Tag: HanumanChalisa

  • ಲುಲು ಮಾಲ್‍ನಲ್ಲಿ ಹನುಮಾನ್ ಚಾಲೀಸಾ ಪಠಿಸಿದ್ದ ಇಬ್ಬರ ಬಂಧನ

    ಲುಲು ಮಾಲ್‍ನಲ್ಲಿ ಹನುಮಾನ್ ಚಾಲೀಸಾ ಪಠಿಸಿದ್ದ ಇಬ್ಬರ ಬಂಧನ

    ಲಕ್ನೋ: ಲುಲು ಮಾಲ್‍ಗೆ ನುಗ್ಗಿ ಶನಿವಾರ ಹನುಮಾನ್ ಚಾಲೀಸಾ ಪಠಿಸಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

    ನೂತನವಾಗಿ ನಿರ್ಮಾಣವಾಗಿರುವ ಲುಲು ಶಾಪಿಂಗ್ ಮಾಲ್‍ಗೆ ಪ್ರವೇಶಿಸಲು ಪ್ರಯತ್ನಿಸಿ ಗಲಾಟೆ ಮಾಡಿದ್ದ ಸುಮಾರು 15 ಮಂದಿಯನ್ನು ವಶಕ್ಕೆ ಪಡೆಯಲಾಯಿತು.

    ಈ ಕುರಿತಂತೆ ಪ್ರತಿಕ್ರಿಯಿಸಿದ ಉಪ ಪೊಲೀಸ್ ಆಯುಕ್ತ (ದಕ್ಷಿಣ) ಗೋಪಾಲ್ ಕೃಷ್ಣ ಚೌಧರಿ ಅವರು, ಮಾಲ್ ಒಳಗೆ ಪ್ರವೇಶಿಸಿದ ಇಬ್ಬರು ನೆಲದ ಮೇಲೆ ಕುಳಿತು ಹನುಮಾನ್ ಚಾಲೀಸಾ ಓದಲು ಆರಂಭಿಸಿದರು. ಈ ಬಗ್ಗೆ ಮಾಲ್‍ನ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಇಬ್ಬರನ್ನು ಅರೆಸ್ಟ್ ಮಾಡಲಾಯಿತು. ಇದರಿಂದಾಗಿ ಮತ್ತೊಂದು ಪ್ರತಿಭಟನಾಕಾರರ ಗುಂಪು ಮಾಲ್‍ಗೆ ಪ್ರವೇಶಿಸಲು ಯತ್ನಿಸಿ ಗಲಾಟೆ ಮಾಡಲು ಆರಂಭಿಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ಸಂಭವಿಸಬಾರದೆಂಬ ಉದ್ದೇಶದಿಂದ ಪೊಲೀಸರು 15 ಮಂದಿಯನ್ನು ವಶಕ್ಕೆ ಪಡೆದು ನಂತರ ಎಚ್ಚರಿಕೆ ನೀಡಿ ಬಿಡುಗಡೆಗೊಳಿಸಲಾಯಿತು ಎಂದು ತಿಳಿಸಿದ್ದಾರೆ.

    ಇತ್ತೀಚೆಗಷ್ಟೇ ಲುಲು ಮಾಲ್‍ನ ಒಳಗಡೆ ಮುಸ್ಲಿಮರ ಗುಂಪೊಂದು ನಮಾಜ್ ಮಾಡುತ್ತಿರುವ ವಿಡಿಯೊವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಹೀಗಾಗಿ ನಮಾಜ್ ಮಾಡಿದ ಗುಂಪಿನವರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 153ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 295 ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಕೃತ್ಯ) ಅಡಿಯಲ್ಲಿ ಪೊಲೀಸರು ಎಫ್‍ಐಆರ್ ದಾಖಲಿಸಿದ್ದರು.

    ನಂತರ ಮಾಲ್ ಅಧಿಕಾರಿಗಳು ಶುಕ್ರವಾರ ಯಾವುದೇ ಧರ್ಮದ ಧಾರ್ಮಿಕ ಪ್ರಾರ್ಥನೆಗಳಿಗೆ ಅನುಮತಿ ನೀಡುವುದಿಲ್ಲ ಎಂದು ಮಾಲ್‍ನ ಹಲವು ಸ್ಥಳಗಳಲ್ಲಿ ಸೂಚನಾ ಫಲಕಗಳನ್ನು ಹಾಕಿದ್ದಾರೆ. ಬಳಿಕವೂ ಮತ್ತೊಂದು ವೀಡಿಯೊ ಬಿಡುಗಡೆಯಾಗಿತ್ತು. ಇದನ್ನು ಖಂಡಿಸಿ ಅಖಿಲ ಭಾರತ ಹಿಂದೂ ಮಹಾಸಭಾ ಮಾಲ್ ಹೊರಗೆ ಪ್ರತಿಭಟನೆಗೆ ಮುಂದಾಗಿತ್ತು. ತಾವೂ ಕೂಡ ಹನುಮಾನ್ ಚಾಲೀಸಾವನ್ನು ಪಠಿಸಲು ಅನುಮತಿ ನೀಡಬೇಕೆಂದು ಸ್ಥಳೀಯ ಅಧಿಕಾರಿಗಳಿಗೆ ಮನವಿ ಮಾಡಲಾಗಿತ್ತು. ಆದರೆ, ಈ ಮನವಿಯನ್ನು ಅಧಿಕಾರಿಗಳು ತಿರಸ್ಕರಿಸಿದ್ದರು. ಹೀಗಾಗಿ ಮಾಲ್ ಮುಂದೆ ಪ್ರತಿಭಟನೆಯನ್ನು ಆರಂಭಿಸಿದ ಪ್ರತಿಭಟನಾಕಾರರು, ಹನುಮಾನ್ ಚಾಲೀಸಾ ಪಠಿಸಲು ಲುಲು ಮಾಲ್‍ನ ಒಳಗೆ ಬಂದಿದ್ದರು. ಈ ವಿಚಾರ ತಿಳಿದು ಸ್ಥಳಕ್ಕೆ ಬಂದ ಪೊಲೀಸರನ್ನು ಕಂಡು ಕೆಲ ಪ್ರತಿಭಟನಾಕಾರರು ಓಡಿದ್ದಾರೆ. ಕೊನೆಗೂ ಪೊಲೀಸರು ಪ್ರತಿಭಟನೆಯಲ್ಲಿ ತೊಡಗಿದ್ದ ಎಲ್ಲರನ್ನು ವಶಕ್ಕೆ ಪಡೆದಿದ್ದಾರೆ.

    ಜುಲೈ 10ರಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಲುಲು ಮಾಲ್ ಅನ್ನು ಉದ್ಘಾಟಿಸಿದ್ದರು. ಈ ಮಾಲ್ ಅನ್ನು ಭಾರತೀಯ ಮೂಲದ ಬಿಲಿಯನೇರ್ ಯೂಸುಫ್ ಅಲಿ ಎಂಎ ನೇತೃತ್ವದ ಅಬುಧಾಬಿ ಮೂಲದ ಲುಲು ಗ್ರೂಪ್ ತೆರೆದಿದೆ.

    Live Tv
    [brid partner=56869869 player=32851 video=960834 autoplay=true]

  • ಮಸೀದಿ ಬಳಿ ನಿಂತು ಜೈ ಶ್ರೀರಾಮ್ ಘೋಷಣೆ ಕೂಗಿ ಹನುಮಾನ್ ಚಾಲೀಸಾ ಪಠಿಸಿದ MNS

    ಮಸೀದಿ ಬಳಿ ನಿಂತು ಜೈ ಶ್ರೀರಾಮ್ ಘೋಷಣೆ ಕೂಗಿ ಹನುಮಾನ್ ಚಾಲೀಸಾ ಪಠಿಸಿದ MNS

    ಮುಂಬೈ: ಮುಂಬೈನಲ್ಲಿರುವ ಮಸೀದಿಯೊಂದರ ಸ್ವಲ್ಪ ದೂರದಲ್ಲೇ ಮಹಾರಾಷ್ಟ್ರ ನವನಿರ್ಮಾಣ ಸೇನೆಯ (MNS) ಕಾರ್ಯಕರ್ತರು ಹನುಮಾನ್ ಚಾಲೀಸಾ ಪಠಿಸಿದ್ದಾರೆ. ಇದರೊಂದಿಗೆ ಜೈ ಶ್ರೀರಾಮ್ ಹಾಗೂ ಮಹಾರಾಷ್ಟ್ರ ನವನಿರ್ಮಾಣ ಸೇನಾ ಕಾ… ಜೈ ಸೋ’ ಎಂಬ ಘೋಷಣೆಗಳನ್ನೂ ಕೂಗಿದ್ದು, ತೀವ್ರ ವಿವಾದಕ್ಕೆ ತಿರುಗಿದೆ.

    MUMBAI

    ಎಂಎನ್‌ಎಸ್ ಮುಖ್ಯಸ್ಥ ರಾಜ್‌ಠಾಕ್ರೆ ನಿನ್ನೆ ತಮ್ಮ ಬೆಂಬಲಿಗರಿಗೆ ಹನುಮಾನ್ ಚಾಲೀಸಾ ಪಠಿಸುವಂತೆ ಕರೆ ನೀಡಿದ್ದರು. ಅದರಂತೆ ಹನುಮಾನ್ ಚಾಲೀಸಾ ಪಠಣ ಹಾಗೂ ಜೈ ಶ್ರೀರಾಮ್ ಘೋಷಣೆಗಳು ಮೊಳಗಿವೆ. ಬೆಳಿಗ್ಗೆ 5 ಗಂಟೆಯ ಆಜಾನ್ ಸಮಯದಲ್ಲಿ ಕಟ್ಟಡದ ಮೇಲಿಂದ ಧ್ವನಿವರ್ಧಕಗಳ ಮೂಲಕ ಹನುಮಾನ್ ಚಾಲೀಸಾ ಕೇಳುವಂತೆ ಮಾಡಿದ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೋಗಳು ಹರಿದಾಡುತ್ತಿರುವುದಾಗಿ ವರದಿಯಾಗಿದೆ.

    MUMBAI POLICE

    ಎರಡು ದಿನಗಳ ಹಿಂದೆಯೇ ಮಹಾರಾಷ್ಟçದ ಔರಂಗಾಬಾದ್‌ನಲ್ಲಿ ಬೃಹತ್ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದ ರಾಜ್ ಠಾಕ್ರೆ, ಡಬಲ್ ಪವರ್‌ನಲ್ಲಿ ಹನುಮಾನ್ ಚಾಲೀಸಾ ಪಠಿಸುವುದಾಗಿ ಎಚ್ಚರಿಕೆ ನೀಡಿದ್ದರು. ಇದರ ಔರಂಗಾಬಾದ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ಪ್ರತಿಯೊಬ್ಬರು ಪರಸ್ಪರ ಧರ್ಮವನ್ನು ಗೌರವಿಸಬೇಕು: ನಿತೀಶ್ ಕುಮಾರ್

    ಪೊಲೀಸರಿಗೆ ತಲೆನೋವು: ಮಸೀದಿಗಳ ಮೇಲಿರುವ ಧ್ವನಿವರ್ಧಕಗಳನ್ನು ತೆಗೆಯುವಂತೆ ಆಗ್ರಹಿಸಿದ್ದ ರಾಜ್ ಠಾಕ್ರೆ, ಅದಕ್ಕೆ ಮೇ 3 ಕೊನೆಯ ದಿನವೆಂದು ಗಡುವು ನೀಡಿದ್ದರು. ಅದು ಸಾಧ್ಯವಾಗದಿದ್ದರೆ, ಮಸೀದಿಗಳ ಎದುರೇ ಹನುಮಾನ್ ಚಾಲೀಸಾ ಪಠಣ ಆರಂಭಿಸುವುದಾಗಿ ಘೋಷಿಸಿದ್ದರು. ಅದರ ಬೆನ್ನಲ್ಲೇ ಮಹಾರಾಷ್ಟ್ರ ಪೊಲೀಸರು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಬಗ್ಗೆ ತಲೆಕಡೆಸಿಕೊಂಡಿದ್ದಾರೆ.

    ಈ ನಡುವೆ ರಾಜ್ ಠಾಕ್ರೆ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ತಂದೆ ಬಾಳಾಸಾಹೇಬ್ ಠಾಕ್ರೆ ಅವರು ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ನಿಷೇಧಿಸುವಂತೆ ಒತ್ತಾಯಿಸಿದ್ದರ ಹಳೆಯ ವೀಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಬಂಧನದಲ್ಲಿರುವ ರಾಣಾ ದಂಪತಿ ನಿವಾಸದಲ್ಲಿ ಅಕ್ರಮ ಕಟ್ಟಡ – ಬಿಎಂಸಿ ನೋಟೀಸ್

    36 ಸೆಕೆಂಡ್‌ಗಳ ಈ ವೀಡಿಯೋನಲ್ಲಿ ಬಾಳಾ ಠಾಕ್ರೆ, ಧ್ವನಿವರ್ಧಕಗಳ ಬಳಕೆ ವಿರುದ್ಧ ಎಚ್ಚರಿಕೆ ನೀಡಿರುವುದು ಹಾಗೂ ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ತಡೆಯಲಾಗುತ್ತದೆ ಎಂದಿದ್ದಾರೆ.

    ಜಾಮೀನು ರಹಿತ ವಾರೆಂಟ್: 14 ವರ್ಷಗಳ ಹಿಂದಿನ ಪ್ರಕರಣದ ಸಂಬಂಧ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ನ್ಯಾಯಲಯವು ರಾಜ್ ಠಾಕ್ರೆ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಮುಂಬೈ ಪೊಲೀಸರು ಅಪರಾಧ ಕೃತ್ಯಗಳನ್ನು ತಡೆಯುವ ನಿಟ್ಟಿನಲ್ಲಿ ಸಿಆರ್‌ಪಿಸಿ ಸೆಕ್ಷನ್ ಅಡಿಯಲ್ಲಿ ಠಾಕ್ರೆ ಹಾಗೂ ನೂರಾರು ಮಂದಿಗೆ ನೋಟಿಸ್ ನೀಡಿದ್ದಾರೆ. ಅದರ ಬೆನ್ನಲ್ಲೇ ರಾಜ್ ಠಾಕ್ರೆ ಅವರ ಮುಂಬೈ ನಿವಾಸಕ್ಕೆ ಭದ್ರತೆ ಹೆಚ್ಚಿಸಲಾಗಿದೆ.

  • ಮಸೀದಿಯಿರುವ 100 ಮೀ. ಒಳಗೆ ಹನುಮಾನ್ ಚಾಲೀಸಾ ಪಠಿಸುವಂತಿಲ್ಲ: ಮಹಾರಾಷ್ಟ್ರ ಸರ್ಕಾರ

    ಮಸೀದಿಯಿರುವ 100 ಮೀ. ಒಳಗೆ ಹನುಮಾನ್ ಚಾಲೀಸಾ ಪಠಿಸುವಂತಿಲ್ಲ: ಮಹಾರಾಷ್ಟ್ರ ಸರ್ಕಾರ

    ಮುಂಬೈ: ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕಬೇಕು. ಇಲ್ಲದೇ ಇದ್ದರೆ ಹನುಮಾನ್ ಚಾಲೀಸಾ ಅನ್ನು ಪಠಿಸಲಾಗುತ್ತದೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ ನಾಯಕ ರಾಜ್‌ಠಾಕ್ರೆ ಒತ್ತಾಯಿಸಿದ ಬೆನ್ನಲ್ಲೇ ಮಹಾರಾಷ್ಟ್ರ ಮೈತ್ರಿ ಸರ್ಕಾರ ಕ್ರಮ ಕೈಗೊಳ್ಳಲು ಮುಂದಾಗಿದೆ.

    ರಾಜ್ಯ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್, ಮಹಾರಾಷ್ಟ್ರ ಪೊಲೀಸ್ ಮಹಾನಿರ್ದೇಶಕರು ಮತ್ತು ಮುಂಬೈ ಪೊಲೀಸ್ ಆಯುಕ್ತರು ಧ್ವನಿವರ್ಧಕಗಳ ಬಳಕೆಗೆ ಮಾರ್ಗಸೂಚಿ ಸಿದ್ಧಪಡಿಸಲಿದ್ದು, ಒಂದೆರಡು ದಿನಗಳಲ್ಲೇ ಹೊರಡಿಸಲಾಗುವುದು. ಅಲ್ಲದೆ ಮಸೀದಿಯ 100 ಒಳಗೆ ಹನುಮಾನ್ ಚಾಲೀಸಾ ಪಠಿಸುವಂತಿಲ್ಲ ಎಂದು ಆದೇಶಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರೌಡಿಗಳು ಸತ್ರೆ 25 ಲಕ್ಷ ರೂ. ಪರಿಹಾರ ಕೊಡ್ತೀರಾ, ಸಂತೋಷ್ ಪಾಟೀಲ್‍ಗೆ ಯಾಕಿಲ್ಲ: ಸಿ.ಎಂ.ಇಬ್ರಾಹಿಂ ಕಿಡಿ

    loudspeakers

    ರಾಜ್ಯದ ಪೊಲೀಸ್ ಮಹಾನಿರ್ದೇಶಕ ರಜನೀಶ್ ಸೇಠ್ ಮತ್ತು ಮುಂಬೈ ಸಿ.ಪಿ.ಸಂಜಯ್ ಪಾಂಡೆ ಅವರು, ಧ್ವನಿವರ್ಧಕಗಳ ಬಳಕೆಯ ಕುರಿತು ರಾಜ್ಯಕ್ಕೆ ಮಾರ್ಗಸೂಚಿಗಳನ್ನು ಸಿದ್ಧಪಡಿಸುತ್ತಿದ್ದಾರೆ. ಈ ಮಾರ್ಗಸೂಚಿಗಳನ್ನು ಒಂದು ಅಥವಾ ಎರಡು ದಿನಗಳಲ್ಲಿ ಹೊರಡಿಸಲಾಗುವುದು. ಎಲ್ಲರೂ ಅವುಗಳನ್ನು ಕಾರ್ಯಗತಗೊಳಿಸಬೇಕು ಎಂದು ಮಾಧ್ಯಮಗಳ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ಗೃಹ ಸಚಿವರಿಗೆ ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕೆ ಆಗಲ್ಲ: ಆರ್.ಧ್ರುವನಾರಾಯಣ್ 

    hanuman statue

    ರಾಜ್ ಠಾಕ್ರೆ ಅವರು ಮೇ 3ರ ಒಳಗೆ ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದು ಹಾಕಲು ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ಆಗ್ರಹಿಸಿದ್ದರು. ಇತರ ಸಮುದಾಯಗಳ ಸದಸ್ಯರು ದೊಡ್ಡ ಧ್ವನಿಯ ಮುಸ್ಲಿಮರ ಪ್ರಾರ್ಥನೆ ಕೇಳಲು ಇಷ್ಟವಿಲ್ಲ ಎಂದು ವಾದಿಸಿ ಮೇ 3ರ ನಂತರ ಹೆಚ್ಚಿನ ಪ್ರಮಾಣದಲ್ಲಿ ಮಸೀದಿಗಳ ಹೊರಗೆ ಹನುಮಾನ್ ಚಾಲೀಸಾ ಮೊಳಗಿಸುಸುವುದಾಗಿ ಬೆದರಿಕೆ ಹಾಕಿದ್ದರು. ಇದು ಶಿವಸೇನೆಗೆ ಸವಾಲಾಗಿ ಪರಿಣಮಿಸಿ ರಾಜ್‌ಠಾಕ್ರೆ ಎಂದು ಕರೆದಿತ್ತು.

  • ಕಾನೂನಿಗಿಂತ ಧರ್ಮ ದೊಡ್ಡದಲ್ಲ ಎಂಬುದನ್ನು ಮುಸ್ಲಿಮರು ಅರಿಯಬೇಕು: ರಾಜ್‌ ಠಾಕ್ರೆ

    ಕಾನೂನಿಗಿಂತ ಧರ್ಮ ದೊಡ್ಡದಲ್ಲ ಎಂಬುದನ್ನು ಮುಸ್ಲಿಮರು ಅರಿಯಬೇಕು: ರಾಜ್‌ ಠಾಕ್ರೆ

    ಮುಂಬೈ: ಶಿವಸೇನೆ ಸೇನೆ ನಾಯಕ ಸಂಜಯ್ ರಾವತ್ ಅವರ ಆರೋಪಕ್ಕೆ ಕಿಡಿಕಾರಿರುವ ಎಂಎನ್‌ಎಸ್ ನಾಯಕ ರಾಜ್ ಠಾಕ್ರೆ ಅವರು, ಕಾನೂನಿಗಿಂತ ಧರ್ಮ ದೊಡ್ಡದಲ್ಲ ಎಂಬುದನ್ನು ಮುಸ್ಲಿಮರು ಅರ್ಥಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

    ನಮಗೆ ಮಹಾರಾಷ್ಟ್ರದಲ್ಲಿ ಗಲಭೆ ಬೇಡ. ಪ್ರಾರ್ಥನೆ ಸಲ್ಲಿಸುವುದನ್ನು ಯಾರೂ ವಿರೋಧಿಸುವುದಿಲ್ಲ. ಆದರೆ ಮುಸ್ಲಿಮರು ಇದನ್ನು ಧ್ವನಿವರ್ಧಕಗಳಲ್ಲಿ ಮಾಡಿದರೆ, ನಾವೂ ಪ್ರತಿಯಾಗಿ ಧ್ವನಿವರ್ಧಕಗಳನ್ನು ಬಳಸುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ದೇಶದಲ್ಲಿ ಹಿಜಬ್‌ಗೆ ಯಾವುದೇ ನಿಷೇಧವಿಲ್ಲ: ಕೇಂದ್ರ ಸಚಿವ ಮುಖ್ತರ್‌ ಅಬ್ಬಾಸ್‌

    Raj Thackeray

    ಕಾನೂನಿಗಿಂತ ಧರ್ಮ ದೊಡ್ಡದಲ್ಲ ಎಂಬುದನ್ನು ಮುಸ್ಲಿಮರು ಅರ್ಥಮಾಡಿಕೊಳ್ಳಬೇಕು. ಮೇ 3ರ ನಂತರ ಏನು ಮಾಡಬೇಕೆಂದು ನಾನು ನೋಡುತ್ತೇನೆ. ಅಷ್ಟರಲ್ಲಿ ಧ್ವನಿವರ್ಧಕಗಳನ್ನು ನಿಷೇಧಿಸದೇ ಇದ್ದರೆ ನಮ್ಮ ಪಕ್ಷವು ಮಸೀದಿಗಳ ಮುಂದೆ ಹನುಮಾನ್ ಚಾಲೀಸಾ ಪಠಿಸಬೇಕಾಗುತ್ತದೆ ಎಂದು ಗುಡುಗಿದ್ದಾರೆ.

    ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಅವರು ಮಸೀದಿಗಳಲ್ಲಿ ಧ್ವನಿವರ್ಧಕಗಳ ಮೇಲೆ ನಿಷೇಧ ಹೇರಲು ಒತ್ತಾಯಿಸುತ್ತಿರುವಂತೆಯೇ, ಅವರನ್ನು ಆಡಳಿತ ಪಕ್ಷವಾಗಿರುವ ಶಿವಸೇನೆ ಹಿಂದೂ ಓವೈಸಿ ಎಂದು ಕರೆದಿದ್ದು, ಹೊಸ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಹನುಮಾನ್ ಮೆರವಣಿಗೆಗೆ ಪುಷ್ಪವೃಷ್ಟಿ ಸುರಿಸಿದ ಮುಸ್ಲಿಮರು

    `ಮಹಾರಾಷ್ಟ್ರದಲ್ಲಿ ಶಾಂತಿಗೆ ಧಕ್ಕೆ ತರುವ ಪ್ರಯತ್ನಗಳು ನಡೆದಿವೆ. ಆದರೆ ಇಲ್ಲಿನ ಜನರು ಮತ್ತು ಪೊಲೀಸರು ಶಾಂತಿ ಕಾಪಾಡಿದ್ದಾರೆ. ಆದರೆ ಹಿಂದೂ ಓವೈಸಿಯಂಥವರು (ರಾಜ್ ಠಾಕ್ರೆ) ರಾಮ-ಹನುಮನ ಹೆಸರಿನಲ್ಲಿ ಗಲಭೆ ಎಬ್ಬಿಸುವ ಕೆಲಸ ಮಾಡುತ್ತಿದ್ದಾರೆ. ಅದಕ್ಕೆ ನಾವು ಅವಕಾಶ ನೀಡುವುದಿಲ್ಲ’ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಪ್ರತಿಕ್ರಿಯಿಸಿದ್ದರು.

    `ನಾನು ಯಾರ ಹೆಸರನ್ನೂ ತೆಗೆದುಕೊಂಡಿಲ್ಲ. ಯುಪಿ ಚುನಾವಣೆಯಲ್ಲಿ ಗೆಲ್ಲಲು ಎಐಎಂಐಎಂನ ಓವೈಸಿ ಬಿಜೆಪಿಗೆ ಮಾಡಿದ ಕೆಲಸವನ್ನೇ ಮಹಾರಾಷ್ಟ್ರದ ಹೊಸ ಹಿಂದೂ ಓವೈಸಿಯಿಂದ ಬಿಜೆಪಿ ಕೇಳುತ್ತಿದೆ’ ಎಂದು ರಾವುತ್ ಕಿಡಿಕಾರಿದ್ದರು.