಕೋಟಿ ರೂ. ಬಿಡುಗಡೆ

    ನ್ಯಾಯಾಂಗ ನಿಂದನೆ ಮಾಡಿದ ಹಿನ್ನೆಲೆಯಲ್ಲಿ ಚಾನ್ ಪಾಷಾ ಮೇಲೆ ವಕೀಲರ ಸಂಘ ಕ್ರಮ ಕೈಗೊಳ್ಳಲು ಮುಂದಾಗಿತ್ತು. ಈ ವೇಳೆ ಚಾನ್ ಪಾಷಾ ಬೆಂಬಲಿಗರು ವಕೀಲರ ಸಂಘಕ್ಕೆ ಭೇಟಿ ನೀಡಿ ಕ್ರಮ ಕೈಗೊಳ್ಳದಂತೆ ಮನವಿ ಮಾಡಿದ್ದರು.

     

    ಮನವಿ ನೀಡುವ ವೇಳೆ ವಕೀಲರ ಸಂಘದ ಆವರಣದಲ್ಲಿ ಚಾನ್ ಪಾಷಾ ಬೆಂಬಲಿಗರು ಹಾಗೂ ವಕೀಲರ ನಡುವೆ ಗಲಾಟೆ ನಡೆದಿದೆ. ಗಲಾಟೆ ಬಳಿಕ ಚಾನ್ ಪಾಷಾ ಬೆಂಬಲಿಗರ ವಿರುದ್ಧ ವಕೀಲರು ದೂರು ನೀಡಿದ್ದರು. ಈ ಸಂಬಂಧ ಎಫ್ಐಆರ್ ದಾಖಾಲಾಗಿತ್ತು. ನಂತರ ಚಾನ್ ಪಾಷಾ ಬೆಂಬಲಿಗರಿಂದ ಪ್ರತಿ ದೂರು ದಾಖಲಾಯಿತು.

    ವಕೀಲರ ಸಂಘಕ್ಕೆ ನಾವು ಮನವಿ ಮಾಡಿಕೊಡಲು ಹೋದ ವೇಳೆ ನಮ್ಮ‌ ಮೇಲೆ ಹಲ್ಲೆ, ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ರಫೀಕ್‌ ಖಾನ್‌ ಎಂಬವರು ದೂರು ನೀಡಿದ್ದರು. ದೂರು ಸ್ವೀಕರಿಸಿ 40 ವಕೀಲರ ಮೇಲೆ ಐಜೂರು ಪಿಎಸ್ ಐ ತನ್ವೀರ್ ಎಫ್ಐಆರ್ ದಾಖಲಿಸಿದ್ದಾರೆ. ಇದನ್ನೂ ಓದಿ: ಪಿಎಸ್‌ಐ ಅಮಾನತಿಗೆ ಆಗ್ರಹಿಸಿ ರಾಮನಗರದಲ್ಲಿ ಅಹೋರಾತ್ರಿ ಡಿಸಿ ಕಚೇರಿ ಮುಂದೆ ವಕೀಲರ ಪ್ರತಿಭಟನೆ

    ಗಲಾಟೆ ವೇಳೆ ಸ್ಥಳದಲ್ಲಿ ಇಲ್ಲದ ವಕೀಲರ ಮೇಲೂ ಸುಳ್ಳು ಎಫ್‌ಐಆರ್‌ ದಾಖಲು ಮಾಡಲಾಗಿದೆ ಎನ್ನುವುದು ವಕೀಲರ ವಾದ. ನಂತರ ಸುಳ್ಳು ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಆರೋಪಿಸಿ ಪಿಎಸ್‌ಐ ಅಮಾನತಿಗೆ ಆಗ್ರಹಿಸಿ ಪ್ರತಿಭಟಿಸಿದ್ದರು. ಈ ಪ್ರತಿಭಟನೆಗೆ ಸರ್ಕಾರದಿಂದ ಯಾವುದೇ ಸ್ಪಂದನೆ ದೊರೆಯದೇ ಇದ್ದಾಗ ಈಗ ಅಹೋರಾತ್ರಿ ಡಿಸಿ ಕಚೇರಿ ಮುಂದೆ ವಕೀಲರು ಪ್ರತಿಭಟನೆ ನಡೆಸುತ್ತಿದ್ದಾರೆ.

     

  • ಜ್ಞಾನವಾಪಿ ತೀರ್ಪು ವಿರೋಧಿಸಿ ನ್ಯಾಯಾಧೀಶರ ನಿಂದನೆ – ವಕೀಲ ಅರೆಸ್ಟ್

    ಜ್ಞಾನವಾಪಿ ತೀರ್ಪು ವಿರೋಧಿಸಿ ನ್ಯಾಯಾಧೀಶರ ನಿಂದನೆ – ವಕೀಲ ಅರೆಸ್ಟ್

    ರಾಮನಗರ: ಜ್ಞಾನವಾಪಿ ಮಸೀದಿಯ (Gyanvapi Mosque) ನೆಲ ಮಾಳಿಗೆಯಲ್ಲಿ ಹಿಂದೂಗಳಿಗೆ ಪೂಜೆ ಸಲ್ಲಿಸಲು ವಾರಣಾಸಿ ನ್ಯಾಯಾಲಯ ಅವಕಾಶ ಕೊಟ್ಟಿದ್ದನ್ನು ವಿರೋಧಿಸಿ, ಫೇಸ್‍ಬುಕ್‍ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದ ರಾಮನಗರ (Ramanagara) ಮೂಲದ ವಕೀಲನನ್ನ (Lawyer) ಪೊಲೀಸರು  (Police) ಬಂಧಿಸಿದ್ದಾರೆ.

    ಬಂಧಿತ ವಕೀಲನನ್ನು ಚಾನ್ ಪಾಷ ಎಂದು ಗುರುತಿಸಲಾಗಿದೆ. ಆರೋಪಿ ಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳಿಗೆ ಪೂಜೆ ಮಾಡಲು ಅವಕಾಶ ಕಲ್ಪಿಸಿಕೊಟ್ಟ ವಿಚಾರಕ್ಕೆ ನ್ಯಾಯಾಧೀಶರನ್ನು ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಪೋಸ್ಟ್‍ನಲ್ಲಿ ನ್ಯಾಯಾಧೀಶರನ್ನು ನಾಲಾಯಕ್, ಭ್ರಷ್ಟ ಹಾಗೂ ಅವಾಚ್ಯ ಶಬ್ದಗಳನ್ನು ಬಳಸಿ ನಿಂದನೆ ಮಾಡಿದ್ದ. ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳ ಪೂಜೆಗೆ ಅವಕಾಶ – ನ್ಯಾಯಾಧೀಶರ ವಿರುದ್ಧ ವಕೀಲನಿಂದ ಅವಹೇಳನಕಾರಿ ಪೋಸ್ಟ್

    ಈ ಸಂಬಂಧ ಹಿಂದೂಪರ ಕಾರ್ಯಕರ್ತರು ಹಾಗೂ ಕೆಲ ವಕೀಲರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದರು. ಈ ಹಿನ್ನೆಲೆ ರಾಮನಗರದ ಐಜೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈತ್ತ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದ. ಇದೀಗ ಪೊಲೀಸರು ನ್ಯಾಯಾಂಗ ನಿಂದನೆ (Contempt Of Court) ಆರೋಪದಡಿ ಚಾನ್ ಪಾಷನನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇದನ್ನೂ ಓದಿ: 15 ಪತ್ರ ಬರೆದರೂ ಕೇಂದ್ರ ಸರ್ಕಾರ ಬರ ಪರಿಹಾರಕ್ಕೆ ಹಣ ಬಿಡುಗಡೆ ಮಾಡುತ್ತಿಲ್ಲ- ಚೆಲುವರಾಯಸ್ವಾಮಿ

  • PublicTV Explainer: ಕಾಶಿ ವಿಶ್ವನಾಥ ದೇವಾಲಯದಿಂದ ಜ್ಞಾನವಾಪಿ ಮಸೀದಿ ವರೆಗೆ!

    PublicTV Explainer: ಕಾಶಿ ವಿಶ್ವನಾಥ ದೇವಾಲಯದಿಂದ ಜ್ಞಾನವಾಪಿ ಮಸೀದಿ ವರೆಗೆ!

    – ಮಸೀದಿ ಜಾಗದಲ್ಲಿ ಸಿಕ್ಕ ಹಿಂದೂ ದೇವಾಲಯದ ಕುರುಹುಗಳೇನು?

    ರಾಮಮಂದಿರ (Ram Mandir) ಆಯ್ತು.. ದೇವಾಲಯದ ವಿಚಾರದಲ್ಲಿ ಈಗ ಹಿಂದೂಗಳಿಗೆ ಮತ್ತೊಂದು ಜಯ ಸಿಕ್ಕಿದೆ. ನೂರಾರು ವರ್ಷಗಳ ಕನಸು ನನಸಾಗಿದೆ. ದಶಕಗಳ ಹೋರಾಟಕ್ಕೆ ಫಲ ಸಿಕ್ಕಿದೆ. ಹೌದು, ಐತಿಹಾಸಿಕ ಹಿಂದೂ ದೇವಾಲಯ ಕೆಡವಿ, ಮಸೀದಿ ನಿರ್ಮಿಸಿದ್ದಾರೆ ಎನ್ನಲಾದ ವಿವಾದಿತ ಸ್ಥಳ ಮತ್ತೆ ಹಿಂದೂಗಳ ಕೈವಶವಾಗಿದೆ.

    ಜ್ಞಾನವಾಪಿ ಮಸೀದಿ (Gyanvapi Mosque) ಆವರಣದ ನೆಲಮಾಳಿಗೆಯಲ್ಲಿ ಹಿಂದೂಗಳ ಪೂಜೆಗೆ ಅವಕಾಶ ನೀಡಿ ಈಚೆಗೆ ವಾರಣಾಸಿ ಜಿಲ್ಲಾ ನ್ಯಾಯಾಲಯ ಮಹತ್ವದ ತೀರ್ಪು ನೀಡಿತು. ಈ ಸುದ್ದಿಯನ್ನು ಕೇಳುತ್ತಿದ್ದಂತೆಯೇ ಸಮಸ್ತ ಹಿಂದೂಗಳು ಆನಂದಭಾಷ್ಪ ಸುರಿಸಿದರು. ಆದೇಶ ಹೊರಬಿದ್ದ ಬೆನ್ನಲ್ಲೇ ಜ್ಞಾನವಾಪಿಯಲ್ಲಿ ಹಿಂದೂ ಅರ್ಚಕರು ವಿಗ್ರಹಗಳಿಗೆ ಪೂಜೆ ಸಲ್ಲಿಸಿದರು. ‘ಹರಹರ ಮಹದೇವ’ ಘೋಷಣೆಗಳು ಮೊಳಗಿದವು. ಇದನ್ನೂ ಓದಿ: ಭಾರೀ ಸಂಖ್ಯೆಯಲ್ಲಿ ಜ್ಞಾನವಾಪಿ ಮಸೀದಿಗೆ ಆಗಮಿಸಿ ನಮಾಜ್‌ ಮಾಡಿದ ಮುಸ್ಲಿಮರು

    ರಾಮಮಂದಿರದಂತೆ ಜ್ಞಾನವಾಪಿ ವಿಚಾರದಲ್ಲೂ ನ್ಯಾಯ ಸಿಕ್ಕಿರುವುದು ಹಿಂದೂಗಳ ಖುಷಿಗೆ ಪಾರವೇ ಇಲ್ಲ ಎನ್ನುವಂತಾಗಿದೆ. ಅಷ್ಟಕ್ಕೂ ಏನಿದು ಜ್ಞಾನವಾಪಿ ಮಸೀದಿ ಪ್ರಕರಣ? ಇತಿಹಾಸವೇನು? ವಿವಾದಕ್ಕೆ ಹಿನ್ನೆಲೆ, ಕಾರಣವೇನು?

    ಜ್ಞಾನವಾಪಿ ಮಸೀದಿ ಎಲ್ಲಿದೆ?
    ಜ್ಞಾನವಾಪಿ ಮಸೀದಿಯು ಭಾರತದ ಉತ್ತರ ಪ್ರದೇಶದ ವಾರಣಾಸಿಯಲ್ಲಿದೆ. ಈ ಸ್ಥಳದಲ್ಲಿ ಹಿಂದೂ ದೇವರು ಶಿವನಿಗೆ ಮೀಸಲಾದ ವಿಶ್ವೇಶ್ವರ ದೇವಾಲಯವಿತ್ತು. ಇದನ್ನು 1669 ರಲ್ಲಿ ಮೊಘಲ್ ದೊರೆ ಔರಂಗಜೇಬನು ಕೆಡವಿಸಿದ. ದೇವಾಲಯ ಕೆಡವಿದ ಒಂದು ದಶಕದ ನಂತರ, ಅಂದರೆ 1978 ರಲ್ಲಿ ಮಸೀದಿ ನಿರ್ಮಿಸಲಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ಜ್ಞಾನವಾಪಿಯಲ್ಲಿ ಪೂಜೆಗೆ ತಡೆ ನೀಡಲ್ಲ- ಮುಸ್ಲಿಂ ಸಮಿತಿ ಮನವಿ ತಿರಸ್ಕರಿಸಿದ ಹೈಕೋರ್ಟ್‌

    ಮಸೀದಿ ಜಾಗದಲ್ಲಿದ್ದ ದೇವಾಲಯ ಯಾವುದು?
    ಈ ಸ್ಥಳದಲ್ಲಿ ಹಿಂದೂ ದೇವರಾದ ಶಿವನಿಗೆ ಮೀಸಲಾದ ವಿಶ್ವೇಶ್ವರ (ಕಾಶಿ ವಿಶ್ವನಾಥ ದೇವಾಲಯ) ದೇವಾಲಯವಿತ್ತು. ಇದನ್ನು 16ನೇ ಶತಮಾನದ ಉತ್ತರಾರ್ಧದಲ್ಲಿ ಮಹಾರಾಷ್ಟ್ರದ ಬನಾರಸ್‌ನ ಪ್ರಖ್ಯಾತ ಬ್ರಾಹ್ಮಣ ವಿದ್ವಾಂಸ ನಾರಾಯಣ ಭಟ್ಟರ ಜೊತೆ ಅಕ್ಬರನ ಪ್ರಧಾನ ಆಸ್ಥಾನಿಕ ಮತ್ತು ಮಂತ್ರಿ ತೋಡರ್ ಮಲ್ಲ ನಿರ್ಮಿಸಿದರು. ದೇವಾಲಯವು ಬನಾರಸ್ ಅನ್ನು ಬ್ರಾಹ್ಮಣರ ಸಭೆಯ ಕೇಂದ್ರವಾಗಿ ಸ್ಥಾಪಿಸಲು ಕೊಡುಗೆ ನೀಡಿತ್ತು. ಉಪಖಂಡದಾದ್ಯಂತ ವಿದ್ವಾಂಸರನ್ನು ಸೆಳೆದಿತ್ತು.

    ಮಂದಿರದ ಮೇಲೆ ಮಸೀದಿ?
    1669 ಹಿಂದೂ ದೇವಾಲಯವನ್ನು ಮೊಘಲ್ ದೊರೆ ಔರಂಗಜೇಬ್ ಕೆಡವಲು ಆದೇಶಿಸಿದನು. ಜ್ಞಾನವಾಪಿ ಮಂದಿರದ ಒಂದು ಭಾಗ ಕೆಡವಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಹೇಳಲಾಗಿದೆ. ದೇವಾಲಯದ ಸ್ತಂಭವನ್ನು ಮಸೀದಿಯ ಅಂಗಳವಾಗಿ ಉಳಿಯಲು ಹಾಗೆಯೇ ಬಿಡಲಾಯಿತು. ದಕ್ಷಿಣ ಗೋಡೆ, ಅದರ ಕಮಾನುಗಳು, ಬಾಹ್ಯ ಅಚ್ಚುಗಳು ಕಿಬ್ಲಾ ಗೋಡೆಯಾಗಿ ಮಾರ್ಪಟ್ಟಿತು. ಆವರಣದಲ್ಲಿರುವ ಇತರ ಕಟ್ಟಡಗಳನ್ನು ಹಾಗೆಯೇ ಉಳಿಸಲಾಗಿತ್ತು. ನಂತರ ಇದು ವಿವಾದಿತ ಸ್ಥಳವಾಗಿ ಗುರುತಿಸಿಕೊಂಡಿತು ಎನ್ನಲಾಗಿದೆ. ಇದನ್ನೂ ಓದಿ: ಶುಕ್ರವಾರ ಅಂಗಡಿಗಳನ್ನು ಬಂದ್‌ ಮಾಡಿ- ಮುಸ್ಲಿಮರಲ್ಲಿ ಜ್ಞಾನವಾಪಿ ಮಸೀದಿ ಸಮಿತಿ ಮನವಿ

    ಮೊದಲ ಗಲಭೆ ಆಗಿದ್ಯಾವಾಗ?
    ಬ್ರಿಟಿಷರ ಆಡಳಿತದ ಅವಧಿಯಲ್ಲಿ (1809) ಹಿಂದೂ-ಮುಸ್ಲಿಮರ ನಡುವೆ ಮೊದಲ ಗಲಭೆ ನಡೆಯಿತು. ಜ್ಞಾನವಾಪಿ ಮಸೀದಿ ಮತ್ತು ಕಾಶಿ ವಿಶ್ವನಾಥ ದೇವಾಲಯದ ನಡುವಿನ ತಟಸ್ಥ ಜಾಗದಲ್ಲಿ ಮಂದಿರ ನಿರ್ಮಿಸಲು ಹಿಂದೂಗಳು ಮುಂದಾದರು. ಇದು ಇದು ಉದ್ವಿಗ್ನತೆಗೆ ಕಾರಣವಾಯಿತು. ಆ ಸಂದರ್ಭದಲ್ಲಿ ಹೋಳಿ ಹಬ್ಬ ಮತ್ತು ಮೊಹರಂ ಹಬ್ಬವೂ ಒಂದೇ ದಿನ ಬಿದ್ದಿತ್ತು. ಸಂಭ್ರಮದ ವೇಳೆ ಎರಡೂ ಕೋಮಿನವರು ಮುಖಾಮುಖಿಯಾಗಿ ಗಲಭೆ ಉಂಟಾಯಿತು. ನಂತರ ಅದನ್ನು ಬ್ರಿಟಿಷ್ ಆಡಳಿತವು ಶಮನಗೊಳಿಸಿತು. ಈ ಗಲಭೆಯಿಂದ ಹಲವಾರು ಸಾವು-ನೋವುಗಳಾಗಿವೆ ಎಂದು ವರದಿಯಾಗಿದೆ. ಮಂದಿರಕ್ಕಾಗಿ ಹಿಂದೂಗಳ ಹೋರಾಟ ಮುಂದುವರಿಯಿತು.

    ಜೇಮ್ಸ್ ಪ್ರಿನ್ಸೆಪ್ ಚಿತ್ರಕಲೆ ಏನು ಹೇಳುತ್ತೆ?
    ಜ್ಞಾನವಾಪಿ ಮಸೀದಿಯನ್ನು ಬನಾರಸ್‌ನ ವಿಶ್ವೇಶ್ವರ ದೇವಸ್ಥಾನ ಎಂದು ಜೇಮ್ಸ್ ಪ್ರಿನ್ಸೆಪ್ ಎನ್ನುವವರು ಚಿತ್ರಿಸಿದ್ದಾರೆ. ಅಲ್ಲಿ ಕೆಡವಲಾದ ದೇವಾಲಯದ ಮೂಲ ಗೋಡೆ ಇಂದಿಗೂ ಮಸೀದಿಯಲ್ಲಿದೆ. ಪ್ರಿನ್ಸೆಪ್ ಅವರ 1834 ರ ಮಸೀದಿಯ ರೇಖಾಚಿತ್ರದಲ್ಲಿ ದೇವಾಲಯದ ಅರೆ ಕೆಡವಲಾದ ಗೋಡೆ, ಕಂಬಗಳು ಮತ್ತು ಅವಶೇಷಗಳು ಗೋಚರಿಸುತ್ತವೆ.

    290 ಹೋರಾಟಗಾರರಿಗೆ ಜೈಲು ಶಿಕ್ಷೆ
    1959 ರಲ್ಲಿ ಶಿವರಾತ್ರಿ ಸಂದರ್ಭದಲ್ಲಿ ಹಿಂದೂ ಮಹಾಸಭಾವು ಮಸೀದಿ ಮಂಟಪದಲ್ಲಿ ರುದ್ರಾಭಿಷೇಕ ಸಮಾರಂಭ ನಡೆಸಿತು. ಕಾನೂನು ಮತ್ತು ಸುವ್ಯವಸ್ಥೆ ಉಲ್ಲಂಘನೆ ಆರೋಪ ಹೊರಿಸಿ ಇಬ್ಬರು ಕಾರ್ಮಿಕರಿಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಲಾಯಿತು. ಇದು ಮುಂದಿನ ಕೆಲವು ತಿಂಗಳು ಮಸೀದಿ ಮಂಟಪದಲ್ಲಿ ಆಂದೋಲನ ಸೃಷ್ಟಿಗೆ ಕಾರಣವಾಯಿತು. ದೇವಾಲಯ ಮರುಸ್ಥಾಪನೆಗೆ ಒತ್ತಾಯ ಕೇಳಿಬಂತು. ಹೋರಾಟದಲ್ಲಿ ಭಾಗಿಯಾಗಿದ್ದ 290 ಹಿಂದೂಗಳು ಜೈಲುವಾಸ ಅನುಭವಿಸಿದರು. ಈ ಬೆಳವಣಿಗೆ ರಾಷ್ಟ್ರವ್ಯಾಪಿ ಅಭಿಯಾನಕ್ಕೆ ನಾಂದಿ ಹಾಡಿತು. ಇದನ್ನೂ ಓದಿ: ಪೂಜೆಗೆ ಅವಕಾಶ ನೀಡಬೇಡಿ : ಸುಪ್ರೀಂ ಮೊರೆ ಹೋಗಿದ್ದ ಜ್ಞಾನವಾಪಿ ಮಸೀದಿ ಸಮಿತಿ – ತಡ ರಾತ್ರಿ ನಡೆದಿದ್ದು ಏನು?

    ಮಸೀದಿ ವಿವಾದ ಕೋರ್ಟ್ ಮೆಟ್ಟಿಲೇರಿದ್ದು ಯಾವಾಗ?
    ಜ್ಞಾನವಾಪಿ ಮಸೀದಿ ವಿವಾದ 1991 ರಲ್ಲಿ ವಾರಣಾಸಿ ಕೋರ್ಟ್ ಮೆಟ್ಟಿಲೇರಿತು. ಸ್ಥಳೀಯ ಅರ್ಚಕರಾಗಿದ್ದ ಅರ್ಜಿದಾರರ ಗುಂಪು ನ್ಯಾಯಾಲಯಕ್ಕೆ ಈ ಪ್ರಕರಣದ ಮೊದಲ ಅರ್ಜಿ ಸಲ್ಲಿಸಿತು. ಅರ್ಜಿಯನ್ನು ಸ್ವಯಂಭು ಜೋತಿರ್ಲಿಂಗ ಭಗವಾನ್ ವಿಶ್ವೇಶ್ವರ ಎಂಬವರು, ಕೋರ್ಟ್ ಮುಂದೆ 3 ಬೇಡಿಕೆಗಳನ್ನು ಇಟ್ಟರು. ಜ್ಞಾನವಾಪಿ ಸಂಕೀರ್ಣವನ್ನು ಕಾಶಿ ದೇವಾಲಯದ ಭಾಗವಾಗಿ ಘೋಷಿಸುವುದು, ಈ ಪ್ರದೇಶದಿಂದ ಮುಸ್ಲಿಮರನ್ನು ದೂರ ಇಡುವುದು, ವಿವಾದಿತ ಕಟ್ಟಡವನ್ನು ಧ್ವಂಸಗೊಳಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದರು.

    ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ ಮಾಡಿದ್ದೇನು?
    ಮಸೀದಿ ಸಮಿತಿಯು 1998 ರಲ್ಲಿ ಅಲಹಾಬಾದ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತು. ಮಂದಿರ-ಮಸೀದಿ ಭೂ ವಿವಾದವನ್ನು ಸಿವಿಲ್ ನ್ಯಾಯಾಲಯವು ನ್ಯಾಯಾಧಿಕರಣ ಮಾಡಲಾಗುವುದಿಲ್ಲ ಎಂದು ಸಮಿತಿ ಪ್ರತಿಪಾದಿಸಿತು. 22 ವರ್ಷಗಳ ಕಾಲ ಕೆಳ ನ್ಯಾಯಾಲಯದಲ್ಲಿ ವಿಚಾರಣೆಗೆ ಅಲಹಾಬಾದ್ ಹೈಕೋರ್ಟ್ ತಡೆ ನೀಡಿತು.

    ಮುಂದೆ ಏನಾಯ್ತು?
    ವಿವಾದಿತ ಪ್ರದೇಶದ ಪುರಾತತ್ವ ಸಮೀಕ್ಷೆಗೆ ಒತ್ತಾಯಿಸಿ 2019 ರಲ್ಲಿ ರಸ್ತೋಗಿ ಎಂಬ ವ್ಯಕ್ತಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದರು. ಇದಕ್ಕೆ ಮಸೀದಿ ಸಮಿತಿ ವಿರೋಧ ವ್ಯಕ್ತಪಡಿಸಿ ಕೋರ್ಟ್ ಮೆಟ್ಟಿಲೇರಿತು. ಕೋರ್ಟ್ನಲ್ಲಿ ಎರಡೂ ಕಡೆಯಿಂದ ಸಾಕಷ್ಟು ಪೈಪೋಟಿ ನಡೆಯಿತು. ಕೊನೆಗೆ 2022 ರ ಏಪ್ರಿಲ್‌ನಲ್ಲಿ 2021 ರ ಅರ್ಜಿ ಆಧರಿಸಿ, ಜ್ಞಾನವಾಪಿ ಸಂಕೀರ್ಣದ ವೀಡಿಯೋಗ್ರಫಿ ಸಮೀಕ್ಷೆಗೆ ವಾರಣಾಸಿ ನ್ಯಾಯಾಲಯ ಆದೇಶ ಹೊರಡಿಸಿತು. ಇದನ್ನೂ ಓದಿ: ಜ್ಞಾನವಾಪಿಯಲ್ಲಿ ಹಿಂದೂಗಳಿಗೆ ಪೂಜೆಗೆ ಅವಕಾಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಮಸೀದಿ ಸಮಿತಿ

    ಎಎಸ್‌ಐ ಸಮೀಕ್ಷೆ ವರದಿಯಲ್ಲೇನಿದೆ?
    ನ್ಯಾಯಾಲಯದ ಆದೇಶದಂತೆ ಜ್ಞಾನವಾಪಿ ಮಸೀದಿ ಸಂಕೀರ್ಣ ಇರುವ ಜಾಗದ ವೈಜ್ಞಾನಿಕ ಸಮೀಕ್ಷೆ ನಡೆಸಿದ ಎಎಸ್‌ಐ, ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಕಳೆದ ವರ್ಷ ಡಿ.18 ರಂದು ಸಲ್ಲಿಸಿತು. ಸುಮಾರು 839 ಪುಟಗಳ ವರದಿಯಲ್ಲಿ ಸಮೀಕ್ಷೆಯ ಅಂಶಗಳು ದಾಖಲಾಗಿವೆ. ವರದಿ ಕೂಡ ಬಹಿರಂಗಗೊಂಡಿದೆ. ಹಿಂದೂ ದೇವಾಲಯದ ಮೇಲೆ ಜ್ಞಾನವಾಪಿ ಮಸೀದಿ ಇರುವುದು ವರದಿಯಲ್ಲಿ ಉಲ್ಲೇಖವಾಗಿದೆ. ಅಲ್ಲಿ ಕನ್ನಡ, ತೆಲುಗು, ದೇವನಾಗರಿ ಲಿಪಿಯ ಶಾಸನಗಳು ಪತ್ತೆಯಾಗಿವೆ. ಜೊತೆಗೆ ಹಿಂದೂ ಧಾರ್ಮಿಕ ಕುರುಹುಗಳು, ಹಿಂದೂ ಮೂರ್ತಿಗಳು ಪತ್ತೆಯಾಗಿವೆ.

    ಕನ್ನಡ ಶಾಸನ ಪತ್ತೆ?
    ಜ್ಞಾನವಾಪಿ ಮಸೀದಿ ಇರುವ ಜಾಗದಲ್ಲಿ ಪ್ರಾಚೀನ ಕಾಲದ ಶಾಸನಗಳು ಪತ್ತೆಯಾಗಿವೆ. ಅದರಲ್ಲಿ ಕನ್ನಡದ ಶಾಸನವೂ ಇದೆ. ಶಾಸನದಲ್ಲಿ ‘ದೊಡ್ಡರಸಯ್ಯನ ನರಸಂಣನಭಿಂನಹ’ (ದೊಡ್ಡರಸಯ್ಯನ ನರಸಿಂಹನ ಭಿನ್ನಹ) ಎಂದು ಕನ್ನಡದಲ್ಲಿ ಬರಹವಿರುವ ಸಾಕ್ಷಿ ಎಎಸ್‌ಐ ವರದಿಯಲ್ಲಿದೆ. ಇದು ವಿಜಯನಗರದ ಪಾಳಯಗಾರರ ಅಥವಾ ಅಧಿಕಾರಿಗಳ ಕಾಲದಲ್ಲಿ ನೀಡಿರುವ ಸೇವಾರ್ಥ ಇರಬಹುದು. ಸುಮಾರು 16ನೇ ಶತಮಾನದ್ದು. ಸಾಮಾನ್ಯವಾಗಿ ದೇವರಿಗೆ ಸೇವಾರ್ಥವನ್ನು ನೀಡುವ ಸಮಯದಲ್ಲಿ ಈ ರೀತಿ ಕಲ್ಲಿನಲ್ಲಿ ಸೇವಾರ್ಥಿಯ ಹೆಸರನ್ನು ಹಾಕಿರುತ್ತಾರೆ ಎಂದು ಇತಿಹಾಸ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ 31 ವರ್ಷದ ಬಳಿಕ ವಿಗ್ರಹಗಳಿಗೆ ಪೂಜೆ

  • ಮತ್ತೆ ಮುನ್ನೆಲೆಗೆ ಬಂತು ಮಳಲಿ ಮಸೀದಿ – ಆಸ್ತಿ ತನ್ನದೆಂದು ಸಾಬೀತುಪಡಿಸಲು ವಕ್ಫ್‌ ಬೋರ್ಡ್‌ ತಯಾರಿ

    ಮತ್ತೆ ಮುನ್ನೆಲೆಗೆ ಬಂತು ಮಳಲಿ ಮಸೀದಿ – ಆಸ್ತಿ ತನ್ನದೆಂದು ಸಾಬೀತುಪಡಿಸಲು ವಕ್ಫ್‌ ಬೋರ್ಡ್‌ ತಯಾರಿ

    – ಜಿಲ್ಲಾ ನ್ಯಾಯಾಲಯಕ್ಕೆ ವಿಚಾರಣೆಗೆ ಹೈಕೋರ್ಟ್ ಆದೇಶ

    ಮಂಗಳೂರು: ಜ್ಞಾನವಾಪಿ ಮಸೀದಿ (Gyanvapi Mosque) ವಿವಾದದ ಮಧ್ಯೆ ಇದೀಗ ಮಂಗಳೂರಿನ ಮಳಲಿ ಮಸೀದಿಯ (Malali Mosque) ವಿವಾದವು ಮುನ್ನಲೆಗೆ ಬಂದಿದೆ. ಈ ಮಸೀದಿಯ ವಿಚಾರಣೆಯನ್ನು ಜಿಲ್ಲಾ ನ್ಯಾಯಾಲಯವೇ ಮಾಡಲಿ ಎಂದು ಹೈಕೋರ್ಟ್ ಆದೇಶ ನೀಡಿದೆ. ಹೀಗಾಗಿ ಇಡೀ ಪ್ರಕರಣದ ಹೊಣೆಯನ್ನು ಇದೀಗ ವಕ್ಫ್‌ ಬೋರ್ಡ್‌ ಕೈಗೆತ್ತಿಕೊಂಡಿದ್ದು, ಮಸೀದಿ ವಕ್ಫ್‌ ಬೋರ್ಡ್‌ (Waqf Board) ಆಸ್ತಿಯೆಂದು ಸಾಬೀತುಪಡಿಸಲು ಮುಂದಾಗಿದೆ.

    ಕಳೆದ ವರ್ಷ ಮಂಗಳೂರಿನ ಹೊರವಲಯದ ಮಳಲಿ ಜುಮ್ಮಾ ಮಸೀದಿಯ ಅಭಿವೃದ್ಧಿ ಕಾಮಗಾರಿ ಮಾಡುತ್ತಿದ್ದ ವೇಳೆ ಮಸೀದಿಯ ಮೇಲ್ಛಾವಣಿ ಹಿಂದೂ ದೇವಸ್ಥಾನದ (Hindu Temple) ಶೈಲಿಯಲ್ಲಿ ಇದೆ. ಅಲ್ಲಿ ಪಾಣಿಪೀಠ ಸೇರಿದಂತೆ ದೇವಸ್ಥಾನ ಹಲವು ಕುರುಹುಗಳಿದೆ ಎಂದು ವಿಶ್ವ ಹಿಂದೂ ಪರಿಷತ್ (VHP) ಮಸೀದಿಯ ಕಾಮಗಾರಿಯನ್ನು ನಿಲ್ಲಿಸಲು ಆಕ್ಷೇಪ ಎತ್ತಿತ್ತು. ಬಳಿಕ ತಾಂಬೂಲ ಪ್ರಶ್ನೆ ಇಡಲಾಗಿತ್ತು. ಅದರಲ್ಲೂ ಮಸೀದಿಯೊಳಗೆ ಶಿವ ಸಾನಿಧ್ಯ ಇದೆ ಎಂದು ಗೊತ್ತಾಗಿತ್ತು. ಹೀಗಾಗಿ ವಿಎಚ್‌ಪಿ ಮಸೀದಿ ಕಾಮಗಾರಿಯನ್ನು ನಿಲ್ಲಿಸಬೇಕು ಜೊತೆಗೆ ಮಸೀದಿಯ ಸರ್ವೇ ಕಾರ್ಯ ನಡೆಸಬೇಕೆಂದು ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ದಾವೆ ಹೂಡಿತ್ತು.  ಇದನ್ನೂ ಓದಿ: ಪ್ರತಿಷ್ಠಿತ ಆಸ್ಪತ್ರೆಗಳ ಒಕ್ಕೂಟದ ಸಾರಥಿಯಾಗ್ತಾರಾ ಡಾ.ಸಿ.ಎನ್ ಮಂಜುನಾಥ್?

    ಇದನ್ನ ಪ್ರಶ್ನಿಸಿ ಮಳಲಿ ಮಸೀದಿ ಕಮಿಟಿ ಈ ಮಸೀದಿ ವಕ್ಫ್ ಬೋರ್ಡ್‌ಗೆ ಸೇರಿದ ಆಸ್ತಿ ಹೈಕೋರ್ಟ್ (High Court) ಮೊರೆ ಹೋಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮತ್ತೆ ಜಿಲ್ಲಾ ನ್ಯಾಯಾಲಯವೇ ವಿಚಾರಣೆ ನಡೆಸಬೇಕೆಂದು ಜ.31ರಂದು ಆದೇಶಿಸಿದೆ.

    ಮಳಲಿ ಮಸೀದಿ ವಕ್ಫ್ ಬೋರ್ಡ್‌ ಅಧೀನದಲ್ಲಿರುವುದರಿಂದ ವಕ್ಫ್ ಟ್ರಿಬ್ಯುನಲ್‌ಗೆ ಪ್ರಕರಣ ಹಸ್ತಾಂತರ ಆಗಬೇಕೆಂದು ಮಳಲಿ ಮಸೀದಿ ಆಡಳಿತ ಕಮಿಟಿ ಹೈಕೋರ್ಟ್ ಗಮನಕ್ಕೆ ತಂದಿದೆ. ಹೀಗಾಗಿ ಈ ಮಸೀದಿ ವಕ್ಫ್ ಬೋರ್ಡ್‌ ಆಸ್ತಿ ಹೌದೋ ಅಲ್ಲವೇ ಎಂಬುದನ್ನು ಕೆಳ ನ್ಯಾಯಾಲಯವೇ ವಿಚಾರಣೆ ನಡೆಸಬೇಕೆಂದು ಹೈಕೋರ್ಟ್ ಆದೇಶಿಸಿದೆ. ಹೀಗಾಗಿ ಮತ್ತೆ ಜಿಲ್ಲಾ ನ್ಯಾಯಾಲಯದಲ್ಲೇ ಮಸೀದಿ ಆಸ್ತಿಯ ಬಗ್ಗೆ ವಿಚಾರಣೆ ನಡೆಯಲಿದೆ.

    ಈ ಮಸೀದಿ ವಕ್ಫ್‌ ಆಸ್ತಿ ಎನ್ನುವುದಕ್ಕೆ ಸುಮಾರು 700 ವರ್ಷಗಳ ದಾಖಲೆಗಳು ಇದೆ. ಅದನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲು ಮಸೀದಿ ಸಮಿತಿಯವರು ತಯಾರು ನಡೆಸಿದ್ದಾರೆ.

     

  • ಭಾರೀ ಸಂಖ್ಯೆಯಲ್ಲಿ ಜ್ಞಾನವಾಪಿ ಮಸೀದಿಗೆ ಆಗಮಿಸಿ ನಮಾಜ್‌ ಮಾಡಿದ ಮುಸ್ಲಿಮರು

    ಭಾರೀ ಸಂಖ್ಯೆಯಲ್ಲಿ ಜ್ಞಾನವಾಪಿ ಮಸೀದಿಗೆ ಆಗಮಿಸಿ ನಮಾಜ್‌ ಮಾಡಿದ ಮುಸ್ಲಿಮರು

    ಲಕ್ನೋ: ಶುಕ್ರವಾರ ವಾರಣಾಸಿಯ ಜ್ಞಾನವಾಪಿ ಮಸೀದಿಗೆ (Gyanvapi Mosque) ಭಾರೀ ಸಂಖ್ಯೆಯಲ್ಲಿ ಮುಸ್ಲಿಮರು (Muslims) ಆಗಮಿಸಿ ನಮಾಜ್‌ (Namaz) ಮಾಡಿದ್ದಾರೆ.

    ಮಸೀದಿಯ ನೆಲ ಮಹಡಿಯಲ್ಲಿರುವ ಮೂರ್ತಿಗಳಿಗೆ ಪೂಜೆ ಮಾಡಲು ಜಿಲ್ಲಾ ನ್ಯಾಯಾಲಯ ಅನುಮತಿ ನೀಡಿದ ಬೆನ್ನಲ್ಲೇ ಇಂದು ಮುಸ್ಲಿಮ್‌ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಬಂದ್ ಆಚರಿಸಲಾಗಿದ್ದರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ ಜನರು ಪ್ರಾರ್ಥನೆ ಸಲ್ಲಿಸಿದ್ದಾರೆ.

    ಬಿಗಿ ಭದ್ರತೆಯ ನಡುವೆ ಶುಕ್ರವಾರ ನಮಾಜ್ ಶಾಂತಿಯುತವಾಗಿ ನಡೆಯಿತು. ಭಾರೀ ಸಂಖ್ಯೆಯಲ್ಲಿ ಜನರು ಆಗಮಿಸಿದ ಹಿನ್ನೆಲೆಯಲ್ಲಿ ಇತರ ಮಸೀದಿಗೆ ತೆರಳಿ ಪ್ರಾರ್ಥನೆ ಮಾಡುವಂತೆ ಸೂಚಿಸಲಾಯಿತು.

    ಶುಕ್ರವಾರ ನಮಾಜ್‌ಗೆ ಸಾಮಾನ್ಯವಾಗಿ ಸೇರುವ ಜನರ ಸಂಖ್ಯೆಗಿಂತ ದುಪ್ಪಟ್ಟು ಜನ ಇಂದು ಆಗಮಿಸಿದ್ದರು ಎಂದು ಕೆಲವು ಪ್ರತ್ಯಕ್ಷದರ್ಶಿಗಳು ಮಾಧ್ಯಮಕ್ಕೆ ತಿಳಿಸಿದ್ದಾರೆ.

    ಜ್ಞಾನವಾಪಿ ಮಸೀದಿಯ ವ್ಯವಹಾರ ನೋಡಿಕೊಳ್ಳುವ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ ಶುಕ್ರವಾರ ಪಟ್ಟಣದಲ್ಲಿ ಬಂದ್‌ಗೆ ಕರೆ ನೀಡಿತ್ತು. ನಗರದ ಮುಸ್ಲಿಂ ಪ್ರಾಬಲ್ಯವಿರುವ ಪ್ರದೇಶಗಳಲ್ಲಿನ ಅಂಗಡಿಗಳು ದಿನವಿಡೀ ಮುಚ್ಚಲ್ಪಟ್ಟಿದ್ದವು.  ಇದನ್ನೂ ಓದಿ: ಜ್ಞಾನವಾಪಿಯಲ್ಲಿ ಪೂಜೆಗೆ ತಡೆ ನೀಡಲ್ಲ- ಮುಸ್ಲಿಂ ಸಮಿತಿ ಮನವಿ ತಿರಸ್ಕರಿಸಿದ ಹೈಕೋರ್ಟ್‌

    ಕೋರ್ಟ್‌ ಆದೇಶದ ನಂತರ ಮಸೀದಿ ಸುತ್ತ ಮುತ್ತ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಇಡೀ ಪಟ್ಟಣದಲ್ಲಿ ಪರಿಸ್ಥಿತಿಯನ್ನು ನಿಯಮಿತವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳ ಮೇಲೆ ತೀವ್ರ ನಿಗಾ ಇಡಲಾಗಿದೆ. ಜ್ಞಾನವಾಪಿ ಮಸೀದಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿಗಾ ಇರಿಸಲು ಡ್ರೋನ್‌ಗಳ ಸಹಾಯವನ್ನು ತೆಗೆದುಕೊಳ್ಳಲಾಗುತ್ತಿದೆ.

    ಅಹಿತಕರ ಘಟನೆ ನಡೆಯದಂತೆ ನೆರೆಯ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸ್ ಪಡೆಯನ್ನು ಸಜ್ಜುಗೊಳಿಸಲಾಗಿದೆ. ಕಾಶಿ ವಿಶ್ವನಾಥ ಧಾಮ ಮತ್ತು ಸಮೀಪದ ಪ್ರದೇಶಗಳಲ್ಲಿ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಕ್ಷಿಪ್ರ ಪೊಲೀಸ್ ಪಡೆ (ಆರ್‌ಪಿಎಫ್) ನಿಯೋಜಿಸಲಾಗಿದೆ.

     

  • ಜ್ಞಾನವಾಪಿಯಲ್ಲಿ ಪೂಜೆಗೆ ತಡೆ ನೀಡಲ್ಲ- ಮುಸ್ಲಿಂ ಸಮಿತಿ ಮನವಿ ತಿರಸ್ಕರಿಸಿದ ಹೈಕೋರ್ಟ್‌

    ಜ್ಞಾನವಾಪಿಯಲ್ಲಿ ಪೂಜೆಗೆ ತಡೆ ನೀಡಲ್ಲ- ಮುಸ್ಲಿಂ ಸಮಿತಿ ಮನವಿ ತಿರಸ್ಕರಿಸಿದ ಹೈಕೋರ್ಟ್‌

    ಲಕ್ನೋ: ಜ್ಞಾನವಾಪಿ ಮಸೀದಿಯ (Gyanvapi mosque) ನೆಲಮಾಳಿಗೆಯಲ್ಲಿ ಪೂಜೆ ಸಲ್ಲಿಸಲು ಹಿಂದೂಗಳಿಗೆ ಅವಕಾಶ ನೀಡಿರುವ ವಾರಣಾಸಿ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಲು ಅಲಹಾಬಾದ್‌ ಹೈಕೋರ್ಟ್‌ ನಿರಾಕರಿಸಿದೆ. ಇದರಿಂದ ಜ್ಞಾನವಾಪಿ ಮಸೀದಿ ಸಮಿತಿಗೆ ಹಿನ್ನಡೆಯಾಗಿದೆ.

    ವಾರಣಾಸಿ (Varanasi) ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ತಡೆ ಕೋರಿ ಜ್ಞಾನವಾಪಿ ಮಸೀದಿ ಸಮಿತಿ ಅಲಹಾಬಾದ್‌ ಹೈಕೋರ್ಟ್‌ ಗೆ ಮನವಿ ಸಲ್ಲಿಸಿತ್ತು. ಜಿಲ್ಲಾ ಕೋರ್ಟ್‌ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್‌ ನಿರಾಕರಿಸಿದೆ. ಫೆ.6 ರೊಳಗೆ ತನ್ನ ಮನವಿಗೆ ತಿದ್ದುಪಡಿಗಳನ್ನು ಮಾಡಲು ಮಸೀದಿ ಸಮಿತಿಗೆ  ಹೈಕೋರ್ಟ್‌ ಸೂಚನೆ ನೀಡಿದೆ.

    ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿದ ಅಂಜುಮನ್ ಇಂತೆಝಾಮಿಯಾ ಮಸಾಜಿದ್ ಸಮಿತಿ (ಎಐಎಂಸಿ)ಗೆ ಅಲಹಾಬಾದ್ ಹೈಕೋರ್ಟ್ ಫೆಬ್ರುವರಿ 6 ರವರೆಗೆ ಕಾಲಾವಕಾಶ ನೀಡಿತು. ಇದನ್ನೂ ಓದಿ: ಪೂಜೆಗೆ ಅವಕಾಶ ನೀಡಬೇಡಿ : ಸುಪ್ರೀಂ ಮೊರೆ ಹೋಗಿದ್ದ ಜ್ಞಾನವಾಪಿ ಮಸೀದಿ ಸಮಿತಿ – ತಡ ರಾತ್ರಿ ನಡೆದಿದ್ದು ಏನು?

    ಮಸೀದಿಯ ವ್ಯವಹಾರಗಳನ್ನು ನೋಡಿಕೊಳ್ಳುವ ಸಮಿತಿಯು ಸಲ್ಲಿಸಿದ ಮೇಲ್ಮನವಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ರೋಹಿತ್ ರಂಜನ್ ಅಗರವಾಲ್ ಈ ಆದೇಶವನ್ನು ನೀಡಿದ್ದಾರೆ. ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶದ ವಿರುದ್ಧ ಮುಸ್ಲಿಂ ಸಮಿತಿ ಮನವಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ ಕೆಲವೇ ಗಂಟೆಗಳಲ್ಲಿ ಸಮಿತಿಯು ಹೈಕೋರ್ಟ್‌ಗೆ ಮನವಿ ಸಲ್ಲಿಸಿತು. ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿರುವ ವಿಗ್ರಹಗಳ ಮುಂದೆ ಅರ್ಚಕರು ಪ್ರಾರ್ಥನೆ ಸಲ್ಲಿಸಬಹುದು ಎಂದು ವಾರಣಾಸಿ ನ್ಯಾಯಾಲಯ ಬುಧವಾರ ತೀರ್ಪು ನೀಡಿತ್ತು.

    ನ್ಯಾಯಾಲಯದ ಆದೇಶದ ಮೇರೆಗೆ ವಾರಣಾಸಿಯಲ್ಲಿ ಬಂದ್
    ಮುಸ್ಲಿಂ ಪ್ರಾಬಲ್ಯದ ಪ್ರದೇಶಗಳ ಅಂಗಡಿಗಳು ಮತ್ತು ಕೆಲವು ಭಾಗಗಳನ್ನು ಮುಚ್ಚಲಾಗಿದೆ. ಜಿಲ್ಲಾ ನ್ಯಾಯಾಲಯದ ಆದೇಶದ ನಂತರ ಶುಕ್ರವಾರ ನಮಾಜ್‌ಗೆ ಮುಂಚಿತವಾಗಿ ಇಡೀ ವಾರಣಾಸಿ ಜಿಲ್ಲೆಯಲ್ಲಿ ಪೊಲೀಸರು ಅಲರ್ಟ್ ಘೋಷಿಸಿದ್ದಾರೆ.

    ಜ್ಞಾನವಾಪಿ ಮಸೀದಿಯ ವ್ಯವಹಾರ ನೋಡಿಕೊಳ್ಳುವ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ ಶುಕ್ರವಾರ ಪಟ್ಟಣದಲ್ಲಿ ಬಂದ್‌ಗೆ ಕರೆ ನೀಡಿತ್ತು. ಪಟ್ಟಣದ ದಾಲ್ಮಂಡಿ, ನೈ ಸಡಕ್, ನಾಡೆಸರ್ ಮತ್ತು ಅರ್ದಲ್ ಬಜಾರ್ ಪ್ರದೇಶಗಳಲ್ಲಿ ಮುಸ್ಲಿಂ ಪ್ರಾಬಲ್ಯವಿರುವ ಮಾರುಕಟ್ಟೆ ಪ್ರದೇಶಗಳಲ್ಲಿ ಬಂದ್‌ನ ಪರಿಣಾಮ ಗೋಚರಿಸಿದೆ.

  • ಶುಕ್ರವಾರ ಅಂಗಡಿಗಳನ್ನು ಬಂದ್‌ ಮಾಡಿ- ಮುಸ್ಲಿಮರಲ್ಲಿ ಜ್ಞಾನವಾಪಿ ಮಸೀದಿ ಸಮಿತಿ ಮನವಿ

    ಶುಕ್ರವಾರ ಅಂಗಡಿಗಳನ್ನು ಬಂದ್‌ ಮಾಡಿ- ಮುಸ್ಲಿಮರಲ್ಲಿ ಜ್ಞಾನವಾಪಿ ಮಸೀದಿ ಸಮಿತಿ ಮನವಿ

    ಲಕ್ನೋ: ಜ್ಞಾನವಾಪಿ ಮಸೀದಿಯ (Gyanvapi Mosque) ನೆಲ ಮಹಡಿಯಲ್ಲಿ ಪೂಜೆಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಶುಕ್ರವಾರದಂದು ತಮ್ಮ ಅಂಗಡಿಗಳನ್ನು ಮುಚ್ಚುವಂತೆ ಮಸೀದಿ ನಿರ್ವಹಣಾ ಸಮಿತಿ ಅಂಜುಮನ್ ಇಂತೇಝಾಮಿಯಾ ಮಸಾಜಿದ್ ಮುಸ್ಲಿಮರಿಗೆ ಮನವಿ ಮಾಡಿದ್ದಾರೆ.

    ಬುಧವಾರವಷ್ಟೇ ವಾರಣಾಸಿ ಜಿಲ್ಲಾ ನ್ಯಾಯಾಲಯವು ಹಿಂದೂಗಳಿಗೆ ಪೂಜೆಗೆ ಅನುಮತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಶುಕ್ರವಾರ ನಮಾಜ್‌ಗೆ ಮುಂಚಿತವಾಗಿ ವಾರಣಾಸಿಯ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಬಿಗಿ ಬಂದೋಬಸ್ತ್‌ ಒದಗಿಸಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿಯಲ್ಲಿ ಹಿಂದೂಗಳಿಗೆ ಪೂಜೆಗೆ ಅವಕಾಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಮಸೀದಿ ಸಮಿತಿ

    ಮಸೀದಿಯ ಆವರಣದಲ್ಲಿ ಹೆಚ್ಚಿನ ಸಂಖ್ಯೆಯ ಜನರು ಶುಕ್ರವಾರ ನಮಾಜ್ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಪಡೆ ಧ್ವಜ ಮೆರವಣಿಗೆ ನಡೆಸುವುದರೊಂದಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ ಪ್ರಜ್ಞಾ ಪಾಠಕ್ ತಿಳಿಸಿದ್ದಾರೆ.

    ಹೈಕೋರ್ಟ್ ಮೆಟ್ಟಿಲೇರಿದ ಸಮಿತಿ: ವಾರಣಾಸಿ ಜಿಲ್ಲಾ ನ್ಯಾಯಾಲಯದ (Varanasi Court) ಆದೇಶ ಪ್ರಶ್ನಿಸಿ ಮಸೀದಿ ನಿರ್ವಹಣಾ ಸಮಿತಿ ಅಂಜುಮನ್ ಇಂತೇಝಾಮಿಯಾ ಮಸಾಜಿದ್ ಅಲಹಾಬಾದ್ ಹೈಕೋರ್ಟ್‍ (Allahabad High Court) ಮೆಟ್ಟಿಲೇರಿದೆ. ಇದನ್ನೂ ಓದಿ: ಪೂಜೆಗೆ ಅವಕಾಶ ನೀಡಬೇಡಿ : ಸುಪ್ರೀಂ ಮೊರೆ ಹೋಗಿದ್ದ ಜ್ಞಾನವಾಪಿ ಮಸೀದಿ ಸಮಿತಿ – ತಡ ರಾತ್ರಿ ನಡೆದಿದ್ದು ಏನು?

    ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನೋಜ್ ಕುಮಾರ್ ಗುಪ್ತಾ ಅವರ ಮುಂದೆ ಹಿರಿಯ ವಕೀಲ ಎಸ್‍ಎಫ್‍ಎ ನಖ್ವಿ ಈ ವಿಷಯ ಪ್ರಸ್ತಾಪಿಸಿದ್ದಾರೆ. ಈ ವೇಳೆ ವಿಷಯವನ್ನು ತುರ್ತು ಪಟ್ಟಿಯಲ್ಲಿ ಸೇರಿಸಲು ರಿಜಿಸ್ಟ್ರಾರ್ ಬಳಿಗೆ ಹೋಗುವಂತೆ ನ್ಯಾಯಮೂರ್ತಿ ಸೂಚಿಸಿದ್ದಾರೆ. ಅದರಂತೆ ವಕೀಲ ನಖ್ವಿ ಪ್ರಕರಣವನ್ನು ತುರ್ತು ಪಟ್ಟಿ ಸೇರಿಸುವಂತೆ ರಿಜಿಸ್ಟ್ರಾರ್‍ ಗೆ ಮನವಿ ಮಾಡಿದ್ದಾರೆ. ಸದ್ಯದಲ್ಲೇ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

  • ಪೂಜೆಗೆ ಅವಕಾಶ ನೀಡಬೇಡಿ : ಸುಪ್ರೀಂ ಮೊರೆ ಹೋಗಿದ್ದ ಜ್ಞಾನವಾಪಿ ಮಸೀದಿ ಸಮಿತಿ – ತಡ ರಾತ್ರಿ ನಡೆದಿದ್ದು ಏನು?

    ಪೂಜೆಗೆ ಅವಕಾಶ ನೀಡಬೇಡಿ : ಸುಪ್ರೀಂ ಮೊರೆ ಹೋಗಿದ್ದ ಜ್ಞಾನವಾಪಿ ಮಸೀದಿ ಸಮಿತಿ – ತಡ ರಾತ್ರಿ ನಡೆದಿದ್ದು ಏನು?

    ನವದೆಹಲಿ: ಜ್ಞಾನವಾಪಿ ಮಸೀದಿಯ (Gyanvapi Mosque) ನೆಲ ಮಹಡಿಯಲ್ಲಿ ಪೂಜೆಗೆ ಕೋರ್ಟ್‌ ಅನುಮತಿ ನೀಡಿದ ಬೆನ್ನಲ್ಲೇ ಬುಧವಾರ ತಡರಾತ್ರಿ ಮಸೀದಿ ಪರ ವಕೀಲರು ಸುಪ್ರೀಂ ಕೋರ್ಟ್‌ (Supreme Court) ಕದ ತಟ್ಟಿದ್ದ ಪ್ರಸಂಗ ನಡೆದಿದೆ.

    ಹೌದು. ಪುರಾತತ್ವ ಇಲಾಖೆ ನಡೆಸಿದ ಸಮೀಕ್ಷೆ ವೇಳೆ ಪತ್ತೆಯಾಗಿದ್ದ ಮೂರ್ತಿಗಳಿಗೆ ಪೂಜೆ ನಡೆಸಲು ವಾರಣಾಸಿ ಜಿಲ್ಲಾ ನ್ಯಾಯಾಲಯ ಬುಧವಾರ ಆದೇಶ ನೀಡಿತ್ತು. ಈ ಆದೇಶ ಪ್ರಕಟವಾದ ಬಳಿಕ ರಾತ್ರಿಯೇ ನೆಲಮಹಡಿಯಲ್ಲಿ ಮೂರ್ತಿಗಳಿಗೆ ಪೂಜೆ ಮಾಡಲಾಗಿತ್ತು. ಪೂಜೆ ಮಾಡಿದ ಬೆನ್ನಲ್ಲೇ ಗುರುವಾರ ನಸುಕಿನ ಜಾವ 3 ಗಂಟೆಯ ವೇಳೆ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು.  ಇದನ್ನೂ ಓದಿ: ಹಿಂದೂಗಳಿಗೆ ದೊಡ್ಡ ಗೆಲುವು – ಜ್ಞಾನವಾಪಿ ಮಸೀದಿಯಲ್ಲಿ ಮೂರ್ತಿಗಳಿಗೆ ಪೂಜೆ ಮಾಡಲು ಅನುಮತಿ

    ಸುಪ್ರೀಂ ಕೋರ್ಟ್‌ ರಿಜಿಸ್ಟ್ರಾರ್ ಅವರ ಮನೆಗೆ ಆಗಮಿಸಿದ ಮಸೀದಿ ಪರ ವಕೀಲರು ತುರ್ತು ಅರ್ಜಿ ವಿಚಾರಣೆ ನಡೆಸಬೇಕೆಂದು ಕೋರಿದರು. ಜಿಲ್ಲಾ ನ್ಯಾಯಾಲಯ ಹೊರಡಿಸಿದ ಆದೇಶಕ್ಕೆ ತಡೆ ನೀಡಿ ಯಥಾಸ್ಥಿತಿ ಮುಂದುವರಿಸುವಂತೆ ಸೂಚಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದರು.

    ಈ ಮನವಿಗೆ ಕೋರ್ಟ್‌ ರಿಜಿಸ್ಟ್ರಾರ್ ಅವರು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಯವರ ಗಮನಕ್ಕೆ ತಂದು ಅವರು ನೀಡಿದ ನಿರ್ದೇಶನದಂತೆ ನಡೆದುಕೊಳ್ಳುತ್ತೇನೆ ಎಂದು ತಿಳಿಸಿದರು.

    ಬೆಳಗಿನ ಜಾವ 7 ಗಂಟೆ ವೇಳೆ ಮಸೀದಿ ಪರ ವಕೀಲರಿಗೆ ದೂರವಾಣಿ ಮಾಡಿದ ರಿಜಿಸ್ಟ್ರಾರ್ ಅವರು, ನಿಮ್ಮ ಮನವಿಯನ್ನು ಮುಖ್ಯ ನ್ಯಾಯಾಧೀಶರ ಗಮನಕ್ಕೆ ತರಲಾಗಿದೆ. ಅವರು ಅಲಹಾಬಾದ್‌ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುವಂತೆ ಸೂಚಿಸಿದ್ದಾರೆ ಎಂಬುದನ್ನು ತಿಳಿಸಿದರು.

     

    ಸಿಜೆಐ ಸೂಚನೆಯಂತೆ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ ಹೈಕೋರ್ಟ್‌ ಮೊರೆ ಹೋಗಿ ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಿದೆ.  ಇದನ್ನೂ ಓದಿ: ದೇವಾಲಯದ ಆವರಣದಲ್ಲಿ ಮಾಂಸಾಹಾರ ಸೇವನೆ – ಇದು ಪಿಕ್ನಿಕ್‌ ಸ್ಪಾಟ್‌ ಅಲ್ಲ ಎಂದು ಕೋರ್ಟ್‌ ಗರಂ

    ಜಿಲ್ಲಾ ನ್ಯಾಯಾಲಯ ನೆಲ ಮಹಡಿಯಲ್ಲಿ ಪೂಜೆ ಸಲ್ಲಿಸುವ ಸಂಬಂಧ ಅಗತ್ಯ ವ್ಯವಸ್ಥೆ ಮಾಡಲು ಸ್ಥಳೀಯ ಆಡಳಿತಕ್ಕೆ ಒಂದು ವಾರ ಕಾಲಾವಕಾಶ ನೀಡಿದೆ. ಹೀಗಿದ್ದರೂ ಬುಧವಾರ ರಾತ್ರಿ ಪೂಜೆಯನ್ನು ತರಾತುರಿಯಲ್ಲಿ ನಡೆಸಲು ಯಾವುದೇ ಕಾರಣ ಇರಲಿಲ್ಲ. ಅರ್ಜಿದಾರರ ಜೊತೆ ಆಡಳಿತವೂ ಶಾಮೀಲಾಗಿರುವ ಕಾರಣ ಈ ರೀತಿ ತರಾತುರಿಯಲ್ಲಿ ಪೂಜೆ ಸಲ್ಲಿಸಲಾಗಿದೆ. ಮಸೀದಿ ಜಾಗವನ್ನು ವಶಪಡಿಸಿಕೊಳ್ಳಲು ಮುಂದಾಗುತ್ತಿದೆ. ಈ ಕಾರಣದಿಂದ ವಾರಣಾಸಿ ಜಿಲ್ಲಾ ನ್ಯಾಯಾಲಯ ನೀಡಿದ ಆದೇಶಕ್ಕೆ ತಡೆ ನೀಡಿ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ಆದೇಶಿಸಬೇಕೆಂದು ಕೋರಿ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.