Tag: Hampi Festival

  • ಹಂಪಿ ಉತ್ಸವದಲ್ಲಿ ರಾಕಿ ಬಾಯ್ ಹವಾ

    ಹಂಪಿ ಉತ್ಸವದಲ್ಲಿ ರಾಕಿ ಬಾಯ್ ಹವಾ

    – ಮೈಸೂರಿನ ದಸರಾ ರೀತಿಯಲ್ಲಿ ಹಂಪಿ ಉತ್ಸವ ಆಚರಣೆ: ಸಚಿವ ಸಿಟಿ ರವಿ

    ಬಳ್ಳಾರಿ: ವಿಜಯನಗರ ಗತ ವೈಭವವನ್ನು ಸಾರುವ ಹಂಪಿ ಉತ್ಸವಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ಚಾಲನೆ ನೀಡಿದ್ದಾರೆ. ಸಿಎಂ ಅವರ ಕಾರ್ಯಕ್ರಮ ಮುಗಿದ ಬಳಿಕ ಹಂಪಿಯ ಗಾಯತ್ರಿ ಪೀಠದ ಬಳಿ ಹಾಕಿರುವ ಶ್ರೀ ಕೃಷ್ಣದೇವರಾಯ ವೇದಿಕೆ ಯಶ್ ಆಗಮಿಸಿದ್ದರು.

    ವೇದಿಕೆ ಆಗಮಿಸಿ ಅಭಿಮಾನಿಗಳತ್ತಾ ಕೈ ಬೀಸಿ ಹೊಸ ವರ್ಷದ ಶುಭಾಶಯ ಕೋರಿದ ಯಶ್, ಇತಿಹಾಸ ಹಾಗೆ ಸೃಷ್ಠಿ ಆಗಲ್ಲಾ. ಈ ಮಣ್ಣಿನಲ್ಲಿ ಒಂದು ಪವರ್ ಇದೆ. ಅದಕ್ಕೆ ದೇಶದ ಅತ್ಯಂತ ಉನ್ನತ ಇತಿಹಾಸ ನಿರ್ಮಾಣ ಆಗಿದೆ. ಆದರೆ ಈ ಐತಿಹಾಸಿಕ ಸ್ಥಳವನ್ನು ಕಾಪಾಡುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ ಎಂದರು.

    ಯಶ್ ಅಭಿಮಾನಿಗಳು ಯಶ್ ವೇದಿಕೆ ಬರಲು ಬಳಸಿದ ಕಾರ್ ಮುಂದೆ ನಿಂತು ವಿವಿಧ ಬಂಗಿಯಲ್ಲಿ ಪೋಸ್ ಕೊಟ್ಟು ಫೋಟೋ ತೆಗೆಸಿಕೊಂಡರು. ಆದರೆ ಅಭಿಮಾನಿಗಳು ಯಶ್ ಬಳಸಿದ್ದ ಕಾರ್ ಅವರದೇ ಎಂದು ತಿಳಿದಿದ್ರು, ಆದರೆ ಅದು ಯಶ್ ಅವರ ಕಾರ್ ಆಗಿರಲಿಲ್ಲ, ಬದಲಾಗಿ ಅದು ಜಿಲ್ಲಾಡಳಿತ ಅವರ ಏರ್ಪಡಿಸಿದ್ದ ಕಾರ್ ಆಗಿತ್ತು.

    ಹಂಪಿ ಉತ್ಸವ 2020 ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿವಹಿಸಿ ಮಾತನಾಡಿದ ಕನ್ನಡ ಸಂಸ್ಕೃತಿ, ಪ್ರವಾಸೋದ್ಯಮ ಸಚಿವ ಸಿಟಿ ರವಿ ಅವರು, ಇನ್ನು ಮುಂದೆ ಪ್ರತಿವರ್ಷ ನಿಗದಿತ ದಿನಾಂಕಗಳಂದು ಹಂಪಿ ಉತ್ಸವವನ್ನು ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕ್ಯಾಲೆಂಡರ್ ನಲ್ಲಿ ಅಳವಡಿಸಿ ಉತ್ಸವದ ಅನಿಶ್ಚಿತತೆ ನಿವಾರಿಸಲಾಗುವುದು ಎಂದರು.

    ಮೈಸೂರಿನ ದಸರಾ ಹೇಗೆ ಆಚರಣೆ ಮಾಡಲಾಗುವುದೋ, ಅದೇ ರೀತಿಯಲ್ಲಿ ಹಂಪಿ ಉತ್ಸವ ಆಚರಣೆ ಮಾಡಲಾಗುವುದು. ಭಾರತದ ಪರಂಪರೆಯ ಅವನತಿ ಮತ್ತು ಉನ್ನತಿಯ ಚರಿತ್ರೆಯನ್ನು ಹಂಪಿಯ ಕಲ್ಲು ಕಲ್ಲುಗಳು ಹೇಳುತ್ತವೆ. ನಮ್ಮ ಗತ ಇತಿಹಾಸ, ಪರಂಪರೆಯನ್ನು ಯಾವ ಶಕ್ತಿಗಳು ನಾಶಮಾಡಿದ್ದವೋ, ಅದೇ ಶಕ್ತಿಗಳು ಸ್ವಾತಂತ್ರ್ಯೋತ್ತರ ಕಾಲದಲ್ಲಿ ದೇಶದ ಅಖಂಡತೆಗೆ ಧಕ್ಕೆ ಉಂಟು ಮಾಡುತ್ತಿವೆ. ಆ ಕಾಲದಲ್ಲೂ ನಮ್ಮನ್ನು ಬಾದಿಸಿ ಈಗಲೂ ನಮ್ಮ ಜೊತೆಯಲ್ಲಿ ಇದ್ದು ನಮ್ಮ ಅಖಂಡತೆಗೆ ಧಕ್ಕೆ ತಂದಿದ್ದಾರೆ ಎನ್ನುವ ಮೂಲಕ ಪರೋಕ್ಷವಾಗಿ ಕಾಂಗ್ರೆಸ್‍ಗೆ ಟಾಂಗ್ ನೀಡಿದರು. ಇಂತಹ ಉತ್ಸವಗಳು ಕೇವಲ ಮನರಂಜನೆಯ ಆಚರಣೆಗಳಾಗಬಾರದು, ಪರಂಪರೆಯ ಚಿಂತನ ಮಂಥನಗಳಾಗಬೇಕು ಎಂದರು ಕರೆ ನೀಡಿದರು.

  • ಮರಳಲ್ಲಿ ಮೂಡುತಿದೆ ಹಂಪಿ, ತಾಜ್‍ಮಹಲ್

    ಮರಳಲ್ಲಿ ಮೂಡುತಿದೆ ಹಂಪಿ, ತಾಜ್‍ಮಹಲ್

    ಬಳ್ಳಾರಿ: ಹಂಪಿ ಉತ್ಸವದಲ್ಲಿ ಸಾಂಸ್ಕೃತಿಕ ಚಟುವಟಿಕೆಗಳ ಜೊತೆಗೆ ವಿವಿಧ ಕಲೆಗಳ ಸಮಾಗಮವೂ ನಡೆಯುತ್ತಿದೆ. ಎಂದಿನಂತೆ ಈ ಬಾರಿಯು ಮರಳು ಕಲಾ ಪ್ರದರ್ಶನವನ್ನು ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದೆ.

    ಕಮಲಾಪುರ ಗ್ರಾಮ ಪಂಚಾಯತಿ ಮುಂಭಾಗದ ಮಾತಂಗ ಪರ್ವತ ಮೈದಾನದಲ್ಲಿ ಸಜ್ಜಾಗುತ್ತಿರುವ ಮರಳು ಕಲಾ ಪ್ರದರ್ಶನವು ಈ ಬಾರಿಯ ಮುಖ್ಯ ಆಕರ್ಷಣೆ ಆಗಲಿದೆ. ಒರಿಸ್ಸಾ ಕಲಾವಿದ ನಾರಾಯಣ ಸಾಹು ನೇತೃತ್ವದ ತಂಡವು ಮರಳಲ್ಲಿ ಹಂಪಿ ವಿರುಪಾಕ್ಷ ದೇವಾಲಯದ ಗೋಪುರ, ಉಗ್ರನರಸಿಂಹ, ಆನೆಲಾಯ ಮತ್ತು ಹಂಪಿಯ ಕಲ್ಲಿನ ರಥವನ್ನು ಮರಳಲ್ಲಿ ನಿರ್ಮಿಸಲಾಗುತ್ತಿದೆ.

    ಜೊತೆಗೆ ವಿಶ್ವದ 7 ಅದ್ಭುತಗಳಲ್ಲಿ ಒಂದಾದ ಆಗ್ರಾದ ತಾಜ್ ಮಹಲ್ ಹಾಗೂ ಇತರ ಸ್ಮಾರಕಗಳನ್ನು ನೈಜತೆಯಿಂದ ಮರಳಲ್ಲಿ ಅರಳಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಮರಳು ಕಲಾ ಪ್ರದರ್ಶನವು 2 ದಿನಗಳ ಕಾಲ ಉತ್ಸವದಲ್ಲಿ ಮೆರಗನ್ನು ನೀಡಲಿದೆ. ಕಳೆದ ಉತ್ಸವದಲ್ಲಿ ಮರಳು ಕಲಾಕೃತಿಗಳು ಹಾರ್ಟ್ ಫೆವರೇಟ್ ಆಗಿತ್ತು. ಈ ಬಾರಿಯೂ ಹೆಚ್ಚು ಜನರನ್ನು ಈ ಕಲಾಕೃತಿಗಳು ಸೆಳೆಯಲಿವೆ.

  • ‘ಹಂಪಿ ಬೈ ಸ್ಕೈ’ಗೆ ಶಾಸಕ ಆನಂದ್ ಸಿಂಗ್ ಚಾಲನೆ

    ‘ಹಂಪಿ ಬೈ ಸ್ಕೈ’ಗೆ ಶಾಸಕ ಆನಂದ್ ಸಿಂಗ್ ಚಾಲನೆ

    -ಇಂದಿನಿಂದ ಜ.12 ರವರೆಗೆ ಆಗಸದಿಂದ ಹಂಪಿ ಸೌಂದರ್ಯ ಕಣ್ತುಂಬಿಕೊಳ್ಳಿ

    ಬಳ್ಳಾರಿ: ಹಂಪಿ ಉತ್ಸವದ ಅಂಗವಾಗಿ ಬಳ್ಳಾರಿ ಜಿಲ್ಲಾಡಳಿತ ಈ ಬಾರಿಯೂ ಹಂಪಿ ಬೈ ಸ್ಕೈಗೆ ವ್ಯವಸ್ಥೆ ಮಾಡಿದೆ. ಕಮಲಾಪುರದ ಮಯೂರ ಭುವನೇಶ್ವರಿ ಹೋಟಲ್ ಆವರಣದಲ್ಲಿ ನಿರ್ಮಿಸಲಾಗಿರುವ ತಾತ್ಕಾಲಿಕ ಹೆಲಿಪ್ಯಾಡ್‍ನಲ್ಲಿ ಶಾಸಕ ಆನಂದಸಿಂಗ್ ಅವರು ಪೂಜೆ ಸಲ್ಲಿಸುವುದರ ಮೂಲಕ ಹಂಪಿ ಬೈ ಸ್ಕೈಗೆ ಚಾಲನೆ ನೀಡಿದ್ದಾರೆ.

    ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಆನಂದ್ ಸಿಂಗ್, ಬಳಿಕ ತಮ್ಮ ಕುಟುಂಬದ 6 ಜನರೊಂದಿಗೆ ಮೊದಲಿಗೆ ಹಣ ಪಾವತಿಸಿ ಹೆಲಿಕಾಪ್ಟರ್ ಹತ್ತಿ ಹಂಪಿಯ ವಿಹಂಗಮ ನೋಟವನ್ನು ಸವಿದರು. ಶಾಸಕ ಆನಂದಸಿಂಗ್ ಅವರು ಇದೇ ಮೊದಲ ಬಾರಿಗೆ ನಮ್ಮ ಕುಟುಂಬದೊಂದಿಗೆ ಆಗಸದಿಂದ ಹಂಪಿಯನ್ನು ವೀಕ್ಷಿಸಿದರು. ಆನಂದ್ ಸಿಂಗ್ ಅವರ ಸೊಸೆಯೂ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಆನಂದ್ ಸಿಂಗ್ ಅವರು, ಆಗಸದಿಂದ ಹಂಪಿ ತುಂಬಾ ಸುಂದರವಾಗಿ ಕಾಣುತ್ತದೆ. ಆದರೆ ಸ್ವಲ್ಪ ದರ ಜಾಸ್ತಿಯಾಗಿದೆ. ಹಂಪಿ ಉತ್ಸವಕ್ಕೆ ಆಗಮಿಸುವ ಜನರು ಆಗಸದ ಮೂಲಕ ಹಂಪಿಯನ್ನು ವೀಕ್ಷಿಸಬೇಕು ಎಂದು ಮನವಿ ಮಾಡಿದರು.

    ಹಂಪಿಯ ವಿಹಂಗಮ ನೋಟ, ವಿರೂಪಾಕ್ಷೇಶ್ವರ ದೇವಸ್ಥಾನ, ವಿಜಯ ವಿಠ್ಠಲ ಟೆಂಪಲ್, ಲೋಟಸ್ ಮಹಲ್ ಸೇರಿದಂತೆ ವಿವಿಧ ಸ್ಮಾರಕಗಳು, ಹರಿಯುವ ನದಿ, ತುಂಗಾಭದ್ರಾ ನದಿ, ಬೆಟ್ಟ-ಗುಡ್ಡಗಳು, ನೈಸರ್ಗಿಕ ಸೌಂದರ್ಯವನ್ನು ಆಗಸದಿಂದ ನೋಡುವುದರ ಮೂಲಕ ಕಣ್ತುಂಬಿಕೊಂಡವ ಅವಕಾಶ ಪ್ರವಾಸಿಗರಿಗೆ ಲಭಿಸಿದೆ.

    ಮಯೂರ ಭುವನೇಶ್ವವರಿ ಹೋಟಲ್ ಆವರಣದಲ್ಲಿ ನಿರ್ಮಿಸಲಾಗಿರುವ ಹೆಲಿಪ್ಯಾಡ್ ಪಕ್ಕದಲ್ಲಿಯೇ ಎರಡು ಟಿಕೆಟ್ ಕೌಂಟರ್ ಗಳನ್ನು ತೆರೆಯಲಾಗಿದೆ. ಟಿಕೆಟ್ ಪಡೆದು ಪ್ರವಾಸಿಗರು ಹೆಲಿಕಾಪ್ಟರಿನಲ್ಲಿ ಹಂಪಿ ವೀಕ್ಷಿಸಬಹುದಾಗಿದೆ. ಜ.8ರಿಂದ 12ರವರೆಗೆ ಚಿಪ್ಸಾನ್ ಏವಿಯೇಶನ್ ಮತ್ತು ತುಂಬೆ ಏವಿಯೇಶನ್‍ಗಳ ಹೆಲಿಕಾಪ್ಟರ್ ಗಳು ಪ್ರವಾಸಿಗರಿಗೆ ಲಭ್ಯವಾಗಲಿದೆ. ಸುಮಾರು 7 ನಿಮಿಷಗಳ ಹಾರಾಟಕ್ಕೆ ಒಬ್ಬರಿಗೆ 3ಸಾವಿರ ರೂ. ದರ ನಿಗದಿ ಮಾಡಲಾಗಿದೆ. ಕಳೆದ ಬಾರಿಯ ಹಂಪಿ ಉತ್ಸವದಲ್ಲಿ 1,600ಕ್ಕೂ ಹೆಚ್ಚು ಜನರು ಹಂಪಿಯ ಸೌಂದರ್ಯವನ್ನು ಬಾನಾಂಗಳದ ಮೂಲಕ ಸವಿದಿದ್ದರು. ಈ ಬಾರಿಯೂ ಹೆಚ್ಚಿನ ಜನರು ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. ಕಳೆದ ಬಾರಿ ಒಬ್ಬರಿಗೆ 2,500 ರೂ.ಗಳನ್ನು ನಿಗದಿ ಮಾಡಲಾಗಿತ್ತು. ಈ ಬಾರಿ 500 ರೂ.ಗಳನ್ನು ಹೆಚ್ಚಿಸಲಾಗಿದೆ.

  • ಹಂಪಿ ಉತ್ಸವಕ್ಕಾಗಿ ಜ.10-11 ರಂದು ಉಚಿತ ಬಸ್ ಸಂಚಾರ

    ಹಂಪಿ ಉತ್ಸವಕ್ಕಾಗಿ ಜ.10-11 ರಂದು ಉಚಿತ ಬಸ್ ಸಂಚಾರ

    ಬಳ್ಳಾರಿ: ಸಾರ್ವಜನಿಕರ ಅನುಕೂಲಕ್ಕಾಗಿ ಹಂಪಿ ಉತ್ಸವಕ್ಕೆ ಉಚಿತ ಬಸ್ ಬಿಡಲು ಬಳ್ಳಾರಿ ಜಿಲ್ಲಾಡಳಿತ ನಿರ್ಧಾರ ಮಾಡಿದೆ.

    ವಿಶ್ವವಿಖ್ಯಾತ ಹಂಪಿ ಉತ್ಸವವು ಇದೇ ಜನವರಿ 10 ಮತ್ತು 11 ರಂದು ಅದ್ಧೂರಿಯಾಗಿ ನಡೆಯಲಿದೆ. ಹೀಗಾಗಿ ಹಂಪಿ ಉತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿ ವೀಕ್ಷಿಸಲಿ ಎಂಬ ಸದುದ್ದೇಶದಿಂದ ಜಿಲ್ಲಾಡಳಿತ ಮತ್ತು ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆ ಈ ವ್ಯವಸ್ಥೆ ಮಾಡಿದೆ. ಹೊಸಪೇಟೆ ಕೇಂದ್ರ ಬಸ್ ನಿಲ್ದಾಣ ಸೇರಿದಂತೆ ತಾಲೂಕಿನ ಬಹುತೇಕ ಗ್ರಾಮಗಳಿಂದ ಉಚಿತ ಬಸ್ ಬಿಡಲು ನಿರ್ಧಾರ ಮಾಡಲಾಗಿದೆ.

    ಜನವರಿ 10 ಮತ್ತು 11 ರಂದು ಹೊಸಪೇಟೆಯ ವಿವಿಧ ಬಡಾವಣೆಗಳಿಂದ ಹಾಗೂ ಹೊಸಪೇಟೆಯ ಕೇಂದ್ರ ಬಸ್ ನಿಲ್ದಾಣದಿಂದ ಹಂಪಿ ಕಡೆಗೆ ಹೋಗುವ ಹಾಗೂ ಮರಳಿ ಕೇಂದ್ರ ಬಸ್ ನಿಲ್ದಾಣಕ್ಕೆ ಮತ್ತು ವಿವಿಧ ಬಡಾವಣೆಗಳಿಗೆ ಉಚಿತ ಬಸ್ ಸಂಚಾರ ಕಲ್ಪಿಸಲಾಗಿದೆ. ಇದರ ಸದುಪಯೋಗವನ್ನು ಜನರು ಪಡೆದುಕೊಳ್ಳಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿ ಉತ್ಸವ ವೀಕ್ಷಿಸಬೇಕು ಎಂದು ಜಿಲ್ಲಾಡಳಿತ ಹಾಗೂ ಸಾರಿಗೆ ಇಲಾಖೆ ಜನರಲ್ಲಿ ಮನವಿ ಮಾಡಿದೆ.

  • ಸರ್ಕಾರಿ ಆಸ್ಪತ್ರೆಗಳಲ್ಲಿ ವಾಸ್ತವ್ಯ ಹೂಡಲಿದ್ದಾರೆ ಶ್ರೀರಾಮುಲು

    ಸರ್ಕಾರಿ ಆಸ್ಪತ್ರೆಗಳಲ್ಲಿ ವಾಸ್ತವ್ಯ ಹೂಡಲಿದ್ದಾರೆ ಶ್ರೀರಾಮುಲು

    – ಲೋಪವೆಸಗುವ ವೈದ್ಯರಿಗೆ ಖಡಕ್ ವಾರ್ನಿಂಗ್

    ಬಳ್ಳಾರಿ: ಸಮಸ್ಯೆ ಬಗೆಹರಿಸಲು ಸರ್ಕಾರಿ ಆಸ್ಪತ್ರೆಗಳಲ್ಲಿ ವಾಸ್ತವ್ಯ ಹೂಡಲಿದ್ದೇನೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರು ಇಂದು ಬಳ್ಳಾರಿಯಲ್ಲಿ ತಿಳಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ವಾಸ್ತವ್ಯ ಹೂಡಲು ನಿರ್ಧರಿಸಿದ್ದೇನೆ. ಬೆಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ವ್ಯಾಸ್ತವ್ಯ ಮಾಡುವ ಮೂಲಕ ಶೀಘ್ರದಲ್ಲೇ ಈ ಬಗ್ಗೆ ಚರ್ಚೆ ಮಾಡಿ ಈ ‘ಆಸ್ಪತ್ರೆ ವಾಸ್ತವ್ಯ’ ಕಾರ್ಯಕ್ರಮಕ್ಕೆ ಚಾಲನೆ ನೀಡುವುದಾಗಿ ಹೇಳಿದರು.

    ಅಲ್ಲದೇ ಆಸ್ಪತ್ರೆಯ ಆಡಳಿತಾಧಿಕಾರಿಗಳಿಗೆ ಗಡುವು ನೀಡಿರುವ ಆರೋಗ್ಯ ಸಚಿವರು, ಹದಿನೈದು ದಿನಗಳ ಕಾಲಮಿತಿಯಲ್ಲಿ ಆಸ್ಪತ್ರೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಬೇಕು, ಇಲ್ಲದಿದ್ದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

    ಕಲಬುರಗಿ ಡಯಾಲಿಸಿಸ್ ಘಟಕದಲ್ಲಿ ಮಗು ಸಾವಿನಪ್ಪಿದ ಪ್ರಕರಣದ ಬಗ್ಗೆ ಈಗಾಗಲೇ ನಾನು ವರದಿ ಕೇಳಿರುವೆ. ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಜಿಲ್ಲಾ ಸರ್ಜನ್ ಅವರ ಕರ್ತವ್ಯ ಲೋಪ ಕಂಡು ಬಂದರೆ ತಕ್ಷಣ ಕ್ರಮ ಕೈಗೊಳ್ಳುವೆ ಎಂದರು.

    ಆಸ್ಪತ್ರೆಯ ಸೇವೆಗಳನ್ನು ನೀಡುವ ವಿಚಾರದಲ್ಲಿ ತಾಂತ್ರಿಕ ತೊಂದರೆ ನೆಪ ಹೇಳಬಾರದು, ಸೇವೆ ಒದಗಿಸುವಲ್ಲಿ ಏನೇ ಲೋಪ ಇದ್ದರೂ ಅದನ್ನು ಸರಿಪಡಿಸುವ ಜವಾಬ್ದಾರಿ ಸಂಬಂಧಿಸಿರುವ ಸಿಬ್ಬಂದಿಗಳ ಮೇಲಿದೆ. ಯಾವುದೇ ಕಾರಣಕ್ಕೂ ನೆಪಗಳನ್ನು ಕೇಳುವುದಿಲ್ಲ ಎಂದು ಸಚಿವರು ಖಡಕ್ ಎಚ್ಚರಿಕೆ ನೀಡಿದರು.

    ಇದೇ ವೇಳೆ ಹಂಪಿ ಉತ್ಸವದ ಬಗ್ಗೆ ಮಾತನಾಡಿ, ಸಿಎಂ ಜೊತೆ ಚರ್ಚೆ ಮಾಡಿ ಶೀಘ್ರದಲ್ಲೇ ಅಧಿಕಾರಿಗಳು ಶಾಸಕರ ಸಭೆ ಕರೆಯುತ್ತೇನೆ. ದಿನಾಂಕ ನಿಗದಿ ಮಾಡಲಾಗುವುದು, ಮೈಸೂರು ದಸರಾದಂತೆ ಹಂಪಿ ಉತ್ಸವಕ್ಕೂ ನಿರ್ದಿಷ್ಟ ದಿನಾಂಕ ನಿಗದಿಪಡಿಸುವೆ ಎಂದು ಶ್ರೀರಾಮುಲು ತಿಳಿಸಿದರು.

  • ಉಪಚುನಾವಣೆ ಕದನದ ಬಳಿಕವೂ ನಿಂತಿಲ್ಲ ಡಿಕೆಶಿ-ರಾಮುಲು ಶೀತಲ ಸಮರ

    ಉಪಚುನಾವಣೆ ಕದನದ ಬಳಿಕವೂ ನಿಂತಿಲ್ಲ ಡಿಕೆಶಿ-ರಾಮುಲು ಶೀತಲ ಸಮರ

    ಬೆಂಗಳೂರು: ಬಳ್ಳಾರಿ ಹಂಪಿ ಉತ್ಸವವನ್ನು ಆಚರಣೆ ಮಾಡದಿರಲು ಚಿಂತನೆ ನಡೆಸಿರುವ ರಾಜ್ಯ ಸರ್ಕಾರದ ಬಗ್ಗೆ ಶಾಸಕ ಶ್ರೀರಾಮುಲು ಕಿಡಿಕಾರಿದ್ದು, ಕಾಂಗ್ರೆಸ್ ಪಕ್ಷದ ಕೃತಜ್ಞತಾ ಸಮಾವೇಶ ಮಾಡಿದಾಗ ಬರದ ಬರಗಾಲ ಹಂಪಿ ಉತ್ಸವ ಆಚರಿಸಲು ಬಂತೆ ಎಂದು ಪ್ರಶ್ನೆ ಮಾಡಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಶಾಸಕ ಶ್ರೀರಾಮುಲು ಅವರು, ದುಂದು ವೆಚ್ಚ ಮಾಡಿ ಬಳ್ಳಾರಿಯಲ್ಲಿ ಕೃತಜ್ಞತಾ ಸಮಾವೇಶ ಮಾಡಿದಾಗ ಅಡ್ಡ ಬರದ ಬರಗಾಲ ಹಂಪಿ ಉತ್ಸವ ಆಚರಿಸಲು ಬಂತೆ? ನಿಮ್ಮ ರೈತಪರ ಕಾಳಜಿಯನ್ನು ರೈತರ ಸಾಲಮನ್ನಾ ಮಾಡುವ ಮೂಲಕ ತೋರಿಸಿ. ಕೇಂದ್ರ ಬರ ಅಧ್ಯಯನ ತಂಡಕ್ಕೆ ಸಹಕಾರ ನೀಡುವ ಮೂಲಕ ಕೆಲಸ ಮಾಡಿ ಎಂದು ಬರೆದು ಸಚಿವ ಡಿಕೆ ಶಿವಕುಮಾರ್ ಅವರಿಗೆ ಟ್ಯಾಗ್ ಮಾಡಿದ್ದಾರೆ.

    ಜಲಸಂಪ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ಮಂಗಳವಾರ ವಿಧಾನಸೌಧದಲ್ಲಿ ಮಾತನಾಡಿ, ರಾಜ್ಯದ ನೂರು ತಾಲೂಕುಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಹಂಪಿ ಉತ್ಸವವನ್ನು ಮುಂದೂಡಲು ಸರ್ಕಾರ ನಿರ್ಧರಿಸಿದೆ. ಮುಂದಿನ ವರ್ಷ ವಿಜೃಂಭನೆಯಿಂದ ಆಚರಿಸಲಾಗುತ್ತದೆ ಎಂದು ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಳ್ಳಾರಿಗೆ ಹೋದ್ರೂ ಹಂಪಿ ವಿರೂಪಾಕ್ಷನ ದರ್ಶನ ಮಾಡ್ಲಿಲ್ಲ- ಮೂಢನಂಬಿಕೆ ವಿರುದ್ಧ ಗುಡುಗೋ ಸಿಎಂಗೆ ಭಯ ಶುರುವಾಯ್ತಾ?

    ಬಳ್ಳಾರಿಗೆ ಹೋದ್ರೂ ಹಂಪಿ ವಿರೂಪಾಕ್ಷನ ದರ್ಶನ ಮಾಡ್ಲಿಲ್ಲ- ಮೂಢನಂಬಿಕೆ ವಿರುದ್ಧ ಗುಡುಗೋ ಸಿಎಂಗೆ ಭಯ ಶುರುವಾಯ್ತಾ?

    ಬಳ್ಳಾರಿ: ವಿಶ್ವ ವಿಖ್ಯಾತ ಹಂಪಿ ಉತ್ಸವಕ್ಕೆ ಚಾಲನೆ ನೀಡಿದ ಸಿದ್ದರಾಮಯ್ಯನವರು ವಿರುಪಾಕ್ಷೇಶ್ವರ ದೇವಾಲಯಕ್ಕೆ ಹೋಗದೆ ವಾಪಸ್ಸು ಬಂದಿರುವುದರಿಂದ ಜನರಲ್ಲಿ ಹಲವಾರು ಪ್ರೆಶ್ನೆಗಳು ಹುಟ್ಟಿಸಿದ್ದು, ಚರ್ಚೆಗೀಡಾಗಿದೆ.

    ಮೂಢ ನಂಬಿಕೆ, ಮೌಢ್ಯತೆ ವಿರುದ್ಧ ಗುಡುಗುವ ಸಿಎಂ ಅವರಿಗೆ ಮೌಢ್ಯತೆ ಕಾಡುತ್ತಿದೆಯಾ? ಮೂಢನಂಬಿಕೆ ವಿರುದ್ಧ ಕಾಯ್ದೆ ತರುವ ಸಿಎಂ ಅವರಿಗೆ ಭಯ ಶುರುವಾಯ್ತಾ? ಹಂಪಿ ಉತ್ಸವಕ್ಕೆ ಚಾಲನೆ ಕೊಟ್ಟ ಸಿಎಂ ವಿರೂಪಾಕ್ಷ ದೇವಾಲಯಕ್ಕೆ ಹೋಗಲಿಲ್ಲ ಯಾಕೆ? ಅಂತ ಹಲವಾರು ಪ್ರೆಶ್ನೆಗಳು ಇದೀಗ ಹುಟ್ಟಿಕೊಂಡಿವೆ.

    ಶುಕ್ರವಾರದಿಂದ ಶುರುವಾಗಿರುವ ಐತಿಹಾಸಿಕ ಬಳ್ಳಾರಿಯ ಹಂಪಿ ಉತ್ಸವಕ್ಕೆ ಸಿಎಂ ಸಿದ್ದರಾಮಯ್ಯನವರು ಬಂದು ಕಾರ್ಯಕ್ರಮ ಉದ್ಘಾಟನೆ ಮಾಡಿದ್ರು. ಆದರೆ ಉದ್ಘಾಟನೆಯಾದ ಜಾಗದಿಂದ ಕೂಗಳತೆ ದೂರದಲ್ಲಿರೋ ವಿರೂಪಾಕ್ಷೇಶ್ವರ ದೇವಸ್ಥಾನಕ್ಕೆ ಸಿಎಂ ಭೇಟಿ ನೀಡಿ ದೇವರ ದರ್ಶನವನ್ನ ಪಡೆಯಲಿಲ್ಲ.

    ಕಳೆದ ನಾಲ್ಕು ವರ್ಷದಿಂದಲೂ ಹಂಪಿ ಉತ್ಸವ ಉದ್ಘಾಟನೆಗೆ ಆಗಮಿಸಿದ್ರೂ ಸಿಎಂ ಸಿದ್ದರಾಮಯ್ಯ ವಿರುಪಾಕ್ಷೇಶ್ವರನ ದರ್ಶನ ಪಡೆದಿಲ್ಲ. ಹಿಂದೆ ಹಣಕಾಸು ಸಚಿವರಾಗಿದ್ದ ವೇಳೆಯಲ್ಲೂ ಸಹ ಎರಡು ಬಾರಿ ಬಂದಿದ್ದಾಗಲೂ ದೇವರ ದರ್ಶನ ಪಡೆದಿರಲಿಲ್ಲ.

    ವಿಜಯನಗರ ಸಾಮ್ರಾಜ್ಯ ಪತನಗೊಂಡಿದ್ದಕ್ಕೆ ವಿಜಯನಗರ ಅರಸರ ಆರಾಧ್ಯದೈವ ವಿರುಪಾಕ್ಷನ ಶಾಪವೂ ಇತ್ತಂತೆ. ಜೊತೆಗೆ ಮಾಜಿ ಸಚಿವ ಜನಾರ್ದನ ರೆಡ್ಡಿ ಸಹ ಶ್ರೀಕೃಷ್ಣದೇವರಾಯನ 500ನೇ ಪಟ್ಟಾಭಿಷೇಕ ಮಾಡಿಸಿದ್ರು. ಆಮೇಲೆ ರೆಡ್ಡಿ ಅಧಿಕಾರ ಕಳೆದುಕೊಂಡು ಜೈಲು ಸೇರಿದ್ರು. ವಿರೂಪಾಕ್ಷೇಶ್ವರನ ದರ್ಶನ ಮಾಡಿದ್ರೆ ಅಧಿಕಾರ ಹೊಗುತ್ತೆ ಅನ್ನೋ ನಂಬಿಕೆ ಹಲವರಲ್ಲಿದ್ದು, ಸಿಎಂ ಕೂಡ ಅದೇ ಹಾದಿಯಲ್ಲಿ ಸಾಗ್ತಿದ್ದಾರೆ ಅಂತ ಜನ ಮಾತನಾಡಿಕೊಳ್ತಿದ್ದಾರೆ.

     

  • ಇಂದಿನಿಂದ ವಿಶ್ವವಿಖ್ಯಾತ ಹಂಪಿ ಉತ್ಸವ ಆರಂಭ- ಹಂಪಿ ಬೈ ಸ್ಕೈ ಪ್ರಮುಖ ಆಕರ್ಷಣೆ

    ಇಂದಿನಿಂದ ವಿಶ್ವವಿಖ್ಯಾತ ಹಂಪಿ ಉತ್ಸವ ಆರಂಭ- ಹಂಪಿ ಬೈ ಸ್ಕೈ ಪ್ರಮುಖ ಆಕರ್ಷಣೆ

    ಬಳ್ಳಾರಿ: ಧ್ವನಿ ಬೆಳಕಿನಲ್ಲಿ ಮಿಂದೇಳಲು ಹಂಪಿ ಸಿದ್ಧವಾಗಿದ್ದು, ಇಂದಿನಿಂದ ಮೂರು ದಿನ ಕಾಲ ನಡೆಯಲಿರುವ ವಿಶ್ವ ವಿಖ್ಯಾತ ಹಂಪಿ ಉತ್ಸವ ಆರಂಭವಾಗಲಿದೆ.

    ಸಿಎಂ ಸಿದ್ದರಾಮಯ್ಯ ಅವರು ಸಂಜೆ 6 ಗಂಟೆಗೆ ಹಂಪಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಒಟ್ಟು 11 ವೇದಿಕೆಗಳಲ್ಲಿ 450 ಕಾರ್ಯಕ್ರಮಗಳು ನಡೆಯಲಿವೆ. ಸ್ಥಳೀಯ ಹಾಗೂ ಅಂತರರಾಷ್ಟ್ರೀಯ ಕಲಾವಿದರು ಕಾರ್ಯಕ್ರಮವನ್ನು ನೀಡಲಿದ್ದಾರೆ. ಗಾಯಕರಾದ ಗುರುಕಿರಣ್, ಕುನಾಲ್ ಗಾಂಜಾವಾಲ, ಶಾನ್ ಸೇರಿದಂತೆ ಇತರೆ ಕಲಾವಿದರು ಸಂಗೀತ ಕಾರ್ಯಕ್ರಮ ನೀಡುತ್ತಾರೆ.

    ಹಂಪಿಯ ಎಲ್ಲಾ ಸ್ಮಾರಕಗಳಿಗೆ ವಿದ್ಯುದ್ದೀಪಗಳಿಂದ ಅಲಂಕಾರ ಮಾಡಲಾಗಿದ್ದು, ಹೊಸಪೇಟೆ- ಗಂಗಾವತಿ ಮುಖ್ಯರಸ್ತೆಗೆ ಡಾಂಬರು ಹಾಕಲಾಗಿದೆ. ನಗರದಿಂದ ಹಂಪಿವರೆಗೆ ರಸ್ತೆಯ ಎರಡೂ ಬದಿ ಕಟೌಟ್, ಫ್ಲೆಕ್ಸ್‍ಗಳು ರಾರಾಜಿಸುತ್ತಿವೆ. ಇಡೀ ಹಂಪಿ ಮದುವೆ ಮನೆಯಂತೆ ಕಂಗೊಳಿಸುತ್ತಿದೆ.

    ಮೂರು ದಿನಗಳ ಈ ಉತ್ಸವದಲ್ಲಿ ಈ ಬಾರಿ ಹಂಪಿ ಬೈ ಸ್ಕೈ ಪ್ರಮುಖ ಆಕರ್ಷಣೆಯಾಗಿದೆ. ಏರಿಯಲ್ ವ್ಯೂವ್‍ನಲ್ಲಿ ಹಂಪಿ ಸ್ಮಾರಕಗಳು, ದೇವಾಲಯಗಳು, ತುಂಗಭದ್ರಾ ಜಲಾಶಯವನ್ನು ನೋಡಲು ಪ್ರವಾಸಿಗರಿಗೆ ಹೆಲಿಕಾಪ್ಟರ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಇದಕ್ಕೆ ಸುಮಾರು 2300 ರೂಪಾಯಿ ತೆರಬೇಕಿದೆ. ಆಗಸದಿಂದ ಹಂಪಿ ಹೇಗೆ ಕಾಣುತ್ತದೆ ಎಂಬುದನ್ನು ನೋಡಬಹುದಾಗಿದೆ.

    ಹಂಪಿ ಉತ್ಸವದ ಅಂಗವಾಗಿ ಗುರುವಾರ ಹೊಸಪೇಟೆಯಲ್ಲಿ ಮೊದಲ ಬಾರಿಗೆ ಬಂಡಿ ಉತ್ಸವ ನಡೆಯಿತು. ಹೊಸಪೇಟೆ ತಾಲೂಕಿನ ರೈತರು ತಮ್ಮ ತಮ್ಮ ಬಂಡಿ ಎತ್ತುಗಳನ್ನು ಶೃಂಗರಿಸಿ ಬಂಡಿ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಹೊಸಪೇಟೆಯಿಂದ ಹಂಪಿ ಕಮಲಮಹಲ್‍ವರೆಗೆ ನಡೆದ ಬಂಡಿ ಉತ್ಸವಕ್ಕೆ ಶಾಸಕ ಆನಂದ ಸಿಂಗ್ ಚಾಲನೆ ನೀಡಿದ್ದರು. ಸ್ವತಃ ಶಾಸಕ ಆನಂದ ಸಿಂಗ್ ಹಾಗೂ ಡಿಸಿ ರಾಮಪ್ರಶಾಂತ್ ಮನೋಹರ್ ಬಂಡಿ ಓಡಿಸಿದ್ದು ವಿಶೇಷವಾಗಿತ್ತು.