Tag: Handwara

  • ಸಾವನ್ನಪ್ಪಿದ ಉಗ್ರರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

    ಸಾವನ್ನಪ್ಪಿದ ಉಗ್ರರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

    ಶ್ರೀನಗರ: ಜಮ್ಮು ಕಾಶ್ಮೀರದ ಹಂದ್ವಾರ ಹಾಗೂ ಕುಪ್ವಾರದಲ್ಲಿ ನಡೆದ ಗುಂಡಿನ ಚಕಮಕಿ ವೇಳೆ ಮೂವರು ಉಗ್ರರು ಹತರಾದ ನಂತರ ಇಬ್ಬರ ಬಳಿ ಅಪಾರ ಪ್ರಮಾಣದ ಮದ್ದು, ಗುಂಡು ಹಾಗೂ ಶಸ್ತ್ರಸ್ತ್ರಗಳು ಸಿಕ್ಕಿವೆ.

    ಬುಧವಾರ ಹಂದ್ವಾರ ಹಾಗೂ ಕುಪ್ವಾರದಲ್ಲಿ ಭದ್ರತಾ ಸಿಬ್ಬಂದಿ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿ ವೇಳೆ ಇಬ್ಬರು ಎಲ್‍ಇಟಿ ಉಗ್ರರು ಹತರಾಗಿದ್ದು, ಇವರಿಂದ ಅಪಾರ ಪ್ರಮಾಣದ ಮದ್ದು, ಗುಂಡು ಹಾಗೂ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಾವನ್ನಪ್ಪಿದವರಲ್ಲಿ ಎಲ್‍ಇಟಿ ಕಮಾಂಡರ್ ನಸೀರ್ ಉದ್ದಿನ್ ಲೋನ್ ಒಬ್ಬ. ಈತ ಈ ಹಿಂದೆ ಹಲವು ಸಿಆರ್‍ಪಿಎಫ್ ಯೋಧರ ಹುತಾತ್ಮರಾದ ಪ್ರಕರಣದಲ್ಲಿ ಭಾಗಿಯಾಗಿದ್ದ.

    ಜಮ್ಮು ಕಾಶ್ಮೀರದ ಕುಲ್ಗಮ್ ಹಾಗೂ ಹಂದ್ವಾರದಲ್ಲಿ ನಡೆದ ಪ್ರತ್ಯೇಕ ಘಟನೆಯಲ್ಲಿ ಒಟ್ಟು ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಭದ್ರತಾ ಸಿಬ್ಬಂದಿ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ಏರ್ಪಟ್ಟಿದ್ದು, ಈ ವೇಳೆ ಉಗ್ರರನ್ನು ಹತ್ಯೆ ಮಾಡಲಾಗಿದೆ. ಒಬ್ಬ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆ ಉಗ್ರ ಸಾವನ್ನಪ್ಪಿದ್ದು, ಅದೇ ಸ್ಥಳದಲ್ಲಿ ಸಿಕ್ಕಿಬಿದ್ದ ಇನ್ನಿಬ್ಬರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇಡೀ ಪ್ರದೇಶವನ್ನು ಸುತ್ತುವರಿಯಲಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ.

    ಮತ್ತೊಂದು ಘಟನೆಯಲ್ಲಿ ಇಬ್ಬರು ಎಲ್‍ಇಟಿ ಉಗ್ರರು ಹತರಾಗಿದ್ದಾರೆ. ಜಮ್ಮು ಕಾಶ್ಮೀರದ ಹಂದ್ವಾರಾದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಸಾವನ್ನಪ್ಪಿದ ಇಬ್ಬರ ಪೈಕಿ ಒಬ್ಬನನ್ನು ಎಲ್‍ಇಟಿ ಕಮಾಂಡರ್ ನಸೀರ್ ಉದ್ದೀನ್ ಲೋನ್ ಎಂದು ಗುರುತಿಸಲಾಗಿದೆ. ಈತ ಸೋಪೂರ್ ಹಾಗೂ ಹಂದ್ವಾರದಲ್ಲಿ ಸೈನಿಕರ ಹುತಾತ್ಮರಾಗಿದ್ದ ಪ್ರಕರಣದಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

    ಹಂದ್ವಾರದಲ್ಲಿ ನಡೆದ ಎನ್‍ಕೌಂಟರ್ ನಲ್ಲಿ ಸಾವನ್ನಪ್ಪಿದ ಎಲ್‍ಇಟಿ ಕಮಾಂಡರ್ ನಸೀರ್ ಉದ್ದಿನ್ ಲೋನ್ ಏಪ್ರಿಲ್ 18ರಂದು ಮೂವರು ಹಾಗೂ ಮೇ 4ರಂದು ಸೊಪೂರದಲ್ಲಿ ಮೂವರು ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದ ಪ್ರಕರಣದಲ್ಲಿ ಭಾಗಿಯಾಗಿದ್ದ ಎಂದು ಜಮ್ಮು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.

  • ಗಡಿಯಲ್ಲಿ ಮತ್ತೆ ಉಗ್ರರ ಪುಂಡಾಟ- ಕರ್ನಲ್, ಮೇಜರ್ ಸೇರಿ ಐವರು ಯೋಧರು ಹುತಾತ್ಮ

    ಗಡಿಯಲ್ಲಿ ಮತ್ತೆ ಉಗ್ರರ ಪುಂಡಾಟ- ಕರ್ನಲ್, ಮೇಜರ್ ಸೇರಿ ಐವರು ಯೋಧರು ಹುತಾತ್ಮ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಹಂದ್ವಾರದಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಹಿರಿಯ ಸೇನಾಧಿಕಾರಿಗಳು ಸೇರಿದಂತೆ ಐವರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ.

    ಕರ್ನಲ್ ಆಶುತೋಷ್ ಶರ್ಮಾ, ಮೇಜರ್ ಅಂಜು, ಓರ್ವ ಲ್ಯಾನ್ಸ್ ನಾಯ್ಕ್, ರೈಫಲ್ ಮ್ಯಾನ್ ಹಾಗೂ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುತಾತ್ಮರಾದವರು. ಉಗ್ರರು ಭಾರತೀಯ ಯೋಧರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ ಪರಿಣಾಮ ಘಟನೆ ನಡೆದಿದೆ. ಇದನ್ನೂ ಓದಿ: ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು, ಓರ್ವ ಸಹಚರನನ್ನು ಸದೆಬಡಿದ ಸೇನೆ

    ಶ್ರೀನಗರದಿಂದ 70 ಕಿ.ಮೀ ದೂರದಲ್ಲಿರುವ ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಹಂದ್ವಾರದ ಚಂಜ್‍ಮುಲ್ಲಾ ಪ್ರದೇಶದಲ್ಲಿ ಶನಿವಾರ ರಾತ್ರಿ ಉಗ್ರರು ಗುಂಡಿ ದಾಳಿ ನಡೆಸಿದರು. ಈ ವೇಳೆ ಭದ್ರತಾ ಸಿಬ್ಬಂದಿ ಅಲ್ಲಿನ ನಾಗರಿಕರ ರಕ್ಷಣೆಗೆ ಮುಂದಾಗಿತ್ತು. ಆದರೆ ಗುಂಡು ತಗುಲಿ ಗಂಭೀರವಾಗಿ ಗಾಯಗೊಂಡ ಐವರು ಭದ್ರತಾ ಸಿಬ್ಬಂದಿ ಕೊನೆಯುಸಿರೆಳೆದಿದ್ದಾರೆ.

    ಕುಪ್ವಾರಾ ಜಿಲ್ಲೆಯ ಚಂದಿಮುಲ್ಲಾದಲ್ಲಿರುವ ಜನರನ್ನು ಒತ್ತೆಯಾಳು ಮಾಡಿಕೊಳ್ಳಲು ಉಗ್ರರು ಕರೆದೊಯ್ಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು. ಹೀಗಾಗಿ ಭಾರತೀಯ ಸೇನೆ ಮತ್ತು ಜಮ್ಮು-ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ಆರಂಭಿಸಿದರು. ಸೇನೆ ಮತ್ತು ಜಮ್ಮು-ಕಾಶ್ಮೀರ ಪೊಲೀಸರ ತಂಡವು ಚಂದಿಮುಲ್ಲಾ ಪ್ರದೇಶದಿಂದ ನಾಗರಿಕನನ್ನು ಯಶಸ್ವಿಯಾಗಿ ಹೊರಹಾಕಿತು. ಆದರೆ ಕಾರ್ಯಾಚರಣೆಯಲ್ಲಿ ಕರ್ನಲ್ ಆಶುತೋಷ್ ಶರ್ಮಾ, ಮೇಜರ್ ಅಂಜು ಸೇರಿದಂತೆ ಐವರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ವರದಿಯಾಗಿದೆ.

    ಆಶುತೋಷ್ ಶರ್ಮಾ ಅವರು 21 ರಾಷ್ಟ್ರೀಯ ರೈಫಲ್‍ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅವರು ಗಡಿಯಲ್ಲಿ ಒಳನುಸುಳುತ್ತಿರುವ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯಲ್ಲಿ ಹೀರೋ ಎಂದು ಗುರುತಿಸಿಕೊಂಡಿದ್ದರು. ಈ ಹಿಂದೆ ನಡೆದ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಆಶುತೋಷ್ ಶರ್ಮಾ ಅವರ ಕೂಡುಗೆ ಮಹತ್ವದ್ದಾಗಿತ್ತು.