Tag: hall ticket

  • ಹಾಲ್ ಟಿಕೆಟ್ ಸಿಗದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಕಾಲೇಜು ವಿದ್ಯಾರ್ಥಿನಿ

    ಹಾಲ್ ಟಿಕೆಟ್ ಸಿಗದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಕಾಲೇಜು ವಿದ್ಯಾರ್ಥಿನಿ

    ಮೈಸೂರು: ಹಾಲ್ ಟಿಕೆಟ್ ಸಿಗದೇ ಇದ್ದದ್ದಕ್ಕೆ ಯುವತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ಜಯಲಕ್ಷ್ಮಿ ಪುರಂನಲ್ಲಿ ನಡೆದಿದೆ.

    ಆತ್ಮಹತ್ಯೆಗೆ ಯತ್ನಿಸುವುದಕ್ಕೂ ಮುನ್ನ ವೀಡಿಯೋ ಮಾಡಿರುವ ತನ್ಮಯಾ ತನ್ನ ಸಾವಿಗೆ ಸೆಂಟ್ ಜೋಸೆಫ್ ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿಗಳೇ ಕಾರಣ ಎಂದು ಆರೋಪಿಸಿದ್ದಾಳೆ. ಇದನ್ನೂ ಓದಿ: ಬಳ್ಳಾರಿಯಲ್ಲಿ ಮೂಢನಂಬಿಕೆ ಇನ್ನೂ ಜೀವಂತ – ಸತ್ತ ಬಾಲಕನನ್ನು ಬದುಕಿಸಲು 8 ಗಂಟೆ ಉಪ್ಪಿನಲ್ಲಿಟ್ಟ ಗ್ರಾಮಸ್ಥರು

    ನನಗೆ ಕಾಲೇಜಿನಲ್ಲಿ ತುಂಬಾ ತೊಂದರೆಯಾಗುತ್ತಿದೆ. ನಮ್ಮ ಕಾಲೇಜಿನಲ್ಲಿ ತುಂಬಾ ತಾರತಮ್ಯ ನಡೆಯುತ್ತಿದೆ. ನಮ್ಮ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ. ತರಗತಿಗಳಿಗೆ ಹಾಜರಾಗಿದ್ದರೂ ಹಾಜರಾತಿ ನೀಡುತ್ತಿಲ್ಲ. ದುಡ್ಡು ತೆಗೆದುಕೊಂಡು ಹಾಲ್ ಟಿಕೆಟ್ ಕೊಡುತ್ತಾರೆ. ಹಣ ಕೊಟ್ಟಿದ್ದಕ್ಕೆ ಯಾವುದೇ ರಶೀದಿ ನೀಡುತ್ತಿಲ್ಲ. ಡಿಟೇನ್ ಮಾಡಿದರೆ ಒಂದು ವರ್ಷ ಹಾಳಾಗುತ್ತದೆ ಅಂದರೂ ನಮ್ಮ ಮಾತು ಕೇಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾಳೆ. ಇದನ್ನೂ ಓದಿ: ಚಾಕು ಇರಿತಕ್ಕೆ 10 ಮಂದಿ ಬಲಿ, 15ಕ್ಕೂ ಹೆಚ್ಚು ಜನರಿಗೆ ಗಾಯ

    ಒಂದು ವಾರದಿಂದ ಪ್ರಾಂಶುಪಾಲರ ಬಳಿ ಎಷ್ಟೇ ಕೇಳಿಕೊಂಡರೂ ಸರಿಯಾಗಿ ಸ್ಪಂದಿಸುತ್ತಿಲ್ಲ. ಹೀಗಾಗಿ ನಾನು ನನ್ನ ಜೀವನವನ್ನು ಕೊನೆ ಮಾಡಲು ನಿರ್ಧರಿಸಿದ್ದೇನೆ. ನನ್ನ ಸಾವಿಗೆ ಸೆಂಟ್ ಜೋಸೆಫ್ ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿಗಳೇ ಕಾರಣ ಎಂದು ಬ್ಲೇಡ್‍ನಿಂದ ಕೈ ಕೂಯ್ದುಕೊಂಡು ಮಾತ್ರೆ ಸೇವಿಸಿ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

    Live Tv
    [brid partner=56869869 player=32851 video=960834 autoplay=true]

  • ಹಾಲ್ ಟಿಕೆಟ್‍ಗಾಗಿ ಶಾಲೆಯ ಮುಂದೆ ಧರಣಿ ಕುಳಿತ SSLC ವಿದ್ಯಾರ್ಥಿ

    ಹಾಲ್ ಟಿಕೆಟ್‍ಗಾಗಿ ಶಾಲೆಯ ಮುಂದೆ ಧರಣಿ ಕುಳಿತ SSLC ವಿದ್ಯಾರ್ಥಿ

    ಬಾಗಲಕೋಟೆ: ಎಸ್‍ಎಸ್‍ಎಲ್‍ಸಿ ಹಾಲ್ ಟಿಕೆಟ್‍ಗಾಗಿ ವಿದ್ಯಾರ್ಥಿ ಹಾಗೂ ಕುಟುಂಬಸ್ಥರು ಶಾಲೆಯ ಆವರಣದಲ್ಲಿಯೇ ಧರಣಿ ಕುಳಿತಿದ್ದಾರೆ. ಈ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಆಸಂಗಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದಿದೆ.

    ಮೂಸಾ ಅಕ್ರೂಟ ಹಾಗೂ ಮೋಸಿನ ಮೋಮಿನ ಎಂಬ ಇಬ್ಬರು ವಿದ್ಯಾರ್ಥಿಗಳು ಹಾಲ್ ಟಿಕೆಟ್‍ಗಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಈ ವಿದ್ಯಾರ್ಥಿಗಳು ತಮ್ಮ ಕುಟುಂಬಸ್ಥರೊಂದಿಗೆ ಹಾಲ್ ಟಿಕೆಟ್‍ಗಾಗಿ ಕಳೆದ ನಾಲ್ಕು ದಿನಗಳಿಂದ ಧರಣಿ ನಡೆಸಿದ್ದಾರೆ. ಈ ಇಬ್ಬರು ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ನೀಡಿಲ್ಲ. ಆದರೆ ಈ ವಿದ್ಯಾರ್ಥಿಗಳು ಫೋಟೋ ಕೊಟ್ಟಿಲ್ಲ, ಈ ಬಗ್ಗೆ ಪಾಲಕರಿಗೆ ಕೊನೆಗಳಿಗೆವರೆಗೂ ಹೇಳಿದರೂ ಹಾಲ್ ಟಿಕೆಟ್ ತಂದು ಕೊಟ್ಟಿಲ್ಲ ಅಂತ ಶಾಲೆ ಮುಖ್ಯಸ್ಥರು ಹೇಳುತ್ತಿದ್ದಾರೆ. ಇದನ್ನೂ ಓದಿ: ಜುಲೈ 20ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ – ಪಿಯುಸಿ ಬೋರ್ಡ್

    ಆ ಮಕ್ಕಳ ಕುಟುಂಬಸ್ಥರಿಗೆ ಪರೀಕ್ಷೆ ಬಗ್ಗೆ ಆಸಕ್ತಿ ಇರಲಿಕ್ಕಿಲ್ಲ ಅಂತ ನಾವು ಸುಮ್ಮನಾದೇವು. ಅಲ್ಲದೇ ಉಳಿದ ಎಲ್ಲ ವಿದ್ಯಾರ್ಥಿಗಳ ಹಾಲ್ ಟಿಕೆಟ್ ಬಂದಿವೆ. ಇದರಲ್ಲಿ ನಮ್ಮ ತಪ್ಪೇನು ಇಲ್ಲ ಎಂದು ಶಾಲಾ ಮುಖ್ಯಶಿಕ್ಷಕ ಡೆಂಗ್ರೆ ಹೇಳಿದ್ದಾರೆ. ಇದನ್ನೂ ಓದಿ: ನಾನು ದಲಿತ ಅಲ್ಲ ಬ್ರಾಹ್ಮಣ ಸಮುದಾಯಕ್ಕೆ ಸೇರಿದವನು: ಗಂಗಾಧರ್

    ಇತ್ತ ಹೆಡ್ ಮಾಸ್ಟರ್ ಹೇಳಿಕೆ ಅಲ್ಲಗಳೆಯುವ ವಿದ್ಯಾರ್ಥಿಗಳ ಪಾಲಕರು, ಎಲ್ಲವನ್ನು ಕೊಟ್ಟಿದ್ದೇವೆ, ಶಾಲೆಯ ಸಿಬ್ಬಂದಿ ತಪ್ಪಿನಿಂದ ಹಾಲ್ ಟಿಕೆಟ್ ಬಂದಿಲ್ಲ. ಇದಕ್ಕೆ ಶಾಲೆಯ ಮುಖ್ಯಸ್ಥರೇ ಹೊಣೆ. ನಮ್ಮ ಮಕ್ಕಳಿಗೆ ನ್ಯಾಯ ಸಿಗೋವರೆಗೂ ಇಲ್ಲಿಂದ ಹೋಗಲ್ಲ ಎಂದು ಪಟ್ಟುಹಿಡಿದು ಧರಣಿ ಕೂತಿದ್ದಾರೆ. ಪರೀಕ್ಷೆಯಲ್ಲಿ ಫೇಲಾದ್ರೂ ಚಿಂತೆ ಇಲ್ಲ, ಪರೀಕ್ಷೆಗೆ ಕೂಡಲು ಅವಕಾಶ ಕೊಡಲೇಬೇಕು, ಇಲ್ಲವಾದಲ್ಲಿ ನಾವು ಪ್ರತಿಭಟನೆ ಬಿಡಲ್ಲ ಎಂದು ಪಾಲಕರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಚಿತ್ರರಂಗಕ್ಕೆ ಕಾಲಿಡುತ್ತಿದ್ದಾಳೆ ಸ್ಟಾರ್ ನಟನ ಮಗಳು

    ಶಾಲಾ ಆಡಳಿತ ಮಂಡಳಿ ಹಾಗೂ ಹಾಗೂ ಪೇಷಕರ ವಿಭಿನ್ನ ಹೇಳಿಕೆಗಳಿಂದ ಪರೀಕ್ಷಾ ವಿದ್ಯಾರ್ಥಿಗಳ ಭವಿಷ್ಯ ಗೊಂದಲದಲ್ಲಿದೆ. ಕಳೆದ ನಾಲ್ಕು ದಿನಗಳಿಂದ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿ ಹಾಗೂ ಅವರ ಕುಟುಂಬ ಧರಣಿ ಕೂತಿದೆ. ಇಬ್ಬರು ವಿದ್ಯಾರ್ಥಿಗಳ ಜೊತೆ ಅಜ್ಜಿ, ಮಾವ ಪ್ರತಿಭಟನೆಗೆ ಕೂತಿದ್ದಾರೆ. ಪರೀಕ್ಷೆಗೆ ಎರಡು ದಿನ ಬಾಕಿ ಇರುವಾಗಲೇ ಇಂತಹ ಘಟನೆ ನಡೆದಿರೋದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಶಾಲೆಯಲ್ಲಿ ಸಧ್ಯ 150 ವಿದ್ಯಾರ್ಥಿಗಳು ಇದ್ದು, ಇಬ್ಬರಿಗೆ ಹಾಲ್ ಟಿಕೆಟ್ ಇಲ್ಲವಾಗಿದೆ.

  • 10ನೇ ತರಗತಿ ಹಾಲ್ ಟಿಕೆಟ್ ತರಲು ಹೋಗಿದ್ದ ವಿದ್ಯಾರ್ಥಿ ಸಾವು

    10ನೇ ತರಗತಿ ಹಾಲ್ ಟಿಕೆಟ್ ತರಲು ಹೋಗಿದ್ದ ವಿದ್ಯಾರ್ಥಿ ಸಾವು

    ಯಾದಗಿರಿ: ಹಾಲ್ ಟಿಕೆಟ್ ತರಲು ಶಾಲೆಗೆ ತೆರಳುತ್ತಿದ್ದ ಹತ್ತನೇಯ ತರಗತಿ ವಿದ್ಯಾರ್ಥಿ ಅಪಘಾತದಲ್ಲಿ ಮೃತಪಟ್ಟ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

    ಸುರಪುರ ತಾಲೂಕಿನ ಚಿಕ್ಕನಹಳ್ಳಿಯ 10ನೇ ತರಗತಿ ವಿದ್ಯಾರ್ಥಿ ಮಂಜುನಾಥ(16) ಮೃತ ದುದೈವಿ. ಮಂಜುನಾಥ ಅವರ ತಂದೆ ಕನಕಪ್ಪ ಹಳ್ಳಿಯವರ ಟ್ರ್ಯಾಕ್ಟರ್ ಪಲ್ಟಿಯಾಗಿ ಸಾವನ್ನಪ್ಪಿದ್ದಾರೆ.

    ಚಿಕ್ಕನಹಳ್ಳಿಯಿಂದ ಬಾಚಿಮಟ್ಟಿ ಗ್ರಾಮದ ಪ್ರೌಢಶಾಲೆಗೆ ಮಂಜುನಾಥ ತನ್ನ ಹಾಲ್ ಟಿಕೆಟ್ ತರಲು ಟ್ರ್ಯಾಕ್ಟರ್ ನಲ್ಲಿ ಹೊರಟಿದ್ದ, ಈ ವೇಳೆ ಮಾರ್ಗ ಮಧ್ಯ ಟ್ರಾಕ್ಟರ್ ಪಲ್ಟಿಯಾದ ಪರಿಣಾಮ ವಿದ್ಯಾರ್ಥಿ ಮಂಜುನಾಥ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

    ಮಗನ ಅಗಲಿಕೆ ಹಿನ್ನಲೆ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಸುರಪುರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:ರೆಡ್ ಹ್ಯಾಂಡಾಗಿ ಎಸಿಬಿ ಬಲೆಗೆ ಬಿದ್ದ ಪಿಡಿಓ

  • ಹಾಲ್ ಟಿಕೆಟ್ ನೀಡದಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

    ಹಾಲ್ ಟಿಕೆಟ್ ನೀಡದಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

    ರಾಯಚೂರು: ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಪರೀಕ್ಷೆಯ ಹಾಲ್ ಟಿಕೆಟ್ ನೀಡದಿದ್ದಕ್ಕೆ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಕುಮಾರ್ ನಾಯಕ್ (21) ನೇಣಿಗೆ ಶರಣಾದ ವಿದ್ಯಾರ್ಥಿ. ಇಲ್ಲಿನ ಲೋಯೋಲಾ ಪದವಿ ಕಾಲೇಜಿನ ಬಿಕಾಂ ಎರಡನೇ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದನು. ಮಾನ್ವಿ ಪಟ್ಟಣದ ಅಂಬೇಡ್ಕರ್ ವಸತಿ ನಿಲಯದಲ್ಲಿದ್ದ ವಿದ್ಯಾರ್ಥಿ ಬುಧವರ ರಾತ್ರಿ ವೇಳೆ ವಸತಿ ನಿಲಯದ ಪಕ್ಕದ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಹಾಜರಾತಿ ಕಡಿಮೆ ಇರುವ ಕಾರಣ ಕಳೆದ ವರ್ಷವೂ ಸಹ ಪರೀಕ್ಷೆ ಬರೆಯಲು ಅವಕಾಶ ನೀಡಿರಲಿಲ್ಲ. ಈ ವರ್ಷವೂ ಹಾಲ್ ಟಿಕೆಟ್ ನೀಡದಿದ್ದಕ್ಕೆ ಮನನೊಂದು ಸಾವಿಗೆ ಶರಣಾಗಿದ್ದಾನೆ ಅಂತ ಮೃತ ವಿದ್ಯಾರ್ಥಿ ಪೋಷಕರು ಆರೋಪಿಸಿದ್ದಾರೆ. ಪೋಷಕರು ಸ್ವತಃ ಪ್ರಾಂಶುಪಾಲರ ಬಳಿ ಮನವಿ ಮಾಡಿದ್ದರೂ ಪರೀಕ್ಷೆ ಬರೆಯಲು ಅನುವು ಮಾಡಿಕೊಟ್ಟಿರಲಿಲ್ಲ ಎಂದು ತಿಳಿದು ಬಂದಿದೆ.

    ಈ ಬಗ್ಗೆ ಮಾಹಿತಿ ತಿಳಿದು ಮಾನ್ವಿ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಮಾಲ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  • ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ಕೊಡದೆ ಸತಾಯ್ತಿಸಿರೋ ಪ್ರಾಂಶುಪಾಲ..!

    ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ಕೊಡದೆ ಸತಾಯ್ತಿಸಿರೋ ಪ್ರಾಂಶುಪಾಲ..!

    ಬೆಂಗಳೂರು: ಹಾಲ್ ಟಿಕೆಟ್ ಸಿಗದೆ ವಿದ್ಯಾರ್ಥಿಗಳು ಹಾಗೂ ಪೋಷಕರು ಪರದಾಡಿದ್ದು, ದಯವಿಟ್ಟು ಹಾಲ್ ಟಿಕೆಟ್ ಕೊಡಿಸಿ ಎಂದು ಪಿಯು ಬೋರ್ಡ್‍ಗೆ ಬಂದಿದ್ದಾರೆ.

    ಬೆಂಗಳೂರಿನ ಆರ್ಯ ವಿದ್ಯಾ ಶಾಲಾ ಪಿಯು ಕಾಲೇಜ್ ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ಕೊಟ್ಟಿಲ್ಲ. ದ್ವಿತೀಯ ಪಿಯುಸಿ ಪರೀಕ್ಷೆಯ ಹಾಲ್ ಟಿಕೆಟ್ ಕೊಡದೆ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ಮೇಲೆ ದ್ವೇಷ ಸಾಧಿಸಿದೆ.

    ವಿದ್ಯಾರ್ಥಿಗಳು ಪ್ರಥಮ ಪಿಯುಸಿನಲ್ಲಿ ಕ್ಲಾಸಿನಲ್ಲಿ ಕಿರಿಕ್ ಮಾಡಿಕೊಂಡಿದ್ದರು. ಕಾಲೇಜು ಆಡಳಿತ ಮಂಡಳಿ ಕಿರಿಕ್ ಮಾಡಿದ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿದೆ. ಅಲ್ಲದೆ ಹಾಜರಾತಿ ಕಡಿಮೆ ಇದೆ ಎನ್ನುವ ನೆಪದಲ್ಲಿ ಪಿಯು ಬೋರ್ಡ್‍ಗೆ ಹಾಲ್ ಟಿಕೆಟ್ ವಾಪಸ್ ಕಳುಹಿಸಿದೆ.

    ನಾನು ರೆಗ್ಯೂಲರ್ ಆಗಿ ಕ್ಲಾಸಿಗೆ ಬಂದಿದ್ದೇನೆ. ಬೇಕಾದರೆ ನಾನು ಕ್ಲಾಸಿಗೆ ಬಂದಿದ್ದೀನೋ ಇಲ್ವೋ ಎಂದು ಸಿಸಿಟಿವಿ ಚೆಕ್ ಮಾಡಿ ಎಂದು ಹಾಲ್ ಟಿಕೆಟ್ ವಂಚಿತ ವಿದ್ಯಾರ್ಥಿ ಸತೀಶ್ ಹೇಳಿದ್ದಾನೆ. ಪ್ರಿನ್ಸಿಪಾಲ್ ಈಶ್ವರಯ್ಯ ಹಾಲ್ ಟಿಕೆಟ್ ನೀಡದೆ ಸತಾಯಿಸುತ್ತಿದ್ದು, ಮೂರು ದಿನಗಳಿಂದ ಫೋನ್ ಸ್ವಿಚ್ಛ್ ಆಫ್ ಮಾಡಿ ಕಾಲೇಜಿಗೆ ರಜೆ ಹಾಕಿದ್ದಾರೆ.

    ಹಾಲ್ ಟಿಕೆಟ್ ನೀಡದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಕಣ್ಣೀರು ಹಾಕುತ್ತಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪಿಯು ಬೋರ್ಡ್‍ಗೆ ಬಂದ ಪ್ರಿನ್ಸಿಪಾಲ್ ಈಶ್ವರಯ್ಯ, ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಲು ನಕಾರ ಮಾಡಿದ್ದಾರೆ. ಅಲ್ಲದೇ ಉಡಾಫೆ ಮಾತನಾಡ್ತಾ ಅಲ್ಲಿಂದ ಹೊರಟು ಹೋಗಿದ್ದಾರೆ. ವಿದ್ಯಾರ್ಥಿಗಳು ಹಾಗೂ ಪೋಷಕರು ಕೂಡ ಪ್ರಿನ್ಸಿಪಾಲ್ ಹಿಂದೆ ಹೋದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹಾಲ್ ಟಿಕೆಟ್ ನಲ್ಲಿ ಫೋಟೋ ನೋಡಿ ದಂಗಾದ ವಿದ್ಯಾರ್ಥಿನಿ!

    ಹಾಲ್ ಟಿಕೆಟ್ ನಲ್ಲಿ ಫೋಟೋ ನೋಡಿ ದಂಗಾದ ವಿದ್ಯಾರ್ಥಿನಿ!

    ಪಾಟ್ನಾ: ಬಿಹಾರದ ವಿಶ್ವವಿದ್ಯಾನಿಲಯವೊಂದು ಮತ್ತೊಮ್ಮೆ ಎಡವಟ್ಟು ಮಾಡಿಕೊಂಡಿದ್ದು, ವಿದ್ಯಾರ್ಥಿನಿಯ ಫೋಟೋ ಬದಲಿಗೆ ಬಿಕಿನಿತೊಟ್ಟ ಬೇರೆ ಹುಡುಗಿಯ ಫೋಟೋ ಹಾಕಲಾಗಿದೆ.

    ದರ್ಭಾಂಗಾ ಜಿಲ್ಲೆಯ ಲಲಿತ್ ನಾರಾಯಣ್ ಮಿಥಿಲಾ ವಿಶ್ವವಿದ್ಯಾನಿಲಯದಲ್ಲಿ ಈ ಪ್ರಮಾದ ನಡೆದಿದ್ದು, ಮಧುಬನಿಯ ಎಸ್‍ಎಂಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರ ಹಾಲ್ ಟಿಕೆಟ್ ನಲ್ಲಿ ಈ ರೀತಿ ಫೋಟೋ ಬಂದಿದೆ.

    ವಿದ್ಯಾರ್ಥಿನಿ ಪರೀಕ್ಷೆಗಾಗಿ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ತನ್ನ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಂಡಿದ್ದು, ಅದರಲ್ಲಿದ್ದ ಫೋಟೋ ಕಂಡು ವಿದ್ಯಾರ್ಥಿನಿ ದಂಗಾಗಿದ್ದಾರೆ.

    ಪ್ರವೇಶ ಪತ್ರದಲ್ಲಿ ವಿದ್ಯಾರ್ಥಿನಿಯ ವಿವರ, ಸಹಿ ಎಲ್ಲವೂ ಸರಿಯಿದ್ದು, ಫೋಟೋದಲ್ಲಿ ಬಿಕಿನಿ ತೊಟ್ಟ ಬೆಡಗಿಯ ಫೋಟೋ ತಪ್ಪಾಗಿ ಮುದ್ರಣವಾಗಿದೆ. ಆಕೆ ಕೂಡಲೇ ಈ ವಿಚಾರವನ್ನು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ನಂತರ ವಿದ್ಯಾರ್ಥಿನಿಗೆ ಬೇರೆ ಪ್ರವೇಶ ಪತ್ರ ನೀಡಲು ವಿಶ್ವವಿದ್ಯಾನಿಲಯ ಮುಂದಾಗಿದೆ.

    ನಾನು ಆನ್ ಲೈನ್ ನಲ್ಲಿ ಅಪ್ಲಿಕೇಶನ್ ಸಬ್ಮಿಟ್ ಮಾಡುವಾಗ ಎಲ್ಲವೂ ಸರಿಯಾಗಿತ್ತು. ಆದರೆ ಈಗ ನನ್ನ ಫೋಟೋ ಬದಲಿಗೆ ಬಿಕಿನಿ ತೊಟ್ಟಿರುವ ಇನ್ಯಾರದೋ ಫೋಟೋ ಬಂದಿದೆ. ಇದನ್ನ ಬದಲಿಸಿಕೊಡಿ ಎಂದು ಸೋಮವಾರ ಕೇಳಿದೆ. ಆದರೆ ಮಂಗಳವಾರದಿಂಲೇ ಪರೀಕ್ಷೆ ಆರಂಭವಾಗಲಿದೆ. ಆದರೆ ವಿವಿ ಮಾತ್ರ ಇನ್ನೂ ಹಾಲ್ ಟಿಕೆಟ್ ಬದಲಿಸಿಕೊಟ್ಟಿಲ್ಲ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾರೆ.

    ಈ ಘಟನೆಗೂ ನಮಗೂ ಸಂಬಂಧವಿಲ್ಲ. ಹಾಲ್ ಟಿಕೆಟ್ ನೀಡಲು ಗುತ್ತಿಗೆ ಪಡೆದಿದ್ದ ಏಜೆನ್ಸಿಯಿಂದ ನಡೆದಿರಬಹುದು ಎಂದು ಕಾಲೇಜ್ ಪ್ರಾಂಶುಪಾಲರಾದ ಡಾ. ಜಗದೀಶ್ ಪ್ರಸಾದ್ ಈ ಆರೋಪವನ್ನು ತಳ್ಳಿ ಹಾಕಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ವಿವಿಯ ಪರೀಕ್ಷಾ ನಿಯಂತ್ರಕರು, ಕೂಡಲೇ ಇದನ್ನ ಸರಿಪಡಿಸುವಂತೆ ಸೂಚಿಸಿದ್ದೇನೆ. ಶೀಘ್ರವಾಗಿ ತಪ್ಪು ಯಾರ ಕಡೆಯಿಂದ ಆಗಿದೆ ಎಂದು ತನಿಖೆ ನಡೆಸುತ್ತೇವೆ ಎಂದು ಹೇಳಿದ್ದಾರೆ.

    ಇದೇ ವಿಶ್ವವಿದ್ಯಾನಿಲಯ ಕಳೆದ ವರ್ಷ ವಿದ್ಯಾರ್ಥಿಗಳಿಗೆ ವಿತರಿಸಿದ್ದ ಪರೀಕ್ಷಾ ಪ್ರವೇಶ ಪತ್ರದಲ್ಲಿ ಗಣಪತಿಯ ಫೋಟೋ ಹಾಕಿ ಎಡವಟ್ಟು ಮಾಡಿಕೊಂಡಿತ್ತು.

  • ಹಾಲ್‍ ಟಿಕೆಟ್ ಹರಿದ ಸಹಪಾಠಿಗಳು- ಮನನೊಂದು 12ನೇ ಕ್ಲಾಸ್ ವಿದ್ಯಾರ್ಥಿನಿ ಆತ್ಮಹತ್ಯೆ

    ಹಾಲ್‍ ಟಿಕೆಟ್ ಹರಿದ ಸಹಪಾಠಿಗಳು- ಮನನೊಂದು 12ನೇ ಕ್ಲಾಸ್ ವಿದ್ಯಾರ್ಥಿನಿ ಆತ್ಮಹತ್ಯೆ

    ಚೆನ್ನೈ: ಸಹಪಾಠಿಗಳು ತನ್ನ ಬೋರ್ಡ್ ಪರೀಕ್ಷೆಯ ಹಾಲ್ ಟಿಕೆಟ್ ಹರಿದರು ಎಂಬ ಕಾರಣಕ್ಕೆ ಮನನೊಂದು 12ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದಿದೆ.

    17 ವರ್ಷ ವಯಸ್ಸಿನ ತಮಿಳರಸಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ದೇವೀರಹಳ್ಳಿ ಗ್ರಾಮದ ತನ್ನ ಮನೆಯಲ್ಲಿ ತಮಿಳರಸಿ ಮಂಗಳವಾರದಂದು ಸೀಲಿಂಗ್ ಫ್ಯಾನ್‍ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ತಮಿಳರಸಿ ಬೋರ್ಡ್ ಪರೀಕ್ಷೆಗೆ ಹಾಜರಾಗಬೇಕಿತ್ತು. ಆದ್ರೆ ಶಾಲೆಯಲ್ಲಿ ಇಬ್ಬರು ಹುಡುಗರು ಆಕೆಯ ಹಾಲ್ ಟಿಕೆಟ್ ಹರಿದು ಹಾಕಿದ್ದರು. ಅವರಲ್ಲೊಬ್ಬ ತಮಿಳರಸಿಗೆ ತನ್ನ ಪ್ರೀತಿಯನ್ನ ಒಪ್ಪಿಕೊಳ್ಳುವಂತೆ ಕಿರುಕುಳ ನೀಡುತ್ತಿದ್ದ ಎಂದು ಪತ್ರಿಕೆಯೊಂದು ವರದಿ ಮಾಡಿದೆ.

     

    ಹಾಲ್ ಟಿಕೆಟ್ ಹರಿದ ಹಿನ್ನೆಲೆಯಲ್ಲಿ ತನ್ನ ಭವಿಷ್ಯ ಹಾಳಾಯಿತು ಎಂದು ಮನನೊಂದು ತಮಿಳರಸಿ ಮನೆಗೆ ಹೋಗಿ ನೇಣು ಬಿಗಿದುಕೊಂಡಿದ್ದಾಳೆ. ಆಕೆಯನ್ನ ಅಕ್ಕಪಕ್ಕದ ಮನೆಯವರು ಕೂಡಲೇ ಆಸ್ಪತ್ರೆಗೆ ಕೊಂಡೊಯ್ದರಾದ್ರೂ ಅಷ್ಟರಲ್ಲಾಗಲೇ ಆಕೆ ಮೃತಪಟ್ಟಿದ್ದಾಳೆಂದು ವೈದ್ಯರು ಹೇಳಿದ್ದಾರೆ. ವಿದ್ಯಾರ್ಥಿನಿಯ ಕುಟುಂಬಸ್ಥರು ಇಬ್ಬರು ಹುಡುಗರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

    ತಮಿಳರಸಿಗೆ ಪ್ರೇಮ ನಿವೇದನೆ ಮಾಡಿಕೊಂಡಿದ್ದ ಹುಡುಗ, ತನ್ನ ಪ್ರೀತಿಯನ್ನ ಒಪ್ಪಿಕೊಳ್ಳದಿದ್ದರೆ ಆಕೆಯ ಮೇಲೆ ಆ್ಯಸಿಡ್ ಹಾಕುವುದಾಗಿ ಬೆದರಿಕೆ ಹಾಕಿದ್ದ ಎಂದು ವಿದ್ಯಾರ್ಥಿನಿಯ ಕುಟುಂಬಸ್ಥರೊಬ್ಬರು ಆರೋಪಿಸಿದ್ದಾರೆ. ಸದ್ಯ ಪೊಲೀಸರು ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

  • SSLC ಪರೀಕ್ಷೆಯ ಹಾಲ್ ಟಿಕೆಟ್ ನೀಡಲು ಹಣ ವಸೂಲಿ

    SSLC ಪರೀಕ್ಷೆಯ ಹಾಲ್ ಟಿಕೆಟ್ ನೀಡಲು ಹಣ ವಸೂಲಿ

    ಧಾರವಾಡ: ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಹಾಲ್ ಟಿಕೆಟ್ ನೀಡಲು ಶಿಕ್ಷಕರು ಹಾಗೂ ಪ್ರಾಂಶುಪಾಲರು ಹಣಕ್ಕೆ ಬೇಡಿಕೆ ಇಟ್ಟ ಘಟನೆ ಧಾರವಾಡದಲ್ಲಿ ನಡೆದಿದೆ.

    ತಾಲೂಕಿನ ಹೊನ್ನಾಪುರ ಗ್ರಾಮದ ಪ್ರಭುದೇವ ಶಾಲೆಯ ಶಿಕ್ಷಕರೇ ಹಾಲ್ ಟಿಕೆಟ್ ನೀಡಲು ಹಣಕ್ಕೆ ಬೇಡಿಕೆ ಇಟ್ಟವರು. ಮಾರ್ಚ್ 30ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಆರಂಭವಾಗಲಿವೆ. ಈ ನಡುವೆ ವಿದ್ಯಾರ್ಥಿಗಳಿಗೆ ಯಾವುದೇ ದಾರಿ ಇಲ್ಲದೇ ಹಣ ಕೊಟ್ಟು ಹಾಲ್ ಟಿಕೆಟ್ ತೆಗೆದುಕೊಳ್ಳುವ ಅನಿವಾರ್ಯತೆ ಎದುರಾಗಿದೆ.

    ಸದ್ಯ 100 ರೂಪಾಯಿ ಯಿಂದ 200 ರೂಪಾಯಿ ಬೇಡಿಕೆ ಇಟ್ಟ ಶಿಕ್ಷಕರ ಮೇಲೆ ವಿದ್ಯಾರ್ಥಿಗಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.