Tag: Gyanvapi

  • ಜ್ಞಾನವಾಪಿ ವಿವಾದ – ಹಿಂದೂಗಳಿಗೆ ಪೂಜೆ ಮಾಡಲು ಅನುಮತಿ ನೀಡುವಂತೆ ಕೋರಿ ಸುಪ್ರೀಂಗೆ ಅರ್ಜಿ

    ಜ್ಞಾನವಾಪಿ ವಿವಾದ – ಹಿಂದೂಗಳಿಗೆ ಪೂಜೆ ಮಾಡಲು ಅನುಮತಿ ನೀಡುವಂತೆ ಕೋರಿ ಸುಪ್ರೀಂಗೆ ಅರ್ಜಿ

    ಲಕ್ನೋ: ವಾರಣಾಸಿಯ ಪ್ರಸಿದ್ಧ ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿರುವ ವಿವಾದಿತ ಜ್ಞಾನವಾಪಿ ಮಸೀದಿ ಆವರಣದಲ್ಲಿ ಇತ್ತೀಚೆಗೆ ಶಿವಲಿಂಗ ಪತ್ತೆಯಾಗಿದ್ದು, ಅಲ್ಲಿ ಧಾರ್ಮಿಕ ಆಚರಣೆಗಳನ್ನು ನಡೆಸಲು ಅನುಮತಿ ನೀಡುವಂತೆ ಕೋರಿ ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ಹೊಸ ಅರ್ಜಿ ಸಲ್ಲಿಸಲಾಗಿದೆ.

    ವರದಿಗಳ ಪ್ರಕಾರ, ಶ್ರೀ ಕೃಷ್ಣ ಜನ್ಮಭೂಮಿ ಮುಕ್ತಿ ಸ್ಥಳದ ಅಧ್ಯಕ್ಷ ರಾಜೇಶ್ ಮಣಿ ತ್ರಿಪಾಠಿ ಅವರು ಅರ್ಜಿ ಸಲ್ಲಿಸಿದ್ದಾರೆ. ಶ್ರಾವಣ ಮಾಸ ಪ್ರಾರಂಭವಾಗುತ್ತಿರುವುದರಿಂದ ಹಿಂದೂಗಳಿಗೆ ಪೂಜೆ ಸಲ್ಲಿಸಲು ಹಾಗೂ ತಮ್ಮ ಹಕ್ಕನ್ನು ಚಲಾಯಿಸಲು ಅವಕಾಶ ನೀಡಬೇಕು ಎಂದು ವಾದಿಸಿದ್ದಾರೆ. ಇದನ್ನೂ ಓದಿ: ಇಂದು ಒಟ್ಟು 977 ಕೇಸ್ – ಬೆಂಗ್ಳೂರಲ್ಲಿ 927 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್

    ಭಾರತ ಸಂವಿಧಾನದ 25 ನೇ ವಿಧಿಯ ಅಡಿಯಲ್ಲಿ ಜನರು ತಮ್ಮದೇ ಆದ ಧಾರ್ಮಿಕ ಆಚರಣೆಗಳನ್ನು ನಡೆಸುವ ಹಕ್ಕಿದೆ. ಶ್ರಾವಣ ಮಾಸದಲ್ಲಿ ಶಿವನಿಗೆ ಪೂಜೆ ಮಾಡುವ ಪದ್ಧತಿಯಿರುವುದು ನಿಜ. ಹೀಗಾಗಿ ಜ್ಞಾನವಾಪಿ ಮಸೀದಿ ಆವರಣದಲ್ಲಿ ಪತ್ತೆಯಾಗಿರುವ ಶಿವಲಿಂಗಕ್ಕೆ ಶ್ರಾವಣ ಮಾಸದಲ್ಲಿ ಪ್ರಾರ್ಥನೆ, ಪೂಜೆ ನಡೆಸಲು ಹಿಂದೂಗಳಿಗೆ ಅನುಮತಿ ನೀಡಬೇಕಾಗಿ ತ್ರಿಪಾಠಿ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಭಗತ್‌ ಸಿಂಗ್‌ ಒಬ್ಬ ಭಯೋತ್ಪಾದಕ: ಶಿರೋಮಣಿ ಅಕಾಲಿ ದಳ ಸಂಸದ ವಿವಾದಾತ್ಮಕ ಹೇಳಿಕೆ

    ಸ್ಥಳೀಯ ನ್ಯಾಯಾಲಯದ ಆದೇಶದಿಂದ ಮಸೀದಿಯಲ್ಲಿ ಪತ್ತೆಯಾದ ಶಿವಲಿಂಗವನ್ನು ರಕ್ಷಿಸಲಾಗಿದೆಯಾದರೂ, ಭಕ್ತರಿಗೆ ಅಲ್ಲಿ ಪೂಜೆ ಸಲ್ಲಿಸಲು ಹಾಗೂ ಆಚರಣೆಗಳನ್ನು ನಡೆಸಲು ನಿರ್ಬಂಧಿಸಲಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜ್ಞಾನವಾಪಿ ಸಮೀಕ್ಷೆಗೆ ಆದೇಶ ನೀಡಿದ ನ್ಯಾಯಾಧೀಶರಿಗೆ ಜೀವ ಬೆದರಿಕೆ

    ಜ್ಞಾನವಾಪಿ ಸಮೀಕ್ಷೆಗೆ ಆದೇಶ ನೀಡಿದ ನ್ಯಾಯಾಧೀಶರಿಗೆ ಜೀವ ಬೆದರಿಕೆ

    ಲಕ್ನೋ: ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀಕ್ಷೆಗಾಗಿ ಆಯೋಗವನ್ನು ರಚಿಸಲು ಆದೇಶಿಸಿದ್ದ ವಾರಣಾಸಿಯ ನ್ಯಾಯಾಧೀಶರಿಗೆ ಜೀವ ಬೆದರಿಕೆ ಪತ್ರಗಳು ಬಂದಿದೆ.

    ಜ್ಞಾನವಾಪಿ ಮಸೀದಿ ಆವರಣದಲ್ಲಿರುವ ಶೃಂಗಾರ ಗೌರಿ ಹಾಗೂ ಇತರ ದೇವತೆಗಳ ಆರಾಧನೆಗೆ ಮಹಿಳೆಯರು ಹಕ್ಕು ಚಲಾಯಿಸಿದ ಪ್ರಕರಣದಲ್ಲಿ ಸಿವಿಲ್ ನ್ಯಾಯಾಧೀಶ (ಹಿರಿಯ ವಿಭಾಗ) ರವಿಕುಮಾರ್ ದಿವಾಕರ್ ಸಮೀಕ್ಷೆಯ ಆಯೋಗಕ್ಕೆ ಆದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ಸಿವಿಲ್ ನ್ಯಾಯಾಧೀಶರಿಗೆ ಇಸ್ಲಾಮಿಕ್ ಅಘಾಜ್ ಎಂಬ ಸಂಘಟನೆಯಿಂದ ಬೆದರಿಕೆ ಪತ್ರ ಬಂದಿದೆ.

    ಮೇ 20ರಂದು ಸುಪ್ರೀಂ ಕೋರ್ಟ್ ಜ್ಞಾನವಾಪಿ ಪ್ರಕರಣವನ್ನು ಸಿವಿಲ್ ನ್ಯಾಯಾಲಯದಿಂದ ವಾರಣಾಸಿಯ ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾಯಿಸಿತ್ತು. ಈ ಹಿನ್ನೆಲೆಯಲ್ಲಿ ವಾರಣಾಸಿ ಜಿಲ್ಲಾ ನ್ಯಾಯಾಧೀಶರು ಜ್ಞಾನವ್ಯಾಪಿ ಮಸೀದಿಗೆ ಸಂಬಂಧಿಸಿ ಸಮೀಕ್ಷೆಯನ್ನು ಮಾಡಲು ಆಯೋಗವನ್ನು ರಚಿಸಲು ಆದೇಶಿಸಿದ್ದರು. ಈ ಬೆನ್ನಲ್ಲೇ ಸಿವಿಲ್ ನ್ಯಾಯಾಧೀಶರಿಗೆ ಬೆದರಿಕೆ ಕರೆಗಳು ಬಂದಿವೆ. ಈ ಹಿನ್ನೆಲೆಯಲ್ಲಿ ತಕ್ಷಣ ಅವರು ಪೊಲೀಸ್ ಮಹಾನಿರ್ದೇಶಕರು ಮತ್ತು ವಾರಣಾಸಿಯ ಪೊಲೀಸ್ ಆಯುಕ್ತರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಆಂಜನೇಯಸ್ವಾಮಿ ದೇವಾಲಯವನ್ನು ಕೆಡವಿ ವಿಗ್ರಹವನ್ನು ಕಾವೇರಿಗೆ ಎಸೆಯಲಾಗಿತ್ತು – ಶತಮಾನದ ಹಿಂದಿನ ದಾಖಲೆ ಬಿಡುಗಡೆ

    ವಾರಣಾಸಿಯ ಪೊಲೀಸ್ ಕಮಿಷನರ್ ಎ. ಸತೀಶ್ ಗಣೇಶ್ ಈ ಬಗ್ಗೆ ಮಾಹಿತಿ ನೀಡಿ, ನ್ಯಾಯಾಧೀಶರಿಗೆ ಬೆದರಿಕೆ ಪತ್ರಗಳು ಬಂದ ಹಿನ್ನೆಲಯಲ್ಲಿ, ಈ ಬಗ್ಗೆ ತನಿಖೆ ನಡೆಸಲು ಪೊಲೀಸ್ ಉಪ ಆಯುಕ್ತರಿಗೆ ತಿಳಿಸಲಾಗಿದ್ದು, ಹೆಚ್ಚಿನ ಭದ್ರತೆಯನ್ನು ನಿಯೋಜಿಸಲಾಗಿದೆ.

    ವಾರಣಾಸಿಯ ಸಿವಿಲ್ ನ್ಯಾಯಾಧೀಶರು ಮತ್ತು ಲಕ್ನೋದಲ್ಲಿರುವ ಅವರ ತಾಯಿಯ ಭದ್ರತೆಯನ್ನು ಮೇ 13 ರಿಂದಲೇ ಭದ್ರತೆಯನ್ನು ನೀಡಲಾಗಿತ್ತು. ಇದೀಗ ಜಿಲ್ಲಾ ನ್ಯಾಯಾಧೀಶರಿಗೆ ಸೂಕ್ತ ಭದ್ರತೆಯನ್ನು ಒದಗಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ದೆಹಲಿ, ಮುಂಬೈ, ಉತ್ತರ ಪ್ರದೇಶ, ಗುಜರಾತ್‍ಗಳಲ್ಲಿ ಆತ್ಮಾಹುತಿ ದಾಳಿಯ ಬೆದರಿಕೆ ಹಾಕಿದ ಅಲ್ ಖೈದಾ

    ಕೈಬರಹದ ಪತ್ರದಲ್ಲಿರುವ ಇಸ್ಲಾಮಿಕ್ ಅಗಾಜ್ ಚಳವಳಿಯ ಅಧ್ಯಕ್ಷ ಕಾಸಿಫ್ ಅಹ್ಮದ್ ಸಿದ್ದಾಕಿ ಈ ಪತ್ರವನ್ನು ಬರೆದಿದ್ದಾನೆ. ನ್ಯಾಯಾಧೀಶರು ಕೂಡ ಕೇಸರಿ ಬಣ್ಣದ ಪರವಾಗಿಯೇ ಇದ್ದಾರೆ ಎಂದು ಹೇಳಿ ಜೀವ ಬೆದರಿಕೆಯನ್ನು ಹಾಕಿದ್ದಾನೆ. ಇದರ ಜೊತೆಗೆ ಪತ್ರದಲ್ಲಿ ಪ್ರಧಾನ ಮಂತ್ರಿ ಮತ್ತು ಭಾರತದ ಮಾಜಿ ಮುಖ್ಯ ನ್ಯಾಯಾಧೀಶರ ಬಗ್ಗೆ ಅವಹೇಳನಕಾರಿ ಹೇಳಿಕೆಗಳಿವೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಭದ್ರತೆಯನ್ನು ನೀಡಲಾಗಿದೆ ಎಂದು ತಿಳಿಸಿದರು.

  • 154 ವರ್ಷ ಹಳೆಯ ಫೋಟೋ ಪತ್ತೆ – ಜ್ಞಾನವಾಪಿಯಲ್ಲಿ ಇದೆಯಾ ಹನುಮಂತನ ವಿಗ್ರಹ?

    154 ವರ್ಷ ಹಳೆಯ ಫೋಟೋ ಪತ್ತೆ – ಜ್ಞಾನವಾಪಿಯಲ್ಲಿ ಇದೆಯಾ ಹನುಮಂತನ ವಿಗ್ರಹ?

    ನವದೆಹಲಿ: ಜ್ಞಾನವಾಪಿ ಮಸೀದಿ ಆವರಣದಲ್ಲಿ ಶಿವಲಿಂಗ, ನಂದಿ ವಿಗ್ರಹ ಪತ್ತೆಯಾಗಿ ಇದೀಗ ಭಾರೀ ವಿವಾದ ಎದ್ದಿದ್ದು, ಪ್ರಕರಣದ ನಡುವೆಯೇ ಹೊಸ ಬೆಳವಣಿಗೆ ನಡೆದಿದೆ. 154 ವರ್ಷ ಹಳೆಯ ಪೋಟೋವೊಂದು ಪತ್ತೆಯಾಗಿದ್ದು ಅದನ್ನು ಜ್ಞಾನವಾಪಿ ಮಸೀದಿಯ ಸಂಕೀರ್ಣದ್ದು ಎನ್ನಲಾಗುತ್ತಿದೆ. ಇದೀಗ ಅಲ್ಲಿ ಹನುಮಂತನ ವಿಗ್ರಹವೂ ಇದ್ದ ಬಗ್ಗೆ ಶಂಕೆ ವ್ಯಕ್ತವಾಗಿದೆ.

    1868ರಲ್ಲಿ ಬ್ರಿಟಿಷ್ ಛಾಯಾಗ್ರಾಹಕ ಸ್ಯಾಮುಯೆಲ್ ಬೌರ್ನ್ ಸರೆಹಿಡಿದಿರುವ ಪೋಟೋವನ್ನು ಖಾಸಗಿ ಸುದ್ದಿವಾಹಿನಿಯೊಂದು ಪತ್ತೆಹಚ್ಚಿದ್ದು, ಇದು ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿರುವ ಗೋಡೆಯ ಭಾಗ ಎಂದು ತಿಳಿಸಿದೆ. ಈ ಚಿತ್ರವನ್ನು ಅಮೆರಿಕದ ಹೂಸ್ಟನ್‌ನಲ್ಲಿರುವ ದ ಮ್ಯೂಸಿಯಂ ಆಫ್ ಫೈನ್ ಆರ್ಟ್ಸ್‌ನಲ್ಲಿ ಸಂರಕ್ಷಿಸಲಾಗಿದೆ. ಇದನ್ನೂ ಓದಿ: ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು – ಭಾರತದಿಂದ ಅಗತ್ಯ ವಸ್ತುಗಳ ಪೂರೈಕೆ

    ಜ್ಞಾನವಾಪಿ ಮಸೀದಿಯ ಸಂಕೀರ್ಣ ಹಿಂದೆ ಹೇಗಿತ್ತು ಎಂಬುದು ಫೋಟೋದಲ್ಲಿ ಸ್ಪಷ್ಟವಾಗಿ ಕಾಣಿಸುತ್ತಿದ್ದು, ಅದರಲ್ಲಿ ನಂದಿ, ಹನುಮಂತನ ವಿಗ್ರಹ, ಕಂಬಗಳ ಮೇಲೆ ಹಿಂದೂ ಕಲಾಕೃತಿ ಹಾಗೂ ಗಂಟೆಗಳನ್ನೂ ನೋಡಬಹುದು. ಇದನ್ನೂ ಓದಿ: ದೆಹಲಿಯಲ್ಲಿ ಭಾರೀ ಮಳೆ- 19 ವಿಮಾನಗಳ ಮಾರ್ಗ ಬದಲಾವಣೆ

    ಜ್ಞಾನವಾಪಿ ಮಸೀದಿ ಆವರಣದಲ್ಲಿ ಹಿಂದೂ ಚಿಹ್ನೆಗಳು, ದೇವತೆಗಳ ವಿಗ್ರಹಗಳಿವೆ ಎಂಬ ಹಿಂದೂ ಸಮುದಾಯದವರ ಹೇಳಿಕೆಗೆ ಈ ಚಿತ್ರಗಳು ಮತ್ತಷ್ಟು ಬಲ ನೀಡುತ್ತಿವೆ. ಆದರೆ ಈ ಫೋಟೋ ನಿಜವಾಗಿಯೂ ಜ್ಞಾನವಾಪಿಯದ್ದೇ ಎಂಬುದು ಇನ್ನೂ ದೃಢವಾಗಿಲ್ಲ.

    ಇದೀಗ ವಾರಣಾಸಿ ಜಿಲ್ಲಾ ನ್ಯಾಯಾಲಯದಲ್ಲಿ ಜ್ಞಾನವಾಪಿ ಮಸೀದಿ ವಿಚಾರಣೆ ನಡೆಯಲಿದೆ. ಇತ್ತೀಚೆಗೆ ಮಸೀದಿಯಲ್ಲಿ ಇನ್ನೊಂದು ಶಿವಲಿಂಗ ಇರುವ ಬಗ್ಗೆಯೂ ಶಂಕೆ ವ್ಯಕ್ತವಾಗಿದೆ.

  • ಜ್ಞಾನವಾಪಿ ಕೇಸ್ ವಾರಣಾಸಿ ಕೋರ್ಟ್‍ಗೆ ವರ್ಗಾವಣೆ – ವಾದ, ಪ್ರತಿವಾದ ಹೇಗಿತ್ತು?

    ಜ್ಞಾನವಾಪಿ ಕೇಸ್ ವಾರಣಾಸಿ ಕೋರ್ಟ್‍ಗೆ ವರ್ಗಾವಣೆ – ವಾದ, ಪ್ರತಿವಾದ ಹೇಗಿತ್ತು?

    ನವದೆಹಲಿ: ಜ್ಞಾನವಾಪಿ ಮಸೀದಿ ವಿಚಾರಣೆ ತಡೆ ನೀಡಲು ನಿರಾಕರಿಸಿರುವ ಸುಪ್ರೀಂಕೋರ್ಟ್ ಇಂದು ವಾರಣಾಸಿ ಜಿಲ್ಲಾ ನ್ಯಾಯಾಲಯಕ್ಕೆ ಪ್ರಕರಣವನ್ನು ವರ್ಗಾಯಿಸಿದೆ.

    ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿರುವ ಪ್ರಕರಣ ಈಗ ಮತ್ತೊಂದು ಸ್ವರೂಪ ಪಡೆದುಕೊಂಡಿದೆ. ವಾರಣಾಸಿ ಸಿವಿಲ್ ಕೋರ್ಟ್‍ನಲ್ಲಿದ್ದ ಇಡೀ ಪ್ರಕರಣವನ್ನು ಇಂದು ಸುಪ್ರೀಂಕೋರ್ಟ್ ವಾರಣಾಸಿ ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾಯಿಸಿದೆ. ಸಿವಿಲ್ ಕೋರ್ಟ್ ನೀಡಿದ ಸರ್ವೆ ಕಾರ್ಯಕ್ಕೆ ತಡೆ ನೀಡಬೇಕು ಎಂದು ಅಂಜುಮನ್ ಇಂತೇಜಾಮಿಯ ಸಮಿತಿ ಹಾಗೂ ಪತ್ತೆಯಾಗಿರುವ ಶಿವಲಿಂಗ ಪೂಜೆಗೆ ಅವಕಾಶ ನೀಡಬೇಕು ಎಂದು ಹಿಂದೂ ಸಂಘಟನೆಗಳು ಸಲ್ಲಿಸಿದ್ದ ಅರ್ಜಿಗಳನ್ನು ಇಂದು ಸುಪ್ರೀಂಕೋರ್ಟ್ ವಿಚಾರಣೆ ನಡೆಸಿತು. ಇದನ್ನೂ ಓದಿ: 1 ವರ್ಷ ಜೈಲು ಶಿಕ್ಷೆ – ನ್ಯಾಯಾಲಯಕ್ಕೆ ಶರಣಾದ ಸಿಧು

    ವಿಚಾರಣೆ ವೇಳೆ ವಾದ ಮಂಡಿಸಿದ ಹಿಂದೂ ಪರ ವಕೀಲರು, ಜ್ಞಾನವಾಪಿ ಮಸೀದಿಯಲ್ಲಿ ಈಗಾಗಲೇ ಸರ್ವೇ ಕಾರ್ಯ ಮಾಡಿ ಮುಗಿಸಲಾಗಿದೆ. ಹೀಗಾಗಿ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿ ಅನುರ್ಜಿತವಾಗಿದೆ. ಈ ಅರ್ಜಿಯನ್ನು ವಿಚಾರಣೆ ನಡೆಸಬಾರದು ಎಂದು ಮನವಿ ಮಾಡಿದರು. ಇದೇ ವೇಳೆ ಪತ್ತೆಯಾಗಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಕೋರಿದರು. ಇದನ್ನೂ ಓದಿ: ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿರುವುದು ಹೆಮ್ಮೆ ಎನಿಸಿತು: ನಿಖತ್ ಜರೀನ್

    ಪ್ರತಿವಾದ ಸಲ್ಲಿಸಿದ ಮಸೀದಿ ಪರ ವಕೀಲರು, ಇಂತಹ ಅರ್ಜಿಗಳಿಗೆ ಮಹತ್ವ ನೀಡಬಾರದು. ಇಂತಹ ಅರ್ಜಿಗಳನ್ನು ಅನುಮತಿಸಿದರೆ ನಾಳೆ ಇನ್ನೊಂದು ಮಸೀದಿಯು ದೇವಾಲಯವಾಗಿದೆ ಎಂದು ಹೇಳುತ್ತಾರೆ. ಇದು ಈ ನೆಲದ ಮೇಲೆ ಅಗಾಧವಾದ ಪರಿಣಾಮ ಬೀರಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ಇದಲ್ಲದೇ ಮಸೀದಿಯಲ್ಲಿ ವಜುಖಾನ ಸೀಲ್ ಮಾಡಿದ್ದು ಪ್ರಾರ್ಥನೆ ಸಲ್ಲಿಸಲು ತೊಡಕಾಗಿದೆ, ಹೀಗಾಗಿ ಸರ್ವೇ ಕಾರ್ಯಗಳಿಗೆ ತಡೆ ನೀಡಿ ಮೊದಲಿನಂತೆ ಪೂರ್ಣ ಪ್ರಮಾಣದಲ್ಲಿ ಪ್ರಾರ್ಥನೆ ಸಲ್ಲಿಸಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ರಾಜ್ಯದ ಮೂರು ಜಿಲ್ಲೆಗಳ ಅದಿರು ರಫ್ತಿಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್

    ವಾದ, ಪ್ರತಿವಾದ ಆಲಿಸಿದ ಪೀಠ, ಜಿಲ್ಲಾ ನ್ಯಾಯಾಲಯಕ್ಕೆ ಪ್ರಕರಣವನ್ನು ವರ್ಗಾಯಿಸುವ ನಿರ್ಧಾರಕ್ಕೆ ಬಂತು. ವಾರಣಾಸಿ ಜಿಲ್ಲಾ ನ್ಯಾಯಾಲಯ ವಿಚಾರಣೆ ನಡೆಸಬೇಕು. ಹಿರಿಯ ನ್ಯಾಯಾಧೀಶರು ವಿಚಾರಣೆ ಆಲಿಸಬೇಕು ಎಂದು ಸೂಚಿಸಿದ ಪೀಠ, ಶಿವಲಿಂಗ ರಕ್ಷಣೆ ಮತ್ತು ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡುವ ಮೇ. 17ರ ಆದೇಶವನ್ನು ಮುಂದಿನ ಎಂಟು ವಾರಗಳ ವರೆಗೂ ಮುಂದುವರಿಸಬೇಕು ಎಂದು ಆದೇಶ ನೀಡಿತು.

    ಜಿಲ್ಲಾಡಳಿತ ಮೇಲೆ ಸುಪ್ರೀಂ ಗರಂ:
    ವಿಚಾರಣೆ ವೇಳೆ ಸರ್ವೇ ಅಧಿಕಾರಿಗಳ ವಿರುದ್ಧವೂ ಸುಪ್ರೀಂಕೋರ್ಟ್ ಆಕ್ರೋಶ ವ್ಯಕ್ತಪಡಿಸಿತು. ಸರ್ವೇ ನಡೆಸಿದ ಕೆಲವು ಅಂಶಗಳನ್ನು ಉದ್ದೇಶಪೂರ್ವಕವಾಗಿ ಲೀಕ್ ಮಾಡುವುದು ಸರಿಯಲ್ಲ. ಮುಂದೆ ಹೀಗೆ ಆಗಬಾರದು. ಸರ್ವೇ ವರದಿ ಮುಚ್ಚಿದ ಲಕೋಟೆಯಲ್ಲಿ ನೇರವಾಗಿ ಮೊದಲು ಕೋರ್ಟ್‍ಗೆ ಸಲ್ಲಿಕೆಯಾಗಬೇಕು ಎಂದು ಸೂಚಿಸಿತು.

    ಇಷ್ಟು ದಿನ ಸಿವಿಲ್ ಕೋರ್ಟ್ ನಲ್ಲಿದ್ದ ಜ್ಞಾನವಾಪಿ ಮಸೀದಿ ಪ್ರಕರಣ ಈಗ ಜಿಲ್ಲಾ ನ್ಯಾಯಾಲಯ ಪ್ರವೇಶಿಸಿದ್ದು ಮುಂದೆ ಹೈಕೋರ್ಟ್‍ಗೂ ಎಂಟ್ರಿಯಾಗುವ ಸಾಧ್ಯತೆ ಹೆಚ್ಚಿದೆ.

  • ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ, ನಂದಿ ವಿಗ್ರಹ ಪತ್ತೆ

    ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ, ನಂದಿ ವಿಗ್ರಹ ಪತ್ತೆ

    ಲಕ್ನೋ: ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಸರ್ವೇ ಕಾರ್ಯದ ವೇಳೆ ಶಿವಲಿಂಗ ಪತ್ತೆಯಾಗಿರುವುದಾಗಿ ವರದಿಯಾಗಿದೆ. ಮಸೀದಿಯ ಬಾವಿಯೊಳಗೆ ಪತ್ತೆಯಾದ ಶಿವಲಿಂಗ 12 ಅಡಿ, 8 ಇಂಚು ವ್ಯಾಸ ಹೊಂದಿದೆ ಎಂದು ಹಿಂದೂ ಪರ ವಕೀಲ ವಿಷ್ಣು ಜೈನ್ ತಿಳಿಸಿದ್ದಾರೆ.

    ಇತ್ತೀಚೆಗೆ ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿ ಬಗ್ಗೆ ದೇಶದ ಜನರ ಗಮನ ಸೆಳೆದಿತ್ತು. ಈ ಹಿನ್ನೆಲೆಯಲ್ಲಿ ಅಲ್ಲಿ ಸರ್ವೇ ಕಾರ್ಯ ಪ್ರಾರಂಭವಾಗಿತ್ತು. ಈ ವರೆಗೆ ಮಸೀದಿಯಲ್ಲಿ ಶೇ.65 ರಷ್ಟು ಸರ್ವೇ ಕಾರ್ಯ ಮುಗಿದಿದೆ. ಮಂಗಳವಾರ ನ್ಯಾಯಾಲಯಕ್ಕೆ ಸರ್ವೇ ರಿಪೋರ್ಟ್ ಸಲ್ಲಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅಲ್ಪಸಂಖ್ಯಾತರ ಮೀಸಲಾತಿ ನಿಲ್ಲಿಸುತ್ತೇವೆ – ತೆಲಂಗಾಣ ಸರ್ಕಾರದ ವಿರುದ್ಧ ಶಾ ಗುಡುಗು

    ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿರುವ ಬಗ್ಗೆ ವರದಿಗಳು ತಿಳಿಸಿದ್ದು, ಮಸೀದಿಯ ವೀಡಿಯೋ ಚಿತ್ರೀಕರಣ ಸಂಪೂರ್ಣಗೊಂಡಿದೆ. ಮಸೀದಿಯಲ್ಲಿ ಇದ್ದ ನಂದಿಯ ಎದುರಿನ ಬಾವಿಯಲ್ಲಿ ಪುರಾತನ ಶಿವಲಿಂಗ ಪತ್ತೆಯಾಗಿದೆ ಎಂದು ವಿಷ್ಣು ಜೈನ್ ತಿಳಿಸಿದ್ದಾರೆ. ಇದನ್ನೂ ಓದಿ: 18ನೇ ಶತಮಾನದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ ಹಿಂದೂಗೆ ಸಂತನ ಪಟ್ಟ!

    ಜನರು ಆ ಸ್ಥಳದ ಬಳಿ ಹೋಗದಂತೆ ತಡೆಯಲು ಆ ಜಾಗವನ್ನು ಸೀಲ್ ಮಾಡಿ ಎಂದು ವಾರಣಾಸಿ ಕೋರ್ಟ್‌ ಆದೇಶಿಸಿದ ಹಿನ್ನೆಲೆಯಲ್ಲಿ ಪೊಲೀಸರು ಜಾಗದಲ್ಲಿ ಬಿಗಿ ಭದ್ರತೆ ಕೈಗೊಂಡಿದ್ದಾರೆ.

    ಏನಿದು ಪ್ರಕರಣ?
    ಜ್ಞಾನವಾಪಿ ಮಸೀದಿ ಹೊರ ಗೋಡೆಗೆ ತಾಗಿಕೊಂಡೇ ಇರುವ ಶೃಂಗಾರ ಗೌರಿ, ಗಣೇಶ, ಹನುಮಾನ್ ಮತ್ತು ನಂದಿ ವಿಗ್ರಹಗಳಿಗೆ ಪೂಜೆ ನರೆವೇರಿಸುವುದಕ್ಕೆ ಅವಕಾಶ ನೀಡಬೇಕು ಎಂದು ಕೋರಿ ದೆಹಲಿ ಮೂಲದ ರಾಖಿ ಸಿಂಗ್, ಲಕ್ಷ್ಮಿ ದೇವಿ, ಸೀತಾ ಸಾಹು ಮತ್ತು ಇತರರು 2021ರ ಏಪ್ರಿಲ್ 21ರಂದು ವಾರಣಾಸಿಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇಲ್ಲಿ ಇರುವ ದೇವತಾ ವಿಗ್ರಹಗಳಿಗೆ ಯಾವುದೇ ಹಾನಿ ಉಂಟುಮಾಡದಂತೆ ಸೂಚಿಸಬೇಕು ಎಂದು ಕೋರಿದ್ದರು.

    ಈ ವಿಚಾರವಾಗಿ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಈದ್ ಹಬ್ಬದ ನಂತರ ಮತ್ತು ಮೇ 10 ರೊಳಗೆ ಕಾಶಿ ವಿಶ್ವನಾಥ ಮಂದಿರ- ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ವೀಡಿಯೋ ಚಿತ್ರೀಕರಣ ನಡೆಸುವಂತೆ ಏಪ್ರಿಲ್ 26ರಂದು ಆದೇಶಿಸಿತ್ತು. ವೀಡಿಯೋ ಚಿತ್ರೀಕರಣದ ವೇಳೆ ಅಡ್ವೋಕೇಟ್ ಕಮಿಷನರ್, ಎರಡೂ ಕಡೆಯ ಕಕ್ಷೀದಾರರು ಮತ್ತು ಒಬ್ಬ ಸಹಾಯಕ ಮಾತ್ರ ಇರಬಹುದು ಎಂದು ತಿಳಿಸಲಾಗಿತ್ತು. ಇದರಂತೆ ಮೇ 6 ಮತು 7 ರಂದು ವೀಡಿಯೋ ಚಿತ್ರೀಕರಣ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ವೀಡಿಯೋ ಚಿತ್ರೀಕರಣ ಮತ್ತು ಸಮೀಕ್ಷೆ ನಡೆಸಲು ಜ್ಞಾನವಾಪಿ ಮಸೀದಿ ಆಡಳಿತ ಮಂಡಳಿ ಅವಕಾಶ ನೀಡಿರಲಿಲ್ಲ. ವೀಡಿಯೋ ಶೂಟಿಂಗ್‌ ವೇಳೆ ಹೈಡ್ರಾಮಾ ನಡೆದಿತ್ತು. ಬಳಿಕ ಕೋರ್ಟ್ ಮೇ 17ರ ಒಳಗಡೆ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿತ್ತು.