Tag: Habba

  • ಕುಟುಂಬದೊಂದಿಗೆ ವರಮಹಾಲಕ್ಷ್ಮಿ ಹಬ್ಬ ಆಚರಿಸಿದ ನಿಖಿಲ್

    ಕುಟುಂಬದೊಂದಿಗೆ ವರಮಹಾಲಕ್ಷ್ಮಿ ಹಬ್ಬ ಆಚರಿಸಿದ ನಿಖಿಲ್

    ಟ, ಯುವ ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಕುಟುಂಬದೊಂದಿಗೆ ಇಂದು ವರಮಹಾಲಕ್ಷ್ಮಿ (Varamahalakshmi)ಹಬ್ಬವನ್ನು ಆಚರಿಸಿದ್ದಾರೆ. ತಂದೆ ಕುಮಾರಸ್ವಾಮಿ, ತಾಯಿ ಅನಿತಾ ಹಾಗೂ ಪತ್ನಿ ರೇವತಿ ಜೊತೆ ಸೇರಿ ಪೂಜೆ ಸಲ್ಲಿಸಿದ್ದಾರೆ. ಅಪ್ಪನಂತೆಯೇ ಪುತ್ರ ಅವ್ಯಾನ್ ದೇವ್ ಕೂಡ ಪೂಜೆಯಲ್ಲಿ ಭಾಗಿದ್ದರು. ಪೂಜೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಅಪ್ಪ ಮಗ ಮಿಂಚಿದ್ದಾರೆ.

    ಮೊನ್ನೆಯಷ್ಟೇ ಹೊಸ ಚಿತ್ರಕ್ಕೆ ಚಾಲನೆ

    ನಿಖಿಲ್ ಕುಮಾರ್ (Nikhil Kumar) ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು. ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್.ಡಿ.ದೇವೇಗೌಡ ಅವರು ಕಾರ್ಯಕ್ರಮಕ್ಕೆ ಆಗಮಿಸಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ (Kumaraswamy) ನೂತನ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು.

    ದಕ್ಷಿಣ ಭಾರತದ ಹೆಸರಾಂತ ಚಿತ್ರ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಸಂಸ್ಥೆ (Lyca Production) ಈಗ ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದೆ. ಈ ಚಿತ್ರದ ನಾಯಕನಾಗಿ ನಾನು ನಟಿಸುತ್ತಿದ್ದೇನೆ. ಲಕ್ಷ್ಮಣ್ ಅವರು ಈ ಚಿತ್ರದ ನಿರ್ದೇಶಕರು.

    ಈ ಹಿಂದೆ ‘ಸೀತಾರಾಮ ಕಲ್ಯಾಣ’ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭಕ್ಕೆ ಲೈಕಾ ಸಂಸ್ಥೆಯ ಸುಭಾಸ್ಕರನ್ (Subhaskaran) ಅವರು ಆಗಮಿಸಿದ್ದರು.  ‘ನಮ್ಮ ಸಂಸ್ಥೆಯ ನಿರ್ಮಾಣದ ಚಿತ್ರದಲ್ಲಿ ನೀವು ನಾಯಕರಾಗಿ ನಟಿಸಬೇಕು’ ಎಂದು ಸುಭಾಸ್ಕರನ್ ಹೇಳಿದ್ದರು. ಈಗ ಚಿತ್ರ ಆರಂಭವಾಗುತ್ತಿದೆ. ಈ ಚಿತ್ರಕ್ಕಾಗಿ ನಿರ್ದೇಶಕರು ಒಂದು ವರ್ಷದಿಂದ ಬೆಂಗಳೂರಿನಲ್ಲೇ ಇದ್ದು ಕೆಲಸ  ಮಾಡುತ್ತಿದ್ದಾರೆ. ಸದ್ಯದಲ್ಲೇ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡುವುದಾಗಿ ನಿಖಿಲ್ ಕುಮಾರ್ ತಿಳಿಸಿದರು.

     

    ತಮ್ಮ‌ ತಂಡವನ್ನು ಪರಿಚಯಿಸುತ್ತಾ ಮಾತು ಪ್ರಾರಂಭಿಸಿದ ನಿರ್ದೇಶಕ ಲಕ್ಷ್ಮಣ್, ಕನ್ನಡದಲ್ಲಿ ಇದು ನನ್ನ ಮೊದಲ ಚಿತ್ರ. ನಾನು ಬರೆದ ಕಥೆಯನ್ನು ಒಪ್ಪಿ ಚಿತ್ರ ನಿರ್ಮಾಣಕ್ಕೆ ಮುಂದಾಗಿರುವ ನಿರ್ಮಾಪಕರಿಗೆ ಹಾಗೂ ನಾಯಕ ನಿಖಿಲ್ ಕುಮಾರ್ ಅವರಿಗೆ ಧನ್ಯವಾದ. ಒಳ್ಳೆಯ ತಂಡದೊಂದಿಗೆ ಒಳ್ಳೆಯ ಚಿತ್ರ ನೀಡುವ ನಂಬಿಕೆ ಇದೆ. ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಹೆಚ್ಚಿನ ವಿವರಣೆ ನೀಡುತ್ತೇನೆ. ನಿಮ್ಮೆಲ್ಲರ ಹಾರೈಕೆ ಇರಲಿ ಎಂದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶಾರುಖ್ ಖಾನ್ ಮನೆಯಲ್ಲಿ ಗಣೇಶ: ಮನ್ನತ್ ನಿವಾಸದಲ್ಲಿ ಕಳೆಗಟ್ಟಿದ ಸಂಭ್ರಮ

    ಶಾರುಖ್ ಖಾನ್ ಮನೆಯಲ್ಲಿ ಗಣೇಶ: ಮನ್ನತ್ ನಿವಾಸದಲ್ಲಿ ಕಳೆಗಟ್ಟಿದ ಸಂಭ್ರಮ

    ಬಾಲಿವುಡ್ ಬಹುತೇಕ ಸ್ಟಾರ್ ನಟ ನಟಿಯರು ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸುತ್ತಾರೆ. ಬಹುತೇಕರು ಕಲಾವಿದರು ಮತ್ತು ತಂತ್ರಜ್ಞರು ಶೂಟಿಂಗ್ ಬಂದ್ ಮಾಡಿ, ತಮ್ಮ ಮನೆಯಲ್ಲಿ ಗಣೇಶ ಪೂಜೆ ಮಾಡುತ್ತಾರೆ. ಅದರಂತೆಯೇ ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಮನೆಯಲ್ಲೂ ಕೂಡ ಗಣೇಶನನ್ನು ಪತ್ರಿಷ್ಠಾಪಿಸಲಾಗಿತ್ತು.

    ತಮ್ಮ ನಿವಾಸ ಮನ್ನತ್ ನಲ್ಲಿ ಗಣೇಶನ ಹಬ್ಬವನ್ನು ಸಡಗರಿಂದ ಮಾಡಿದ ಫೋಟೋವನ್ನು ಶಾರುಖ್ ಹಂಚಿಕೊಂಡಿದ್ದು, ಮೋದಕ ತಿಂದು ಸಂತೃಪ್ತನಾದ ಬಗ್ಗೆ ಹೇಳಿದ್ದಾರೆ. ಎಲ್ಲರಿಗೂ ವಿಘ್ನ ವಿನಾಶಕ ಗಣಪತಿ ಒಳ್ಳೆಯದ್ದನ್ನು ಮಾಡಲಿ ಎಂದು ಕೇಳಿಕೊಂಡಿದ್ದಾರೆ. ದೇವರ ಮೇಲಿನ ನಂಬಿಕೆ ಮತ್ತು ಪರಿಶ್ರಮದಿಂದ ಮಾತ್ರ ಯಶಸ್ಸನ್ನು ಗಳಿಸಲು ಸಾಧ್ಯ ಎಂದು ಪ್ರೇರಕವಾದ ಸಾಲುಗಳನ್ನೂ ಅವರು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ನೂಡಲ್ಸ್ ಬಿಡಿಸು ಅಂದ್ರೆ ಮೂಲಂಗಿ ಬಿಡಿಸ್ತಾಳೆ – ಸೋನು ಪೇಂಟಿಂಗ್‌ಗೆ ರಾಕೇಶ್ ಫುಲ್ ಶಾಕ್..!

    ಶಾರುಖ್ ಖಾನ್ ನಿವಾಸದಲ್ಲಿ ಇಡಲಾದ ಗಣೇಶನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಶಾರುಖ್ ಖಾನ್ ಅವರ ಈ ನಡೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಧಾರ್ಮಿಕ ಗಲಾಟೆಯ ಮಧ್ಯ ಶಾರುಖ್ ಖಾನ್ ಹಿಂದೂ ದೇವರನ್ನು ಪೂಜಿಸುವ ಮೂಲಕ ಉತ್ತಮ ಸಂದೇಶ ಸಾರಿದ್ದಾರೆ ಎಂದು ಅಭಿಮಾನಿಗಳು ಮೆಚ್ಚುಗೆಯ ಕಾಮೆಂಟ್ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬೆಂಗ್ಳೂರಲ್ಲಿ ರೆಂಟ್ ಗಣೇಶನಿಗೆ ಫುಲ್ ಡಿಮ್ಯಾಂಡ್

    ಬೆಂಗ್ಳೂರಲ್ಲಿ ರೆಂಟ್ ಗಣೇಶನಿಗೆ ಫುಲ್ ಡಿಮ್ಯಾಂಡ್

    ಬೆಂಗಳೂರು: ಮನೆ, ಟ್ಯಾಕ್ಸಿ, ಸೈಕಲ್, ಬೈಕ್ ಬಾಡಿಗೆಗೆ ಸಿಗೋದು ಕಾಮನ್. ಆದರೆ ದೇವರ ಮೂರ್ತಿಗಳು ಬಾಡಿಗೆಗೆ ಸಿಗುತ್ತಿದೆ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿ ಬಾಡಿಗೆ ಗಣೇಶನ ಟ್ರೆಂಡ್ ಸ್ಟಾರ್ಟ್ ಆಗಿದೆ.

    ಈಗಾಗಲೇ ಗಣೇಶ ಹಬ್ಬಕ್ಕೆ ಕೌಂಟ್ ಡೌನ್ ಶುರು ಆಗಿದೆ. ಎಲ್ಲೆಡೆ ಸಿದ್ಧತೆ ಸಹ ಜೋರಾಗಿದೆ. ಈ ಬಾರಿಯೂ ಪ್ರತಿ ವರ್ಷದಂತೆ ಬಿಬಿಎಂಪಿ ಹಾಗೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಪಿಒಪಿ ಗಣೇಶಗಳನ್ನು ಬ್ಯಾನ್ ಮಾಡಿದೆ. ಕೆಲವಡೆ ಪಿಒಪಿ ಹಾಗೂ ಪ್ಲಾಸ್ಟಿಕ್ ಗಣೇಶ ವಿಗ್ರಹಗಳನ್ನು ಮಾರಾಟ ಮಾಡಲಾಗುತ್ತಿದೆ. ಅದು ಸಹ ಬಾಡಿಗೆಗೆ ನೀಡುವ ಟ್ರೆಂಡ್ ಸಿಲಿಕಾನ್ ಸಿಟಿಯಲ್ಲಿ ಆರಂಭಗೊಂಡಿದ್ದು, ಮುಂಗಡ ಬುಕಿಂಗ್ ಸಹ ನಡೆಯುತ್ತಿದೆ.

    ಬಾಡಿಗೆ ಗಣೇಶ ವಿಗ್ರಹಗಳ ದರ: 6 ಅಡಿಯ ಚಿಕ್ಕ ಗಣೇಶ ವಿಗ್ರಹಗಳಿಗೆ 1 ಸಾವಿರ ರೂಪಾಯಿ, 10 ಅಡಿಯ ಮೂರ್ತಿಗೆ 5 ಸಾವಿರ ಹಾಗೂ 30 ಅಡಿಯ ಗಣೇಶ ಮೂರ್ತಿಗೆ, 50 ಸಾವಿರ ರೂಪಾಯಿ ಇದೆ.

    ಈ ಗಣೇಶ ಮೂರ್ತಿಗಳನ್ನು ಬಾಡಿಗೆ ಪಡೆಯಬೇಕಾದ್ರೆ ಎರಡಷ್ಟು ಹಣವನ್ನು ಡೆಪಾಜಿಟ್ ಮಾಡಬೇಕು. ನಂತರ ಬೇಕಾದಷ್ಟು ದಿನ ಇಟ್ಟುಕೊಂಡು, ಮಾಲೀಕರಿಗೆ ವಾಪಾಸ್ ಮಾಡಬೇಕು. ಪ್ರವಾಹದಿಂದಾಗಿ ಮಣ್ಣು ಕೊಚ್ಚಿಕೊಂಡು ಹೋಗಿರುವುದರಿಂದ ಮಣ್ಣಿನ ಗಣೇಶ ಈ ಬಾರಿ ಅಷ್ಟು ತಯಾರಾಗಿಲ್ಲ. ಹೀಗಾಗಿ ಬಾಡಿಗೆ ಗಣೇಶಗಳಿಗೆ ಸಾರ್ವಜನಿಕರು ಮೊರೆ ಹೋಗಿದ್ದಾರೆ ಎಂದು ವ್ಯಾಪಾರಿಗಳು ಹೇಳುತ್ತಾರೆ.