Tag: Haasan

  • ಹಾಸನ | ಬಿರುಗಾಳಿ ಸಹಿತ ಧಾರಾಕಾರ ಮಳೆ – ರೈತರ ಮೊಗದಲ್ಲಿ ಮಂದಹಾಸ

    ಹಾಸನ | ಬಿರುಗಾಳಿ ಸಹಿತ ಧಾರಾಕಾರ ಮಳೆ – ರೈತರ ಮೊಗದಲ್ಲಿ ಮಂದಹಾಸ

    – ಧಾರವಾಡದಲ್ಲಿಯೂ ಭಾರಿ ಮಳೆ

    ಹಾಸನ: ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

    ಕಳೆದ ಒಂದು ವಾರದಿಂದ ಬಿಡುವು ನೀಡಿದ್ದ ಮಳೆರಾಯ ಇದೀಗ ಮತ್ತೆ ಅಬ್ಬರಿಸುತ್ತಿದ್ದು, ಜಿಲ್ಲೆಯ ಕೆಲವು ಕಡೆಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಆದರೆ ವಿವಿಧ ಬೆಳೆಗಳ ಬಿತ್ತನೆ ಮಾಡಿರುವ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.ಇದನ್ನೂ ಓದಿ: ನಮಗೆ ಪರಿಹಾರ ಬೇಡ, ಮಗಳನ್ನು ತಂದುಕೊಡಿ: ಚೆಕ್ ಕೊಡಲು ಬಂದ ಡಿಸಿ ಮುಂದೆ ಸಹನಾ ಪೋಷಕರ ಕಣ್ಣೀರು

    ಕೆಲವು ಕಡೆಗಳಲ್ಲಿ ಭಾರೀ ಮಳೆಯಿಂದಾಗಿ ಮನೆ, ಗುಡಿಸಲುಗಳಿಗೆ ನೀರು ನುಗ್ಗಿದೆ. ಜೊತೆಗೆ ರಸ್ತೆ, ಹೊಲ, ಗದ್ದೆಗಳು ಸಂಪೂರ್ಣ ಜಲಾವೃತಗೊಂಡಿದೆ. ಬೇಲೂರಿನ ಹಳೇಬೀಡು ಗ್ರಾಮದಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದ್ದು, ರಸ್ತೆಗಳು ಕೆರೆಯಂತಾಗಿವೆ. ಹೀಗಾಗಿ ವಾಹನ ಸವಾರರು ಪರದಾಡುವಂತಾಗಿದೆ. ಹಳೇಬೀಡು ಸುತ್ತಮುತ್ತಲಿನ ಕೆರೆಗಳು ಒತ್ತುವರಿಯಾಗಿರುವುದರಿಂದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ.

    ಧಾರವಾಡ (Dharwad) ನಗರ ಸೇರಿದಂತೆ ಹಲವೆಡೆ ಭಾನುವಾರ ಮಧ್ಯಾಹ್ನ ಭಾರೀ ಮಳೆಯಾಗಿದ್ದು, ಅನೇಕ ರಸ್ತೆಗಳು ಜಲಾವೃತಗೊಂಡಿವೆ. ಜೊತೆಗೆ ಕೆಲವು ಮನೆಗಳಿಗೆ ನೀರು ನುಗ್ಗಿ, ಜನಜೀವನ ಅಸ್ತವ್ಯಸ್ತಗೊಂಡಿದೆ. ಇನ್ನೂ ಜಿಲ್ಲೆಯಲ್ಲಿರುವ ಕೆಎಂಎಫ್ ಮುಂಭಾಗದ ಬಿಆರ್‌ಟಿಎಸ್ ಕಾರಿಡಾರ್ ಸಂಪೂರ್ಣ ಜಲಾವೃತಗೊಂಡು ಸಂಚಾರ ದಟ್ಟಣೆ ಉಂಟಾಗಿತ್ತು.ಇದನ್ನೂ ಓದಿ: ಕಾಲ್ತುಳಿತ ಕೇಸಲ್ಲಿ ಗೋವಿಂದರಾಜು ಬಂಧಿಸಬೇಕು, ಸಿಎಂ & ಡಿಸಿಎಂ ರಾಜೀನಾಮೆ ಕೊಡ್ಬೇಕು: ಯತ್ನಾಳ್‌ ಆಗ್ರಹ

  • 20 ಸಾವಿರ ಕ್ಯೂಸೆಕ್ಸ್ ನೀರನ್ನು ತಮಿಳುನಾಡಿಗೆ ಬಿಡುವಂತೆ ಸಿಎಂ ಕುಮಾರಸ್ವಾಮಿ ಆದೇಶ

    20 ಸಾವಿರ ಕ್ಯೂಸೆಕ್ಸ್ ನೀರನ್ನು ತಮಿಳುನಾಡಿಗೆ ಬಿಡುವಂತೆ ಸಿಎಂ ಕುಮಾರಸ್ವಾಮಿ ಆದೇಶ

    ಚೆನ್ನೈ: ತಮಿಳುನಾಡಿಗೆ ಕಬಿನಿ ಜಲಾಶಯದಿಂದ 20 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಆದೇಶಿಸಿದ್ದೇನೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

    ಶುಕ್ರವಾರ ತಮಿಳುನಾಡಿನ ಮಧುರೈ ಮೀನಾಕ್ಷಿ ಅಮ್ಮನವರ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಅವರು, ದೇವರ ದಯೆಯಿಂದ ರಾಜ್ಯದಲ್ಲಿ ತುಂಬಾ ಚೆನ್ನಾಗಿ ಮಳೆಯಾಗುತ್ತಿದೆ. ಮುಂದೆಯೂ ರಾಜ್ಯದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಹಾಗಾಗಿ ಕಾವೇರಿ ನೀರಿನಲ್ಲಿ ತಮಿಳು ನಾಡಿಗೆ ನೀಡಬೇಕಾದ ಪಾಲನ್ನು ಜೂನ್ ನಲ್ಲಿ ನೀಡಲು ಸಾಧ್ಯವಿದೆ ಎಂದಿದ್ದಾರೆ. ಇದನ್ನೂ ಓದಿ: ನಾನು ಪ್ರಮಾಣ ವಚನ ಸ್ವೀಕರಿಸಿದಾಗಿಂದ್ಲೂ ಉತ್ತಮ ಮಳೆಯಾಗುತ್ತಿದೆ- ಎಚ್‍ಡಿಕೆ

    ಈ ಕುರಿತಂತೆ ಈಗಾಗಲೇ ನಾನು ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಕಬಿನಿ ಜಾಲಾಶಯದಿಂದ 20 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಸೂಚನೆ ನೀಡಿದ್ದೇನೆ. ರಾಜ್ಯದಲ್ಲಿ ಮುಂಗಾರು ಚೆನ್ನಾಗಿ ಪ್ರಾರಂಭವಾಗಿದೆ. ಹೀಗೆಯೇ ಮುಂಗಾರು ಮುಂದುವರಿದರೆ ಕಾವೇರಿ ನೀರು ಹಂಚಿಕೆ ಆದೇಶದಂತೆ ಈ ಜೂನ್ ನಲ್ಲಿ ತಮಿಳುನಾಡಿನ ಪಾಲು 10 ಟಿಎಂಸಿ(ಥೌಸಂಡ್ ಮಿಲಿಯನ್ ಕ್ಯೂಬಿಕ್ ಫೀಟ್) ನೀರನ್ನು ನೀಡಲಾಗುವುದು. ಈಗ ಕಬಿನಿಯಿಂದ ನೀರು ಹರಿಸುತ್ತಿರುವುದು ಎರಡೂ ರಾಜ್ಯಗಳ ರೈತರಲ್ಲಿ ಸಂತಸ ತರಲಿದೆ ಎಂದು ಹೇಳಿದ್ದಾರೆ.

    ಈ ಕುರಿತಂತೆ ಟ್ವೀಟ್ ಮಾಡಿರುವ ನಟ ಕಮಲ್ ಹಾಸನ್, ಕಬಿನಿ ಜಲಾಶಯದಿಂದ ನೀರು ಬಿಡುವ ನಿರ್ಧಾರ ತೆಗೆದುಕೊಂಡಿರುವುದನ್ನು ಸ್ವಾಗತಿಸಿರುವುದಾಗಿ ಹೇಳಿ, ಕುಮಾರಸ್ವಾಮಿಯವರಿಗೆ ಧನ್ಯವಾದ ತಿಳಿಸಿದ್ದಾರೆ. ಅಲ್ಲದೇ ಈ ಮೂಲಕ ಎರಡೂ ರಾಜ್ಯಗಳ ಮಧ್ಯೆ ಮುಚ್ಚಿದ್ದ ಸಂಬಂಧಗಳ ಬಾಗಿಲುಗಳು ತೆರೆದುಕೊಳ್ಳುತ್ತವೆ ಎಂದು ಟ್ವೀಟ್ ಮಾಡಿದ್ದಾರೆ.