Tag: H Guru

  • ಯೋಧ ಗುರು ಕುಟುಂಬಕ್ಕೆ ನೆರವಾಗಲು ನವಜೋಡಿಗಳಿಂದ ವಿಶೇಷ ಕಾರ್ಯ

    ಯೋಧ ಗುರು ಕುಟುಂಬಕ್ಕೆ ನೆರವಾಗಲು ನವಜೋಡಿಗಳಿಂದ ವಿಶೇಷ ಕಾರ್ಯ

    ಹುಬ್ಬಳ್ಳಿ: ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬಕ್ಕೆ ನೆರವು ನೀಡಲು ಹಲವರು ಮುಂದೆ ಬಂದಿದ್ದು, ಹುಬ್ಬಳ್ಳಿಯ ನವಜೋಡಿಯೊಂದು ತಮ್ಮ ಮದುವೆ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಡಾನ್ಸ್ ಮಾಡಿ ಬಂದ ಆತಿಥಿಗಳಿಂದ ದೇಣಿಗೆ ಸಂಗ್ರಹ ಮಾಡಿದೆ.

    ಹುಬ್ಬಳ್ಳಿಯ ಕೃಷ್ಣ ಇರಕಲ್ ಹಾಗು ಕೀರ್ತಿ ಇರಕಲ್ ಜೋಡಿ ನಿಶ್ಚಿತಾರ್ಥ ಸಮಾರಂಭದಲ್ಲಿ ನೃತ್ಯ ಮಾಡಿ ದೇಣಿಗೆ ಸಂಗ್ರಹ ಮಾಡಿದ್ದು, ಹುತಾತ್ಮ ಯೋಧರಿಗೆ ತಮ್ಮ ನಿಶ್ಚಿತಾರ್ಥ ಕಾರ್ಯಕ್ರಮವನ್ನು ಅರ್ಪಣೆ ಮಾಡಿದ್ದಾರೆ.

    ಯುವ ಜೋಡಿಯ ಕಾರ್ಯಕ್ಕೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಬಂದ ಅತಿಥಿಗಳು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದು, ತಮ್ಮ ಕೈಲಾದ ಸಹಾಯ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ದೇಶ ಭಕ್ತಿಗೀತೆಗೆ ನವ ಜೋಡಿ ಸೇರಿದಂತೆ ಯುವಕರ ಗುಂಪು ಡಾನ್ಸ್ ಮಾಡಿದೆ. ಸೋಮವಾರ ನಿಶ್ವಿತಾರ್ಥ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಂಗ್ರಹವಾದ ಹಣವನ್ನು ನೇರವಾಗಿ ಹುತಾತ್ಮ ಯೋಧ ಗುರು ಅವರ ಕುಟುಂಬದ ಬ್ಯಾಂಕ್ ಖಾತೆಗೆ ಜಮೆ ಮಾಡುವುದಾಗಿ ನವಜೋಡಿ ತಿಳಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೆಮಿಸ್ಟ್ರಿ ಆಫ್ ಕರಿಯಪ್ಪ ಚಿತ್ರತಂಡದಿಂದ ವೀರಯೋಧ ಗುರು ಕುಟುಂಬಕ್ಕೆ ಧನಸಹಾಯ

    ಕೆಮಿಸ್ಟ್ರಿ ಆಫ್ ಕರಿಯಪ್ಪ ಚಿತ್ರತಂಡದಿಂದ ವೀರಯೋಧ ಗುರು ಕುಟುಂಬಕ್ಕೆ ಧನಸಹಾಯ

    ಮಂಡ್ಯ: ಪುಲ್ವಾಮದಲ್ಲಿ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ವೀರಯೋಧ ಎಚ್ ಗುರು ಅವರ ಕುಟುಂಬದವರನ್ನು ಕೆಮಿಸ್ಟ್ರಿ ಆಫ್ ಕರಿಯಪ್ಪ ಚಿತ್ರತಂಡ ಭೇಟಿ ಮಾಡಿ ಸಾಂತ್ವನ ಹೇಳಿದೆ. ಇದೇ ವೇಳೆ ಭಾನುವಾರದ ಚಿತ್ರಮಂದಿರದ ಕಲೆಕ್ಷನ್ ಮೊತ್ತದ ಹಣವನ್ನು ಗುರು ಅವರ ಕುಟುಂಬಕ್ಕೆ ಚೆಕ್ ಮೂಲಕ ನೀಡಿದೆ.

    ಚಿತ್ರದ ಪ್ರಮುಖ ನಟರಾದ ತಬಲಾ ನಾಣಿ, ಅಪೂರ್ವಶ್ರೀ, ಸಂಜನಾ ಆನಂದ್, ನಿರ್ದೇಶಕ ಕುಮಾರ್, ನಿರ್ಮಾಪಕರಾದ ಡಾ.ಡಿ.ಎಸ್.ಮಂಜುನಾಥ್ ಹಾಗೂ ಕಾರ್ಯಕಾರಿ ನಿರ್ಮಾಪಕ ಶ್ರೀನಿವಾಸ್ ಅವರು ಗುರು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

    ಈ ವೇಳೆ ಮಾತನಾಡಿದ ಹಿರಿಯ ನಟ ತಬಲ ನಾಣಿ ಅವರು, ದೇಶ ಕಾಯುವವರು ದೇವರು ಎಂಬ ಭಾವನೆ ನಮ್ಮದು. ಗುರು ಅವರ ಅಂತಿಮ ದರ್ಶನ ಪಡೆಯಲು ಕೂಡ ಅಂದು ಆಗಮಿಸಿದ್ದೇವು. ಆದರೆ ಆ ವೇಳೆ ಕುಟುಂಬಸ್ಥರನ್ನು ಮಾತನಾಡಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಇಂದು ಇಡೀ ತಂಡ ಭೇಟಿ ನೀಡಿ ಸಾಂತ್ವನ ಹೇಳಿದ್ದೇವೆ. ಅದಕ್ಕಿಂತ ನಮ್ಮಿಂದ ಹೆಚ್ಚೇನು ಮಾಡಲು ಸಾಧ್ಯ, ನಮ್ಮ ತಂಡದಿಂದ ಕಿರು ಸಹಾಯವನ್ನು ಕುಟುಂಬಸ್ಥರಿಗೆ ನೀಡಿದ್ದೇವೆ ಎಂದರು.

    ಬಳಿಕ ಮಾತನಾಡಿದ ನಟಿ ಅಪೂರ್ವ ಶ್ರೀ ಅವರು, ಸಾವು ಎಲ್ಲರಿಗೂ ಬರುತ್ತದೆ. ಆದರೆ ಇಡೀ ದೇಶವೇ ನೆನೆಯುವಂತಹ ರೀತಿಯಲ್ಲಿ ಗುರು ಅವರ ಸಾವಿನ ಘಟನೆ ನಡೆದಿದೆ. ಪ್ರತಿಕ್ಷಣಾ ನಮ್ಮನ್ನು ಕಾಯುವ ಯೋಧರಿಗೆ ಬೇಕಾದ ಎಲ್ಲಾ ಸೌಲಭ್ಯಗಳು ಸಿಗಬೇಕು. ಇನ್ನು ಮುಂದಾದರು ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಹೇಳಿ ಭಾವುಕರಾದರು.

    ನಿರ್ಮಾಪಕ ಮಂಜುನಾಥ್ ಅವರು ಮಾತನಾಡಿ, ನಮ್ಮ ಸಿನಿಮಾ ಬಿಡುಗಡೆಯ ದಿನವೇ ದುರಂತ ನಡೆದಿತ್ತು. ನಮಗೆ ತೀರ ನೋವು ತಂದಿತ್ತು. ನಾನು ಸೈನ್ಯಕ್ಕೆ ಸೇರಲು ಹೋಗಿ ಫೇಲ್ ಆಗಿ ವಾಪಸ್ ಬಂದೆ. ಸಿನಿಮಾದಲ್ಲಿ ಸೈನಿಕರ ಬಗ್ಗೆ ಹೇಳಲು ಯತ್ನಿಸಿದ್ದೆ. ನನ್ನ ಹಿಂದಿನ ಸಿನಿಮಾ ಸಂಯುಕ್ತ 2 ಸಿನಿಮಾ ಕೂಡ ಯೋಧರ ಹಿನ್ನೆಲೆಯಲ್ಲಿ ಆಯ್ಕೆ ಮಾಡಿಕೊಂಡಿದ್ದೆ. ಅಂದು ಕೂಡ ಸಿನಿಮಾದಲ್ಲಿ ಬಂದ ಸ್ವಲ್ಪ ಹಣವನ್ನು ಯೋಧರಿಗೆ ನೀಡಿದ್ದೆ. ಅದೇ ರೀತಿ ಇಂದು ಕೂಡ ಮಾಡಿದ್ದೇನೆ. ಯೋಧರ ಬೆಂಬಲಕ್ಕೆ ನಿಲ್ಲುವ ನಮ್ಮ ಕಾರ್ಯ ಮುಂದುವರಿಯುತ್ತದೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಇನ್ಫೋಸಿಸ್ ವತಿಯಿಂದ ಹುತಾತ್ಮ ಯೋಧರ ಕುಟುಂಬಕ್ಕೆ ತಲಾ 10 ಲಕ್ಷ ರೂ. ನೆರವು: ಸುಧಾಮೂರ್ತಿ

    ಇನ್ಫೋಸಿಸ್ ವತಿಯಿಂದ ಹುತಾತ್ಮ ಯೋಧರ ಕುಟುಂಬಕ್ಕೆ ತಲಾ 10 ಲಕ್ಷ ರೂ. ನೆರವು: ಸುಧಾಮೂರ್ತಿ

    ಬೆಂಗಳೂರು: ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ 40 ಯೋಧರ ಕುಟುಂಬಕ್ಕೆ ದೇಶಾದ್ಯಂತ ಸಾರ್ವಜನಿಕರು ಕಂಬನಿ ಮಿಡಿದಿದ್ದು, ಇನ್ಫೋಸಿಸ್ ಫೌಂಡೇಶನ್ ವತಿಯಿಂದಲೂ ಎಲ್ಲಾ ಯೋಧರ ಕುಟುಂಬಗಳಿಗೆ 10 ಲಕ್ಷ ರೂ. ನೆರವು ನೀಡುವುದಾಗಿ ಸಂಸ್ಥೆಯ ಅಧ್ಯಕ್ಷೆ ಸುಧಾಮೂರ್ತಿಯವರು ತಿಳಿಸಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಯೋತ್ಪಾದಕರ ದಾಳಿಗೆ ತುತ್ತಾದ ವೀರ ಯೋಧರ ಕುಟುಂಬಕ್ಕೆ ನೆರವು ನೀಡಲು ನಿರ್ಧರಿಸಲಾಗಿದೆ. ಯೋಧರ ಸಾವಿನ ಸುದ್ದಿ ಕೇಳಿದ ತಕ್ಷಣ ನನ್ನ ಸಂಬಂಧಿಕರೇ ಸಾವಿಗೀಡಾದಂತೆ ದುಃಖ ಆಯ್ತು. ಬಾಳಿ ಬದುಕಬೇಕಾದ ಯುವಕರು ಸಾವನ್ನಪ್ಪಿದ್ದಾರೆ. ಆದ್ದರಿಂದ ಕುಟುಂಬಕ್ಕೆ ನೆರವುರ್ಮಾನ ಮಾಡಿದ್ದೇವೆ. ಆದರೆ ಇದು ಅವರ ಜೀವಕ್ಕೆ ಕೊಟ್ಟ ಬೆಲೆ ಅಲ್ಲ ಎಂದು ಸ್ಪಷ್ಟಪಡಿಸಿದ ಅವರು, ಯೋಧ ಸಾವನ್ನಪ್ಪಿದ ವೇಳೆ ನಮ್ಮ ಕುಟುಂಬವನ್ನು ಯಾರು ಕೈ ಹಿಡಿಯಲಿಲ್ಲ ಎಂಬ ಭಾವನೆ ಬರದಂತೆ ಮಾಡಬೇಕು. ಅದ್ದರಿಂದಲೇ ಈ ನಿರ್ಧಾರ ಮಾಡಿದ್ದೇವೆ ಎಂದರು.

    ನಾವು ಈಗಾಗಲೇ ಬಿಎಸ್‍ಎಫ್ ಸೈನಿಕರೊಂದಿಗೆ ಕೆಲಸ ಮಾಡುತ್ತಾ ಬಂದಿದ್ದೇವೆ. ಇಂತಹ ದಾಳಿಗಳಲ್ಲಿ ಹುತಾತ್ಮರಾದ ಯೋಧರ ಕುಟುಂಬ ಒಂದೆಡೆ ಆದರೆ ಮತ್ತೊಂದೆಡೆ ಘಟನೆಯಲ್ಲಿ ಗಾಯಗೊಂಡು ಬಳಿಕ ಜೀವನ ನಡೆಸಲು ಕಷ್ಟಪಡುವ ಯೋಧರ ಬಗ್ಗೆಯೂ ಹೆಚ್ಚಿನ ಗಮನ ಹರಿಸಿದ್ದೇವೆ. ನಮ್ಮ ಈ ಪ್ರಯತ್ನ ಇಲ್ಲಿಯೇ ನಿಲ್ಲುವುದಿಲ್ಲ ಮುಂದುವರಿಯುತ್ತದೆ ಎಂದರು.

    ಮಂಡ್ಯದ ಗುರು ಅವರ ಸುದ್ದಿಯೂ ಕೇಳಿ ನನಗೆ ಭಾರೀ ಅಘಾತ ಆಗಿತ್ತು. ಈ ವೇಳೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದೆ. ಆದರೆ ಈಗ ಯೋಧನ ಕುಟುಂಬಸ್ಥರ ಮನಸ್ಥಿತಿ ಹೊಂದಾಣಿಕೆ ಆಗಲು ಸಮಯ ಬೇಕಿದೆ. ಹೆಚ್ಚಿನ ಜನರು ಕೂಡ ಇದೇ ಸಮಯದಲ್ಲಿ ಭೇಟಿ ನೀಡುತ್ತಾರೆ. ಇದರಿಂದ ಅವರಿಗೂ ಹೆಚ್ಚಿನ ಸಮಸ್ಯೆ ಆಗುತ್ತದೆ. ಆದ್ದರಿಂದ ಮಾರ್ಚ್ 15 ರ ಬಳಿಕ ಸ್ವತಃ ನಾವೇ ಭೇಟಿ ನೀಡಿ ಸಾಂತ್ವಾನ ಹೇಳುತ್ತೇನೆ ಎಂದು ಸ್ಪಷ್ಟಪಡಿಸಿದರು.

    ದೇಶದ ಯೋಧರ ಸಾವಿನ ಬಗ್ಗೆ ಜನರು ಸಾಕಷ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಈ ಸಂದರ್ಭದಲ್ಲಿ ಎಚ್ಚರಿಕೆ ಹೆಜ್ಜೆ ಮುಂದಿಡುವ ಅಗತ್ಯವಿದೆ. ನಮಗೇ ಕಾಣುವುದು ಮಾತ್ರ ಸತ್ಯವೂ ಅಲ್ಲ. ದೇಶದ ರಕ್ಷಣಾ ಅಂಶಗಳನ್ನು ಸಾರ್ವಜನಿಕವಾಗಿ ಹೇಳಲು ಕೂಡ ಸಾಧ್ಯವಿಲ್ಲ. ಆತುರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಕೂಡ ಆಗಲ್ಲ. ಉನ್ನತ ಅಧಿಕಾರಿಗಳು ಚರ್ಚೆ ನಡೆಸಿದ ಇದಕ್ಕೆ ಯುದ್ಧವೇ (ಸರ್ಜಿಕಲ್ ಸ್ಟ್ರೈಕ್) ಸರಿ ಎನಿಸಿದರೆ ಅದನ್ನೇ ಮಾಡಲಿ. ಅಥವಾ ಮಾತುಕತೆ ಮೂಲಕ ಸಾಧ್ಯವಾದರೆ ಅದನ್ನು ಮಾಡಲಿ. ಇಂತಹ ಘಟನೆ ಮತ್ತೆ ನಡೆದಂತೆ ಕ್ರಮಕೈಗೊಂಡು ವಿಳಂಬ ಆಗದಂತೆ ನೋಡಿಕೊಳ್ಳಬೇಕು ಎಂದು ಸ್ಟಷ್ಟಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv