Tag: H.D.Deve Gowda

  • ರಾಜ್ಯಕ್ಕೆ ನಾಲ್ಕು ಮುಖ್ಯಮಂತ್ರಿಗಳನ್ನು ಕೊಟ್ಟ ರಾಮನಗರ ರಾಜಕೀಯ ಘಟಾನುಘಟಿಗಳ ತವರು

    ರಾಜ್ಯಕ್ಕೆ ನಾಲ್ಕು ಮುಖ್ಯಮಂತ್ರಿಗಳನ್ನು ಕೊಟ್ಟ ರಾಮನಗರ ರಾಜಕೀಯ ಘಟಾನುಘಟಿಗಳ ತವರು

    ರಾಮನಗರ: ರಾಜ್ಯಕ್ಕೆ ನಾಲ್ಕು ಮಂದಿ ಮುಖ್ಯಮಂತ್ರಿಗಳನ್ನು (Chief Minister) ಕೊಟ್ಟ ಹೆಗ್ಗಳಿಕೆಗೆ ರಾಮನಗರ (Ramanagara) ಜಿಲ್ಲೆ ಪಾತ್ರವಾಗಿದೆ. ರಾಜಕೀಯ (Politics) ಘಟನಾವಳಿಗಳ ತವರಾಗಿರುವ ರಾಮನಗರದ ರಾಜಕೀಯ ಇತಿಹಾಸವೇ ರೋಚಕ.

    ರಾಜ್ಯದ ಎರಡನೇ ಮುಖ್ಯಮಂತ್ರಿ ಹಾಗೂ ಮೊದಲ ಚುನಾಯಿತ ಮುಖ್ಯಮಂತ್ರಿ ಎಂದೇ ಹೆಸರುವಾಸಿಯಾಗಿರುವ ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯ (Kengal Hanumanthaiah) ಸ್ಪರ್ಧೆ ಮಾಡಿದ್ದು ಇದೇ ರಾಮನಗರ ಕ್ಷೇತ್ರದಲ್ಲಿ. 1952ರ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಕೆಂಗಲ್ ಹನುಮಂತಯ್ಯ, ಅಂದಿನ ಮೈಸೂರು (Mysuru) ಸರ್ಕಾರದ ಮುಖ್ಯಮಂತ್ರಿಯಾಗಿದ್ದರು. ಮೂಲತಃ ರಾಮನಗರ ತಾಲೂಕಿನ ಲಕ್ಕಪ್ಪನಹಳ್ಳಿಯಲ್ಲಿ ಜನಿಸಿದ್ದ ಕೆಂಗಲ್ ಹನುಮಂತಯ್ಯ ಸ್ವಾತಂತ್ರ‍್ಯ ಹೋರಾಟದಲ್ಲಿಯೂ ಭಾಗಿಯಾಗಿದ್ದರು. 1952ರಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ದಕ್ಷ ಆಡಳಿತವನ್ನು ನೀಡಿದ್ದರು. ಇದನ್ನೂ ಓದಿ: ಜಾತಿ ಬಲ ಇಲ್ಲದಿದ್ದರೂ, ಅಭಿವೃದ್ಧಿ ನಂಬಿ ಗೆದ್ದು ಸಚಿವರಾದ ಬಿ.ಸಿ. ನಾಗೇಶ್ 

    1983ರಲ್ಲಿ ರಾಮಕೃಷ್ಣ ಹೆಗಡೆ (Ramakrishna Hegde) ಅವರು ಮುಖ್ಯಮಂತ್ರಿಯಾಗಿದ್ದರು. ಆದರೆ ಅವರು ಶಾಸಕರಾಗಿರಲಿಲ್ಲ. ಹೀಗಾಗಿ ಕನಕಪುರ (Kanakapura) ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದರು. ಇದನ್ನೂ ಓದಿ: ಬಿಜೆಪಿ ಮಾಜಿ ಸಂಸದ ಮಂಜುನಾಥ್ ಕುನ್ನೂರು, ಪುತ್ರ ಶೀಘ್ರವೇ ಕಾಂಗ್ರೆಸ್‌ಗೆ ಸೇರ್ಪಡೆ 

    1994ರಲ್ಲಿ ರಾಮನಗರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಹೆಚ್.ಡಿ ದೇವೇಗೌಡರು (H.D.Deve Gowda) ಸಿಎಂ ಸ್ಥಾನ ಅಲಂಕರಿಸಿದ್ದರು. ಬಳಿಕ 1996ರಲ್ಲಿ ವಿಧಾನಸಭೆಗೆ ರಾಜಿನಾಮೆ ನೀಡಿ ಪ್ರಧಾನಿ ಹುದ್ದೆಗೇರಿದರು. ಆಗ ಅವರ ರಾಜೀನಾಮೆಯಿಂದ ತೆರವಾಗಿದ್ದ ರಾಮನಗರ ವಿಧಾನಸಭೆ ಚುನಾವಣೆಗೆ ಅಂಬರೀಶ್ (Ambareesh) ಸ್ಪರ್ಧಿಸಿದ್ದರು. ಆದರೆ ಕಾಂಗ್ರೆಸ್‌ನ (Congress) ಸಿ.ಎಂ.ಲಿಂಗಪ್ಪ ಅವರ ಎದುರು ಅಂಬರೀಶ್ ಸೋಲುಂಡಿದ್ದರು. ಇದನ್ನೂ ಓದಿ: ದೇವರು ಮಗಳ ರೂಪದಲ್ಲಿ ಉಡುಗೊರೆ ಕಳುಹಿಸಿದ್ದಾರೆ – ಮೊದಲ ಮಗುವನ್ನು ಸ್ವಾಗತಿಸಿದ ತೇಜಸ್ವಿ ಯಾದವ್ 

    2004ರಲ್ಲಿ ರಾಮನಗರದಿಂದ ಪ್ರಪ್ರಥಮ ಬಾರಿಗೆ ಶಾಸಕರಾಗಿ ಆಯ್ಕೆಯಾಗಿ ಹೆಚ್.ಡಿ ಕುಮಾರಸ್ವಾಮಿ (H.D.Kumaraswamy) ಮುಖ್ಯಮಂತ್ರಿಯಾಗಿ 20 ತಿಂಗಳ ಅಧಿಕಾರ ನಡೆಸಿ ಮನೆಮಾತಾಗಿದ್ದರು. ನಂತರ 2018ರ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ, ಚನ್ನಪಟ್ಟಣ ಕ್ಷೇತ್ರಗಳಿಂದ ಸ್ಪರ್ಧಿಸಿದ್ದ ಹೆಚ್.ಡಿ ಕುಮಾರಸ್ವಾಮಿ ಮತ್ತೊಮ್ಮೆ ರಾಜ್ಯದ ಚುಕ್ಕಾಣಿ ಹಿಡಿದರು. ಅವರು ರಾಮನಗರ ಕ್ಷೇತ್ರ ತೊರೆದು, ಚನ್ನಪಟ್ಟಣ (Channapatna) ಕ್ಷೇತ್ರವನ್ನು ಉಳಿಸಿಕೊಂಡರು. ಇದನ್ನೂ ಓದಿ: ಶಾಸಕ ಸ್ಥಾನಕ್ಕೆ ಗುಬ್ಬಿ ಶ್ರೀನಿವಾಸ್ ಇಂದು ರಾಜೀನಾಮೆ

    ಜಿಲ್ಲೆಯ ನಾಲ್ಕು ತಾಲೂಕುಗಳ ಪೈಕಿ ಮೂರು (ರಾಮನಗರ, ಕನಕಪುರ, ಚನ್ನಪಟ್ಟಣ) ತಾಲೂಕುಗಳಿಗೆ ಮುಖ್ಯಮಂತ್ರಿ ಸ್ಥಾನ ಒಲಿದಿದೆ. ಅದರಲ್ಲೂ ರಾಮನಗರ ಕ್ಷೇತ್ರಕ್ಕೆ ಮೂರು ಬಾರಿ ಸಿಎಂ ಹುದ್ದೆ ದೊರೆತಿದೆ. ಆದರೆ, ಜಿಲ್ಲೆಯಿಂದ ಆಯ್ಕೆಯಾಗಿ ಮುಖ್ಯಮಂತ್ರಿಯಾದ ಯಾವೊಬ್ಬ ನಾಯಕರೂ ತಮ್ಮ ಅಧಿಕಾರವಧಿಯನ್ನು ಪೂರ್ಣಗೊಳಿಸಿಲ್ಲ ಎಂಬುದು ವಿಶೇಷ. ಇದನ್ನೂ ಓದಿ: ಯುಪಿ ಪೊಲೀಸರಿಂದ ಹತ್ಯೆಯಾಗುವ ಭಯವಿದೆ – ಬಂಧನದಲ್ಲಿರುವ ಮಾಜಿ ಸಂಸದ ಅತಿಕ್ ಅಹಮ್ಮದ್

  • ಮೈಸೂರಿನ ಸಮಾರಂಭದಲ್ಲಿ ಪಾಲ್ಗೊಳ್ಳಲು ಹೊರಟಾಗ ದೊಡ್ಡಗೌಡ್ರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಪತ್ನಿ

    ಮೈಸೂರಿನ ಸಮಾರಂಭದಲ್ಲಿ ಪಾಲ್ಗೊಳ್ಳಲು ಹೊರಟಾಗ ದೊಡ್ಡಗೌಡ್ರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಪತ್ನಿ

    ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ ನಡೆಸಿದ 90 ದಿನಗಳ ಪಂಚರತ್ನ ಯಾತ್ರೆಗೆ ಇಂದು (ಮಾ.26) ಮೈಸೂರಿನಲ್ಲಿ ತೆರೆ ಬೀಳಲಿದೆ. ಪಂಚರತ್ನ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸಿಲು ಮನೆಯಿಂದ ಹೊರಟಿದ್ದ ಹೆಚ್.ಡಿ.ದೇವೇಗೌಡರ ಕಾಲಿಗೆ ನಮಸ್ಕರಿಸಿ ಪತ್ನಿ ಚೆನ್ನಮ್ಮ ದೇವೇಗೌಡರು ಒಳ್ಳೆಯದಾಗಲಿ ಎಂದು ಶುಭಕೋರಿದರು.

    ಮೈಸೂರಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಭಾಗವಹಿಸಲು ಹೆಚ್.ಡಿ.ದೇವೇಗೌಡರು ಕಾರಿ ಹತ್ತಿದರು. ಈ ವೇಳೆ ಪತಿಯನ್ನು ಎದುರುಗೊಂಡ ಚೆನ್ನಮ್ಮ ದೇವೇಗೌಡ ಅವರು ಪತಿ ಕಾಲಿಗೆ ನಮಸ್ಕರಿಸಿದರು. ಸಮಾರಂಭ ಯಶಸ್ವಿಯಾಗಲಿ ಎಂದು ಇದೇ ವೇಳೆ ಹರಸಿದರು. ಎದುರು ನೆರೆದಿದ್ದವರು ಈ ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾದರು. ಇದನ್ನೂ ಓದಿ: ಕೆಲಸ ಮಾಡುವವರನ್ನು ಗಮನದಲ್ಲಿಟ್ಟುಕೊಂಡು ಮೊದಲ ಹಂತದ ಟಿಕೆಟ್ ಘೋಷಣೆ – ಡಿ.ಕೆ.ಸುರೇಶ್

    ಚುನಾವಣೆ ಹೊತ್ತಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯವ್ಯಾಪಿ ಸಂಚರಿಸಿ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಪಂಚರತ್ನ ಯಾತ್ರೆ ಮೂಲಕ ರಾಜ್ಯದ 88 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿದ್ದಾರೆ. ನವೆಂಬರ್ 16ರಂದು ಕೋಲಾರದಲ್ಲಿ ಯಾತ್ರೆ ಪ್ರಾರಂಭಗೊಂಡಿತ್ತು. ಯಾತ್ರೆ ಮುಕ್ತಾಯ ಹಂತ ತಲುಪಿದ್ದು, ಇಂದು ಮೈಸೂರಿನ ರಿಂಗ್ ರಸ್ತೆಯಲ್ಲಿ ಬೃಹತ್ ಸಮಾರೂಪ ಸಮಾರಂಭ ಆಯೋಜನೆಗೊಂಡಿದೆ. ಆರೋಗ್ಯ ಚೇತರಿಕೆ ಬಳಿಕ ಇಂದು ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪಾಲ್ಗೊಂಡಿದ್ದಾರೆ.

    ಪಂಚರತ್ನ ಯಾತ್ರೆ ಸಮಾರೋಪ ಸಮಾರಂಭದ ಮೂಲಕ ಮೈಸೂರಿನಲ್ಲಿ ಜೆಡಿಎಸ್ ಶಕ್ತಿ ಪ್ರದರ್ಶನ ಮಾಡಿದೆ. ಮೈಸೂರು ತಾಲ್ಲೂಕು ಉತ್ತನಹಳ್ಳಿ ಗ್ರಾಮದ ಬಳಿ ಸುಮಾರು 100 ಎಕರೆ ಪ್ರದೇಶದಲ್ಲಿ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ. ಮೈಸೂರು, ಮಂಡ್ಯ, ಹಾಸನ, ರಾಮನಗರ, ತುಮಕೂರು, ಚಾಮರಾಜನಗರ ಜಿಲ್ಲೆಗಳಿಂದ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದಾರೆ. ಇದನ್ನೂ ಓದಿ: ರಾಜ್ಯದ 11ನೇ ಮುಖ್ಯಮಂತ್ರಿಯಾಗಿದ್ದ ಗುಂಡೂರಾವ್ ಖಾಸಗಿ ಬಸ್ ಏಜೆಂಟ್ ಆಗಿದ್ರು

    ಸಮಾರಂಭಕ್ಕೂ ಮುನ್ನ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಚಾಮುಂಡಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಹೆಚ್‌ಡಿಕೆಗೆ ಶಾಸಕ ಜಿ.ಟಿ.ದೇವೇಗೌಡ, ಬಂಡೆಪ್ಪ ಕಾಶೆಂಪುರ ಸಾಥ್ ನೀಡದರು.

  • ಚಾಮುಂಡೇಶ್ವರಿ ಉಪ ಚುನಾವಣೆ ನೆನೆದರೆ ಈಗಲೂ ಬೆಚ್ಚುತ್ತಾರೆ ಸಿದ್ದು!

    ಚಾಮುಂಡೇಶ್ವರಿ ಉಪ ಚುನಾವಣೆ ನೆನೆದರೆ ಈಗಲೂ ಬೆಚ್ಚುತ್ತಾರೆ ಸಿದ್ದು!

    ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) 2006ರಲ್ಲಿ ಎದುರಿಸಿದ ಚಾಮುಂಡೇಶ್ವರಿ ಕ್ಷೇತ್ರದ (Chamundeshwari Assembly Constituency) ಉಪ ಚುನಾವಣೆಯನ್ನು (By-election)ಈಗಲೂ ನೆನೆಸಿಕೊಂಡರೆ ಬೆಚ್ಚುತ್ತಾರೆ. `ಸಾಕಪ್ಪ ಸಾಕು’ ಎಂದು ಕೈ ಮುಗಿಯುತ್ತಾರೆ.

    1978 ರಲ್ಲಿ ಮೈಸೂರು ತಾಲೂಕು ಅಭಿವೃದ್ಧಿ ಮಂಡಳಿಯ ಸದಸ್ಯರಾಗಿದ್ದ ಸಿದ್ದರಾಮಯ್ಯ ಅವರು, ನಂತರ ರೈತ ಸಂಘಟನೆಯಲ್ಲಿ ಪ್ರೊ.ಎಂ.ಡಿ. ನಂಜುಂಡಸ್ವಾಮಿ ಅವರೊಂದಿಗೆ ಓಡಾಡಿಕೊಂಡಿದ್ದರು. 1980 ರಲ್ಲಿ ಮೈಸೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. 1978 ರಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಗೆದ್ದಿದ್ದ ಕಾಂಗ್ರೆಸ್ ಡಿ.ಜಯದೇವರಾಜ ಅರಸರ (D.Devaraj Arasu)  ಉಪಟಳ ತಡೆಯಲಾಗದೇ ಅವರನ್ನು ಹೇಗಾದರೂ ಮಾಡಿ ಸೋಲಿಸಲೇಬೇಕೆಂದು ಮಾಜಿ ಶಾಸಕ ಕೆಂಪೀರೇಗೌಡ ಸೇರಿದಂತೆ ಮೈಸೂರು ತಾಲೂಕಿನ ಹಲವು ಮುಖಂಡರು 1983ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರನ್ನು ಪಕ್ಷೇತರ ಅಭ್ಯರ್ಥಿಯನ್ನಾಗಿ ನಿಲ್ಲಿಸಿದ್ದರು. ಆಗ ಸಿದ್ದರಾಮಯ್ಯ ಗೆದ್ದು ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ವಾಹನಗಳ ಪರಿಶೀಲನೆ ಆರಂಭ – ಮೊದಲ ದಿನವೇ 10 ಕೆಜಿ ಬೆಳ್ಳಿ ವಶ

    ಅದೇ ಮೊದಲ ಬಾರಿಗೆ ರಾಜ್ಯದಲ್ಲಿ ರಾಮಕೃಷ್ಣ ಹೆಗಡೆ (Ramakrishna Hegde) ನೇತೃತ್ವದಲ್ಲಿ ಕಾಂಗ್ರೆಸ್ಸೇತರ ಸರ್ಕಾರ ಅಸ್ತಿತ್ವಕ್ಕೆ ಬಂದಿತು. ಆಗ ಬಿಜೆಪಿ ಹಾಗೂ ಪಕ್ಷೇತರರರ ಬೆಂಬಲ ಪಡೆಯಲಾಗಿತ್ತು. ಸಿದ್ದರಾಮಯ್ಯ ಅವರಿಗೆ ಕನ್ನಡ ಕಾವಲು ಸಮಿತಿಯ ಅಧ್ಯಕ್ಷ ಸ್ಥಾನ ನೀಡಲಾಯಿತು. ನಂತರ ಸಚಿವರಾದರು. 1985ರಲ್ಲಿ ಮಧ್ಯಂತರ ಚುನಾವಣೆ ಎದುರಾದಾಗ ಸಿದ್ದರಾಮಯ್ಯ ಜನತ ಪಕ್ಷದ ಅಭ್ಯರ್ಥಿಯಾಗಿ 2ನೇ ಬಾರಿಗೆ ಆಯ್ಕೆಯಾದರು. ಮತ್ತೆ ಸಚಿವರಾದರು. 1989ರಲ್ಲಿ ಜನತಾದಳ ಅಭ್ಯರ್ಥಿಯಾಗಿ ಚಾಮುಂಡೇಶ್ವರಿಯಲ್ಲಿ ಕಾಂಗ್ರೆಸ್‍ನ ಎಂ. ರಾಜಶೇಖರಮೂರ್ತಿ ಅವರೆದುರು ಸೋತರು. 1994ರಲ್ಲಿ ಜನತಾದಳ ಅಭ್ಯರ್ಥಿಯಾಗಿ ಗೆದ್ದರು.

    ದೇವೇಗೌಡರ ಸಂಪುಟದಲ್ಲಿ ಹಣಕಾಸು, ಜೆ.ಎಚ್.ಪಟೇಲರ ಸಂಪುಟದಲ್ಲಿ ಉಪ ಮುಖ್ಯಮಂತ್ರಿಯಾದರು. 1999ರಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಾಂಗ್ರೆಸ್‍ನ ಎ.ಎಸ್. ಗುರುಸ್ವಾಮಿ, ಅವರೆದುರು ಸೋತರು. 2004ರಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಾಂಗ್ರೆಸ್‍ನ ಎಲ್.ರೇವಣಸಿದ್ದಯ್ಯ ಅವರೆದುರು ಜಯ ಗಳಿಸಿದರು. ಆ ವರ್ಷ ಎನ್.ಧರಂಸಿಂಗ್ ನೇತೃತ್ವದ ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಾಗ 2ನೇ ಬಾರಿಗೆ ಉಪ ಮುಖ್ಯಮಂತ್ರಿಯಾದರು.

    ಹುಬ್ಬಳ್ಳಿಯಲ್ಲಿ (Hubballi) ಅಹಿಂದ ಸಮಾವೇಶ ನಡೆಸುವ ಸಂಬಂಧ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ (H.D.Deve Gowda) ಹಾಗೂ ಸಿದ್ದರಾಮಯ್ಯ ನಡುವಿನ ಭಿನ್ನಮತ ತಲೆದೋರಿ, ಕೊನೆಗೆ ಸಿದ್ದರಾಮಯ್ಯ ಅವರ ತಲೆದಂಡವಾಯಿತು. ಡಿಸಿಎಂ ಸ್ಥಾನದಿಂದ ಪದಚ್ಯುತರಾದರು. 2006 ರಲ್ಲಿ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿ, ಕಾಂಗ್ರೆಸ್ (Congress) ಸೇರಿದರು. ಆಗ ಎದುರಾಗಿದ್ದೆ ಚಾಮುಂಡೇಶ್ವರಿ ಉಪ ಚುನಾವಣೆ. ಆ ವೇಳೆಗೆ ರಾಜ್ಯದಲ್ಲಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್- ಬಿಜೆಪಿ ಸಮ್ಮಿಶ್ರ ಸರ್ಕಾರವಿತ್ತು. ಬಿ.ಎಸ್. ಯಡಿಯೂರಪ್ಪ ಉಪ ಮುಖ್ಯಮಂತ್ರಿಯಾಗಿದ್ದರು.

    ಉಪ ಚುನಾವಣೆಯಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ, ಜೆಡಿಎಸ್- ಬಿಜೆಪಿ (BJP) ಜಂಟಿಯಾಗಿ ಶಿವಬಸಪ್ಪ ಎಂಬವರನ್ನು ಕಣಕ್ಕಿಳಿಸಿದರು. ಎಲ್ಲರೂ ಸಿದ್ದರಾಮಯ್ಯ ಗೆಲುವು ಸುಲಭ ಎಂದೇ ಭಾವಿಸಿದ್ದರು. ಆದರೆ ಇಡೀ ಸರ್ಕಾರ, ಜಾತಿ, ಹಣ ಎಲ್ಲಾ ಕೆಲಸ ಮಾಡಿತು. ಸಿದ್ದರಾಮಯ್ಯ ಸೋತೆ ಹೋದರೂ ಎಂದು ಎಣಿಸಲಾಗಿತ್ತು. ಆದರೆ ಕೊನೆ ಸುತ್ತಿನಲ್ಲಿ 257 ಮತಗಳ ಕೂದಲೆಳೆಯ ಅಂತರದಲ್ಲಿ ಜಯಗಳಿಸಿ, ರಾಜಕೀಯವಾಗಿ ಪುನರ್ಜನ್ಮ ಪಡೆದರು. ಅವರಿಗೆ 1,15,512 ಮತಗಳು ದೊರೆತ ಶಿವಬಸಪ್ಪ ಅವರಿಗೆ 1,15,255 ಮತಗಳು ದೊರೆತವು. ಇದರಿಂದ ಹತಾಶರಾದ ಸಿದ್ದರಾಮಯ್ಯ `ಸಾಕಪ್ಪ ಸಾಕು ಉಪ ಚುನಾವಣೆ ಸಹವಾಸ, ಇನ್ನೆಂದೂ ಉಪ ಚುನಾವಣೆಗೆ ನಿಲ್ಲುವುದಿಲ್ಲ’ ಎಂದು ಶಪಥ ಮಾಡಿದರು. ವಿಧಾನಸಭೆಯ ಒಳಗೆ, ಹೊರಗೆ ಈ ವಿಷಯವನ್ನು ಸಿದ್ದರಾಮಯ್ಯ ಆಗಾಗ ಪ್ರಸ್ತಾಪಿಸುತ್ತಾರೆ. ಇದನ್ನೂ ಓದಿ: ದೇಶದಲ್ಲೇ ಮೊದಲ ಉಪಚುನಾವಣೆ ನಡೆದಿದ್ದು ಚಿಕ್ಕಮಗಳೂರಿನ ತರೀಕೆರೆಯಲ್ಲಿ

  • ಹೆಚ್‌.ಡಿ.ದೇವೇಗೌಡರ ಆರೋಗ್ಯ ಸ್ಥಿತಿ ಸರಿಯಿಲ್ಲ ಎಂದ ವೈದ್ಯರು – ಹೆಚ್‌ಡಿಡಿ 100 ಕಿ.ಮೀ ರೋಡ್‌ ಶೋ ರದ್ದು

    ಹೆಚ್‌.ಡಿ.ದೇವೇಗೌಡರ ಆರೋಗ್ಯ ಸ್ಥಿತಿ ಸರಿಯಿಲ್ಲ ಎಂದ ವೈದ್ಯರು – ಹೆಚ್‌ಡಿಡಿ 100 ಕಿ.ಮೀ ರೋಡ್‌ ಶೋ ರದ್ದು

    ಬೆಂಗಳೂರು: ಪಂಚರತ್ನ ರಥಯಾತ್ರೆಯ ಸಮಾರೋಪ ಕಾರ್ಯಕ್ರಮ ನಡೆಯುವ ಮೊದಲು ಜೆಡಿಎಸ್‌ ವರಿಷ್ಠ ಹೆಚ್‌.ಡಿ.ದೇವೇಗೌಡರ (HD Devegowda) ನೇತೃತ್ವದಲ್ಲಿ ನಡೆಯಬೇಕಿದ್ದ 100 ಕಿ.ಮೀ ರೋಡ್‌ ಶೋ ರದ್ದುಗೊಳಿಸಲಾಗಿದೆ.

    ವೈದ್ಯರ ಸಲಹೆ ಮೇರೆಗೆ ದೇವೇಗೌಡರ ರೋಡ್ ಶೋ ರದ್ದುಗೊಳಿಸಿರುವುದಾಗಿ ಜೆಡಿಎಸ್‌ ತಿಳಿಸಿದೆ. ರೋಡ್‌ ಶೋ ಬದಲಿಗೆ ಕೇವಲ ಸಮಾರೋಪ ಸಮಾರಂಭ ಮಾಡಲು ನಿರ್ಧರಿಸಲಾಗಿದೆ ಎಂದು ಪಕ್ಷ ಮಾಹಿತಿ ನೀಡಿದೆ. ಈ ಸಮಾರೋಪ ಸಮಾರಂಭದಲ್ಲಿ ಹೆಚ್‌.ಡಿ.ದೇವೇಗೌಡರು ಪಾಲ್ಗೊಳ್ಳಲಿದ್ದಾರೆ.

    ರೋಡ್‌ ಶೋ ರದ್ದುಗೊಳಿಸಿರುವ ಬಗ್ಗೆ ಮಾತನಾಡಿದ ಮಾಜಿ ಸಿಎಂ ಹೆಚ್‌.ಡಿ.‌ಕುಮಾರಸ್ವಾಮಿ, ವೈದ್ಯರ ಸಲಹೆ ಮೇರೆಗೆ 100 ಕಿಮೀ ರೋಡ್ ಶೋ ರದ್ದು ಮಾಡಲಾಗಿದೆ. ದೇವೇಗೌಡರ ಆರೋಗ್ಯ ಸ್ಥಿತಿ ಸರಿಯಿಲ್ಲ. ವೈದ್ಯರು ಈ‌ ಸಮಯದಲ್ಲಿ ಇಷ್ಟು ದೊಡ್ಡ ರೋಡ್ ಶೋ ಬೇಡ ಅಂತಾ ಹೇಳಿದ್ದಾರೆ. ಹೀಗಾಗಿ ರೋಡ್ ಶೋ ರದ್ದು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.‌

    ಸಮಾವೇಶ ಜಾಗದಲ್ಲಿ 2ರಿಂದ 3 ಕಿ.ಮೀ ರೋಡ್ ಶೋ ಮಾಡ್ತೀವಿ ಅಷ್ಟೆ. ಮೈಸೂರಿನಲ್ಲಿ‌‌ ನಿಗದಿಯಂತೆ ಸಮಾರಂಭ ಸಮಾರಂಭ ನಡೆಯುತ್ತದೆ ಎಂದು ಹೇಳಿದ್ದಾರೆ.

    ಕುಂಬಳಗೋಡಿನಿಂದ ಮೈಸೂರಿನವರೆಗೆ ಸುಮಾರು 100 ಕಿಮೀ ದೂರ ಬೃಹತ್ ರೋಡ್ ಶೋ ನಡೆಸುವ ಬಗ್ಗೆ ಈ ಹಿಂದೆ ಜೆಡಿಎಸ್‌ ನಿರ್ಧಾರ ಕೈಗೊಂಡಿತ್ತು. ಆ ರೋಡ್ ಶೋದಲ್ಲಿ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರನ್ನು ತೆರೆದ ವಾಹನದಲ್ಲಿ ಕರೆದುಕೊಂಡು ಹೋಗುವ ಯೋಜನೆ ಕೂಡ ಹಾಕಿಕೊಂಡಿತ್ತು.

  • ದೊಡ್ಡಗೌಡರ ಖಡಕ್ ವಾರ್ನಿಂಗ್ – ಪ್ರತಿಭಟನೆ ಅರ್ಧಕ್ಕೆ ಕೈಬಿಟ್ಟ ಜೆಡಿಎಸ್ ಕಾರ್ಯಕರ್ತರು

    ದೊಡ್ಡಗೌಡರ ಖಡಕ್ ವಾರ್ನಿಂಗ್ – ಪ್ರತಿಭಟನೆ ಅರ್ಧಕ್ಕೆ ಕೈಬಿಟ್ಟ ಜೆಡಿಎಸ್ ಕಾರ್ಯಕರ್ತರು

    ಹಾಸನ: ಸಂಸದ ಪ್ರಜ್ವಲ್‌  ರೇವಣ್ಣ (Prajwal Revanna) ಮನೆಯಿಂದ ಜೆಡಿಎಸ್ (JDS) ಕಾರ್ಯಕರ್ತರು ಆರಂಭಿಸಿದ್ದ ಪ್ರತಿಭಟನೆ ದೇವೇಗೌಡರ (H.D.Deve Gowda) ಖಡಕ್ ವಾರ್ನಿಂಗ್‍ನಿಂದ ಅರ್ಧಕ್ಕೆ ನಿಂತಿದೆ. ಕಾರ್ಯಕರ್ತರು ಭವಾನಿ ರೇವಣ್ಣರಿಗೆ (Bhavani Revanna) ಹಾಸನದ (Hassan) ಟಿಕೆಟ್ ನೀಡುವಂತೆ ಒತ್ತಾಯಿಸಿ ಎನ್.ಆರ್ ವೃತ್ತದವರೆಗೂ ಪ್ರತಿಭಟನೆ ಹಮ್ಮಿಕೊಂಡಿದ್ದರು.

    ಕುಮಾರಸ್ವಾಮಿಯವರ (H.D.Kumaraswamy) ಹೇಳಿಕೆಗೆ ಪ್ರತಿಯಾಗಿ ಹೋರಾಟ ಎಂದು ಬಿಂಬಿತವಾದ ಹಿನ್ನೆಲೆಯಲ್ಲಿ ದೊಡ್ಡಗೌಡರು ಕಾರ್ಯಕರ್ತರಿಗೆ ಪ್ರತಿಭಟನೆ ನಿಲ್ಲಿಸುವಂತೆ ಸೂಚಿಸಿದ್ದಾರೆ. ಹೋರಾಟ ನಡೆದರೆ ಪಕ್ಷದೊಳಗೆ ಭಿನ್ನಾಭಿಪ್ರಾಯ ಸೃಷ್ಟಿಯಾಗುವ ಆತಂಕ ಎದುರಾಗಿ ಪ್ರತಿಭಟನೆ ತಡೆದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ ಚುನಾವಣೆ ಬಂದಾಗ ಮಾತ್ರ ನಾಯಕರು ಕಾಣಿಸುತ್ತಾರೆ- ಅಣ್ಣಾಮಲೈ ವಾಗ್ದಾಳಿ

    ಪ್ರತಿಭಟನಾ ಮೆರವಣಿಗೆ ಸಂಸದರ ಮನೆಯಿಂದ ಆರಂಭಗೊಂಡು ಜಿಲ್ಲಾಪಂಚಾಯತ್‍ವರೆಗೂ ತೆರಳಿದೆ ಅಲ್ಲಿ ಗೌಡರ ಸೂಚನೆ ಬರುತ್ತಿದ್ದಂತೆ ಕಾರ್ಯಕರ್ತರು ಪ್ರತಿಭಟನೆಯನ್ನು ಮೊಟುಕುಗೊಳಿಸಿ ಸಂಸದರ ಮನೆ ಕಡೆ ನಡೆದಿದ್ದಾರೆ. ಇದನ್ನೂ ಓದಿ: ಯಡಿಯೂರಪ್ಪರ ಭಾಷಣ, ಜೀವನ ಮುಂದಿನ ಪೀಳಿಗೆಗೆ ಪ್ರೇರಣೆ: ಮೋದಿ

  • ಗೆಲ್ಲುವುದು 123 ಸ್ಥಾನವಲ್ಲ ಜೆಡಿಎಸ್ ತಪ್ಪಾಗಿ ಮುಂದೆ 1 ಸೇರಿಸಿದೆ- ಜಮೀರ್ ಅಹಮ್ಮದ್ ವ್ಯಂಗ್ಯ

    ಗೆಲ್ಲುವುದು 123 ಸ್ಥಾನವಲ್ಲ ಜೆಡಿಎಸ್ ತಪ್ಪಾಗಿ ಮುಂದೆ 1 ಸೇರಿಸಿದೆ- ಜಮೀರ್ ಅಹಮ್ಮದ್ ವ್ಯಂಗ್ಯ

    ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್ (JDS) 23 ಕ್ಷೇತ್ರದಲ್ಲಿ ಮಾತ್ರ ಗೆಲ್ಲುವುದು. ಅವರು 123 ಎಂದು ತಪ್ಪಾಗಿ ಮುಂದೆ ಒಂದನ್ನು ಸೇರಿಸಿದ್ದಾರೆ ಎಂದು ಕಾಂಗ್ರೆಸ್ (Congress) ಶಾಸಕ ಜಮೀರ್ ಅಹಮ್ಮದ್ ಖಾನ್ (Zameer Ahmed Khan) ವ್ಯಂಗ್ಯ ಮಾಡಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೇ ಆದರೂ ದೇವೇಗೌಡರ (H.D.Deve Gowda) ಮನೆ ಬಾಗಿಲಿಗೆ ಬರಬೇಕು ಎಂದು ಮಾಜಿ ಸಚಿವ ರೇವಣ್ಣ ಹೇಳುತ್ತಾರೆ ಎಂದರೆ ಅವರಿಗೆ ಬಹುಮತ ಬರುವುದಿಲ್ಲ ಎಂದೇ ಅರ್ಥ ಅಲ್ಲವೇ ಎಂದು ಹೇಳಿದ್ದಾರೆ. ಹಾಸನ ಟಿಕೆಟ್ ಫೈಟ್ ಕುರಿತು, ಅವರ ಪಕ್ಷದ ವಿಚಾರವನ್ನು ನಾನು ಮಾತಾಡುವುದು ಸರಿಯಲ್ಲ ಎಂದು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಇದನ್ನೂ ಓದಿ: ಬಿಎಸ್‍ವೈಗೆ ಹೈಕಮಾಂಡ್ ಬಹುಪರಾಕ್ – ಸಕ್ಸಸ್ ಆಗುತ್ತಾ ನಮೋ ಗೇಮ್‍ಪ್ಲಾನ್?

    ಬಿಜೆಪಿಗೆ (BJP) ರಾಜ್ಯದ ಜನ ಬಹುಮತ ನೀಡಿಲ್ಲ. ಕಳೆದ ಸಲ ಪ್ರಧಾನಿ ನರೇಂದ್ರ ಮೋದಿ (Narendra Modi), ಗೃಹ ಸಚಿವ ಅಮಿತ್ ಶಾ (Amit Shah)  ಬಂದು 104 ಸ್ಥಾನ ಗೆದ್ದಿದ್ದರು. ಆದರೆ ಈ ಬಾರಿ ಅವರು ಬಂದರೂ ಏನು ಪ್ರಯೋಜನ ಆಗುವುದಿಲ್ಲ. ಬರುವ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಬಹುಮತ ಸಿಗಲಿದೆ. 150 ಸ್ಥಾನವನ್ನು ಕಾಂಗ್ರೆಸ್ ಪಡೆದರೂ ಅಚ್ಚರಿಪಡಬೇಕಿಲ್ಲ ಎಂದಿದ್ದಾರೆ.


    ಉಮ್ರಾಗೆ ಹೊರಟಿದ್ದ ಆಶಾ ಕಾರ್ಯಕರ್ತೆಯರಿಗೆ 12 ಸಾವಿರ ರೂ ಹಂಚಿದ್ದೇನೆ. ಅದನ್ನು ಸೌಧಿಗೆ ಹೋಗಿ ಬದಲಾಯಿಸಿಕೊಳ್ಳುವಂತೆ ಹೇಳಿದ್ದೇನೆ. ಅಲ್ಲಿ ಅದರ ಮೌಲ್ಯ 500 ರಿಯಲ್ ಆಗಲಿದೆ. ನೋಟು ಹಂಚಿದ್ದು ಕಾನೂನು ತೊಡಕು ಉಂಟಾಗುವುದಿಲ್ಲ. ಆಶಾಕಾರ್ಯಕರ್ತೆಯರಿಗೆ ಸೂಕ್ತ ಮಾಹಿತಿ ನೀಡಿದ್ದೇನೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: UK ನಲ್ಲಿ ಕೆಲಸ ಕೊಡಿಸೋದಾಗಿ ಮಹಿಳೆಯರಿಗೆ ವಂಚನೆ- ಬೆಂಗ್ಳೂರಲ್ಲಿ ನೈಜೀರಿಯಾ ಪ್ರಜೆ ಅರೆಸ್ಟ್

    Narendra Modi, Congress, BJP, JDS, Amit Shah, H.D.Deve Gowda, B.Z.Zameer Ahmed Khan

  • ದೇವೇಗೌಡರನ್ನೇ ಮನೆ, ಜಿಲ್ಲೆಯಿಂದ ಹೊರಹಾಕಿದವರು ನನ್ನನ್ನು ಬಿಡ್ತಾರಾ: ರೇವಣ್ಣ ವಿರುದ್ಧ ಎ.ಟಿ.ರಾಮಸ್ವಾಮಿ ವಾಗ್ದಾಳಿ

    ದೇವೇಗೌಡರನ್ನೇ ಮನೆ, ಜಿಲ್ಲೆಯಿಂದ ಹೊರಹಾಕಿದವರು ನನ್ನನ್ನು ಬಿಡ್ತಾರಾ: ರೇವಣ್ಣ ವಿರುದ್ಧ ಎ.ಟಿ.ರಾಮಸ್ವಾಮಿ ವಾಗ್ದಾಳಿ

    ಹಾಸನ: ದೇವೇಗೌಡರನ್ನೇ ಮನೆ, ಜಿಲ್ಲೆಯಿಂದ ಹೊರಹಾಕಿದವರು ನನ್ನನ್ನು ಬಿಡ್ತಾರಾ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ (H.D Revanna) ವಿರುದ್ಧ ಶಾಸಕ ಎ.ಟಿ.ರಾಮಸ್ವಾಮಿ (A.T Ramaswamy) ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಹೊಳೆನರಸೀಪುರ ತಾಲ್ಲೂಕಿನ ಜೋಗಿಕೊಪ್ಪಲು ಗ್ರಾಮದಲ್ಲಿ ನಿವೇಶನ ಹಕ್ಕುಪತ್ರ ಹಂಚಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾವಣನಿಗೆ ಸಕಲ ಐಶ್ವರ್ಯ, ಈಶ್ವರನಿಂದ ಪಡೆದ ಶಕ್ತಿಶಾಲಿ ಅಸ್ತ್ರ ಇದ್ದು ಸಹ ನಾಶವಾದ. ಲಂಕೆ ಕೂಡ ಬೂದಿ ಆಯಿತು. ಯಾವುದಕ್ಕೆ ಆರಂಭ ಇರುತ್ತದೆಯೋ ಅದಕ್ಕೆ ಅಂತ್ಯ ಕೂಡ ಇರುತ್ತದೆ ಎಂದು ರೇವಣ್ಣ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕರಾಚಿಯಲ್ಲಿ ಪೊಲೀಸ್ ಮುಖ್ಯಸ್ಥರ ಕಚೇರಿಗೆ ನುಗ್ಗಿದ ಉಗ್ರರು – ಗುಂಡಿನ ದಾಳಿ

    ನನ್ನಂತಹವನಿಗೆ ಹೀಗೆ ಮಾಡಿದ್ದಾರೆ. ನಿಮ್ಮನ್ನು ಬಿಡುತ್ತಾರಾ? ಎಂದು ಕಾರ್ಯಕರ್ತರಿಗೆ ಕರೆಕೊಟ್ಟ ಅವರು, ನೀವೆಲ್ಲಾ ಸ್ವಾಭಿಮಾನಿಗಳಾಗಬೇಕು. ಆತ್ಮಗೌರವದಿಂದ ನಿಲ್ಲಬೇಕು. ಯಾರ ಮುಂದು ಕೈಕಟ್ಟಿ ನಿಲ್ಲಬಾರದು. ಎಲ್ಲಿ ಜೊತೆಗೆ ಕುಳಿತುಕೊಳ್ಳುವ ಸ್ಥಾನಮಾನ ಇರುತ್ತದೆಯೋ ಅಲ್ಲಿಗೆ ಹೋಗಿ ಎಂದಿದ್ದಾರೆ.

    ಅವರಿಗೆ ಒಳ್ಳೆಯವರು ಬೇಕಾಗಿಲ್ಲ. ಕೆಲವು ಜನ ಸ್ವಾರ್ಥಕ್ಕಾಗಿ ಏನು ಬೇಕಾದರೂ ಮಾಡಲು ತಯಾರಿದ್ದಾರೆ. ಸತ್ಯವನ್ನೇ ಸಾಯಿಸುತ್ತಾರೆ. ಅದನ್ನು ಎದುರಿಸುವ ಶಕ್ತಿ ನನಗೆ ಜನ ಕೊಟ್ಟಿದ್ದಾರೆ. ರಾಜಕೀಯವಾಗಿ ನಾನು ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.

    ದೇವೇಗೌಡರು (H.D. Deve Gowda) ಪ್ರಧಾನಿ ಆಗಿದ್ದವರು. ಈ ದೇಶದ ದೊಡ್ಡ ಹುದ್ದೆಗೆ ಏರಿದ್ದವರು. ಅಂತವರನ್ನೇ ಮನೆಯಿಂದ, ಜಿಲ್ಲೆಯಿಂದ ಹೊರಹಾಕಿದಂತವರು ನನ್ನನ್ನು ಬಿಡುತ್ತಾರಾ? ಅವರು ಎಂಪಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದಿದ್ದರೆ ಸರಿ, ಬೇರೆಯವರು ನಿಂತುಕೊಳ್ಳಬಹುದಿತ್ತು. ಆದರೆ ಅವರನ್ನು ತುಮಕೂರಿನಿಂದ ನಿಲ್ಲಿಸಿ ಸೋಲಿಸಿದ್ದನ್ನು ಯಾರು ಮರೆಯುವಂತಿಲ್ಲ ಎಂದು ರೇವಣ್ಣ ವಿರುದ್ಧ ಹರಿಹಾಯ್ದಿದ್ದಾರೆ.

    ದೇವೇಗೌಡರನ್ನು ಕೇವಲ ಉತ್ಸವ ಮೂರ್ತಿಯನ್ನಾಗಿ ಮಾಡಿಕೊಂಡಿದ್ದಾರೆ. ಅಂತಹ ಮುತ್ಸದ್ಧಿ ರಾಜಕಾರಣಿಯನ್ನು ಮೂಲೆಗುಂಪು ಮಾಡಿ ಅವರ ಮಾತನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಸರಿಯಾಗಿ ಆಸ್ತಿ ಘೋಷಣೆ ಮಾಡದೆ, ಕೋರ್ಟ್‍ನಲ್ಲಿ ವಿಚಾರಣೆ ನಡೆದು ಶಿಕ್ಷಯಾಗುವ ಸಂದರ್ಭ ಬಂದಾಗ ರಾಜಿ ಮಾಡಿಕೊಳ್ಳಲು ಸ್ವಾರ್ಥಕ್ಕಾಗಿ ಅವರಿಗೆ ಟಿಕೆಟ್ ಘೋಷಣೆ ಮಾಡಿದ್ದರು ಎಂದಿದ್ದಾರೆ.

    ನನ್ನ ಪಕ್ಷದ ಕಾರ್ಯಕರ್ತರು ನನ್ನ ಕುಟುಂಬದವರಿಗಿಂತಲೂ ಹೆಚ್ಚು. ನನ್ನ ಮಕ್ಕಳು ಬೇರೆ ಅಲ್ಲ, ನನ್ನ ಕಾರ್ಯಕರ್ತರು ಬೇರೆ ಅಲ್ಲ ಎಂಬ ಭಾವನೆಯಿಂದ ನಾನು ರಾಜಕೀಯಕ್ಕೆ ಬಂದಿದ್ದೇನೆ. ನನ್ನ ಕುಟುಂಬ ಮನೆಗೆ ಮಾತ್ರ ಸೀಮಿತ. ಗಟ್ಟಿ ತಳಪಾಯ ಹಾಕಿಕೊಂಡು ಮುಂದಿನ ರಾಜಕೀಯ ನಿರ್ಧಾರ ತಿಳಿಸುತ್ತೇನೆ. ಮತ್ತೆ ವಿಧಾನಸೌಧಕ್ಕೆ ಹೋಗುತ್ತೇನೆ ಎಂದು ಅವರು ಹೇಳಿದ್ದಾರೆ.

    ರೇವಣ್ಣ ಅಧಿವೇಶನದಲ್ಲಿ, ರಾಮಸ್ವಾಮಿ ಪ್ರಾಮಾಣಿಕರು ಅದರಲ್ಲಿ ಬೇರೆ ಮಾತಿಲ್ಲ ಎಂದಿದ್ದಾರೆ. ಅವರ ಒಳಗೊಂದು ಹೊರಗೊಂದು ಇದ್ದರೆ ನಾನೇನು ಮಾಡಲಿ ಎಂದು ಪ್ರತಿಕ್ರಿಸಿದ್ದಾರೆ.

    ರೈತರ ಪಕ್ಷ ಎಂದು ಕಟ್ಟಿರುವ ಪಕ್ಷ ಕ್ಷೀಣಿಸುತ್ತಿದೆ ಎಂದು ಮೂರು ವರ್ಷಗಳ ಹಿಂದೆ ಸದನದಲ್ಲಿ ಹೇಳಿದ್ದೆ. ಅಕ್ಕಪಕ್ಕದ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳು ಬಲಗೊಳ್ಳುತ್ತಿವೆ. ಹಿಂದಿನಿಂದ ಇದ್ದ ಪ್ರಾದೇಶಿಕ ಪಕ್ಷ ಯಾಕೆ ಕ್ಷೀಣಿಸುತ್ತಿದೆ ಎಂದು ಅವರು ಪ್ರಶ್ನಿಸಿದ್ದಾರೆ.

    ರೈತರ ಹೆಸರು ಹೇಳುತ್ತಾರೆ. ರೈತರಿಗೆ ಜಮೀನು ಮಂಜೂರು ಮಾಡಲು ಹೋದರೆ, ಮಾಡಿಕೊಡಬೇಡಿ ಎಂದು ಅಧಿಕಾರಿಗಳಿಗೆ ಹೇಳುತ್ತಾರೆ ಇದು ರೈತರ ಪಕ್ಷನಾ? ರೈತರ ಪರವಾಗಿ ಕೆಲಸ ಮಾಡುತ್ತಿದೆಯಾ? ರೈತರ ಹಿತ ಕಾಪಾಡುವ ಕೆಲಸ ಆಗಿದೆಯೇ? ರೈತರು ತಿನ್ನುವ ಅನ್ನಕ್ಕೆ ಕಲ್ಲು ಹಾಕುವ ಜನ ಇದ್ದಾರೆ. ಅದನ್ನು ಎದುರಿಸುವ ಶಕ್ತಿ ನನಗಿದೆ ಎಂದು ತೀವ್ರವಾಗಿ ವಾಗ್ದಾಳಿ ನಡೆಸಿದರು.

    ನನ್ನನ್ನು ರಾಜಕೀಯವಾಗಿ ಮುಗಿಸಬೇಕು ಎಂದುಕೊಂಡಿದ್ದಾರೆ ಅದು ಸಾಧ್ಯವಿಲ್ಲ. ನಾನು ಮತ್ತೆ ಶಾಸಕನಾಗುತ್ತೇನೆ. ನೆಲ ಹಾಗೂ ಜನರ ರಕ್ಷಣೆಗೆ ನನ್ನ ತಲೆ ಬೇಕಾದ್ರೂ ತೆಗೆಯಲಿ ಎಂದು ಸವಾಲು ಹಾಕಿದ್ದಾರೆ. ಇದನ್ನೂ ಓದಿ: ಕಿಡ್ನಿ ಮಾರಿ ದುಡ್ಡು ಕೊಡ್ತೀನಿ.. ನಮ್ಮ ನಾಯಕರಿಗೆ ಟಿಕೆಟ್ ಕೊಡಿ – ಯುವಕನ ಹುಚ್ಚಾಟ

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜೆಡಿಎಸ್‌ನಲ್ಲೇ ಉಳಿದ್ರು ಜಿಟಿಡಿ – ಜೆಡಿಎಸ್ ವರಿಷ್ಠರ ಸಂಧಾನ ಯಶಸ್ವಿ

    ಜೆಡಿಎಸ್‌ನಲ್ಲೇ ಉಳಿದ್ರು ಜಿಟಿಡಿ – ಜೆಡಿಎಸ್ ವರಿಷ್ಠರ ಸಂಧಾನ ಯಶಸ್ವಿ

    ಮೈಸೂರು: (Mysuru) ಅಂತೂ ಇಂತು ಕೊನೆಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರ (G.T.Deve Gowda) ಮುಂದಿನ ರಾಜಕೀಯ ನಡೆ ನಿರ್ಧಾರವಾಗಿದೆ. ಜೆಡಿಎಸ್ (JDS) ವರಿಷ್ಠರ ಸಂಧಾನ ಫಲಪ್ರದವಾಗಿದ್ದು ತಾನು ಮಾತ್ರವಲ್ಲಾ ಇಡೀ ಕುಟುಂಬ ಜೆಡಿಎಸ್‌ಗೆ ದುಡಿಯುದಾಗಿ ಜಿ.ಟಿ.ದೇವೇಗೌಡ ಘೋಷಿಸಿದ್ದಾರೆ.

    ದೊಡ್ಡಗೌಡ್ರು ಭಾವನಾತ್ಮಕವಾಗಿ ಮಾತನಾಡಿದರು. ಚಿಕ್ಕ ಗೌಡ್ರು ಗದ್ಗದಿತರಾದರು. ಮೈಸೂರಿನ ವಿವಿ ಮೊಹಲ್ಲಾದ ಜಿ.ಡಿ‌.ದೇವೇಗೌಡರ ನಿವಾಸ ಈ ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾಯ್ತು. ಕಳೆದ ಮೂರು ವರ್ಷಗಳಿಂದ ಜೆಡಿಎಸ್ ಪಕ್ಷ ಚಟುವಟಿಕೆಗಳಿಂದ ದೂರವಿದ್ದ ಜಿ.ಟಿ.ದೇವೇಗೌಡರ ಮನವೊಲಿಸಲು ಖುದ್ದು ಹೆಚ್.ಡಿ.ದೇವೇಗೌಡರೇ (H.D.Deve Gowda) ಬಂದಿದ್ದರು. ಹೆಚ್.ಡಿ.ದೇವೇಗೌಡರ ಜೊತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy), ಮಾಜಿ ಸಚಿವ ಸಾ.ರಾ.ಮಹೇಶ್ (Sa.Ra.Mahesh), ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ (C.M.Ibrahim) ಈ ವೇಳೆ ದೇವೇಗೌಡರ ಜೊತೆ ಇದ್ದರು. ಇದನ್ನೂ ಓದಿ: ಜೆಡಿಎಸ್‍ನಲ್ಲೇ ಉಳೀತಾರಾ ಜಿ.ಟಿ. ದೇವೇಗೌಡ? – ಗುರುವಾರ ಹೆಚ್‌ಡಿಡಿ ಭೇಟಿ

    ಜೆಡಿಎಸ್‌ ನಾಯಕರ ದಂಡೇ ಜಿ.ಟಿ.ದೇವೇಗೌಡರ‌ ಮನೆಗೆ ಬಂದ ಕಾರಣ ಜಿಟಿಡಿ ಮನೆ ಇವತ್ತಿನ ಮಟ್ಟಿಗೆ ರಾಜಕೀಯ ಶಕ್ತಿ ಕೇಂದ್ರವಾಗಿತ್ತು. ಹೆಚ್ಚು ಕಡಿಮೆ ನಾಲ್ಕೈದು ತಾಸು ಎಲ್ಲಾ ದಳಪತಿಗಳು ಜಿಟಿಡಿ ಮನೆಯಲ್ಲಿ ಕುಳಿತು, ಜಿಟಿಡಿ ಕುಟುಂಬದ ಜೊತೆ ಮಾತನಾಡಿ ಅಲ್ಲೇ ಊಟ ಮಾಡಿ ಮುನಿಸು ಮರೆತು ಒಂದಾದರು.

    ಹೆಚ್.ಡಿ.ದೇವೇಗೌಡರು ಶಾಸಕ ಜಿ.ಟಿ.ದೇವೇಗೌಡ, ಪತ್ನಿ ಲಲಿತಾ ಹಾಗೂ ಪುತ್ರ ಹರೀಶ್ ಗೌಡ ಜೊತೆ ಮಾತುಕತೆ ನಡೆಸಿ ಮನವೊಲಿಸವಲ್ಲಿ ಯಶಸ್ವಿಯಾದರು. ದೇವೇಗೌಡರ ಭೇಟಿ ಶಾಸಕ ಜಿ.ಟಿ.ದೇವೇಗೌಡರನ್ನ ಭಾವುಕರಾನ್ನಗಿಸಿತ್ತು. ಗದ್ಗತಿತರಾಗಿ ಮಾತನಾಡಿದ ಜಿ.ಟಿ.ದೇವೇಗೌಡ, ನಾನು ಮಾತ್ರವಲ್ಲ ಇಡೀ ನನ್ನ ಕುಟುಂಬ ಜೆಡಿಎಸ್‌ಗಾಗಿ ದುಡಿಯುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ನ.1ರಂದು ನಟ ಪುನೀತ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ: ಸಿಎಂ ಬೊಮ್ಮಾಯಿ

    ಹೆಚ್.ಡಿ.ಕುಮಾರಸ್ವಾಮಿ ಸಹ ಜಿ.ಟಿ.ದೇವೇಗೌಡ, ಹರೀಶ್ ಗೌಡ ಜೊತೆ ಆತ್ಮೀಯವಾಗಿ ಮಾತನಾಡಿದರು. ಈ ವೇಳೆ ನೂರಾರು ಕಾರ್ಯಕರ್ತರು ಜಿಟಿಡಿ ಮನೆಯಲ್ಲಿ ಹಾಜರಿದ್ದರು. ಭೇಟಿ ಬಳಿಕ ಮಾತನಾಡಿದ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಮುಂದೆ ಮೈಸೂರು ಜಿಲ್ಲೆಯ ಜೆಡಿಎಸ್ ನಾಯಕತ್ವವನ್ನ ಜಿ.ಟಿ.ದೇವೇಗೌಡರೇ ವಹಿಸಲಿದ್ದಾರೆ ಎಂದು ಘೋಷಿಸಿದರು. ಅಷ್ಟೇ ಅಲ್ಲ ಮುಂದಿನ ಮೈಸೂರು ಜಿಲ್ಲೆಯ ರಾಜಕೀಯ ತೀರ್ಮಾನಗಳನ್ನ ಜಿಟಿಡಿ ತೆಗೆದುಕೊಳ್ಳಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

    ಈ ಮೂಲಕ ಜಿ.ಟಿ.ದೇವೇಗೌಡರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಜಿ.ಟಿ.ದೇವೇಗೌಡ ಅವರು ಕಾಂಗ್ರೆಸ್‌ಗೆ ಹೋಗ್ತಾರಾ ಅಥವಾ ಬಿಜೆಪಿಗೆ ಹೋಗ್ತಾರಾ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಕಾಂಗ್ರೆಸ್‌ನಿಂದ ಸಿದ್ದರಾಮಯ್ಯ ಹಾಗೂ ಬಿಜೆಪಿಯಿಂದ ಕೆಲ ನಾಯಕರು ಜಿಟಿಡಿ ಜೊತೆ ಮಾತನಾಡಿ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದ್ದರು. ಇದೀಗ ಜೆಡಿಎಸ್‌ನಲ್ಲೇ ಉಳಿಯಲು ನಿರ್ಧರಿಸಿರುವ ಜಿ.ಟಿ.ದೇವೇಗೌಡ ಅವರು ಸಿದ್ದರಾಮಯ್ಯ ಹಾಗೂ ಬಿಜೆಪಿ ನಾಯಕರಿಗೆ ಕ್ಷಮೆಯಾಚಿಸಿದ್ದಾರೆ.

    ಮೈಸೂರಿನಿಂದ ಪಕ್ಷ ಸಂಘಟನೆ ಆರಂಭಿಸಿದ ಜೆಡಿಎಸ್‌ಗೆ ಜಿಟಿಡಿ ರೀ ಎಂಟ್ರಿಯಿಂದ ಆನೆ ಬಲ ಸಿಕ್ಕಂತಾಗಿದೆ. ಇದು ಮೈಸೂರು ಭಾಗದಲ್ಲಿ ಮುಂದಿನ ದಿನಗಳಲ್ಲಿ ಯಾವೆಲ್ಲಾ ರಾಜಕಾರಣ ಬದಲಾವಣೆಗೆ ಕಾರಣವಾಗುತ್ತೆ ಕಾದು ನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ನಿಖಿಲ್ ಕುಮಾರಸ್ವಾಮಿ ಪುತ್ರನ ನಾಮಕರಣಕ್ಕೆ ದೊಡ್ಡಗೌಡರ ಕುಟುಂಬದಿಂದ ಸಿದ್ಧತೆ

    ನಿಖಿಲ್ ಕುಮಾರಸ್ವಾಮಿ ಪುತ್ರನ ನಾಮಕರಣಕ್ಕೆ ದೊಡ್ಡಗೌಡರ ಕುಟುಂಬದಿಂದ ಸಿದ್ಧತೆ

    ಬೆಂಗಳೂರು: ನಟ, ಜೆಡಿಎಸ್ ಯುವ ಮೋರ್ಚಾ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪುತ್ರನ ನಾಮಕರಣ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ.

    ಜೂನ್ 8 ರಂದು ಬುಧವಾರ ನಿಖಿಲ್ ಕುಮಾರಸ್ವಾಮಿ ಪುತ್ರನ ನಾಮಕರಣ ಮಹೋತ್ಸವ ನಡೆಸಲು ಮಾಜಿ ಪ್ರಧಾನಿ ದೇವೇಗೌಡ ಕುಟುಂಬ ನಿರ್ಧರಿಸಿದೆ. ಸರಳವಾಗಿ ನಾಮಕರಣ ಮಹೋತ್ಸವ ನಡೆಸಲು ಕುಟುಂಬದವರು ನಿರ್ಧರಿಸಿದ್ದು, ಜೆಪಿ ನಗರದ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಸಮಾರಂಭ ನಡೆಯಲಿದೆ. ದೇವೇಗೌಡರ ಕುಟುಂಬ ಸದಸ್ಯರು ಮಾತ್ರ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಮೋಹಕತಾರೆ ರಮ್ಯಾ ಅಭಿಮಾನಿಗಳಿಗೆ ಗುಡ್ ನ್ಯೂಸ್

    2020ರ ಏಪ್ರಿಲ್ 17ರಂದು ಬಿಡದಿ ಬಳಿ ಇರುವ ಕುಮಾರಸ್ವಾಮಿ ಅವರ ಫಾರ್ಮ್‍ಹೌಸ್‍ನಲ್ಲಿ ರೇವತಿ ಮತ್ತು ನಿಖಿಲ್ ಅವರ ವಿವಾಹ ಸಮಾರಂಭ ನಡೆದಿತ್ತು. 2021ರ ಸೆ.24 ರಂದು ರೇವತಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಇದನ್ನೂ ಓದಿ: ಸಲ್ಮಾನ್ ಖಾನ್ ಜೊತೆ ತಂದೆಯನ್ನೂ ಕೊಲ್ಲುವ ಬೆದರಿಕೆ : ಎಫ್.ಐ.ಆರ್ ದಾಖಲು, ಹೆಚ್ಚಿದ ಭದ್ರತೆ