Tag: Harappanahalli

  • ಸಿದ್ದರಾಮಯ್ಯಗೆ ಬೆಂಬಲ ಸೂಚಿಸಿರುವ ಪಕ್ಷೇತರ ಅಭ್ಯರ್ಥಿ

    ಸಿದ್ದರಾಮಯ್ಯಗೆ ಬೆಂಬಲ ಸೂಚಿಸಿರುವ ಪಕ್ಷೇತರ ಅಭ್ಯರ್ಥಿ

    ಬೆಂಗಳೂರು: ವಿಜಯನಗರ (Vijayanagara) ಜಿಲ್ಲೆಯ ಹರಪನಹಳ್ಳಿ (Harapanahalli) ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎಂಪಿ ಲತಾ ಮಲ್ಲಿಕಾರ್ಜುನ್ (MP Latha Mallikarjun) ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ (Siddaramaiah) ಬೆಂಬಲ ಸೂಚಿಸಿದ್ದಾರೆ.

    ರಾಜ್ಯ ವಿಧಾನಸಭಾ ಚುನಾವಣೆಗೆ (Election) ಕಾಂಗ್ರೆಸ್‌ನಿಂದ (Congress) ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಲತಾ ಮಲ್ಲಿಕಾರ್ಜುನ್ ಬಂಡಾಯವೆದ್ದು, ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಅಷ್ಟೇ ಅಲ್ಲದೇ ಅಲ್ಲಿನ ಹಾಲಿ ಶಾಸಕರಾಗಿದ್ದ ಬಿಜೆಪಿಯ ಜಿ.ಕರುಣಾಕರ ರೆಡ್ಡಿ ಅವರನ್ನು ಸೋಲಿಸಿ ಭರ್ಜರಿ ಗೆಲುವು ದಾಖಲಿಸಿದ್ದರು.

    ಇದೀಗ ಪತಿ ಮಲ್ಲಿಕಾರ್ಜುನ ಜೊತೆ ಸೇರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಅಷ್ಟೇ ಅಲ್ಲದೇ ಕೆಲಕಾಲ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿದ ಲತಾ ಮಲ್ಲಿಕಾರ್ಜುನ್, ಸಿದ್ದರಾಮಯ್ಯ ಅವರಿಗೆ ಬೆಂಬಲ ನೀಡಿದ್ದಾರೆ. ಇದನ್ನೂ ಓದಿ: ಆಟೋ ರಿಕ್ಷಾ, ಖಾಸಗಿ ಬಸ್ ಡಿಕ್ಕಿ – 6 ಮಹಿಳೆಯರು ಸಾವು, ನಾಲ್ವರಿಗೆ ಗಾಯ

    ಕಾಂಗ್ರೆಸ್‌ನ ಹಿರಿಯ ನಾಯಕ ಮಾಜಿ ಡಿಸಿಎಂ ಎಂಪಿ ಪ್ರಕಾಶ್ ಪುತ್ರಿಯಾಗಿರುವ ಎಂಪಿ ಲತಾ ಮಲ್ಲಿಕಾರ್ಜುನ್‌ಗೆ ಚುನಾವಣಾ ಫಲಿತಾಂಶ ಪ್ರಕಟವಾಗುವ ಮೊದಲೇ, ಸಿದ್ದರಾಮಯ್ಯ ಅವರು ಕರೆ ಮಾಡಿ ಮಾತನಾಡಿರುವ ವಿಚಾರ ಜಿಲ್ಲೆಯಲ್ಲಿ ಬಹಳ ಸದ್ದು ಮಾಡಿತ್ತು. ಇದನ್ನೂ ಓದಿ: ಮುಂದಿನ ಸಿಎಂ ಯಾರು? – ರಾತ್ರಿ 1:30ರವರೆಗೆ ನಡೆದಿದ್ದು ಏನು?

  • ಮಧ್ಯರಾತ್ರಿ ಬಳ್ಳಾರಿ ಜಿಲ್ಲೆಗೆ ಸೇರಿದ ಹರಪನಹಳ್ಳಿ ತಾಲೂಕು

    ಮಧ್ಯರಾತ್ರಿ ಬಳ್ಳಾರಿ ಜಿಲ್ಲೆಗೆ ಸೇರಿದ ಹರಪನಹಳ್ಳಿ ತಾಲೂಕು

    ದಾವಣಗೆರೆ: ಬಹುವರ್ಷಗಳ ಕಾಲ ನನೆಗುದಿಗೆ ಬಿದ್ದಿದ್ದ ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲೂಕು ಕೊನೆಗೂ ಬಳ್ಳಾರಿ ಜಿಲ್ಲೆಗೆ ಅಧಿಕೃತವಾಗಿ ಸೇರ್ಪಡೆಯಾಗಿದೆ.

    ಜಿಲ್ಲಾ ಪಂಚಾಯಿತಿ ಅಧಿಸೂಚನೆ ಹಾಗೂ ಗೆಜೆಟ್ ನೋಟೀಫಿಕೇಷನ್ ತಲುಪಿದ್ದು, ಮಧ್ಯರಾತ್ರಿ 12 ಗಂಟೆಗೆ ಹರಪನಹಳ್ಳಿ ತಾಲೂಕು ಅಧಿಕೃತವಾಗಿ ಬಳ್ಳಾರಿ ಜಿಲ್ಲೆಗೆ ಸೇರ್ಪಡೆಯಾಯ್ತು. 1997ರಿಂದ ದಾವಣಗೆರೆ ಜಿಲ್ಲೆಯ ಭಾಗವಾಗಿದ್ದ ಹರಪನಹಳ್ಳಿ ತಾಲೂಕು ಬಳ್ಳಾರಿ ಜಿಲ್ಲೆಗೆ ಸೇರ್ಪಡೆಯಾಗಬೇಕೆಂದು ಹೋರಾಟ ಸಹ ನಡೆಯುತ್ತಿತ್ತು.

    ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಹರಪನಹಳ್ಳಿ ತಾಲೂಕನ್ನು ಬಳ್ಳಾರಿ ಜಿಲ್ಲೆಗೆ ಸೇರ್ಪಡೆ ಮಾಡಿ ಆದೇಶ ಮಾಡಿತ್ತು. ಕೊನೆಗೂ ತಾಲೂಕು ಆಡಳಿತದ ಅಧಿಕೃತ ದಾಖಲೆ ಸಂಪೂರ್ಣ ಬಳ್ಳಾರಿಗೆ ಹಸ್ತಾಂತರ ಮಾಡಲಾಗಿದೆ ಎಂದು ದಾವಣಗೆರೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಮಾಹಿತಿ ನೀಡಿದ್ದಾರೆ.

    ಪ್ರೊ. ನಂಜುಡಪ್ಪ ವರದಿ ಪ್ರಕಾರ ಹರಪನಹಳ್ಳಿ ರಾಜ್ಯದ 3ನೇ ಅತಿ ಹಿಂದುಳಿದ ತಾಲೂಕು. ಬಳ್ಳಾರಿ ಜಿಲ್ಲೆಗೆ ಸೇರ್ಪಡೆಯಾಗಿದ್ದರಿಂದ 371(ಜೆ) ವಿಶೇಷ ಸ್ಥಾನಮಾನ ಈ ತಾಲೂಕಿನ ಜನರಿಗೆ ಲಭ್ಯವಾಗಲಿದೆ. ಈ ಮೊದಲು 1957 ರಿಂದ 1996ರ ವರೆಗೆ ಹರಪನಹಳ್ಳಿ ತಾಲೂಕು ಬಳ್ಳಾರಿ ಜಿಲ್ಲೆಯ ಅವಿಭಾಜ್ಯ ಅಂಗವಾಗಿತ್ತು. 1997ರಲ್ಲಿ ಮುಖ್ಯಮಂತ್ರಿಯಾಗಿದ್ದ ಜೆ.ಎಚ್.ಪಟೇಲ್ ರು ಬಳ್ಳಾರಿಯಿಂದ ಹರಪನಹಳ್ಳಿಯನ್ನು ಬೇರ್ಪಡಿಸಿ ದಾವಣಗೆರೆಗೆ ಸೇರಿಸಿದ್ದರು. ಇಂದು ಮತ್ತೆ ಹರಪ್ಪನಹಳ್ಳಿ ಬಳ್ಳಾರಿ ಜಿಲ್ಲೆಯ ಮಡಿಲು ಸೇರಿದೆ.

     

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಾಲೇಜಿನಲ್ಲಿ ಜಾಗವಿಲ್ಲದೆ ಶಾಮಿಯಾನದಡಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು

    ಕಾಲೇಜಿನಲ್ಲಿ ಜಾಗವಿಲ್ಲದೆ ಶಾಮಿಯಾನದಡಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು

    ದಾವಣಗೆರೆ: ಜಿಲ್ಲೆಯ ಹರಪ್ಪನಹಳ್ಳಿಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಕೂರಲು ಜಾಗವಿಲ್ಲದೇ ಶಾಮಿಯಾನ ಖುರ್ಚಿ ಬಾಡಿಗೆಗೆ ತಂದು ಪರೀಕ್ಷೆ ಬರೆಸಲಾಗಿದೆ.

    ಹರಪ್ಪನಹಳ್ಳಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬಿಎ, ಬಿಕಾಂ, ಬಿಎಸ್ಸಿ, ಬಿಬಿಎಂ ವಿದ್ಯಾರ್ಥಿಗಳು ಶಾಮಿಯಾನದಡಿ ಪರೀಕ್ಷೆ ಬರೆಯುತ್ತಿದ್ದಾರೆ. ಕಾಲೇಜಿನಲ್ಲಿ ಎಲ್ಲಾ ವಿಭಾಗ ಸೇರಿ 1,394 ವಿದ್ಯಾರ್ಥಿಗಳಿದ್ದಾರೆ. ಆದರೆ ಕಾಲೇಜಿನಲ್ಲಿ ಕೇವಲ ಏಳು ಕೊಠಡಿಗಳಿವೆ. ಇದರಿಂದಾಗಿ ಪರೀಕ್ಷೆ ಬರೆಯಲು ಜಾಗವಿಲ್ಲದಂತಾಗಿದೆ. ಇದನ್ನು ಮನಗಂಡ ಉಪನ್ಯಾಸಕರು ಪ್ರತಿನಿತ್ಯ ಊಟದ ಟೇಬಲ್, ಚೇರ್, ಶಾಮಿಯಾನಕ್ಕೆ 7,660 ರೂಪಾಯಿ ಬಾಡಿಗೆ ಕೊಟ್ಟು ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಸುತ್ತಿದ್ದಾರೆ.

    ವಿದ್ಯಾರ್ಥಿಗಳು ಇಷ್ಟೆಲ್ಲಾ ಕಷ್ಟ ಪಡುತ್ತಿದ್ದರು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಇದರ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ. ಎಷ್ಟೇ ಸಾರಿ ಕಾಲೇಜಿನ ಪರಿಸ್ಥಿತಿ ಕುರಿತು ತಿಳಿಸಿದರು ನಮಗೆ ಸ್ಪಂದಿಸುತ್ತಿಲ್ಲ ಎಂದು ಕಾಲೇಜಿನ ಉಪನ್ಯಾಸಕರು ಆರೋಪಿಸಿದ್ದಾರೆ.

    ಈ ಮಧ್ಯೆ ವಿದ್ಯಾರ್ಥಿಗಳು ಮಾತ್ರ ಶಾಮಿಯಾನದಡಿ ಕುಳಿತು ಮಳೆ ಬಂದ್ರೆ ಏನು ಗತಿ ಎನ್ನುವ ಭಯದಲ್ಲಿ ಪ್ರತಿನಿತ್ಯ ಪರೀಕ್ಷೆ ಬರೆಯುವಂತಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv