Tag: Harangi Reservoir

  • ಹಾರಂಗಿ ಸೇತುವೆ ನಿರ್ಮಾಣದಿಂದ ದಶಕಗಳ ಸಮಸ್ಯೆಗೆ ಪರಿಹಾರ; 36.50 ಕೋಟಿ ವೆಚ್ಚದಲ್ಲಿ ಕಮಾನು ಬ್ರಿಡ್ಜ್ ನಿರ್ಮಾಣ

    ಹಾರಂಗಿ ಸೇತುವೆ ನಿರ್ಮಾಣದಿಂದ ದಶಕಗಳ ಸಮಸ್ಯೆಗೆ ಪರಿಹಾರ; 36.50 ಕೋಟಿ ವೆಚ್ಚದಲ್ಲಿ ಕಮಾನು ಬ್ರಿಡ್ಜ್ ನಿರ್ಮಾಣ

    – 110 ಮೀ. ಉದ್ದದ ಕಮಾನು ಸೇತುವೆಗೆ ನೀಲನಕ್ಷೆ ಸಿದ್ಧ

    ಮಡಿಕೇರಿ: ಪ್ರತಿ ಮಳೆಗಾಲ ಬಂದ್ರೆ ಸಾಕು ಕೊಡಗಿನ ಹಾರಂಗಿ ಜಲಾಶಯದಿಂದ (Harangi Dam) ನೀರು ಬಿಡುಗಡೆ ಮಾಡಿದ್ರೆ ಸಾಕು ಹತ್ತಾರು ಹಳ್ಳಿಗಳಿಗರ ಸಂಪರ್ಕ ಕಲ್ಪಿಸುವ ಕೇಳ ಸೇತುವೆ ಮುಳುಗಡೆಯಾಗುತ್ತದೆ. ಇದರಿಂದಾಗಿ ಗ್ರಾಮೀಣ ಭಾಗದ ಜನರು ಹತ್ತಾರು ಕಿಲೋ ಮೀಟರ್ ಸುತ್ತಿ ಬಳಸಿಕೊಂಡು ಹೋಗುವ ಪರಿಸ್ಥಿತಿ ಎದುರಾಗುತ್ತದೆ. ಹೀಗಾಗಿ ಹಲವಾರು ವರ್ಷಗಳಿಂದ ಈ ಗ್ರಾಮದ ನೂರಾರು ಕುಟುಂಬಗಳು ಕೇಳ ಸೇತುವೆಯನ್ನು ಮೇಲ್ದರ್ಜೆಗೆ ಏರಿಸಬೇಕು ಎಂದು ಪ್ರತಿ ಸರ್ಕಾರ ಬಂದಾಗಲೂ ಮನವಿ ಮಾಡುತ್ತಿದ್ರು. ಇದೀಗಾ ಗ್ರಾಮಸ್ಥರ ಮನವಿಯನ್ನ ಆಲಿಸಿರುವ ಸರ್ಕಾರ ದಶಕಗಳ ಸಮಸ್ಯೆಗೆ ಪರಿಹಾರ ನೀಡಿದೆ.

    ಹೌದು. ಕೊಡಗಿನಲ್ಲಿ ಮಳೆಗಾಲ ಬಂದ್ರೆ ಸಾಕು ನಾನಾ ಅವಾಂತರಗಳು ಕೊಡಗು ಜಿಲ್ಲೆ ಸಾಕ್ಷಿಯಾಗುತ್ತದೆ. ಅದರಲ್ಲೂ ಕೊಡಗಿನ ಏಕೈಕ ಹಾರಂಗಿ ಜಲಾಶಯದಿಂದ ಹೆಚ್ಚುವರಿಯಾಗಿ ನೀರನ್ನು ಕಾವೇರಿ ನದಿಗೆ ಹರಿಸಿದ್ರೆ ಸಾಕು ಹಾರಂಗಿ ಹಾಗೂ ಸೋಮವಾರಪೇಟೆ ತಾಲ್ಲೂಕಿಗೆ ಸಂಪರ್ಕ ಕಲ್ಪಿಸುವ ಸೇತುವೆ ಸಂಪೂರ್ಣ ಮುಳುಗಡೆಯಾಗುತ್ತದೆ. ಹೀಗಾಗಿ ಸುತ್ತಮುತ್ತಲಿನ ಪ್ರದೇಶದಲ್ಲಿರುವ ಗ್ರಾಮೀಣ ಭಾಗದ ಜನರು ಊರಿನಿಂದ ಹೋರ ಬರಲು ಸಾಧ್ಯವಾಗದೇ ತಮ್ಮ ತಮ್ಮ ಊರುಗಳಲ್ಲೇ ಇರುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಕುಶಾಲನಗರ ಸಮೀಪದ ಹಾರಂಗಿ ಜಲಾಶಯದಿಂದ ನೀರು ಬಿಟ್ಟರೆ ಅಣೆಕಟ್ಟು ಎದುರಿನ ಸೇತುವೆ ಮುಳುಗಡೆಗೊಂಡು ಹಲವು ಗ್ರಾಮಗಳು ಸಂಪರ್ಕ ಕಡಿದುಕೊಳ್ಳುತ್ತಿತ್ತು. ಹಾರಂಗಿ- ಸೋಮವಾರಪೇಟೆ ರಸ್ತೆ ಕಡಿತವಾಗುವ ಹಿನ್ನೆಲೆ ಈ ಭಾಗದ ಜನರ ಓಡಾಡಕ್ಕೆ ಅನಾನುಕೂಲವಾಗುತ್ತಿತ್ತು. ಇದೀಗ ಇದಕ್ಕೆ ಶಾಶ್ವತ ಪರಿಹಾರ ಒದಗಿಸಲು ಸರ್ಕಾರ ಮುಂದಾಗಿದೆ.

    ಇನ್ನೂ ಹಾರಂಗಿ, ಯಡವನಾಡು, ಹುದುಗೂರು ಮತ್ತಿತರ ಗ್ರಾಮಗಳು ಹಾರಂಗಿಯಿಂದ ನೀರು ಬಿಡುಗಡೆಯಾದರೆ ಸಂಪರ್ಕ ಕಡಿತಗೊಂಡು ಸಂಕಷ್ಟಕ್ಕೆ ಸಿಲುಕುತ್ತಿದ್ದವು. ಜಲಾಶಯದಿಂದ 14 ಸಾವಿರ ಕ್ಯುಸೆಕ್ ಪ್ರಮಾಣದ ನೀರು ಹೊರಬಿಟ್ಟರೆ ಈ ಸೇತುವೆಯ ಮೇಲೆ ಹರಿಯುತ್ತದೆ. ಅಲ್ಲದೆ, ಸೇತುವೆಯ ಎರಡೂ ಕಡೆ ಯಾವುದೇ ರಕ್ಷಣಾ ವ್ಯವಸ್ಥೆ ಇಲ್ಲದ ಕಾರಣ ಸಂಚಾರ ಅಪಾಯಕಾರಿ. ಇತ್ತಿಚಿನ ಕೆಲ ವರ್ಷಗಳ ಹಿಂದೆ ನೀರು ಹರಿಯುವ ಸಂದರ್ಭ ಸೇತುವೆ ದಾಟಲು ಹೋದ ಹಸುಗಳು ಕೊಚ್ಚಿ ಹೋದ ಘಟನೆ ನಡೆದಿತ್ತು. ಹೀಗಾಗಿ ನೂತನ ಸೇತುವೆ ನಿರ್ಮಿಸಲು ನೀರಾವರಿ ನಿಗಮದಿಂದ ಯೋಜನೆ ಸಿದ್ಧವಾಗಿದೆ.

    ಒಟ್ನಲ್ಲಿ ಪ್ರತಿ ಮಳೆಗಾಲ ಬಂದರೆ ಸಾಕು ಹಾರಂಗಿ ಜಲಾಶಯದ ಸುತ್ತಮುತ್ತಲಿನ ಹತ್ತಾರು ಹಳ್ಳಿಗಳ ಜನರು ದಿಗ್ಬಂಧನಕ್ಕೆ ಒಳಗಾಗುತ್ತಿದ್ರು. ಇದೀಗಾ ನೂತನ ಸೇತುವೆ ನಿರ್ಮಾಣಕ್ಕೆ ಸರ್ಕಾರ ಅಸ್ತು ಎಂದಿರುವುದರಿಂದ ಗ್ರಾಮೀಣ ಭಾಗದ ಜನರು ಅದಷ್ಟು ಬೇಗಾ ಕಾಮಗಾರಿ ನಡೆಸಿ ನಿರ್ಭಯವಾಗಿ ಓಡಾಟ ನಡೆಸಲು ಅವಕಾಶ ಮಾಡಿಕೋಡಬೇಕು ಎಂದು ಮನವಿ ಮಾಡಿದ್ದಾರೆ.

  • ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ – ಹಾರಂಗಿ ಜಲಾಶಯದಿಂದ 11,800 ಕ್ಯುಸೆಕ್ ನೀರು ಹೊರಕ್ಕೆ

    ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ – ಹಾರಂಗಿ ಜಲಾಶಯದಿಂದ 11,800 ಕ್ಯುಸೆಕ್ ನೀರು ಹೊರಕ್ಕೆ

    ಮಡಿಕೇರಿ: ಕೊಡಗು (Kodagu) ಜಿಲ್ಲೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರಾಕಾರ ಮಳೆ (Rain) ಸುರಿಯುತ್ತಿದೆ. ಕಳೆದ ರಾತ್ರಿಯಿಂದ ಒಂದೇ ಸಮನೇ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯ ನದಿ, ತೊರೆಗಳು ಮತ್ತೆ ಉಕ್ಕಿ ಹರಿಯಲಾರಂಭಿಸಿವೆ. ಕ್ಷಣ ಕ್ಷಣಕ್ಕೂ ಒಳಹರಿವಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆ ಹಾರಂಗಿ ಜಲಾಶಯದಿಂದ (Harangi Dam) ಕಾವೇರಿ ನದಿಗೆ (Cauvery River) 11,800 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ.

    ಅಲ್ಲದೇ ಇಂದು (ಸೋಮವಾರ) ಬೆಳಗ್ಗೆ ಕೊಡಗಿನ ಅಲ್ಲಲ್ಲಿ ಸುರಿದ ಭಾರೀ ಮಳೆಯಿಂದ ಹಾರಂಗಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ದಿಢೀರ್ ಏರಿಕೆ ಕಂಡು ಬಂದಿದೆ. ಬೆಳಗ್ಗೆ 8 ಗಂಟೆ ಹೊತ್ತಿಗೆ 2,362 ಕ್ಯುಸೆಕ್ ಇದ್ದ ಒಳ ಹರಿವು 11 ಗಂಟೆಯ ವೇಳೆಗೆ 7,800 ಕ್ಯುಸೆಕ್‌ಗೆ ಏರಿಕೆಯಾಗಿದೆ. ಈ ಹಿನ್ನೆಲೆ ಜಲಾಶಯದ ಸುರಕ್ಷಿತ ದೃಷ್ಟಿಯಿಂದ ಮಧ್ಯಾಹ್ನದ ಬಳಿಕ ಕಾವೇರಿ ನದಿಗೆ ನೀರನ್ನು ಹೊರಬಿಡಲಾಗುತ್ತಿದೆ. ಇದನ್ನೂ ಓದಿ: ಗೌರಿ ಹಬ್ಬದ ದಿನ ಸಿಎಂ ಗಂಗೆ ಪೂಜೆ, ಎತ್ತಿನಹೊಳೆ ಯೋಜನೆ ನೀರು ಬಿಡುಗಡೆ: ಡಿಕೆಶಿ

    ನದಿಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಅಲ್ಲದೇ ಜಿಲ್ಲೆಯಾದ್ಯಂತ ಮಳೆ ಅರ್ಭಟ ಮುಂದುವರೆಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಇದನ್ನೂ ಓದಿ: ಜಮ್ಮು ಸೇನಾ ನೆಲೆಯ ಮೇಲೆ ಉಗ್ರರ ದಾಳಿ – ಯೋಧನಿಗೆ ಗಾಯ

  • ನೃತ್ಯದಲ್ಲಿ ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಕನಸು ಕಂಡಿದ್ದ ಬಾಲಕ ಏಡಿ ಹಿಡಿಯಲು ಹೋಗಿ ನೀರು ಪಾಲು

    ನೃತ್ಯದಲ್ಲಿ ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಕನಸು ಕಂಡಿದ್ದ ಬಾಲಕ ಏಡಿ ಹಿಡಿಯಲು ಹೋಗಿ ನೀರು ಪಾಲು

    ಮಡಿಕೇರಿ: ನೃತ್ಯದ ಮೂಲಕ ಭಾರತ ದೇಶವನ್ನು ಪ್ರತಿನಿಧಿಸುವ ಕನಸು ಕಂಡಿದ್ದ ಬಾಲಕನೋರ್ವ ಬುಧವಾರ ನಾಲೆಯಲ್ಲಿ ಏಡಿ ಹಿಡಿಯಲು ಹೋಗಿ ನೀರು ಪಾಲದ ಘಟನೆ ಕೊಡಗು (Kodagu) ಜಿಲ್ಲೆಯ ಕುಶಾಲನಗರ ತಾಲೂಕಿನ ಹಾರಂಗಿ ಜಲಾಶಯದ (Harangi Reservoir) ನಾಲೆ ಬಳಿ ನಡೆದಿದೆ. ಅನಿತ್ ನಾಲೆಗೆ ಬಿದ್ದು ಮೃತಪಟ್ಟ ದುರ್ದೈವಿಯಾಗಿದ್ದಾನೆ.

    ಇಂದು ಬೆಳಗ್ಗೆ 8:30ರ ಸುಮಾರಿಗೆ ಬ್ಯಾಡಗೂಟ್ಟದಲ್ಲಿರುವ ದಿಡ್ಡಳ್ಳಿ ನಿರಾಶ್ರಿತರ ಕೇಂದ್ರದ ಬಳಿಯಿಂದ ಸ್ನೇಹಿತರೊಂದಿಗೆ ಶಾಲೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಹಾರಂಗಿ ನಾಲೆಯಲ್ಲಿ ಏಡಿಯೊಂದು ಅನಿತ್‌ಗೆ ಗೋಚರಿಸಿದೆ. ಈ ವೇಳೆ ಅನಿತ್ ತನ್ನ ಗೆಳೆಯರಿಗೆ ಏಡಿ ಹಿಡಿದುಕೊಂಡು ಬರುವೆ, ಸ್ವಲ್ಪ ಸಮಯ ಕಾಯಿರಿ ಎಂದು ನಾಲೆ ಸಮೀಪವೇ ಬಟ್ಟೆ, ಶಾಲಾ ಬ್ಯಾಗ್ ಇಟ್ಟು ಹೋಗಿದ್ದಾನೆ. ಆದರೆ ಆಕಸ್ಮಿಕವಾಗಿ ಕಾಲು ಜಾರಿ ನಾಲೆಯಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ಅನಿತ್ ಸ್ನೇಹಿತರು ಆತನನ್ನು ರಕ್ಷಣೆ ಮಾಡಲು ಮುಂದಾದರೂ ಯಾವುದೇ ಪ್ರಯೋಜನವಾಗಿಲ್ಲ.

    ನಂತರ ಶಾಲಾ ಬಾಲಕರು ಹಾಗೂ ಗ್ರಾಮಸ್ಥರು ನಾಲೆಯಲ್ಲಿ ಅನಿತ್ ಕಣ್ಮರೆಯಾಗಿರುವ ವಿಷಯ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅನಿತ್‌ನ ಹುಡುಕಾಟಕ್ಕಾಗಿ ಹಾರಂಗಿ ಜಲಾಶಯದಿಂದ ನಾಲೆಗೆ ಬಿಟ್ಟಿರುವ ನೀರನ್ನು ಸ್ಥಗಿತಗೊಳಿಸಿದ್ದಾರೆ. ಅಗ್ನಿ ಶಾಮಕ ದಳದವರು ಬಾಲಕನಿಗಾಗಿ ಶೋಧ ಕಾರ್ಯ ನಡೆಸಿ ಬಾಲಕನ ಮೃತದೇಹವನ್ನು ಹೊರತೆಗೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕುಶಾಲನಗರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಚೇಸ್ ಮಾಡಿ 1 ಕೋಟಿ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡ ಪೊಲೀಸರು!

    ನಾಲೆಯಲ್ಲಿ ಬಿದ್ದು ಮೃತಪಟ್ಟ ಬಾಲಕ ಪ್ರತಿಭಾವಂತ ವಿದ್ಯಾರ್ಥಿಯಾಗಿದು, ನೃತ್ಯ ತರಬೇತಿಯಲ್ಲೂ ಹೆಸರು ಮಾಡಿದ್ದ. ಇತ್ತೀಚೆಗೆ ಚೀನಾದಲ್ಲಿ ನಡೆದ ನ್ಯಾಷನಲ್ ಲೆವೆಲ್ ಬುಕ್ ಆಫ್ ರೆಕಾರ್ಡ್‌ನಲ್ಲಿ ಭಾಗವಹಿಸಿದ್ದ. ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಥೈಲೆಂಡ್‌ನಲ್ಲಿ ನಡೆಯಲಿರುವ ಇಂಟರ್ ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಗೂ ಭಾರತ ತಂಡದಿಂದ ಭಾಗವಹಿಸಲು ಸಿದ್ಧತೆ ನಡೆಸುತ್ತಿದ್ದ. ಇದನ್ನೂ ಓದಿ: ಬ್ಯಾಂಕಾಕ್‌ನಿಂದ ಬೆಂಗ್ಳೂರಿಗೆ ಸಾಗಿಸ್ತಿದ್ದ ಹೆಬ್ಬಾವು, ಉಡ, ಮೊಸಳೆ ಇನ್ನಿತರ ಪ್ರಾಣಿಗಳು ವಶ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಾರಂಗಿ ಜಲಾಶಯದಿಂದ 5,000 ಕ್ಯೂಸೆಕ್ ನೀರು ಕಾವೇರಿ ನದಿಗೆ ಬಿಡುಗಡೆ

    ಹಾರಂಗಿ ಜಲಾಶಯದಿಂದ 5,000 ಕ್ಯೂಸೆಕ್ ನೀರು ಕಾವೇರಿ ನದಿಗೆ ಬಿಡುಗಡೆ

    ಮಡಿಕೇರಿ: ಕೊಡಗು (Kodagu) ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯ (Harangi Reservoir) ಬಹುತೇಕ ಭರ್ತಿಯಾಗಿದೆ. ಜಲಾಶಯಕ್ಕೆ ಒಳಹರಿವು ಹೆಚ್ಚಾದ ಕಾರಣ ಜಲಾಶಯದ ಅಣೆಕಟ್ಟೆಯ 4 ಕ್ರೆಸ್ಟ್ ಗೇಟ್ ಗಳ ಮೂಲಕ ಶನಿವಾರ ಸಂಜೆ ಕಾವೇರಿ ನದಿಗೆ ನೀರು ಹರಿಸಲಾಗಿದೆ.

    ಮಳೆ ಹೆಚ್ಚಾದ ಕಾರಣ ಏಕಾಏಕಿ ಜಲಾಶಯಕ್ಕೆ 20,000 ಕ್ಯೂಸೆಕ್ ಪ್ರಮಾಣದ ನೀರು ಒಳಹರಿವು ಬಂದ ಹಿನ್ನೆಲೆಯಲ್ಲಿ ಹಾರಂಗಿ ನದಿಗೆ 5,000 ಕ್ಯೂಸೆಕ್ ನೀರು ಹರಿಸಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚುವರಿ ನೀರನ್ನು ಹರಿಸಲಾಗುವುದು ಎಂದು ಎಂಜಿನಿಯರ್‌ಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕೈಕೊಟ್ಟ ಮುಂಗಾರು – ಭೂಮಿ ಹದ ಮಾಡಿ ಕಾದು ಕುಳಿತ ಕೋಲಾರದ ರೈತರು

    ಶಾಸಕರಾದ ಡಾ.ಮಂಥರ್ ಗೌಡ ಅವರು ವಿಶೇಷ ಪೂಜೆ ಸಲ್ಲಿಸಿ ನೀರು ಬಿಡುಗಡೆಗೆ ಶನಿವಾರ ಚಾಲನೆ ನೀಡಿದ್ದಾರೆ. ಈ ಸಂದರ್ಭ ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರರಾದ ಪುಟ್ಟಸ್ವಾಮಿ ಉಪಸ್ಥಿತರಿದ್ದರು. ಇದನ್ನೂ ಓದಿ: ಆಲ್ಕೋಹಾಲಾದರೇನು? ಹಾಲಾದರೇನು? ಖಜಾನೆ ತುಂಬಬೇಕಷ್ಟೇ – ಬೆಲೆ ಏರಿಕೆ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

    ಇನ್ನೂ ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು, ಉತ್ತರಕನ್ನಡದಲ್ಲಿ ಒಂದೇ ದಿನ 277 ಮಿಲಿಮೀಟರ್ ಮಳೆ ಆಗಿದೆ. ಆಗುಂಬೆಯಲ್ಲಿ 163 ಮಿಲಿಮೀಟರ್ ಮಳೆ ಬಿದ್ದಿದೆ. ಕೊಡಗಿನಲ್ಲಿ ಉತ್ತಮ ಮಳೆ ಆಗ್ತಿದೆ. ಕೇರಳದ ವಯನಾಡಿನಲ್ಲಿ 153 ಮಿಲಿಮೀಟರ್ ವರ್ಷಧಾರೆಯಾಗಿದೆ. ಪರಿಣಾಮ ಕಾವೇರಿ ಕೊಳ್ಳದ ಜಲಾಶಯಗಳಿಗೆ ಒಳಹರಿವು ಹೆಚ್ಚುತ್ತಿದೆ. ಶನಿವಾರ ಕೆಆರ್‌ಎಸ್‌ಗೆ 7,900, ಕಬಿನಿಗೆ 7,000, ಹಾರಂಗಿಗೆ 20,000, ಹೇಮಾವತಿಗೆ 9,362 ಕ್ಯೂಸೆಕ್ ನೀರಿನ ಒಳಹರಿವು ಬಂದಿದೆ. ಹಾರಂಗಿ ಭರ್ತಿಗೆ ಕೆಲವೇ ಅಡಿ ಬಾಕಿ ಇರುವ ಕಾರಣ ಡ್ಯಾಂನ 2 ಕ್ರಸ್ಟ್ ಗೇಟ್ ಓಪನ್ ಮಾಡಲಾಗಿದೆ. 5 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗ್ತಿದೆ.

    KRS ನಿಂದ 10 ದಿನಗಳ ಮಟ್ಟಿಗೆ ನಾಲೆಗಳಿಗೆ ಇವತ್ತಿನಿಂದ ನೀರು ಹರಿಸಲಾಗುತ್ತಿದೆ. ಮತ್ತೊಂದೆಡೆ ಮಹಾರಾಷ್ಟ್ರದಲ್ಲಿ ಕೊಯ್ನಾ ಜಲಾನಯನ ಪ್ರದೇಶದಲ್ಲಿ 140 ಮಿಲಿಮೀಟರ್ ಮಳೆ ಆಗಿದ್ದು, ಕೃಷ್ಣಾನದಿಯ ಒಳಹರಿವೂ ಹೆಚ್ಚಾಗಿದೆ. ಆಲಮಟ್ಟಿಗೆ 83,000 ಕ್ಯೂಸೆಕ್ ಒಳಹರಿವಿದೆ. ದೂದ್‌ಗಂಗಾ ತುಂಬಿ ಹರಿದ ಪರಿಣಾಮ ಕಾರದಗಾ ಗ್ರಾಮದ ಬಂಗಾಲಿ ಬಾಬಾ ಮಂದಿರ ಎಂದಿನಂತೆ ಜಲಾವೃತಗೊಂಡಿದೆ. ಬೀದರ್‌ನ ಖತರಗಾಂವ್ ಸೇತುವೆ ಮುಳುಗಡೆಯಾಗಿದೆ. ಚಿಂಚೋಳಿಯ ಬೆನಕನಹಳ್ಳಿ ಜಲಾವೃತವಾಗಿದೆ.

    ಕಲಬುರಗಿಯಲ್ಲಿ 15 ಮನೆ ಕುಸಿದಿವೆ. ಯಾದಗಿರಿಯಲ್ಲಿ ಭೀಮಾನದಿ ಅಪಾಯದ ಮಟ್ಟ ಮೀರಿದ್ದು, ವೀರಾಂಜನೇಯ, ಕಂಗಳೇಸ್ವರ ದೇಗುಲ ಮುಳುಗಡೆ ಆಗಿವೆ. ಮಡಿಕೇರಿಯಲ್ಲಿ ಅಬ್ಬಿ ಫಾಲ್ಸ್ ಮತ್ತು ಮಾಂದಲ್‌ಪಟ್ಟಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಚಿಕ್ಕಮಗಳೂರಿನಲ್ಲಿ ಭದ್ರಾ ಅಬ್ಬರಕ್ಕೆ ಹೆಬ್ಬಾಳೆ ಸೇತುವೆ ಮುಳುಗಡೆ ಹಂತ ತಲುಪಿದೆ. ಹಾಸನದ ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತ ಉಂಟಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾಲ್ಕು ಗೇಟ್‍ಗಳ ಮೂಲಕ ಹಾರಂಗಿ ಜಲಾಶಯದಿಂದ ಹೆಚ್ಚುವರಿ ನೀರು ಹೊರಕ್ಕೆ

    ನಾಲ್ಕು ಗೇಟ್‍ಗಳ ಮೂಲಕ ಹಾರಂಗಿ ಜಲಾಶಯದಿಂದ ಹೆಚ್ಚುವರಿ ನೀರು ಹೊರಕ್ಕೆ

    ಮಡಿಕೇರಿ: ಕೊಡಗಿನಲ್ಲಿ ಧಾರಾಕಾರವಾಗಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯದಿಂದ ಹೆಚ್ಚುವರಿ ನೀರನ್ನು ಹೊರಕ್ಕೆ ಹರಿಸಲಾಗುತ್ತಿದೆ.

    ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಹಮ್ಮಿಯಾಲ, ಮುಕೋಡ್ಲು ಮಾದಾಪುರ ಸೇರಿದಂತೆ ಜಿಲ್ಲೆಯಾದ್ಯಂತ ಭಾನುವಾರದಿಂದ ಧಾರಾಕಾರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಲಾಶಯಕ್ಕೆ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಾಗಿದೆ. ಆದ್ದರಿಂದ ಮುಂಜಾಗೃತೆಯಿಂದ ಜಲಾಶಯದ ನಾಲ್ಕು ಕ್ರಸ್ಟ್ ಗೇಟ್‍ಗಳ ಮೂಲಕ ಹೆಚ್ಚುವರಿ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ.

    ಹಾರಂಗಿ ಜಲಾಶಯದಿಂದ 3,750 ಕ್ಯೂಸೆಕ್ ನದಿಗೆ ಹಾಗೂ 1,000 ಕ್ಯೂಸೆಕ್ ಪ್ರಮಾಣದ ನೀರನ್ನು ಕಾಲುವೆಗೆ ಬಿಡುಗಡೆ ಮಾಡಲಾಗಿದೆ. ಅಲ್ಲದೇ ಜಲಾಶಯದ ವ್ಯಾಪ್ತಿಯ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಇಲಾಖೆಯ ಅಧಿಕಾರಿಗಳು ಮನವಿ ಮಾಡಿದ್ದಾರೆ. ಭಾನುವಾರದಿಂದ ಸುರಿಯುತ್ತಿರುವ ಮಳೆಯ ಪರಿಣಾಮ ಹಾರಂಗಿಗೆ 3,009 ಕ್ಯೂಸೆಕ್ ನೀರಿನ ಒಳ ಹರಿವು ಹೆಚ್ಚಳವಾಗಿದೆ.

  • ಹಾರಂಗಿ ಜಲಾಶಯದಿಂದ 5 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ

    ಹಾರಂಗಿ ಜಲಾಶಯದಿಂದ 5 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ

    – ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸ್ನಾನಘಟ್ಟ ಮುಳುಗಡೆ ಸಾಧ್ಯತೆ

    ಮಡಿಕೇರಿ/ಮಂಗಳೂರು: ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಏಕೈಕ ಜಲಾಶಯ ಹಾರಂಗಿ ಬಹುತೇಕ ಭರ್ತಿಯಾಗಿದೆ.

    8.5 ಟಿಎಂಸಿ ಸಾಮರ್ಥ್ಯದ ಜಲಾಶಯಕ್ಕೆ 6.5 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಭಾರೀ ಮಳೆ ಬೀಳುತ್ತಿರುವುದರಿಂದ ಜಲಾಶಯಕ್ಕೆ 4,864 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಜಲಾಶಯದ ಭರ್ತಿಗೆ ಇನ್ನೂ ಎರಡು ಟಿಎಂಸಿ ಅಡಿ ನೀರು ಅಗತ್ಯವಿರುವಾಗಲೇ ಜಲಾಶಯದಿಂದ 5 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹಾರಿಸಲಾಗುತ್ತಿದೆ. ಸದ್ಯಕ್ಕೆ ಜಲಾಶಯದ ಮೂರು ಕ್ರೆಸ್ ಗೇಟ್‍ಗಳನ್ನು ತೆಗೆದು 5 ಸಾವಿರ ಕ್ಯೂಸೆಕ್ ನೀರನ್ನು ಜಲಾಶಯದಿಂದ ನದಿಗೆ ಹಾರಿಸಲಾಗುತ್ತಿದೆ.

    ಕಳೆದ ಎರಡು ವರ್ಷಗಳಲ್ಲೂ ಹಾರಂಗಿ ಜಲಾಶಯದಿಂದ ತಡವಾಗಿ ನೀರು ಹರಿಸಲಾಗಿತ್ತು. ಜೊತೆಗೆ ಕಾವೇರಿ ನದಿಯಲ್ಲೂ ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದರಿಂದ ಜಲಾಶಯದ ನೀರು ಸಹ ನದಿಗೆ ಒಮ್ಮೆಲೆ ಸೇರಿ ಪ್ರವಾಹ ಉಂಟಾಗಿತ್ತು. ಇದರಿಂದ ಹತ್ತಾರು ಬಡಾವಣೆಗಳ ಸಾವಿರಾರು ಮನೆಗಳು ಪ್ರವಾಹದ ನೀರಿನಲ್ಲಿ ಮುಳುಗಿದ್ದವು. ಹೀಗಾಗಿ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಈ ಬಾರಿ ಮುನ್ನೆಚ್ಚರಿಕೆ ಕ್ರಮವಾಗಿ ಜಲಾಶಯದಲ್ಲಿ ಭಾರೀ ನೀರು ಸಂಗ್ರಹವಾಗುವ ಮೊದಲೇ ನದಿಗೆ ನೀರು ಹರಿಸಿದ್ದಾರೆ.

    ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸ್ನಾನಘಟ್ಟ ಮುಳುಗಡೆ:
    ದಕ್ಷಿಣ ಕನ್ನಡ ಜಿಲ್ಲಾದ್ಯಂತ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಇಂದೂ ಮಳೆ ಮುಂದುವರೆದಿದೆ. ಮುಂಜಾನೆಯಿಂದಲೇ ಜಿಲ್ಲಾದ್ಯಂತ ಕತ್ತಲು ಆವರಿಸಿ ಗಾಳಿ ಮಳೆಯಾಗುತ್ತಿದೆ. ಜಿಲ್ಲೆಯ ಸುಬ್ರಹ್ಮಣ್ಯ ಸುಳ್ಯ, ಪುತ್ತೂರು, ಬೆಳ್ತಂಗಡಿಯಲ್ಲಿ ಹೆಚ್ಚಿನ ಮಳೆಯಾಗಿದೆ. ಪಶ್ಚಿಮ ಘಟ್ಟದಲ್ಲೂ ಹೆಚ್ಚಿನ ಮಳೆಯಾಗಿದ್ದು, ಜೀವನದಿಗಳಾದ ನೇತ್ರಾವತಿ, ಕುಮಾರಧಾರ, ಫಲ್ಗುಣಿ, ನಂದಿನಿ ನದಿಗಳಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ.

    ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸ್ನಾನಘಟ್ಟದಲ್ಲೂ ನೀರಿನ ಹರಿವು ಹೆಚ್ಚಳವಾಗಿದ್ದು, ಮಳೆ ಇದೇ ರೀತಿ ಮುಂದುವರಿದರೆ ಸ್ನಾನಘಟ್ಟ ಮುಳುಗಡೆಯಾಗುವ ಸಾಧ್ಯತೆ ಇದೆ. ಪುತ್ತೂರು ಹಾಗೂ ಪಾಣಾಜೆ ಸಂಪರ್ಕಿಸುವ ಚೇಳ್ಯಡ್ಕ ಸೇತುವೆ ಮುಳುಗಡೆಯಾಗಿದ್ದು, ಅಲ್ಲಿನ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ. ಇನ್ನೂ ನಾಲ್ಕು ದಿನಗಳ ಕಾಲ ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಮೂರು ಜಿಲ್ಲೆಯ ಮೀನುಗಾರರೂ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

  • ಹಾರಂಗಿಯಲ್ಲಿ ಹೂಳು- ಈ ಬಾರಿಯೂ ಮಳೆಗಾಲದಲ್ಲಿ ತಪ್ಪೋದಿಲ್ಲ ಗೋಳು!

    ಹಾರಂಗಿಯಲ್ಲಿ ಹೂಳು- ಈ ಬಾರಿಯೂ ಮಳೆಗಾಲದಲ್ಲಿ ತಪ್ಪೋದಿಲ್ಲ ಗೋಳು!

    ಮಡಿಕೇರಿ: 15 ದಿನಗಳಲ್ಲಿ ಕೊಡಗಿನಲ್ಲಿ ಮಳೆಗಾಲ ಶುರುವಾಗ ನಿರೀಕ್ಷೆ ಇದ್ದು, ಅಣೆಕಟ್ಟೆಗೆ ನೀರು ಹರಿದು ಬರಲಾರಂಭಿಸುವುದರಿಂದ ಕಾಮಗಾರಿ ನಡೆಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಹಿನ್ನೀರು ಪ್ರದೇಶದ ನಿವಾಸಿಗಳು ಈ ಬಾರಿಯೂ ಆತಂಕಗೊಂಡಿದ್ದಾರೆ. ಹಾರಂಗಿ ಜಲಾಶಯದ ಹೂಳೆತ್ತುವ ಉದ್ದೇಶಕ್ಕಾಗಿಯೇ 2019ರ ಬಜೆಟ್‍ನಲ್ಲೇ 130 ಕೋಟಿ ರೂ. ನೀಡಿದ್ದರೂ ಕೆಲಸ ಶುರು ಮಾಡದಿರುವುದು ಸಂಬಂಧಿಸಿದವರ ಬದ್ಧತೆಯನ್ನೇ ಪ್ರಶ್ನಿಸುವಂತಿದೆ.

    ನೀರಿನ ಸಂಗ್ರಹದ ಪ್ರಮಾಣದಲ್ಲಿ ಕುಸಿತ!: 2018ರ ಆಗಸ್ಟ್ 13, 14 ಹಾಗೂ 15ರಂದು ಹಾರಂಗಿ ಜಲಾನಯನ ಪ್ರದೇಶದಲ್ಲಿ ಬರುವ ಮಡಿಕೇರಿ, ಕಾಲೂರು, ಹೆಬ್ಬೆಟಗೇರಿ, ಮಕ್ಕಂದೂರು, ಮುಕ್ಕೋಡ್ಲು, ಹಟ್ಟಿಹೊಳೆ, ಹರದೂರು, ಹೇರೂರು ಭಾಗಗಳಲ್ಲಿ ಕುಂಭದ್ರೋಣ ಮಳೆ ಸುರಿದಿತ್ತು. ಈ ಬೆನ್ನಲ್ಲೇ ಬಹುತೇಕ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸಿ, ಬೆಟ್ಟದಿಂದ ಕುಸಿದು ಬಂದಿದ್ದ ಮಣ್ಣು ಹಾರಂಗಿ ಮತ್ತು ಅದರ ಉಪನದಿಗಳ ಮೂಲಕ ಜಲಾಶಯ ತಲುಪಿತ್ತು. ಹಾಗಾಗಿ ಜಲಾಶಯದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಹೂಳು ನಿಂತಿದ್ದರಿಂದ ನೀರಿನ ಸಂಗ್ರಹ ಪ್ರಮಾಣದಲ್ಲಿ ಕುಸಿತವಾಗಿದೆ.

    ಅಂದಾಜು 1 ಟಿಎಂಸಿಗೂ ಅಧಿಕ ಹೂಳಿನ ಸಂಗ್ರಹ: ಕರ್ನಾಟಕ ಇಂಜಿನಿಯರ್ ರಿಸರ್ಚ್ ಸ್ಟೇಷನ್ ಒಪ್ಪಿಸಿದ ಜವಾಬ್ದಾರಿ ಹಿನ್ನೆಲೆಯಲ್ಲಿ ಜಿಯೋ ಮೆರೈನ್ ಸೊಲ್ಯೂಷನ್ಸ್ ಪ್ರೈ. ಲಿಮಿಟೆಡ್ ಸಂಸ್ಥೆಯ 8 ಮಂದಿ ತಜ್ಞರ ತಂಡ 2019ರ ಫೆಬ್ರವರಿಯಲ್ಲಿ ಬಾತಿಮೆಟ್ರಿಕ್ ಸರ್ವೆ ಮತ್ತು ಹೈಡ್ರೋಗ್ರಾಫಿಕ್ ಸರ್ವೆ ಎನ್ನುವ ವಿಧಾನಗಳ ಮೂಲಕ ಹಿನ್ನೀರಿನಲ್ಲಿ ವಿಸ್ತೃತ ಅಧ್ಯಯನ ನಡೆಸಿ ಹೂಳಿನ ಅಂದಾಜು ಸಮೀಕ್ಷೆ ನಡೆಸಿತ್ತು. ಇವರ ಪ್ರಕಾರ 8.5 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯದ ಹಾರಂಗಿ ಜಲಾಶಯದಲ್ಲಿ ಅಂದಾಜು 1 ಟಿಎಂಸಿಗೂ ಅಧಿಕ ಹೂಳಿನ ಸಂಗ್ರಹ ಇದೆ. ಈ ಬಾರಿಯೂ ಹೂಳು ತೆಗೆಯದೆ ಇರುವ ಕಾರಣ ಹಾರಂಗಿ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಗ್ರಾಮಸ್ಥರಿಗೆ ಮತ್ತೆ ಆಂತಕ ವಾತಾವರಣ ಮೂಡಿದೆ.

  • ಬೇಸರ ಕಳೆಯೋಕೆ ಗಾಳ ಹಾಕಿದ್ರು- 38 ಕೆ.ಜಿ ಮೀನು ಸಿಕ್ತು

    ಬೇಸರ ಕಳೆಯೋಕೆ ಗಾಳ ಹಾಕಿದ್ರು- 38 ಕೆ.ಜಿ ಮೀನು ಸಿಕ್ತು

    ಮಡಿಕೇರಿ: ಬೇಸರವಾಗಿದೆ ಎಂದು ಮೀನು ಹಿಡಿಯಲು ಹೋದವರಿಗೆ ಆಶ್ಚರ್ಯ ಕಾದಿತ್ತು. ಗಾಳಕ್ಕೆ ದೊಡ್ಡ ಮೀನು ಬಿದ್ದಿದ್ದು, ಮೀನು ನೋಡಿ ಅಲ್ಲಿನ ಜನ ನಿಬ್ಬರಗಾಗಿದ್ದಾರೆ.

    ಕೊಡಗು ಜಿಲ್ಲೆಯ ಕುಶಾಲನಗರ ಸಮೀಪದ ಹಾರಂಗಿ ಜಲಾಶಯದ ಹಿನ್ನೀರಿಗೆ ಸಮೀಪವಿರುವ ನಾಕೂರು ಶಿರಂಗಾಲ ಗ್ರಾಮದ ಯುವಕರು ಟೈಂ ಪಾಸ್‍ಗಾಗಿ ಮೀನು ಹಿಡಿಯಲು ಹೋಗಿದ್ದಾರೆ. ಈ ವೇಳೆ ಹಿನ್ನೀರಿನಲ್ಲಿ ಗಾಳ ಹಾಕಿ ಕುಳಿತಿದ್ದಾರೆ. ಗಾಳವನ್ನು ಯಾರೋ ಮನುಷ್ಯರು ಎಳೆಯುತ್ತಿರುವಂತೆ ಬಾಸವಾಗಿದೆ. ಬಳಿಕ ಮೂವರು ಯುವಕರು ಸೇರಿ ನಿಧಾನವಾಗಿ ಗಾಳ ಎಳೆದಿದ್ದಾರೆ. ಆದರೆ ಯುವಕರಿಗೆ ಅಚ್ಚರಿ ಆಗುವಂತೆ ಬರೋಬ್ಬರಿ 38 ಕೆ.ಜಿ ತೂಕದ ಕಾಟ್ಲಾ ಜಾತಿಯ ಮೀನು ಸೆರೆ ಸಿಕ್ಕಿದೆ.

    ಲಾಕ್‍ಡೌನ್ ನಡುವೆ ಬೇಸರ ಕಳೆಯೋಕೆಂದು ಹತ್ತಿರದ ಹಳ್ಳಿಯ ಯುವಕರು ಜಲಾಶಯದ ಹಿನ್ನೀರಿನ ಬಳಿ ತೆರಳಿದ್ದರು. ಹಾಕಿದ ಗಾಳಕ್ಕೆ ಬರೋಬ್ಬರಿ 38 ಕೆ.ಜಿ ತೂಕದ ಭಾರೀ ಗಾತ್ರದ ಮೀನು ಬೀದಿದ್ದು, ಗಾಳಕ್ಕೆ ಬಿದ್ದ ಮೀನು ಕಂಡು ಯುವಕರು ಅಚ್ಚರಿಗೊಳಗಾಗಿದ್ದಾರೆ. ಆದರೆ ಸರಿಯಾದ ಬೇಟೆಯನ್ನೇ ಆಡಿದ್ದಾರೆ.

  • ಮಾಧ್ಯಮದವರನ್ನ ಹೊರಗಿಟ್ಟು ಸಭೆ ನಡೆಸಿದ ಎಚ್‍ಡಿಕೆ

    ಮಾಧ್ಯಮದವರನ್ನ ಹೊರಗಿಟ್ಟು ಸಭೆ ನಡೆಸಿದ ಎಚ್‍ಡಿಕೆ

    ಮಡಿಕೇರಿ: ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದು, ಸಭೆಗೆ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಲಾಗಿತ್ತು.

    ಹಾರಂಗಿ ಡ್ಯಾಂಗೆ ಬಾಗಿನ ಅರ್ಪಿಸಿ, ಬಳಿಕ ಕುಮಾರಸ್ವಾಮಿ ಸಭೆ ನಡೆಸಿ, ಕೊಡಗು ಜಿಲ್ಲೆಯ ಸಮಸ್ಯೆಗಳ ಬಗ್ಗೆ ಚರ್ಚಿಸಿದರು. ಸಿಎಂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಸಾಥ್ ನೀಡಿದರು.

    ಸಭೆಗೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ, ಕೊಡಗಿನ ಮಳೆಹಾನಿ ಪರಿಸ್ಥಿತಿ ತಿಳಿದು ಸ್ಪಂದಿಸಲು ಬಂದಿದ್ದೇನೆ. 35 ವರ್ಷಗಳ ಬಳಿಕ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಜಿಲ್ಲೆಯ ಜಲಾಶಯ, ಜಲಪಾತಗಳು ಉಕ್ಕಿ ಹರಿಯುತ್ತಿವೆ. ಆದರೆ ಮಳೆಯಿಂದ ಜಿಲ್ಲೆಯ ಜನತೆ ಸಂಕಷ್ಟಕ್ಕೆ ಸಿಲುಕಿರೋದು ಗಮನಕ್ಕೆ ಬಂದಿದ್ದು, ನಾಡಿನ ಜನರಿಗೆ ನೀರುಣಿಸುವ ಕೊಡಗಿನ ಜನರ ಕಷ್ಟಗಳಿಗೆ ಸರ್ಕಾರ ಸ್ಪಂದಿಸಲಿದೆ. ವಿದ್ಯುತ್ ಸಂಪರ್ಕ ಕಡಿತ ಹಿನ್ನೆಲೆ ಪಕ್ಕದ ಮೈಸೂರು, ಹಾಸನ ಜಿಲ್ಲೆಯ ಸಿಬ್ಬಂದಿ ನಿಯೋಜಿಸಲಾಗಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.