Tag: harish rawat

  • ಆರೋಪ ಸಾಬೀತಾದರೆ ರಾಜಕೀಯ ತೊರೆಯುವೆ: ಹರೀಶ್ ರಾವತ್

    ಆರೋಪ ಸಾಬೀತಾದರೆ ರಾಜಕೀಯ ತೊರೆಯುವೆ: ಹರೀಶ್ ರಾವತ್

    ಡೆಹ್ರಾಡೂನ್: ರಾಜ್ಯದಲ್ಲಿ ಮುಸ್ಲಿಂ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ಹೇಳಿಕೆ ನೀಡಿರುವುದು ನಿಜವಾದರೆ ರಾಜಕೀಯವನ್ನು ತ್ಯಜಿಸುತ್ತೇನೆ ಎಂದು ಉತ್ತರಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ಕೆಲ ಕಾಂಗ್ರೆಸ್ ನಾಯಕರು ತಮ್ಮ ಹೆಸರಿಗೆ ಕಳಂಕ ತರಲು ಯತ್ನಿಸುತ್ತಿದ್ದಾರೆ. ಬಿಜೆಪಿ ಬೆಂಬಲಿಗರ ಹೊರತಾಗಿಯೂ, ನಮ್ಮ ಪಕ್ಷದ ನಾಯಕರೊಬ್ಬರಿಗೆ ಸಂಬಂಧಿಸಿದ ಕೆಲವರು ನನ್ನ ವಿರುದ್ಧ ಆರೋಪ ಹೊರೆಸುತ್ತಿದ್ದಾರೆ ಎಂದು ಆರೋಪಿಸಿದರು.

    ಮುಸ್ಲಿಂ ವಿಶ್ವವಿದ್ಯಾನಿಲಯ ಸ್ಥಾಪನೆಯ ಹೇಳಿಕೆಯನ್ನು ನಾನೇ ಮಾಡಿದ್ದೇನೆ ಎಂಬುದು ಸಾಬೀತಾದ ದಿನ, ನಾನು ಮಹಾತ್ಮ ಗಾಂಧಿಯವರ ಪ್ರತಿಮೆಯ ಕೆಳಗೆ ಕುಳಿತು ರಾಜಕೀಯದಿಂದ ನಿವೃತ್ತಿ ಹೊಂದುತ್ತೇನೆ ಎಂದು ಅವರು, ಸಾಮಾಜಿಕ ಜಾಲತಾಣಗಳ ಮೂಲಕ ತನ್ನ ಬಗ್ಗೆ ಈ ಸುಳ್ಳನ್ನು ಹರಡಲು ಕಾರಣರಾದವರನ್ನು ಬಯಲಿಗೆಳೆಯಲು ಬಯಸುತ್ತೇನೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಸ್ಮಾರ್ಟ್‍ಸಿಟಿ ಕಾಮಗಾರಿಯಿಂದ ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಕಂಟಕ

    ಉತ್ತರಾಖಂಡ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪ್ರಚಾರದ ಮುಖ್ಯಸ್ಥರಾಗಿದ್ದ ರಾವತ್ ಅವರ ಹೇಳಿಕೆಯನ್ನು ಬಿಜೆಪಿಯು ಚುನಾವಣಾ ಪೂರ್ವದಲ್ಲಿ ಪ್ರಮುಖ ವಿಷಯವನ್ನಾಗಿ ಮಾಡಿತ್ತು. ಫೆಬ್ರವರಿ 14ರಂದು ವಿಧಾನಸಭೆ ಚುನಾವಣೆ ನಡೆದಿದ್ದು, 70 ಸ್ಥಾನಗಳಲ್ಲಿ ಬಿಜೆಪಿ 47 ಸ್ಥಾನಗಳನ್ನು ಗೆಲ್ಲುವ ಮೂಲಕ ಸತತ ಎರಡನೇ ಅವಧಿಗೆ ಸರ್ಕಾರವನ್ನು ರಚಿಸಿದೆ. ಇದನ್ನೂ ಓದಿ: ವಿಧಾನಸಭೆಯಲ್ಲಿ ಶಾಸಕರ ನಡುವೆ ಉತ್ತರ ದಕ್ಷಿಣ ವಾಕ್ಸಮರ

  • ಉತ್ತರಾಖಂಡದಲ್ಲಿ ಅಂಚೆ ಮತಪತ್ರ ತಿದ್ದುತ್ತಿರುವ ವೀಡಿಯೋ ವೈರಲ್

    ಉತ್ತರಾಖಂಡದಲ್ಲಿ ಅಂಚೆ ಮತಪತ್ರ ತಿದ್ದುತ್ತಿರುವ ವೀಡಿಯೋ ವೈರಲ್

    ಡೆಹ್ರಾಡೂನ್: ಉತ್ತರಾಖಂಡದಲ್ಲಿ ವ್ಯಕ್ತಿಯೊಬ್ಬರು ಅಂಚೆ ಮತ ಪತ್ರಗಳನ್ನು ತಿದ್ದುತ್ತಿರುವ ವೀಡಿಯೋವನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹರೀಶ್ ರಾವತ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಇದೀಗ ವೀಡಿಯೋ ವೈರಲ್ ಆಗುತ್ತಿದೆ.

    ಟ್ವೀಟ್‍ನಲ್ಲಿ ಏನಿದೆ?: ಎಲ್ಲರ ಮಾಹಿತಿಗಾಗಿ ಈ ವೀಡಿಯೋವನ್ನು ಹಂಚಿಕೊಳ್ಳುತ್ತಿದ್ದೇನೆ. ಸೇನಾ ಕೇಂದ್ರದಲ್ಲಿ ಒಬ್ಬ ವ್ಯಕ್ತಿ ಹೇಗೆ ಹಲವಾರು ಮತಪತ್ರಗಳಿಗೆ ಟಿಕ್ ಹಾಗೂ ಸಹಿ ಹಾಕುತ್ತಿದ್ದಾನೆ ಎನ್ನುವುದರ ಕುರಿತು ಈ ವೀಡಿಯೋದಲ್ಲಿ ಮಾಹಿತಿಯಿದೆ. ಚುನಾವಣಾ ಆಯೋಗ ಇದನ್ನು ಗಮನಿಸುತ್ತಿದೆಯಾ ಎಂದು ಪ್ರಶ್ನಿಸಿದ್ದಾರೆ.

    ಈ ಬಗ್ಗೆ ರಾವತ್ ಅವರ ವಕ್ತಾರ ಸುರೇಂದ್ರ ಕುಮಾರ್ ಮಾತನಾಡಿ, ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಿಲ್ಲ. ಆದರೆ ಅವರೇ ಸ್ವಯಂಪ್ರೇರಿತವಾಗಿ ದೂರು ದಾಖಲಿಸಬಹುದು. ಈ ವೀಡಿಯೋ ಉತ್ತರಾಖಂಡದಿಂದಲೇ ಬಂದಿದೆ ಎಂದ ಅವರು, ಈ ವೀಡಿಯೋದ ಮೂಲವನ್ನು ಬಹಿರಂಗ ಪಡಿಸಲು ನಿರಾಕರಿಸಿದರು.

    ಈ ವೀಡಿಯೋಕ್ಕೆ ಉತ್ತರಾಖಂಡ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಪ್ರೀತಮ್ ಸಿಂಗ್ ಪ್ರತಿಕ್ರಿಯಿಸಿದ್ದು, ಈ ವೀಡಿಯೋ ಪ್ರಜಾಪ್ರಭುತ್ವವನ್ನು ಅಪಹಾಸ್ಯ ಮಾಡುತ್ತಿದೆ. ಚುನಾವಣಾ ಆಯೋಗವು ಇದನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆಲುವು ಸಾಧಿಸಿದ ತೃತೀಯಲಿಂಗಿ

    ಟ್ವೀಟ್‍ಗೆ ಪ್ರತಿಕ್ರಿಯಿಸಿದ ಬಿಜೆಪಿ, ಇದು ಕಾಂಗ್ರೆಸ್‍ನ ಹತಾಶೆಯಾಗಿದೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನುಭವಿಸಿತ್ತು. ಇದರಿಂದ ಈ ರೀತಿ ಮಾಡುತ್ತಿದೆ ಎಂದು ವ್ಯಂಗ್ಯವಾಡಿದೆ. ಇದನ್ನೂ ಓದಿ: ಮೆಲಾನಿಯಾ ಟ್ರಂಪ್, ಕೇಜ್ರಿವಾಲ್ ಶಾಲೆಯನ್ನು ಮಾತ್ರ ನೋಡಬೇಕೆಂದಿದ್ದರು: ದೆಹಲಿ ಸಿಎಂ

  • ನನ್ನ ಮಗನಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದರೆ ಗೆಲ್ಲುತ್ತಿದ್ದ: ಹರೀಶ್ ರಾವತ್

    ನನ್ನ ಮಗನಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದರೆ ಗೆಲ್ಲುತ್ತಿದ್ದ: ಹರೀಶ್ ರಾವತ್

    ಡೆಹ್ರಾಡೂನ್: ನನ್ನ ಮಗನಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದರೆ ಗೆಲ್ಲುತ್ತಿದ್ದ ಎಂದು ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಹೇಳಿದ್ದಾರೆ.

    ನಾನು ಲಾಲ್ ಕುವಾನ್‍ನಿಂದ ಗೆಲ್ಲುತ್ತೇನೆ. ನನ್ನ ಮಗಳೂ ಹರಿದ್ವಾರದಿಂದ ಗೆಲ್ಲುತ್ತಾಳೆ. ನನ್ನ ಮಗನಿಗೆ ಪಕ್ಷ ಟಿಕೆಟ್ ನೀಡಿದ್ದರೆ ಆ ಸ್ಥಾನ ಕಾಂಗ್ರೆಸ್ ಪಾಲಾಗುತ್ತಿತ್ತು. ಆದರೆ ನನ್ನ ಮಗನಿಗೆ ಟಿಕೆಟ್ ನೀಡಿಲ್ಲ ಎಂದು ರಾವತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ತಾಜ್ ಮಹಲ್‌ನಲ್ಲಿ ಹನುಮಾನ್ ಚಾಲೀಸಾ – ಪ್ರತಿಭಟನಕಾರರನ್ನು ತಡೆದ ಪೊಲೀಸರು

    ನನ್ನ ಗೆಲುವಿನ ಅಂತರದ ಬಗ್ಗೆ ಹೇಳಲಾರೆ. ಜನರು ನನ್ನನ್ನು ಒಪ್ಪಿಕೊಂಡಿದ್ದಾರೆ ಮತ್ತು ನಾನು ಲಾಲ್ ಕುವಾನ್ ಕ್ಷೇತ್ರದಲ್ಲಿ ಗೆಲ್ಲುತ್ತೇನೆ ಎಂದು ಭಾವಿಸುತ್ತೇನೆ. ಲಾಲ್ ಕುವಾನ್‍ನ ಬಿಜೆಪಿ ಅಭ್ಯರ್ಥಿ ಮೋಹನ್ ಸಿಂಗ್ ಬಿಶ್ತ್ ಅವರಿಗೆ ನನ್ನ ಶುಭಾಶಯಗಳು. ಅವರು ನನಗೆ ಕಠಿಣ ಸ್ಪರ್ಧೆ ನೀಡಲಿದ್ದಾರೆ ಎಂದು ಹೇಳಿದ್ದಾರೆ.

    Pushkar Singh Dhami

    ಕಾಂಗ್ರೆಸ್ 48 ಸ್ಥಾನಗಳನ್ನು ಪಡೆಯುವ ಮೂಲಕ ಚುನಾವಣೆಯಲ್ಲಿ ಗೆಲ್ಲುತ್ತದೆ ಎಂದು ನಾನು ಸ್ಪಷ್ಟವಾಗಿ ಹೇಳುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.  ಸುಮಾರು ಆರು ವಿಧಾನಸಭಾ ಸ್ಥಾನಗಳಲ್ಲಿ ಉತ್ತಮ ಹೋರಾಟವಿದೆ. ಚುನಾವಣೆಯಲ್ಲಿ ಪಕ್ಷವು 20 ಕ್ಕಿಂತ ಕಡಿಮೆ ಸ್ಥಾನಗಳನ್ನು ಪಡೆಯಲಿರುವುದರಿಂದ ಬಿಜೆಪಿಯ ಗೌರವವನ್ನು ಉಳಿಸಿದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರನ್ನು ನಾನು ಅಭಿನಂದಿಸುತ್ತೇನೆ. ಈ ಬಾರಿ ಜನರ ನಿರ್ಧಾರವು ಅವರ ವಿರುದ್ಧವಾಗಿದೆ ಎಂದು ಸಹ ನಾನು ಅವರಿಗೆ ಹೇಳಲು ಬಯಸುತ್ತೇನೆ. ಆದರೆ ಅವರು ಚಿಂತಿಸುವ ಅಗತ್ಯವಿಲ್ಲ. ಏಕೆಂದರೆ ಅವರ ಹಿರಿಯ ಸಹೋದರ ಹರೀಶ್ ರಾವತ್ ಅವರ ಆಶಯಗಳು ಅವರೊಂದಿಗಿವೆ ಎಂದಿದ್ದಾರೆ. ಇದನ್ನೂ ಓದಿ: ಹಿಜಬ್-ಕೇಸರಿ ವಿವಾದ – ಉಡುಪಿ, ಶಿವಮೊಗ್ಗದ ಕೆಲ ಕಾಲೇಜ್‍ಗಳಿಗೆ ರಜೆ ಘೋಷಣೆ

    ಈ ಬಾರಿ ಪಕ್ಷ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರವನ್ನು ನಾಯಕರು ಒಪ್ಪಿಕೊಳ್ಳುತ್ತಾರೆ. ಉತ್ತರಾಖಂಡಕ್ಕೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ಏನೇ ನಿರ್ಧಾರ ಕೈಗೊಂಡರೂ ಅದನ್ನು ಒಪ್ಪಿಕೊಳ್ಳುತ್ತೇವೆ. ಉತ್ತರಾಖಂಡದಲ್ಲಿ ಕಾಂಗ್ರೆಸ್ ಗೆದ್ದರೆ ಆ ಗೆಲುವಿನ ಶ್ರೇಯ ರಾಹುಲ್ ಗಾಂಧಿಗೆ ಸಲ್ಲುತ್ತದೆ ಎಂದು ಹೇಳಿದ್ದಾರೆ.

  • ಅಗತ್ಯ ಬಿದ್ದರೆ ಬೊಗಳುತ್ತೇನೆ, ಇಲ್ಲವೇ ಕಚ್ಚುತ್ತೇನೆ: ಹರೀಶ್ ರಾವತ್

    ಅಗತ್ಯ ಬಿದ್ದರೆ ಬೊಗಳುತ್ತೇನೆ, ಇಲ್ಲವೇ ಕಚ್ಚುತ್ತೇನೆ: ಹರೀಶ್ ರಾವತ್

    ಡೆಹ್ರಾಡೂನ್: ನಾನು ಉತ್ತರಾಖಂಡದ ಕಾವಲುಗಾರ. ಉತ್ತರಾಖಂಡಕ್ಕಾಗಿ ಅಗತ್ಯ ಬಿದ್ದರೆ ಬೊಗಳುತ್ತೇನೆ ಇಲ್ಲಾ ಕಚ್ಚುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಗೃಹಸಚಿವ ಅಮಿತ್ ಶಾಗೆ ತಿರುಗೇಟು ನೀಡಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಪ್ರತಿಸ್ಪರ್ಧಿಯನ್ನು ತೆಗಳುವುದು ಬಿಜೆಪಿಯ ಸಂಸ್ಕೃತಿಯಾಗಿದೆ. ಅದಕ್ಕೆ ಧನ್ಯವಾದ ತಿಳುಸುತ್ತೇನೆ ಎಂದ ಅವರು, ಅಮಿತ್ ಶಾ ನಾಯಿ ಎಂಬ ಪದವನ್ನು ಬಳಸಿಲ್ಲ. ಆದರೆ ರಾಜಕೀಯ ಎದುರಾಳಿಗಳನ್ನು ನಾಯಿ ಎಂದು ಪರಿಗಣಿಸಿದರೆ ಅದು ಅವರ ತಿಳುವಳಿಕೆಗೆ ಬಿಟ್ಟಿದ್ದು ಎಂದರು.

    ನಮ್ಮ ಧರ್ಮದಲ್ಲಿ ನಾಯಿಯನ್ನು ಕಾವಲುಗಾರರೆಂದು ಪರಿಗಣಿಸುತ್ತೇವೆ. ಅವರು ದೇವರ ಕಾವಲುಗಾರ ಹಾಗೂ ನಾಯಿ ಮನೆಗಳನ್ನು ಕಾಯುತ್ತವೆ. ಈ ಹಿನ್ನೆಲೆಯಲ್ಲಿ ನಾನು ಉತ್ತರಾಖಂಡದ ಕಾವಲುಗಾರ. ನಾನು ಉತ್ತರಾಖಂಡಕ್ಕಾಗಿ ಬೊಗಳುತ್ತೇನೆ. ಕಚ್ಚುವ ಅವಶ್ಯಕತೆ ಬಂದರೆ ನಾನು ಕಚ್ಚುತ್ತೇನೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ನಾನು ಹೃದಯದಿಂದ ಮುಸ್ಲಿಂ ಮಗಳು, ಹಿಜಬ್‍ನಿಂದಲ್ಲ: ಕಾಶ್ಮೀರ ಟಾಪರ್

    ಹರೀಶ್ ರಾವತ್ ಅವರನ್ನು ನಾಯಕನನ್ನಾಗಿ ಮಾಡಬೇಕೋ ಬೇಡವೋ, ಅವರಿಗೆ ಟಿಕೆಟ್ ನೀಡಬೇಕೋ ಅಥವಾ ಬೇಡವಾ, ಜೊತೆಗೆ ಪಕ್ಷದಲ್ಲಿ ಸ್ಥಾನ ನೀಡಬೇಕೋ, ಬೇಡವೋ ಎಂಬುದನ್ನು ಕಾಂಗ್ರೆಸ್ ನಿರ್ಧರಿಸುವುದಿಲ್ಲ ಎಂದು ಅಮಿತ್ ಶಾ ಟೀಕಿಸಿದ್ದರು.

    ಹಿಜಾಬ್ ವಿವಾದದ ಕುರಿತು ಪ್ರತಿಕ್ರಿಯಿಸದ ಹರೀಶ್ ರಾವತ್ ಅವರು, ಹಿಜಾಬ್, ಖಿಜಾಬ್, ತೇಜಾಬ್ ವಿಷಯಗಳ ವಿವಾದಕ್ಕೆ ಬಿಜೆಪಿ ಸ್ವಾಗತಿಸುತ್ತದೆ. ಉತ್ತರಾಖಂಡದ ಜನರು ಅವುಗಳ ಬಗ್ಗೆ ಕಾಳಜಿ ವಹಿಸುವುದಿಲ್ಲ. ಇದು ಬಿಜೆಪಿಯ ಕೆಟ್ಟ ಯೋಚನೆಯಾಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಇಂದಿನಿಂದ ಹೈಸ್ಕೂಲ್‌ ಆರಂಭ – ಸಮವಸ್ತ್ರದಲ್ಲೇ ಬರಬೇಕು, ಪೊಲೀಸರ ನಿಗಾ

  • ಗಾಂಧಿ ಕುಟುಂಬದ ವಿರುದ್ಧ ಸಿಡಿದ ಉತ್ತರಾಖಂಡ ಮಾಜಿ ಸಿಎಂ ರಾವತ್‌

    ಗಾಂಧಿ ಕುಟುಂಬದ ವಿರುದ್ಧ ಸಿಡಿದ ಉತ್ತರಾಖಂಡ ಮಾಜಿ ಸಿಎಂ ರಾವತ್‌

    ನವದೆಹಲಿ: ಕಾಂಗ್ರೆಸ್‌ನ ಟ್ರಬಲ್‌ ಶೂಟರ್‌ ಎಂದೇ ಹೆಸರಾಗಿರುವ ಉತ್ತರಾಖಂಡ ಮಾಜಿ ಮುಖ್ಯಮಂತ್ರಿ ಹರೀಶ್‌ ರಾವತ್‌ ಈಗ ಮತ್ತೊಂದು ಹೇಳಿಕೆ ಮೂಲಕ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ಹೆಸರನ್ನು ಉಲ್ಲೇಖಿಸದೇ ಕಾಂಗ್ರೆಸ್‌ನ ಗಾಂಧಿ ಕುಟುಂಬದ ವಿರುದ್ಧ ಬಂಡಾಯ ಏಳುವ ಸುಳಿವು ನೀಡಿದ್ದಾರೆ.

    ಗಾಂಧಿಗೆ ಆಪ್ತರಾಗಿದ್ದರೂ ಹೆಸರನ್ನು ಉಲ್ಲೇಖಿಸದೇ, ಕಾಂಗ್ರೆಸ್‌ ನಾಯಕತ್ವ ನನ್ನನ್ನು ಕಡೆಗಣಿಸಿದೆ ಎಂದು ರಾವತ್‌ ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಸುವರ್ಣಸೌಧಕ್ಕೆ ಮಾಧ್ಯಮಗಳ ನಿರ್ಬಂಧ ಸಂವಿಧಾನದ ಒಂದು ಕಾಲು ಮುರಿಯುವ ಪ್ರಯತ್ನದಂತೆ: ಎಚ್‍ಡಿಕೆ

    ಈ ಕುರಿತು ಟ್ವೀಟ್‌ ಮಾಡಿರುವ ರಾವತ್‌, ಇದು ವಿಚಿತ್ರವೇನಲ್ಲ? ಬರುವ ಚುನಾವಣೆಯ ಸಮುದ್ರದಲ್ಲಿ ಈಜಬೇಕು. ಆದರೆ ನನ್ನನ್ನು ಬೆಂಬಲಿಸುವ ಬದಲು ಸಂಘಟನೆ ನನ್ನ ವಿರುದ್ಧವೇ ತಿರುಗಿ ನಿಂತಿದೆ. ನನ್ನ ವಿರುದ್ಧ ನಕಾರಾತ್ಮಕವಾಗಿ ನಡೆದುಕೊಳ್ಳುತ್ತಿದೆ ಎಂದು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ನಾವು ಈಜುವಾಗ ಅನೇಕ ಶಕ್ತಿಗಳನ್ನು ಸಮುದ್ರದಲ್ಲಿ ಬಿಟ್ಟಿದ್ದಾರೆ. ಆ ಶಕ್ತಿಗಳು ನನ್ನ ಕೈ-ಕಾಲುಗಳನ್ನು ಕಟ್ಟಿ ಹಾಕಿವೆ. ನೀವು ತುಂಬ ದೂರ ಹೋಗಿದ್ದೀರಿ. ಸಾಕಷ್ಟು ಕೆಲಸಗಳನ್ನೂ ಮಾಡಿದ್ದೀರಿ. ಇದು ವಿಶ್ರಾಂತಿ ಸಮಯ ಎಂದು ಪರೋಕ್ಷವಾಗಿ ಟಾಂಗ್‌ ನೀಡಿದ್ದಾರೆ.

    ನಾನು ದುರ್ಬಲಗೊಂಡಿಲ್ಲ, ಹೆದರಿ ಓಡಿ ಹೋಗುವುದಿಲ್ಲ. ಸದ್ಯ ಗೊಂದಲದಲ್ಲಿದ್ದೇನೆ. ಹೊಸ ವರ್ಷ ನನಗೆ ದಾರಿ ತೋರಲಿದೆ. ಭಗವಂತ ಕೇದಾರನಾಥ ನನಗೆ ದಾರಿ ತೋರುತ್ತಾನೆ ಎಂಬ ವಿಶ್ವಾಸವಿದೆ ಎಂದು ತಮ್ಮ ಮುಂದಿನ ನಿಲುವಿನ ಬಗೆಗೆ ಆಶಯವನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 2023ರ ವರೆಗೂ ಬೊಮ್ಮಾಯಿ ಸಿಎಂ ಆಗಿ ಮುಂದುವರಿಯಲಿದ್ದಾರೆ: ಪ್ರಹ್ಲಾದ್ ಜೋಶಿ

    ಮುಂದಿನ ವರ್ಷದಲ್ಲಿ ನಡೆಯಲಿರುವ ಉತ್ತರಾಖಂಡ ಚುನಾವಣೆಗೂ ಮುನ್ನ ರಾವತ್‌ ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ. ಸದ್ಯ ಹರೀಶ್‌ ರಾವತ್‌ ಅವರು ಪಕ್ಷದ ನಾಯಕರಿಂದ ಪ್ರತ್ಯೇಕವಾಗಿದ್ದಾರೆ.

  • ಸೋನಿಯಾ ಗಾಂಧಿ ನಾಯಕತ್ವದಲ್ಲಿ ಸಂಪೂರ್ಣ ನಂಬಿಕೆ ಇದೆ: ಸಿಧು

    ಸೋನಿಯಾ ಗಾಂಧಿ ನಾಯಕತ್ವದಲ್ಲಿ ಸಂಪೂರ್ಣ ನಂಬಿಕೆ ಇದೆ: ಸಿಧು

    ನವದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ ನಾಯಕತ್ವದಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ ಎಂದು ಪಂಜಾಬ್ ಕಾಂಗ್ರೆಸ್ ಘಟಕದ ಅಧ್ಯಕ್ಷ ವನಜೋತ್ ಸಿಂಗ್ ಸಿಧು ಹೇಳಿದ್ದಾರೆ.

    ಸೋನಿಯಾ ಅವರು ತೆಗೆದುಕೊಳ್ಳುವ ಯಾವ ನಿರ್ಧಾರಕ್ಕೂ ನಾನು ಬದ್ಧನಾಗಿದ್ದೇನೆ. ನನ್ನ ಕಾಳಜಿ ಏನೇಂಬುದನ್ನು ಇಆಗಾಗಲೇ ಹೈಕಮಾಂಡ್ ಗೆ ತಿಳಿಸಿದ್ದೇನೆ. ಹೀಗಾಗಿ ಪಕ್ಷದ ಅಧ್ಯಕ್ಷರು ತೆಗೆದುಕೊಳ್ಳುವ ನಿರ್ಧಾರಗಳು ಪಂಜಾಬ್ ಹಿತಾಸಕ್ತಿಗೆ ಪೂರಕವಾಗಲಿದೆ ಎಂದು ಸಿಧು ತಿಳಿಸಿದ್ದಾರೆ. ಇತ್ತ ಹರೀಶ್ ರಾವತ್ ಅವರು, ಪಂಜಾಬ್ ಘಟಕದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುವಂತೆ ಹಾಗೂ ರಾಜ್ಯದಲ್ಲಿ ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸುವಂತೆ ಸಿಧುಗೆ ಸೂಚಿಸಲಾಗಿದೆ ಎಂದು ಹೇಳಿದರು.

    ಪಂಜಾಬ್ ನ ನೂತನ ಮುಖ್ಯಮಂತ್ರಿಯಾಗಿ ಚರಣ್‍ಜಿತ್ ಸಿಂಗ್ ಅವರನ್ನು ನೇಮಕ ಮಾಡಿದ ಬಳಿಕ ಅಲ್ಲಿನ ರಾಜಕೀಯದಲ್ಲಿ ಕೋಲಾಹಲವೇ ಎಬ್ಬಿತ್ತು. ಈ ಸಂಬಂಧ ಪಕ್ಷದ ನಿರ್ಧಾರಗಳಿಂದ ಬಂಡಾಯವೆದ್ದಿದ್ದ ಸಿಧು ಇತ್ತೀಚೆಗೆ ತನ್ನ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೂಡ ನೀಡಿದ್ದರು. ಆದರೆ ಕೈಮಾಂಡ್ ಮಾತ್ರ ಸಿಧು ರಾಜೀನಾಮೆಯನ್ನು ಇನ್ನೂ ಅಂಗೀಕರಿಸಿಲ್ಲ. ಇದನ್ನೂ ಓದಿ: ಮತ್ತೆ ಸರ್ಜಿಕಲ್‌ ಸ್ಟ್ರೈಕ್‌? – ಪಾಕಿಸ್ತಾನಕ್ಕೆ ಅಮಿತ್‌ ಶಾ ಎಚ್ಚರಿಕೆ

    ಗುರುವಾರ ಸಿಧು ಅವರು ನವದೆಹಲಿಗೆ ತೆರಳಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಹಾಗೂ ಪಂಜಾಬ್ ಉಸ್ತುವಾರಿ ಸಚಿವ ಹರೀಶ್ ರಾವತ್ ಅವರನ್ನು ಭೇಟಿಯಾಗಿ ಕೆಲ ಕಾಲ ಚರ್ಚೆ ನಡೆಸಿದ್ದರು. ಇದನ್ನೂ ಓದಿ: #Surgicalstrike2 ವಿಶ್ವದಲ್ಲೇ ನಂಬರ್ ಒನ್ ಟ್ರೆಂಡಿಂಗ್

  • ಸಿಧು ನೇತೃತ್ವದಲ್ಲೇ 2022ರ ಪಂಜಾಬ್ ಚುನಾವಣೆ: ಹರೀಶ್ ರಾವತ್

    ಸಿಧು ನೇತೃತ್ವದಲ್ಲೇ 2022ರ ಪಂಜಾಬ್ ಚುನಾವಣೆ: ಹರೀಶ್ ರಾವತ್

    ಚಂಡೀಗಢ: ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ನೇತೃತ್ವದಲ್ಲಿಯೇ 2022ರ ಪಂಜಾಬ್ ಚುನಾವಣೆ ಎದುರಿಸುವುದಾಗಿ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಹೇಳಿದ್ದಾರೆ.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಸಿಧು ಒಬ್ಬ ಜನಪ್ರಿಯ ನಾಯಕರಾಗಿದ್ದಾರೆ. ಹೀಗಾಗಿ ಅವರ ನೇತೃತ್ವದಲ್ಲಿಯೇ ಮುಂಬರುವ ಪಂಜಾಬ್ ಚುನಾವಣೆಯನ್ನು ಎದುರಿಸುತ್ತೇವೆ. ಆದರೆ ಈ ಕುರಿತು ಕಾಂಗ್ರೆಸ್ಸಿನ ರಾಷ್ಟ್ರಾಧ್ಯಕ್ಷರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಎಂದು ತಿಳಿಸಿದ್ದಾರೆ.

    ಚರಣ್ ಜಿತ್ ಸಿಂಗ್ ಚನ್ನಿ ಅವರನ್ನು ಒಮ್ಮತದ ಅಭಿಪ್ರಾಯದಿಂದ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದ್ದು, ಇದು ಪೂರ್ವ ನಿಯೋಜಿತವಲ್ಲ ಎಂದು ಇದೇ ವೇಳೆ ರಾವತ್ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಚರಣ್‍ಜಿತ್ ಸಿಂಗ್ ಛನ್ನಿ ಮೇಲೆ 2018ರಲ್ಲಿ ಬಂದಿತ್ತು #MeToo ಆರೋಪ!

    ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಮೂರು ಬಾರಿ ಶಾಸಕರಾಗಿದ್ದ ಸುಖ್‍ಜಿಂದರ್ ಸಿಂಗ್ ರಾಂಧವಾ, ನವಜೋತ್ ಸಿಂಗ್ ಸಿಧು ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡ ನಾಯಕರಾಗಿದ್ದ ಕಾರಣ ಕೊನೇ ಕ್ಷಣದವರೆಗೂ ಅವರೇ ಎಂದು ಸುದ್ದಿ ಹರಿದಾಡಿತ್ತು. ಆದರೆ ಅಂತಿಮ ಕ್ಷಣದಲ್ಲಿ ರಾಂಧಾವಾಗೆ ಶಾಕ್ ನೀಡಿ ಚರಣ್‍ಜಿತ್ ಸಿಂಗ್ ಮುಖ್ಯಮಂತ್ರಿ ಎಂದು ಹೈಕಮಾಂಡ್ ತಿಳಿಸಿತ್ತು.

    ಪಂಜಾಬ್ ಕಾಂಗ್ರೆಸ್ಸಿನಲ್ಲಿ ಆಂತರಿಕ ಸಂಘರ್ಷ ಮುಗಿಲುಮುಟ್ಟಿತ್ತು. ಕಡೆಗೂ ಸಿಎಂ ಸ್ಥಾನಕ್ಕೆ ಶನಿವಾರ ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜೀನಾಮೆ ನೀಡಿದ್ದರು. ಬಳಿಕ ಸಿಎಂ ರೇಸ್‍ನಲ್ಲಿ ಪ್ರಬಲ ಅಭ್ಯರ್ಥಿಯಾಗಿ ನವಜೋತ್ ಸಿಂಗ್ ಸಿಧು ಹೆಸರು ಕೇಳಿಬಂದಿದೆ. ಈ ನಡುವೆ ಅಚ್ಚರಿಯ ಹೆಸರೆಂಬಂತೆ ಸುನಿಲ್ ಜಾಖರ್ ಅವರ ಹೆಸರು ಹರಿದಾಡುತ್ತಿತ್ತು. ಆದರೆ ಕಾಂಗ್ರೆಸ್ ಹೈಕಮಾಂಡ್ ಸುಖ್‍ಜಿಂದರ್ ಸಿಂಗ್ ಕಡೆಗೆ ಒಲವು ವ್ಯಕ್ತಪಡಿಸಿತ್ತು. ಅಂತಿಮ ಕ್ಷಣದಲ್ಲಿ ಅಮರೀಂದರ್ ಸಿಂಗ್ ಸಂಪುಟದಲ್ಲಿ ಸಚಿವರಾಗಿದ್ದ ದಲಿತ ನಾಯಕ ಚರಣ್‍ಜಿತ್ ಸಿಂಗ್ ಛನ್ನಿ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಮಣೆ ಹಾಕಿದೆ. ಇದನ್ನೂ ಓದಿ: ಚರಣ್‍ಜಿತ್ ಸಿಂಗ್ ಛನ್ನಿ ಪಂಜಾಬ್‍ನ ನೂತನ ಸಿಎಂ

  • ಪ್ರವಾಹ ಪರಿಹಾರ ನಿಧಿಯಿಂದ ಕೋಹ್ಲಿಗೆ 47 ಲಕ್ಷ ರೂ. ನೀಡಿದ ಉತ್ತರಾಖಂಡ್ ಸರ್ಕಾರ?

    ಪ್ರವಾಹ ಪರಿಹಾರ ನಿಧಿಯಿಂದ ಕೋಹ್ಲಿಗೆ 47 ಲಕ್ಷ ರೂ. ನೀಡಿದ ಉತ್ತರಾಖಂಡ್ ಸರ್ಕಾರ?

    ಡೆಹ್ರಾಡೂನ್: ಚುನಾವಣಾ ಫಲಿತಾಂಶ ಹೊರಬೀಳಲು ಕೇಲವೇ ದಿನ ಬಾಕಿ ಇರುವ ಮುನ್ನವೇ ಉತ್ತರಾಖಂಡ್‍ನ ಹರೀಶ್ ರಾವತ್ ಸರ್ಕಾರ ವಿವಾದದ ಸುಳಿಯಲ್ಲಿ ಸಿಲುಕುವಂತಾಗಿದೆ. ಪ್ರವಾಹ ಸಂತ್ರಸ್ತರ ಪರಿಹಾರ ನಿಧಿಯಿಂದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರಿಗೆ 47.19 ಲಕ್ಷ ರೂ. ಹಣ ನೀಡಲಾಗಿದೆ ಅಂತಾ ಆರ್‍ಟಿಐ ಕಾರ್ಯಕರ್ತರೊಬ್ಬರು ಆರೋಪಿಸಿದ್ದಾರೆ.

    2013ರ ಕೇದಾರನಾಥ ಪ್ರವಾಹ ಸಂತ್ರಸ್ತರ ನಿಧಿಯಿಂದ 47.19 ಲಕ್ಷ ರೂ. ಹಣವನ್ನು ಕೊಹ್ಲಿಗೆ 2015ರ ಜೂನ್ ನಲ್ಲಿ ಉತ್ತರಾಖಂಡ್ ಸರ್ಕಾರ ಪಾವತಿಸಿದೆ ಎಂದು ಆರ್‍ಟಿಐ ಕಾರ್ಯಕರ್ತ ಅಜಯ್ ಆರೋಪಿಸಿದ್ದಾರೆ.

    ಕೊಹ್ಲಿ ಉತ್ತರಾಖಂಡ್ ಪ್ರವಾಸೋದ್ಯಮದ ಬ್ರಾಂಡ್ ಅಂಬಾಸಿಡರ್ ಆದ ನಂತರ 60 ಸೆಕೆಂಡ್‍ಗಳ ಪ್ರವಾಸೋದ್ಯಮದ ವಿಡಿಯೊವೊಂದರಲ್ಲಿ ನಟಿಸಿದ್ದರು. ಕೊಹ್ಲಿಯ ಈ ನಟನೆಗಾಗಿ ರಾವತ್ ಸರ್ಕಾರ ಕೇದಾರನಾಥ್ ಪ್ರವಾಹ ಸಂತ್ರಸ್ತರಿಗೆ ಮೀಸಲಿಟ್ಟಿದ್ದ ನಿಧಿಯಿಂದ ಹಣವನ್ನು ಪಾವತಿ ಮಾಡಿದೆ ಅಂತಾ ಆರೋಪಿಸಿದ್ದಾರೆ. ಆದರೆ ಕೊಹ್ಲಿಯ ಏಜೆಂಟ್ ಬಂಟಿ ಷಾ ಮಾತ್ರ ಈ ಆರೋಪವನ್ನು ತಳ್ಳಿ ಹಾಕಿದ್ದು, ಇಂತಹ ಯಾವುದೇ ಹಣದ ವಹಿವಾಟು ನಡೆದಿಲ್ಲ ಅಂತಾ ಹೇಳಿದ್ದಾರೆ.

    ಈ ಬಗ್ಗೆ ಉತ್ತರಾಖಂಡ್ ಮುಖ್ಯಮಂತ್ರಿ ಹರೀಶ್ ರಾವತ್ ಅವರ ಮಾಧ್ಯಮ ಸಲಹೆಗಾರ ಸುರೇಂದ್ರ ಕುಮಾರ್ ಪ್ರತಿಕ್ರಿಯಿಸಿದ್ದು, ಈ ಆರೋಪಗಳೆಲ್ಲವೂ ಆಧಾರರಹಿತವಾಗಿದೆ. ಪ್ರವಾಸೋದ್ಯಮ ರಾಜ್ಯದ ಆರ್ಥಿಕ ವ್ಯವಸ್ಥೆಯ ಬೆನ್ನೆಲುಬಾಗಿದೆ. ಹೀಗಾಗಿ ಒಬ್ಬ ಪ್ರಮುಖ ವ್ಯಕ್ತಿಯನ್ನು ರಾಜ್ಯದ ಪ್ರವಾಸಿ ತಾಣಗಳ ಜಾಹಿರಾತಿಗಾಗಿ ಆಯ್ಕೆ ಮಾಡಿಕೊಂಡರೆ ತಪ್ಪೇನು? ಎಲ್ಲವನ್ನೂ ಕಾನೂನಾತ್ಮಕವಾಗಿಯೇ ಮಾಡಲಾಗಿದೆ. ಈ ಆರೋಪಗಳೆಲ್ಲವೂ ಆಧಾರರಹಿತ. ಕೇದರನಾಥದ ಅಭಿವೃದ್ಧೆಯೇ ಸರ್ಕಾರದ ಮೊದಲ ಆದ್ಯತೆ ಎಂಬುದು ಜನರಿಗೆ ಗೊತ್ತು. ಬಿಜೆಪಿಗೆ ಈ ಚುನಾವಣೆಯಲ್ಲಿ ಸೋಲು ಖಚಿತ. ಹೀಗಾಗಿ ನಿರಾಸೆಯಿಂದ ಈ ರೀತಿ ಆರೋಪಗಳನ್ನು ಮಾಡುತ್ತಿದೆ ಎಂದಿದ್ದಾರೆ.

  • ಉತ್ತರಾಖಂಡ್ ಚುನಾವಣೆ: ಬಾಹುಬಲಿ ಅವತಾರದಲ್ಲಿ ಹರೀಶ್ ರಾವತ್- ವೀಡಿಯೋ ವೈರಲ್

    ಡೆಹ್ರಾಡೂನ್: 5 ರಾಜ್ಯಗಳ ವಿಧಾನಸಭೆ ಚುನಾವಣೆಗೆ ಭರದ ಸಿದ್ಧತೆ ನಡೆಯುತ್ತಿದೆ. ಇದರ ಮಧ್ಯೆ ಉತ್ತರಾಖಂಡ್ ಮುಖ್ಯಮಂತ್ರಿ ಹರೀಶ್ ರಾವತ್‍ರನ್ನು ಬಾಹುಬಲಿಗೆ ಹೋಲಿಸಲಾದ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

    ಬಾಹುಬಲಿ ಸಿನಿಮಾದಲ್ಲಿ ನಾಯಕ ಪ್ರಭಾಸ್ ಶಿವಲಿಂಗವನ್ನು ಹೊತ್ತು ಸಾಗ್ತಾರೆ. ಆದ್ರೆ ಈ ವೀಡಿಯೋದಲ್ಲಿ ಹರೀಶ್ ರಾವತ್ ಉತ್ತರಾಖಂಡನ್ನು ಹೊತ್ತೊಯ್ಯವಂತೆ ಬಿಂಬಿಸಲಾಗಿದೆ. ಅಲ್ಲದೆ ಪ್ರಧಾನಿ ಮೋದಿ ಮತ್ತು ಅಮಿತ್ ಷಾ ಸೇರಿದಂತೆ ಮತ್ತಿತ್ತರ ನಾಯಕರು ಹರೀಶ್ ರಾವತ್‍ರನ್ನು ಆಶ್ಚರ್ಯದಿಂದ ನೋಡುತ್ತಿರುವಂತೆ ಬಿಂಬಿಸಲಾಗಿದೆ.

    ಈ ವೀಡಿಯೋವನ್ನ ಯುಪಿ/ಯುಕೆ ಲೈವ್ ಫೇಸ್‍ಬುಕ್ ಪೇಜ್‍ನಲ್ಲಿ ಹಂಚಿಕೊಳ್ಳಲಾಗಿದ್ದು, ಹರೀಶ್ ರಾವತ್‍ರನ್ನು ಉತ್ತರಾಖಂಡ್‍ನ ರಕ್ಷಕ ಎಂದು ವೀಡಿಯೋದಲ್ಲಿ ತೋರಿಸಲಾಗಿದೆ. ಈ ಬಗ್ಗೆ ಸಿಎಂ ಹರೀಶ್ ರಾವತ್ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದು, ವೀಡಿಯೋ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ.

    ಫೆಬ್ರವರಿ 15ರಂದು ಉತ್ತರಾಖಂಡ್‍ನಲ್ಲಿ ಚುನಾವಣೆ ನಡೆಯಲಿದೆ.

    https://www.youtube.com/watch?v=3SWPC1Vxgjk