Tag: Hamas militants

  • ಇಸ್ರೇಲ್ ಒಳಗೆ ನುಗ್ಗಿದ ಉಗ್ರರು – ಸಾರ್ವಜನಿಕರ ಮೇಲೆ ಗುಂಡಿನ ಮಳೆ

    ಇಸ್ರೇಲ್ ಒಳಗೆ ನುಗ್ಗಿದ ಉಗ್ರರು – ಸಾರ್ವಜನಿಕರ ಮೇಲೆ ಗುಂಡಿನ ಮಳೆ

    ಟೆಲ್ ಅವಿವ್: ಇಸ್ರೇಲ್ (Israel) ಮೇಲೆ ದಾಳಿ ನಡೆಸಿರುವ ಹಮಾಸ್ ಉಗ್ರರು (Hamas Militants) ದೇಶದೊಳಗೆ ನುಗ್ಗಿ ಜನರತ್ತ ಗುಂಡು ಹಾರಿಸುತ್ತಿದ್ದಾರೆ. ಇದನ್ನು ಕಟ್ಟಡದ ಮೇಲಿಂದ ವ್ಯಕ್ತಿಯೊಬ್ಬರೂ ವೀಡಿಯೋ ಮಾಡಿ ಹಂಚಿಕೊಂಡಿದ್ದಾರೆ. ಈ ವೀಡಿಯೋವನ್ನು ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಹೋರಾಟಗಾರ ಆರ್ಸೆನ್ ಒಸ್ಟ್ರೋವ್ಸ್ಕಿ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.

    ಉಗ್ರಗಾಮಿ ಸಂಘಟನೆ ಹಮಾಸ್ ಉಡಾವಣೆ ಮಾಡಿದ ಸಾವಿರಾರು ರಾಕೆಟ್‍ಗಳು ಇಸ್ರೇಲ್‍ನ ಪಟ್ಟಣಗಳು ಹೊತ್ತಿ ಉರಿಯುವಂತೆ ಮಾಡಿವೆ. ಉಗ್ರರ ದಾಳಿಯ ಬೆನ್ನಲ್ಲೇ ಯುದ್ಧವನ್ನು ಇಸ್ರೇಲ್ ಘೋಷಿಸಿದೆ. ಇದರ ನಡುವೆಯೇ ಉಗ್ರಗಾಮಿಗಳು ದೇಶದ ಕೆಲವು ಪ್ರಮುಖ ನಗರಗಳಿಗೆ ನುಗ್ಗಿದ್ದಾರೆ. ಇದನ್ನೂ ಓದಿ: ಇಸ್ರೇಲ್‌ನಲ್ಲಿರುವ ಭಾರತೀಯರು ಎಚ್ಚರದಲ್ಲಿರಿ – ರಾಯಭಾರ ಕಚೇರಿ ಸೂಚನೆ

    ಈ ವೇಳೆ ಸಾರ್ವಜನಿಕರ ಮೇಲೆ ಮನಬಂದಂತೆ ಗುಂಡು ಹಾರಿಸುತ್ತಿದ್ದಾರೆ. ಇದನ್ನು ವ್ಯಕ್ತಿಯೋರ್ವ ವೀಡಿಯೋ ಮಾಡಿದ್ದಾನೆ. ಅಲ್ಲದೇ ಅವನೆಡೆಗೆ ಉಗ್ರರು ನೋಡಿದಾಗ ಆತ ಅಡಗಿಕೊಳ್ಳಲು ಓಡಿರುವುದು ಸಹ ವೀಡಿಯೋದಲ್ಲಿ ಕಾಣುತ್ತದೆ.

    ಗಾಜಾದಲ್ಲಿ ಉಗ್ರರು ಇಸ್ರೇಲ್ ಸೈನಿಕರ ಮೃತದೇಹಗಳನ್ನು ರಸ್ತೆಯಲ್ಲಿ ಎಳೆದಾಡಿ ಸಂಭ್ರಮಿಸುತ್ತಿರುವ ವೀಡಿಯೋ ಸಹ ವೈರಲ್ ಆಗುತ್ತಿದೆ. ಇದಕ್ಕೂ ಮೊದಲು ಉಗ್ರರು ಕೇವಲ 20 ನಿಮಿಷಗಳಲ್ಲಿ 5000 ರಾಕೆಟ್‍ಗಳಿಂದ (Rocket Attack) ದಾಳಿ ನಡೆಸಿದ್ದರು. ಇದನ್ನೂ ಓದಿ: ಗಾಜಾಪಟ್ಟಿಯಿಂದ 5,000 ರಾಕೆಟ್ ದಾಳಿ – ಯುದ್ಧ ಘೋಷಿಸಿದ ಇಸ್ರೇಲ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಸ್ರೇಲ್‌ನಲ್ಲಿರುವ ಭಾರತೀಯರು ಎಚ್ಚರದಲ್ಲಿರಿ – ರಾಯಭಾರ ಕಚೇರಿ ಸೂಚನೆ

    ಇಸ್ರೇಲ್‌ನಲ್ಲಿರುವ ಭಾರತೀಯರು ಎಚ್ಚರದಲ್ಲಿರಿ – ರಾಯಭಾರ ಕಚೇರಿ ಸೂಚನೆ

    ನವದೆಹಲಿ: ಇಸ್ರೇಲ್‌ನಲ್ಲಿರುವ (Israel) ಭಾರತೀಯರು ಎಚ್ಚರಿಕೆಯಿಂದಿರಿ ಮತ್ತು ಸುರಕ್ಷತಾ ನಿಯಮಗಳ ಬಗ್ಗೆ ಗಮನ ಹರಿಸಲು ಭಾರತೀಯ ರಾಯಭಾರ ಕಚೇರಿ (Indian Embassy) ಸೂಚನೆ ನೀಡಿದೆ. ಇಸ್ರೇಲ್‌ ಮತ್ತು ಹಮಾಸ್ ಬಂಡುಕೋರರ‌ ನಡುವೆ ಯುದ್ಧ ಘೋಷಣೆಯಾದ ಮೇಲೆ ಈ ಸಲಹೆ ನೀಡಲಾಗಿದೆ.

    ಇಸ್ರೇಲ್‌ನಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು (Indians) ಜಾಗರೂಕರಾಗಿರಲು ಮತ್ತು ಸ್ಥಳೀಯ ಅಧಿಕಾರಿಗಳು ಸೂಚಿಸಿದಂತೆ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು, ಅನಗತ್ಯ ಓಡಾಟ ತಪ್ಪಿಸಬೇಕು ಮತ್ತು ಸುರಕ್ಷತಾ ಆಶ್ರಯಕ್ಕೆ ಹತ್ತಿರದಲ್ಲಿರಿ ಎಂದು ರಾಯಭಾರ ಕಚೇರಿ ಸಲಹೆ ನೀಡಿದೆ. ತುರ್ತು ಸಂದರ್ಭದಲ್ಲಿ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಸೂಚನೆ ನೀಡಿದೆ. ಇದನ್ನೂ ಓದಿ: Asian Games 2023: ಚಿನ್ನದ ಮಳೆ – ಚೊಚ್ಚಲ ಚಾಂಪಿಯನ್‌ ಕಿರೀಟ ಧರಿಸಿದ ಭಾರತ

    ಘಾಜಾಪಟ್ಟಿಯಿಂದ ಹಮಾಸ್ ಬಂಡುಕೋರರು 5,000 ರಾಕೆಟ್‌ಗಳನ್ನು (Rocket Attack) ಇಸ್ರೇಲ್ ನತ್ತ ಉಡಾಯಿಸಿದ ಬಳಿಕ ಇಸ್ರೇಲ್ ಯುದ್ಧ ಘೋಷಣೆ ಮಾಡಿದೆ. ಹಮಾಸ್ ಬಂಡುಕೋರರ ದಾಳಿ ಬೆನ್ನಲ್ಲೇ ಗಾಜಾಪಟ್ಟಿಯಲ್ಲಿನ ಉಗ್ರರ ನೆಲೆಗಳ ಮೇಲೆ ಇಸ್ರೇಲ್ ಪ್ರತಿ ದಾಳಿ ನಡೆಸಿದೆ. ಜೆರುಸಲೆಂನಲ್ಲಿ ವಾಯು ದಾಳಿ ಸೈರನ್ ಮೊಳಗಿಸಲಾಗಿದೆ. ಇದನ್ನೂ ಓದಿ: ಮಕ್ಕಳ ಮೇಲಿನ ದೌರ್ಜನ್ಯ ದೃಶ್ಯ – ಸಾಮಾಜಿಕ ಜಾಲತಾಣಗಳಿಗೆ ಕೇಂದ್ರ ಖಡಕ್ ಸೂಚನೆ

    ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ವೀಡಿಯೊ ಹೇಳಿಕೆ ಬಿಡುಗಡೆ ಮಾಡಿ ನಾವು ಯುದ್ಧದಲ್ಲಿದ್ದೇವೆ, ನಾವು ಗೆದ್ದೇ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ. ನಮ್ಮ ಶತ್ರುಗಳು ಸೂಕ್ತ ಬೆಲೆ ತೆರಲಿದ್ದಾರೆ ಎಂದು ತಮ್ಮ ನಾಗರಿಕರಿಗೆ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನ ಚೀಪ್ ಯೋಜನೆಗಳಿಂದಾಗಿ ಸಿದ್ದರಾಮಯ್ಯನವ್ರು ರಾಜೀನಾಮೆ ಕೊಟ್ಟರೂ ಆಶ್ಚರ್ಯವಿಲ್ಲ: ಸುರೇಶ್ ಗೌಡ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗಾಜಾಪಟ್ಟಿಯಿಂದ 5,000 ರಾಕೆಟ್ ದಾಳಿ – ಯುದ್ಧ ಘೋಷಿಸಿದ ಇಸ್ರೇಲ್

    ಗಾಜಾಪಟ್ಟಿಯಿಂದ 5,000 ರಾಕೆಟ್ ದಾಳಿ – ಯುದ್ಧ ಘೋಷಿಸಿದ ಇಸ್ರೇಲ್

    ಟೆಲ್‌ ಅವಿವ್: ಹಮಾಸ್ ಉಗ್ರರ (Hamas Militants) ನಿಯಂತ್ರಣದಲ್ಲಿರುವ ಗಾಜಾಪಟ್ಟಿಯಿಂದ (Gaza Strip) ಇಸ್ರೇಲ್ (Israel) ಮೇಲೆ ಬರೋಬ್ಬರಿ 5,000 ರಾಕೆಟ್ ದಾಳಿ (Rocket Attack) ಮಾಡಲಾಗಿದ್ದು, ಇದೀಗ ಇಸ್ರೇಲ್ ಯುದ್ಧದ (War) ಘೋಷಣೆ ಮಾಡಿದೆ.

    ಶನಿವಾರ ಮುಂಜಾನೆ ಗಾಜಾಪಟ್ಟಿಯಿಂದ 5,000 ರಾಕೆಟ್‌ಗಳ ದಾಳಿ ನಡೆಸಲಾಗಿದ್ದು, ಹಮಾಸ್ ಬಂಡುಕೋರರು ಇಸ್ರೇಲ್ ಗಡಿಯೊಳಗೆ ನುಗ್ಗಿದ್ದಾರೆ. ಈ ವೇಳೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಯುದ್ಧ ಘೋಷಿಸಿದ್ದಾರೆ.

    ಹಮಾಸ್ ಬಂಡುಕೋರರ ದಾಳಿ ಬೆನ್ನಲ್ಲೇ ಗಾಜಾಪಟ್ಟಿಯಲ್ಲಿನ ಉಗ್ರರ ನೆಲೆಗಳ ಮೇಲೆ ಇಸ್ರೇಲ್ ಪ್ರತಿ ದಾಳಿ ನಡೆಸಿದೆ. ಜೆರುಸಲೆಂನಲ್ಲಿ ವಾಯು ದಾಳಿ ಸೈರನ್ ಮೊಳಗಿಸಲಾಗಿದೆ. ಇದನ್ನೂ ಓದಿ: ಶಿಕ್ಷಣಕ್ಕಾಗಿ ವಿದೇಶಕ್ಕೆ ತೆರಳುವ ನಮ್ಮ ಬಲವನ್ನು ಇಲ್ಲಿಯೇ ಉಳಿಸಿಕೊಳ್ಳಬೇಕು: ಹೆಚ್.ಆರ್ ರಂಗನಾಥ್

    ಪ್ರಧಾನಿ ಬೆಂಜಮಿನ್ ನೆತನ್ಯಾಹು ಶೀಘ್ರದಲ್ಲಿಯೇ ಭದ್ರತಾ ಮುಖ್ಯಸ್ಥರ ಸಭೆ ನಡೆಸುವುದಾಗಿ ಹೇಳಿಕೆ ನೀಡಿದ್ದಾರೆ. ತನ್ನ ಕೃತ್ಯಗಳಿಗಾಗಿ ಹಮಾಸ್ ಭಾರೀ ಬೆಲೆ ತೆರಬೇಕಾಗಲಿದೆ ಎಂದು ನೆತನ್ಯಾಹು ಸರ್ಕಾರ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಅಧಿಕಾರ ಬಿಡುತ್ತೇನೆ ಅಂತ ಎಲ್ಲೂ ಹೇಳಿಲ್ಲ: ಪೂರ್ಣಾವಧಿ ಸಿಎಂ ಪ್ರಶ್ನೆಗೆ ಸಿದ್ದರಾಮಯ್ಯ ಮಾತು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]