Tag: Hafiz Saeed

  • ಉಗ್ರ ಹಫೀಜ್‌ ಸಯೀದ್‌ ಜೊತೆ ಸಭೆ ನಡೆಸಿದ್ದಕ್ಕೆ ಸಿಂಗ್‌ ನನಗೆ ಥ್ಯಾಂಕ್ಸ್‌ ಹೇಳಿದ್ದರು: ಭಯೋತ್ಪಾದಕ ಯಾಸಿನ್ ಮಲಿಕ್

    ಉಗ್ರ ಹಫೀಜ್‌ ಸಯೀದ್‌ ಜೊತೆ ಸಭೆ ನಡೆಸಿದ್ದಕ್ಕೆ ಸಿಂಗ್‌ ನನಗೆ ಥ್ಯಾಂಕ್ಸ್‌ ಹೇಳಿದ್ದರು: ಭಯೋತ್ಪಾದಕ ಯಾಸಿನ್ ಮಲಿಕ್

    – ಭಾರತದ ಸರ್ಕಾರದ ಕೋರಿಕೆ ಮೇಲೆ ಪಾಕ್‌ನಲ್ಲಿ ಉಗ್ರರ ಜೊತೆ ಸಭೆ
    – ದೆಹಲಿ ಹೈಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಮಲಿಕ್‌ ಉಲ್ಲೇಖ

    ನವದೆಹಲಿ: ಲಷ್ಕರ್-ಎ-ತೈಬಾ ((LeT) ಸಂಸ್ಥಾಪಕ ಮತ್ತು 26/11 ದಾಳಿಯ ಮಾಸ್ಟರ್‌ಮೈಂಡ್ ಹಫೀಜ್ ಸಯೀದ್‌ನನ್ನು (Hafiz Saeed) ಭೇಟಿಯಾದ ನಂತರ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (Manmohan Singh) ವೈಯಕ್ತಿಕವಾಗಿ ತನಗೆ ಧನ್ಯವಾದ ಹೇಳಿದ್ದರು ಎಂದು ಭಯೋತ್ಪಾದಕ ಯಾಸಿನ್ ಮಲಿಕ್ (Yasin Malik) ಹೇಳಿದ್ದು ಈಗ ದೇಶದಲ್ಲಿ ಬಿರುಗಾಳಿ ಎಬ್ಬಿಸಿದೆ.

    ಹೌದು. ಉಗ್ರರಿಗೆ ಹಣಕಾಸು ನೆರವು ನೀಡಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಸದ್ಯ ತಿಹಾರ್‌ ಜೈಲಿನಲ್ಲಿರುವ ಜಮ್ಮು ಮತ್ತು ಕಾಶ್ಮೀರ ಲಿಬರೇಷನ್ ಫ್ರಂಟ್ (JKLF) ಭಯೋತ್ಪಾದಕ ಯಾಸಿನ್ ಮಲಿಕ್ 2006 ರಲ್ಲಿ ಪಾಕಿಸ್ತಾನದಲ್ಲಿ ಹಫೀಜ್ ಸಯೀದ್‌ನನ್ನು ಭೇಟಿಯಾಗಿದ್ದ.

    ಹಫೀಜ್ ಸಯೀದ್‌ ಭೇಟಿಯ ಬಳಿಕ ಮನಮೋಹನ್‌ ಸಿಂಗ್‌ ಅವರು ನನಗೆ ವೈಯಕ್ತಿಕವಾಗಿ ಧನ್ಯವಾದ ಹೇಳಿದ್ದರು ಎಂದು ಯಾಸಿನ್ ಮಲಿಕ್ ಆಗಸ್ಟ್ 25 ರಂದು ದೆಹಲಿ ಹೈಕೋರ್ಟ್‌ನಲ್ಲಿ ಸಲ್ಲಿಸಿದ ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾನೆ. ಈ ಭೇಟಿಯನ್ನು ನಾನು ನಿಗದಿ ಮಾಡಿರಲಿಲ್ಲ. ಬದಲಾಗಿ ಹಿರಿಯ ಭಾರತೀಯ ಗುಪ್ತಚರ ಅಧಿಕಾರಿಗಳ ಕೋರಿಕೆಯ ಮೇರೆಗೆ ಉಗ್ರರ ಜೊತೆ ಸಭೆ ಮಾಡಿದ್ದೆ ಎಂದು ತಿಳಿಸಿದ್ದಾನೆ.

    ಉಗ್ರ ಯಾಸಿನ್‌ ಮಲಿಕ್‌ ಕೈ ಕುಲುಕುತ್ತಿರುವ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌
    ಉಗ್ರ ಯಾಸಿನ್‌ ಮಲಿಕ್‌ ಕೈ ಕುಲುಕುತ್ತಿರುವ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌

    ಅಫಿಡವಿಟ್‌ನಲ್ಲಿ ಹೇಳಿದ್ದೇನು?
    2005 ರಲ್ಲಿ ಕಾಶ್ಮೀರದಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪದ ಬಳಿಕ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದೆ. ಈ ಭೇಟಿಗೂ ಮೊದಲು ಆಗಿನ ಗುಪ್ತಚರ ದಳದ (ಐಬಿ) ವಿಶೇಷ ನಿರ್ದೇಶಕ ವಿ.ಕೆ. ಜೋಶಿ ಅವರು ದೆಹಲಿಯಲ್ಲಿ ನನ್ನನ್ನು ಭೇಟಿ ಮಾಡಿದ್ದರು.

    ಈ ಭೇಟಿಯ ಸಂದರ್ಭದಲ್ಲಿ ಪಾಕಿಸ್ತಾನ ರಾಜಕೀಯ ನಾಯಕರನ್ನು ಮಾತ್ರವಲ್ಲದೇ ಉಗ್ರ ಸಂಘಟನೆಗಳ ಜೊತೆ ಮಾತನಾಡಿ ಶಾಂತಿಗೆ ಸಹಕಾರ ನೀಡುವಂತೆ ಕೇಳಿಕೊಳ್ಳಬೇಕು ಎಂದು ಅವರು ನನ್ನ ಜೊತೆ ವಿನಂತಿ ಮಾಡಿದ್ದರು. ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಶಾಂತಿ ಪ್ರಯತ್ನದ ಭಾಗವಾಗಿ ಈ ಕೆಲಸ ಮಾಡಬೇಕು ಎಂದು ಕೇಳಿಕೊಂಡಿದ್ದರು. ಇದನ್ನೂ ಓದಿ:  ಭಾರತದ ಸಿಂಧೂರ ದಾಳಿಗೆ ಮಸೂದ್ ಕುಟುಂಬ ಕಳೆದುಕೊಂಡ – ಪಾಕ್ ಉಗ್ರ ಇಲ್ಯಾಸ್ ಸಾಕ್ಷ್ಯ

    ಮಾತುಕತೆಯ ವೇಳೆ ಭಯೋತ್ಪಾದಕ ನಾಯಕರ ಜೊತೆ ಮಾತುಕತೆ ನಡೆಸದ ಹೊರತು ಶಾಂತಿ ಮಾತುಕತೆ ಪೂರ್ಣವಾಗುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದೆ. ಸರ್ಕಾರದ ವಿನಂತಿಯ ಮೇರೆಗೆ ಪಾಕಿಸ್ತಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಯೀದ್ ಮತ್ತು ಯುನೈಟೆಡ್ ಜಿಹಾದ್ ಕೌನ್ಸಿಲ್‌ನ ಇತರ ನಾಯಕರನ್ನು ಭೇಟಿ ಮಾಡಲು ಒಪ್ಪಿಕೊಂಡಿದ್ದೆ.

    ಉಗ್ರರ ಜೊತೆ ಸಭೆ ನಡೆಸಿ ನಾನು ಫೆಬ್ರವರಿ, 2006 ರಲ್ಲಿ ಭಾರತಕ್ಕೆ ಮರಳಿದೆ. ಮರಳಿದ ಬಳಿಕ ಐಬಿ ವಿಶೇಷ ನಿರ್ದೇಶಕ ವಿ ಕೆ ಜೋಶಿ ಅವರು ಮಾತುಕತೆಯ ಭಾಗವಾಗಿ ಹೋಟೆಲ್‌ನಲ್ಲಿ ನನ್ನನ್ನು ಭೇಟಿಯಾಗಿ ಪ್ರಧಾನಿಗೆ ತಕ್ಷಣ ವಿವರಿಸುವಂತೆ ವಿನಂತಿಸಿದರು. ಅಂದು ಸಂಜೆ ನಾನು ಆಗಿನ ರಾಷ್ಟ್ರೀಯ ಭದ್ರತಾ ಸಲಹೆಗಾರ ಎಂ.ಕೆ. ನಾರಾಯಣನ್ ಅವರ ಸಮ್ಮುಖದಲ್ಲಿ ಮನಮೋಹನ್‌ ಸಿಂಗ್‌ ಅವರನ್ನು ಭೇಟಿಯಾದೆ.

    ಈ ಸಭೆಯಲ್ಲಿ ಪಾಕಿಸ್ತಾನದ ಉಗ್ರರ ಜೊತೆ ಮಾತುಕತೆಯಲ್ಲಿ ತೊಡಗಿಸಿಕೊಳ್ಳುವಲ್ಲಿ ನಾನು ತೋರಿಸಿದ ಪ್ರಯತ್ನ, ತಾಳ್ಮೆ ಮತ್ತು ಸಮರ್ಪಣೆಗೆ ಸಿಂಗ್ ಅವರು ನನಗೆ ವೈಯಕ್ತಿಕವಾಗಿ ಧನ್ಯವಾದ ಅರ್ಪಿಸಿದರು. ಮನಮೋಹನ್‌ ಸಿಂಗ್ ನನ್ನ ಕೈ ಕುಲುಕಿ “ಕಾಶ್ಮೀರದಲ್ಲಿ ಅಹಿಂಸಾತ್ಮಕ ಚಳವಳಿಯ ಪಿತಾಮಹ” ಎಂದು ನನ್ನನ್ನು ಕರೆದರು.

    ಮನ ಮೋಹನ್‌ ಸಿಂಗ್‌ ಮಾತ್ರವಲ್ಲ ಮಲಿಕ್ ತನ್ನ ಅಫಿಡವಿಟ್‌ನಲ್ಲಿ, ಅಟಲ್ ಬಿಹಾರಿ ವಾಜಪೇಯಿ, ಸೋನಿಯಾ ಗಾಂಧಿ, ಪಿ ಚಿದಂಬರಂ, ಐಕೆ ಗುಜ್ರಾಲ್ ಮತ್ತು ರಾಜೇಶ್ ಪೈಲಟ್ ಸೇರಿದಂತೆ ಹಲವಾರು ಉನ್ನತ ರಾಜಕೀಯ ನಾಯಕರೊಂದಿಗಿನ ಮಾತುಕತೆಯ ಬಗ್ಗೆ ಉಲ್ಲೇಖಿಸಿದ್ದಾನೆ.

    1990 ರಲ್ಲಿ ನನ್ನ ಬಂಧನದ ನಂತರ, ವಿಪಿ ಸಿಂಗ್, ಚಂದ್ರಶೇಖರ್, ಪಿವಿ ನರಸಿಂಹ ರಾವ್, ಎಚ್‌ಡಿ ದೇವಗೌಡ, ಇಂದರ್ ಕುಮಾರ್ ಗುಜ್ರಾಲ್, ಅಟಲ್ ಬಿಹಾರಿ ವಾಜಪೇಯಿ ಸರ್ಕಾರ ಇದ್ದಾಗಲೂ ನಾನು ಸರ್ಕಾರದ ಜೊತೆ ಮಾತನಾಡುತ್ತಿದ್ದೆ. ಅಧಿಕಾರದಲ್ಲಿರುವ ಸರ್ಕಾರಗಳಿಂದ ನಾನು ಸಹಾಯ ಪಡೆದುಕೊಂಡಿದ್ದೆ ಮತ್ತು ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಮಾತನಾಡುತ್ತಿದ್ದೆ ಎಂದಿದ್ದಾನೆ.

    1990 ರ ಜನವರಿಯಲ್ಲಿ ಶ್ರೀನಗರದಲ್ಲಿ ನಾಲ್ವರು ಭಾರತೀಯ ವಾಯುಪಡೆಯ ಅಧಿಕಾರಿಗಳನ್ನು ಕೊಂದ ಆರೋಪ ಮಲಿಕ್ ಮೇಲಿದೆ. ಮಾಜಿ ಕೇಂದ್ರ ಗೃಹ ಸಚಿವ ಮುಫ್ತಿ ಮೊಹಮ್ಮದ್ ಸಯೀದ್ ಅವರ ಪುತ್ರಿ ರುಬಿಯಾ ಸಯೀದ್ ಅವರ ಅಪಹರಣ, 1990 ರಲ್ಲಿ ಕಾಶ್ಮೀರದಲ್ಲಿ ಪಂಡಿತರ ನರಮೇಧ ಮಾಡಿರುವ ಆರೋಪವೂ ಈತನ ಮೇಲಿದೆ.

    ಆಗಸ್ಟ್ 11 ರಂದು, ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಭಯೋತ್ಪಾದಕರಿಗೆ ಹಣಕಾಸು ನೆರವು ನೀಡಿದ ಪ್ರಕರಣದಲ್ಲಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್‌ಗೆ ಮರಣದಂಡನೆ ವಿಧಿಸುವಂತೆ ಕೇಳಿದೆ. ನ್ಯಾಯಾಲಯವು ಯಾಸಿನ್ ಮಲಿಕ್‌ಗೆ ಪ್ರತಿಕ್ರಿಯೆ ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶ ನೀಡಿ ಪ್ರಕರಣವನ್ನು ನವೆಂಬರ್ 10ಕ್ಕೆ ಮುಂದೂಡಿದೆ.

    2022 ರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಯಾಸಿನ್ ಮಲಿಕ್, ದೇಶದ ಸಾರ್ವಭೌಮತ್ವಕ್ಕೆ ಬೆದರಿಕೆಯೊಡ್ಡುವ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾನೆ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರಗಾಮಿತ್ವಕ್ಕೆ ನಿಕಟ ಸಂಬಂಧ ಹೊಂದಿದ್ದಾನೆ ಎಂದು ಕೇಂದ್ರ ಸರ್ಕಾರ ಹೇಳಿದೆ.

  • Operation Sindoor | 23 ನಿಮಿಷದ ದಾಳಿಗೆ 80ಕ್ಕೂ ಹೆಚ್ಚು ಉಗ್ರರು ಮಟ್ಯಾಶ್‌

    Operation Sindoor | 23 ನಿಮಿಷದ ದಾಳಿಗೆ 80ಕ್ಕೂ ಹೆಚ್ಚು ಉಗ್ರರು ಮಟ್ಯಾಶ್‌

    ನವದೆಹಲಿ: ಇಂದಿನ ಸೂರ್ಯೋದಯ ನೋಡುವುದಕ್ಕೂ ಮುನ್ನವೇ ಭಾರತೀಯ ಸೇನೆ ಪಾಕಿಸ್ತಾನಕ್ಕೆ ದೊಡ್ಡ ಶಾಕ್‌ ಕೊಟ್ಟಿದೆ. ಕಾಶ್ಮೀರದ ಬೈಸರನ್‌ ಕಣಿವೆಯಲ್ಲಿ ನಡೆದ ಹಿಂದೂಗಳ ನರಮೇಧಕ್ಕೆ ಪ್ರತೀಕಾರವಾಗಿ ಭಾರತ ʻOperation Sindoorʼ ಹೆಸರಿನಲ್ಲಿ ಏರ್‌ಸ್ಟ್ರೈಕ್‌ ನಡೆಸಿದೆ. ತಡರಾತ್ರಿ ಕೇವಲ 23 ನಿಮಿಷಗಳ ಕಾಲ ನಡೆಸಿದ ದಾಳಿಯಲ್ಲಿ ಪಾಕ್‌ನ 80ಕ್ಕೂ ಹೆಚ್ಚು ಉಗ್ರರು ಮಟ್ಯಾಶ್‌ ಆಗಿದ್ದಾರೆ ಎಂದು ಕೆಲ ವರದಿಗಳು ತಿಳಿಸಿವೆ.

    ಹೌದು.. ತಡರಾತ್ರಿ 1:44 ಗಂಟೆ ವೇಳೆಗೆ ಪಾಕ್‌ ಉಗ್ರರ ಅಡಗುತಾಣಗಳ ಮೇಲೆ ರಫೇಲ್‌ ಇನ್ನಿತರ ಫೈಟರ್‌ಜೆಟ್‌ಗಳಿಂದ ದಾಳಿ ನಡೆಸಿದ ಭಾರತೀಯ ಸೇನೆ ರಾತ್ರಿ 2:07 ವೇಳೆಗೆ ಕಾರ್ಯಾಚರಣೆ ಮುಗಿಸಿತ್ತು. ದಾಳಿ ನಡೆಸಿದ ಬಳಿಕ ಭಾರತೀಯ ಸೇನೆ‌ಯ ಜೆಟ್‌ಗಳು ಸೇಫ್‌ ಆಗಿ ಮರಳಿವೆ. ಇನ್ನೂ ಈ ದಾಳಿಯಲ್ಲಿ 80ಕ್ಕೂ ಹೆಚ್ಚು ಉಗ್ರರು ಹತ್ಯೆಯಾಗಿದ್ದಾರೆ, ಜೊತೆಗೆ ಲಷ್ಕರ್‌ ಉಗ್ರರಿಗೆ ತರಬೇತಿ ನೀಡಿದ್ದ ಸುಬಾನಲ್ಲಾಹ್‌ ಮಸೀದಿ ಸೇರಿದಂತೆ ಪ್ರಮುಖ ತಾಣಗಳು ಧ್ವಂಸವಾಗಿದೆ. ಇದನ್ನೂ ಓದಿ: ನಾವು ಭಾರತದ ಸೈನಿಕರನ್ನು ಸೆರೆ ಹಿಡಿದಿಲ್ಲ: ಬುರುಡೆ ಬಿಟ್ಟು ಸತ್ಯ ಒಪ್ಪಿಕೊಂಡ ಪಾಕ್‌ ಸಚಿವ

    ಸದ್ಯ ಪಾಕಿಸ್ತಾನದಲ್ಲಿನ 9ಕ್ಕೂ ಹೆಚ್ಚು ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಲಾಗಿದ್ದು, ಈ ವಿಷಯದಲ್ಲಿ ಸೇನೆಗಳಿಗೆ ಭಾರತ್ ಸರ್ಕಾರ ಪರಮಾಧಿಕಾರ ನೀಡಿದೆ. ʻMock Drill’ಗೆ ಸೂಚನೆ ಬಂದ ಬೆನ್ನಲ್ಲೇ ಪಾಕಿಸ್ತಾನದ ವಿರುದ್ಧ ಭಾರತ ಸೇನೆಗಳು ಅಧಿಕೃತವಾಗಿ ಕಾರ್ಯಾಚರಣೆಗೆ ಇಳಿದಿವೆ. ಅತ್ತ ಪಾಕಿಸ್ತಾನದ ಗಡಿಯಲ್ಲೂ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು, ಸೇನಾ ಚಟುವಟಿಕೆಗಳು ಬಿರುಸುಪಡೆದುಕೊಂಡಿವೆ. ಇದನ್ನೂ ಓದಿ: 9 ಉಗ್ರರ ನೆಲೆಗಳು ಉಡೀಸ್‌- ಗಡಿಯಿಂದ ಎಷ್ಟು ದೂರ ಇದೆ? ಎಲ್ಲೆಲ್ಲಿ ದಾಳಿ?

    ಭಾರತ ಪಾಕಿಸ್ತಾನಗಳ ನಡುವೆ ಸೇನಾ ಸಮರದ ನಡೆಯಲಿದೆ ಎಂದು ಚರ್ಚೆಯಾಗಿತ್ತು. ಅದಕ್ಕೆ ಪೂರಕ ಎಂಬಂತೆ ಎರಡು ರಾಷ್ಟ್ರಗಳು ಸಮರಾಭ್ಯಾಸ ಸೇರಿದಂತೆ ಸೇನೆಗೆ ಸಂಬಂಧಿಸಿದ ಚಟುವಟಿಕೆಗಳನ್ನು ಆರಂಭಿಸಿದ್ದವು. ಶತ್ರು ರಾಷ್ಟ್ರದಿಂದ ದಾಳಿ ನಡೆದ ಪಕ್ಷದಲ್ಲಿ ನಾಗರಿಕರಿಗೆ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಬೇಕಾದ ಸಿದ್ಧತೆ ಕೈಗೊಳ್ಳುವುದಕ್ಕಾಗಿ ಬುಧವಾರ ನಾಗರಿಕ ಸ್ವರಕ್ಷಣೆ ತಾಲೀಮು ನಡೆಸಲು ಕೇಂದ್ರ ಗೃಹಸಚಿವಾಲಯ ಎಲ್ಲ ರಾಜ್ಯಗಳಿಗೆ ಸೂಚಿಸಿತ್ತು. ರಾಜ್ಯಗಳು ಸಿದ್ಧತೆಯನ್ನೂ ನಡೆಸಿದ್ದವು. ಇದರ ನಡುವೆಯೇ ಭಾರತೀಯ ಸೇನೆಯು ಮಂಗಳವಾರ ರಾತ್ರಿ ಉಗ್ರರ ಶಿಬಿರಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಇದನ್ನೂ ಓದಿ: Justice is Served ಜೈ ಹಿಂದ್ ಎಂದ ಭಾರತೀಯ ಸೇನೆ

  • Operation Sindoor | ಭಾರತದ ಪ್ರತೀಕಾರ ದಾಳಿಗೆ 15 ಎಕ್ರೆ ವಿಸ್ತೀರ್ಣದಲ್ಲಿದ್ದ ಸುಭಾನಲ್ಲಾಹ್ ಮಸೀದಿ ಢಮಾರ್‌

    Operation Sindoor | ಭಾರತದ ಪ್ರತೀಕಾರ ದಾಳಿಗೆ 15 ಎಕ್ರೆ ವಿಸ್ತೀರ್ಣದಲ್ಲಿದ್ದ ಸುಭಾನಲ್ಲಾಹ್ ಮಸೀದಿ ಢಮಾರ್‌

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ (Pahalgam Terror Attack) ಭಾರತ ಕೊನೆಗೂ ಪ್ರತೀಕಾರ ತೀರಿಸಿಕೊಂಡಿದೆ. ರಾತ್ರೀ ರಾತ್ರಿ ಪಾಕಿಸ್ತಾನದ 9 ಉಗ್ರರ ಅಡಗುತಾಣಗಳ ಮೇಲೆ ಸಸ್ಪೆನ್ಸ್‌ ದಾಳಿ ನಡೆಸಿದ್ದು, ಸುಮಾರು 70ಕ್ಕೂ ಹೆಚ್ಚು ಉಗ್ರರನ್ನು ಹತ್ಯೆಗೈದಿದೆ.

    ಭಾರತ ನಡೆಸಿದ ಈ ದಾಳಿಯಲ್ಲಿ ಲಷ್ಕರ್‌ ಉಗ್ರ ಹಫೀಜ್‌ ಸಯಿದ್‌ಗೆ (Hafiz Saeed) ಸಂಬಂಧಿಸಿದ ಮರ್ಕಜ್ ಸುಭಾನಲ್ಲಾಹ್ ಮಸೀದಿ ಧ್ವಂಸವಾಗಿದೆ. ಸುಮಾರು 15 ಎಕ್ರೆ ವಿಸ್ತೀರ್ಣ ಪ್ರದೇಶದಲ್ಲಿ ನಿರ್ಮಾಣವಾಗಿದ್ದ ಈ ಮಸೀದಿ ಆವರಣದಲ್ಲಿ ಉಗ್ರ ಚಟುವಟಿಕೆಗಳು ನಡೆಯುತ್ತಿತ್ತು ಎಂದು ಉನ್ನತ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

    ಮಂಗಳವಾರ (ಮೇ 6) ಗಡಿಯಲ್ಲಿ ಸಮಾರಾಭ್ಯಾಸ ನಡೆಸುತ್ತಿದ್ದ ಭಾರತೀಯ ಸೇನೆ ತಡರಾತ್ರಿ 1:44ರ ವೇಳೆ ರಫೇಲ್, ಮಿರಾಜ್-2000 ಮತ್ತು ಸುಖೋಯ್-30 ಸೇರಿದಂತೆ ಇತರ ಯುದ್ಧ ವಿಮಾನಗಳನ್ನ ಬಳಸಿ ಪಾಕ್‌ ಉಗ್ರತಾಣಗಳ ಮೇಲೆ ದಾಳಿ ಮಾಡಿದೆ.

    ಆಪರೇಷನ್ ಸಿಂಧೂರ್ (Operation Sindoor) ಹೆಸರಿನಲ್ಲಿ ಭಾರತ ತಡರಾತ್ರಿ 1:44ಕ್ಕೆ ದಾಳಿ ನಡೆಸಿದೆ. ರಫೇಲ್‌ ಯುದ್ಧ ವಿಮಾನಗಳನ್ನು ಬಳಸಿ ಪಾಕಿಸ್ತಾನ (Pakistan) ಮತ್ತು ಪಾಕ್‌ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿರುವ (PoK) ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ಏರ್‌ ಸ್ಟ್ರೈಕ್‌ (Air Strike) ನಡೆಸಿದೆ. ಈ ದಾಳಿಗಳಲ್ಲಿ 70ಕ್ಕೂ ಹೆಚ್ಚು ಉಗ್ರರು ಮೃತಪಟ್ಟಿರುವುದಾಗಿ ಕೆಲ ವರದಿಗಳು ತಿಳಿಸಿವೆ.

    ಉಗ್ರರ 9 ಸ್ಥಳಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಿದ್ದೇವೆ. ಯಾವುದೇ ಯಾವುದೇ ಪಾಕಿಸ್ತಾನಿ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಿಲ್ಲ ಎಂದು ಭಾರತೀಯ ಸೇನೆ ತಿಳಿಸಿದೆ. ಗುರಿ ಮಾಡಲಾದ 9 ಸ್ಥಳಗಳಲ್ಲಿ ಬಹಾವಲ್ಪುರದಲ್ಲಿರುವ ಜೈಶ್-ಎ-ಮೊಹಮ್ಮದ್ ಪ್ರಧಾನ ಕಚೇರಿ ಮತ್ತು ಮುರಿಡ್ಕೆಯಲ್ಲಿರುವ ಲಷ್ಕರ್-ಎ-ತೈಬಾ ಸೇರಿವೆ ಎಂದು ಮೂಲಗಳು ತಿಳಿಸಿವೆ.

  • ಪಾಕ್‌ ಸೈನಿಕರಿಂದ 24*7 ಭದ್ರತೆ – ಲಾಹೋರ್‌ನಲ್ಲಿ ಪಹಲ್ಗಾಮ್ ದಾಳಿಯ ಮಾಸ್ಟರ್‌ಮೈಂಡ್‌ ಸಯೀದ್‌ ಐಷಾರಾಮಿ ಜೀವನ

    ಪಾಕ್‌ ಸೈನಿಕರಿಂದ 24*7 ಭದ್ರತೆ – ಲಾಹೋರ್‌ನಲ್ಲಿ ಪಹಲ್ಗಾಮ್ ದಾಳಿಯ ಮಾಸ್ಟರ್‌ಮೈಂಡ್‌ ಸಯೀದ್‌ ಐಷಾರಾಮಿ ಜೀವನ

    ನವದೆಹಲಿ: ಪಾಕಿಸ್ತಾನದ (Pakistan) ಬಣ್ಣ ಮತ್ತೊಮ್ಮೆ ಬಟಾಬಯಲಾಗಿದೆ. ಭಾರತದ ಮೋಸ್ಟ್ ವಾಟೆಂಡ್ ಉಗ್ರ ಹಫೀಜ್ ಸಯೀದ್ (Hafiz Saeed) ಪಾಕಿಸ್ತಾನದ ಭದ್ರತೆಯಲ್ಲಿರೋದು ಬಯಲಾಗಿದೆ.

    ಪಹಲ್ಗಾಮ್ ಹತ್ಯಾಕಾಂಡದ (Pahalgam Terror Attack) ಕಿಂಗ್ ಪಿನ್ ಮಾಸ್ಟರ್ ಮೈಂಡ್ ರಕ್ಕಸ ಹಫೀಜ್ ಸಯೀದ್ ಪಾಕಿಸ್ತಾನದಲ್ಲಿ ಸೇಫ್‌ ಆಗಿದ್ದಾನೆ ಅನ್ನೋದು ವಿಡಿಯೋ ಸಮೇತ ಬಹಿರಂಗವಾಗಿದೆ.

    ಪಾಕಿಸ್ತಾನದ ಲಾಹೋರ್‌ ನಗರದಲ್ಲಿ 24*7 ಟೈಟ್ ಸೆಕ್ಯೂರಿಟಿಯಲ್ಲಿ ಐಷಾರಾಮಿ ಜೀವನ ನಡೆಸುತ್ತಿರುವ ಬಗ್ಗೆ ಮಾಧ್ಯಮವೊಂದು ವರದಿ ಮಾಡಿದೆ. ಜನರ ಮಧ್ಯೆ ಖಾಸಗಿ ಪಾರ್ಕ್, ಮದರಸ ಹೊಂದಿರುವ ದೊಡ್ಡ ಕಟ್ಟಡದಲ್ಲಿ ಜೀವನ ನಡೆಸುತ್ತಿದ್ದಾನೆ. ಈತ ವಾಸಿಸುತ್ತಿರುವ ಜಾಗದ ಉಪಗ್ರಹ ಇಮೇಜ್‌, ವಿಡಿಯೋ ಈಗ ಲಭ್ಯ ವಾಗಿದೆ. ಇದನ್ನೂ ಓದಿ: ಅಯೋಧ್ಯೆಯ ಹೊಸ ಬಾಬ್ರಿ ಮಸೀದಿಗೆ ಪಾಕ್‌ ಸೈನಿಕರು ಮೊದಲ ಇಟ್ಟಿಗೆ ಇಡುವ ಕಾಲ ದೂರವಿಲ್ಲ: ನಾಲಿಗೆ ಹರಿಬಿಟ್ಟ ಪಾಕ್‌ ಸಂಸದೆ

    ಪಾಕಿಸ್ತಾನದ ಲಷ್ಕರ್‌-ಎ-ತೊಯ್ಬಾ ಸಂಘಟನೆಯ ಮುಖ್ಯಸ್ಥ ಹಫೀಜ್‌ ಸಯೀದ್‌ ಪಹಲ್ಗಾಮ್ ದಾಳಿಯ ಕಿಂಗ್ ಪಿನ್ ಆಗಿದ್ದಾನೆ. ಮುಂಬೈ ದಾಳಿಯ ಮಾಸ್ಟರ್‌ ಮೈಂಡ್‌ ಆಗಿರುವ ಈತನನ್ನು ಹಸ್ತಾಂತರ ಮಾಡುವಂತೆ ಭಾರತ ಸಾಕಷ್ಟು ಬಾರಿ ಬೇಡಿಕೆ ವ್ಯಕ್ತಪಡಿಸಿದರೂ ಪಾಕ್‌ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ.

  • ಮುಂಬೈ ದಾಳಿಯ ಮಾಸ್ಟರ್‌ ಮೈಂಡ್‌, ಉಗ್ರ ನಾಯಕ ಹಫೀಜ್‌ನನ್ನ ಭಾರತಕ್ಕೆ ಹಸ್ತಾಂತರಿಸಲ್ಲ: ಪಾಕ್‌ ಪ್ರತಿಕ್ರಿಯೆ

    ಮುಂಬೈ ದಾಳಿಯ ಮಾಸ್ಟರ್‌ ಮೈಂಡ್‌, ಉಗ್ರ ನಾಯಕ ಹಫೀಜ್‌ನನ್ನ ಭಾರತಕ್ಕೆ ಹಸ್ತಾಂತರಿಸಲ್ಲ: ಪಾಕ್‌ ಪ್ರತಿಕ್ರಿಯೆ

    ಇಸ್ಲಾಮಾಬಾದ್: 2008ರ ನವೆಂಬರ್‌ 26ರಂದು ನಡೆದ ಮುಂಬೈ ಭಯೋತ್ಪಾದನಾ ದಾಳಿಯ ಮಾಸ್ಟರ್‌ ಮೈಂಡ್‌, ಲಷ್ಕರ್-ಎ-ತೈಬಾ ಉಗ್ರ ಸಂಘಟನೆ (Lashkar-e-Taiba) ಸಂಸ್ಥಾಪಕ ಹಫೀಜ್‌ ಸಯೀದ್‌ನನ್ನ (Hafiz Saeed) ಹಸ್ತಾಂತರಿಸಬೇಕು ಎಂದು ಭಾರತ ಕೇಳಿರುವುದಾಗಿ ಪಾಕಿಸ್ತಾನ ಹೇಳಿಕೊಂಡಿದೆ.

    ಪಾಕಿಸ್ತಾನ ವಿದೇಶಾಂಗ ಸಚಿವಾಲಯದ ವಕ್ತಾರೆ (Foreign Affairs spokesperson) ಮುಮ್ತಾಜ್ ಝಹ್ರಾ ಬಲೂಚ್ (Mumtaz Zahra Baloch) ಅವರು, ಹಫೀಜ್ ಸಯೀದ್ ಹಸ್ತಾಂತರಕ್ಕೆ ಭಾರತದ ಮನವಿ ಬಂದಿದೆ. ಆದರೆ, ಹಸ್ತಾಂತರಿಸಲು ಸಾಧ್ಯವಿಲ್ಲ, ಭಾರತ ಮತ್ತು ಪಾಕಿಸ್ತಾನದ ನಡುವೆ ದ್ವಿಪಕ್ಷೀಯ ಹಸ್ತಾಂತರ ಒಪ್ಪಂದ ಅಸ್ತಿತ್ವದಲ್ಲಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪಾಕ್‌ ಚುನಾವಣೆ; ಮುಂಬೈ ದಾಳಿ ಮಾಸ್ಟರ್‌ ಮೈಂಡ್‌ ಹಫೀಜ್‌ ಬೆಂಬಲಿತ ಪಕ್ಷದ ಅಭ್ಯರ್ಥಿಗಳು ಎಲ್ಲಾ ಕ್ಷೇತ್ರಗಳಿಂದ ಕಣಕ್ಕೆ

    ಮುಮ್ತಾಜ್ ಝಹ್ರಾ ಬಲೂಚ್ ಅವರು ತಮ್ಮ ಹೇಳಿಕೆಯಲ್ಲಿ, ಹಫೀಜ್ ಸಯೀದ್‌ನನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹಸ್ತಾಂತರಿಸುವಂತೆ ಪಾಕಿಸ್ತಾನವು ಭಾರತೀಯ ಅಧಿಕಾರಿಗಳಿಂದ ಮನವಿ ಸ್ವೀಕರಿಸಿದೆ. ಪಾಕಿಸ್ತಾನ ಮತ್ತು ಭಾರತದ ನಡುವೆ ಯಾವುದೇ ದ್ವಿಪಕ್ಷೀಯ ಹಸ್ತಾಂತರ ಒಪ್ಪಂದ ಅಸ್ತಿತ್ವದಲ್ಲಿಲ್ಲ ಎಂಬುದನ್ನು ಗಮನಿಸುವುದು ಸೂಕ್ತವಾಗಿದೆ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: ಯುದ್ಧಪೀಡಿತ ಗಾಜಾದಲ್ಲಿ 5 ಕಿಮೀ ನಡೆದು ಆಸ್ಪತ್ರೆಯಲ್ಲಿ 4 ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

    ಹಫೀಜ್‌ ಸಯೀದ್‌ನನ್ನು ಭಾರತಕ್ಕೆ ಹಸ್ತಾಂತರಿಸಿ ಎಂದು ಮೊದಲಿನಿಂದಲೂ ಕೇಂದ್ರ ಸರ್ಕಾರ ಆಗ್ರಹಿಸುತ್ತಿದೆ. ಉಗ್ರರಿಗೆ ಹಣಕಾಸು ನೆರವು ನೀಡಿದ ಆರೋಪದಲ್ಲಿ 2019ರಲ್ಲಿ ಪಾಕಿಸ್ತಾನದಲ್ಲಿ ಹಫೀಜ್‌ ಸಯೀದ್‌ನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಆದ್ರೆ ಇದುವರೆಗೆ ಹಫೀಜ್‌ ಸಯೀದ್‌ಗೆ ವಿಧಿಸಿರುವ ಶಿಕ್ಷೆಯ ಪ್ರಮಾಣ ಯಾವುದು? ವಿಚಾರಣೆ ಯಾವ ಹಂತಕ್ಕೆ ಬಂದಿದೆ? ಆತ ಎಲ್ಲಿದ್ದಾನೆ ಎಂಬುದರ ಕುರಿತು ಪಾಕಿಸ್ತಾನ ಮಾಹಿತಿ ನೀಡಿಲ್ಲ ಎನ್ನಲಾಗುತ್ತದೆ. ಆದ್ರೆ ಕೆಲ ಮೂಲಗಳ ಪ್ರಕಾರ, ಹಫೀಜ್‌ ಸಯೀದ್‌ ಪಾಕಿಸ್ತಾನದ ಜೈಲಿನಲ್ಲಿಲ್ಲ. ಆತ ಅಡಗುತಾಣದಲ್ಲಿ ಸುರಕ್ಷಿತವಾಗಿದ್ದಾನೆ ಹಾಗೂ ಉಗ್ರ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದಾನೆ ಎನ್ನಲಾಗಿದೆ. 2020ರ ಬಳಿಕ ಉಗ್ರರಿಗೆ ಹಣಕಾಸು ನೆರವು ಸೇರಿ ಐದು ಕೃತ್ಯಗಳಲ್ಲಿ ಅಪರಾಧಿ ಎಂದು ಸಾಬೀತಾದರೂ ಆತನ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಈಗ ಭಾರತವು ಆತನನ್ನು ಹಸ್ತಾಂತರಿಸಬೇಕು ಎಂದು ಆಗ್ರಹಿಸಿದೆ.

    ಇತ್ತೀಚಿನ ಬೆಳವಣಿಗೆಯಲ್ಲಿ ಹಫೀಜ್ ಸಯೀದ್ ಬೆಂಬಲಿತ ಪಕ್ಷ ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವುದಾಗಿ ತಿಳಿದುಬಂದಿದೆ.

  • ಪಾಕ್‌ ಚುನಾವಣೆ; ಮುಂಬೈ ದಾಳಿ ಮಾಸ್ಟರ್‌ ಮೈಂಡ್‌ ಹಫೀಜ್‌ ಬೆಂಬಲಿತ ಪಕ್ಷದ ಅಭ್ಯರ್ಥಿಗಳು ಎಲ್ಲಾ ಕ್ಷೇತ್ರಗಳಿಂದ ಕಣಕ್ಕೆ

    ಪಾಕ್‌ ಚುನಾವಣೆ; ಮುಂಬೈ ದಾಳಿ ಮಾಸ್ಟರ್‌ ಮೈಂಡ್‌ ಹಫೀಜ್‌ ಬೆಂಬಲಿತ ಪಕ್ಷದ ಅಭ್ಯರ್ಥಿಗಳು ಎಲ್ಲಾ ಕ್ಷೇತ್ರಗಳಿಂದ ಕಣಕ್ಕೆ

    ಇಸ್ಲಾಮಾಬಾದ್: ಮುಂಬೈ ಭಯೋತ್ಪಾದನಾ ದಾಳಿಯ (Mumbai Terror Attack) ಮಾಸ್ಟರ್ ಮೈಂಡ್ ಹಫೀಜ್ ಸಯೀದ್ (Hafiz Saeed) ಬೆಂಬಲಿತ ಪಕ್ಷ ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

    ಲಷ್ಕರ್-ಎ-ತೈಬಾದ ಸಂಸ್ಥಾಪಕ ಹಫೀಜ್ ಮೊಹಮ್ಮದ್ ಸಯೀದ್‌ನ ರಾಜಕೀಯ ಘಟಕವಾದ ಪಾಕಿಸ್ತಾನ್ ಮಾರ್ಕಾಜಿ ಮುಸ್ಲಿಂ ಲೀಗ್ (PMML) ಮುಂಬರುವ ಚುನಾವಣೆಗೆ ಪಾಕಿಸ್ತಾನದಾದ್ಯಂತ ಪ್ರತಿಯೊಂದು ರಾಷ್ಟ್ರೀಯ ಮತ್ತು ಪ್ರಾಂತೀಯ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. 2024 ರ ಫೆಬ್ರವರಿ 8 ರಂದು ಚುನಾವಣೆ (Pakistan Election) ನಡೆಯಲಿದೆ. ಇದನ್ನೂ ಓದಿ: ಜೀಸಸ್‌ ಹುಟ್ಟಿದ ನಾಡಲ್ಲೇ ಕ್ರಿಸ್ಮಸ್‌ ಸಂಭ್ರಮ ಇಲ್ಲ

    ಹಫೀಜ್ ಸಯೀದ್‌ನ ಪುತ್ರ ತಲ್ಹಾ ಸಯೀದ್, ಲಾಹೋರ್‌ನ ನ್ಯಾಷನಲ್ ಅಸೆಂಬ್ಲಿಯ NA-127 ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾನೆ. ಆದರೆ PMML ನ ಕೇಂದ್ರ ಅಧ್ಯಕ್ಷ ಖಾಲಿದ್ ಮಸೂದ್ ಸಿಂಧು NA-130 ನಿಂದ ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ ಮುಖ್ಯಸ್ಥ ಹಾಗೂ ಮಾಜಿ ಪ್ರಧಾನಿ ನವಾಜ್ ಷರೀಫ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.

    2019 ರಿಂದ ಜೈಲಿನಲ್ಲಿರುವ ಮೊಹಮ್ಮದ್‌ ಹಫೀಜ್‌ಗೆ 2022 ರಲ್ಲಿ ಪಾಕಿಸ್ತಾನದ ಲಾಹೋರ್‌ನಲ್ಲಿರುವ ವಿಶೇಷ ಭಯೋತ್ಪಾದನಾ ನಿಗ್ರಹ ನ್ಯಾಯಾಲಯವು, ಭಯೋತ್ಪಾದನೆಗೆ ಹಣಕಾಸು ಒದಗಿಸುವುದ ಆರೋಪಕ್ಕಾಗಿ 33 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಇದನ್ನೂ ಓದಿ: ಇಸ್ರೇಲ್ ವೈಮಾನಿಕ ದಾಳಿಯಲ್ಲಿ 78 ಮಂದಿ ಪ್ಯಾಲೆಸ್ತೇನಿಯರ ದುರ್ಮರಣ

    ಪಿಎಂಎಂಎಲ್‌ನ ಚುನಾವಣಾ ಚಿಹ್ನೆ ಕುರ್ಚಿಯಾಗಿದೆ. ಪಿಎಂಎಂಎಲ್ ವಕ್ತಾರ ತಬಿಶ್ ಕಯ್ಯುಮ್, ದೇಶದಾದ್ಯಂತ ಎಲ್ಲಾ ರಾಷ್ಟ್ರೀಯ ಅಸೆಂಬ್ಲಿ ಮತ್ತು ಪ್ರಾಂತೀಯ ಸ್ಥಾನಗಳಿಗೆ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ ಎಂದು ತಿಳಿಸಿದ್ದಾರೆ.

  • ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಪುತ್ರ ಭಯೋತ್ಪಾದಕ – ಸರ್ಕಾರ ಘೋಷಣೆ

    ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಪುತ್ರ ಭಯೋತ್ಪಾದಕ – ಸರ್ಕಾರ ಘೋಷಣೆ

    ನವದೆಹಲಿ: 2008ರಲ್ಲಿ ನಡೆದ ಮುಂಬೈ ಭಯೋತ್ಪಾಧಕರ ದಾಳಿಯ ಮಾಸ್ಟರ್ ಮೈಂಡ್ ಹಾಗೂ ಲಷ್ಕರ್-ಎ-ತೈಬಾ(ಎಲ್‌ಇಟಿ) ಸಂಸ್ಥಾಪಕ ಹಫೀಜ್ ಸಯೀದ್ ಪುತ್ರ ಹಫೀಜ್ ತಲ್ಹಾ ಸಯೀದ್‌ನನ್ನು ಸರ್ಕಾರ ಭಯೋತ್ಪಾದಕ ಎಂದು ಘೋಷಿಸಿದೆ.

    ಹಫೀಸ್ ತಲ್ಹಾ ಸಯೀದ್ ಭಾರತದಲ್ಲಿ ಲಷ್ಕರ್-ಎ-ತೈಬಾ ಹಾಗೂ ಭಯೋತ್ಪಾದನೆಗೆ ನೇಮಕಾತಿ, ನಿಧಿ ಸಂಗ್ರಹ ಹಾಗೂ ಯೋಜನೆಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದ ಎಂದು ಕೇಂದ್ರ ಗೃಹಸಚಿವಾಲಯ ತಿಳಿಸಿದೆ.

    ತಲ್ಹಾ ಸಯೀದ್ ಪಾಕಿಸ್ತಾನದಾದ್ಯಂತ ವಿವಿಧ ಎಲ್‌ಇಟಿ ಕೇಂದ್ರಗಳಿಗೆ ಆಗಾಗ ಭೇಟಿ ನೀಡುತ್ತಿದ್ದು, ಭಾರತ, ಇಸ್ರೇಲ್, ಅಮೇರಿಕಾ ಹಾಗೂ ಇತರ ಪಾಶ್ಚಿಮಾತ್ಯ ದೇಶಗಳಲ್ಲಿ ಭಾರತೀಯ ಹಿತಾಸಕ್ತಿಗಳ ವಿರುದ್ಧ ಜಿಹಾದ್ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಎಂದು ಹೇಳಿದೆ. ಇದನ್ನೂ ಓದಿ: ಪ್ರಧಾನಿ ಮೋದಿ ತವರಿಗೇ ಲಗ್ಗೆಯಿಟ್ಟ XE ಕೊರೊನಾ ರೂಪಾಂತರಿ

    ಹಫೀಜ್ ಸಯೀದ್ ನೇತೃತ್ವದಲ್ಲಿ 2008ರ ನವೆಂಬರ್ 26 ರಂದು ನಡೆದ ಮುಂಬೈನ ಭೀಕರ ಭಯೋತ್ಪಾದನಾ ದಾಳಿಯಲ್ಲಿ 166 ಜನರು ಸಾವನ್ನಪ್ಪಿದ್ದರು. ಕೆಲವು ವರ್ಷಗಳ ಹಿಂದೆಯೇ ಆತನನ್ನು ಭಯೋತ್ಪಾದಕ ಎಂದು ಸರ್ಕಾರ ಘೋಷಿಸಿದ್ದು, ಈ ಆರೋಪದ ಮೇಲೆ ಆತ ಪಾಕಿಸ್ತಾನದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾನೆ. ಇದನ್ನೂ ಓದಿ: ಭಾರತವನ್ನು ಹೊಗಳಿದ ಇಮ್ರಾನ್ ಖಾನ್‍ಗೆ ಪಾಕ್ ಬಿಟ್ಟು ತೊರೆಯಿರಿ ಎಂದ ಷರೀಫ್ ಪುತ್ರಿ

    ಭಾರತ ಸತತವಾಗಿ ಹಫೀಜ್ ಸಯೀದ್‌ನನ್ನು ಕಸ್ಟಡಿಗೆ ಕೋರುತ್ತಿದೆ. ಆದರೆ ಪಾಕಿಸ್ತಾನ ಅದನ್ನು ನಿರಾಕರಿಸಿದೆ.

  • ಉಗ್ರ ಹಫೀಸ್ ಸಯೀದ್ ಮನೆಯ ಸಮೀಪ ಭಾರೀ ಸ್ಫೋಟ – ಇಬ್ಬರು ಬಲಿ

    ಉಗ್ರ ಹಫೀಸ್ ಸಯೀದ್ ಮನೆಯ ಸಮೀಪ ಭಾರೀ ಸ್ಫೋಟ – ಇಬ್ಬರು ಬಲಿ

    ಲಾಹೋರ್: ಪಾಕಿಸ್ತಾನದ ಲಾಹೋರ್ ನಲ್ಲಿ ಭಾರೀ ಪ್ರಮಾಣದ ಸ್ಫೋಟ ಸಂಭವಿಸಿದ್ದು ಇಬ್ಬರು ಮೃತಪಟ್ಟು, 16 ಮಂದಿ ಗಂಭೀರ ಗಾಯಗೊಂಡಿದ್ದಾರೆ.

    ಮುಂಬೈ ದಾಳಿಯ ಪ್ರಮುಖ ಆರೋಪಿ ಲಷ್ಕರ್ ತೊಯ್ಬಾ ಸಂಘಟನೆ ಮತ್ತು ಜಮಾತ್-ಉದ್-ದವಾಹ್ (ಜುಡಿ) ಮುಖ್ಯಸ್ಥ ಹಫೀಜ್ ಸಯೀದ್ ನಿವಾಸದಿಂದ 120 ಮೀಟರ್ ದೂರದಲ್ಲಿ ಈ ಸ್ಫೋಟ ಸಂಭವಿಸಿದೆ.

    ಸ್ಫೋಟಕ್ಕೆ ನಿಜವಾದ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ.  ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಳಕೆ ಮಾಡಿ ಸ್ಫೋಟಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಲಾಹೋರಿನ ಜೋಹರ್ ಪಟ್ಟಣದಲ್ಲಿ ಸ್ಫೋಟ ಸಂಭವಿಸಿದ ಕೂಡಲೇ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಆಗಮಿಸಿವೆ. ಸ್ಫೋಟದಲ್ಲಿ ಗಾಯಗೊಂಡವರನ್ನು ಖಾಸಗಿ ಕಾರು ಮತ್ತು ಆಟೋರಿಕ್ಷಾ ಮೂಲಕ  ಜಿನ್ನಾ ಆಸ್ಪತ್ರೆಗೆ ದಾಖಲಿಸಲಾಗಿದೆ.

    ದ್ವಿಚಕ್ರ ವಾಹನದಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ಮನೆಯ ಬಳಿ ಪಾರ್ಕ್ ಮಾಡಿದ ಕೂಡಲೇ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಹತ್ತಿರದ ಮನೆಗಳು ಮತ್ತು ಕಟ್ಟಡಗಳ ಗಾಜಿನ ಕಿಟಕಿಗಳು ಒಡೆದು ಹೋಗಿವೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

  • ಭಾರತದೊಂದಿಗೆ ಪಾಕ್ ವ್ಯಾಪಾರ ಸ್ಥಗಿತ, ವಾಯುಸೀಮೆ ಬಂದ್

    ಭಾರತದೊಂದಿಗೆ ಪಾಕ್ ವ್ಯಾಪಾರ ಸ್ಥಗಿತ, ವಾಯುಸೀಮೆ ಬಂದ್

    ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ವಿಧಿ 370 ರದ್ದು ಮಾಡಿದ ಬೆನ್ನಲ್ಲೇ ಪಾಕಿಸ್ತಾನವು ಭಾರತದೊಂದಿಗೆ ದ್ವಿಪಕ್ಷೀಯ ವ್ಯಾಪಾರ ಸ್ಥಗಿತಗೊಳಿಸುವ ನಿರ್ಧಾರ ಕೈಗೊಂಡಿದೆ. ಈಗಾಗಲೇ ಆರ್ಥಿಕತೆ ಕುಸಿದಿದ್ದು ವಿದೇಶಗಳಿಂದ ನೆರವು ಬೇಡುತ್ತಿದೆ. ಈಗ ಭಾರತದ ಜೊತೆ ವ್ಯಾಪಾರವನ್ನು ಸ್ಥಗಿತಗೊಳಿಸುವ ಮೂಲಕ ಪಾಕ್ ತನ್ನ ಆತ್ಮಹತ್ಯೆಗೆ ತಾನೇ ಶರಣಾಗುತ್ತಿದೆ ಎನ್ನುವ ವಿಶ್ಲೇಷಣೆ ಕೇಳಿಬಂದಿದೆ. ಇದನ್ನು ಓದಿ: ಭಾರತದ ರೈತರು ಕೊಟ್ಟ ಶಾಕಿಗೆ ಪಾಕಿನಲ್ಲಿ ಗಗನಕ್ಕೇರಿತು ಟೊಮೆಟೊ ದರ!

    ಪಾಕಿಸ್ತಾನ ಈಗ ಭಾರತದೊಂದಿಗಿನ ರಾಜತಾಂತ್ರಿಕ ಸಂಬಂಧವನ್ನು ಕೆಳಮಟ್ಟಕ್ಕಿಳಿಸುವುದಾಗಿ ಘೋಷಿಸಿದೆ. ಭಾರತದೊಂದಿಗೆ ದ್ವಿಪಕ್ಷೀಯ ವ್ಯಾಪಾರವನ್ನು ಸ್ಥಗಿತಗೊಳಿಸುವ ನಿರ್ಧಾರವನ್ನು ಹೇಳಿಕೊಂಡಿದೆ. ಈ ನಿಟ್ಟಿನ ಪಾಕ್ ತನ್ನ ರಾಯಭಾರಿಯನ್ನು ಭಾರತದಿಂದ ವಾಪಸ್ ಕರೆಸಿಕೊಳ್ಳುವುದಾಗಿ ಮತ್ತು ಪಾಕಿಸ್ತಾನದ ಭಾರತೀಯ ರಾಯಭಾರಿಯನ್ನು ಹೊರಹಾಕುವುದಾಗಿ ಘೋಷಿಸಿದೆ. ಈ ಸುದ್ದಿಯನ್ನು ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಶಿ ಸ್ಥಳೀಯ ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ.

    ಇಸ್ಲಾಮಾಬಾದ್‍ನಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಬುಧವಾರ ರಾಷ್ಟ್ರೀಯ ಭದ್ರತಾ ಸಮಿತಿಯ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಅನೇಕ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಸಂಬಂಧ ಸಮಿತಿಯು ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿದೆ. ಇದನ್ನು ಓದಿ: ನೆರೆವೈರಿ ಪಾಕಿಗೆ ಟೊಮೆಟೊ ರಫ್ತು ಮಾಡದಿರಲು ಕೋಲಾರ ರೈತರು ನಿರ್ಧಾರ

    ಭಾರತದೊಂದಿಗೆ ರಾಜತಾಂತ್ರಿಕ ಸಂಬಂಧವನ್ನು ಕೆಳಕ್ಕೆ ಇಳಿಸುವುದು, ಭಾರತದೊಂದಿಗೆ ದ್ವಿಪಕ್ಷೀಯ ವ್ಯಾಪಾರವನ್ನು ಸ್ಥಗಿತಗೊಳಿಸುವುದು ಹಾಗೂ ದ್ವಿಪಕ್ಷೀಯ ವ್ಯವಸ್ಥೆಗಳ ಪರಿಶೀಲನೆ ಮಾಡುವ ನಿರ್ಧಾರವನ್ನು ಪಾಕ್ ಕೈಗೊಂಡಿದೆ. ಜೊತೆಗೆ ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದ್ದ ವಿಷಯವನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ದೂರು ನೀಡಲು ಮುಂದಾಗಿದೆ.

    ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆಯನ್ನು (ಆಗಸ್ಟ್ 14) ಕೆಚ್ಚೆದೆಯ ಕಾಶ್ಮೀರಿಗಳಿಗೆ ಒಗ್ಗಟ್ಟಿಗೆ ಹಾಗೂ ಅವರ ಸ್ವ-ನಿರ್ಣಯದ ಹಕ್ಕಿಗಾಗಿ ಹೋರಾಟ ಮಾಡುವುದಾಗಿ ಪಾಕ್ ಘೋಷಿಸಿದೆ. ಅಷ್ಟೇ ಅಲ್ಲದೆ ಭಾರತದ ಸ್ವಾತಂತ್ರ್ಯ ದಿನಾಚರಣೆಯನ್ನು (ಆಗಸ್ಟ್ 15) ಕಪ್ಪು ದಿನವನ್ನಾಗಿ ಆಚರಿಸುವ ನಿರ್ಣಯ ಕೈಗೊಂಡಿದೆ.

    ಎನ್‍ಎಸ್‍ಸಿ ಸಭೆಯಲ್ಲಿ ಪಾಕಿಸ್ತಾನದ ವಿದೇಶಾಂಗ ಸಚಿವರು, ರಕ್ಷಣಾ ಸಚಿವರು, ಆಂತರಿಕ ಸಚಿವರು (ಗೃಹ ಸಚಿವ), ಶಿಕ್ಷಣ ಸಚಿವರು, ಮಾನವ ಹಕ್ಕುಗಳ ಸಚಿವರು, ಕಾನೂನು ಸಚಿವರು, ಐಎಸ್‍ಐ ಮತ್ತು ಸೇನಾ ಸಿಬ್ಬಂದಿ ಭಾಗವಹಿಸಿದ್ದರು ಎಂದು ವರದಿಯಾಗಿದೆ. ಈ ನಿರ್ಧಾರದ ಜೊತೆಗೆ ಭಾರತದ ವಿಮಾನಗಳಿಗೆ ತನ್ನ ವಾಯುಸೀಮೆ ಬಳಸಲು ನಿರ್ಬಂಧ ಹೇರಿದೆ.

    ಭಯೋತ್ಪಾದನಾ ಚಟುವಟಿಕೆಗಳಿಗೆ ಆರ್ಥಿಕ ನೆರವು ನೀಡಿದ ಆರೋಪದಲ್ಲಿ ಬಂಧಿತನಾಗಿದ್ದ ಉಗ್ರ, ಮುಂಬೈ ಸ್ಫೋಟ ಪ್ರಕರಣದ ರೂವಾರಿ ಹಫೀಜ್ ಸಯೀದ್ ತಪ್ಪಿತಸ್ಥನೆಂದು ಪಾಕಿಸ್ತಾನದ ಗುಜ್ರನ್‍ವಾಲಾ ನ್ಯಾಯಾಲಯ ತೀರ್ಪು ನೀಡಿದೆ. ಜೊತೆಗೆ ಈ ಪ್ರಕರಣವನ್ನು ಪಾಕಿಸ್ತಾನದ ಗುಜರಾತ್‍ಗೆ ವರ್ಗಾಯಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

    ಹಫೀಜ್ ಸಯೀದ್‍ನನ್ನು ಪಾಕಿಸ್ತಾನದ ಅಧಿಕಾರಿಗಳು ಜುಲೈ 17ರಂದು ಬಂಧಿಸಿದ್ದರು. ನಂತರ 7 ದಿನಗಳ ನ್ಯಾಯಾಂಗ ಬಂಧನದ ಅವಧಿಯನ್ನು 14 ದಿನಗಳವರೆಗೆ ವಿಸ್ತರಿಸಲಾಗಿತ್ತು ಎಂದು ವರದಿಯಾಗಿದೆ.

  • ಭಾರತ ಕೊಟ್ಟ ಶಾಕ್‍ಗೆ ತಲೆಬಾಗಿ ಉಗ್ರ ಸಂಘಟನೆ ನಿಷೇಧಿಸಿದ ಪಾಕ್

    ಭಾರತ ಕೊಟ್ಟ ಶಾಕ್‍ಗೆ ತಲೆಬಾಗಿ ಉಗ್ರ ಸಂಘಟನೆ ನಿಷೇಧಿಸಿದ ಪಾಕ್

    ಇಸ್ಲಾಮಾಬಾದ್: ಭಾರತ ಒಂದೊಂದಾಗಿ ಶಾಕ್ ನೀಡುತ್ತಿದ್ದಂತೆ ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಪಾಕಿಸ್ತಾನ ಕೊನೆಗೂ ಉಗ್ರರ ವಿರುದ್ಧ ಕ್ರಮ ಕೈಗೊಳ್ಳಲು ನಿರ್ಧಾರ ತೆಗೆದುಕೊಂಡಿದೆ.

    ಮುಂಬೈ ದಾಳಿಯ ರೂವಾರಿ ಉಗ್ರ ಹಫೀಸ್ ಸಯೀದ್ ನೇತೃತ್ವದ ಜಮಾತ್ ಉದ್ ದಾವ(ಜೆಯುಡಿ) ಮತ್ತು ಇದರ ಚಾರಿಟಿ ಸಂಸ್ಥೆಯಾದ ಫಾಲ-ಐ-ಇನ್ಸಾತ್ ಫೌಂಡೇಶನ್(ಎಫ್‍ಐಎಫ್) ಸಂಸ್ಥೆಯನ್ನು ನಿಷೇಧಿಸಿದೆ.

    ಪ್ರಧಾನಿ ನಿವಾಸದಲ್ಲಿ ಪ್ರಧಾನಿ ಇಮ್ರಾನ್ ಖಾನ್ ಅವರು ಗುರುವಾರ ಸಂಜೆ ರಾಷ್ಟ್ರೀಯ ಭದ್ರತಾ ಸಮಿತಿಯ ಸಭೆಯನ್ನು ಕರೆದಿದ್ದರು. ಈ ಸಭೆಯಲ್ಲಿ ಪುಲ್ವಾಮ ಉಗ್ರರ ದಾಳಿಯ ಬಗ್ಗೆ ಚರ್ಚೆ ನಡೆದ ಬಳಿಕ ಈ ನಿಷೇಧ ನಿರ್ಧಾರವನ್ನು ಪಾಕ್ ಸರ್ಕಾರ ತೆಗೆದುಕೊಂಡಿದೆ.

    ಫೆ.14 ರಂದು ಸಿಆರ್ ಪಿಎಫ್ ಯೋಧರ ಮೇಲೆ ಉಗ್ರರ ದಾಳಿ ನಡೆದ ಬಳಿಕ ಭಾರತ ಸರ್ಕಾರ ಪಾಕಿಸ್ತಾನವನ್ನು ವಿಶ್ವದಲ್ಲಿ ಏಕಾಂಗಿಯಾಗಿಸುವ ನಿಟ್ಟಿನಲ್ಲಿ ವಿದೇಶಗಳ ಜೊತೆ ಮಾತುಕತೆ ನಡೆಸಿತ್ತು. ಹಲವು ದೇಶಗಳು ಪುಲ್ವಾಮಾ ದಾಳಿಯನ್ನು ಖಂಡಿಸಿತ್ತು.  ಇದನ್ನು ಓದಿ: ಮತ್ತೊಂದು ಶಾಕ್: ಉಗ್ರರನ್ನು ಛೂ ಬಿಡೋ ಪಾಕಿಗೆ ನದಿ ನೀರು ಕೊಡಲ್ಲ!

    ಇದಾದ ಬಳಿಕ ಭಾರತ ಪಾಕಿಸ್ತಾನಕ್ಕೆ ನೀಡಿದ್ದ ಪರಮಾಪ್ತ ರಾಷ್ಟ್ರ ಸ್ಥಾನಮಾನವನ್ನು ಕಿತ್ತೆಸೆದು ಅಲ್ಲಿಂದ ದೇಶಕ್ಕೆ ರಫ್ತಾಗುತ್ತಿದ್ದ ಉತ್ಪನ್ನಗಳ ಮೇಲೆ ಶೇ.200 ರಷ್ಟು ಆಮದು ಸುಂಕವನ್ನು ಏರಿಸಿ ಆರ್ಥಿಕ ಹೊಡೆತ ನೀಡಿತ್ತು. ಭಾರತದ ರೈತರು ಪಾಕಿಸ್ತಾನಕ್ಕೆ ತರಕಾರಿ ರಫ್ತು ಮಾಡುವುದನ್ನು ನಿಲ್ಲಿಸಿದ ಪರಿಣಾಮ ಪಾಕಿಸ್ತಾನದಲ್ಲಿ ತರಕಾರಿ ಮತ್ತು ಹಣ್ಣು ಹಂಪಲುಗಳ ಬೆಲೆ ದಿಢೀರ್ ಏರಿಕೆಯಾಗಿತ್ತು. ಲಾಹೋರ್‍ನಲ್ಲಿ ಪ್ರತಿ ಕೆಜಿ ಟೊಮೆಟೊ ಬೆಲೆ 180 ರೂ.ಗೆ ಏರಿಕೆ ಆಗಿತ್ತು.

    ಭಾರತದ ಮೇಲೆ ಉಗ್ರರನ್ನು ಛೂ ಬಿಟ್ಟು ಪರೋಕ್ಷವಾಗಿ ಯುದ್ಧ ಮಾಡುತ್ತಿರುವ ಪಾಕಿಸ್ತಾನಕ್ಕೆ ಪಾಠ ಕಲಿಸಲೇಬೇಕೆಂಬ ಜನಾಗ್ರಹ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಪಾಕಿಸ್ತಾನಕ್ಕೆ ನದಿ ನೀರನ್ನು ಬಿಡದಿರುವ ಕಠಿಣ ತೀರ್ಮಾನವನ್ನು ತೆಗೆದುಕೊಂಡಿದೆ. ಪಾಕಿಸ್ತಾನಕ್ಕೆ ಹರಿಯುತ್ತಿರುವ ಮೂರು ನೀರಿನ ಹರಿವನ್ನು ನಿಲ್ಲಿಸಲಾಗುವುದು ಎಂದು ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಗುರುವಾರ ಖಡಕ್ ಹೇಳಿಕೆ ನೀಡಿದ್ದರು. ಭಾರತ ಪ್ರತಿ ದಿನ ನೀಡುತ್ತಿರುವ ಹೊಡೆತಗಳಿಂದ ಈಗ ಸಮಸ್ಯೆ ಆಗದೇ ಇದ್ದರೂ ವಿವಿಧ ರಾಷ್ಟ್ರಗಳಿಂದ ಭಿಕ್ಷೆ ಬೇಡುತ್ತಿರುವ ನಮಗೆ ಮುಂದಿನ ದಿನಗಳಲ್ಲಿ ಭಾರೀ ಸಮಸ್ಯೆಯಾಗಲಿದೆ ಎನ್ನುವುದು ನಿಧಾನವಾಗಿ ಗೊತ್ತಾಗುತ್ತಿದ್ದಂತೆ ಪಾಕಿಸ್ತಾನ ಈಗ ಎಚ್ಚೆತ್ತುಕೊಂಡು ಹಫೀಸ್ ಸಯೀದ್ ಸಂಘಟನೆಯನ್ನು ನಿಷೇಧಿಸಲು ಕ್ರಮ ಕೈಗೊಂಡಿದೆ. ಇದನ್ನು ಓದಿ: ಮುಂಬೈ ಸ್ಫೋಟದ ರೂವಾರಿ ಹಫೀಜ್ ಸಯೀದ್ ಬಿಡುಗಡೆ-ಉತ್ತರ ಪ್ರದೇಶದಲ್ಲಿ ಸಂಭ್ರಮಾಚರಣೆ

    ದಾಳಿ ನಡೆದ ಬಳಿಕ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಸಾಕ್ಷ್ಯಗಳನ್ನು ಕೊಟ್ಟರೆ ಉಗ್ರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಭಾರತ ಮುಂಬೈ ದಾಳಿ ನಡೆದ ಬಳಿಕ ನಾವು ಸಾಕಷ್ಟು ಸಾಕ್ಷ್ಯಗಳನ್ನು ನೀಡಿದ್ದೇವೆ. ಆದರೆ ಇದರಿಂದ ಯಾವುದೇ ಫಲಿತಾಂಶ ಬಂದಿಲ್ಲ. ಹೀಗಾಗಿ ನಾವು ನಿಮಗೆ ಯಾವುದೇ ಸಾಕ್ಷ್ಯಗಳನ್ನು ನೀಡುವುದಿಲ್ಲ ಎಂದು ಹೇಳಿತ್ತು. ದಾಳಿ ಬಳಿಕ ನಡೆದ ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ ನಮ್ಮ ಸೈನಿಕರ ಬಲಿದಾನವನ್ನು ವ್ಯರ್ಥವಾಗಲು ನಾನು ಬಿಡುವುದಿಲ್ಲ. ಈ ಕೃತ್ಯಕ್ಕೆ ಪ್ರತೀಕಾರವನ್ನು ತೀರಿಸಿಯೇ ತೀರಿಸುತ್ತೇವೆ ಎಂದು ಗುಡುಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv