Tag: h k patil

  • ರಾಜ್ಯದಲ್ಲಿ 16 ಮಂದಿಯಲ್ಲಿ ಓಮಿಕ್ರಾನ್ ಪತ್ತೆಯಾಗಿದೆ ಎಂಬ ಮಾಹಿತಿ ಇದೆ: ಹೆಚ್.ಕೆ.ಪಾಟೀಲ್

    ರಾಜ್ಯದಲ್ಲಿ 16 ಮಂದಿಯಲ್ಲಿ ಓಮಿಕ್ರಾನ್ ಪತ್ತೆಯಾಗಿದೆ ಎಂಬ ಮಾಹಿತಿ ಇದೆ: ಹೆಚ್.ಕೆ.ಪಾಟೀಲ್

    ಗದಗ: ನನಗೆ ಬಂದಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ 16 ಮಂದಿಯಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಿನ್ನೆವರೆಗೆ ಬಂದಿರುವ ಮಾಹಿತಿ ಪ್ರಕಾರ 16 ಮಂದಿಯಲ್ಲಿ ಓಮಿಕ್ರಾನ್ ಸೋಂಕಿರುವುದು ಪತ್ತೆಯಾಗಿವೆ. ನಿನ್ನೆ ಸಂಜೆವರೆಗೆ ಬಂದ ಪರೀಕ್ಷೆ ವರದಿಯಲ್ಲಿ ಓಮಿಕ್ರಾನ್ ಪೀಡಿತ 16 ರೋಗಿಗಳಿದ್ದಾರೆ ಎಂಬ ಮಾಹಿತಿ ನಮಗೆ ಸಿಕ್ಕಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮತ್ತೆ ಕೇರಳದ ಐವರು ವಿದ್ಯಾರ್ಥಿಗಳಿಗೆ ಕೊರೊನಾ

    ಇದು ಬಹಳ ಗಂಭೀರ ಹಾಗೂ ಆತಂಕಕಾರಿ ಸುದ್ದಿಯಾಗಿದೆ. ಜನರು ಭಯ ಪಡುವ ಅಗತ್ಯ ಇಲ್ಲ, ಜಾಗೃತರಾಗಬೇಕು. ಆದರೆ ಸರ್ಕಾರ ಭಯದಿಂದ ಕೆಲಸ ಮಾಡಬೇಕು. ಓಮಿಕ್ರಾನ್ ವಿಚಾರವಾಗಿ ನಿರ್ಲಕ್ಷ್ಯ ಮಾಡಿದರೇ ತೊಂದರೆಯಾಗಲಿದೆ. ಓಮಿಕ್ರಾನ್ ಟೆಸ್ಟ್ ವರದಿ ಬರಲು 15 ದಿನ ಬೇಕಾ? ವರದಿ ಬರಲು 15 ದಿನವಾದರೆ ಎಷ್ಟು ಸಂಪರ್ಕ ಹಬ್ಬಬಹುದು ಎನ್ನುವುದನ್ನು ಗಮನಿಸಲಿ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ಓಮಿಕ್ರಾನ್ ಬಗ್ಗೆ ಮೊದಲೇ ಮಾಹಿತಿ ಇದ್ದರೂ ಚಿಕಿತ್ಸಾ ವಿಧಾನಗಳ ಪಟ್ಟಿಯನ್ನು ಸಿದ್ಧಮಾಡಿಲ್ಲ. ಆರೋಗ್ಯ ಇಲಾಖೆ 3ನೇ ಅಲೆಗೆ ಸಜ್ಜಾಗಬೇಕಾಗಿತ್ತು, ಆದರೆ ಇನ್ನೂ ಆಗಿಲ್ಲ. ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸುಗಳನ್ನು ಯಥಾವತ್ತಾಗಿ ಜಾರಿಗೊಳಿಸಿ, ಎಲ್ಲಾ ಅಂತಾರಾಷ್ಟ್ರೀಯ ಪ್ರಯಾಣಿಕರ ಸಾಂಸ್ಥಿಕ ಕ್ವಾರಂಟೈನ್ ಮಾಡಿ, ಕನಿಷ್ಠ ಪಕ್ಷ ಆಫ್ರಿಕನ್ ರಾಷ್ಟ್ರದ ಎಕ್ಪೋಜರ್‍ನಿಂದ ಪ್ರಯಾಣಿಕರನ್ನು ಕ್ವಾರಂಟೈನ್ ಮಾಡಬೇಕು. ಕಳೆದ ವಾರ ವಿದೇಶದಿಂದ 436 ಪ್ರಯಾಣಿಕರು ಬಂದಿದ್ದರು. ಅವರಲ್ಲಿ ಹಲವರು ಆಫ್ರಿಕ ಮೂಲದಿಂದ ಬಂದವರು. 100ಕ್ಕೂ ಹೆಚ್ಚು ಜನರು ಟೆಸ್ಟ್ ಮಾಡಿಸಿಕೊಳ್ಳದೇ ಹೋಗಿದ್ದಾರೆ. ಈಗ ಅವರನ್ನು ಹುಡುಕುತ್ತಿದ್ದಾರೆ. ಸರ್ಕಾರದ ಈ ವಿಳಂಭ ನೀತಿ ಸರಿಯಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 3ಕ್ಕೆ ಏರಿಕೆ?

    ಬೆಳಗಾವಿ ಚಳಿಗಾಲದ ಅಧಿವೇಶನ ಕುರಿತು ಮಾತನಾಡಿ, ಅಧಿವೇಶನ ನಡೆಸಬೇಕೋ ಬೇಡವೋ ಎನ್ನುವ ಬಗ್ಗೆ ಸಲಹಾ ಸಮಿತಿ ಸಲಹೆ ಪಡೆಯಲಿ. ಒಮಿಕ್ರಾನ್ ಆಗಲೇ ಕರ್ನಾಟಕ್ಕೆ ಬಂದು ಬಿಟ್ಟಿದೆ. ಸದನ ಸೇರುವ ಬಗ್ಗೆ ಸಲಹಾ ಸಮಿತಿ ಅಭಿಪ್ರಾಯ ಪಡೆಯಬೇಕು. ಇಲ್ಲದೇ ಇದ್ದರೆ ಭಯ, ಆತಂಕದ ವಾತಾವರಣದಲ್ಲಿ ಸದನ ನಡೆಸುವುದು ಸಾಧ್ಯವಿಲ್ಲ. ಬೆಂಗಳೂರಲ್ಲಿ ಅದಿವೇಶನ ನಡೆಸುವುದು ಅಪಾಯಕಾರಿ. ಸದನ ನಡೆಸುವ ವಿಚಾರವನ್ನು ಸರ್ಕಾರ ನಿರ್ಧರಿಸಲಿ. ಆದರೆ ಅದಿವೇಶನಕ್ಕೆ ಬೆಂಗಳೂರಿಗಿಂದ ಬೆಳಗಾಗಿ ಸುರಕ್ಷಿತ. ಬೆಳಗಾವಿ ಜಿಲ್ಲೆ ಮಹಾರಾಷ್ಟ್ರ ರಾಜ್ಯದ ಪಕ್ಕದಲ್ಲೇ ಇದ್ದರೂ ಓಮಿಕ್ರಾನ್ ಆತಂಕ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

  • ಕೋವಿಡ್ ವಿಶೇಷ ಪ್ಯಾಕೇಜ್ ಬಡವರ ಬ್ರೇಕ್ ಫಾಸ್ಟ್ ಗೂ ಆಗಲ್ಲ-ಎಚ್.ಕೆ ಪಾಟೀಲ್

    ಕೋವಿಡ್ ವಿಶೇಷ ಪ್ಯಾಕೇಜ್ ಬಡವರ ಬ್ರೇಕ್ ಫಾಸ್ಟ್ ಗೂ ಆಗಲ್ಲ-ಎಚ್.ಕೆ ಪಾಟೀಲ್

    ಗದಗ: ಕೊರೊನಾದಿಂದಾಗಿ ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಸಿಎಂ ಬಿಎಸ್‍ವೈ ನೀಡಿರುವ ವಿಶೇಷ ಪ್ಯಾಕೇಜ್ ಬಡವರ ಬ್ರೇಕ್ ಫಾಸ್ಟ್ ಗೂ ಸಾಕಗಲ್ಲ ಎನ್ನುವ ಮೂಲಕ ಕಾಂಗ್ರೆಸ್ ಹಿರಿಯ ಶಾಸಕ ಎಚ್.ಕೆ ಪಾಟೀಲ್ ಟೀಕೆ ಮಾಡಿದ್ದಾರೆ.

    ಗದಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಎಚ್.ಕೆ ಪಾಟೀಲ್, ಯಡಿಯೂರಪ್ಪ ಕೊರೊನಾ ಕಷ್ಟಕಾಲದಲ್ಲಿ ಘೋಷಣೆ ಮಾಡಿರುವ ವಿಶೇಷ ಪ್ಯಾಕೇಜ್ ಏನು ಪ್ರಯೋಜನ ಇಲ್ಲ. ಅದರಲ್ಲೂ ಕಲಾ ತಂಡದಲ್ಲಿ ಎಂಟತ್ತು ಜನರಿರುತ್ತಾರೆ ಅವರಿಗೆ 3 ಸಾವಿರ ಯಾವ ಲೆಕ್ಕ ಎಂದು ಹೇಳುವ ಮೂಲಕ ಆರ್ಥಿಕ ಪ್ಯಾಕೇಜ್ ಬಗ್ಗೆ ಪಾಟೀಲ್ ಅಸಮಾಧಾನ ಹೊರಹಾಕಿದ್ದಾರೆ.

    ಟೀಕೆ ಬಂದಿದೆ ಎಂದು ನೀವು ಈ ಕುರಿತು ಯೋಚಿಸಿಸುವುದು ಬೇಡ ಯಡಿಯೂರಪ್ಪನವರೇ ವ್ಯವಹಾರಿಕವಾಗಿ ಆಲೋಚಿಸಿ. ಆಗ ನಿಮಗೆ ತಿಳಿಯುತ್ತದೆ. ತಕ್ಷಣವೇ ಬಡವರಿಗೆ ಮೂರು ಪಟ್ಟು ಹಣ ಕೊಡಲು ವ್ಯವಸ್ಥೆ ಮಾಡಿ ಇದನ್ನು ಹೊರತು ಪಡಿಸಿ. ನೀವು ಈಗ ಕೊಟ್ಟಿರುವ ಪ್ಯಾಕೇಜ್‍ನಿಂದ ಜನರಿಗೆ ಯಾವುದೇ ಉಪಯೋಗವಿಲ್ಲ. ನಿರ್ಣಯ ಮಾಡಿದ್ದಕ್ಕಿಂತಲೂ ಮೂರು ಪಟ್ಟು ಹೆಚ್ಚು ಹಣ ಕೊಡಿ. ಆಗಲೇ ಜನರಿಗೆ ಸ್ವಲ್ಪ ಮಟ್ಟಿಗೆ ಸಮಾಧಾನವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

  • ಕೆಪಿಸಿಸಿ ಅಧ್ಯಕ್ಷರ ನೇಮಕ ವಿಳಂಬ – ಹೈಕಮಾಂಡ್ ಮೇಲೆ ಒತ್ತಡ ಹೇರಲು ಮುಂದಾದ ಕಾಂಗ್ರೆಸ್ ನಾಯಕರು

    ಕೆಪಿಸಿಸಿ ಅಧ್ಯಕ್ಷರ ನೇಮಕ ವಿಳಂಬ – ಹೈಕಮಾಂಡ್ ಮೇಲೆ ಒತ್ತಡ ಹೇರಲು ಮುಂದಾದ ಕಾಂಗ್ರೆಸ್ ನಾಯಕರು

    ನವದೆಹಲಿ: ವಿರೋಧ ಪಕ್ಷ ನಾಯಕ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ಕೆಪಿಸಿಸಿ ಅಧ್ಯಕ್ಷರ ನೇಮಕ ವಿಳಂಬವಾದ ಹಿನ್ನೆಲೆ ಹೈಕಮಾಂಡ್ ಮೇಲೆ ಒತ್ತಡ ಹೇರಲು ರಾಜ್ಯ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ನಿರ್ಧರಿಸಿರುವ ನಾಯಕರು ಶೀಘ್ರ ನೇಮಕಕ್ಕೆ ಒತ್ತಾಯಿಸಲಿದ್ದಾರೆ.

    ಕಾಂಗ್ರೆಸ್ ಹಿರಿಯ ನಾಯಕ ಹಾಗೂ ವಿರೋಧ ಪಕ್ಷದ ಸ್ಥಾನ ಆಕಾಂಕ್ಷಿ ಹೆಚ್.ಕೆ ಪಾಟೀಲ್ ಅವರು ಎಐಸಿಸಿ ಅಧ್ಯಕ್ಷೆ ಸೋನಿಯ ಗಾಂಧಿ ಭೇಟಿಗೆ ಪ್ರಯತ್ನಿಸುತ್ತಿದ್ದಾರೆ. ದೆಹಲಿಯಲ್ಲಿ ಇರುವ ಹೆಚ್.ಕೆ ಪಾಟೀಲ್ ಸೋನಿಯಾ ಗಾಂಧಿ ಸೇರಿ ಹಲವು ವರಿಷ್ಠ ನಾಯಕರ ಭೇಟಿಗೆ ಸಮಯ ಕೇಳಿದ್ದಾರೆ.

    ಬೈ ಎಲೆಕ್ಷನ್ ಬಳಿಕ ದಿನೇಶ್ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ, ಸಿದ್ದರಾಮಯ್ಯ ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ಹೈಕಮಾಂಡ್ ಇನ್ನೂ ಅಂಗಿಕರಿಸಿಲ್ಲ. ರಾಜ್ಯಕ್ಕೆ ಸಮಿತಿಯೊಂದು ಬಂದು ಹೊಸ ನಾಯಕರ ಆಯ್ಕೆಗೆ ಅಭಿಪ್ರಾಯ ಕೂಡ ಸಂಗ್ರಹಿಸಿದೆ. ಆದರೆ ಹೈಕಮಾಂಡ್ ಇದುವರೆಗೂ ಯಾವುದೇ ನಿರ್ಧಾರಗಳನ್ನು ತೆಗೆದುಕೊಂಡಿಲ್ಲ. ಇದರಿಂದ ಪಕ್ಷಕ್ಕೆ ಹಾನಿಯಾಗಲಿದೆ ಎಂದು ಪಾಟೀಲ್ ಹೈಕಮಾಂಡ್ ಮನವರಿಕೆ ಮಾಡಲು ಇಚ್ಛಿಸಿದ್ದಾರೆ.

    ಸಿಎಎ ಸೇರಿ ಹಲವು ಜ್ವಲಂತ ವಿಚಾರಗಳಿವೆ. ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಕಾಂಗ್ರೆಸ್‍ನಲ್ಲಿ ನಾಯಕತ್ವದ ಪ್ರಶ್ನೆ ಹುಟ್ಟಿಕೊಳ್ಳುವುದು ಸರಿಯಲ್ಲ. ಹೈಕಮಾಂಡ್ ಶೀಘ್ರವಾಗಿ ನೇಮಕ ಮಾಡಲು ಹೆಚ್.ಕೆ ಪಾಟೀಲ್ ಒತ್ತಾಯಿಸಲಿದ್ದಾರೆ.

    ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿರುವ ಅವರು, ಇಂದು ಹೈಕಮಾಂಡ್ ನಾಯಕರನ್ನು ಭೇಟಿಯಾಗುವೆ. ಕೆಪಿಸಿಸಿ-ವಿಪಕ್ಷ, ಸಿಎಲ್‍ಪಿ ನಾಯಕನ ಸ್ಥಾನದ ತಡವಾಗಿದೆ. ವಿಳಂಬದಿಂದ ಪಕ್ಷಕ್ಕೆ ಹಾನಿಯುಂಟಾಗುತ್ತಿದೆ. ಪಕ್ಷದ ಹಿತದೃಷ್ಟಿಯಿಂದ ಬೇಗ ನಿರ್ಣಯ ಆಗಬೇಕು ಎಂದು ಮನವಿ ಮಾಡಿಕೊಳ್ಳಲಿದ್ದೇನೆ. ಈ ಬಗ್ಗೆ ಕೆ.ಸಿ. ವೇಣುಗೋಪಾಲ್ ಜೊತೆಗೆ ಚರ್ಚಿಸಲಿದ್ದೇನೆ ಎಂದರು.

  • ಚುನಾವಣೆ ಪ್ರಕ್ರಿಯೆಯಿಂದ ಗೃಹ ಸಚಿವರನ್ನು ದೂರ ಇಡಬೇಕು: ಹೆಚ್‍ಕೆ ಪಾಟೀಲ್ ಆಗ್ರಹ

    ಚುನಾವಣೆ ಪ್ರಕ್ರಿಯೆಯಿಂದ ಗೃಹ ಸಚಿವರನ್ನು ದೂರ ಇಡಬೇಕು: ಹೆಚ್‍ಕೆ ಪಾಟೀಲ್ ಆಗ್ರಹ

    ಕಾರವಾರ: ಗೃಹ ಸಚಿವ ಬಸವರಾಜ್ ಬೊಮ್ಮಾಯಿ ರಾಜೀನಾಮೆಗೆ ಮಾಜಿ ಸಚಿವ ಎಚ್‍ಕೆ ಪಾಟೀಲ್ ಆಗ್ರಹಿಸಿದ್ದಾರೆ.

    ಇಂದು ಶಿರಸಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ನಡೆಯುವವರೆಗೂ ಬೊಮ್ಮಾಯಿ ಚುನಾವಣೆ ಪ್ರಕ್ರಿಯೆಯಿಂದ ದೂರ ಇಡಬೇಕು. ನವೆಂಬರ್ 20 ರಂದು ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ಯಲ್ಲಿ ಗೃಹ ಸಚಿವರ ಕಾರು ತಪಾಸಣೆ ಮಾಡದೇ ಹಾಗೇ ಬಿಡಲಾಗಿತ್ತು. ಈ ಬಗ್ಗೆ ಚೆಕ್‍ಪೋಸ್ಟ್ ನಲ್ಲಿದ್ದ ಪೊಲೀಸರು ಬೆಂಗಾವಲು ವಾಹನದ ಚಾಲಕನನ್ನು ಅಮಾನತು ಮಾಡಲಾಗಿದೆ. ಅಮಾನತು ಮಾಡಿರುವುದು ನೋಡಿದರೆ ಗೃಹ ಸಚಿವರೇ ಅಕ್ರಮ ನಡೆಸಿದಂತೆ ಕಾಣುತ್ತಿದೆ. ಈ ಹಿನ್ನಲೆಯಲ್ಲಿ ರಾಜೀನಾಮೆ ನೀಡುವಂತೆ ಆಗ್ರಹಿಸಿದರು.

    ಬಿಜೆಪಿಯವರು ಮಾಡಿದ ಕುತಂತ್ರಕ್ಕೆ ಜನರು ಚುನಾವಣೆಯಲ್ಲಿ ಉತ್ತರ ಕೊಡಲಿದ್ದಾರೆ. ರಾಜಕೀಯ ಅನೈತಿಕತೆಯನ್ನೇ ಬಿಜೆಪಿಗರು ಅಸ್ತ್ರವನ್ನಾಗಿ ಮಾಡಿಕೊಳ್ಳುತ್ತಿದ್ದಾರೆ. ಮಹಾರಾಷ್ಟ್ರ, ಬೆಂಗಾಲ್‍ನಲ್ಲಿ ಆದ ಮುಖಭಂಗದಿಂದಾದರೂ ಬಿಜೆಪಿ ಪಾಠ ಕಲಿಯಬೇಕು ಎಂದರು.

    ಸಿ.ಎಂ ಯಡಿಯೂರಪ್ಪ, ಸಿದ್ದರಾಮಯ್ಯ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಎಂದಿದ್ದಾರೆ. ಅವರ ವಿರುದ್ಧ ಮಾನನಷ್ಟ ಮೊಕದಮ್ಮೆ ಹಾಕಲಿ. ಈಗ ಸಾರ್ವಜನಿಕರ ಮುಂದೆ ಹೇಳುವುದನ್ನೇ ನ್ಯಾಯಾಲಯದಲ್ಲಿ ಹೇಳುತ್ತೇವೆ. ಯಡಿಯೂರಪ್ಪ ಹುಬ್ಬಳ್ಳಿಯಲ್ಲಿ ಅಮಿತ್ ಶಾ ಒಪ್ಪಿಗೆ ಪಡೆದು ರಾಜೀನಾಮೆ ಕೊಡಿಸಿದ್ದೇವೆ ಎಂದು ಹೇಳಿದ್ದಾರೆ. ಇದರ ವಿಡಿಯೋ ಸಹ ಅವರ ಕಾರ್ಯಕರ್ತರೇ ಹೊರ ಬಿಟ್ಟಿದ್ದಾರೆ ಎಂದು ಹೇಳಿದರು.

    ಭೀಮಣ್ಣ ಗೆಲ್ತಾರೆ: ಯಲ್ಲಾಪುರದ ಕ್ಷೇತ್ರದಲ್ಲಿ ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್ ವಿರುದ್ಧ ಅಕ್ರೋಶದ ಅಲೆ ಇದೆ. ಇದರಿಂದ ಭೀಮಣ್ಣ ನಾಯ್ಕ ಗೆಲ್ಲುತ್ತಾರೆ. ಹೆಬ್ಬಾರ್ ಪಕ್ಷಕ್ಕೆ ದ್ರೋಹವೆಸಗಿ ಹೋಗಿದ್ದಾರೆ ಇದರಿಂದ ಕ್ಷೇತ್ರದಲ್ಲಿ ಅವರ ವಿರುದ್ಧ ಅಲೆ ಹೆಚ್ಚಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಪರ ಅನುಕಂಪವಿದೆ. ಈ ಕಾರಣದಿಂದ ಗೆಲ್ಲುತ್ತಾರೆ ಎಂದು ತಮ್ಮ ಅಭ್ಯರ್ಥಿ ಗೆಲುವಿನ ಕುರಿತು ಪಾಟೀಲ್ ಹೇಳಿದರು.

  • ಸಿಂಹಗೆ ಮೋದಿ ದೇವ್ರು ಇರ್ಬೋದು, ಬೇಕಾದ್ರೆ ಪೂಜೆ ಮಾಡ್ಲಿ – ಆದ್ರೆ ಮೊದ್ಲು ಪರಿಹಾರ ಕೊಡ್ಲಿ: ಕಾಂಗ್ರೆಸ್ ಕಿಡಿ

    ಸಿಂಹಗೆ ಮೋದಿ ದೇವ್ರು ಇರ್ಬೋದು, ಬೇಕಾದ್ರೆ ಪೂಜೆ ಮಾಡ್ಲಿ – ಆದ್ರೆ ಮೊದ್ಲು ಪರಿಹಾರ ಕೊಡ್ಲಿ: ಕಾಂಗ್ರೆಸ್ ಕಿಡಿ

    ಬೆಂಗಳೂರು: ಯಾರೂ ಕಿಸೆಯಿಂದ ಪರಿಹಾರ ಕೊಡಲು ಆಗಲ್ಲ. ಯಾವ ರಾಜ್ಯಕ್ಕೂ ಪ್ರಧಾನಿ ಮೋದಿ ಪರಿಹಾರ ಕೊಟ್ಟಿಲ್ಲ ಎಂಬ ಸಂಸದ ಪ್ರತಾಪ್ ಸಿಂಹ ಅವರ ಹೇಳಿಕೆಗೆ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ.

    ಪ್ರತಾಪ್ ಸಿಂಹ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಸಚಿವ ಹೆಚ್.ಕೆ ಪಾಟೀಲ್, ಸಂಸದರಾಗಿರುವ ಪ್ರತಾಪ್ ಸಿಂಹ ಅವರ ಟಿಪ್ಪಣಿ ಬಹಳ ನೋವು ತರುವಂತದ್ದಾಗಿದೆ. ವೈಚಾರಿಕ ಹಿನ್ನೆಲೆಯಿಂದ ಬಂದ ಸಂಸದರು ಮೋದಿಯನ್ನು ಬೈದರೆ ದೇವರನ್ನು ಬೈದಂಗೆ. ಹೋಲಿಕೆ ಮಾಡುವುದಕ್ಕೆ ಸಮಾನ ಬೇಡವೇ. ಬೇಜವಾಬ್ದಾರಿಯಿಂದ ಕೆಲಸ ಮಾಡುತ್ತಿರುವ ಪ್ರಧಾನಿ ಮೋದಿ ಅವರು ನಮ್ಮ ಉತ್ತರ ಕರ್ನಾಟಕ ಭಾಗದಲ್ಲಿ ಸಾವಿರಕ್ಕೂ ಹೆಚ್ಚು ಗ್ರಾಮಗಳು ಸಂಪೂರ್ಣ ಹಾನಿಯಾಗಿದ್ರೂ ಅವರ ಕಣ್ಣೀರು ಒರೆಸುವ ಕೆಲಸ ಮಾಡಲಿಲ್ಲ. ಈಗ ಅವರ ಆಕ್ರೋಶ ಹೊರಹೊಮ್ಮಿದೆ. ಈಗ ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಯಾರೂ ಕಿಸೆಯಿಂದ ಪರಿಹಾರ ಕೊಡಲು ಆಗಲ್ಲ: ಪ್ರತಾಪ್ ಸಿಂಹ

    ಮಾಜಿ ಡಿಸಿಎಂ ಪರಮೇಶ್ವರ್, ಪ್ರತಾಪ್ ಸಿಂಹಗೆ ಮೋದಿಯವರು ದೇವರು ಆಗಿರಬಹುದು. ಅವರ ಭಾವನೆಗೆ ನಾನು ತಪ್ಪು ಎಂದು ಹೇಳುವುದಿಲ್ಲ. ಏಕೆಂದರೆ ಅವರಿಗೆ ಮೋದಿಯವರೇ ದೇವರು. ಆದರೆ ಕರ್ನಾಟಕದ ಜನತೆಗೆ ಆಗಿರುವಂತಹ ಅನ್ಯಾಯದ ಬಗ್ಗೆ ಮಾತನಾಡಬೇಕು. ನಾವು ನೆರೆಗೆ ಪರಿಹಾರ ಕೊಡಿ ಎಂದು ಕೇಳುತ್ತಿದ್ದೆವೆ ಹೊರತು ಬೇರೆನೂ ನಾವು ಕೇಳುತ್ತಿಲ್ಲ. ಲಕ್ಷಾಂತರ ಜನ ಮನೆ, ದನ, ಕರುಗಳನ್ನು ಕಳೆದುಕೊಂಡಿದ್ದಾರೆ. ನೂರಾರು ಮಂದಿ ಮೃತಪಟ್ಟಿದ್ದಾರೆ. ನಿಮಗೆ ಕರ್ನಾಟಕದ ಮೇಲೆ ಅಷ್ಟು ಕೂಡ ಕನಿಕರ ಇಲ್ವಾ ಎಂದು ನಾನು ಪ್ರತಾಪ್ ಅವರು ಕೇಳಬೇಕು. ಅದು ಬಿಟ್ಟು ಮೋದಿ ದೇವರು ಎಂದರೆ ಅವರು ಪೂಜೆ ಮಾಡಿಕೊಳ್ಳಿ ನಾವೇನು ಬೇಡ ಎನ್ನುವುದಿಲ್ಲ. ಅದು ಅವರ ವೈಯಕ್ತಿಕ ವಿಚಾರ ಎಂದು ಹೇಳಿದ್ದಾರೆ.

    ಇಲ್ಲಿ ಯಾರೂ ದೇವರಾಗಲು ಸಾಧ್ಯವಿಲ್ಲ. ಪತ್ರಾಪ್ ಸಿಂಹ ಅವರು ಬಕೆಟ್ ಪಾಲಿಟಿಕ್ಸ್ ಮಾಡುತ್ತಿದ್ದಾರೆ. ಅವರಿಗೆ ಭಟ್ಟಂಗಿತನ ಮಾಡುವುದು ಮಾತ್ರ ಗೊತ್ತಿದೆ. ಇಂದು ಅವರು ಭಟ್ಟಂಗಿತನ ಮಾಡಿ ತಮ್ಮ ಸ್ವಾರ್ಥಕ್ಕಾಗಿ ಉಪಯೋಗತನ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ ಕಿಡಿಕಾರಿದ್ದಾರೆ.

    ಪ್ರತಾಪ್ ಸಿಂಹ ಹೇಳಿದ್ದೇನು?
    ಒಂದು ವಿಷಯವನ್ನು ಸ್ಪಷ್ಟವಾಗಿ ಹೇಳಲು ಇಷ್ಟಪಡುತ್ತೇನೆ. ಕೇಂದ್ರ ಸರ್ಕಾರ ಪರಿಹಾರ ಕೊಡುವುದಿಲ್ಲ. ಎನ್‍ಡಿಆರ್‍ಎಫ್ ಹಾಗೂ ಎಸ್‍ಡಿಆರ್‍ಎಫ್ ರೈತರಿಗೆ ಕೃಷಿ ಚಟುವಟಿಕೆ ತೊಂದರೆಯಾದರೆ ಮೊದಲಿನಿಂದ ಶುರು ಮಾಡುವುದಕ್ಕೆ ಕೊಡುವ ಸಹಾಯಧನವೇ ಹೊರತು ಪರಿಹಾರ ಅಲ್ಲ. ದೇಶಾದ್ಯಂತ ನೆರೆ ಬಂದಾಗ ಯಾವ ಸರ್ಕಾರ ಕೂಡ ಪರಿಹಾರ ಕೊಡುವುದಿಲ್ಲ. ಅವರು ಕೊಡುವುದು ಸಹಾಯಧನ. ಮೋದಿ ಅವರು ಕರ್ನಾಟಕದ ಮೇಲೆ ಬಹಳ ಪ್ರೀತಿ ಇಟ್ಟುಕೊಂಡು ಏನೇನು ಅನುದಾನ ಕೊಡಬೇಕಿತ್ತೋ ಆ ಅನುದಾನವನ್ನು ಕೊಟ್ಟಿದ್ದಾರೆ. ಎನ್‍ಡಿಆರೆಫ್ ತಂಡ ಅನುದಾನವನ್ನು ಬಿಡುಗಡೆ ಮಾಡಬೇಕಿದೆ. ಅದಕ್ಕೆ ತಂಡ ಬಂದು ಪರಿಶೀಲನೆ ಮಾಡಿಕೊಂಡು ಹೋಗಿದೆ. ಪರಿಹಾರ ಎಂದಾಕ್ಷಣ ಯಾರೂ ಕಿಸೆಯಿಂದ ಪರಿಹಾರ ಕೊಡುವುದಲ್ಲ. ಅದಕ್ಕೆ ಅಂತಾನೇ ತುಂಬಾನೇ ಪ್ರಕ್ರಿಯೆಗಳು ಇರುತ್ತದೆ ಎಂದು ಹೇಳಿದ್ದರು.

  • ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಹೆಚ್.ಕೆ ಪಾಟೀಲ್  ರಾಜೀನಾಮೆ

    ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಹೆಚ್.ಕೆ ಪಾಟೀಲ್ ರಾಜೀನಾಮೆ

    ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಮೈತ್ರಿ ಪಾಳಯದಲ್ಲಿ ರಾಜೀನಾಮೆ ಕೂಗೂ ಹೆಚ್ಚಾಗುತ್ತಿದೆ. ಈ ನಡುವೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಹೆಚ್.ಕೆ ಪಾಟೀಲ್ ಅವರು ರಾಜೀನಾಮೆ ನೀಡಿದ್ದಾರೆ.

    ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದ ಹೆಚ್.ಕೆ ಪಾಟೀಲ್ ಎಐಸಿಸಿ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯ ಖಾಸಗಿ ಹೊಟೇಲ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಮತದಾನ ಮಾಡಿದ ಮತದಾರರಿಗೆ ಧನ್ಯವಾದಗಳು. ಜನ ಏನು ತೀರ್ಪು ಕೊಟ್ಟಿದ್ದಾರೆ ಅದಕ್ಕೆ ನಾವು ತಲೆಬಾಗುತ್ತೇವೆ. ಈ ಫಲಿತಾಂಶದಿಂದ ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ. ಪಕ್ಷವನ್ನು ಸಂಘಟನೆ ಮಾಡುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

    ಈ ರೀತಿಯಲ್ಲಿ ಸೋಲಿಗೆ ಮೈತ್ರಿ ಮಾಡಿಕೊಂಡದ್ದು ಒಂದು ಕಾರಣ ಇರಬಹುದು. ಆದರೆ ಅದೇ ಮುಖ್ಯ ಕಾರಣ ಅಲ್ಲ. ಈ ಸೋಲು ರಾಜ್ಯ ಸರ್ಕಾರದ ಮೇಲೆ ಪ್ರಭಾವ ಬೀರುತ್ತದೆ. ಅದನ್ನು ನಮ್ಮ ಹಿರಿಯ ನಾಯಕರು ಸಮರ್ಥವಾಗಿ ನಿಭಾಯಿಸಬೇಕು ಎಂದು ಹೇಳಿದರು.

    ಲೋಕಸಭಾ ಚುನಾವಣೆಯಲ್ಲಿ ಎನ್‍ಡಿಎ 352 ಸ್ಥಾನ ಗಳಿಸಿದ್ದರೆ, ಯುಪಿಎ 87 ಹಾಗೂ ಇತರೇ 103 ಸ್ಥಾನವನ್ನು ಗೆದ್ದಿದೆ. ಹಾಗೆಯೇ ಕರ್ನಾಟಕದಲ್ಲಿ ಇದ್ದ 28 ಕ್ಷೇತ್ರದಲ್ಲಿ ಬಿಜೆಪಿ 25 ಕ್ಷೇತ್ರದಲ್ಲಿ ಭರ್ಜರಿ ಜಯ ಗಳಿಸಿದೆ. ಸದ್ಯ ರಾಜ್ಯದಲ್ಲಿ ಆಡಳಿತದಲ್ಲಿರುವ ಮೈತ್ರಿ ಸರ್ಕಾರದ ಅಭ್ಯರ್ಥಿಗಳು 2 ಕ್ಷೇತ್ರದಲ್ಲಿ ಗೆದ್ದಿದ್ದಾರೆ.

  • ಸೈನಿಕರ ಡ್ರೆಸ್ ಹಾಕ್ಕೊಂಡು ಪೋಸ್ ನೀಡಿ ಸೈನಿಕರಿಗೆ ಮೋದಿಯಿಂದ ದ್ರೋಹ: ಎಚ್.ಕೆ.ಪಾಟೀಲ್ ಕಿಡಿ

    ಸೈನಿಕರ ಡ್ರೆಸ್ ಹಾಕ್ಕೊಂಡು ಪೋಸ್ ನೀಡಿ ಸೈನಿಕರಿಗೆ ಮೋದಿಯಿಂದ ದ್ರೋಹ: ಎಚ್.ಕೆ.ಪಾಟೀಲ್ ಕಿಡಿ

    ಗದಗ: ಸೈನಿಕರ ಡ್ರೆಸ್ ಹಾಕಿಕೊಂಡು ಪೋಸ್ ನೀಡಿ ಸೈನಿಕರಿಗೆ ದ್ರೋಹಮಾಡಿದ್ದಾರೆ. ಆದ್ದರಿಂದ ಪ್ರಧಾನಿ ನರೇಂದ್ರ ಮೋದಿ ಅವರನ್ನ ಚುನಾವಣೆ ಪ್ರಚಾರದಿಂದ ತಿರಸ್ಕರಿಸುವಂತೆ ಕೇಂದ್ರ ಚುನಾವಣೆ ಆಯೋಗಕ್ಕೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ ಪಾಟೀಲ್ ಆಗ್ರಹಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಒಟ್ಟಾಗಿ ಚುನಾವಣೆ ಎದುರಿಸುತ್ತಿದೆ. ಕರ್ನಾಟಕದಲ್ಲಿ 20 ಕ್ಷೇತ್ರದಲ್ಲಿ ಮೈತ್ರಿ ಪಕ್ಷ ಗೆಲ್ಲುವ ನಿರೀಕ್ಷೆ ಇದೆ. ಕಾಂಗ್ರೆಸ್ ಪ್ರಣಾಳಿಕೆ ಬಂದ ನಂತರ ಬಿಜೆಪಿ ಸಂಪೂರ್ಣವಾಗಿ ತತ್ತರಿಸಿ ಹೋಗಿದೆ. ಕಾಂಗ್ರೆಸ್ ಪ್ರಣಾಳಿಕೆಗೆ ಉತ್ತರಿಸುವ ನೈತಿಕ ಶಕ್ತಿ ಬಿಜೆಪಿ ಕಳೆದುಕೊಂಡಿದೆ. ಹಾಗೆಯೇ ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಮೋದಿ, ಅಮಿತ್ ಶಾ ಪ್ರಶ್ನೆ ಮಾಡಲಿ. ಆದ್ರೆ ಕಾಂಗ್ರೆಸ್ ಪ್ರಣಾಳಿಕೆ ಮೇಲೆ ಮಾತನಾಡುವ ನೈತಿಕತೆ ರಾಜೀವ್ ಕುಮಾರ್ ಗೆ  ಏನಿದೆ ಎಂದು ನೀತಿ ಆಯೋಗದ ಉಪಾಧ್ಯಕ್ಷರ ವಿರುದ್ಧ ಎಚ್.ಕೆ ಪಾಟೀಲ್ ಕಿಡಿಕಾರಿದರು.

    ಬಿಜೆಪಿ ನಾಯಕರು ಅರಾಜಕತೆ ನಡೆಸಿದ್ದಾರೆ. ಸಾರ್ವಜನಿಕ ಭಾಷಣದಲ್ಲಿ ಯೋಗಿ ಆದಿತ್ಯನಾಥ್ ಮರ್ಯಾದೆ ಕಳೆಯುವ ಮಾತುಗಳನ್ನಾಡಿದ್ದಾರೆ. ಮೋದಿ ಸೇನೆ ರಾಷ್ಟ್ರಕ್ಕೆ ರಕ್ಷಣೆ ಕೊಡ್ತಿದೆ ಎಂಬ ದೇಶದ್ರೋಹಿ ಹೇಳಿಕೆ ನೀಡಿದ್ದಾರೆ. ಮೋದಿ ಸೇನೆ ಅಲ್ಲ, ಅದು ಭಾರತದ ಸೇನೆ. ಸಂವಿಧಾನದ ಉನ್ನತ ಹುದ್ದೆಯಲ್ಲಿರುವ ಯೋಗಿ ಆದಿತ್ಯನಾಥ್ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಚುನಾವಣೆ ಮುಗಿಯುವವರೆಗೂ ಯೋಗಿ ಆದಿತ್ಯನಾಥ್ ಎಲ್ಲೂ ಮಾತನಾಡದಂತೆ ಚುನಾವಣೆ ಆಯೋಗ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

    ರಾಜಸ್ಥಾನ ರಾಜ್ಯಪಾಲ ಕಲ್ಯಾಣ್‍ಸಿಂಗ್ ಬಿಜೆಪಿ ಪರ ಬ್ಯಾಟಿಂಗ್ ನಡೆಸಿದ್ದಾರೆ. ಚುನಾವಣೆ ಮುಗಿಯುವ ವರೆಗೂ ಕಲ್ಯಾಣ್‍ಸಿಂಗ್ ಅವರ ಮಾತುಗಳ ಮೇಲೂ ನಿರ್ಬಂಧ ಹೇರಬೇಕೆಂದು ಅವರು ರಾಷ್ಟ್ರಪತಿಗಳಲ್ಲಿ ಮನವಿ ಮಾಡುವುದಾಗಿ ಹೇಳಿದರು.

  • ಏನ್ರೀ, ಅವ್ರನ್ನ ಕರೆದುಕೊಂಡು ಹೋಗೋದಕ್ಕೆ ತೀರ್ಮಾನ ಮಾಡಿದ್ದೀರಾ: ಈಶ್ವರಪ್ಪ ಕಾಲೆಳೆದ ಡಿಕೆಶಿ

    ಏನ್ರೀ, ಅವ್ರನ್ನ ಕರೆದುಕೊಂಡು ಹೋಗೋದಕ್ಕೆ ತೀರ್ಮಾನ ಮಾಡಿದ್ದೀರಾ: ಈಶ್ವರಪ್ಪ ಕಾಲೆಳೆದ ಡಿಕೆಶಿ

    – ನೀರಾವರಿ ಸಭೆಯಲ್ಲೂ ಆಪರೇಷನ್ ಕಮಲದ್ದೇ ಮಾತು

    ಬೆಂಗಳೂರು: ವಿಧಾನಸೌಧದಲ್ಲಿ ಸಿಎಂ ಕುಮಾರಸ್ವಾಮಿ ಸಮ್ಮುಖದಲ್ಲಿ ನಡೆದ ನೀರಾವರಿ ಸಭೆಯಲ್ಲಿಯೂ ಆಪರೇಷನ್ ಕಮಲದ ವಿಚಾರವಾಗಿ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರನ್ನು ಕಾಲೆಳೆದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸಭೆಯಲ್ಲಿ ಹಾಸ್ಯ ಹರಿಸಿದ್ದಾರೆ.

    ಸಭೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಒಂದಾಗಿ ಕುಳಿತಿದ್ದರು. ಎಚ್.ಕೆ.ಪಾಟೀಲ್, ಕೆ.ಎಸ್.ಈಶ್ವರಪ್ಪ, ಬಸವರಾಜ ಬೊಮ್ಮಾಯಿ ಹಾಗೂ ಎಂ.ಬಿ.ಪಾಟೀಲ್ ಸಾಲಾಗಿ ಕುಳಿತು ಮಾತುಕತೆಯಲ್ಲಿ ತೊಡಗಿದ್ದರು. ಇದನ್ನು ಗಮನಿಸಿದ ಸಚಿವ ಡಿ.ಕೆ.ಶಿವಕುಮಾರ್ ಅವರು, “ಅವರನ್ನ ಕರೆದುಕೊಂಡು ಹೋಗುವುದಕ್ಕೆ ತೀರ್ಮಾನ ಮಾಡಿದ್ದೀರಾ” ಎಂದು ಕೆ.ಎಸ್.ಈಶ್ವರಪ್ಪ ಅವರಿಗೆ ಹೇಳುತ್ತಲೇ, “ನಿಮ್ಮ ಮೇಲೆ ಕಣ್ಣು ಹಾಕಿದ್ದಾರೆ” ಅಂತ ಎಚ್.ಕೆ.ಪಾಟೀಲ್ ಅವರಿಗೆ ತಿಳಿಸಿ ಕಾಲೆಳೆದರು.


    ತಕ್ಷಣವೇ ಡಿ.ಕೆ.ಶಿವಕುಮಾರ್ ಅವರಿಗೆ ಉತ್ತರ ಕೊಟ್ಟ ಈಶ್ವರಪ್ಪ ಅವರು,”ಒಂದು ಪರ್ಸೇಂಟ್ ಆದ್ರೂ ಯಶಸ್ವಿ ಆಗುತ್ತೆ ಅಂತ ನಿನಗೆ ಆದ್ರು ನಂಬಿಕೆ ಇದೆಯೇನಪ್ಪಾ” ಎಂದು ಪ್ರಶ್ನೆದರು. ಈ ವೇಳೆ ಸಿಎಂ ಕುಮಾರಸ್ವಾಮಿ ಅವರನ್ನು ನೋಡಿದ ಈಶ್ವರಪ್ಪ ನಗುತ್ತಲೇ ಕೈಮುಗಿದರು. ಇದಕ್ಕೆ ಕೂಡಲೇ ಡಿಕೆಶಿ, “ಎಚ್.ಕೆ. ಪಾಟೀಲ್ ಅವರನ್ನಾದರೂ ಕರೆದುಕೊಂಡು ಹೋಗಬಹುದು ಅಂತ ನಂಬಬಹುದು. ಆದರೆ ಎಂ.ಬಿ.ಪಾಟೀಲ್ ಅವರನ್ನು ಕರೆದುಕೊಂಡು ಹೋಗಲು ಸಾಧ್ಯವೇ” ಎಂದು ಪ್ರಶ್ನಿಸಿದ ಸಚಿವರು  ಹಾಸ್ಯ ಮಾಡಿದರು.

    ಇತ್ತ ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್ ಹಾಗೂ ಸಿದ್ದರಾಮಯ್ಯ ಅವರ ಮಾತುಕತೆ ಜೋರಾಗಿಯೇ ಇತ್ತು. ನಗುತ್ತಲೇ ಇಬ್ಬರು ಚರ್ಚೆಯಲ್ಲಿ ತೊಡಗಿದ್ದರು. ಕಾಂಗ್ರೆಸ್ ಹಾಗೂ ಬಿಜೆಪಿಯ ನಾಯಕರು ರಾಜಕೀಯ ಟೀಕಾಪ್ರಹಾರ ಪಕ್ಕಕ್ಕೆ ಸರಿಸಿ ಸಭೆಯಲ್ಲಿ ಭಾಗವಹಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಳಸಾ ಬಂಡೂರಿ ನೀರಿನ ತೀರ್ಪಿನ ವಿಷಯದಲ್ಲಿ ಅನಂತ ಕುಮಾರ್ ಕೊಡುಗೆ ಅನನ್ಯ: ಎಚ್.ಕೆ ಪಾಟೀಲ್

    ಕಳಸಾ ಬಂಡೂರಿ ನೀರಿನ ತೀರ್ಪಿನ ವಿಷಯದಲ್ಲಿ ಅನಂತ ಕುಮಾರ್ ಕೊಡುಗೆ ಅನನ್ಯ: ಎಚ್.ಕೆ ಪಾಟೀಲ್

    ಗದಗ: ಅನಂತ ಕುಮಾರ್ ಕರ್ನಾಟಕದ ಒಬ್ಬ ಎತ್ತರದ ನಾಯಕ. ಕರ್ನಾಟಕ ಹಿತ ಕಾಪಾಡುವಲ್ಲಿ ಮುತ್ಸದ್ದಿ ನಾಯಕರಾಗಿ ಪಕ್ಷಾತಿತವಾಗಿ ದಿಟ್ಟ ನಿಲುವು ತಾಳುತ್ತಿದ್ದ ಗೆಳೆಯನ ಅಗಲುವಿಕೆ ಸಾಕಷ್ಟು ನೋವುಂಟಾಗಿದೆ ಎಂದು ಮಾಜಿ ಸಚಿವ ಎಚ್.ಕೆ ಪಾಟೀಲ್ ಅನಂತ್ ಕುಮಾರ ನಿಧನಕ್ಕೆ ಕಂಬನಿ ಮಿಡಿದರು.

    ಅನಂತ ಕುಮಾರ್ ವಿದ್ಯಾರ್ಥಿ ದೆಸೆಯಿಂದಲೇ ನಾಯಕತ್ವ ಜೊತೆಗೆ ಸಂಘಟನೆಗೆ ಧುಮುಕಿದವರು. ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ, ವಿದ್ಯಾರ್ಥಿಗಳ ಒಳಿತಿಗೆ, ವಿದ್ಯಾರ್ಥಿಗಳ ಶಕ್ತಿಗೆ ಚಿಂತನೆ ಮಾಡಿದ ಒಬ್ಬ ಯುವನಾಯಕ. ನನ್ನ ಅವರ ಸಂಪರ್ಕ ಬಹಳ ಗಾಢವಾಗಿತ್ತು. ಸೆನೆಟ್ ಸದಸ್ಯನಾಗುವ ಚುನಾವಣೆಯಲ್ಲಿ ಜೊತೆಗೂಡಿ ಕೆಲಸ ಮಾಡಿದ ನೆನಪು ಅಚ್ಚಳಿಯದಂತಿವೆ. ನಾನು ವಿಧಾನ ಪರಿಷತ್ ಸದಸ್ಯನಿದ್ದಾಗಲೂ ಹಲವಾರು ಸಲಹೆ ಸೂಚನೆಗಳನ್ನು ನೀಡುತ್ತಿದ್ದರು. ಹುಬ್ಬಳ್ಳಿಯಲ್ಲಿ ಒಟ್ಟಿಗೆ ಬಹಳಷ್ಟು ಕಾಲ ಕಳೆದಿದ್ದೇವೆ. ಅನಂತ ಕುಮಾರ್ ನಾವು ಉತ್ತಮ ಗೆಳೆಯರಾಗಿದ್ದೇವು ಎಂದು ಎಚ್.ಕೆ ಪಾಟೀಲ್ ಸ್ಮರಿಸಿಕೊಂಡರು.

    ಅನಂತ ಕುಮಾರ್ ವಾಜಪೇಯಿ, ಎಲ್.ಕೆ ಆಡ್ವಾಣಿ ಅವರಿಂದ ಬಹಳ ಪ್ರೀತಿ, ವಿಶ್ವಾಸ ಗಳಿಸಿಕೊಂಡಿದ್ದರು. ಅನಂತ ಕುಮಾರ್ ಕರ್ನಾಟಕದಲ್ಲಿ ಎಬಿವಿಪಿ ಹಾಗೂ ಬಿಜೆಪಿ ಸಂಘಟನೆ ಮಾಡಲು ಬಹಳ ಯಶಸ್ವಿಯಾದರು. ಕೇಂದ್ರ ಸಚಿವರಾದ ವೇಳೆ ಕರ್ನಾಟಕ ವಿಷಯ ವಿಚಾರಗಳು ಬಂದಾಗ ಪಕ್ಷಾತೀತವಾಗಿ ಕೆಲಸ ಮಾಡುತ್ತಿದ್ದರು. ಕೃಷ್ಣ, ಕಾವೇರಿ ವಿವಾದಗಳು, ಸಮಸ್ಯೆಗಳು ಬಂದಾಗ ಸಲೀಸಾಗಿ ಬಗೆಹರಿಸುತ್ತಿದ್ದರು. ಒಗ್ಗಟ್ಟಿನ ನಿಲುವು ಅವರಲ್ಲಿತ್ತು ಕರ್ನಾಟಕ ವಿಷಯದಲ್ಲಿ ಬಹಳ ಮುತುವರ್ಜಿ ತೋರಿಸುತ್ತಿದ್ದರು ಎಂದು ಹೇಳಿದರು.

    ಕಳಸಾ ಬಂಡೂರಿಗೆ ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟ ಮೇಲೆ ಒಪ್ಪಿಗೆ ರದ್ದಾಗುವ ಪ್ರಸಂಗ ನಿರ್ಮಾಣವಾಗಿತ್ತು. ಆ ವೇಳೆ ಒಪ್ಪಿಗೆ ನೀಡಿದ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಿದ ರಾಜಕೀಯ ನಿರ್ಣಯ ತೆಗೆದುಕೊಂಡರು. ಪ್ರತ್ಯತ್ತರವಾಗಿ ಎಸ್.ಎಂ ಕೃಷ್ಣ, ವಾಜಪೇಯಿ ಅವರಿಗೆ ಪತ್ರ ಬರೆದರು. ಕಳಸಾ ಬಂಡೂರಿ ನೀರಿನ ತೀರ್ಪಿನ ವಿಷಯದಲ್ಲಿ ಅನಂತ ಕುಮಾರ್ ಕೊಡುಗೆ ಅನನ್ಯವಾಗಿದೆ. ಅನಂತ ಕುಮಾರ್ ಅವರ ಬಹಳ ಉಜ್ವಲ ಭವಿಷ್ಯ ನೋಡಬೇಕಾಗಿತ್ತು. ಅವರ ಅಕಾಲಿಕೆಯ ಅಗಲುವಿಕೆ ಕರ್ನಾಟಕಕ್ಕೆ ತುಂಬಲಾರದ ಹಾನಿಯಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಎಚ್.ಕೆ ಪಾಟೀಲ್ ಕಂಬನಿ ಮಿಡಿದರು.

     

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಕಾಂಗ್ರೆಸ್ ಸಿಎಲ್‍ಪಿ ಸಭೆ: ಏನೇನು ಚರ್ಚೆ ಆಯ್ತು? ಇನ್‍ಸೈಡ್ ಸ್ಟೋರಿ ಇಲ್ಲಿದೆ

    ಕಾಂಗ್ರೆಸ್ ಸಿಎಲ್‍ಪಿ ಸಭೆ: ಏನೇನು ಚರ್ಚೆ ಆಯ್ತು? ಇನ್‍ಸೈಡ್ ಸ್ಟೋರಿ ಇಲ್ಲಿದೆ

    ಬೆಂಗಳೂರು: ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಕಾಂಗ್ರೆಸ್ ಶಾಸಕಾಂಗ ಸಭೆ ನಡೆದಿದ್ದು, ಈ ವೇಳೆ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರಿಗೆ ಶಾಸಕರು ಕ್ಲಾಸ್ ತೆಗೆದುಕೊಂಡಿದ್ದಾರೆ.

    ಸಮ್ಮಿಶ್ರ ಸರ್ಕಾರ ರಚನೆಯಾದ ಬಳಿಕ ಮೊದಲ ಸಿಎಲ್‍ಪಿ ಸಭೆ ಇಂದು ನಡೆದಿದ್ದು, ಸಭೆಯಲ್ಲಿ ಬಜೆಟ್ ಮಂಡನೆಯಿಂದಾದ ಗೊಂದಲದ ಜೊತೆಗೆ ಸಭಾಪತಿ ಸ್ಥಾನ ಜೆಡಿಎಸ್‍ಗೆ ಬಿಟ್ಟುಕೊಡುವ ವಿಚಾರ, ಸಂಪುಟ ವಿಸ್ತರಣೆ, ಜಿಲ್ಲಾ ಉಸ್ತುವಾರಿ ಸಚಿವರ ನೇಮಕ, ನಿಗಮ ಮಂಡಳಿ ನೇಮಕ, ಪೆಟ್ರೋಲ್, ವಿದ್ಯುತ್ ದರ ಏರಿಕೆಯ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

    ಕುಮಾರಸ್ವಾಮಿ ಹೇಳಿದ್ದಕ್ಕೆಲ್ಲಾ ನೀವು ತಲೆ ಅಲ್ಲಾಡಿಸುತ್ತೀರಿ. ಡಿಸಿಎಂ ಹುದ್ದೆ, ಅಧಿಕಾರ ಬರುತ್ತೆ ಹೋಗುತ್ತೆ. ಆದ್ರೆ ನಮಗೆ ಪಕ್ಷ ಮುಖ್ಯವಾಗುತ್ತದೆ. ಕಾಂಗ್ರೆಸ್ ಪಕ್ಷದ ಬುಡ ಅಲುಗಾಡದಂತೆ ನೋಡಿಕೊಳ್ಳಿ ಎಂದು ಕೈ ಶಾಸಕರು ಪರಮೇಶ್ವರ್ ಅವರನ್ನು ಪ್ರಶ್ನಿಸಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ ಎಂದು ಮೂಲಗಳು ಪಬ್ಲಿಕ್ ಟಿವಿ ಮೂಲಗಳು ತಿಳಿಸಿವೆ.

    ಸಭೆಯಲ್ಲಿ ಬಜೆಟ್ ನಲ್ಲಿ ಅಲ್ಪಸಂಖ್ಯಾತರ ಬಗ್ಗೆ ಒಂದೇ ಒಂದು ವಿಷಯ ಪ್ರಸ್ತಾಪಕ್ಕೆ ಮಾಡದ್ದಕ್ಕೆ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದು, ಇದರಿಂದ ಕೆಟ್ಟ ಸಂದೇಶ ರವಾನೆ ಆಗುತ್ತದೆ. ಬಜೆಟ್ ಉತ್ತರದಲ್ಲಿ ಇದನ್ನ ಸರಿಪಡಿಸಬೇಕು. ಕಾಂಗ್ರೆಸ್ ನಾಯಕರ ಜೊತೆಗೆ ಸಮಾಲೋಚನೆ ಮಾಡದೇ ಪೆಟ್ರೋಲ್ ಸೆಸ್ ಏರಿಕೆ ಮಾಡಿದ್ದಾರೆ. ಪೆಟ್ರೋಲ್ ಬೆಲೆ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಕೇಂದ್ರದ ವಿರುದ್ಧ ಪ್ರತಿಭಟಿಸುತ್ತಿದ್ದಾರೆ. ಹೀಗಿರುವಾಗ ನಮ್ಮ ಸರ್ಕಾರದಲ್ಲೇ ಸೆಸ್ ಬೆಲೆ ಏರಿಕೆಗೆ ಸಮ್ಮತಿ ನೀಡಿದ್ದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಸರ್ಕಾರಕ್ಕೆ ಪೆಟ್ರೋಲ್ ಮೇಲಿನ ಸೆಸ್ ಗೆ ಸಾವಿರ ಕೋಟಿ ಹೊರೆಯಾಗಬಹುದು. ಹಾಗಂತ ಪೆಟ್ರೋಲ್ ಬೆಲೆ ಏರಿಕೆ ಮಾಡಿದ್ದು ಸರಿಯಿಲ್ಲ. ಇದನ್ನು ವಾಪಾಸ್ ಪಡೆಯಬೇಕು. ಈ ಬಗ್ಗೆ ಸಿಎಂ ಗಮನ ಸೆಳೆಯಲು ಕಾಂಗ್ರೆಸ್ ನಾಯಕರು ತೀರ್ಮಾನಿಸಬೇಕು. ಇನ್ನೂ ಅನ್ನಭಾಗ್ಯ ಯೋಜನೆಯಡಿ ನೀಡುತ್ತಿದ್ದ ಇದ್ದ ಏಳು ಕೆಜಿ ಅಕ್ಕಿಯನ್ನು ಕೊಡಬೇಕು. ಎರಡು ಕೆಜಿ 700 ಕೋಟಿ ರೂಪಾಯಿ ಹೆಚ್ಚಳವಾಗುತ್ತದೆ. ಅದು ಸರ್ಕಾರಕ್ಕೆ ಅಷ್ಟೊಂದು ಹೊರೆಯಾಗೋದಿಲ್ಲ. ಐದು ಕೆಜಿ ಯಿಂದ ಎರಡು ಕೆಜಿ ಗೆ ಇಳಿಸಿರೋದು ಸರಿಯಲ್ಲ. ಕಾಂಗ್ರೆಸ್ ಸರ್ಕಾರದ ಪ್ರಮುಖ ಯೋಜನೆಗೆ ಈ ರೀತಿ ಕತ್ತರಿ ಹಾಕಿದ್ದು ಸರಿಯೇ ಎಂದು ಸಭೆಯಲ್ಲಿ ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ಅವರನ್ನು ಶಾಸಕರು ಪ್ರಶ್ನಿಸಿದ್ದಾರೆ. ನಾಳೆ ಬಜೆಟ್ ಮೇಲೆ ಸಿಎಂ ಉತ್ತರ ಕೊಡುವಾಗ ಇವೆಲ್ಲವನ್ನು ಹೇಳಬೇಕು. ಈ ಬಗ್ಗೆ ಕಾಂಗ್ರೆಸ್ ನಾಯಕರು ಒಟ್ಟಾಗಿ ಸಿಎಂ ಗಮನಕ್ಕೆ ತರಬೇಕು ಅಂತ ಶಾಸಕರು ಆಗ್ರಹಿಸಿದ್ದಾರೆ.

    ಈ ವೇಳೆ ಉತ್ತರ ಕರ್ನಾಟಕ, ಕರಾವಳಿ ಕರ್ನಾಟಕ ಭಾಗದ ಶಾಸಕರಿಂದ ಅಸಮಾಧಾನ ವ್ಯಕ್ತವಾಗಿದೆ. ಪೆಟ್ರೋಲ್ ಏರಿಕೆ ಬಗ್ಗೆ ನಾವೇ ಕೇಂದ್ರ ಸರ್ಕಾರದ ಹೋರಾಟ ಮಾಡಿದ್ವಿ. ಈಗ ನಾವೇ ಹೆಚ್ಚಳ ಮಾಡಿದ್ರೆ ನಾವು ಹೇಗೆ ಮುಂದೆ ಹೋರಾಟ ಮಾಡೋದು? ಜನ ಸಾಮಾನ್ಯರಿಗೆ ಹೊರೆ ಆಗುವಂತೆ ವಿದ್ಯುತ್ ಬೆಲೆ ಏರಿಕೆ ಮಾಡಿದ್ದು ಸರಿಯಲ್ಲ. ಹಿಂಗೆ ಆದ್ರೆ ನಾವು ಜನರ ಬಳಿ ಹೋಗೋದು ಹೇಗೆ ಅಂತ ಶಾಸಕರು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

    ಸಭೆಯ ಮಧ್ಯೆ ಕೆಪಿಸಿಸಿ ಅಧ್ಯಕ್ಷ, ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೊರನಡೆದಿದ್ದರು.

    ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಎಚ್‍ಕೆ ಪಾಟೀಲ್, ಸಿಎಂ ಹಾಗೂ ಸಿದ್ದರಾಮಯ್ಯಗೆ ಬರೆದ ಪತ್ರದ ಬಗ್ಗೆ ಇವತ್ತಿನ ಸಭೆಯಲ್ಲಿ ಚರ್ಚೆ ಆಗಿದೆ. ಬಜೆಟ್ ನಲ್ಲಿ ಉತ್ತರ ಕರ್ನಾಟಕ ಹಾಗೂ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿರುವ ಬಗ್ಗೆ ತಿಳಿಸಿದ್ದೇನೆ. ನನ್ನ ಅನಿಸಿಕೆಯನ್ನ ಸಭೆಯಲ್ಲಿ ತಿಳಿಸಿದ್ದು, ಅದನ್ನು ನಾಯಕರು ಗಂಭೀರವಾಗಿ ಪರಿಗಣಿಸಿದ್ದಾರೆ. ಸಂಪೂರ್ಣ ಕರ್ನಾಟಕಕ್ಕೆ ಒಳ್ಳೆಯಾದಾಗುವ ಕುರಿತು ನಿರ್ಧಾರ ಮಾಡ್ತಾರೆ ಅನ್ನೋ ಭರವಸೆ ಇದೆ. ನನ್ನ ಅನಿಸಿಕೆಯನ್ನು ಬಹುತೇಕ ಶಾಸಕರು ಕೂಡ ಒಪ್ಪಿಕೊಂಡ್ರು. ರೈತರ ಸಾಲಮನ್ನಾ ಎಲ್ಲಾ ಭಾಗದ ರೈತರಿಗೂ ಆಗಬೇಕು ಅನ್ನೊ ವಿಚಾರವನ್ನ ತಿಳಿಸಿದ್ದೇನೆ. ಪೆಟ್ರೋಲ್, ಡೀಸಲ್ ಬೆಲೆ ಹೆಚ್ಚಳ ವಿಚಾರವನ್ನೂ ಪ್ರಸ್ತಾಪ ಮಾಡಿದ್ದು, ಅದನ್ನ ಕಡಿಮೆ ಮಾಡಬೇಕು ಅಂತ ತಿಳಿಸಿದ್ದೇವೆ ಅಂತ ಹೇಳಿದ್ರು.

    ಮುಂದಿನ ಚುನಾವಣೆಗೆ ಶಿಸ್ತಿನಿಂದ ಕೆಲಸ ಮಾಡಲು ಸೂಚನೆ ಮಾಡಲಾಗಿದೆ. ಪರಿಷತ್ ಸಭಾಪತಿ ಸ್ಥಾನ ಬೇಗ ಮಾಡಬೇಕು ಅನ್ನೋದನ್ನ ಕೆಲವರು ಹೇಳಿದ್ದಾರೆ. ನಮ್ಮ ರಾಷ್ಟ್ರೀಯ ಕಾರ್ಯದರ್ಶಿ ಬಂದಿದ್ದಾರೆ. ಅವರು ಈ ಬಗ್ಗೆ ಚರ್ಚೆ ಮಾಡ್ತಾರೆ. ಮುಂದಿನ ಚುನಾವಣೆಗೆ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ ಅಂತ ಇದೇ ವೇಳೆ ಸಚಿವ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

    ಆರ್ ವಿ ದೇಶಪಾಂಡೆ, ಕೆ ಜೆ ಜಾರ್ಜ್, ಪುಟ್ಟರಂಗಶೆಟ್ಟಿ, ಹ್ಯಾರೀಸ್, ತನ್ವೀರ್ ಸೇಠ್, ಎಚ್ ಎಂ ರೇವಣ್ಣ,ಸೋಮಶೇಖರ್ ರಾಜಶೇಖರ್ ಪಾಟೀಲ್, ಸಚಿವೆ ಜಯಮಾಲ, ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ, ಐವಾನ್ ಡಿಸೋಜಾ, ಬಿಸಿ ಪಾಟೀಲ್, ಎಸ್ ಆರ್ ಪಾಟೀಲ್, ಶಿವಶಂಕರ್ ರೆಡ್ಡಿ, ಪ್ರಿಯಾಂಕ ಖರ್ಗೆ ಮೊದಲಾದವರು ಸಭೆಯಲ್ಲಿ ಪಾಲ್ಗೊಂಡಿದ್ದರು.