Tag: Gyanvapi mosque

  • ಮೇ 26 ರಿಂದ ಮಸೀದಿ ಪರ ಅರ್ಜಿ ವಿಚಾರಣೆ, ಯಥಾಸ್ಥಿತಿ ಕಾಯ್ದುಕೊಳ್ಳಿ: ಕೋರ್ಟ್ ಆದೇಶ

    ಮೇ 26 ರಿಂದ ಮಸೀದಿ ಪರ ಅರ್ಜಿ ವಿಚಾರಣೆ, ಯಥಾಸ್ಥಿತಿ ಕಾಯ್ದುಕೊಳ್ಳಿ: ಕೋರ್ಟ್ ಆದೇಶ

    ವಾರಣಾಸಿ: ಜ್ಞಾನವಾಪಿ ಮಸೀದಿಯಲ್ಲಿ ವೀಡಿಯೋ ಸರ್ವೆ ವೇಳೆ ಪತ್ತೆಯಾದ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ಕೋರಿ ಐದು ಮಂದಿ ಹಿಂದೂ ಮಹಿಳೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಗೆ ಅರ್ಹವೇ ಎನ್ನುವ ಬಗ್ಗೆ ಮೊದಲು ವಿಚಾರಣೆ ನಡೆಸಲಾಗುವುದು. ಅಲ್ಲಿಯವರೆಗೂ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಜಿಲ್ಲಾ ನ್ಯಾಯಧೀಶ ಅಜಯ್ ಕೃಷ್ಣ ವಿಶ್ವೇಶ ಆದೇಶಿಸಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಅಜಯ್ ಕೃಷ್ಣ ಅವರು ಇಂದು ಆದೇಶ ನೀಡಿದ್ದು, ಮೇ 26 ರಿಂದ ಮಸೀದಿ ಪರ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಲಾಗುವುದು. ಅದಕ್ಕೂ ಮುನ್ನ ಏಳು ದಿನಗಳೊಳಗೆ ವೀಡಿಯೋಗ್ರಫಿ ಸರ್ವೆಯ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಕೆ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ. ಈ ವಿಚಾರಣೆ ಬಳಿಕ ವೀಡಿಯೋಗ್ರಫಿ ಸರ್ವೆ ಆಧರಿಸಿ ವಿಚಾರಣೆ ಮುಂದುವರಿಸುವ ಬಗ್ಗೆ ಕೋರ್ಟ್ ತೀರ್ಮಾನಿಸುವುದಾಗಿ ಆದೇಶದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ವಿಶ್ವ ಪವರ್ ಲಿಫ್ಟಿಂಗ್‍ನಲ್ಲಿ ಭಾರತಕ್ಕೆ ಪದಕ ತಂದು ಕೊಟ್ಟ ಉಡುಪಿಯ ಅಕ್ಷತಾ 

    ಶಿವಲಿಂಗ ಪೂಜೆಗೆ ಅನುಮತಿ ಕೋರಿ ಐವರು ಮಹಿಳೆಯರು ಸಲ್ಲಿರುವ ಅರ್ಜಿ 1991ರ ಕಾಯಿದೆ ಮತ್ತು ಆದೇಶ 7, ನಿಯಮ 11 ಉಲ್ಲಂಘಿಸುತ್ತದೆ. ಹೀಗಾಗಿ ಇಡೀ ಪ್ರಕರಣವನ್ನು ವಜಾ ಮಾಡಬೇಕು ಎಂದು ಮಸೀದಿ ಪರ ಅರ್ಜಿದಾರರು ವಾದ ಮಂಡಿಸಿದ್ದರು.

    ಇದಕ್ಕೆ ಪ್ರತಿವಾದ ಸಲ್ಲಿಸಿದ್ದ ಐವರು ಮಹಿಳೆಯರು ಮತ್ತು ಹಿಂದೂ ಸೇನಾ ಪರ ವಕೀಲರು, ಮಸೀದಿ ದೇವಸ್ಥಾನಕ್ಕೆ ಸೇರಿದ್ದು, ಇದನ್ನು ಅತಿಕ್ರಮಣ ಮಾಡಿಕೊಂಡು ಮಸೀದಿ ನಿರ್ಮಿಸಲಾಗಿದೆ. ಈಗ ಶಿವಲಿಂಗ ಪತ್ತೆಯಾಗಿರುವುದೇ ಇದಕ್ಕೆ ಸಾಕ್ಷಿ. ಹೀಗಾಗಿ ಸರ್ವೆ ವೇಳೆ ಮಸೀದಿಯ ಆವರಣದಲ್ಲಿ ಪತ್ತೆಯಾಗಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದರು.

    ರಾಮಮಂದಿರ ವಿವಾದ ಉತ್ತುಂಗದ ವೇಳೆ, 1991ರಲ್ಲಿ ಪೂಜಾ ಸ್ಥಳಗಳ ನಿರ್ಬಂಧ ಕಾಯ್ದೆ ಜಾರಿ ಮಾಡಲಾಗಿತ್ತು. ಅದರಲ್ಲಿ ಸ್ವಾತಂತ್ರ್ಯದ ನಂತರದ ದಿನಾಂಕದಿಂದ ಯಾವುದೇ ಧಾರ್ಮಿಕ ಕಟ್ಟಡಗಳನ್ನು ಬದಲಾಯಿಸುವುದು ಅಥವಾ ಅದರ ರಚನೆಗೆ ಧಕ್ಕೆ ಮಾಡುವಂತಿಲ್ಲ. ಅದು ಇದ್ದಂತಯೇ ಮುಂದುವರಿಸಬೇಕು ಎಂದು ನಿಯಮ ರೂಪಿಸಲಾಗಿತ್ತು. ಇದನ್ನೂ ಓದಿ: ನಯನತಾರಾಗೆ ಲೋಕಲ್ ಫುಡ್ ತಿನ್ನಿಸಿದ ಭಾವಿಪತಿ ವಿಘ್ನೇಶ್ 

    ಇದೇ ಅಂಶವನ್ನು ಮುಂದಿಟ್ಟುಕೊಂಡು ಈಗ ಮಸೀದಿ ಆಡಳಿತ ಮಂಡಳಿ ಕಾನೂನು ಹೋರಾಟ ಮಾಡುತ್ತಿದೆ. 1991ರ ಕಾಯಿದೆ ಅನ್ವಯ ಇಡೀ ಪ್ರಕರಣವೇ ವಿಚಾರಣೆಗೆ ಯೋಗ್ಯವಲ್ಲ ಎಂದು ಕೋರ್ಟ್‍ನಲ್ಲಿ ವಾದ ಮಂಡಿಸಿದೆ. ಆದರೆ ರಾಮಮಂದಿರ ರೀತಿಯಲ್ಲೇ ಈ ಪ್ರಕರಣವನ್ನು ಪರಿಗಣಿಸಲು ಹಿಂದೂ ಪರ ವಕೀಲರು ಮನವಿ ಮಾಡುತ್ತಿದ್ದಾರೆ.

  • ವಾರಣಾಸಿ ಜಿಲ್ಲಾ ಕೋರ್ಟ್‍ನಲ್ಲಿ ಕಾಶಿ ಮಸೀದಿ ವಿಚಾರಣೆ – ಜ್ಞಾನವಾಪಿ ಮಸೀದಿಯಲ್ಲಿ ಮತ್ತೊಂದು ಶಿವಲಿಂಗ?

    ವಾರಣಾಸಿ ಜಿಲ್ಲಾ ಕೋರ್ಟ್‍ನಲ್ಲಿ ಕಾಶಿ ಮಸೀದಿ ವಿಚಾರಣೆ – ಜ್ಞಾನವಾಪಿ ಮಸೀದಿಯಲ್ಲಿ ಮತ್ತೊಂದು ಶಿವಲಿಂಗ?

    ಲಕ್ನೋ: ವಾರಣಾಸಿಯ ಜಿಲ್ಲಾ ಕೋರ್ಟ್‍ನಲ್ಲಿ ಇಂದು ಕಾಶಿಯ ಜ್ಞಾನವಾಪಿ ಮಸೀದಿ ವಿಚಾರಣೆ ನಡೆಯೋ ಸಾಧ್ಯತೆ ಇದೆ. ಪ್ರಕರಣವನ್ನು ಸಿವಿಲ್ ಕೋರ್ಟ್‍ನಿಂದ ಜಿಲ್ಲಾ ಕೋರ್ಟ್‍ಗೆ ವರ್ಗಾಯಿಸಬೇಕು ಅಂತ ದೆಹಲಿ ಮೂಲದ ಮಹಿಳೆ ಕೇಳಿಕೊಂಡಿದ್ದರು. ಪ್ರಕರಣದ ಸಂಕೀರ್ಣತೆ, ಸೂಕ್ಷ್ಮತೆಯಿಂದಾಗಿ ಪ್ರಕರಣವನ್ನು ವರ್ಗಾಯಿಸ್ತಿದ್ದೇವೆ ಅಂತ ಸುಪ್ರೀಂಕೋರ್ಟ್ ಹೇಳಿತ್ತು. ಇನ್ನು, ಮಸೀದಿ ಒಳಗೆ ಪತ್ತೆಯಾದ ಶಿವಲಿಂಗದ ಬಗ್ಗೆ ಪರ-ವಿರೋಧ ಮುಂದುವರಿದಿದೆ.

    SUPREME COURT

    ಈ ನಡುವೆ ಕಾಶಿ ವಿಶ್ವನಾಥ ದೇವಸ್ಥಾನದ ಮಾಜಿ ಮಹಾಂತರಾದ ಡಾ ಕುಲಪತಿ ತಿವಾರಿ ಜ್ಞಾನವಾಪಿ ಮಸೀದಿಯ ಪಶ್ಚಿಮ ಗೋಡೆಯ ಮೇಲಿನ ಕಪಾಟಿನಲ್ಲಿ ಸಣ್ಣ ಶಿವಲಿಂಗವನ್ನು ನೋಡಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮುಸ್ಲಿಮರ ಹತ್ಯೆಗೆ ನಿಮ್ಮ ಸಮ್ಮತಿ ಇತ್ತೇ? ಮಧ್ಯಪ್ರದೇಶ ಸಚಿವರಿಗೆ ಸ್ವರಾ ಭಾಸ್ಕರ್ ಪ್ರಶ್ನೆ

    ಮಸೀದಿಯ ನೆಲಮಾಳಿಗೆಯಲ್ಲಿ ಕಾಶಿ ವಿಶ್ವನಾಥನಿಗೆ ಹೊಂದಿಕೊಂಡಂತೆ ಮತ್ತೊಂದು ಶಿವಲಿಂಗ ಇದೆ. ನಾನು ಅದನ್ನು ನೋಡಿದ್ದೇನೆ. ಅದಕ್ಕೆ ಬೇಕಾದ ಸಾಕ್ಷ್ಯ ಇದೆ. ಅದು ಸ್ವಯಂಭೂ ಲಿಂಗವಾಗಿದೆ. ಅಲ್ಲಿ ಪೂಜೆಗೆ ಅವಕಾಶ ಕೋರಿ ಕೋರ್ಟ್ ಮೊರೆ ಹೋಗಲು ಚಿಂತನೆ ನಡೆಸಿದ್ದೇವೆ ಎಂದು ಹೇಳಿದ್ದಾರೆ. ಆದರೆ, ಅಲ್ಲಿ ಶಿವಲಿಂಗವೇ ಇಲ್ಲ. 2024ರ ಚುನಾವಣೆಗೆ ಇಷ್ಟೆಲ್ಲಾ ಅಜೆಂಡಾ ಮಾಡ್ತಿದ್ದಾರೆ ಅಂಥ ಅಂತ ಎಸ್‍ಪಿ ಸಂಸದ ಶಫಿಕುರ್ ರಹಮಾನ್ ಬಾರ್ಗ್ ಹೇಳಿದ್ದಾರೆ.

    ಈ ಮಧ್ಯೆ, ಕಾಶಿಯ ಜ್ಞಾನವಾಪಿ, ಮಥುರಾ ಶಾಹಿ ಈದ್ಗಾ ಮಸೀದಿ ಬಳಿಕ ಇದೀಗ ಲಖನೌದ ಪ್ರಸಿದ್ಧ `ಟೀಲೆವಾಲಿ’ ಮಸೀದಿಯ ಮೇಲೂ ಹಿಂದೂ ಕಾರ್ಯಕರ್ತರು ದೃಷ್ಟಿ ಹರಿಸಿದ್ದಾರೆ. ಟೀಲೆವಾಲಿ ವಾಸ್ತವದಲ್ಲಿ ಲಕ್ಷ್ಮಣತಿಲಾ ಆಗಿದೆ. ಅಲ್ಲಿ ಹನುಮಾನ್ ಚಾಲೀಸಾ ಪಠಿಸುತ್ತೇವೆ ಅಂತ ಹಿಂದೂ ಕಾರ್ಯಕರ್ತರು ಹೇಳಿದ್ದಾರೆ. ಇದನ್ನು ವಿರೋಧಿಸುವುದಾಗಿ ಮಸೀದಿಯಾ ಇಮಾಮ್ ಕೂಡ ಎಚ್ಚರಿಸಿದ್ದಾರೆ. ಇದನ್ನೂ ಓದಿ: ಮನೆಯಲ್ಲಿ ನಾಯಿ ಸಾಕುವವರಿಗೆ ಎಚ್ಚರಿಕೆ ನೀಡಿದ ಯೋಗಿ – ನಿಯಮ ಮೀರಿದರೆ ಕ್ರಮ

  • ಜ್ಞಾನವಾಪಿ ಕೇಸ್ – ಅವಹೇಳನಕಾರಿ ಪೋಸ್ಟ್ ಹಾಕಿದ್ದ ದೆಹಲಿ ಪ್ರಾಧ್ಯಾಪಕನಿಗೆ ಜಾಮೀನು

    ಜ್ಞಾನವಾಪಿ ಕೇಸ್ – ಅವಹೇಳನಕಾರಿ ಪೋಸ್ಟ್ ಹಾಕಿದ್ದ ದೆಹಲಿ ಪ್ರಾಧ್ಯಾಪಕನಿಗೆ ಜಾಮೀನು

    ನವದೆಹಲಿ: ಜ್ಞಾನವಾಪಿ ಮಸೀದಿಯಲ್ಲಿ ದೊರೆತ ಶಿವಲಿಂಗದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕನಿಗೆ ದೆಹಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 50,000 ರೂ. ಬಾಂಡ್ ನೀಡಿದ ಬಳಿಕ ಪ್ರಾಧ್ಯಾಪಕ ಜಾಮೀನಿನ ಮೇಲೆ ಹೊರಬರಬಹುದು ಎಂದಿದೆ.

    ಪ್ರಾಧ್ಯಾಪಕ ರತನ್ ಲಾಲ್ ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಕಂಡುಬಂದ ಶಿವಲಿಂಗದ ಬಗ್ಗೆ ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡಿದ್ದ. ಈ ಹಿನ್ನೆಲೆಯಲ್ಲಿ ದೆಹಲಿ ಮೂಲದ ವಕೀಲ ವಿನೀತ್ ಜಿಂದಾಲ್ ಮಂಗಳವಾರ ರತನ್ ಲಾಲ್ ವಿರುದ್ಧ ದೂರು ನೀಡಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಇದನ್ನೂ ಓದಿ: 12 ಜ್ಯೋತಿರ್ಲಿಂಗಗಳಲ್ಲಿ ಜ್ಞಾನವಾಪಿಯಲ್ಲಿ ಸಿಕ್ಕ ಶಿವಲಿಂಗವೂ ಒಂದು: ವಿಹೆಚ್‌ಪಿ

    ರತನ್ ಲಾಲ್‌ನನ್ನು ಶುಕ್ರವಾರ ರಾತ್ರಿ ಪೊಲೀಸರು ಬಂಧಿಸಿದ್ದರು. ಬಳಿಕ ರತನ್ ಲಾಲ್ ಜಾಮೀನು ಹಾಗೂ ರಕ್ಷಣೆಯನ್ನು ಕೋರಿ ದೆಹಲಿ ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ದೆಹಲಿ ನ್ಯಾಯಾಲಯ 50,000 ರೂ. ಬಾಂಡ್ ವಿಧಿಸಿ, ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ವಾಹನ ಸವಾರರಿಗೆ ಕೇಂದ್ರ ಸರ್ಕಾರದಿಂದ ಗುಡ್‌ನ್ಯೂಸ್‌ – ಪೆಟ್ರೋಲ್‌, ಡೀಸೆಲ್‌ ಅಬಕಾರಿ ಸುಂಕ ಇಳಿಕೆ

    ರತನ್ ಲಾಲ್ ವಿರುದ್ಧ ಸೈಬರ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡಸAಹಿತೆ 153ಎ(ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಹಾಗೂ ಸೌಹಾರ್ದದ ಮೇಲೆ ಪರಿಣಾಮ ಬೀರುವ ಕೃತ್ಯಗಳು) ಹಾಗೂ 295ಎ(ಉದ್ದೇಶಪೂರ್ವಕವಾಗಿ ಯಾವುದೇ ವರ್ಗದ ಧರ್ಮವನ್ನು ಅವಮಾನಿಸುವ ಮೂಲಕ ಅವರ ಧಾಮಿಕ ಭಾವನೆಯನ್ನು ಉದ್ರೇಕಿಸುವುದು) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

  • 12 ಜ್ಯೋತಿರ್ಲಿಂಗಗಳಲ್ಲಿ ಜ್ಞಾನವಾಪಿಯಲ್ಲಿ ಸಿಕ್ಕ ಶಿವಲಿಂಗವೂ ಒಂದು: ವಿಹೆಚ್‌ಪಿ

    12 ಜ್ಯೋತಿರ್ಲಿಂಗಗಳಲ್ಲಿ ಜ್ಞಾನವಾಪಿಯಲ್ಲಿ ಸಿಕ್ಕ ಶಿವಲಿಂಗವೂ ಒಂದು: ವಿಹೆಚ್‌ಪಿ

    ನವದೆಹಲಿ: ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಸುಪ್ರಿಂ ಕೋರ್ಟ್ ಆದೇಶವನ್ನು ಒಪ್ಪಿಕೊಂಡಿರುವ ವಿಶ್ವ ಹಿಂದೂ ಪರಿಷತ್(ವಿಹೆಚ್‌ಪಿ), 12 ಜ್ಯೋತಿರ್ಲಿಂಗಗಳಲ್ಲಿ ಜ್ಞಾನವಾಪಿಯಲ್ಲಿ ಸಿಕ್ಕಿರುವ ಶಿವಲಿಂಗವೂ ಒಂದಾಗಿದೆ. ಇದನ್ನು ಸಾಬೀತು ಪಡಿಸಲು ನಮ್ಮಿಂದ ಸಾಧ್ಯವಿದೆ ಎಂದು ತಿಳಿಸಿದೆ.

    ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿರುವುದರ ಬಗ್ಗೆ ಹೇಳಿಕೆ ನೀಡಿರುವ ವಿಶ್ವ ಹಿಂದೂ ಪರಿಷತ್ ಮುಖ್ಯಸ್ಥ ಅಲೋಕ್ ಕುಮಾರ್, ಜ್ಞಾನವಾಪಿ ಮಸೀದಿ ಆವರಣದಲ್ಲಿ ಶಿವಲಿಂಗ ಪತ್ತೆಯಾಗಿರುವುದು ಒಂದು ಗಂಭೀರ ವಿಚಾರ. ಇದು 12 ಜ್ಯೋತಿರ್ಲಿಂಗಗಳಲ್ಲಿ ಒಂದು ಎಂದು ಸಾಬೀತುಪಡಿಸಲು ಅನುಭವಿ ನ್ಯಾಯಾಧೀಶರ ಅಗತ್ಯವಿದೆ. ಜಿಲ್ಲಾ ನ್ಯಾಯಾಲಯ ಇದನ್ನು ಪರಿಶೀಲಿಸಲಿದೆ ಎಂದು ತಿಳಿಸಿದೆ. ಸುಪ್ರಿಂ ಕೋರ್ಟ್ ನಿರ್ಧಾರವನ್ನು ನಾವು ಒಪ್ಪುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಶಿವಲಿಂಗದ ಬಗ್ಗೆ ಅವಹೇಳನಕಾರಿ ಪೋಸ್ಟ್ – ದೆಹಲಿ ಪ್ರಾಧ್ಯಾಪಕ ಅರೆಸ್ಟ್

    ಜ್ಞಾನವಾಪಿ ಮಸೀದಿಯಲ್ಲಿ ನಂದಿಯೂ ಕಂಡುಬಂದಿತ್ತು. ಹೀಗಾಗಿ ಇದನ್ನು ನಾವು ಶಿವಲಿಂಗ ಎಂದು ಬಲವಾಗಿ ನಂಬಬಹುದು. 12 ಜ್ಯೋತಿರ್ಲಿಂಗಗಳಲ್ಲಿ ಇದು ಒಂದು ಎಂಬುದನ್ನು ಸಾಬೀತುಪಡಿಸಬಹುದು. ಹಿಂದೂ ದೇವಾಲಯವನ್ನು ಮೊಘಲರು ವಶಪಡಿಸಿಕೊಂಡು, ಅದರ ಹಳೆಯ ಅವಶೇಷಗಳ ಮೇಲೆ ಮಸೀದಿಯನ್ನು ಕಟ್ಟಲಾಗಿದೆ. ನಾವು ಅದನ್ನು ನ್ಯಾಯಾಲಯಕ್ಕೆ ಸಾಬೀತುಪಡಿಸಲು ಸಾಧ್ಯವಿದೆ. ಸುಪ್ರಿಂ ಕೋರ್ಟ್ ಈ ಪ್ರಕರಣವನ್ನು ನಿರ್ಧರಿಸುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಯಮುನೋತ್ರಿ ದೇವಸ್ಥಾನದ ಹೆದ್ದಾರಿಯಲ್ಲಿ ಗೋಡೆ ಕುಸಿತ – 10 ಸಾವಿರ ಮಂದಿ ಸಂಕಷ್ಟದಲ್ಲಿ

    ಜ್ಞಾನವಾಪಿ ಮಸೀದಿ ಪ್ರಕರಣವನ್ನು ಶುಕ್ರವಾರ ಸುಪ್ರಿಂ ಕೋರ್ಟ್ ಸಿವಿಲ್ ನ್ಯಾಯಾಧೀಶರಿಂದ ವಾರಣಾಸಿ ಜಿಲ್ಲಾ ನ್ಯಾಯಾಧೀಶರಿಗೆ ವರ್ಗಾಯಿಸಿದೆ. ಉತ್ತರ ಪ್ರದೇಶದ ಉನ್ನತ ನ್ಯಾಯಾಂಗ ಸೇವೆಯ ಹಿರಿಯ ಹಾಗೂ ಅನುಭವಿ ಅಧಿಕಾರಿಗಳು ಪ್ರಕರಣವನ್ನು ಪರಿಶೀಲಿಸಬೇಕೆಂದು ಆದೇಶಿಸಿದೆ.

  • ಜ್ಞಾನವಾಪಿ ಶಿವಲಿಂಗದ ಬಗ್ಗೆ ಅವಹೇಳನಕಾರಿ ಪೋಸ್ಟ್ – ದೆಹಲಿ ಪ್ರಾಧ್ಯಾಪಕ ಅರೆಸ್ಟ್

    ಜ್ಞಾನವಾಪಿ ಶಿವಲಿಂಗದ ಬಗ್ಗೆ ಅವಹೇಳನಕಾರಿ ಪೋಸ್ಟ್ – ದೆಹಲಿ ಪ್ರಾಧ್ಯಾಪಕ ಅರೆಸ್ಟ್

    ನವದೆಹಲಿ: ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಪತ್ತೆಯಾದ ‘ಶಿವಲಿಂಗ’ದ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಕ್ಕಾಗಿ ದೆಹಲಿ ವಿಶ್ವವಿದ್ಯಾಲಯದ ಹಿಂದೂ ಕಾಲೇಜಿನ ಸಹ ಪ್ರಾಧ್ಯಾಪಕ ರತನ್ ಲಾಲ್ ಅವರನ್ನು ಶುಕ್ರವಾರ ರಾತ್ರಿ ಬಂಧಿಸಲಾಗಿದೆ.

    ಸದ್ಯ ರತನ್ ಲಾಲ್ ವಿರುದ್ಧ ಉತ್ತರ ಸೈಬರ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆ 153ಎ (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸೌಹಾರ್ದತೆ ಕಾಪಾಡಲು ದುಷ್ಪರಿಣಾಮ ಬೀರುವ ಕೃತ್ಯಗಳು) ಮತ್ತು 295ಎ (ಉದ್ದೇಶಪೂರ್ವಕವಾಗಿ ಯಾವುದೇ ವರ್ಗದ ಧರ್ಮವನ್ನು ಅವಮಾನಿಸುವ ಮೂಲಕ ಅವರ ಧಾರ್ಮಿಕ ಭಾವನೆಗಳನ್ನು ಉದ್ರೇಕಿಸುವುದು) ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿದೆ.

    ದೆಹಲಿ ಮೂಲದ ವಕೀಲ ವಿನೀತ್ ಜಿಂದಾಲ್ ಅವರು ನೀಡಿದ ದೂರಿನ ಆಧಾರದ ಮೇಲೆ ಮಂಗಳವಾರ ರಾತ್ರಿ ರತನ್ ಲಾಲ್ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿದ್ದರು. ಇದನ್ನೂ ಓದಿ: ಜ್ಞಾನವಾಪಿ ಕೇಸ್ ವಾರಣಾಸಿ ಕೋರ್ಟ್‍ಗೆ ವರ್ಗಾವಣೆ – ವಾದ, ಪ್ರತಿವಾದ ಹೇಗಿತ್ತು?

    ಇತ್ತೀಚೆಗಷ್ಟೇ ರತನ್ ಲಾಲ್ ಶಿವಲಿಂಗದ ಬಗ್ಗೆ ಅವಹೇಳನಕಾರಿ, ಪ್ರಚೋದಿಸುವ ಮತ್ತು ಪ್ರಚೋದನಕಾರಿ ಟ್ವೀಟ್‍ನನ್ನು ಪೋಸ್ಟ್ ಮಾಡಿರುವುದನ್ನು ವಿನೀತ್ ಜಿಂದಾಲ್ ತಮ್ಮ ಟ್ವಿಟ್ಟರ್‌ನಲ್ಲಿ  ಹಂಚಿಕೊಂಡಿದ್ದರು. ಜೊತೆಗೆ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಸಿಕ್ಕಿರುವ ಶಿವಲಿಂಗದ ಬಗ್ಗೆ ಈ ರೀತಿಯ ಹೇಳಿಕೆಯನ್ನು  ಪೋಸ್ಟ್ ಮಾಡಲಾಗಿದ್ದು, ಇದು ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಈ ವಿಷಯ ಕುರಿತಂತೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ ಎಂದು ತಮ್ಮ ದೂರಿನಲ್ಲಿ ವಕೀಲರು ತಿಳಿಸಿದ್ದರು. ಇದನ್ನೂ ಓದಿ: ಶಿವಲಿಂಗದ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ AIMIM ನಾಯಕ ಅರೆಸ್ಟ್

    ಈ ಹಿಂದೆ ತಮ್ಮ ಪೋಸ್ಟ್ ಅನ್ನು ಸಮರ್ಥಿಸಿಕೊಂಡಿರುವ ರತನ್ ಲಾಲ್, ಭಾರತದಲ್ಲಿ, ನೀವು ಯಾವುದೇ ವಿಷಯದ ಬಗ್ಗೆ ಮಾತನಾಡಿದರೂ, ಯಾರಿಗಾದರೂ ಅಥವಾ ಇನ್ನೊಬ್ಬರ ಭಾವನೆಗೆ ಧಕ್ಕೆಯಾಗುತ್ತದೆ. ಹಾಗಾಗಿ ಇದು ಹೊಸದೇನಲ್ಲ. ನಾನು ಇತಿಹಾಸಕಾರನಾಗಿದ್ದು, ಹಲವಾರು ಅವಲೋಕನಗಳನ್ನು ಮಾಡಿದ್ದೇನೆ. ನಾನು ಅವುಗಳ ಬಗ್ಗೆ ಕೂಡ ಬರೆದಿದ್ದೇನೆ. ನಾನು ನನ್ನ ಪೋಸ್ಟ್‌ನಲ್ಲಿ ಬಹಳ ಸಭ್ಯ ಭಾಷೆ ಬಳಸಿದ್ದೇನೆ. ಈಗಲೂ ಸಭ್ಯವಾಗಿಯೇ ಬರೆದಿದ್ದೇನೆ. ನನ್ನನ್ನು ನಾನು ರಕ್ಷಿಸಿಕೊಳ್ಳುತ್ತೇನೆ ಎಂದಿದ್ದಾರೆ.

  • ಜ್ಞಾನವಾಪಿ ಮಸೀದಿ ವಿವಾದ – ವಾರಣಾಸಿ ಕೋರ್ಟ್‌ ವಿಚಾರಣೆಗೆ ಸುಪ್ರೀಂ ತಡೆ

    ಜ್ಞಾನವಾಪಿ ಮಸೀದಿ ವಿವಾದ – ವಾರಣಾಸಿ ಕೋರ್ಟ್‌ ವಿಚಾರಣೆಗೆ ಸುಪ್ರೀಂ ತಡೆ

    ನವದೆಹಲಿ: ಕಾಶಿ ವಿಶ್ವನಾಥ್‌ ದೇವಸ್ಥಾನ ಮತ್ತು ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ವಾರಣಾಸಿ ಸಿವಿಲ್‌ ಕೋರ್ಟ್‌ ನಡೆಸುತ್ತಿದ್ದ ವಿಚಾರಣೆಗೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ.

    ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಮಸೀದಿಯ ಆವರಣದಲ್ಲಿ ವೀಡಿಯೋಗ್ರಫಿ ಸರ್ವೆಗೆ ಆದೇಶ ನೀಡಿದ ವಾರಣಾಸಿ ಸಿವಿಲ್ ಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಗೆ ಇಂದು ಸುಪ್ರೀಂಕೋರ್ಟ್ ಸಮ್ಮತಿ ಸೂಚಿಸಿದೆ. ಅಂಜುಮನ್ ಇಂತೇಜಾಮೀಯ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಡಿ.ವೈ ಚಂದ್ರಚೂಡ್ ನೇತೃತ್ವದ ದ್ವಿ ಸದಸ್ಯ ಪೀಠ ವಿಚಾರಣೆಗೆ ಒಪ್ಪಿಗೆ ಸೂಚಿಸಿತು. ಇದನ್ನೂ ಓದಿ: ಕೊರೊನಾ ಲಸಿಕೆಯಂತೆ ಗೋಧಿ ರಫ್ತು ಮಾಡಲಾಗುದಿಲ್ಲ: ಭಾರತ

    SUPREME COURT

    ವಿಚಾರಣೆ ವೇಳೆ ವಾದ ಮಂಡಿಸಿದ ಹಿಂದೂಪರ ಸಂಘಟನೆಗಳ ವಕೀಲರು, ವಾರಣಾಸಿ ಸಿವಿಲ್ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ ಅರ್ಜಿದಾರರ ಪರ ವಕೀಲರು ಅನಾರೋಗ್ಯಕ್ಕೀಡಾಗಿದ್ದು ನಿನ್ನೆಯಷ್ಟೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ನಾಳೆ ಅವರು ಕೋರ್ಟ್‌ಗೆ ಹಾಜರಾಗಲಿದ್ದು, ನಾಳೆ ಈ ಬಗ್ಗೆ ವಿಸ್ತೃತ ವಿಚಾರಣೆ ನಡೆಸಿ ಎಂದು ಮನವಿ ಮಾಡಿದರು.

    ಈ ವೇಳೆ ಮಧ್ಯಪ್ರದೇಶ ಮಾಡಿದ ಮಸೀದಿ ಪರ ವಕೀಲರು, ವಾರಣಾಸಿ ಸಿವಿಲ್ ಕೋರ್ಟ್‌ನಲ್ಲಿ ಮಸೀದಿಯ ಗೋಡೆ ಕೆಡವಿ ಉತ್ಕನನ ನಡೆಸಲು ಮತ್ತು ವಝುಖಾನ ಕೆಳಭಾಗದಲ್ಲಿ ಪರಿಶೀಲನೆ ನಡೆಸಲು ಸೂಚನೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದು, ಇಂದು ಈ ಅರ್ಜಿಗಳು ವಿಚಾರಣೆಗೆ ಬರಲಿದೆ. ಇಂದು ಟ್ರಯಲ್ ಕೋರ್ಟ್ ಈ ಬಗ್ಗೆ ಆದೇಶ ನೀಡುವ ಸಾಧ್ಯತೆಗಳಿವೆ ಎಂದು ಆತಂಕ ವ್ಯಕ್ತಪಡಿಸಿದರು. ಇದನ್ನೂ ಓದಿ: ಜನಸಾಮಾನ್ಯರಿಗೆ ಮತ್ತೆ ಬೆಲೆ ಏರಿಕೆ ಶಾಕ್ – 1,000 ರೂ. ದಾಟಿದ LPG ಸಿಲಿಂಡರ್ ದರ

    ವಾದ ಪ್ರತಿವಾದ ಆಲಿಸಿದ ಸುಪ್ರೀಂ ಕೋರ್ಟ್ ನಾಳೆ ಈ ಬಗ್ಗೆ ವಿಚಾರಣೆ ನಡೆಸಲಾವುದು ಅಲ್ಲಿಯವರೆಗೂ ವಾರಣಾಸಿ ಸಿವಿಲ್ ಕೋರ್ಟ್‌ಗೆ ಅರ್ಜಿದಾರರು ಹೋಗದಂತೆ ಹಾಗೂ ಆದೇಶಕ್ಕಾಗಿ ಕೋರ್ಟ್‌ಗೆ ಒತ್ತಾಯಿಸಿದಂತೆ ತಿಳಿಸಲು ಸೂಚನೆ ನೀಡಿತು. ಅಲ್ಲದೇ ಈ ಸಂಬಂಧ ಯಾವುದೇ ಆದೇಶಗಳನ್ನು ನೀಡದಂತೆ ಸಿವಿಲ್ ಕೋರ್ಟ್‌ಗೂ ಸೂಚನೆ ನೀಡಿತು.

    ಈ ಹಿಂದೆ ಪ್ರಕರಣ ವಿಚಾರಣೆ ನಡೆಸಿದ್ದ ಕೋರ್ಟ್, ಪತ್ತೆಯಾಗಿರುವ ಶಿವಲಿಂಗವನ್ನು ಸಂರಕ್ಷಣೆ ಮಾಡಬೇಕು. ಈ ಭಾಗದಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಬೇಕು ಎಂದು ಸೂಚಿಸಿ ಮಸೀದಿಯ ಭಾಗದಲ್ಲಿ ಪ್ರಾರ್ಥನೆ ಸಲ್ಲಿಸಲು ಅನುಮತಿ ನೀಡಿತ್ತು. ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಮುಂದೂಡಿದೆ. ಇದನ್ನೂ ಓದಿ: ಅಸ್ಸಾಂನಲ್ಲಿ ಭೀಕರ ಪ್ರವಾಹ – 9 ಮಂದಿ ಸಾವು, ಸಂಕಷ್ಟದಲ್ಲಿ ಲಕ್ಷಾಂತರ ಜನ

  • ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ದೊರೆತಿರುವುದು ಶಿವಲಿಂಗವಲ್ಲ, ಕಾರಂಜಿ: ಎಸ್‍ಡಿಪಿಐ ಆರೋಪ

    ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ದೊರೆತಿರುವುದು ಶಿವಲಿಂಗವಲ್ಲ, ಕಾರಂಜಿ: ಎಸ್‍ಡಿಪಿಐ ಆರೋಪ

    ಬೆಳಗಾವಿ: ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ದೊರೆತಿರುವುದು ಶಿವಲಿಂಗವಲ್ಲ, ಕಾರಂಜಿ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ ಎಂದು ಆರೋಪಿಸಿ ನಗರದ ಡಿಸಿ ಕಚೇರಿಯಲ್ಲಿ ಎಸ್‍ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಬೆಳಗಾವಿ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಎಸ್‍ಡಿಪಿಐ ಕಾರ್ಯಕರ್ತರು, ವಾರಾಣಸಿಯ ಜ್ಞಾನವಾಪಿ ಮಸೀದಿ ಐತಿಹಾಸಿಕ ಮಸೀದಿಗಳಲ್ಲಿ ಒಂದಾಗಿದೆ. ಜ್ಞಾನವಾಪಿ ಮಸೀದಿ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದ್ದು ಮಸೀದಿಯಲ್ಲಿ ದೊರೆತಿರುವುದು ಶಿವಲಿಂಗವಲ್ಲ. ಅದೊಂದು ಕಾರಂಜಿ. ಅದೇ ಕಾರಂಜಿಯನ್ನೇ ಶಿವಲಿಂಗ ಎಂದು ಬಿಂಬಿಸುವ ಹುನ್ನಾರವನ್ನು ಬಿಜೆಪಿ ಮತ್ತು ಸಂಘ ಪರಿವಾರದವರು ಮಾಡುತ್ತಿದ್ದಾರೆ ಎಂದು ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಅಬೀದ್ ಖಾನ್ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಾಹಿತಿ ಲೀಕ್ – ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಅಧಿಕಾರಿ ವಜಾ

    ಇದಲ್ಲದೇ ಸರ್ಕಾರಿ ಅಧಿಕಾರಿಗಳಿಂದ ನ್ಯಾಯಾಲಯಕ್ಕೆ ತಪ್ಪು ಮಾಹಿತಿ ರವಾನೆ ಮಾಡಲಾಗುತ್ತಿದೆ. 1991ರ ಆರಾಧನಾ ಕಾಯ್ದೆ ಪ್ರಕಾರ ಧಾರ್ಮಿಕ ಸ್ಥಳಗಳನ್ನು ಯಥಾಸ್ಥಿತಿಗೆ ಬಿಡಬೇಕು. ದೇಗುಲ, ಮಸೀದಿ, ಚರ್ಚ್‍ಗಳ ರಕ್ಷಣೆಗೆ ಆದ್ಯತೆ ನೀಡಬೇಕು. ಆದ್ರೆ, ಕೋಮುವಾದಿ ಸಂಘಟನೆಗಳಿಂದ ದೇಶದಲ್ಲಿ ಸಾಮರಸ್ಯ ಕದಡುವ ಕೃತ್ಯ ನಡೆದಿದೆ. ಮುಸ್ಲಿಂ ಸಮುದಾಯದ ಪವಿತ್ರ ಸ್ಥಳಗಳನ್ನು ಧ್ವಂಸಗೊಳಿಸುವ ಹುನ್ನಾರ ನಡೆದಿದ್ದು ನಮಗೆ ನ್ಯಾಯ ಸಿಗುವವರೆಗೆ ಹೋರಾಟ ನಡೆಸುವುದಾಗಿ ಎಸ್‍ಡಿಪಿಐ ಪಕ್ಷದ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಗಮನಿಸಿ, ಮುಂದಿನ 5 ದಿನಗಳ ಕಾಲ ಬೆಂಗ್ಳೂರಲ್ಲಿ ಭಾರೀ ಮಳೆ

  • ಜ್ಞಾನವಾಪಿ ಮಾಹಿತಿ ಲೀಕ್ – ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಅಧಿಕಾರಿ ವಜಾ

    ಜ್ಞಾನವಾಪಿ ಮಾಹಿತಿ ಲೀಕ್ – ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಅಧಿಕಾರಿ ವಜಾ

    ಲಕ್ನೋ: ಉತ್ತರಪ್ರದೇಶದ ವಾರಣಾಸಿ ಜ್ಞಾನವಾಪಿ ಮಸೀದಿಯ ಸಮೀಕ್ಷೆಯ ವರದಿ ನ್ಯಾಯಾಲಯಕ್ಕೆ ಸಲ್ಲುವ ಮೊದಲೇ ಸೋರಿಕೆಯಾಗಿರುವ ಕುರಿತಂತೆ ವಾರಣಾಸಿ ನ್ಯಾಯಾಲಯ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಉನ್ನತ ಅಧಿಕಾರಿ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸಿದೆ.

    ನ್ಯಾಯಾಲಯ ಜ್ಞಾನವಾಪಿ ಮಸೀದಿಯ ವರದಿ ಸಲ್ಲಿಸಲು 2 ದಿನಗಳ ಕಾಲಾವಕಾಶ ನೀಡಿದೆ. ವರದಿ ಸಲ್ಲಿಕೆಗೂ ಮುನ್ನವೇ ಮಾಧ್ಯಮಗಳಿಗೆ ಚಿತ್ರೀಕರಣದ ಸಂಗತಿಗಳು ಸೋರಿಕೆಯಾದ ಹಿನ್ನೆಲೆಯಲ್ಲಿ ಅಡ್ವೋಕೇಟ್ ಕಮಿಷನರ್ ಅಜಯ್ ಮಿಶ್ರಾ ಅವರನ್ನು ನ್ಯಾಯಾಲಯ ವಜಾಗೊಳಿಸಿದೆ. ಇದನ್ನೂ ಓದಿ: ಶಿವಲಿಂಗ ಪತ್ತೆಯಾದ ಜಾಗವನ್ನು ರಕ್ಷಿಸಿ: ಸುಪ್ರೀಂ ಕೋರ್ಟ್‌

    ಈ ಹಿಂದೆ ನ್ಯಾಯಾಲಯ ಮೇ 17ರ ಒಳಗಾಗಿ ಸಮೀಕ್ಷಾ ವರದಿಗಳನ್ನು ನೀಡಬೇಕೆಂದು ಆದೇಶ ನೀಡಿತ್ತು. ಇದೀಗ ವರದಿ ಸಲ್ಲಿಸಲು ಆಯೋಗಕ್ಕೆ ನ್ಯಾಯಾಲಯ ಇನ್ನೆರಡು ದಿನಗಳ ಕಾಲಾವಕಾಶವನ್ನೂ ನೀಡಿದೆ. ವರದಿ ಸೋರಿಕೆಯಲ್ಲಿ ಪಾತ್ರವಹಿಸಿದ್ದ ಅಜಯ್ ಮಿಶ್ರಾ ಅವರನ್ನು ನ್ಯಾಯಾಲಯ ವಜಾಗೊಳಿಸಿದೆ ಎಂದು ಸಹಾಯಕ ವಕೀಲ ಕಮಿಷನರ್ ಅಜಯ್ ಪ್ರತಾಪ್ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ


    ಅಜಯ್ ಮಿಶ್ರಾ ಸಮೀಕ್ಷೆಗೆ ಸಂಬಂಧಿಸಿದ ಮಾಹಿತಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವುದಾಗಿ ವರದಿಯಾಗಿದೆ. ಈ ಹಿಂದೆ ಮಿಶ್ರಾ ಅವರನ್ನು ಅಡ್ವೋಕೇಟ್ ಕಮಿಷನರ್ ಸ್ಥಾನದಿಂದ ಕೈಬಿಡಬೇಕೆಂದು ಮಸೀದಿ ಆಡಳಿತ ಮಂಡಳಿಯ ವಕೀಲರು ಕೋರಿದ್ದರು. ಈ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿತ್ತು. ಇದಲ್ಲದೇ ಮಿಶ್ರಾ ಅವರಿಗೆ ನೆರವಾಗಲು ಹೆಚ್ಚುವರಿ ಕಮಿಷನರ್ ಹಾಗೂ ಸಹಾಯಕ ಕಮಿಷನರ್‌ಗಳನ್ನು ಕೋರ್ಟ್ ನೇಮಕ ಮಾಡಿತ್ತು.

  • ಶಿವಲಿಂಗ ಪತ್ತೆಯಾದ ಜಾಗವನ್ನು ರಕ್ಷಿಸಿ: ಸುಪ್ರೀಂ ಕೋರ್ಟ್‌

    ಶಿವಲಿಂಗ ಪತ್ತೆಯಾದ ಜಾಗವನ್ನು ರಕ್ಷಿಸಿ: ಸುಪ್ರೀಂ ಕೋರ್ಟ್‌

    ನವದೆಹಲಿ: ಶಿವಲಿಂಗ ಪತ್ತೆಯಾದ ಜಾಗವನ್ನು ರಕ್ಷಿಸಬೇಕು ಎಂದು ಸುಪ್ರೀಂ ಕೋರ್ಟ್‌ ವಾರಣಾಸಿ ಜಿಲ್ಲಾಡಳಿತಕ್ಕೆ ಸೂಚಿಸಿದೆ.

    ಜ್ಞಾನವ್ಯಾಪಿ ಮಸೀದಿಯಲ್ಲಿ ಸರ್ವೆ ನಡೆಸಲು ತಡೆ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ ನ್ಯಾ. ಚಂದ್ರಚೂಡ್‌ ಮತ್ತು ನ್ಯಾ. ಪಿ.ಎಸ್‌ ನರಸಿಂಹ ಅವರಿದ್ದ ಪೀಠದಲ್ಲಿ ನಡೆಯಿತು.

    ವಿಚಾರಣೆ ಸಂದರ್ಭದಲ್ಲಿ ಶಿವಲಿಂಗ ನಿಜವಾಗಿ ಎಲ್ಲಿ ಪತ್ತೆಯಾಗಿದೆ ಎಂದು ಕೋರ್ಟ್‌ ಪ್ರಶ್ನಿಸಿತು. ಇದನ್ನೂ ಓದಿ: ಶ್ರೀಲಂಕನ್ ಏರ್‌ಲೈನ್ಸ್ ಮಾರಾಟಕ್ಕೆ ಮುಂದಾದ ಸರ್ಕಾರ

    GYANVAPI MOSQUE

    ಈ ಪ್ರಶ್ನೆಗೆ ಉತ್ತರ ನೀಡಿದ ಉತ್ತರಪ್ರದೇಶ ಸರ್ಕಾರ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, ನಾವು ನೋಡಿಲ್ಲ ಎಂದು ಉತ್ತರಿಸಿದರು. ವರದಿಯನ್ನು ನೋಡಿ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

    ವಿಚಾರಣೆ ನಡೆಸಿದ ಕೋರ್ಟ್‌, ಶಿವಲಿಂಗ ಪತ್ತೆಯಾದ ಜಾಗವನ್ನು ರಕ್ಷಿಸಬೇಕು. ನಮಾಜ್‌ ಮಾಡಲು ಆಗಮಿಸುವ ಮುಸ್ಲಿಮರಿಗೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಕೋರ್ಟ್‌ ವಾರಣಾಸಿ ಜಿಲ್ಲಾಡಳಿತಕ್ಕೆ ಸೂಚಿಸಿತು.  ಕೋರ್ಟ್‌ ವಿಚಾರಣೆಯನ್ನು ಮೇ 19ಕ್ಕೆ ಮುಂದೂಡಿದೆ.

    ಸೋಮವಾರ ಏನಾಗಿತ್ತು?
    ವಾರಣಾಸಿ ಕೋರ್ಟ್ ಸೂಚನೆ ಮೇರೆಗೆ ಕೋರ್ಟ್ ಕಮೀಷನರ್ ನೇತೃತ್ವದಲ್ಲಿ ಮೂರು ದಿನ ನಡೆದ ಜ್ಞಾನವ್ಯಾಪಿ ಮಸೀದಿ ವಿಡಿಯೋ ಸರ್ವೇ ಸೋಮವಾರಕ್ಕೆ ಮುಕ್ತಾಯವಾಗಿತ್ತು. ಮಸೀದಿಯ ಕೊಳದಲ್ಲಿ 12 ಅಡಿ ಎತ್ತರದ ಶಿವಲಿಂಗ ಪತ್ತೆಯಾಗಿತ್ತು. ಇದು ತಿಳಿಯುತ್ತಲೇ ಶಿವಲಿಂಗಕ್ಕೆ ರಕ್ಷಣೆ ಕಲ್ಪಿಸಬೇಕೆಂದು ಕೋರಿ ವಕೀಲರೊಬ್ಬರು ಕಾಶಿ ಮ್ಯಾಜಿಸ್ಟ್ರೇಟ್ ಕೋರ್ಟ್ ಮೊರೆ ಹೋಗಿದ್ದರು.

    ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಶಿವಲಿಂಗ ಪತ್ತೆಯಾದ ಪ್ರದೇಶವನ್ನು ಈ ಕೂಡಲೇ ಸೀಲ್ ಮಾಡುವಂತೆ ಸ್ಥಳೀಯ ಆಡಳಿತಕ್ಕೆ ನಿರ್ದೇಶನ ನೀಡಿತ್ತು. ಅಲ್ಲದೇ, ಶಿವಲಿಂಗ ಪತ್ತೆಯಾದ ಪ್ರದೇಶಕ್ಕೆ ಯಾರು ಹೋಗದಂತೆ ನಿಷೇಧ ವಿಧಿಸುವಂತೆಯೂ ಆದೇಶ ನೀಡಿದೆ. ಅಗತ್ಯ ಭದ್ರತೆ ಒದಗಿಸುವಂತೆಯೂ ಸೂಚನೆ ನೀಡಿತ್ತು.

    ಆದೇಶದ ಬೆನ್ನಲ್ಲೇ 30*30 ಅಳತೆಯ ಪ್ರದೇಶವನ್ನು ಸೀಲ್ ಮಾಡಲಾಗಿದೆ. ಆ ಪ್ರದೇಶದ ಮೂರು ದ್ವಾರಗಳನ್ನು ಬಂದ್ ಮಾಡಲಾಗಿದೆ. ಈ ಕೊಳದ ನೀರನ್ನು ಮುಸ್ಲಿಮರು ಪ್ರಾರ್ಥನೆಗೆ ಬಂದ ಸಂದರ್ಭದಲ್ಲಿ ಕೈಕಾಲು ತೊಳೆಯಲು ಬಳಸ್ತಿದ್ದರು. ಪ್ರಾರ್ಥನೆಗೆ ಬರುವವರಿಗೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಜಿಲ್ಲಾಡಳಿತ ಪರ್ಯಾಯ ವ್ಯವಸ್ಥೆ ಕಲ್ಪಿಸಿದೆ.

  • ಓವೈಸಿ, ಮುಫ್ತಿ ಮತ್ತೊಮ್ಮೆ ಇತಿಹಾಸ ಓದಲಿ: ಕೇಂದ್ರ ಸಚಿವೆ

    ಓವೈಸಿ, ಮುಫ್ತಿ ಮತ್ತೊಮ್ಮೆ ಇತಿಹಾಸ ಓದಲಿ: ಕೇಂದ್ರ ಸಚಿವೆ

    ನವದೆಹಲಿ: ಎಐಎಮ್‍ಐಎಮ್ ಮುಖ್ಯಸ್ಥ ಅಸಾದುದ್ದಿನ್ ಓವೈಸಿ ಹಾಗೂ ಜಮ್ಮು- ಕಾಶ್ಮೀರದ ಮೆಹಬೂಬಾ ಮುಫ್ತಿ ಅವರು ಇತಿಹಾಸವನ್ನು ಮತ್ತೊಮ್ಮೆ ಓದಬೇಕು ಎಂದು ಸಲಹೆ ನೀಡುತ್ತೇನೆ ಎಂದು ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಫ್ತಿ ಹಾಗೂ ಓವೈಸಿ ಅವರು ಶಾಂತಿ ಮತ್ತು ಸಹೋದರತ್ವವನ್ನು ಕಾಪಾಡಬೇಕು. ಇದರ ಜೊತೆಗೆ ಸಮಾಜಕ್ಕೆ ಧಕ್ಕೆ ತರುವ ಯಾವುದೇ ಕೆಲಸವನ್ನು ಮಾಡಬಾರದು ಎಂದು ಮನವಿ ಮಾಡಿದರು.

    ಜ್ಞಾನವಾಪಿ ಮಸೀದಿಯ ವಿಷಯ ನ್ಯಾಯಾಲಯದಲ್ಲಿದೆ. ಈ ಬಗ್ಗೆ ಅವರು ಮಧ್ಯ ಪ್ರವೇಶಿಸಬಾರದು. ಜೊತೆಗೆ ಸಮಾಜಕ್ಕೆ ಧಕ್ಕೆಯನ್ನು ತರಬಾರದು ಎಂದರು.

    ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಸರ್ವೇ ಕಾರ್ಯದ ವೇಳೆ ಮಸೀದಿಯ ಬಾವಿಯೊಳಗೆ 12 ಅಡಿ, 8 ಇಂಚಿನ ಶಿವಲಿಂಗ ಪತ್ತೆಯಾದ ಹಿನ್ನೆಲೆಯಲ್ಲೇ ಓವೈಸಿ ಹಾಗೂ ಮೆಹಬೂಬಾ ಮುಫ್ತಿ ಟೀಕಿಸಿದ್ದರು. ಇದನ್ನೂ ಓದಿ: ಭಾರೀ ಮಳೆಗೆ ಕೊಚ್ಚಿ ಹೋಯ್ತು ಸೇತುವೆ, ಕುಸಿಯಿತು ರಸ್ತೆ

    ನ್ಯಾಯಾಲಯದ ಆದೇಶವನ್ನು ಟೀಕಿಸಿದ್ದ ಓವೈಸಿ, ಡಿಸೆಂಬರ್ 1949ರಲ್ಲಿ ಬಾಬರಿ ಮಸೀದಿಯಲ್ಲಿ ಪಠ್ಯಪುಸ್ತಕ ಪುನರಾವರ್ತನೆ ಆಗಿದೆ. ಈ ಆದೇಶವು ಮಸೀದಿಯ ಧಾರ್ಮಿಕ ಸ್ವರೂಪವನ್ನು ಬದಲಾಯಿಸುತ್ತದೆ. ಇದು ಆರಾಧನ ಸ್ಥಳ (1991 ಕಾಯಿದೆ) ಕಾಯಿದೆ ಉಲ್ಲಂಘನೆಯಾಗಿದೆ. ಇದು ನನ್ನ ಆತಂಕವಾಗಿತ್ತು ಮತ್ತು ಇದು ನಿಜವಾಗಿದೆ. ಜ್ಞಾನವಾಪಿ ಮಸೀದಿಯು ಮಸೀದಿಯಾಗಿತ್ತು. ಮಸೀದಿಯಾಗಿಯೇ ಉಳಿಯುತ್ತದೆ ಎಂದಿದ್ದರು. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ವಿವಾದ – ಇಂದು ಸುಪ್ರೀಂ ಕೋರ್ಟ್ ವಿಚಾರಣೆ