Tag: Haris Nalapad

  • ನಲಪಾಡ್‌ ಅಕಾಡೆಮಿಯಿಂದ ರಾಜಕಾಲುವೆ ಒತ್ತುವರಿ – ಪ್ರಭಾವಿಗಳ ಬಿಲ್ಡಿಂಗ್‌ ತೆರವಿಗೆ BBMP ಹಿಂದೇಟು!

    ನಲಪಾಡ್‌ ಅಕಾಡೆಮಿಯಿಂದ ರಾಜಕಾಲುವೆ ಒತ್ತುವರಿ – ಪ್ರಭಾವಿಗಳ ಬಿಲ್ಡಿಂಗ್‌ ತೆರವಿಗೆ BBMP ಹಿಂದೇಟು!

    ಬೆಂಗಳೂರು: ಒತ್ತುವರಿ ಕಾರಣದಿಂದಾಗಿ ರಾಜಧಾನಿ ಬೆಂಗಳೂರು ಮಳೆಗಾಲದಲ್ಲಿ (Bengaluru Rain) ನಾನಾ ಅವಾಂತರಗಳನ್ನು ಎದುರಿಸಿತು. ಈ ಬಗ್ಗೆ ವಿಪಕ್ಷಗಳು ಹಾಗೂ ಜನರ ಟೀಕಾಪ್ರಹಾರದಿಂದ ಎಚ್ಚೆತ್ತ ಸರ್ಕಾರ, ಕೊನೆಗೂ ʼಆಪರೇಷನ್‌ ಬುಲ್ಡೋಜರ್‌ʼ (Operation Bulldozer) ಪ್ರಾರಂಭಿಸಿದೆ. ಆದರೆ ಪ್ರಭಾವಿಗಳ ಒತ್ತುವರಿ ಬಿಲ್ಡಿಂಗ್‌ ತೆರವಿಗೆ ಮಾತ್ರ ಮೀನಾಮೇಷ ಎಣಿಸುತ್ತಿದೆ.

    ಪ್ರಭಾವಿಗಳ ಬಿಲ್ಡಿಂಗ್‌ ತೆರವಿಗೆ ಬಿಬಿಎಂಪಿ (BBMP) ಹಿಂದೇಟು ಹಾಕುತ್ತಿದ್ದು, ಅದಕ್ಕೆ ನಾನಾ ಕಾರಣಗಳನ್ನು ನೀಡುತ್ತಿದೆ. ನಮ್ಮ ಬಳಿ ಜೆಸಿಬಿ, ಬ್ರೇಕರ್‌ ಕೊರತೆ ಇದೆ ಎಂದು ಕಾರಣಗಳನ್ನು ನೀಡುತ್ತಿದೆ. ಹ್ಯಾರಿಸ್‌ ಮಾಲೀಕತ್ವದ ನಲಪಾಡ್‌ ಅಕಾಡೆಮಿಯ (Nalapad Academy) ಕೆಲ ಭಾಗಗಳಿಂದ ರಾಜಕಾಲುವೆ ಒತ್ತುವರಿಯಾಗಿತ್ತು. ಇದರ ತೆರವು ಕಾರ್ಯಾಚರಣೆಗೂ ಬೆಳಗ್ಗೆ ಯೋಜನೆ ರೂಪಿಸಲಾಗಿತ್ತು. ಆದರೆ ಕಾರ್ಯಾಚರಣೆ ಮಾತ್ರ ಆರಂಭವಾಗಿರಲಿಲ್ಲ. ಈ ಬಗ್ಗೆ ಕೇಳಿದರೆ, ತೆರವು ಕಾರ್ಯಾಚರಣೆಗೆ ಮೆಟಿರಿಯಲ್ಸ್‌ ಕೊರತೆ ಇದೆ ಎಂದು ಬಿಬಿಎಂಪಿ ಕಾರಣ ನೀಡುತ್ತಿದೆಯೆಂದು ಸ್ಥಳೀಯರು ಗಂಭೀರ ಆರೋಪ ಮಾಡುತ್ತಿದ್ದಾರೆ. ಇದನ್ನೂ ಓದಿ: ಆಪರೇಷನ್ ಬುಲ್ಡೋಜರ್‌ಗೆ 2ನೇ ದಿನ – ಇಂದು ಪ್ರಭಾವಿಗಳ ಕಟ್ಟಡ ಕೆಡವುತ್ತಾ ಪಾಲಿಕೆ?

    ನಾವು ಏಳು ಗಂಟೆಯಿಂದ ಸ್ಥಳದಲ್ಲಿ ಕಾಯ್ತಾ ಇದ್ದೀವಿ. ದೊಡ್ಡವರ ಅಖಾಡಕ್ಕೆ ಜೆಸಿಬಿ ಹೋಗೋದೆ ಇಲ್ಲ. ಆದರೆ ಬಡವರ ಮನೆಗೆ ಮಾತ್ರ ಬೇಗ ಹೋಗುತ್ತೆ. ಹ್ಯಾರಿಸ್ ಮಾಲೀಕತ್ವ ಅಂತಾ ಟಚ್ ಮಾಡೋಕೆ ಹಿಂದೇಟು ಹಾಕ್ತಾ ಇದ್ದಾರೆ ಎಂದು ಅಧಿಕಾರಿಗಳಿಗೆ ಫೋನ್‌ ಕರೆ ಮಾಡಿ ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ.

    ಚಲ್ಲಘಟ್ಟದ ನಲಪಾಡ್ ಅಕಾಡೆಮಿಯ ಒತ್ತುವರಿ ಜಾಗ ತೆರವಿಗೆ ಬಿಬಿಎಂಪಿ ಹಿಂದೇಟು ಹಾಕಿತ್ತು. ಈ ಬಗ್ಗೆ ಜನರು ಆಕ್ರೋಶ ಹೊರಹಾಕುತ್ತಿದ್ದಂತೆ ಎಚ್ಚೆತ್ತು, ಕೊನೆಗೂ ನಲಪಾಡ್ ಅಕಾಡೆಮಿ ಸ್ಥಳಕ್ಕೆ ಅಧಿಕಾರಿಗಳ ನೇತೃತ್ವದಲ್ಲಿ ಜೆಸಿಬಿ ಧಾವಿಸಿದೆ. ಇದನ್ನೂ ಓದಿ: ಮಂಡ್ಯದ ಇಬ್ಬರು ಹಾಲಿ, ಓರ್ವ ಮಾಜಿ ಶಾಸಕರಿಗೆ ಸಂಕಷ್ಟ

    Live Tv
    [brid partner=56869869 player=32851 video=960834 autoplay=true]

  • ನಲಪಾಡ್ ಗ್ಯಾಂಗಿನಿಂದ ಜೀವಬೆದರಿಕೆ – ವಕೀಲರಿಂದ ಪೊಲೀಸರಿಗೆ ದೂರು

    ನಲಪಾಡ್ ಗ್ಯಾಂಗಿನಿಂದ ಜೀವಬೆದರಿಕೆ – ವಕೀಲರಿಂದ ಪೊಲೀಸರಿಗೆ ದೂರು

    ಬೆಂಗಳೂರು: ಶಾಂತಿನಗರ ಶಾಸಕ ಹ್ಯಾರಿಸ್ ಅವರ ಗೂಂಡಾ ಮಗ ನಲಪಾಡ್ ವಿರುದ್ಧ ವಾದ ಮಾಡಿದ್ದಕ್ಕೆ ಆತನ ಬೆಂಬಲಿಗರಿಂದ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ವಕೀಲ ಶ್ಯಾಮ್ ಸುಂದರ್ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

    ದೂರು ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶ್ಯಾಮ್ ಸುಂದರ್, ಈ ಪ್ರಕರಣದಲ್ಲಿ ನಾನು ವಕೀಲನಾಗಿರುವ ಕಾರಣ ನಿನ್ನೆ ಕೋರ್ಟ್ ಕಲಾಪ ಮುಗಿಸಿದ ಬಳಿಕ ನನ್ನನ್ನು ದುರುಗುಟ್ಟಿ ನೋಡುತ್ತಿದ್ದರು. ಈ ವಿಚಾರ ತಿಳಿದು ಪೊಲೀಸರು ನನಗೆ ರಕ್ಷಣೆ ನೀಡಿದರು. ಸಂಜೆ ನಾನು ಆರ್ ಟಿ  ನಗರ ಪೊಲೀಸ್ ಠಾಣೆಗೆ ಬಂದು ಈ ವಿಚಾರ ತಿಳಿಸಿದ್ದು, ಇಂದು ನಾನು ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ದೂರು ನೀಡಿದ್ದೇನೆ. ಆಯುಕ್ತರ ಈ ಪ್ರಕರಣ ಮುಗಿಯುವರೆಗೆ ಭದ್ರತೆ ನೀಡುತ್ತೇವೆ, ಕೋರ್ಟ್ ನಲ್ಲಿ ಯಾವುದೇ ಲೋಪ ಆಗದಂತೆ ನೋಡಿಕೊಳ್ಳುತ್ತೇವೆ ಎಂಬುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಖಾಸಗಿ ವಿಮಾನ ಖರೀದಿಸಲು ಮುಂದಾಗಿದ್ದ ರೌಡಿ ನಲಪಾಡ್!

    ನೇರವಾಗಿ ನನಗೆ ಯಾರು ಬೆದರಿಕೆ ಹಾಕಿಲ್ಲ. ಆದರೆ ಬಲ್ಲ ಮೂಲಗಳು, ಮಾಧ್ಯಮಗಳಲ್ಲಿ ಬಂದಿರುವ ಮಾಹಿತಿಯ ಹಿನ್ನೆಲೆಯಲ್ಲಿ ದೂರು ನೀಡಿದ್ದೇನೆ. ದೆಹಲಿಯ ನಿರ್ಭಯಾ ಕೇಸ್ ನಂತೆ ಇದೊಂದು ಗಂಭೀರ ಪ್ರಕರಣವಾಗಿರುವ ಕಾರಣ ನಾನು ನಿನ್ನೆ ಪ್ರಬಲವಾಗಿ ಜಾಮೀನು ನೀಡಬಾರದು ಎಂದು ವಾದ ಮಂಡಿಸಿದ್ದೆ. ಹೀಗಾಗಿ ಆರೋಪಿಗಳಿಂದ ಯಾವುದೇ ತೊಂದರೆ ಆಗದೇ ಇದ್ದರೂ ಬೆಂಬಲಿಗರು ಭಾರೀ ಸಂಖ್ಯೆಯಲ್ಲಿ ಇರುವ ಕಾರಣ ದೂರು ನೀಡಿದ್ದೇನೆ ಎಂದು ಶ್ಯಾಮ್ ಸುಂದರ್ ಹೇಳಿದರು. ಇದನ್ನೂ ಓದಿ: ಫರ್ಜಿ ಕೆಫೆಯಲ್ಲಿ ನಲಪಾಡ್ ಗುಂಡಾಗಿರಿ ಪ್ರಕರಣಕ್ಕೆ ಮೆಗಾ ಟ್ವಿಸ್ಟ್

    ನಿನ್ನೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿ ವಾದ ಮಂಡಿಸುತ್ತಿದ್ದ ವಕೀಲ ಶ್ಯಾಮ್ ಸುಂದರ್ ಅವರನ್ನು ಆರೋಪಿ ನಲಪಾಡ್ ಹಾಗೂ ಅವರ ಬೆಂಬಲಿಗರು ದುರುಗುಟ್ಟಿಕೊಂಡು ನೋಡುತ್ತಿದ್ದರು. ಅಷ್ಟೇ ಅಲ್ಲದೇ ಕೋರ್ಟ್ ನಿಂದ ಹೊರ ಬರುತ್ತಿದ್ದಾಗ ನಲಪಾಡ್ ಬೆಂಬಲಿಗರು, ನಮ್ಮ ಲಿಸ್ಟ್ ನಲ್ಲಿ ಇವನು ಇದ್ದು, ಇವನಿಗೂ ಗತಿ ಕಾಣಿಸುತ್ತೇವೆ ಎಂದು ಮಾತನಾಡುತ್ತಿದ್ದರು. ಇದನ್ನೂ ಓದಿ: ಜೈಲಿನಲ್ಲೂ ಮುಂದುವರಿದ ನಲಪಾಡ್ ಪುಂಡಾಟ- ನಿನ್ನಿಂದ ನಾವು ಜೈಲು ಸೇರುವಂತಾಯ್ತು ಎಂದ ಸ್ನೇಹಿತ ಅಬ್ರಾಸ್ ಮೇಲೆ ಹಲ್ಲೆ

     

    https://youtu.be/-BMml-Cw79E