Tag: gym ravi

  • ಬೆಂಗಳೂರಿನಲ್ಲೊಂದು ನೋ ಬಿಲ್ ಹೋಟೆಲ್ – ಹೊಟ್ಟೆತುಂಬಾ ತಿನ್ನಿ, ಇಷ್ಟ ಆದರೆ ಹುಂಡಿಗೆ ಹಣ ಹಾಕಿ

    ಬೆಂಗಳೂರಿನಲ್ಲೊಂದು ನೋ ಬಿಲ್ ಹೋಟೆಲ್ – ಹೊಟ್ಟೆತುಂಬಾ ತಿನ್ನಿ, ಇಷ್ಟ ಆದರೆ ಹುಂಡಿಗೆ ಹಣ ಹಾಕಿ

    ಬೆಂಗಳೂರು: ಇಂದಿನ ದುಬಾರಿ ದುನಿಯಾದಲ್ಲಿ ದುಡ್ಡಿಲ್ಲದೆ ಊಟ ಸಿಗುವುದಿಲ್ಲ. ಅದರಲ್ಲೂ ಹೋಟೆಲ್ (Hotel) ಊಟದ ದರ ದುಬಾರಿಯಾಗಿದೆ. ಇದರ ನಡುವೆ ಬೆಂಗಳೂರಿನಲ್ಲಿ (Bengaluru) ನೋ ಬಿಲ್ (No Bill) ಹೋಟೆಲ್‌ವೊಂದು ಆರಂಭವಾಗಿದೆ.

    ಬೆಂಗಳೂರಿನಲ್ಲಿ ಸಾವಿರಾರು ಮಂದಿ ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಾರೆ. ಅನ್ನದಾನ ಶ್ರೇಷ್ಠದಾನ ಎನ್ನುವಂತೆ ಅನೇಕ ಜನ ನಾನಾ ರೀತಿಯಲ್ಲಿ ಹೊಟ್ಟೆ ತುಂಬಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಬೆಂಗಳೂರಿನ ನಾಗರಬಾವಿಯಲ್ಲಿ (Nagar Bavi) ವಿಶಿಷ್ಟ ಹೋಟೆಲ್‌ವೊಂದನ್ನು ತೆರೆಯಲಾಗಿದ್ದು, ಇಲ್ಲಿ ಹೊಟ್ಟೆತುಂಬಾ ಊಟ ಮಾಡಿದರೂ ಬಿಲ್ ಪಾವತಿಸುವ ಅಗತ್ಯವಿಲ್ಲ.‌ ಇದನ್ನೂ ಓದಿ: ಹೆಂಡತಿ ಹೆಸರಿನಲ್ಲಿ ಬಿಜೆಪಿ ರಾಜಕಾರಣ ಮಾಡಲ್ಲ: ಕಟೀಲ್

    ನಾಗರಬಾವಿಯ 11ನೇ ಬ್ಲಾಕ್, ಎರಡನೇ ಹಂತದಲ್ಲಿರುವ ‘ನಮ್ಮನೆ ಊಟ’ ಪಕ್ಕದಲ್ಲಿ ‘ಅನ್ನಪೂರ್ಣೇಶ್ವರಿ ಹೋಟೆಲ್’ (Annapoorneshwari Hotel) ತೆರೆಯಲಾಗಿದ್ದು, ನಮಗೆ ಊಟ ತೃಪ್ತಿಯಾಗಿದ್ದರೆ ಅಲ್ಲಿರುವ ಹುಂಡಿಯಲ್ಲಿ ನಮ್ಮ ಕೈಯಲ್ಲಿ ಸಾಧ್ಯವಾದಷ್ಟು ಹಣವನ್ನು ಹಾಕಬಹುದಾಗಿದೆ. ಹಣ ಹಾಕಲೇಬೇಕೆಂಬ ಷರತ್ತಿಲ್ಲ. ಈ ಹೋಟೆಲ್ ಅನ್ನು ಬಿಗ್ ಬಾಸ್ (Bigg Boss) ಖ್ಯಾತಿಯ ಜಿಮ್ ರವಿ (Gym Ravi) ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಎಲ್ಲಾ ಸೆಲೆಬ್ರಿಟಿಗಳನ್ನು ಈ ಹೋಟೆಲ್‌ಗೆ ಕರೆಯುತ್ತೇವೆ ಎಂದರು. ಇದನ್ನೂ ಓದಿ: ‘ಆಸ್ಕರ್’ ಪ್ರಶಸ್ತಿಗಾಗಿ 80 ಕೋಟಿ ಖರ್ಚು ಮಾಡಿದ ರಾಜಮೌಳಿ : ತೆಲುಗು ನಿರ್ದೇಶಕ ಕಿಡಿಕಿಡಿ

    ಡಿ.ಹೆಚ್.ಕಿರಣ್ ಗೌಡ (D.H.Kiran Gowda) ಹಾಗೂ ಸ್ನೇಹಿತರ ತಂಡ ಸೇರಿಕೊಂಡು ಈ ಹೋಟೆಲನ್ನು ಆರಂಭಿಸಿದ್ದಾರೆ. ಎಷ್ಟು ಬೇಕಾದರೂ ಊಟ ಮಾಡಿ, ತೃಪ್ತಿಯಾದರೆ ಹುಂಡಿಗೆ ಹಣ ಹಾಕಬಹುದು ಎಂಬ ಸಿಂಗಾಪುರದ (Singapore) ರೆಸ್ಟೋರೆಂಟ್‌ನಿಂದ ಸ್ಪೂರ್ತಿಯನ್ನು ಪಡೆದು ಈ ಹೋಟೆಲನ್ನು ತೆರೆಯಲಾಗಿದೆ.

    ಇಲ್ಲಿ ಪ್ರತಿನಿತ್ಯ ನಾಟಿ ಸ್ಟೈಲ್ ಮುದ್ದೆ, ವೆಜ್ ಊಟವನ್ನು ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಉಣಬಡಿಸಲಾಗುತ್ತದೆ. ನಾಟಿ ಸ್ಟೈಲ್ ಮುದ್ದೆ, ಚಪಾತಿ, ಪಲ್ಯ, ಸಾರು, ಅನ್ನ, ಸ್ವೀಟ್ ಈ ಹೋಟೆಲಿನ ಮೆನು. ಊಟದ ನಂತರ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಇಲ್ಲಿ ಪ್ರತಿದಿನ ನೂರಾರು ಕೂಲಿ ಕಾರ್ಮಿಕರು, ಬಡವರು ಊಟ ಮಾಡುತ್ತಿದ್ದಾರೆ. ಈ ರೀತಿಯ ಹೋಟೆಲ್‌ಗಳನ್ನು ನಾನಾ ಕಡೆ ತೆರೆಯುವ ಪ್ಲಾನ್ ಇದೆ ಎಂದು ಹೋಟೆಲ್ ಮಾಲಿಕ ಕಿರಣ್ ಗೌಡ ತಿಳಿಸಿದ್ದಾರೆ. ಇವರ ಈ ಉತ್ತಮ ಕಾರ್ಯಕ್ಕೆ ಅನೇಕ ಜನ ಸ್ವಯಂಪ್ರೇರಿತರಾಗಿ ಸಹಾಯ ಹಸ್ತ ಚಾಚುತ್ತಿದ್ದಾರೆ. ಇದನ್ನೂ ಓದಿ: Exclusive- ವೀಕೆಂಡ್ ವಿತ್ ರಮೇಶ್ 5 : ಮೊದಲ ಅತಿಥಿ ರಿಷಬ್ ಶೆಟ್ಟಿ ಅಲ್ಲ, ಖ್ಯಾತ ಡಾನ್ಸರ್

  • ಯಾರೋ ಸತ್ತರೆ ಸರ್ಕಾರ ರಜೆ ಕೊಡುತ್ತಿತ್ತು, ಈಗ ನಾವು ಬದುಕಲಿ ಅಂತ ರಜೆ ಕೊಟ್ಟಿದ್ದಾರೆ: ಜಿಮ್ ರವಿ

    ಯಾರೋ ಸತ್ತರೆ ಸರ್ಕಾರ ರಜೆ ಕೊಡುತ್ತಿತ್ತು, ಈಗ ನಾವು ಬದುಕಲಿ ಅಂತ ರಜೆ ಕೊಟ್ಟಿದ್ದಾರೆ: ಜಿಮ್ ರವಿ

    ಬೆಂಗಳೂರು: ಕೊರೊನ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸಲೆಬ್ರಿಟಿಗಳು ಜನರಲ್ಲಿ ಜಾಗೃತಿಯನ್ನು ಮೂಡಿಸುತ್ತಿದ್ದಾರೆ. ತಮ್ಮವರನ್ನ ಕಳೆದುಕೊಂಡು ಅನೇಕರು ಕಷ್ಟ ಪಡುತ್ತಿದ್ದಾರೆ. ನಟ ಜಿಮ್ ರವಿ ತನ್ನ ಸ್ನೇಹಿತರೊಬ್ಬರು ನಿಧಿನರಾಗಿದ್ದರು. ಈ ವೇಳೆ ರುದ್ರಭೂಮಿಗೆಯಲ್ಲಿ ರವಿ ತಮ್ಮ ದುಃಖವನ್ನು ತೋಡಿಕೊಂಡಿದ್ದಾರೆ.

    ಮೃತರ ಅಂತ್ಯಕ್ರಿಯೆಗಾಗಿ ಕುಟುಂಬದವರು ಸಾಲುಗಟ್ಟಿ ನಿಂತಿರುವ ದೃಶ್ಯ ನೋಡಿದರೆ ಮನ ಕಲಕುತ್ತದೆ. ವೀಡಿಯೋದಲ್ಲಿ ರವಿ ಅವರು ಸ್ಮಶಾನದ ಚಿತ್ರಣವನ್ನು ಕಟ್ಟಿಕೊಟ್ಟಿದ್ದಾರೆ. ನೂರಾರು ಶವಗಳನ್ನು ಸುಡುತ್ತಿರುವ ದೃಶ್ಯ ಭೀಕರತೆಯನ್ನು ಕಣ್ಣಿಗೆ ಕಟ್ಟುತ್ತದೆ.

    ಸಾವಿರಾರು ಜನರು ಸಾಯುತ್ತಿದ್ದಾರೆ ನೋಡಿ. ಇವತ್ತು ನನ್ನ ಸ್ನೇಹಿತರು ತೀರಿಕೊಂಡರು. ಅವರ ಅಂತ್ಯಕ್ರೀಯೆಗಾಗಿ ನಾನು ಇಲ್ಲಿಗೆ ಬಂದಿದ್ದೇನೆ. ತುಂಬಾ ದುಃಖವಾಗುತ್ತದೆ. ಎಲ್ಲರೂ ಮನೆಯಲ್ಲಿಯೇ ಇರಿ. ಆಗ ನಮಗೆ ಒಳ್ಳೆಯದಾಗುತ್ತದೆ. ತಂದೆ-ತಾಯಿಯನ್ನು ನೀವು ಕಾಪಾಡಿಕೊಳ್ಳಬಹುದು. ಇವತ್ತು ಬೆಂಗಳೂರಿನ ಪರಿಸ್ಥಿತಿ ಹೀಗಾಗಿದೆ. ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಸಾಮಾಜಿ ಅಂತರವನ್ನು ಕಾಪಾಡಿಕೊಳ್ಳಿ ಎಂದಿದ್ದಾರೆ.

    ಇಲ್ಲಿ ಸಾಲು ಸಾಲು ಶವಗಳು ಬರುತ್ತಿವೆ. ಎಲ್ಲರೂ ನಿಮ್ಮ ಕ್ಷೇಮವನ್ನು ಕಾಪಾಡಿಕೊಳ್ಳಿ. ಮಾಸ್ಕ್ ಸ್ಯಾನಿಟೈಸರ್ ಉಪಯೋಗಿಸಿ, ಉಡಾಫೆ ಮಾತುಬೇಡ. ಸರ್ಕಾರ ಯಾರೋ ಸತ್ತರು ಎಂದು ರಜೆ ಕೊಡುತ್ತಿತ್ತು. ಆದರೆ ಈಗ ನಾವು ಬದುಕಲಿ ಅಂತ ರಜೆ ಕೊಟ್ಟಿದ್ದಾರೆ. ಯೋಚನೆ ಮಾಡಿ ನಮ್ಮ ಪ್ರಾಣ ನಮ್ಮ ಕೈಯಲ್ಲಿದೆ ಎಂದು ಜಿಮ್ ರವಿ ಎಚ್ಚರಿಕೆಯನ್ನು ಹೇಳಿದ್ದಾರೆ.

    ಚಿತ್ರರಂಗದ ಅನೇಕರು ಕೊರೊನಾಗೆ ಬಲಿಯಾಗುತ್ತಿದ್ದಾರೆ. ಕೊರೊನಾ ಕುರಿತಾಗಿ ಹಲವರು ಜಾಗೃತಿ ಮೂಡಿಸುವ ಸಂದೇಶವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.