Tag: Hail Rain

  • ಬೇಸಿಗೆಯಲ್ಲಿ ಆಲಿಕಲ್ಲು ಮಳೆ – ಕಲಬುರಗಿಯಲ್ಲಿ ‘ಹಿಮಾಲಯದ ರಸ್ತೆ’!

    ಬೇಸಿಗೆಯಲ್ಲಿ ಆಲಿಕಲ್ಲು ಮಳೆ – ಕಲಬುರಗಿಯಲ್ಲಿ ‘ಹಿಮಾಲಯದ ರಸ್ತೆ’!

    ಕಲಬುರಗಿ: ರಾಜ್ಯದಲ್ಲಿ ಹವಾಮಾನ ವೈಪರಿತ್ಯ ಹಿನ್ನೆಲೆಯಲ್ಲಿ ಕಲಬುರಗಿಯ (Kalaburagi) ಗಡಿ ಗ್ರಾಮಗಳಲ್ಲಿ ಗುರುವಾರ ಆಲಿಕಲ್ಲು ಮಳೆಯಾಗಿದೆ. ಅಕಾಲಿಕವಾಗಿ ಬಿದ್ದ ಆಲಿಕಲ್ಲು ಮಳೆಯಿಂದಾಗಿ (Hail rain) ಗ್ರಾಮಗಳ ರಸ್ತೆಗಳಲ್ಲಿ ಹಿಮಾಲಯದ (Himalaya) ವಾತಾವರಣ ನಿರ್ಮಾಣವಾಗಿತ್ತು.

    ಚಿಂಚೋಳಿ ತಾಲೂಕಿನ ಗಡಿಗ್ರಾಮಗಳಾದ ಶಿವರಾಂಪುರ, ತೆಲಂಗಾಣದ (Telangana) ಮರಪಲ್ಲಿ, ಕೋಹಿರ್, ಬಂಟಾರಂ, ಪಟ್ಟಲ್ಲುರ್ ಗ್ರಾಮಗಳಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಆಲಿಕಲ್ಲು ಮಳೆ ಬಿದ್ದಿದೆ. ಬಿರು ಬೇಸಿಗೆಯಲ್ಲಿ ಆಲಿಕಲ್ಲು ಮಳೆ ಕಂಡು ಗ್ರಾಮಸ್ಥರು ದಂಗಾಗಿದ್ದಾರೆ. ಇದನ್ನೂ ಓದಿ: Special- ಪುನೀತ್ ಹುಟ್ಟುಹಬ್ಬ: ದಿನಪೂರ್ತಿ ಕಾರ್ಯಕ್ರಮ

    ಸಮುದ್ರದ ಮೇಲೆ ಸುಳಿಗಾಳಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿತ್ತು. ಇನ್ನೂ ಎರಡು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ (Meteorological Department) ತಿಳಿಸಿದೆ. ಇದನ್ನೂ ಓದಿ: ಮುಂದಿನ ಬಾರಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಮದರಸಾ ಸಂಪೂರ್ಣ ಬಂದ್: ಯತ್ನಾಳ್

  • ಕಾರ್ಕಳದಲ್ಲಿ ಆಲಿಕಲ್ಲು ಮಳೆ, ಗುಡುಗು ಸಿಡಿಲಿಗೆ ಜನ ಹೈರಾಣ

    ಕಾರ್ಕಳದಲ್ಲಿ ಆಲಿಕಲ್ಲು ಮಳೆ, ಗುಡುಗು ಸಿಡಿಲಿಗೆ ಜನ ಹೈರಾಣ

    ಉಡುಪಿ: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಆಲಿಕಲ್ಲು ಮಳೆಯಾಗಿದೆ. ಕಾರ್ಕಳ ತಾಲೂಕಿನ ಕೆಲ ಗ್ರಾಮೀಣ ಪ್ರದೇಶಗಳಲ್ಲಿ ಬಿರು ಬಿಸಿಲಿನ ನಡುವೆ ಮಳೆರಾಯ ತಂಪೆರೆದಿದ್ದಾನೆ.

    ಕಾರ್ಕಳ ತಾಲೂಕಿನ ಜೋಡು ರಸ್ತೆ, ಅಜೆಕಾರು ಮುನಿಯಾಲು ಹೆಬ್ರಿ ಬಜೆಗೋಳಿ ವ್ಯಾಪ್ತಿಯಲ್ಲಿ ಸುಮಾರು ಒಂದು ಗಂಟೆಗಳ ಕಾಲ ಧಾರಾಕಾರ ಮಳೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಲ್ಲಿ ಮೂರನೇ ಬಾರಿ ಮಳೆಯಾಗುತ್ತಿದೆ. ಉಡುಪಿ ನಗರದಾದ್ಯಂತ ತುಂತುರು ಮಳೆಯಾಗಿದ್ದು, ಇಡೀ ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣ ಇದೆ.

    ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಉಷ್ಣಾಂಶ ವಿಪರೀತ ಆಗಿತ್ತು. ಬಿಸಿಲಿನ ಶಾಖಕ್ಕೆ ಮೋಡ ಕರಗಿ ಮಳೆಯಾಗಿದೆ. ಕಾಪುವಿನ ಶಿರ್ವದಲ್ಲಿ ಗಾಳಿ ಮಳೆಯಾಗಿದೆ. ಕುಂದಾಪುರ, ಬೈಂದೂರಲ್ಲಿ ಕೆಲವೆಡೆ ಗುಡುಗು ಸಹಿತ ಮಳೆ ಬಿದ್ದಿದೆ.

    ಕಾಪು ತಾಲೂಕಿನ ಶಿರ್ವದಲ್ಲಿ ಗಾಳಿ ಮಳೆಯಾಗಿದೆ. ಕೊರೊನಾ ವೈರಸ್‍ನಿಂದ ಲಾಕ್‍ಡೌನ್ ಆಗಿರುವುದರಿಂದ ನಾವು ಮಳೆಗಾಲಕ್ಕೆ ಹಸುವಿಗೆ ಈಗಲೇ ಬೈ ಹುಲ್ಲು ತಂದು ಮನೆಯಲ್ಲಿ ರಾಶಿ ಹಾಕಿದ್ದೆವು. ಹಟ್ಟಿಯಲ್ಲಿ ಅದನ್ನು ಜೋಡಿಸುವ ಮೊದಲೇ ಗಾಳಿ ಮಳೆ ಬಂದು ಬೈಹುಲ್ಲು ಒದ್ದೆಯಾಯಿತು. ಪೇಟೆಯಲ್ಲಿ ಕುಳಿತವರಿಗೆ ಮಳೆ ಖುಷಿಯಾಗಿರಬಹುದು. ಆದರೆ ನಮ್ಮಂತಹ ರೈತರಿಗೆ ಗಾಯದ ಮೇಲೆ ಬರೆ ಎಳೆದ ಹಾಗೆ ಆಗಿದೆ ಎಂದು ಶಿರ್ವ ಸಂದೀಪ್ ಭಟ್ರಾ ಹೇಳಿದ್ದಾರೆ.